Editor

ಕೆಂಪು ಕಲ್ಲು ದರ ಇಳಿಕೆ ಮರಳು ಸಮಸ್ಯೆ ಪರಿಹಾರಕ್ಕೆ 42 ಹೊಸ ಬ್ಲಾಕ್ ಗುರುತು – ಡಿಸಿ ದರ್ಶನ್ ಎಚ್.ವಿ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರ್ಮಾಣ ಕ್ಷೇತ್ರದ ಬಹುದೊಡ್ಡ ಸಮಸ್ಯೆಗಳಾದ ಕೆಂಪು ಕಲ್ಲು ಮತ್ತು ಮರಳುಗಾರಿಕೆಯ ಕೊರತೆಯನ್ನು ಬಹುತೇಕ ಪರಿಹರಿಸಲಾಗಿದೆ ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಮರಳು ಅಭಾವ ಎದುರಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಪ್ರಸ್ತುತ, ಈಗಾಗಲೇ 19 ಮರಳು ಬ್ಲಾಕ್‌ಗಳಲ್ಲಿ ಗಣಿಗಾರಿಕೆ ನಡೆಯುತ್ತಿದ್ದು, ಇನ್ನೂ 42 ಹೊಸ ಮರಳು ಬ್ಲಾಕ್‌ಗಳನ್ನು ಗುರುತಿಸಲಾಗಿದೆ. ಈ 42 ಬ್ಲಾಕ್‌ಗಳಲ್ಲಿ ಮರಳುಗಾರಿಕೆ ನಡೆಸಲು ಮಾರ್ಚ್ ತಿಂಗಳೊಳಗೆ ಪರವಾನಿಗೆ ನೀಡಲಾಗುವುದು. ಈ ಯೋಜನೆಗಳ ಮೂಲಕ ಮುಂದಿನ […]

ಕೆಂಪು ಕಲ್ಲು ದರ ಇಳಿಕೆ ಮರಳು ಸಮಸ್ಯೆ ಪರಿಹಾರಕ್ಕೆ 42 ಹೊಸ ಬ್ಲಾಕ್ ಗುರುತು – ಡಿಸಿ ದರ್ಶನ್ ಎಚ್.ವಿ Read More »

ಸುಬ್ರಹ್ಮಣ್ಯ: ಬಿಳಿನೆಲೆ ಪ್ರಾ.ಕೃ.ಪ ಸ.ಸಂಘದಲ್ಲಿ ಭಾರೀ ಅವ್ಯವಹಾರ| ಲೋಕಾಯುಕ್ತಕ್ಕೆ ದೂರು ನೀಡಲು ನಿರ್ಧಾರ

ಸಮಗ್ರ ನ್ಯೂಸ್: ಸುಬ್ರಹ್ಮಣ್ಯ ಸಮೀಪದ ಬಿಳಿನೆಲೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಭಾರೀ ಅವ್ಯವಹಾರ ನಡೆದ ಘಟನೆ ಬೆಳಕಿಗೆ ಬಂದಿದ್ದು, ಈ ಕುರಿತು ಸಮಗ್ರ ತನಿಖೆಗೆ ಲೋಕಾಯುಕ್ತಕ್ಕೆ ಸದಸ್ಯರೋರ್ವರು ದೂರು ನೀಡಿದ್ದಾರೆ. ಸಂಘದ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಪುನೀತ್ ಕೆ ಎಸ್ ಅವರು ಮಾಡಿರುವ ಲಕ್ಷಾಂತರ ರೂಪಾಯಿ ಭ್ರಷ್ಟಾಚಾರದ ಕುರಿತು 2024-25 ನೇ ಸಾಲಿನ ಲೆಕ್ಕಪರಿಶೋಧನಾ ವರದಿಯಲ್ಲಿ ಕಂಡುಬಂದಿದ್ದು ಈ ವರದಿಯನ್ನು ಆಧರಿಸಿ ಸಂಘದ ಸದಸ್ಯರೊಬ್ಬರು ಈ ಬಗ್ಗೆ ಸಹಕಾರಿ ಇಲಾಖೆಯ ನಿಬಂಧಕರಿಗೆ ದೂರು ನೀಡಿದ್ದಾರೆ. ಈ ಬಗ್ಗೆ

ಸುಬ್ರಹ್ಮಣ್ಯ: ಬಿಳಿನೆಲೆ ಪ್ರಾ.ಕೃ.ಪ ಸ.ಸಂಘದಲ್ಲಿ ಭಾರೀ ಅವ್ಯವಹಾರ| ಲೋಕಾಯುಕ್ತಕ್ಕೆ ದೂರು ನೀಡಲು ನಿರ್ಧಾರ Read More »

ಕಾಂಪ್ಕೋ ಅಧ್ಯಕ್ಷರಾಗಿ ಎಸ್.ಆರ್ ಸತೀಶ್ಚಂದ್ರ ಅವಿರೋಧ ಆಯ್ಕೆ

ಸಮಗ್ರ ನ್ಯೂಸ್: ಪ್ರಮುಖ ಅಡಿಕೆ ವಹಿವಾಟು ಸಂಸ್ಥೆಯಾದ ಕ್ಯಾಂಪ್ಕೊ 2025-30ರ ಅವಧಿಗೆ ಅಧ್ಯಕ್ಷರಾಗಿ ಸತೀಶ್ಚಂದ್ರ ಎಸ್‌.ಆರ್‌, ಉಪಾಧ್ಯಕ್ಷರಾಗಿ ಪದ್ಮರಾಜ್ ಪಟ್ಟಾಜೆ ಅವಿರೋಧವಾಗಿ ಆಯ್ಕೆಯಾದರು. ಬಂಟ್ವಾಳ ತಾಲ್ಲೂಕಿನ ಪುಣಚ ಗ್ರಾಮ ಸತೀಶ್ಚಂದ್ರ, 2015-20ರ ಅವಧಿಯಲ್ಲಿ ಕ್ಯಾಂಪ್ಕೊ ಅಧ್ಯಕ್ಷರಾಗಿ ಅನುಭವ ಹೊಂದಿರುವವರು. ಹಿಂದಿನ ಅವಧಿಯಲ್ಲಿ ಸಂಸ್ಥೆಯ ನಿರ್ದೇಶಕರಾಗಿದ್ದರು. ಕಾಸರಗೋಡಿನ ಪಟ್ಟಾಜೆ ಬದಿಯಡ್ಕದ ಪ್ರಗತಿಪರ ಕೃಷಿಕ ಪದ್ಮರಾಜ್ ಪಟ್ಟಾಜೆ ಸತತ ಎರಡು ಅವಧಿಗೆ ಕ್ಯಾಂಪ್ಕೊ ಸಂಸ್ಥೆಯ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದಾರೆ. ಈ ಆಯ್ಕೆಯು ಕೇಂದ್ರ ಸರ್ಕಾರದ ಸಹಕಾರ ಸಚಿವಾಲಯದ ಅಡಿಯಲ್ಲಿ ಬರುವ

ಕಾಂಪ್ಕೋ ಅಧ್ಯಕ್ಷರಾಗಿ ಎಸ್.ಆರ್ ಸತೀಶ್ಚಂದ್ರ ಅವಿರೋಧ ಆಯ್ಕೆ Read More »

ಚಾಮುಂಡಿ‌ ಬೆಟ್ಟಕ್ಕೆ ತೆರಳುವಾಗ ಹೃದಯಾಘಾತ| ಮಾಜಿ ಶಾಸಕ ಆರ್.ವಿ ದೇವರಾಜ್ ನಿಧನ

ಸಮಗ್ರ ನ್ಯೂಸ್: ಬೆಂಗಳೂರಿನ ಚಿಕ್ಕಪೇಟೆ ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್​​ ಮಾಜಿ ಶಾಸಕ ಆರ್​​ವಿ ದೇವರಾಜ್​ ನಿಧನ ಹೊಂದಿದ್ದಾರೆ. ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿದ್ದಾಗ ಹೃದಯಾಘಾತ ಸಂಭವಿಸಿದ್ದು, ಕೂಡಲೇ ಮೈಸೂರಿನಲ್ಲಿರುವ ಜಯದೇವ ಆಸ್ಪತ್ರೆಗೆ ಕರೆದೊಯ್ಯುವಾಗ ಕೊನೆಯುಸಿರೆಳೆದಿದ್ದಾರೆ. ಡಿ.3ರಂದು ಜನ್ಮದಿನ ಹಿನ್ನೆಲೆ ಚಾಮುಂಡಿಬೆಟ್ಟಕ್ಕೆ ತೆರಳಿದ್ದರು. ಈ ವೇಳೆ ಹೃದಯಾಘಾತ ಸಂಭವಿಸಿದ್ದು, ಕೂಡಲೇ ಮೈಸೂರಿನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಜಯದೇವ ಆಸ್ಪತ್ರೆಗೆ ಕರೆದೊಯ್ಯುವಾಗ ಕೊನೆಯುಸಿರೆಳೆದಿದ್ದಾರೆ. ಸದ್ಯ ವೈದ್ಯರು ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಿದ್ದಾರೆ. ಚಿಕ್ಕಪೇಟೆ ಮಾಜಿ ಶಾಸಕ ಮತ್ತು

ಚಾಮುಂಡಿ‌ ಬೆಟ್ಟಕ್ಕೆ ತೆರಳುವಾಗ ಹೃದಯಾಘಾತ| ಮಾಜಿ ಶಾಸಕ ಆರ್.ವಿ ದೇವರಾಜ್ ನಿಧನ Read More »

ಜನರ ಸಮಸ್ಯೆಗಳನ್ನು ಕೇಳುವುದು ನಾಟಕವಲ್ಲ, ಚರ್ಚೆಯಿಂದ ಓಡಿ ಹೋಗುವುದೇ ಮಹಾ ನಾಟಕ: ಪ್ರಧಾನಿ ಮೋದಿಗೆ ಪ್ರಿಯಾಂಕಾ ಗಾಂಧಿ ಖಡಕ್ ತಿರುಗೇಟು

ಸಮಗ್ರ ನ್ಯೂಸ್: ಸಂಸತ್ತಿನ ಚಳಿಗಾಲದ ಅಧಿವೇಶನದ ಆರಂಭಕ್ಕೂ ಮುನ್ನವೇ ಆಡಳಿತ ಮತ್ತು ವಿಪಕ್ಷಗಳ ನಡುವಿನ ಮಾತಿನ ಚಕಮಕಿ ತಾರಕಕ್ಕೇರಿದೆ. ಅಧಿವೇಶನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ವಿರೋಧ ಪಕ್ಷಗಳ ವರ್ತನೆಯನ್ನು ನಾಟಕ ಎಂದು ಬಣ್ಣಿಸಿದ್ದಕ್ಕೆ ಕಾಂಗ್ರೆಸ್ ನಾಯಕಿ ಹಾಗೂ ವಯನಾಡು ಸಂಸದೆ ಪ್ರಿಯಾಂಕಾ ಗಾಂಧಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಸಂಸತ್ತಿನಲ್ಲಿ ಜನರ ಜ್ವಲಂತ ಸಮಸ್ಯೆಗಳನ್ನು ಎತ್ತಿ ತೋರಿಸುವುದು ನಾಟಕವಲ್ಲ, ಆದರೆ ಆ ಸಮಸ್ಯೆಗಳ ಬಗ್ಗೆ ಚರ್ಚಿಸಲು ಅವಕಾಶ ನೀಡದೆ ಪಲಾಯನ ಮಾಡುವುದೇ ನಿಜವಾದ ನಾಟಕ ಎಂದು ಪ್ರಧಾನಿ

ಜನರ ಸಮಸ್ಯೆಗಳನ್ನು ಕೇಳುವುದು ನಾಟಕವಲ್ಲ, ಚರ್ಚೆಯಿಂದ ಓಡಿ ಹೋಗುವುದೇ ಮಹಾ ನಾಟಕ: ಪ್ರಧಾನಿ ಮೋದಿಗೆ ಪ್ರಿಯಾಂಕಾ ಗಾಂಧಿ ಖಡಕ್ ತಿರುಗೇಟು Read More »

ಅಯ್ಯಪ್ಪ ಮಾಲೆ ಧರಿಸಿ ಬಂದ ವಿದ್ಯಾರ್ಥಿಗಳನ್ನು ಹೊರಕಳುಹಿಸಿದ ಪ್ರಿನ್ಸಿಪಾಲ್| ಭಜರಂಗದಳದಿಂದ ಆಕ್ರೋಶ

ಸಮಗ್ರ ನ್ಯೂಸ್: ಶಬರಿಮಲೆ ಅಯ್ಯಪ್ಪ ಸ್ವಾಮಿಯ ಮಾಲೆ ಧರಿಸಿ ಕಾಲೇಜಿಗೆ ಬಂದ ಇಬ್ಬರು ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿಯು ಹೊರಗೆ ನಿಲ್ಲಿಸಿದ ಘಟನೆ ಚಿಕ್ಕಮಗಳೂರು ನಗರದ ಪ್ರತಿಷ್ಠಿತ ಎಂ.ಇ.ಎಸ್. ಕಾಲೇಜಿನಲ್ಲಿ ನಡೆದಿದೆ. ಸಮವಸ್ತ್ರ ನೀತಿಯನ್ನು ಉಲ್ಲಂಘಿಸಲಾಗಿದೆ ಎಂದು ಆಡಳಿತ ಮಂಡಳಿ ವಾದಿಸಿದರೆ, ಇದು ಧಾರ್ಮಿಕ ಭಾವನೆಗೆ ಧಕ್ಕೆ ಎಂದು ಬಜರಂಗದಳ ಮತ್ತು ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎಂ.ಇ.ಎಸ್. ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ಓದುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಅಯ್ಯಪ್ಪ ಮಾಲೆ ಧರಿಸಿ ಕಾಲೇಜಿಗೆ ಆಗಮಿಸಿದ್ದರು. ಇದಕ್ಕೆ

ಅಯ್ಯಪ್ಪ ಮಾಲೆ ಧರಿಸಿ ಬಂದ ವಿದ್ಯಾರ್ಥಿಗಳನ್ನು ಹೊರಕಳುಹಿಸಿದ ಪ್ರಿನ್ಸಿಪಾಲ್| ಭಜರಂಗದಳದಿಂದ ಆಕ್ರೋಶ Read More »

ಉಡುಪಿ: ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಆರೋಪಿ ಅರೆಸ್ಟ್

ಸಮಗ್ರ ನ್ಯೂಸ್: ಯುವತಿಯನ್ನು ನಿರ್ಜನ ಪ್ರದೇಶದಲ್ಲಿ ಅಡ್ಡಗಟ್ಟಿ ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿ ಹಿಂದೂ ಜಾಗರಣಾ ವೇದಿಕೆಯ ಕಾರ್ಯಕರ್ತನೋರ್ವನನ್ನು ಉಡುಪಿ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಪೆರ್ಡೂರು ಹಿಂದು ಜಾಗರಣಾ ವೇದಿಕೆಯ ನಾಯರ್‌ಕೋಡು ಘಟಕದ ಪ್ರದೀಪ್ ಪೂಜಾರಿ(26) ಬಂಧಿತ ಆರೋಪಿ. ಈತ ಯುವತಿಯೊಬ್ಬಳನ್ನು ಮದುವೆಯಾಗುವಂತೆ ನಿರಂತರ ಕಿರುಕುಳ ನೀಡುತ್ತಿದ್ದು, ಆಕೆ ಆತನೊಂದಿಗೆ ಮದುವೆಗೆ ನಿರಾಕರಿಸಿದ್ದಳು. ಈ ಬಗ್ಗೆ ಆಕೆ ಹಿರಿಯಡ್ಕ ಪೊಲೀಸ್ ಠಾಣೆಗೆ ದೂರು ನೀಡಿದ್ದಳು. ಆತನನ್ನು ಪೊಲೀಸರು ಬಂಧಿಸಿದ್ದು, ಬಳಿಕ ಆತ ಜಾಮೀನಿನ ಮೇಲೆ

ಉಡುಪಿ: ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಆರೋಪಿ ಅರೆಸ್ಟ್ Read More »

ಅರೆಭಾಷೆ ಗೌಡರಿಗೆ ಮಡಿಕೇರಿಯಲ್ಲಿ ಜಮೀನು ನೀಡಲು ಕ್ರಮ – ಸಿಎಂ

ಸಮಗ್ರ ನ್ಯೂಸ್: ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಅರೆಭಾಷೆ ಗೌಡರಿಗೆ ಮಡಿಕೇರಿಯಲ್ಲಿ ಜಮೀನು ಕೊಡಬೇಕೆನ್ನುವ ಪ್ರಸ್ತಾವನೆಯಿದ್ದು, ಇದನ್ನು ಈಡೇರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಡಿಕೇರಿಯಿಂದ ರವೀಂದ್ರ ಕಲಾಕ್ಷೇತ್ರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ‘2024ನೇ ಸಾಲಿನ ಅರೆ ಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ ಜಂಬರ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮಡಿಕೇರಿಯಲ್ಲಿ ಅರೆಭಾಷೆ ಗೌಡರಿಗೆ ಜಮೀನು ಕೊಡುವ ವಿಚಾರ ಕುರಿತು ಮುಂದಿನ

ಅರೆಭಾಷೆ ಗೌಡರಿಗೆ ಮಡಿಕೇರಿಯಲ್ಲಿ ಜಮೀನು ನೀಡಲು ಕ್ರಮ – ಸಿಎಂ Read More »

ಆಂಧ್ರಪ್ರದೇಶದಲ್ಲಿ ಭೀಕರ ಅಪಘಾತ| ಕೋಲಾರದ ಐವರು ಮೃತ್ಯು

ಸಮಗ್ರ ನ್ಯೂಸ್: ಆಂಧ್ರಪ್ರದೇಶದ ಕೋಟೆಕಲ್ ಗ್ರಾಮದಲ್ಲಿ ಇಂದು(ನ.29) ಮುಂಜಾನೆ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನ ಚಿಕ್ಕಹೊಸಹಳ್ಳಿ ಗ್ರಾಮದ 5 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ. ಮಂತ್ರಾಲಯದಿಂದ ರಾಘವೇಂದ್ರ ಸ್ವಾಮಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ವೇಳೆ ಈ ದುರಂತ ಸಂಭವಿಸಿದ್ದು, ಮೃತರ ಪೈಕಿ ಇಬ್ಬರು ಮಕ್ಕಳಿದ್ದರು ಎಂದು ಹೇಳಲಾಗಿದ್ದು, ಚಾಲಕ ಮಾತ್ರ ಬದುಕುಳಿದಿರುವ ಬಗ್ಗೆ ತಿಳಿದು ಬಂದಿದೆ. ಆಂಧ್ರದ ಎಮ್ಮಿಗನೂರು ತಾಲೂಕಿನ ಕೋಟೆಕಲ್ ಗ್ರಾಮದಲ್ಲಿ ಇಂದು ಮುಂಜಾನೆ 5 ಗಂಟೆಗೆ ಎರಡು ಕಾರುಗಳ

ಆಂಧ್ರಪ್ರದೇಶದಲ್ಲಿ ಭೀಕರ ಅಪಘಾತ| ಕೋಲಾರದ ಐವರು ಮೃತ್ಯು Read More »

ಸಿಎಂ ಕುರ್ಚಿಕದನಕ್ಕೆ ಬ್ರೇಕ್| ಜಂಟಿ ಸುದ್ದಿಗೋಷ್ಟಿಯಲ್ಲಿ ಭಾಗಿಯಾದ ಸಿದ್ದು, ಡಿಕೆಶಿ

ಸಮಗ್ರ ನ್ಯೂಸ್: ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಇಂದು ಮುಖ್ಯಮಂತ್ರಿಗಳ ನಿವಾಸ ಕಾವೇರಿಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡಿದ್ದು, ಜಂಟಿ ಸುದ್ದಿಗೋಷ್ಠಿ ನಡೆಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾನು ಡಿ.ಕೆ.ಶಿವಕುಮಾರ್ ಅವರು ಪೊನ್ನಣ್ಣ ನಾವು ಮೂವರು ಬ್ರೇಕ್ ಫಾಸ್ಟ್ ನಲ್ಲಿ ಭಾಗಿಯಾಗಿದ್ದೇವು. ಅಲ್ಲಿ ಏನೂ ಮಾತನಾಡಿಲ್ಲ. ಬ್ರೇಕ್ ಫಾಸ್ಟ್ ಚೆನ್ನಾಗಿತ್ತು. ಡಿ.ಕೆ.ಶಿವಕುಮಾರ್ ಅವರು ಇಂದು ನಮ್ಮ ಮನೆಗೆ ಬಂದಿದ್ದರು. ಒಟ್ಟಿಗೆ ಬ್ರೇಕ್ ಫಾಸ್ಟ್ ಒಟ್ಟಿಗೆ ಮಾಡಿದ್ದೇವೆ. ಹೈಕಮಾಂಡ್

ಸಿಎಂ ಕುರ್ಚಿಕದನಕ್ಕೆ ಬ್ರೇಕ್| ಜಂಟಿ ಸುದ್ದಿಗೋಷ್ಟಿಯಲ್ಲಿ ಭಾಗಿಯಾದ ಸಿದ್ದು, ಡಿಕೆಶಿ Read More »