Editor

ದೆಹಲಿ ವಿಧಾನಸಭಾ ಚುನಾವಣೆ/ ಸ್ಟಾರ್‌ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

ಸಮಗ್ರ ನ್ಯೂಸ್‌: ದೆಹಲಿ ವಿಧಾನಸಭಾ ಚುನಾವಣೆಗೆ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲಿರುವ ಸ್ಯಾರ್ ಪ್ರಚಾರಕರ ಪಟ್ಟಿಯನ್ನು ಭಾರತೀಯ ಜನತಾ ಪಕ್ಷ ಬಿಡುಗಡೆ ಮಾಡಿದೆ. ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಪಕ್ಷದ ಎಲ್ಲಾ ಪ್ರಮುಖ ನಾಯಕರನ್ನು ಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ. ಸ್ಟಾರ್ ಪ್ರಚಾರಕರಲ್ಲಿ ಕೇಂದ್ರ ಸಚಿವರಾದ ಪಿಯೂಷ್ ಗೋಯಲ್, ಶಿವರಾಜ್ ಸಿಂಗ್ ಚೌಹಾಣ್, ನಿತಿನ್ ಗಡ್ಕರಿ, ಮನೋಹರಲಾಲ್ ಖಟ್ಟರ್ ಧರ್ಮೇಂದ್ರ ಪ್ರಧಾನ್, […]

ದೆಹಲಿ ವಿಧಾನಸಭಾ ಚುನಾವಣೆ/ ಸ್ಟಾರ್‌ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ Read More »

ರಾಜ್ಯದಲ್ಲಿ ಗೋವಿನ ಮೇಲೆ ಮತ್ತೊಂದು ವಿಕೃತಿ| ಹರಕೆಗೆ ಬಿಟ್ಟ ಕರುವಿನ ಬಾಲ ಕತ್ತರಿಸಿದ ದುರುಳುರು!!

ಸಮಗ್ರ ನ್ಯೂಸ್: ದೇವಸ್ಥಾನದಲ್ಲಿ ಹರಕೆಗೆ ಬಿಟ್ಟ ಕರುವಿನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಗಾಯಗೊಳಿಸಿ ವಿಕೃತಿ ಮೆರೆದ ಘಟನೆ ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ‌ನಡೆದಿದೆ. ಕರುವಿನ ಹಿಂಬದಿಗೆ ಮಾರಕಾಸ್ತ್ರಗಳಿಂದ ದಾಳಿ ನಡೆಸಲಾಗಿದ್ದು, ಬಾಲ ತುಂಡಾಗುವ ಸ್ಥಿತಿಯಲ್ಲಿದೆ. ಸದ್ಯ ಕರುವಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

ರಾಜ್ಯದಲ್ಲಿ ಗೋವಿನ ಮೇಲೆ ಮತ್ತೊಂದು ವಿಕೃತಿ| ಹರಕೆಗೆ ಬಿಟ್ಟ ಕರುವಿನ ಬಾಲ ಕತ್ತರಿಸಿದ ದುರುಳುರು!! Read More »

ದೆಹಲಿ ವಿಧಾನಸಭಾ ಚುನಾವಣೆ/ ನಾಲ್ಕನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್‌

ಸಮಗ್ರ ನ್ಯೂಸ್‌: ದೆಹಲಿ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ತನ್ನ ನಾಲ್ಕನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಐದು ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಹೆಸರಿಸಿದೆ. ಈ ಪಟ್ಟಿಯಲ್ಲಿ ಸುರೇಂದರ್ ಕುಮಾರ್ ಮತ್ತು ರಾಹುಲ್ ಧನಕ್ ಸೇರಿದ್ದಾರೆ. ಕುಮಾರ್ ಅವರು ಪರಿಶಿಷ್ಟ ಜಾತಿಗೆ (ಎಸ್‌ಸಿ) ಮೀಸಲಾದ ಬವಾನಾ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಲಿದ್ದು, ಧನಕ್ ಅವರು ಕರೋಲ್ ಬಾಗ್‌ನಿಂದ (ಎಸ್‌ಸಿಗೆ ಮೀಸಲು) ಚುನಾವಣೆಗೆ ಸ್ಪರ್ಧಿಸಲಿದ್ದಾರೆ. ಪಟ್ಟಿಯಲ್ಲಿರುವ ಇತರ ಮೂರು ಹೆಸರುಗಳಲ್ಲಿ ರೋಹಿಣಿಯಿಂದ ಅಭ್ಯರ್ಥಿ ಸುಮೇಶ್ ಗುಪ್ತಾ, ತುಘಲಕಾಬಾದ್‌ನಿಂದ ವೀರೇಂದ್ರ ಬಿದುರಿ ಮತ್ತು ಬದರ್‌ಪುರದಿಂದ ಅರ್ಜುನ್

ದೆಹಲಿ ವಿಧಾನಸಭಾ ಚುನಾವಣೆ/ ನಾಲ್ಕನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್‌ Read More »

ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ ಚೂರಿ ಇರಿತ

ಸಮಗ್ರ ನ್ಯೂಸ್: ಬಾಲಿವುಡ್ ನಟ ಸೈಫ್ ಅಲಿ ಖಾನ್ ಬಾಂದ್ರಾ (ಪಶ್ಚಿಮ) ದಲ್ಲಿರುವ ಅವರ ನಿವಾಸಕ್ಕೆ ದರೋಡೆಕೋರನೊಬ್ಬ ನುಗ್ಗಿ ಚಾಕುವಿನಿಂದ ಇರಿದ ಪರಿಣಾಮ ಗಾಯಗೊಂಡಿದ್ದಾರೆ. ಗುರುವಾರ ಬೆಳಗಿನ ಜಾವ 2:30 ರ ಸುಮಾರಿಗೆ ನಟ ತಮ್ಮ ಇತರ ಕುಟುಂಬ ಸದಸ್ಯರೊಂದಿಗೆ ಮನೆಯಲ್ಲಿ ಮಲಗಿದ್ದಾಗ ಈ ಘಟನೆ ಸಂಭವಿಸಿದೆ. ಮನೆಯಲ್ಲಿದ್ದವರು ಎಚ್ಚರಗೊಂಡು ದರೋಡೆಕೋರನನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಂದ್ರಾ ಪೊಲೀಸರು ಎಫ್‌ಐಆರ್ ದಾಖಲಿಸುವ ಪ್ರಕ್ರಿಯೆಯಲ್ಲಿದ್ದಾರೆ ಮತ್ತು ಅಪರಾಧಿಯನ್ನು ಹಿಡಿಯಲು ಹಲವಾರು ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಹಿರಿಯ

ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ ಚೂರಿ ಇರಿತ Read More »

ಸ್ಯಾಂಡಲ್ ವುಡ್ ಗೆ ಮತ್ತೊಂದು ಶಾಕ್| ಹಿರಿಯ ನಟ ಸರಿಗಮ‌ ವಿಜಿ ಇನ್ನಿಲ್ಲ

ಸಮಗ್ರ ನ್ಯೂಸ್: ಕನ್ನಡ ಚಿತ್ರರಂಗ ಹಾಗೂ ಟಿವಿ ಲೋಕದ ಹಿರಿಯ ನಟ ಸರಿಗಮ ವಿಜಿ (76) ಅವರು ನಿಧನ ಹೊಂದಿದ್ದಾರೆ. ಅವರು ಕಳೆದ ಕೆಲ ದಿನಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದರು. ವಿಜಿ ಅವರಿಗೆ ಶ್ವಾಸಕೋಶದ ಸಮಸ್ಯೆ ಎದುರಾಗಿತ್ತು. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು, ನ್ಯುಮೋನಿಯಾಗೆ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ವಿಜಿ ಅವರು ಇಂದು (ಜನವರಿ 15) ನಿಧನ ಹೊಂದಿದ್ದಾರೆ. ವಿಜಿ ಅವರದ್ದು ಬಲು ಸುದೀರ್ಘವಾದ ಸಿನಿಮಾ ಮತ್ತು ರಂಗಭೂಮಿ ಪಯಣ. ನಾಟಕಗಳಲ್ಲಿ ನಟಿಸುತ್ತಿದ್ದ ವಿಜಿ

ಸ್ಯಾಂಡಲ್ ವುಡ್ ಗೆ ಮತ್ತೊಂದು ಶಾಕ್| ಹಿರಿಯ ನಟ ಸರಿಗಮ‌ ವಿಜಿ ಇನ್ನಿಲ್ಲ Read More »

ಕೊಟ್ಟಿಗೆಹಾರ:ಸುದ್ದಿ ಮಾಡಲು ಹೋಗಿ ಸುದ್ದಿಯಾದ ಯೂಟ್ಯೂಬರ್

ಸಮಗ್ರ ನ್ಯೂಸ್: ಸುದ್ದಿ ಮಾಡಲು ಹೋದ ಯೂಟ್ಯೂಬರ್ ಒಬ್ಬರು ಆನೆ ದಾಳಿಯಿಂದ ಪಾರಾದ ಘಟನೆ ಮಂಗಳವಾರ ಸಂಜೆ ಕೊಟ್ಟಿಗೆಹಾರದಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕಟ್ಟ ಕಡೆಯ ಗ್ರಾಮವಾದ ಬಿದರತಳ ಗ್ರಾಮದ ವಿಡಿಯೋ ಚಿತ್ರೀಕರಣ ಮಾಡಲು ಚನ್ನರಾಯಪಟ್ಟಣ ಮೂಲದ ಅಭಿಷೇಕ್ ಮಂಗಳವಾರ ಸಂಜೆ ಗ್ರಾಮಕ್ಕೆ ಹೋಗಿದ್ದಾನೆ. ಗ್ರಾಮಕ್ಕೆ ಹೋಗಲು ರಸ್ತೆ ಇಲ್ಲದ ಕಾರಣ ಕಚ್ಚಾ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಕಾಡಾನೆ ಒಂದು ಏಕಾಏಕಿ ದಾಳಿಗೆ ಮುಂದಾಗಿದೆ. ಯೂಟ್ಯೂಬರ್ ಅಭಿಷೇಕ್ ಕೂದಲೆಳೆ ಅಂತರದಲ್ಲಿ ಕಂದಕಕ್ಕೆ ಜಿಗಿದು ಪ್ರಾಣಪಾಯದಿಂದ ಪಾರಾಗಿದ್ದಾನೆ. ಆನೆಯನ್ನು

ಕೊಟ್ಟಿಗೆಹಾರ:ಸುದ್ದಿ ಮಾಡಲು ಹೋಗಿ ಸುದ್ದಿಯಾದ ಯೂಟ್ಯೂಬರ್ Read More »

ನಿರೂಪಕ ಬಾಲಕೃಷ್ಣ ರೈ ಪೊರ್ದಾಲ್ ಗೆ ಪುತ್ತೂರು ತಾಲೂಕು ಯುವ ಪ್ರಶಸ್ತಿ

ಸಮಗ್ರ ನ್ಯೂಸ್: ರೋಟರಿ ಕ್ಲಬ್ ಪುತ್ತೂರು ಸೆಂಟ್ರಲ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪುತ್ತೂರು, ತಾಲೂಕು ಯುವಜನ ಒಕ್ಕೂಟ ಪುತ್ತೂರು ಇವುಗಳ ಸಹಯೋಗದೊಂದಿಗೆ ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ ಕೊಡಮಾಡುವ ಪುತ್ತೂರು ತಾಲೂಕು ಯುವ ಪ್ರಶಸ್ತಿಗೆ ಖ್ಯಾತ ನಿರೂಪಕರಾದ ಬಾಲಕೃಷ್ಣ ರೈ ಪೊರ್ದಾಲ್ ಆಯ್ಕೆಯಾಗಿದ್ದಾರೆ. ಬಾಲಕೃಷ್ಣ ರೈ ಪೊರ್ದಾಲ್ಸಹಶಿಕ್ಷಕರು, ಲಿಟ್ಲ್ ಫ್ಲವರ್ ಹಿರಿಯ ಪ್ರಾಥಮಿಕ ಶಾಲೆ ದರ್ಬೆ ಪುತ್ತೂರು, ಇವರು ಬಹುಮುಖ ಪ್ರತಿಭಾವಂತ ಯುವ ಸಾಧಕರು. ರಂಗ ಕಲಾವಿದನಾಗಿ,ಸುಮಾರು 250ಕ್ಕಿಂತಲೂ ಹೆಚ್ಚು ನಾಟಕಗಳಲ್ಲಿ ಅಭಿನಯಿಸಿರುವರು. ರಂಗ

ನಿರೂಪಕ ಬಾಲಕೃಷ್ಣ ರೈ ಪೊರ್ದಾಲ್ ಗೆ ಪುತ್ತೂರು ತಾಲೂಕು ಯುವ ಪ್ರಶಸ್ತಿ Read More »

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ| ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ದಕ್ಷಿಣ ಕನ್ನಡ, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಸಾಧಾರಣ ಮಳೆ ಆಗಿದ್ದು, ಇನ್ನೂ ಮುಂದಿನ 2 ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೊಮೊರಿನ್ ಪ್ರದೇಶ ಮತ್ತು ನೆರೆಹೊರೆಗಳಲ್ಲಿ ಚಂಡಮಾರುತದ ಪರಿಚಲನೆಯು ಈಗ ಆಗ್ನೇಯ ಅರೇಬಿಯನ್ ಸಮುದ್ರ ಮತ್ತು ಪಕ್ಕದ ಸಮಭಾಜಕ ಹಿಂದೂ ಮಹಾಸಾಗರದ ಮೇಲೆ ಸರಾಸರಿ ಸಮುದ್ರ ಮಟ್ಟದಿಂದ 0.9 ಕಿ.ಮೀ. ಎತ್ತರದಲ್ಲಿದೆ. ಇದರಿಂದ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ. ಹಾಸನ, ಚಾಮರಾಜನಗರ,

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ| ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ 2 ದಿನ ಭಾರೀ ಮಳೆ ಸಾಧ್ಯತೆ Read More »

ಕಡಬ ತಾಲೂಕಿನ ವಿವಿಧೆಡೆ ವಾರದೊಳಗೆ ಸೋಲಾರ್ ಪಾರ್ಕ್ ಸ್ಥಾಪನೆಗೆ ಜಾಗ ಗುರುತಿಸಲು ಸಂಸದ ಬ್ರಿಜೇಶ್ ಚೌಟ ಸೂಚನೆ

ಸಮಗ್ರ ನ್ಯೂಸ್: ಸವಣೂರು, ಸುಬ್ರಮಣ್ಯ ನೆಲ್ಯಾಡಿ ಮತ್ತು ಕಡಬದಲ್ಲಿ ಸೋಲಾರ್ ಪಾರ್ಕ್ ಸ್ಥಾಪಿಸುವುದಕ್ಕೆ ಜಾಗ ಗುರುತಿಸುವಂತೆ ಕೇಂದ್ರ ನವೀಕರಿಸಬಹುದಾದ ಇಂಧನ ಇಲಾಖೆಯಿಂದ ಪತ್ರ ಬಂದಿರುವ ಹಿನ್ನಲೆಯಲ್ಲಿ ಒಂದು ವಾರದೊಳಗೆ ಈ ಬಗ್ಗೆ ವರದಿ ನೀಡುವಂತೆ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಕಡಬ ತಾಲೂಕು ತಹಸೀಲ್ದಾರ್ ಗೆ ಸೂಚನೆ ನೀಡಿದ್ದಾರೆ. ಕಡಬ ತಾಲೂಕು ಕಚೇರಿಯಲ್ಲಿ ಜನವರಿ 13 ರಂದು ನಡೆದ ಸಾರ್ವಜನಿಕರ ಭೇಟಿ ವೇಳೆ ಮಾತನಾಡಿದ ಸಂಸದ ಕ್ಯಾ. ಚೌಟ ಅವರು, ಪ್ರಧಾನಮಂತ್ರಿ ನರೇಂದ್ರ

ಕಡಬ ತಾಲೂಕಿನ ವಿವಿಧೆಡೆ ವಾರದೊಳಗೆ ಸೋಲಾರ್ ಪಾರ್ಕ್ ಸ್ಥಾಪನೆಗೆ ಜಾಗ ಗುರುತಿಸಲು ಸಂಸದ ಬ್ರಿಜೇಶ್ ಚೌಟ ಸೂಚನೆ Read More »

ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ| ಆಸ್ಪತ್ರೆಗೆ ದಾಖಲಾದ ಸಚಿವೆ

ಸಮಗ್ರ ನ್ಯೂಸ್: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತೆರಳುತ್ತಿದ್ದ ಕಾರ್ ಅಪಘಾತಕ್ಕೀಡಾಗಿದೆ. ಅಂಬಡಗಟ್ಟಿಯ ಸಮೀಪ ಕಾರು ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಸಮೀಪ ಸಚಿರು ಕಾರ್ ನಲ್ಲಿ ತೆರಳುತ್ತಿದ್ದಾಗ ಘಟನೆ ನಡೆದಿದೆ. ಕಾರಿನಲ್ಲಿದ್ದ ಲಕ್ಷ್ಮಿ ಹೆಬ್ಬಾಳ್ಕರ್ ಮತ್ತು ಅವರ ಸೋದರ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅಪಾಯದಿಂದ ಪಾರಾಗಿದ್ದಾರೆ. ನಾಯಿ ಅಡ್ಡ ಬಂದ ಹಿನ್ನೆಲೆಯಲ್ಲಿ ಅದನ್ನು ತಪ್ಪಿಸಲು ಹೋಗಿ ಕಾರು ಅಪಘಾತಕ್ಕೀಡಾಗಿದೆ.

ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತ| ಆಸ್ಪತ್ರೆಗೆ ದಾಖಲಾದ ಸಚಿವೆ Read More »