Editor

ನಾಳೆ(ಮಾ.10) ಪಂಚರಾಜ್ಯ ಚುನಾವಣಾ ಫಲಿತಾಂಶ| ಪ್ರತಿಷ್ಟೆಯ ಕದನದಲ್ಲಿ ಗೆಲ್ಲೋರ್ಯಾರು?

ಸಮಗ್ರ ನ್ಯೂಸ್: ಐದು ರಾಜ್ಯಗಳಾದ ಉತ್ತರ ಪ್ರದೇಶ, ಪಂಜಾಬ್, ಉತ್ತರಾಖಂಡ, ಗೋವಾ ಮತ್ತು ಮಣಿಪುರದಲ್ಲಿ ನಡೆದ ವಿಧಾನಸಭಾ ಚುನಾವಣೆಗಳ ಮತ ಎಣಿಕೆ ಗುರುವಾರ(ಮಾ.೧೦) ನಡೆಯಲಿದ್ದು, ಸಂಜೆ ವೇಳೆ ಪ್ರಸ್ತುತ ನಾಲ್ಕು ರಾಜ್ಯಗಳಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಮತ್ತು ಪಂಜಾಬ್‌ನಲ್ಲಿ ಅಧಿಕಾರದಲ್ಲಿರುವ ಕಾಂಗ್ರೆಸ್ ಪಕ್ಷದ ಭವಿಷ್ಯ ನಿರ್ಧಾರವಾಗಲಿದೆ. ಮಾರ್ಚ್ 10 ರಂದು ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಮತಗಳ ಎಣಿಕೆಯಲ್ಲಿ ಮೊದಲು ಬ್ಯಾಲೆಟ್ ಪೇಪರ್ ಮತಗಳನ್ನು ಎಣಿಕೆ ಮಾಡಲಾಗುವುದು, ನಂತರ

ನಾಳೆ(ಮಾ.10) ಪಂಚರಾಜ್ಯ ಚುನಾವಣಾ ಫಲಿತಾಂಶ| ಪ್ರತಿಷ್ಟೆಯ ಕದನದಲ್ಲಿ ಗೆಲ್ಲೋರ್ಯಾರು? Read More »

ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಆರೋಪಿಗೆ ಜಾಮೀನು

ಸಮಗ್ರ ನ್ಯೂಸ್: 1991ರಲ್ಲಿ ಆಗಿನ ಪ್ರಧಾನಿ ರಾಜೀವ್ ಗಾಂಧಿ ಹತ್ಯೆಗೆ ಸಂಬಂಧಿಸಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಏಳು ಅಪರಾಧಿಗಳಲ್ಲಿ ಒಬ್ಬರಾದ ಎಜಿ ಪೆರಾರಿವಾಲನ್‌ಗೆ ಸುಪ್ರೀಂ ಕೋರ್ಟ್ ಬುಧವಾರ ಜಾಮೀನು ಮಂಜೂರು ಮಾಡಿದೆ. ಸುಮಾರು 32 ವರ್ಷಗಳಿಂದ ಪೆರಾರಿವಾಲನ್ ಜೈಲಿನಲ್ಲಿರುವುದನ್ನು ಗಮನಿಸಿ ನ್ಯಾಯಮೂರ್ತಿ ಎಲ್ ನಾಗೇಶ್ವರ ರಾವ್ ಮತ್ತು ನ್ಯಾಯಮೂರ್ತಿ ಬಿಆರ್ ಗವಾಯಿ ಅವರನ್ನೊಳಗೊಂಡ ನ್ಯಾಯಪೀಠ ಅವರಿಗೆ ಜಾಮೀನು ನೀಡಿದೆ. ಅರ್ಜಿದಾರರು 30 ವರ್ಷಗಳಿಗಿಂತ ಹೆಚ್ಚು ಕಾಲ ಜೈಲುವಾಸ ಅನುಭವಿಸಿದ್ದಾರೆ ಎಂಬ ಅಂಶವನ್ನು ಗಣನೆಗೆ ತೆಗೆದುಕೊಂಡು, ಕೇಂದ್ರದ

ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಆರೋಪಿಗೆ ಜಾಮೀನು Read More »

‘ಹಿಂದೂ ಕಾರ್ಯಕರ್ತರಲ್ಲ, ಅವರ ಹೆಂಡ್ತಿ, ಮಕ್ಳೇ ಮುಂದಿನ ಟಾರ್ಗೆಟ್’| ಎಂಎಲ್ಸಿ ಡಿ.ಎಸ್ ಅರುಣ್ ಗೆ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ|

ಸಮಗ್ರ ನ್ಯೂಸ್: ಭಜರಂಗದಳ ಕಾರ್ಯಕರ್ತ ಹರ್ಷನ ಹತ್ಯೆ ಬೆನ್ನಲ್ಲೇ ಎಂಎಲ್‌ಸಿ ಡಿ.ಎಸ್.ಅರುಣ್ ಅವರಿಗೆ ಸಾಮಾಜಿಕ ಜಾಲತಾಣದ ಮೂಲಕ ಬೆದರಿಕೆ ಹಾಕಲಾಗಿದೆ. ಫೆ.20ರಂದು ರಾತ್ರಿ ಹರ್ಷನ ಹತ್ಯೆ ಬಳಿಕ ಎಂಎಲ್‌ಸಿ ಡಿ.ಎಸ್.ಅರುಣ್ ಅವರು ಕೃತ್ಯದ ಹಿಂದೆ ಮುಸ್ಲಿಮರು ಇರುವ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದರು. ಇದರ ಬೆನ್ನಲ್ಲೇ ಅರುಣ್ ಅವರಿಗೆ ಜಾಲತಾಣದ ಮೂಲಕ ಬೆದರಿಕೆ ಸಂದೇಶ ಪೋಸ್ಟ್ ಮಾಡಲಾಗಿದೆ. ಮುಸ್ತಾಕ್ ಅಲಿ ಹೆಸರಿನ ವ್ಯಕ್ತಿಯು ‘ನಿಮ್ಮ ತಲೇಲಿ ಇವತ್ತು ಕೇವಲ ಒಬ್ಬ ಹಿಂದೂ ಕಾರ್ಯಕರ್ತ ಸತ್ತಿದ್ದಾನೆ. ಆದರೆ ಮುಂದಿನ

‘ಹಿಂದೂ ಕಾರ್ಯಕರ್ತರಲ್ಲ, ಅವರ ಹೆಂಡ್ತಿ, ಮಕ್ಳೇ ಮುಂದಿನ ಟಾರ್ಗೆಟ್’| ಎಂಎಲ್ಸಿ ಡಿ.ಎಸ್ ಅರುಣ್ ಗೆ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ| Read More »

ಪುತ್ತೂರು: ಕರ್ತವ್ಯಕ್ಕೆ ಹೊರಟಿದ್ದ ಪೊಲೀಸ್ ಗೆ ‘ಕಾಲನ ಕರೆ’ | ಹೃದಯಾಘಾತದಿಂದ ಸಾವನ್ನಪ್ಪಿದ ಸಂಪ್ಯ ಠಾಣಾ ಪೇದೆ

ಸಮಗ್ರ ನ್ಯೂಸ್; ಕರ್ತವ್ಯಕ್ಕೆ ಹೊರಟು ನಿಂತ ಪೋಲೀಸ್ ಪೇದೆಯೊಬ್ಬರು ಹೃದಯಾಘಾತದಿಂದ ಸಾವಿಗೀಡಾದ ಘಟನೆ ಮಾರ್ಚ್ 9 ರಂದು ಪುತ್ತೂರಿನ ಸಂಪ್ಯದಲ್ಲಿ ನಡೆದಿದೆ. ಅವರಿಗೆ 42 ವರ್ಷ ವಯಸ್ಸಾಗಿತ್ತು. ಸಂಪ್ಯ ಪೋಲೀಸ್ ಠಾಣೆಯ ಸಿಬ್ಬಂದಿ ಗಣೇಶ್ ಹೃದಯಾಘಾತದಿಂದ ಸಾವಿಗೀಡಾದ ಪೇದೆಯಾಗಿದ್ದು, ಕೇರಳ-ಕರ್ನಾಟಕ‌ ಗಡಿಯ ಸ್ವರ್ಗ‌ ಎಂಬಲ್ಲಿ ಗಣೇಶ್ ಕರ್ತವ್ಯ ನಿರ್ವಹಿಸುತ್ತಿದ್ದರು. ಇಂದು ಕೂಡಾ ಎಂದಿನಂತೆ ಕರ್ತವ್ಯಕ್ಕೆ ಹೊರಟು ನಿಂತಿದ್ದ ಸಂದರ್ಭ‌ ಈ ಘಟನೆ ನಡೆದಿದ್ದು, ದಕ್ಷಿಣಕನ್ನಡ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಹಿರಿಯ ಪೋಲೀಸ್‌ ಅಧಿಕಾರಿಗಳು ಗಣೇಶ್ ಸಾವಿಗೆ

ಪುತ್ತೂರು: ಕರ್ತವ್ಯಕ್ಕೆ ಹೊರಟಿದ್ದ ಪೊಲೀಸ್ ಗೆ ‘ಕಾಲನ ಕರೆ’ | ಹೃದಯಾಘಾತದಿಂದ ಸಾವನ್ನಪ್ಪಿದ ಸಂಪ್ಯ ಠಾಣಾ ಪೇದೆ Read More »

ಮಂಗಳೂರು: ಮಳೆ ಅವಾಂತರ; ಲಾರಿ ಮೇಲೆ ಬಿದ್ದ ಮರ

ಸಮಗ್ರ ನ್ಯೂಸ್: ನಗರದಲ್ಲಿ ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ಸ್ಟೇಟ್ ಬ್ಯಾಂಕ್ ಬಳಿಯಿರುವ ರೋಜಾರಿಯೋ ರಸ್ತೆಯಲ್ಲಿ ಬೃಹತ್​ ಗಾತ್ರದ ಮರವೊಂದು ರಸ್ತೆಬದಿ ನಿಂತಿದ್ದ ಲಾರಿ ಮೇಲೆ ಉರುಳಿದೆ. ಅದೃಷ್ಟವಶಾತ್ ಲಾರಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಮರ ಬೀಳುತ್ತಿದ್ದಂತೆ ಚಾಲಕ ಪುರುಷೋತ್ತಮ ಲಾರಿಯಿಂದ ಕೆಳಗೆ ಜಿಗಿದಿದ್ದಾರೆ. ಶಾಲೆ-ಕಾಲೇಜು ಸಂಪರ್ಕಿಸುವ ಪ್ರಮುಖ ರಸ್ತೆ ಇದಾಗಿದ್ದು, ಬಿಎಸ್​ಎನ್​ಎಲ್ ಆವರಣದಿಂದ ಕಂಪೌಂಡ್ ಸಮೇತ ಮರ ಉರುಳಿದೆ. ಪಾಂಡೇಶ್ವರ ಅಗ್ನಿಶಾಮಕ ದಳದಿಂದ ಮರ ತೆರವು ಕಾರ್ಯಾಚರಣೆ ಮಾಡಲಾಗುತ್ತಿದೆ. ಮರ ಉರುಳಿದ್ದರಿಂದ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ.

ಮಂಗಳೂರು: ಮಳೆ ಅವಾಂತರ; ಲಾರಿ ಮೇಲೆ ಬಿದ್ದ ಮರ Read More »

ಉಕ್ರೇನ್ ನಿಂದ ರಕ್ಷಿಸಲ್ಪಟ್ಟ ಪಾಕಿಸ್ತಾನಿ ಹುಡುಗಿಯಿಂದ ಮೋದಿಗೆ ಥ್ಯಾಂಕ್ಸ್| ನಮ್ಮವರು ಗುಲಾಬಿ ಕೊಟ್ರೂ ತಗೊಳ್ಳಲ್ವಾ ಮರ್ರೆ..!

ಸಮಗ್ರ ನ್ಯೂಸ್: ಯುದ್ಧಪೀಡಿತ ಉಕ್ರೇನ್ ದೇಶದಿಂದ ಭಾರತೀಯರನ್ನು ಕರೆತರುವ ಕೆಲಸ ಸಮರೋಪಾದಿಯಲ್ಲಿ ನಡೆಯುತ್ತಿದೆ. ಆಪರೇಶನ್ ಗಂಗಾ ಕಾರ್ಯಾಚರಣೆ ಮೂಲಕ ಸಾವಿರಾರು ಭಾರತೀಯ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಕರೆತರಲಾಗಿದೆ. ಈ ನಡುವೆ ಕೀವ್ ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯ ಸಹಾಯದಿಂದ ಪಾಕಿಸ್ತಾನಿ ಹುಡುಗಿ ಅಸ್ಮಾ ಶಫೀಕ್ ಎಂಬ ವಿದ್ಯಾರ್ಥಿನಿಯನ್ನು ಉಕ್ರೇನ್‌ನ ಯುದ್ಧ ವಲಯದಿಂದ ಸ್ಥಳಾಂತರಿಸಲಾಗಿದೆ. ವೀಡಿಯೊವೊಂದರಲ್ಲಿ, ಅವರು “ಬಹಳ ಕಷ್ಟಕರ ಪರಿಸ್ಥಿತಿ” ಯಿಂದ ಪಾರಾಗಲು ಸಹಾಯ ಮಾಡಿದ್ದಕ್ಕಾಗಿ ಭಾರತೀಯ ರಾಯಭಾರ ಕಚೇರಿ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ

ಉಕ್ರೇನ್ ನಿಂದ ರಕ್ಷಿಸಲ್ಪಟ್ಟ ಪಾಕಿಸ್ತಾನಿ ಹುಡುಗಿಯಿಂದ ಮೋದಿಗೆ ಥ್ಯಾಂಕ್ಸ್| ನಮ್ಮವರು ಗುಲಾಬಿ ಕೊಟ್ರೂ ತಗೊಳ್ಳಲ್ವಾ ಮರ್ರೆ..! Read More »

‘ಆಪರೇಷನ್ ಗಂಗಾ’ ಕಾರ್ಯಾಚರಣೆಯಲ್ಲಿ ಮಂಗಳೂರಿನ ಮೈಕಲ್ ಸಲ್ದಾನ

ಸಮಗ್ರ ನ್ಯೂಸ್: ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳನ್ನು ಸ್ವದೇಶಕ್ಕೆ ಕರೆತರುವ ‘ಆಪರೇಶನ್ ಗಂಗಾ’ ಕಾರ್ಯಾಚರಣೆಯಲ್ಲಿ ಮಂಗಳೂರು ಮೂಲದ ಪೈಲಟ್ ಕ್ಯಾಪ್ಟನ್ ಮೈಕೆಲ್‌ ಸಲ್ಡಾನ ಕೂಡಾ ಇದ್ದಾರೆ. ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ ವಿಮಾನದ ಪೈಲಟ್ ಆಗಿರುವ ಕ್ಯಾಪ್ಟನ್ ಮೈಕೆಲ್‌ ಸಲ್ಡಾನ ಅವರನ್ನು ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರನ್ನು ಕರೆತರಲು ನಿಯೋಜಿಸಲಾಗಿತ್ತು. ಈಗಾಗಲೇ ಅನೇಕ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಅವರು ತಾಯ್ನಾಡಿಗೆ ಕರೆತಂದಿದ್ದಾರೆ. ಎರಡು ವರ್ಷಗಳ ಹಿಂದೆ ಕೋವಿಡ್‌ -19 ವ್ಯಾಪಕವಾಗಿದ್ದ ಸಂದರ್ಭ ಗಲ್ಫ್ ರಾಷ್ಟ್ರಗಳಲ್ಲಿ ಅನೇಕ ಭಾರತೀಯರು ಸಿಲುಕಿಕೊಂಡಿದ್ದರು. ಆಗಲೂ ಕ್ಯಾಪ್ಟನ್

‘ಆಪರೇಷನ್ ಗಂಗಾ’ ಕಾರ್ಯಾಚರಣೆಯಲ್ಲಿ ಮಂಗಳೂರಿನ ಮೈಕಲ್ ಸಲ್ದಾನ Read More »

ಮಂಗಳೂರು : ಜಿಲ್ಲೆಯಲ್ಲಿ ತಂಪೆರೆದ ಬೇಸಿಗೆ ಮಳೆ| ಮುಂದಿನ 5 ದಿನ ಮಳೆ ಮುಂದುವರೆಯುವ ಸಾಧ್ಯತೆ|

ಸಮಗ್ರ ನ್ಯೂಸ್: ಮಂಗಳೂರು ನಗರ ಸೇರಿದಂತೆ ದ.ಕ. ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ ಸಂಜೆಯಿಂದ ಗುಡುಗು ಮಿಂಚಿನ ಸಹಿತ ಸಾಧಾರಣ ಮಳೆಯಾಗಿದೆ. ಬಂಗಾಳ ಕೊಲ್ಲಿಯಲ್ಲಿ ತೀವ್ರ ವಾಯುಭಾರ‌ ಕುಸಿತ ಆಗಿರುವ ಕಾರಣ ಮುಂದಿನ ಒಂದೆರಡು ದಿನಗಳಲ್ಲಿ ವಿವಿಧೆಡೆ ಮಳೆಯಾಗುವ ಸಾದ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಅದರಂತೆ ನಿನ್ನೆ ಸಂಜೆಯಿಂದಲೇ ಜಿಲ್ಲೆಯ ವಿವಿಧೆಡೆ ಮಳೆ ಸುರಿದಿತ್ತು. ಇಂದು ಮಂಗಳೂರು ನಗರ ಸೇರಿದಂತೆ ಹಲವೆಡೆ ಬೆಳಗ್ಗೆ 6 ಗಂಟೆಯಿಂದಲೇ ಮತ್ತೆ ಗುಡುಗು ಮಿಂಚಿನ ಸಹಿತ

ಮಂಗಳೂರು : ಜಿಲ್ಲೆಯಲ್ಲಿ ತಂಪೆರೆದ ಬೇಸಿಗೆ ಮಳೆ| ಮುಂದಿನ 5 ದಿನ ಮಳೆ ಮುಂದುವರೆಯುವ ಸಾಧ್ಯತೆ| Read More »

ಮಂಗಳೂರು: ಕಾಲೇಜು ವಿದ್ಯಾರ್ಥಿನಿಯರನ್ನು ಬಳಸಿ ಹೈಟೆಕ್ ಮಾಂಸದಂಧೆ| ಸಿಕ್ಕಿಬಿದ್ದ ಖದೀಮರಲ್ಲಿ ಮೂವರು ವೃದ್ಧರು!; ಆಘಾತಕಾರಿ ಮಾಹಿತಿ ಬಹಿರಂಗಗೊಳಿಸಿದ ಕಮಿಷನರ್|

ಸಮಗ್ರ ನ್ಯೂಸ್: ಕರಾವಳಿ ಜಿಲ್ಲೆಯಲ್ಲಿ ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯರನ್ನು ಬಳಸಿಕೊಂಡು ನಡೆಸುತ್ತಿದ್ದ ಹೈಟೆಕ್ ವೇಶ್ಯಾವಾಟಿಕೆ ದಂಧೆಯ ಮತ್ತೊಂದು ಕರಾಳಮುಖ ಬಯಲಾಗಿದೆ. ಮತ್ತೊಬ್ಬ ಅಪ್ರಾಪ್ತ ವಿದ್ಯಾರ್ಥಿನಿಯನ್ನು ಬಳಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ. ಈ ಹಿಂದೆ ವೇಶ್ಯಾವಾಟಿಕೆ ದಂಧೆಯಲ್ಲಿ ಓರ್ವ ಅಪ್ರಾಪ್ತ ವಿದ್ಯಾರ್ಥಿನಿ ಸೇರಿದಂತೆ ನಾಲ್ವರು ಸಂತ್ರಸ್ಥರನ್ನು ಮಂಗಳೂರು ಪೊಲೀಸರು ರಕ್ಷಿಸಿದ್ದರು. ಇದೀಗ ಮತ್ತೊಬ್ಬ ವಿದ್ಯಾರ್ಥಿನಿಯನ್ನು ರಕ್ಷಣೆ ಮಾಡಿದ್ದಾರೆ. ಮಂಗಳೂರು ಪೊಲೀಸರು ಮತ್ತೆ ಪ್ರತ್ಯೇಕ 4 ಪೋಕ್ಸೋ ಪ್ರಕರಣ ಸೇರಿದಂತೆ ಒಟ್ಟು ಐದು ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.

ಮಂಗಳೂರು: ಕಾಲೇಜು ವಿದ್ಯಾರ್ಥಿನಿಯರನ್ನು ಬಳಸಿ ಹೈಟೆಕ್ ಮಾಂಸದಂಧೆ| ಸಿಕ್ಕಿಬಿದ್ದ ಖದೀಮರಲ್ಲಿ ಮೂವರು ವೃದ್ಧರು!; ಆಘಾತಕಾರಿ ಮಾಹಿತಿ ಬಹಿರಂಗಗೊಳಿಸಿದ ಕಮಿಷನರ್| Read More »

ಕೊನೆಗೂ‌ ಕೂಡಿ ಬಂತು ಕಾಲ| ಅಂತರಾಷ್ಟ್ರೀಯ ವಿಮಾನ ಹಾರಾಟಕ್ಕೆ ಬರೋಬ್ಬರಿ ಎರಡು ವರ್ಷಗಳ ಬಳಿಕ ಅನುಮತಿ| ಮಾ.27ರಿಂದ ಸೇವೆಗಳು ಪುನರಾರಂಭ|

ಸಮಗ್ರ ನ್ಯೂಸ್: ಕೊರೋನಾ ಕಾರಣ ಕಳೆದೆರಡು ವರ್ಷದಿಂದ ಅಂತಾರಾಷ್ಟ್ರೀಯ ವಿಮಾನ ಸಂಚಾರ ಬಂದ್ ಆಗಿದ್ದು, ಇದೀಗ ಮತ್ತೆ ಸಂಚಾರವನ್ನು ಪುನರಾರಂಭಿಸಲು ಕೇಂದ್ರ ಸರ್ಕಾರ ಅನುಮತಿಸಿದೆ. ಕೋವಿಡ್ ವೈರಸ್ ಹಾವು ಏಣಿ ಆಟವಾಡುತ್ತಿದ್ದ ಕಾರಣ ಭಾರತ ವಿಮಾನಯಾನ ಸಚಿವಾಲಯ ನಿರ್ಬಂಧ ವಿಧಿಸುತ್ತಲೇ ಬಂದಿತ್ತು. ಮಾರ್ಚ್ 27 ರಿಂದ ವಾಣಿಜ್ಯ ಹಾಗೂ ಎಲ್ಲಾ ಅಂತಾರಾಷ್ಟ್ರೀಯ ವಿಮಾನ ಸೇವೆ ಆರಂಭಗೊಳ್ಳಲಿದೆ ಎಂದು ವಿಮಾನಯಾನ ಸಚಿವಾಲಯ ಪ್ರಕಟಣೆ ಹೊರಡಿಸಿದೆ. ಫೆಬ್ರವರಿ 28 ರಂದು ವಿಮಾನಯಾನ ಸಚಿವಾಲಯ ಕೊರೋನಾ ಕಾರಣ ವಿಧಿಸಿದ್ದ ನಿರ್ಬಂಧವನ್ನು ಮತ್ತೆ

ಕೊನೆಗೂ‌ ಕೂಡಿ ಬಂತು ಕಾಲ| ಅಂತರಾಷ್ಟ್ರೀಯ ವಿಮಾನ ಹಾರಾಟಕ್ಕೆ ಬರೋಬ್ಬರಿ ಎರಡು ವರ್ಷಗಳ ಬಳಿಕ ಅನುಮತಿ| ಮಾ.27ರಿಂದ ಸೇವೆಗಳು ಪುನರಾರಂಭ| Read More »