Editor

ಉಪ್ಪಿನಂಗಡಿ: ಶ್ರೀರಾಮ ಶಾಲೆಯಲ್ಲಿ ಶ್ರೀರಾಮ, ಆಂಜನೇಯ ಮೂರ್ತಿ ಲೋಕಾರ್ಪಣೆ

ಸಮಗ್ರ ನ್ಯೂಸ್: ಭಾರತವು ವಿಶ್ವದ ನಾಯಕತ್ವವನ್ನು ವಹಿಸುವ ಹೊಸ್ತಿಲಲ್ಲಿದ್ದು, ದೇಶದ ಪ್ರತಿ ಮಗುವೂ ಮುಂದಿನ 25 ವರ್ಷಗಳಲ್ಲಿ ರಾಷ್ಟ್ರದ ಪ್ರಬಲ ಶಕ್ತಿಯಾಗಿ ಮೂಡಿಬರಬೇಕಾಗಿದೆ. ಈ ಸಂಬಂಧ ಮಕ್ಕಳನ್ನು ಭಯ ಮುಕ್ತಗೊಳಿಸಬೇಕು’ ಎಂದು ಸಂಸದ ಕ್ಯಾ.ಬ್ರಿಜೇಶ್‌ ಚೌಟ ಹೇಳಿದರು. ಉಪ್ಪಿನಂಗಡಿಯ ವೇದ ಶಂಕರ ನಗರದ ಶ್ರೀರಾಮ ಶಾಲೆಯಲ್ಲಿ ಸ್ಥಾಪಿಸಲಾದ ಶ್ರೀರಾಮ ಮತ್ತು ಆಂಜನೇಯ ಮೂರ್ತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಕೆ.ಕೃಷ್ಣ ಭಟ್ ಅಧ್ಯಕ್ಷತೆ ವಹಿಸಿದ್ದರು.‌ ವೈದ್ಯ ಡಾ.ಕೆ.ಜಿ.ಭಟ್ ಕಾರ್ಯಕ್ರಮ ಉದ್ಘಾಟಿಸಿದರು. ಮುಂಬೈ […]

ಉಪ್ಪಿನಂಗಡಿ: ಶ್ರೀರಾಮ ಶಾಲೆಯಲ್ಲಿ ಶ್ರೀರಾಮ, ಆಂಜನೇಯ ಮೂರ್ತಿ ಲೋಕಾರ್ಪಣೆ Read More »

ಮಂಗಳೂರು: ಸಲೂನ್ ಮೇಲೆ‌ ದಾಳಿ ಪ್ರಕರಣ| ಮಾಧ್ಯಮಗಳಿಗೆ ಹೇಳಿಕೆ ನೀಡುತ್ತಿರುವಾಗಲೇ ಪ್ರಸಾದ್ ಅತ್ತಾವರ ಬಂಧನ

ಸಮಗ್ರ ನ್ಯೂಸ್: ಮಂಗಳೂರು ಬಿಜೈನ ಸಲೂನ್ ಮೇಲೆ ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮಸೇನಾ ಸ್ಥಾಪಕ ಪ್ರಸಾದ್ ಅತ್ತಾವರರನ್ನು ಮಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ದಾಳಿ ನಡೆಸಿದವರನ್ನು ಕೂಡಲೇ ಬಂಧಿಸುವಂತೆ ಗೃಹ ಸಚಿವ ಜಿ ಪರಮೇಶ್ವರ್ ಸೂಚನೆ ನೀಡಿದ ಬೆನ್ನಲ್ಲೆ ರಾಮಸೇನೆ ಸಂಸ್ಥಾಪಕ ಪ್ರಸಾದ್ ಅತ್ತಾವರ ಅವರನ್ನು ಪೊಲೀಸರು ಬಂಧಿಸಿ ಕಾನೂನು ಕ್ರಮ ಕೈಗೊಂಡಿದ್ದಾರೆ. ನಗರದ ಸಲೂನ್ ಮೇಲೆ ರಾಮ ಸೇನಾ ಸಂಘಟನೆಯ ಕಾರ್ಯಕರ್ತರು ದಾಂಧಲೆ ನಡೆಸಿದ ಹಿನ್ನೆಲೆಯಲ್ಲಿ ಪ್ರಸಾದ್ ಅತ್ತಾವರನನ್ನು ಬಂಧಿಸಿರುವುದಾಗಿ ಪೊಲೀಸರು

ಮಂಗಳೂರು: ಸಲೂನ್ ಮೇಲೆ‌ ದಾಳಿ ಪ್ರಕರಣ| ಮಾಧ್ಯಮಗಳಿಗೆ ಹೇಳಿಕೆ ನೀಡುತ್ತಿರುವಾಗಲೇ ಪ್ರಸಾದ್ ಅತ್ತಾವರ ಬಂಧನ Read More »

2019ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ| ಸುದೀಪ್ ಅತ್ಯುತ್ತಮ ನಟ; ಅನುಪಮಾ ಗೌಡ ಅತ್ಯುತ್ತಮ ನಟಿ

ಸಮಗ್ರ ನ್ಯೂಸ್: 2019ನೇ ಸಾಲಿನ ಕರ್ನಾಟಕ ರಾಜ್ಯ ಚಲನಚಿತ್ರ ಪ್ರಶಸ್ತಿಗಳನ್ನು ಬುಧವಾರ ಪ್ರಕಟಿಸಲಾಗಿದ್ದು, ನಟ ಸುದೀಪ್ ಹಾಗೂ ನಟಿ ಅನುಪಮ ಗೌಡ ಕ್ರಮವಾಗಿ ಅತ್ಯುತ್ತಮ ನಟ, ನಟಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ‘ಪೈಲ್ವಾನ್’ ಚಿತ್ರದಲ್ಲಿನ ಅತ್ಯುತ್ತಮ ನಟನೆಗಾಗಿ ಸುದೀಪ್ ಗೆ ಈ ಪ್ರಶಸ್ತಿ ಬಂದಿದೆ. ಇನ್ನೂ ಥ್ರಿಲ್ಲರ್ ಚಿತ್ರ ‘ತ್ರಯಂಬಕಂನ ‘ ಅಮೋಘ ನಟನೆಗಾಗಿ ಅನುಪಮ ಗೌಡ ‘ಅತ್ಯುತ್ತಮ ನಟಿ’ ಪ್ರಶಸ್ತಿ ಗೆದ್ದುಕೊಂಡಿದ್ದಾರೆ. ಹಿರಿಯ ನಿರ್ದೇಶಕ ಪಿ. ಶೇಷಾದ್ರಿ ಅವರ ‘ಮೋಹನದಾಸ’ ಮೊದಲ ಅತ್ಯುತ್ತಮ ಚಿತ್ರವಾಗಿದ್ದು, ಡಾರ್ಲಿಂಗ್ ಕೃಷ್ಣ

2019ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟ| ಸುದೀಪ್ ಅತ್ಯುತ್ತಮ ನಟ; ಅನುಪಮಾ ಗೌಡ ಅತ್ಯುತ್ತಮ ನಟಿ Read More »

ದೇಶದಲ್ಲೊಂದು ಬೆಚ್ಚಿ ಬೀಳಿಸುವ ಘಟನೆ| ಪತ್ನಿಯನ್ನು ಕೊಂದು ಕುಕ್ಕರ್ ನಲ್ಲಿ ಬೇಯಿಸಿ‌ ಕೆರೆಗೆ ಎಸೆದ‌ ಮಾಜಿ ಸೈನಿಕ

ಸಮಗ್ರ ನ್ಯೂಸ್: ನಿವೃತ್ತ ಸೈನಿಕನೊಬ್ಬ ಪತ್ನಿಯನ್ನು ಕೊಂದು, ದೇಹದ ಭಾಗಗಳನ್ನು ಪ್ರೆಶರ್ ಕುಕ್ಕರ್‌ನಲ್ಲಿ ಕುದಿಸಿ ಕೆರೆಗೆ ಎಸೆದಿರುವ ಭೀಭತ್ಸ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ರಕ್ಷಣಾ ಸಂಸ್ಥೆಯಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ನಿವೃತ್ತ ಸೇನಾ ಜವಾನ ಜನವರಿ 15 ರಂದು ತನ್ನ ಪತ್ನಿಯನ್ನು ಕೊಂದು, ಶವವನ್ನು ತುಂಡುಗಳಾಗಿ ಕತ್ತರಿಸಿ, ಪ್ರೆಶರ್ ಕುಕ್ಕರ್‌ನಲ್ಲಿ ಕುದಿಸಿ, ಮೂಳೆಗಳನ್ನು ಪುಡಿಮಾಡಿ ನಂತರ ಅವಶೇಷಗಳನ್ನು ಸರೋವರಕ್ಕೆ ಎಸೆದಿದ್ದಾನೆ. ಸಂತ್ರಸ್ತ ಪುಟ್ಟವೆಂಕಟ ಮಾಧವಿ(35) ಜನವರಿ 18 ರಂದು ಕಾಣೆಯಾಗಿದ್ದಾಳೆ ಎಂದು ಮಾಧವಿಯ ಪೋಷಕರು

ದೇಶದಲ್ಲೊಂದು ಬೆಚ್ಚಿ ಬೀಳಿಸುವ ಘಟನೆ| ಪತ್ನಿಯನ್ನು ಕೊಂದು ಕುಕ್ಕರ್ ನಲ್ಲಿ ಬೇಯಿಸಿ‌ ಕೆರೆಗೆ ಎಸೆದ‌ ಮಾಜಿ ಸೈನಿಕ Read More »

ಮನೆಯ ಮುಂಬಾಗಿಲಿನಲ್ಲಿ ಚಪ್ಪಲಿ ಇಡಬಾರದೇ? ವಾಸ್ತು ಪ್ರಕಾರ ಹೇಳೋದೇನು?

ಸಮಗ್ರ ವಿಶೇಷ: ವಾಸ್ತುಗೆ ಸಂಬಂಧಿಸಿದ ಹಲವು ನಿಯಮಗಳಲ್ಲಿ ಒಂದು ಮನೆಯ ಮುಖ್ಯ ಬಾಗಿಲು. ಮುಖ್ಯ ದ್ವಾರದ ಬಗ್ಗೆ ಅನೇಕ ನಿಯಮಗಳನ್ನು ಧರ್ಮಗ್ರಂಥಗಳಲ್ಲಿಯೂ ಉಲ್ಲೇಖಿಸಲಾಗಿದೆ. ಲಕ್ಷ್ಮಿ ದೇವಿಯು ಸಹ ಮುಖ್ಯ ಬಾಗಿಲಿನಲ್ಲಿ ನೆಲೆಸಿದ್ದಾಳೆ, ಆದ್ದರಿಂದ ಮುಖ್ಯ ಬಾಗಿಲನ್ನು ಎಂದಿಗೂ ಕೊಳಕು ಇಡಬಾರದು. ವಾಸ್ತು ಶಾಸ್ತ್ರದ ಪ್ರಕಾರ ಮುಖ್ಯ ಬಾಗಿಲಲ್ಲಿ ಪಾದರಕ್ಷೆ ಮತ್ತು ಚಪ್ಪಲಿಗಳ ರಾಶಿ ಇರಬಾರದು ಅಥವಾ ಬಾಗಿಲ ಬಳಿ ಶೂ ಮತ್ತು ಚಪ್ಪಲಿಗಳನ್ನು ತೆಗೆಯಬಾರದು. ಹೀಗೆ ಮಾಡುವುದರಿಂದ ವಾಸ್ತು ದೋಷಗಳು ಉಂಟಾಗಿ ಹಲವಾರು ರೀತಿಯ ಸಮಸ್ಯೆಗಳನ್ನು ಎದುರಿಸಬೇಕಾಗುತ್ತದೆ.

ಮನೆಯ ಮುಂಬಾಗಿಲಿನಲ್ಲಿ ಚಪ್ಪಲಿ ಇಡಬಾರದೇ? ವಾಸ್ತು ಪ್ರಕಾರ ಹೇಳೋದೇನು? Read More »

ವಿಟ್ಲ: ಪಂಚಲಿಂಗೇಶ್ವರ ರಥೋತ್ಸವ ವೇಳೆ ಅರ್ಚಕರಿಗೆ ಡಿಕ್ಕಿ ಹೊಡೆದ ಡ್ರೋನ್| ಕೊಂಚದರಲ್ಲೇ ತಪ್ಪಿದ ಮಹಾಪ್ರಮಾದ

ಸಮಗ್ರ ನ್ಯೂಸ್: ಡ್ರೋನ್ ಒಂದು ಅಪರೇಟರ್ ನಿಯಂತ್ರಣ ತಪ್ಪಿ ರಥದ ಮೇಲಿದ್ದ ಅರ್ಚಕರ ತಲೆಗೆ ಬಡಿದ ಘಟನೆ ವಿಟ್ಲ ಪಂಚಲಿಂಗೇಶ್ವರ ದೇವರ ರಥೋತ್ಸವ ವೇಳೆ ನಡೆದಿದೆ. ವಿಟ್ಲ ಪಂಚಲಿಂಗೇಶ್ವರ ದೇವರ ಮಹಾರಥೋತ್ಸವ ವಿಜೃಂಭಣೆಯಿಂದ ನಡೆದಿದೆ. ಈ ವೇಳೆ ವಿಡಿಯೋ ಮಾಡಲು ಹಾರಿಸಿದ ಡ್ರೋನ್ ಒಂದು ರಥದ ಹತ್ತಿರ ಬಂದು ಅಲ್ಲಿ ನಿಂತಿದ್ದ ಅರ್ಚಕರ ತಲೆಗೆ ಬಡಿದಿದೆ. ಈ ವೇಳೆ ದೇವರ ಮೂರ್ತಿ ಹೊತ್ತ ಮುಖ್ಯ ಅರ್ಚಕರು ರಥದ ಮೇಲೆ ತೆರಳಿದ್ದರು. ಡ್ರೋನ್ ಬಡಿದ ವೇಳೆ ದೇವರ ಮೂರ್ತಿ

ವಿಟ್ಲ: ಪಂಚಲಿಂಗೇಶ್ವರ ರಥೋತ್ಸವ ವೇಳೆ ಅರ್ಚಕರಿಗೆ ಡಿಕ್ಕಿ ಹೊಡೆದ ಡ್ರೋನ್| ಕೊಂಚದರಲ್ಲೇ ತಪ್ಪಿದ ಮಹಾಪ್ರಮಾದ Read More »

ಕಡಬ: ಸಿನಿಮೀಯ ಶೈಲಿಯಲ್ಲಿ ವಾಹನಕ್ಕೆ ಡೀಸೆಲ್ ತುಂಬಿಸಿ ಪರಾರಿ

ಸಮಗ್ರ ನ್ಯೂಸ್: ಬೆಳ್ಳಂಬೆಳಗ್ಗೆ ಕಡಬದ ಹಳೆಸ್ಟೇಶನ್‌ ಬಳಿಯ ಪೆಟ್ರೋಲ್‌ ಬಂಕೊಂದಕ್ಕೆ ವಾಹನದಲ್ಲಿ ಬಂದ ವ್ಯಕ್ತಿಯೊಬ್ಬ ವಾಹನಕ್ಕೆ ಫುಲ್‌ಟ್ಯಾಂಕ್‌ ಡೀಸೆಲ್‌ ತುಂಬಿಸಿಕೊಂಡು ಹಣ ನೀಡದೆ ಸಿನಿಮೀಯ ಶೈಲಿಯಲ್ಲಿ ಪರಾರಿಯಾದ ಘಟನೆ ಜ.23ರಂದು ನಡೆದಿದೆ. ಬೆಳಗ್ಗೆ 6 ಗಂಟೆಯ ಸುಮಾರಿಗೆ ಕೆಎ 01 ಎಂಎಕ್ಸ್‌ 9632 ನೋಂದಣಿ ಸಂಖ್ಯೆಯ ಥಾರ್‌ ಜೀಪ್‌ನಲ್ಲಿ ಬಂದ ವ್ಯಕ್ತಿ ತನ್ನ ವಾಹನಕ್ಕೆ ಫುಲ್‌ ಟ್ಯಾಂಕ್‌ ಡೀಸೆಲ್‌ ತುಂಬಿಸಿಕೊಂಡಿದ್ದಾನೆ. ಬಳಿಕ ಒಂದು ಕ್ಯಾನ್‌ ನೀಡಿ ಅದರಲ್ಲಿ ಪೆಟ್ರೋಲ್‌ ತುಂಬಿಸಿ ಕೊಡಲು ಬಂಕ್‌ನ ಸಿಬಂದಿಗೆ ಹೇಳಿದ್ದಾನೆ. ಪೆಟ್ರೋಲ್‌

ಕಡಬ: ಸಿನಿಮೀಯ ಶೈಲಿಯಲ್ಲಿ ವಾಹನಕ್ಕೆ ಡೀಸೆಲ್ ತುಂಬಿಸಿ ಪರಾರಿ Read More »

ಭವಿಷ್ಯ ಸಿನೆಮಾಸ್ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಹೊಸ ಚಲನಚಿತ್ರಕ್ಕೆ ಕಲಾವಿದರು ಬೇಕಾಗಿದ್ದಾರೆ|ಸುಳ್ಯ ತಾಲೂಕಿನ ಕಲಾವಿದರಿಗೆ ಮುಕ್ತ ಅವಕಾಶ

ಸಮಗ್ರ ನ್ಯೂಸ್: ಬೆಂಗಳೂರಿನ ಭವಿಷ್ಯ ಸಿನೆಮಾಸ್ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಹೊಸ ಚಲನಚಿತ್ರಕ್ಕೆ ಕಲಾವಿದರು ಬೇಕಾಗಿದ್ದಾರೆ. ಚಲನಚಿತ್ರದ ಚಿತ್ರೀಕರಣವನ್ನು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಆಸುಪಾಸಿನಲ್ಲಿ ಮಾಡುತ್ತಿದ್ದು, ಇದೀಗ ಕಲಾವಿದರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ನಟನೆಯಲ್ಲಿ ಆಸಕ್ತಿ ಉಳ್ಳವರು ಹಾಗೂ ನಾಟಕದ ಹಿನ್ನೆಲೆ ಇರುವವರು ನಿಮ್ಮ ಅಭಿನಯದ ವಿಡಿಯೋವನ್ನು ಭವಿಷ್ಯ ಸಿನೆಮಾಸ್ ಸಂಸ್ಥೆಯ ವಾಟ್ಸ್ ಪ್ ನಂಬರ್ 7483953979 ಗೆ ಕಳುಹಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಸಂಪರ್ಕಿಸಿ: 7483953979

ಭವಿಷ್ಯ ಸಿನೆಮಾಸ್ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಹೊಸ ಚಲನಚಿತ್ರಕ್ಕೆ ಕಲಾವಿದರು ಬೇಕಾಗಿದ್ದಾರೆ|ಸುಳ್ಯ ತಾಲೂಕಿನ ಕಲಾವಿದರಿಗೆ ಮುಕ್ತ ಅವಕಾಶ Read More »

ಮಹಾರಾಷ್ಟ್ರ ಜಲಗಾಂವ್ ನಲ್ಲಿ ಭೀಕರ ಅಗ್ನಿ ದುರಂತ| ಪುಷ್ಪಕ್ ಎಕ್ಸ್‌ಪ್ರೆಸ್‌ ರೈಲಿನಲ್ಲಿ 20 ಪ್ರಯಾಣಿಕರು ಸಜೀವ ದಹನ

ಸಮಗ್ರ ನ್ಯೂಸ್: ಮಹಾರಾಷ್ಟ್ರದ ಜಲಗಾಂವ್ ನಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಜಲಗಾಂವ್ ಬಳಿ ಪುಷ್ಪಕ ಎಕ್ಸ್ಪ್ರೆಸ್ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡು 20 ಜನ ಪ್ರಯಾಣಿಕರು ಸಜೀವವಾಗಿ ದಹನಗೊಂಡಿದ್ದಾರೆ. ಚಲಿಸುತ್ತಿದ್ದ ರೈಲಿನಲ್ಲಿ ಏಕಾಏಕಿ ಅಗ್ನಿ ಕಾಣಿಸಿಕೊಂಡಿದ್ದು ಈ ವೇಳೆ 20 ಪ್ರಯಾಣಿಕರು ಪುಷ್ಪಕ ಎಕ್ಸ್ಪ್ರೆಸ್ ರೈಲಿನಲ್ಲಿ ಸಿಲುಕಿ ಸಜೀವವಾಗಿ ದಹನಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಕೂಡಲೇ ಪೊಲೀಸರು ಭೇಟಿ ನೀಡಿದ್ದು, ಅಲ್ಲದೇ ಅಗ್ನಿಶಾಮಕ ದಳ ಆಗಮಿಸಿ ಸಿಬ್ಬಂದಿ ಕೂಡ ಆಗಿಸಿ ಬೆಂಕಿ ನಂದಿಸಿದ್ದಾಗಿ ತಿಳಿದುಬಂದಿದೆ.

ಮಹಾರಾಷ್ಟ್ರ ಜಲಗಾಂವ್ ನಲ್ಲಿ ಭೀಕರ ಅಗ್ನಿ ದುರಂತ| ಪುಷ್ಪಕ್ ಎಕ್ಸ್‌ಪ್ರೆಸ್‌ ರೈಲಿನಲ್ಲಿ 20 ಪ್ರಯಾಣಿಕರು ಸಜೀವ ದಹನ Read More »

ಪ್ರತ್ಯೇಕ ಅಪಘಾತದಲ್ಲಿ ಸಾವಿನ ಸಂಖ್ಯೆ 14ಕ್ಕೆ ಏರಿಕೆ| ಮೃತರಿಗಾಗಿ ಕಂಬನಿ ಮಿಡಿದ ಸಿಎಂ

ಸಮಗ್ರ ನ್ಯೂಸ್: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಒಟ್ಟು 14 ಜನ ಸಾವನ್ನಪ್ಪಿದ್ದಾರೆ. ಈ ಕುರಿತಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ. ಹಣ್ಣು ತರಕಾರಿ ತುಂಬಿ ವ್ಯಾಪಾರಸ್ಥರೊಂದಿಗೆ ಸಂತೆಗೆ ತೆರಳುತ್ತಿದ್ದ ಲಾರಿಯೊಂದು ಕಂದಕ್ಕಕ್ಕೆ ಉರುಳಿ9 ಜನರು ಜೀವ ಕಳೆದುಕೊಂಡು 10ಕ್ಕೂ ಜನ ಗಂಭೀರ ಗಾಯಗೊಂಡಿದ್ದಾರೆ. ಈ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಭಾಗದಲ್ಲಿ ಬೆಳಗಿನ ಜಾವ ನಡೆದಿದೆ. ಕ್ರೂಸರ್ ವಾಹನ ಪಲ್ಟಿಯಾಗಿ

ಪ್ರತ್ಯೇಕ ಅಪಘಾತದಲ್ಲಿ ಸಾವಿನ ಸಂಖ್ಯೆ 14ಕ್ಕೆ ಏರಿಕೆ| ಮೃತರಿಗಾಗಿ ಕಂಬನಿ ಮಿಡಿದ ಸಿಎಂ Read More »