Editor

ಚಲಿಸುತ್ತಿದ್ದ ಕಾರಲ್ಲೇ ಮಹಿಳೆಯ ಅತ್ಯಾಚಾರ!

ಸಮಗ್ರ ನ್ಯೂಸ್: ಹೊಳೆ-ಮೊಹಲ್ಲಾದ ನಿಮಿತ್ತ ಆನಂದಪುರ ಸಾಹಿಬ್‌ ಗೆ ಬಂದ ಮಹಿಳೆ ಮೇಲೆ ಐವರು ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣ ಬೆಳಕಿಗೆ ಬಂದಿದೆ. ಮಾಹಿತಿ ನೀಡಿದ ಆನಂದ್‌ಪುರ್ ಸಾಹಿಬ್ ಇನ್‌ಸ್ಪೆಕ್ಟರ್ ಗುರುಪ್ರೀತ್ ಸಿಂಗ್, ಮಾರ್ಚ್ 16 ರಂದು ನವನ್‌ ಶಹರ್ ಬಳಿಯ ಖಟ್ಕರ್‌ ಕಲನ್‌ ನಲ್ಲಿ ಪಂಜಾಬ್‌ನ ನೂತನ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಸಂಬಂಧಿಸಿದಂತೆ ಟ್ರಾಫಿಕ್ ನಿಯಂತ್ರಿಸಲು ಬ್ಯಾರಿಕೇಡ್ ಹಾಕಲಾಗಿತ್ತು. ಆನಂದಪುರ ಸಾಹಿಬ್ ಕಡೆಯಿಂದ ವೇಗವಾಗಿ ಬರುತ್ತಿದ್ದ ವಾಹನದ ಕಡೆಯಿಂದ

ಚಲಿಸುತ್ತಿದ್ದ ಕಾರಲ್ಲೇ ಮಹಿಳೆಯ ಅತ್ಯಾಚಾರ! Read More »

ಹಿಜಾಬ್ ಧರಿಸಿ ಪರೀಕ್ಷೆ, ತರಗತಿಗೆ ಹಾಜರಾಗಲು ನಿಯಮ ಸಡಿಲಿಕೆ ಇಲ್ಲವೇ ಇಲ್ಲ- ಸಚಿವ ಬಿ.ಸಿ‌ ನಾಗೇಶ್

ಸಮಗ್ರ ನ್ಯೂಸ್: ಹೈಕೋರ್ಟ್ ನೀಡಿದ ತೀರ್ಪಿನ ಅನ್ವಯ ಹಿಜಾಬ್ ಧರಿಸಿ ಶಾಲೆಗೆ ಹಾಜರಾಗಲು ಅಥವಾ ಪರೀಕ್ಷೆಗೆ ಹಾಜರಾಗಲು ಅವಕಾಶ ಇಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಾಬ್ ವಿಚಾರವಾಗಿ ಹೈಕೋರ್ಟ್ ತೀರ್ಪು ನೀಡಿದೆ ಹೀಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗುವ ವಿದ್ಯಾರ್ಥಿಗಳಿಗೆ ಯಾವುದೇ ಕಾರಣಕ್ಕೂ ಮತ್ತೆ ಅವಕಾಶ ಸಡಿಲಿಕೆ ಇರುವುದಿಲ್ಲ. ಇನ್ನು ಮುಂದೆ ಪರೀಕ್ಷೆಯ ವಿಚಾರದಲ್ಲಿ ವಿಶೇಷ ಅವಕಾಶವನ್ನು ನೀಡಲ್ಲ. ಇಷ್ಟು ದಿನ ಕೋರ್ಟ್ ತೀರ್ಪು ಬಂದಿರಲಿಲ್ಲ. ಹೀಗಾಗಿ ಶಿಕ್ಷಣ

ಹಿಜಾಬ್ ಧರಿಸಿ ಪರೀಕ್ಷೆ, ತರಗತಿಗೆ ಹಾಜರಾಗಲು ನಿಯಮ ಸಡಿಲಿಕೆ ಇಲ್ಲವೇ ಇಲ್ಲ- ಸಚಿವ ಬಿ.ಸಿ‌ ನಾಗೇಶ್ Read More »

ಡಾ. ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ ‘ಸಹಕಾರ ರತ್ನ‌’ ಪ್ರಶಸ್ತಿ – ಸಚಿವ ಎಸ್.ಟಿ ಸೋಮಶೇಖರ್

ಸಮಗ್ರ ನ್ಯೂಸ್: ಡಾ. ಪುನೀತ್​​ ರಾಜ್​ ಕುಮಾರ್​​ ಅವರಿಗೆ ಮರಣೋತ್ತರ ಸಹಕಾರ ರತ್ನ ಪ್ರಶಸ್ತಿ ನೀಡಲು ತೀರ್ಮಾನಿಸಲಾಗಿದೆ ಅಂತ ಸಹಕಾರ ಸಚಿವ ಎಸ್ ಟಿ ಸೋಮಶೇಖರ್ ತಿಳಿಸಿದ್ದಾರೆ. ಅವರು ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು. ಈಗಾಗಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರ್ನಾಟಕ ಸರ್ಕಾರದ ಅತ್ಯುನ್ನತ ಕರ್ನಾಟಕ ರತ್ನ ಪ್ರಶಸ್ತಿ ನೀಡುವುದಾಗಿ ಘೋಷಣೆ ಮಾಡಿದ್ದು, ಈ ನಡುವೆ ಸಹಕಾರ ರತ್ನ ಪ್ರಶಸ್ತಿ ಲಭಿಸಿರುವುದು ಅಪ್ಪು ಅಭಿಮಾನಿಗಳಿಗೆ ಇನ್ನಷ್ಟು ಹರ್ಷ ತಂದಿದೆ.

ಡಾ. ಪುನೀತ್ ರಾಜ್ ಕುಮಾರ್ ಗೆ ಮರಣೋತ್ತರ ‘ಸಹಕಾರ ರತ್ನ‌’ ಪ್ರಶಸ್ತಿ – ಸಚಿವ ಎಸ್.ಟಿ ಸೋಮಶೇಖರ್ Read More »

ಮಂಗಳೂರು: ಲೇಡಿಗೋಷನ್ ಆಸ್ಪತ್ರೆಯಲ್ಲಿ ಮಗು ಬದಲಿಸಿದ ಪ್ರಕರಣ| ಬಿ ರಿಪೋರ್ಟ್ ಸಲ್ಲಿಸಿದ ಪೊಲೀಸರು| ಮಗುವಿನ ಪೋಷಕರು ಯಾರು?

ಸಮಗ್ರ ನ್ಯೂಸ್: ಕಳೆದ ವರ್ಷ ಮಂಗಳೂರಿನ ಸರ್ಕಾರಿ ಲೇಡಿಗೋಷನ್ ಆಸ್ಪತ್ರೆಯಲ್ಲಿ ‘ಮಗು ಅದಲು ಬದಲು’ ಪ್ರಕರಣಕ್ಕೆ ಸಂಬಂಧಿಸಿ ದಾಖಲಾಗಿದ್ದ ಪ್ರಕರಣದ ಬಗ್ಗೆ ಮಂಗಳೂರು ಉತ್ತರ ಠಾಣಾ(ಬಂದರು) ಪೊಲೀಸರು ನ್ಯಾಯಾಲಯಕ್ಕೆ ‘ಬಿ’ ವರದಿ ಸಲ್ಲಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈದರಾಬಾದ್ ಪ್ರಯೋಗಾಲಯದಲ್ಲಿ ನಡೆಸಲಾದ ಡಿಎನ್‌ಎ ಪರೀಕ್ಷೆ ವರದಿ ತನಿಖಾಧಿಕಾರಿಯ ಕೈಸೇರಿದ್ದು, ಅದರಲ್ಲಿ ದೂರುದಾರ ಮುಸ್ತಫಾ ಅವರೇ ಮಗುವಿನ ತಂದೆ ಎಂಬುದನ್ನು ವರದಿ ಖಚಿತಪಡಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ‘ನನಗೆ ಜನಿಸಿದ ಆರೋಗ್ಯವಂತ ಹೆಣ್ಣು ಮಗುವನ್ನು ಬದಲಿಸಿ, ಆಸ್ಪತ್ರೆಯ

ಮಂಗಳೂರು: ಲೇಡಿಗೋಷನ್ ಆಸ್ಪತ್ರೆಯಲ್ಲಿ ಮಗು ಬದಲಿಸಿದ ಪ್ರಕರಣ| ಬಿ ರಿಪೋರ್ಟ್ ಸಲ್ಲಿಸಿದ ಪೊಲೀಸರು| ಮಗುವಿನ ಪೋಷಕರು ಯಾರು? Read More »

“ನಾಯಕತ್ವ ಬದಲಿಸಿಕೊಳ್ಳಿ, ಇಲ್ಲದಿದ್ದರೆ ಕರ್ನಾಟಕದಲ್ಲೂ ಆಪ್ ನಿಮ್ಮನ್ನ ಗುಡಿಸುತ್ತೆ”| ಮೂರೂ ಪಕ್ಷಗಳಿಗೆ ಎಚ್ಚರಿಕೆ ಇತ್ತ ಲೆಹರ್ ಸಿಂಗ್

ಸಮಗ್ರ ನ್ಯೂಸ್: ‘ರಾಜ್ಯದಲ್ಲಿ ಪ್ರಮುಖವಾಗಿರುವ ಮೂರೂ ಪಕ್ಷಗಳ ನಾಯಕತ್ವ ಬದಲಾವಣೆಯಾಗದಿದ್ದರೆ ಅವುಗಳು ಧೂಳಿಪಟವಾಗುತ್ತವೆ. ದೆಹಲಿ ರೀತಿಯಲ್ಲಿ ಆಮ್ ಆದ್ಮಿ ಪಕ್ಷವು ಎಲ್ಲರನ್ನೂ ಗುಡಿಸುತ್ತದೆ’ ಎಂದು ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್‌ಗೆ ವಿಧಾನ ಪರಿಷತ್‌ನ ಬಿಜೆಪಿ ಸದಸ್ಯ ಲೆಹರ್ ಸಿಂಗ್ ಸಿರೋಯಾ ಎಚ್ಚರಿಕೆ ನೀಡಿದರು. ವಿಧಾನ ಪರಿಷತ್‌ನಲ್ಲಿ ಗುರುವಾರ ಬಜೆಟ್‌ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಲೆಹರ್‌ ಸಿಂಗ್‌, ‘ನಾನು 12 ವರ್ಷಗಳಿಂದ ಸದನದಲ್ಲಿದ್ದೇನೆ. ಪಕ್ಷ ನನಗೆ ಎರಡು ಅವಧಿಗೆ ಅವಕಾಶ‌ ನೀಡಿದೆ. ‌ಮತ್ತೆ ನಾನು ಅವಕಾಶ ಕೇಳುವುದಿಲ್ಲ.

“ನಾಯಕತ್ವ ಬದಲಿಸಿಕೊಳ್ಳಿ, ಇಲ್ಲದಿದ್ದರೆ ಕರ್ನಾಟಕದಲ್ಲೂ ಆಪ್ ನಿಮ್ಮನ್ನ ಗುಡಿಸುತ್ತೆ”| ಮೂರೂ ಪಕ್ಷಗಳಿಗೆ ಎಚ್ಚರಿಕೆ ಇತ್ತ ಲೆಹರ್ ಸಿಂಗ್ Read More »

ಶಿವಮೊಗ್ಗ: ಆಲಿಕಲ್ಲು ಸಹಿತ ಭಾರೀ ಮಳೆ| ಹಲವೆಡೆ ಕೃಷಿ ಹಾನಿ

ಸಮಗ್ರ ನ್ಯೂಸ್: ಜಿಲ್ಲೆಯಲ್ಲಿ ಇಂದು ಸುರಿದ ಆಲಿಕಲ್ಲು ಸಹಿತ ಭಾರೀ ಗಾಳಿ ಮಳೆಗೆ ಮಲೆನಾಡು ತತ್ತರಿಸಿದ್ದು, ಜನ ಜೀವನ ಅಸ್ತವ್ಯಸ್ತಗೊಂಡಿದೆ. ಸಾಗರ ತಾಲೂಕಿನ ತ್ಯಾಗರ್ತಿ, ಗೌತಮಪುರ ಹಾಗೂ ಬರೂರು ಗ್ರಾಮ ಪಂಚಾಯತ್​ ವ್ಯಾಪ್ತಿಯ ಭಾಗದಲ್ಲಿ ಮಧ್ಯಾಹ್ನ ಮೂರು ಗಂಟೆಯಿಂದ ನಿರಂತರವಾಗಿ ಗುಡುಗು ಸಹಿತ ಭಾರೀ ಮಳೆ ಮಳೆಯಾಗಿದೆ. ಸುಮಾರು ಒಂದು ಗಂಟೆ ಸುರಿದ ಮಳೆಗೆ ಕುಡಿಗೇರಿ, ಸಂಪಳ್ಳಿ, ಕೋಟೆಕೊಪ್ಪ ಭಾಗದ ಜನರು ಹೈರಾಣಾಗಿದ್ದಾರೆ. ದಿಢೀರ್ ಸುರಿದ ಮಳೆ ಹಾಗೂ ಗಾಳಿಯ ರಭಸಕ್ಕೆ ಹಲವೆಡೆ ಮರಗಳು ಧರೆಗುರುಳಿದೆ. ಕೃಷಿ

ಶಿವಮೊಗ್ಗ: ಆಲಿಕಲ್ಲು ಸಹಿತ ಭಾರೀ ಮಳೆ| ಹಲವೆಡೆ ಕೃಷಿ ಹಾನಿ Read More »

ಕರಾವಳಿಯಲ್ಲಿ ಮಳೆರಾಯನ ಸಿಂಚನ

ಸಮಗ್ರ ನ್ಯೂಸ್: ವಿಪರೀತ ಸೆಕೆಯಿಂದ ಕಂಗೆಟ್ಟಿದ್ದ ಕರಾವಳಿಗೆ ಮತ್ತೊಂದು ಮಳೆಯ ಸಿಂಚನವಾಗಿದೆ. ಕರಾವಳಿಯ ಬಹುತೇಕ ಕಡೆ ಗುಡುಗು ಸಹಿತ ಮಳೆ ಸುರಿಯುತ್ತಿದೆ. ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಕುಸಿತ ಈ ಮಳೆಗೆ ಕಾರಣ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜಿಲ್ಲೆಯ, ಸುಳ್ಯ, ಕಡಬ, ಪುತ್ತೂರು ಬೆಳ್ತಂಗಡಿ ತಾಲೂಕಿನ ಬಹುತೇಕ ಕಡೆ ಮಳೆ ಸುರಿದಿದ್ದು, ಇಳೆ ತಂಪಾಗಿದೆ. ಕೃಷಿ ಭೂಮಿ ತಂಪಾಗಿದ್ದು, ಕೃಷಿಕರು ನಿಟ್ಟುಸಿರು ಬಿಟ್ಟಿದ್ದಾರೆ. ರಾಜ್ಯಾಧ್ಯಂತ ಮಳೆ ಸಂಭವ: ಇಂದು ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆಯಾಗುವ

ಕರಾವಳಿಯಲ್ಲಿ ಮಳೆರಾಯನ ಸಿಂಚನ Read More »

ಬೆಳ್ತಂಗಡಿ: ಭೀಕರ ಅಪಘಾತ| ಸಹೋದರರು ಸ್ಥಳದಲ್ಲೇ ದುರ್ಮರಣ

ಸಮಗ್ರ ನ್ಯೂಸ್: KSRTC ಬಸ್ ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಸಹೋದರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕು ವೇಣೂರು ಸಮೀಪದ ನಂದಿಬೆಟ್ಟದಲ್ಲಿನಡೆದಿದೆ. ಸಿರಾಜ್,ಸಾದಿಕ್ ಮೃತಪಟ್ಟ ಸಹೋದರರು ಎಂದು ಗುರುತಿಸಲಾಗಿದೆ. ಇವರು ಬಂಡಾಡ್ ರಝಾಕ್ ಮಾಸ್ಟರ್ ಅವರ ಮಕ್ಕಳು ಎಂದು ತಿಳಿದು ಬಂದಿದೆ. ಬೆಳ್ತಂಗಡಿಯಿಂದ ಕುಂದಾಪುರಕ್ಕೆ ತೆರಳುತ್ತಿದ್ದ KSRTC ಬಸ್ ಬೈಕಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಯುವಕರಿಬ್ಬರು ಮೃತಪಟ್ಟಿದ್ದಾರೆ.

ಬೆಳ್ತಂಗಡಿ: ಭೀಕರ ಅಪಘಾತ| ಸಹೋದರರು ಸ್ಥಳದಲ್ಲೇ ದುರ್ಮರಣ Read More »

ಬಾಂಗ್ಲಾದೇಶ: ರಾಧಾಕಾಂತ ದೇವಾಲಯ ನೆಲಸಮ| 200 ಮಂದಿಯಿಂದ ಏಕಕಾಲಕ್ಕೆ ದಾಳಿ ನಡೆಸಿ ಲೂಟಿ

ಸಮಗ್ರ ನ್ಯೂಸ್: ಢಾಕಾದ ವಾರಿಯ 222 ಲಾಲ್ ಮೋಹನ್ ಸಹಾ ಬೀದಿಯಲ್ಲಿರುವ ಇಸ್ಕಾನ್ ರಾಧಾಕಾಂತ ದೇವಾಲಯದ ಮೇಲೆ 200ಕ್ಕೂ ಹೆಚ್ಚು ಜನರು ಗುರುವಾರ ದಾಳಿ ನಡೆಸಿ, ದೇವಾಲಯವನ್ನು ಧ್ವಂಸಗೊಳಿಸಿದ್ದಾರೆ. ಅಲ್ಲದೇ ಲೂಟಿ ಮಾಡಿರೋದಾಗಿ ತಿಳಿದು ಬಂದಿದೆ. ವರದಿಗಳ ಪ್ರಕಾರ, ಸುಮಂತ್ರ ಚಂದ್ರ ಶ್ರವಣ್, ನಿಹಾರ್ ಹಲ್ದಾರ್, ರಾಜೀವ್ ಭದ್ರಾ ಸೇರಿದಂತೆ ಅನೇಕ ಜನರು ದಾಳಿಯಲ್ಲಿ ಗಾಯಗೊಂಡಿದ್ದಾರೆ. ಗುಂಪಿನ ನೇತೃತ್ವವನ್ನು ಹಾಜಿ ಶಫಿವುಲ್ಲಾ ವಹಿಸಿದ್ದರು ಎಂದು ತಿಳಿದುಬಂದಿದೆ. ಕಳೆದ ವರ್ಷವೂ ಇದೇ ದೇವಾಲಯದ ಮೇಲೆ ದಾಳಿ ನಡೆಸಲಾಗಿತ್ತು. ಆಗ

ಬಾಂಗ್ಲಾದೇಶ: ರಾಧಾಕಾಂತ ದೇವಾಲಯ ನೆಲಸಮ| 200 ಮಂದಿಯಿಂದ ಏಕಕಾಲಕ್ಕೆ ದಾಳಿ ನಡೆಸಿ ಲೂಟಿ Read More »

ಮಾ.20: ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 17ನೇ ಮಡಂತ್ಯಾರು ಶಾಖೆ ಉದ್ಘಾಟನೆ

ಸಮಗ್ರ ನ್ಯೂಸ್: ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ನೂತನ 17ನೇ ಮಡಂತ್ಯಾರು ಶಾಖೆಯು ಮಡಂತ್ಯಾರಿನಲ್ಲಿ ಮಾ.20ರಂದು ಉದ್ಘಾಟನೆಗೊಳ್ಳಲಿದೆ ಎಂದು ಸೊಸೈಟಿ ಅಧ್ಯಕ್ಷ ಪಿ.ಸಿ ಜಯರಾಮರವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. 1997ರಲ್ಲಿ ಗೌಡರ ಸೇವಾ ಸಂಘ ಸುಳ್ಯ ಇವರಿಂದ ಪ್ರವರ್ತಿಸಲ್ಪಟ್ಟ ಸಂಘವು 435 ಜನರಿಂದ ಪ್ರಾರಂಭವಾಗಿ, ಪ್ರಸ್ತುತ 14261 ಜನ ವಿವಿಧ ವರ್ಗದ ಸದಸ್ಯರಿದ್ದು, ರೂ.3.50 ಕೋಟಿ ಪಾಲು ಬಂಡವಾಳ ಸಂಗ್ರಹಿಸಿದೆ. ಸಂಘದಲ್ಲಿ ರೂ.120.00 .ಕೋಟಿಗೂ ಮಿಕ್ಕಿ ಠೇವಣಿಯದ್ದು, ರೂ.103.00 ಕೋಟಿಗೂ ಮಿಕ್ಕಿ ವಿವಿಧ ಸಾಲಗಳನ್ನು ಸದಸ್ಯರಿಗೆ

ಮಾ.20: ಸುಳ್ಯ ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 17ನೇ ಮಡಂತ್ಯಾರು ಶಾಖೆ ಉದ್ಘಾಟನೆ Read More »