Editor

ನಾಳೆ(ಮಾ.04) ರಾಜ್ಯ ಬಜೆಟ್| ಸಿಎಂ ಬೊಮ್ಮಾಯಿಯಿಂದ ಚೊಚ್ಚಲ ಬಜೆಟ್ ಮಂಡನೆ|

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ ತಮ್ಮ ಚೊಚ್ಚಲ ಬಜೆಟ್ ಮಂಡಿಸಲಿದ್ದು, ಅವರು ತಮ್ಮ ಮೊದಲ ಬಜೆಟ್ ನಲ್ಲಿ ಹಲವು ಜನಪ್ರಿಯ ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ. ಮಾರ್ಚ್ 4ರಂದು ಮಧ್ಯಾಹ್ನ 12.30ಕ್ಕೆ 2022-23ರ ರಾಜ್ಯ ಬಜೆಟ್ ಅನ್ನು ವಿಧಾನಮಂಡಲದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮಂಡಿಸಲಿದ್ದಾರೆ. ಹಾಲಿನ ಪ್ರೋತ್ಸಾಹಧನ ಹೆಚ್ಚಳ, ಸ್ತ್ರೀಶಕ್ತಿ ಸಂಘಗಳ ಸಾಲ ಮನ್ನಾ, ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಸೇರಿದಂತೆ ಮಹತ್ವದ ಯೋಜನೆಗಳನ್ನು ಬಜೆಟ್ ನಲ್ಲಿ ಘೋಷಿಸುವ ನಿರೀಕ್ಷೆ ಇದೆ.

ನಾಳೆ(ಮಾ.04) ರಾಜ್ಯ ಬಜೆಟ್| ಸಿಎಂ ಬೊಮ್ಮಾಯಿಯಿಂದ ಚೊಚ್ಚಲ ಬಜೆಟ್ ಮಂಡನೆ| Read More »

2023ರಿಂದ ದೇಶದಲ್ಲಿ 5ಜಿ ಮೇನಿಯಾ| ಶೀಘ್ರದಲ್ಲೇ ತರಂಗಾಂತರ ಹಂಚಿಕೆ – ಪ್ರಧಾನಿ ಮೋದಿ

ಸಮಗ್ರ ನ್ಯೂಸ್: ಮುಂದಿನ ವರ್ಷದೊಳಗಾಗಿ ದೇಶದಲ್ಲಿ 5ಜಿ ಮೊಬೈಲ್‌ ಸೇವೆ ಆರಂಭಕ್ಕೆ ಅಗತ್ಯವಿರುವ ತರಂಗಾಂತರಗಳ ಹರಾಜನ್ನು ಇದೇ ವರ್ಷ ನಡೆಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದರು. ನವದೆಹಲಿಯಲ್ಲಿ ನಡೆದ ‘ತಂತ್ರಜ್ಞಾನ ಆಧಾರಿತ ಅಭಿವೃದ್ಧಿ’ ಎಂಬ ವಿಷಯ ಕುರಿತ ವೆಬಿನಾರ್‌ನಲ್ಲಿ ಅವರು ಮಾತನಾಡುತ್ತಾ ಈ ವಿಷಯ ತಿಳಿಸಿದ್ದಾರೆ. 5ಜಿ ತಂತ್ರಜ್ಞಾನದಿಂದ ಅಭಿವೃದ್ಧಿ ಹಾಗೂ ಉದ್ಯೋಗ ಸೃಷ್ಟಿಗೆ ಸಾಕಷ್ಟು ವೇಗ ಸಿಗಲಿದೆ. ವೈದ್ಯ ವಿಜ್ಞಾನದಲ್ಲಿಯೂ ತಂತ್ರಜ್ಞಾನ ಪ್ರಮುಖ ಪಾತ್ರ ವಹಿಸುತ್ತಿದ್ದು, ವೈದ್ಯಕೀಯ ಸಾಧನಗಳ ಉತ್ಪಾದನೆಗೂ ಗಮನ ಹರಿಸಬೇಕು’

2023ರಿಂದ ದೇಶದಲ್ಲಿ 5ಜಿ ಮೇನಿಯಾ| ಶೀಘ್ರದಲ್ಲೇ ತರಂಗಾಂತರ ಹಂಚಿಕೆ – ಪ್ರಧಾನಿ ಮೋದಿ Read More »

ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಬದಲಾವಣೆ| ಪರೀಕ್ಷೆ ದಿನಾಂಕ ಮುಂದೂಡಿದ ಪಿಯು ಬೋರ್ಡ್

ಸಮಗ್ರ ನ್ಯೂಸ್. ಕಾಂ : ದ್ವಿತೀಯ ಪಿಯುಸಿ ಪರೀಕ್ಷೆ ದಿನಾಂಕ ಬದಲಾವಣೆಯಾಗಿದೆ. ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತೊಂದು ಪರೀಕ್ಷಾ ದಿನಾಂಕದ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ ಮಾಡಿದೆ. ದ್ವಿತೀಯ ಪಿಯು ಹಾಗೂ ಜೆಇಇ ಪರೀಕ್ಷೆಯು ಒಟ್ಟಿಗೆ ಬಂದ ಕಾರಣ ಪರೀಕ್ಷೆ ದಿನಾಂಕ ಮುಂದೂಡಿಕೆ ಮಾಡಲಾಗಿದೆ. ಏಪ್ರಿಲ್ 22 ರಿಂದ ಮೇ 11ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ ಮಾಡಿದೆ. ಆಕ್ಷೇಪಣೆ ಸಲ್ಲಿಸಲು ಮಾರ್ಚ್ 5ರ ವರೆಗೆ ಅವಕಾಶ ನೀಡಿರೋದಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ

ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಬದಲಾವಣೆ| ಪರೀಕ್ಷೆ ದಿನಾಂಕ ಮುಂದೂಡಿದ ಪಿಯು ಬೋರ್ಡ್ Read More »

ಪಾಸ್ ಪೋರ್ಟ್ ಇಲ್ಲದೆ ಉಕ್ರೇನ್ ನಲ್ಲಿ ಸಂಕಷ್ಟಕ್ಕೊಳಗಾದ ಮಂಗಳೂರು ವಿದ್ಯಾರ್ಥಿನಿ!

ಸಮಗ್ರ ನ್ಯೂಸ್: ಯುದ್ಧಪೀಡಿತ ಉಕ್ರೇನ್ ನಲ್ಲಿ ಸಿಲುಕಿಕೊಂಡಿರುವ ಮಂಗಳೂರು ಮೂಲದ ವಿದ್ಯಾರ್ಥಿನಿ ಅನೈನಾ ಅನ್ನಾ ಪಾಸ್ ಪೋರ್ಟ್ ಇಲ್ಲದೆ ಸಂಕಷ್ಟಕ್ಕೊಳಗಾಗಿದ್ದಾರೆ. ಉಕ್ರೇನ್ ನಲ್ಲಿ ರಷ್ಯಾದ ದಾಳಿ ಮುಂದುವರಿದಿದ್ದು, ಯುದ್ಧಪೀಡಿತ ದೇಶದಲ್ಲಿ ಸಿಲುಕಿಕೊಂಡಿರುವ ಭಾರತೀಯರನ್ನು ಕರೆ ತರುವ ಪ್ರಯತ್ನ ನಿರಂತರವಾಗಿ ನಡೆಯುತ್ತಿದೆ. ಆದರೆ ಮಂಗಳೂರಿನ ದೇರೆಬೈಲು ಮೂಲದ ಅನೈನಾ ಅವರ ಪಾಸ್ ಪೋರ್ಟ್ ಏಜೆಂಟರ ಬಳಿ ಇದ್ದು, ಅವರಿಗೆ ಕರೆ ಮಾಡಿದರೆ ಅವರು ಇರುವಲ್ಲಿಗೆ ತೆರಳಿ ಪಾಸ್ ಪೋರ್ಟ್ ಪಡೆದುಕೊಳ್ಳುವಂತೆ ಹೇಳಿದ್ದಾರೆ. ಆದರೆ ಅವರಿರುವ ಸ್ಥಳದಲ್ಲಿ ದಾಳಿ ನಡೆಯುತ್ತಿರುವುದರಿಂದ

ಪಾಸ್ ಪೋರ್ಟ್ ಇಲ್ಲದೆ ಉಕ್ರೇನ್ ನಲ್ಲಿ ಸಂಕಷ್ಟಕ್ಕೊಳಗಾದ ಮಂಗಳೂರು ವಿದ್ಯಾರ್ಥಿನಿ! Read More »

ಮಂಗಳೂರು: ನಗರದಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ| ಮೂವರು ಪಿಂಪ್ ಗಳು ಅಂದರ್|

ಸಮಗ್ರ‌ ನ್ಯೂಸ್ : ನಗರದ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಬೆಂದೂರ್ ವೆಲ್ ನ ಅಪಾರ್ಟ್‌ಮೆಂಟ್ ವೊಂದರ ಫ್ಲಾಟ್’ನಲ್ಲಿ ಗ್ರಾಹಕರಿಗೆ ವೇಶ್ಯಾವಾಟಿಕೆ ದಂಧೆಗೆ ಯುವತಿಯರನ್ನು ಹಾಗೂ ಮಹಿಳೆಯರನ್ನು ಒದಗಿಸುತ್ತಿದ್ದ ಸ್ಥಳಕ್ಕೆ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ. ಬಂಧಿತ ಆರೋಪಿಗಳು ವಿಟ್ಲದ ಪರ್ತಿಪಾಡಿಯ ಕೆ.ಪಿ. ಹಮೀದ್(54), ನಂದನಪುರ ನಾಗಬ್ರಹ್ಮ ಕಟ್ಟೆಯ ಅನುಪಮ ಶೆಟ್ಟಿ(46), ವಾಸುಕಿ ನಗರ ಎಕ್ಕೂರಿನ ನಿಶ್ಮಿತ(23) ಎಂದು ತಿಳಿದು ಬಂದಿದೆ. ಮಂಗಳೂರು ನಗರದ ಪೂರ್ವ( ಕದ್ರಿ ) ಪೊಲೀಸ್ ಠಾಣಾ ವ್ಯಾಪ್ತಿಯ

ಮಂಗಳೂರು: ನಗರದಲ್ಲಿ ಹೈಟೆಕ್ ವೇಶ್ಯಾವಾಟಿಕೆ ದಂಧೆ| ಮೂವರು ಪಿಂಪ್ ಗಳು ಅಂದರ್| Read More »

ಉಡುಪಿ: ಸ್ಕೂಟರ್ ಗೆ ಬಸ್ಸ್ ಢಿಕ್ಕಿ ಹೊಡೆದು ತಂದೆ-ಮಗಳು ಸಾವು

ಸಮಗ್ರ ನ್ಯೂಸ್: ಕೇರಳ ಸಾರಿಗೆ ಸಂಸ್ಥೆ ಬಸ್ ಸ್ಕೂಟರ್ ಒಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಂದೆ ಮಗಳು ಸಾವನ್ನಪ್ಪಿರುವ ಘಟನೆ ಸಂತೆಕಟ್ಟೆ ಬಳಿ ನಡೆದಿದೆ. ಮೃತರನ್ನು ಗಣೇಶ್ ಪೈ (58) ಹಾಗೂ ಮಗಳು ಗಾಯತ್ರಿ ಪೈ ಎಂದು ಗುರುತಿಸಲಾಗಿದೆ. ಹುಬ್ಬಳ್ಳಿಯಿಂದ ಬಸ್ ನಲ್ಲಿ ಆಗಮಿಸಿದ್ದ ಮಗಳನ್ನು ಕರೆದುಕೊಂಡು ಹೋಗಲು ತನ್ನ ಸ್ಕೂಟರ್ ನಲ್ಲಿ ಬಸ್ ನಿಲ್ದಾಣಕ್ಕೆ ತಂದೆ ಬಂದಿದ್ದರು. ಮಗಳ ಜೊತೆ ಸ್ಕೂಟರ್‌ನಲ್ಲಿ ಸಂತೆಕಟ್ಟೆ‌ ಜಂಕ್ಷನ್ ನಲ್ಲಿ ರಸ್ತೆ ದಾಟುತ್ತಿದ್ದಾಗ ಉಡುಪಿಯಿಂದ ಕೊಲ್ಲೂರು ಕಡೆ ತೆರಳುತ್ತಿದ್ದ ಕೇರಳ

ಉಡುಪಿ: ಸ್ಕೂಟರ್ ಗೆ ಬಸ್ಸ್ ಢಿಕ್ಕಿ ಹೊಡೆದು ತಂದೆ-ಮಗಳು ಸಾವು Read More »

ಸುಳ್ಯ: ಕಟ್ಟಿಂಗ್ ಮೆಷಿನ್ ತಾಗಿ ಕಾರ್ಮಿಕ ಸಾವು

ಸಮಗ್ರ ನ್ಯೂಸ್: ಕಟ್ಟಡ ಕಾಮಗಾರಿ ನಡೆಸುತ್ತಿದ್ದ ವೇಳೆ ಕಬ್ಬಿಣ ತುಂಡರಿಸುವು ಮೆಷಿನ್ ತಾಗಿ ಗಂಭೀರ ಗಾಯಗೊಂಡು ಕಾರ್ಮಿಕನೋರ್ವ ಮೃತಪಟ್ಟ ಘಟನೆ ತಾಲೂಕಿನ ಐವರ್ನಾಡಿನಿಂದ ವರದಿಯಾಗಿದೆ. ಐವರ್ನಾಡು ನಾಟಿಕೇರಿ ನಿವಾಸಿ ದಯಾನಂದ (36) ಮೃತಪಟ್ಟ ದುರ್ದೈವಿ. ಕಬ್ಬಿಣ ಕಟ್ಟ್ ಮಾಡುವ ವೇಳೆ ಮೆಷಿನ್ ತೊಡೆಯ ಭಾಗಕ್ಕೆ ತಾಗಿ ಗಂಭೀರ ಗಾಯಗೊಂಡ ಅವರನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ರಕ್ತಸ್ರಾವದಿಂದ ಮೃತಪಟ್ಟರೆಂದು ತಿಳಿದುಬಂದಿದೆ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಸುಳ್ಯ: ಕಟ್ಟಿಂಗ್ ಮೆಷಿನ್ ತಾಗಿ ಕಾರ್ಮಿಕ ಸಾವು Read More »

ಉಡುಪಿ: ಪವರ್ ಮ್ಯಾನ್ ಗಳಿಗೆ ಜೀವವಿಮೆ‌ ಮೌಲ್ಯ ಹೆಚ್ಚಳ – ಸಚಿವ ಸುನಿಲ್ ಕುಮಾರ್

ಸಮಗ್ರ ನ್ಯೂಸ್: ರಾಜ್ಯದ ಪವರ್ ಮನ್ ಗಳ ಜೀವವಿಮೆ ಪರಿಹಾರ ಮೊತ್ತವನ್ನು 25 ಲಕ್ಷ ರೂ.ನಿಂದ 50 ಲಕ್ಷ ರೂ.ಗೆ ಹೆಚ್ಚಿಸಲಾಗುವುದು ಎಂದು ಇಂಧನ ಸಚಿವ ವಿ.ಸುನೀಲ್ ಕುಮಾರ್ ಹೇಳಿದ್ದಾರೆ. ರಾಜ್ಯದಲ್ಲಿ ಪವರ್ ಮ್ಯಾನ್ ಗಳು ವಿದ್ಯುತ್ ಅಪಘಾತದಲ್ಲಿ ಮೃತಪಟ್ಟರೆ 25 ಲಕ್ಷ ರೂ. ಪರಿಹಾರ ನೀಡಲಾಗುತ್ತಿದೆ. ಈ ಜೀವ ಪರಿಹಾರ ಮೊತ್ತವನ್ನು 50 ಲಕ್ಷ ರೂ.ಗೆ ಹೆಚ್ಚಿಸಲಾಗುವುದು. ಗುಜರಾತ್ ಮಾದರಿಯಲ್ಲಿ ರಾಜ್ಯದ ಎಲ್ಲ ವಿದ್ಯುತ್ ಕಂಪನಿಗಳನ್ನು ಒಳಗೊಂಡ ಹೋಲ್ಡಿಂಗ್ ಕಂಪನಿ ನಿರ್ಮಾಣ ಪ್ರಸ್ತಾವನೆ ಇದೆ. ಇಲಾಖೆಯ

ಉಡುಪಿ: ಪವರ್ ಮ್ಯಾನ್ ಗಳಿಗೆ ಜೀವವಿಮೆ‌ ಮೌಲ್ಯ ಹೆಚ್ಚಳ – ಸಚಿವ ಸುನಿಲ್ ಕುಮಾರ್ Read More »

ರಷ್ಯಾ- ಉಕ್ರೇನ್ ಮಹಾಯುದ್ಧ| 13 ಮಕ್ಕಳು ಸೇರಿದಂತೆ 136 ಮಂದಿಯ ಪ್ರಾಣ ಹರಣ|

ಸಮಗ್ರ ನ್ಯೂಸ್ : ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧ ಏಳನೇ ದಿನಕ್ಕೆ ಕಾಲಿಟ್ಟಿದ್ದು, ರಷ್ಯಾ ದಾಳಿಗೆ ಉಕ್ರೇನ್ ಕೂಡ ನಿರಂತರವಾಗಿ ತಕ್ಕ ಉತ್ತರ ನೀಡುತ್ತಿದೆ. ರಷ್ಯಾ ದಾಳಿಯಲ್ಲಿ 13 ಮಕ್ಕಳು ಸೇರಿದಂತೆ ಕನಿಷ್ಠ 136 ಜನರು ಸತ್ತಿದ್ದಾರೆ ಎಂದು ವಿಶ್ವಸಂಸ್ಥೆ ಹೇಳಿಕೊಂಡಿದೆ, ಫೆಬ್ರವರಿ 24 ರ ಗುರುವಾರ ದಿಂದ ಮಾರ್ಚ್ 1 ರವರೆಗೆ ದಾಳಿಗೆ ಉಕ್ರೇನ್ ನಲ್ಲಿ 13 ಮಕ್ಕಳು ಸೇರಿದಂತೆ ಕನಿಷ್ಠ 136 ಜನರು ಕೊಲ್ಲಲ್ಪಟ್ಟಿದ್ದಾರೆ ಎಂದು ವಿಶ್ವಸಂಸ್ಥೆ ಹೇಳಿದೆ ಈ ಹಿಂದೆ,

ರಷ್ಯಾ- ಉಕ್ರೇನ್ ಮಹಾಯುದ್ಧ| 13 ಮಕ್ಕಳು ಸೇರಿದಂತೆ 136 ಮಂದಿಯ ಪ್ರಾಣ ಹರಣ| Read More »

ಸುಳ್ಯ: ಆ್ಯಸಿಡ್ ಸೇವಿಸಿ‌ ಯುವಕ ಆತ್ಮಹತ್ಯೆ

ಸಮಗ್ರ ನ್ಯೂಸ್: ರಬ್ಬರ್ ಗೆ ಬಳಸುವ ಆ್ಯಸಿಡ್ ಸೇವಿಸಿ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ದ.ಕ ಜಿಲ್ಲೆಯ ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರೆಂಜಾಳ‌ ಎಂಬಲ್ಲಿಯ ಜಗದೀಶ್ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಈತ ರಬ್ಬರ್ ಗೆ ಬಳಸುವ ಆ್ಯಸಿಡ್ ಕುಡಿದಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತರಾಗಿದ್ದಾರೆ ಎಂದು ತಿಳಿದು ಬಂದಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ

ಸುಳ್ಯ: ಆ್ಯಸಿಡ್ ಸೇವಿಸಿ‌ ಯುವಕ ಆತ್ಮಹತ್ಯೆ Read More »