Editor

ಬಂಟ್ವಾಳ: ಸಭೆಯಲ್ಲಿ ಪ್ರಶ್ನೆ ಕೇಳಿದ್ದಕ್ಕೆ ಸದಸ್ಯನಿಗೆ ಹಲ್ಲೆ ನಡೆಸಿ ಚೂರಿ ಇರಿಯಲು ಯತ್ನಿಸಿದ ಗ್ರಾ.ಪಂ ಅಧ್ಯಕ್ಷ

ಸಮಗ್ರ ನ್ಯೂಸ್: ಗ್ರಾಮ ಪಂಚಾಯತ್‌ನ ಸಾಮಾನ್ಯ ಸಭೆಯಲ್ಲಿ ಪ್ರಶ್ನೆ ಕೇಳಿದ್ದಕ್ಕೆ ಗ್ರಾ.ಪಂ. ಸದಸ್ಯನ ಮೇಲೆ ಅಧ್ಯಕ್ಷನಿಂದ ಹಲ್ಲೆ ನಡೆಸಿದ್ದಲ್ಲದೆ ಚೂರಿ ಇರಿಯಲು ಯತ್ನಿಸಿದ ಘಟನೆ ಗ್ರಾ.ಪಂ. ಸಭಾಂಗಣದೊಳಗೆ ನಡೆದಿದೆ. ಗಾಯಗೊಂಡ ಸದಸ್ಯ ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಾಗಿದ್ದು, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಾವೂರ ಗ್ರಾ.ಪಂ.ಸದಸ್ಯ ಜನಾರ್ಧನ ಎಂಬವರ ಮೇಲೆ ಇಲ್ಲಿನ ಗ್ರಾ.ಪಂ.ಅಧ್ಯಕ್ಷ ಉಮೇಶ್ ಕುಲಾಲ್ ಅವರು ಹಲ್ಲೆ ನಡೆಸಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಗ್ರಾ.ಪಂ.ನಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಸದಸ್ಯ ಕಾಮಗಾರಿ ವಿಚಾರಕ್ಕೆ ಸಂಬಂಧಿಸಿದಂತೆ

ಬಂಟ್ವಾಳ: ಸಭೆಯಲ್ಲಿ ಪ್ರಶ್ನೆ ಕೇಳಿದ್ದಕ್ಕೆ ಸದಸ್ಯನಿಗೆ ಹಲ್ಲೆ ನಡೆಸಿ ಚೂರಿ ಇರಿಯಲು ಯತ್ನಿಸಿದ ಗ್ರಾ.ಪಂ ಅಧ್ಯಕ್ಷ Read More »

ಭಾರತೀಯ ವಿದ್ಯಾರ್ಥಿಗಳಿಗೆ ಥಳಿಸಿದ ಉಕ್ರೇನ್ ಭದ್ರತಾ ಪಡೆ

ಸಮಗ್ರ ನ್ಯೂಸ್: ಯುದ್ಧಪೀಡಿತ ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯ ವಿದ್ಯಾರ್ಥಿಗಳು ಭಾನುವಾರ ಪೋಲೆಂಡ್‌ ಗಡಿಯತ್ತ ತೆರಳುತ್ತಿದ್ದಾಗ ಉಕ್ರೇನ್‌ ಭದ್ರತಾ ಪಡೆಗಳು ದೇಶ ತೊರೆಯದಂತೆ ತಡೆದು, ಥಳಿಸಿರುವ ಘಟನೆಗಳು ವರದಿಯಾಗಿವೆ. ಉಕ್ರೇನ್-ಪೋಲೆಂಡ್ ಗಡಿಯಲ್ಲಿರುವ ಶೆಹಿನಿಯಲ್ಲಿ ಹಲವಾರು ಭಾರತೀಯ ವಿದ್ಯಾರ್ಥಿಗಳು ಅದರಲ್ಲೂ ಹೆಚ್ಚಿನ ಸಂಖ್ಯೆಯಲ್ಲಿದ್ದ ಮಲಯಾಳಿ ವಿದ್ಯಾರ್ಥಿಗಳನ್ನು ಅಲ್ಲಿನ ಭದ್ರತಾ ಪಡೆ ಸಿಬ್ಬಂದಿ ಮತ್ತು ಪೊಲೀಸರು ತಡೆದು, ಥಳಿಸಿದ್ದಾರೆ. ಪೋಲೆಂಡ್‌ಗೆ ಹೋಗಲು ಪ್ರಯತ್ನಿಸುತ್ತಿರುವ ವಿದ್ಯಾರ್ಥಿಗಳ ಕಡೆಗೆ ಉಕ್ರೇನ್ ಸೈನಿಕರು ಮತ್ತು ಪೊಲೀಸರು ತಮ್ಮ ವಾಹನಗಳನ್ನು ನುಗ್ಗಿಸಿ, ವಿದ್ಯಾರ್ಥಿಗಳನ್ನು ಅಡ್ಡಗಟ್ಟಿ ಹಿಡಿದು ಥಳಿಸಿದ್ದಾರೆ.

ಭಾರತೀಯ ವಿದ್ಯಾರ್ಥಿಗಳಿಗೆ ಥಳಿಸಿದ ಉಕ್ರೇನ್ ಭದ್ರತಾ ಪಡೆ Read More »

ಆಂಟಿ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡ 17ರ ಬಾಲಕ| ವಿಷಯ ತಿಳಿದ ಸಂಬಂಧಿಕರಿಂದ ಶಿಶ್ನಕ್ಕೇ ಕತ್ತರಿ!!

ಸಮಗ್ರ ನ್ಯೂಸ್ : ಅಕ್ರಮ ಸಂಬಂಧ ಇರಿಸಿಕೊಂಡಿದ್ದ ಎನ್ನುವ ಕಾರಣಕ್ಕೆ 17 ವರ್ಷದ ಬಾಲಕನನ್ನು ಆಕೆಯ ಮನೆಯವರು ಮನಬಂದಂತೆ ಥಳಿಸಿ, ಶಿಶ್ನ ಕತ್ತರಿಸಿ ಕೊಂದು ಹಾಕಿರುವ ಭೀಕರ ಘಟನೆ ಬಿಹಾರದ ಮುಜಾಫರ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಘಟನೆಯಿಂದ ಸಂತ್ರಸ್ತ ಬಾಲಕನ ಕುಟುಂಬ ಸದಸ್ಯರು ಆರೋಪಿಗಳ ಮನೆಯ ಮುಂದೆ ಶವ ಸಂಸ್ಕಾರ ಮಾಡಿ ಪ್ರತಿಭಟನೆ ಮಾಡಿದ್ದಾರೆ. ಕಾಂತಿ ಪೊಲೀಸ್‌ ಠಾಣಾ ವ್ಯಾಪ್ತಿಯ ರೆಪುರಾ ರಾಮ್‌ಪುರ್‌ಶಾ ಗ್ರಾಮದಲ್ಲಿ ರಾತ್ರಿ ಈ ಘಟನೆ ನಡೆದಿದೆ. ಅದೇ ಗ್ರಾಮದ ಬಾಲಕ ಸೌರಭ್‌ ಕುಮಾರ್‌ ಆ

ಆಂಟಿ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡ 17ರ ಬಾಲಕ| ವಿಷಯ ತಿಳಿದ ಸಂಬಂಧಿಕರಿಂದ ಶಿಶ್ನಕ್ಕೇ ಕತ್ತರಿ!! Read More »

ಉಕ್ರೇನ್‍ಗೆ 65 ಕೋಟಿ ದೇಣಿಗೆ ನೀಡಿದ ಜಪಾನ್ ಉದ್ಯಮಿ!

ಸಮಗ್ರ ನ್ಯೂಸ್: 5ನೇ ದಿನವೂ ಸತತವಾಗಿ ರಷ್ಯಾ ಸೈನಿಕರು ಉಕ್ರೇನ್ ಮೇಲೆ ದಾಳಿ ಮುಂದುವರಿಸಿದ್ದಾರೆ. ಸಂಕಷ್ಟದಲ್ಲಿ ಸಿಲುಕಿರವ ಉಕ್ರೇನ್‍ಗೆ (ukraine) ಜಪಾನ್ ಉದ್ಯಮಿ 65 ಕೋಟಿ ಕೊಡುವುದಾಗಿ ಘೋಷಿಸಿದ್ದಾರೆ. ಹಿಂಸಾಚಾರಕ್ಕೆ ಬಲಿಯಾದ ಉಕ್ರೇನ್ ಜನರಿಗೆ ಸಹಾಯ ಮಾಡಲು 1 ಬಿಲಿಯನ್ (8.7 ಮಿಲಿಯನ್ ಅಮೇರಿಕನ್ ಡಾಲರ್) ಹಣವನ್ನು ದೇಣಿಗೆ ನೀಡಿ, ಉಕ್ರೇನ್ ಅಧ್ಯಕ್ಷ ವ್ಲಾಡಿಮಿರ್ ಝೆಲನ್‍ಸ್ಕಿ (Volodymyr Zelenskyy) ಅವರಿಗೆ ಉದ್ಯಮಿ ಹಿರೋಚಿ ಮಿಕಿತಾನಿ (hiroshi Mikitani) ಅವರು ಪತ್ರ ಬರೆದಿದ್ದಾರೆ. ಮಿಕಿತಾನಿ ಅವರು 2019ರಲ್ಲಿ ಕೈವ್‍ಗೆ

ಉಕ್ರೇನ್‍ಗೆ 65 ಕೋಟಿ ದೇಣಿಗೆ ನೀಡಿದ ಜಪಾನ್ ಉದ್ಯಮಿ! Read More »

ಕೋಮು ಸೌಹಾರ್ಧಕ್ಕೆ ಧಕ್ಕೆ| ಚೈತ್ರಾ ಕುಂದಾಪುರ, ಮುತಾಲಿಕ್ ಗೆ ಕಲಬುರಗಿಗೆ ಪ್ರವೇಶ ನಿಷೇಧ|

ಸಮಗ್ರ ನ್ಯೂಸ್: ಜಿಲ್ಲೆಯಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಫೆ.27 ರಿಂದ ಮಾ.3ರ ವರೆಗೆ ಶ್ರೀರಾಮ ಸೇನೆಯ ರಾಜ್ಯಾಧ್ಯಕ್ಷ ಪ್ರಮೋದ ಮುತಾಲಿಕ್, ಚೈತ್ರಾ ಕುಂದಾಪುರ ಅವರನ್ನು ಕಲಬುರಗಿ ಜಿಲ್ಲೆ ಪ್ರವೇಶಿಸದಂತೆ ಸಿ.ಆರ್.ಪಿ.ಸಿ ಕಾಯ್ದೆ-1973ರ ಕಲಂ-132, 143, 144 ಹಾಗೂ 144ಎ ರನ್ವಯ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರು ಆದೇಶ ಹೊರಡಿಸಿದ್ದಾರೆ. ಜೇವರ್ಗಿ ತಾಲೂಕಿನ ಆಂದೋಲದ ಕರುಣೇಶ್ವರ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ ಅವರನ್ನು ಸಹ ಫೆ. 27 ರಿಂದ ಮಾ.3ರ

ಕೋಮು ಸೌಹಾರ್ಧಕ್ಕೆ ಧಕ್ಕೆ| ಚೈತ್ರಾ ಕುಂದಾಪುರ, ಮುತಾಲಿಕ್ ಗೆ ಕಲಬುರಗಿಗೆ ಪ್ರವೇಶ ನಿಷೇಧ| Read More »

ರಷ್ಯಾ- ಉಕ್ರೇನ್ ಬಿಕ್ಕಟ್ಟು| ಸಂಧಾನಕ್ಕೆ ಒಪ್ಪಿದ ಉಕ್ರೇನ್

ಸಮಗ್ರ ನ್ಯೂಸ್: ಬೈಲೋರಷ್ಯಾದಲ್ಲಿ ಸಂಧಾನ ಮಾತುಕತೆಗೆ ಉಕ್ರೇನ್ ಕೊನೆಗೂ ಒಪ್ಪಿಗೆ ನೀಡಿದೆ. ಈ ಮೂಲಕ ಎರಡು ದೇಶಗಳ ನಡುವಣ ಯುದ್ಧ ಅಂತ್ಯಗೊಳ್ಳುವ ಸಾಧ್ಯತೆ ಕಂಡು ಬರುತ್ತಿದೆ. ಬೈಲೋರಷ್ಯಾದಲ್ಲಿ ನಾಳೆ ಸಂಜೆಯೊಳಗೆ ಸಂಧಾನ ಮಾತುಕತೆಗೆ ಬಾರದೇ ಇದ್ದಲ್ಲಿ ಪರಮಾಣು ಬಳಸುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ರಷ್ಯಾ ಎಚ್ಚರಿಕೆ ನೀಡಿದ ಬೆನ್ನಲ್ಲೇ ಉಕ್ರೇನ್ ಮಾತುಕತೆಗೆ ಒಪ್ಪಿಗೆ ಸೂಚಿಸಿದೆ. ಇದಕ್ಕೂ ಮುನ್ನ ಉಕ್ರೇನ್ ಮೇಲೆ ದಾಳಿ ಮಾಡಲು ಬೈಲೋರಷ್ಯಾವನ್ನು ರಷ್ಯಾ ಬಳಸಿಕೊಳ್ಳುತ್ತಿದೆ. ಆದ್ದರಿಂದ ಇಲ್ಲಿ ಮಾತುಕತೆಗೆ ಬರುವುದಿಲ್ಲ. ಬೇರೆ ಜಾಗ

ರಷ್ಯಾ- ಉಕ್ರೇನ್ ಬಿಕ್ಕಟ್ಟು| ಸಂಧಾನಕ್ಕೆ ಒಪ್ಪಿದ ಉಕ್ರೇನ್ Read More »

ಕುಡಿದು ವಾಹನ ಚಲಾಯಿಸಿ ಅಪಘಾತ| ಕ್ರಿಕೆಟಿಗ ವಿನೋದ್ ಕಾಂಬ್ಳಿ ಬಂಧನ|

ಸಮಗ್ರ ನ್ಯೂಸ್: ಟೀಮ್ ಇಂಡಿಯಾದ ಮಾಜಿ ಆಟಗಾರ ವಿನೋದ್ ಕಾಂಬ್ಳಿ ಮದ್ಯ ಸೇವಿಸಿ ವಾಹನ ಚಲಾಯಿಸಿ ಅಪಘಾತವೆಸಗಿದ ಪ್ರಕರಣದಲ್ಲಿ ಮುಂಬೈ ಪೊಲೀಸರಿಂದ ಭಾನುವಾರ ಬಂಧನಕ್ಕೊಳಗಾಗಿದ್ದಾರೆ. ತಮ್ಮ ಕಾರಿನಿಂದ ಮತ್ತೊಂದು ಕಾರಿಗೆ ಢಿಕ್ಕಿ ಹೊಡೆದ ಅಪಘಾತ ಪ್ರಕರಣದ ವಿಚಾರಣೆ ವೇಳೆ ಕಾಂಬ್ಳಿ ಪಾನಮತ್ತರಾಗಿರುವುದು ಬೆಳಕಿಗೆ ಬಂದಿದೆ. ಕುಡಿದು ವಾಹನ ಚಲಾಯಿಸಿದ್ದಕ್ಕೆ ಸಂಬಂಧಿಸಿದ ಐಪಿಸಿ ಸೆಕ್ಷನ್ 185 ಅಡಿಯಲ್ಲಿ (ಮೋಟಾರು ಕಾಯ್ದೆ) ಕಾಂಬ್ಳಿ ವಿರುದ್ಧ ಪ್ರಕರಣ ದಾಖಲಾಗಿದೆ. ವಿಚಾರಣೆಯ ಬಳಿಕ ಕಾಂಬ್ಳಿ ಅವರನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಯಿತು. ಕಾರಿಗೆ ಢಿಕ್ಕಿ

ಕುಡಿದು ವಾಹನ ಚಲಾಯಿಸಿ ಅಪಘಾತ| ಕ್ರಿಕೆಟಿಗ ವಿನೋದ್ ಕಾಂಬ್ಳಿ ಬಂಧನ| Read More »

ಉಪ್ಪಿನಂಗಡಿ: ದ್ವಿಚಕ್ರ ವಾಹನಗಳ ನಡುವೆ ಅಪಘಾತ; ಓರ್ವ ಸಾವು

ಸಮಗ್ರ ನ್ಯೂಸ್: ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ ಸಂಭವಿಸಿ ಸಹ ಸವಾರ ಸ್ಥಳದಲ್ಲೇ ಮೃತಪಟ್ಟು, ಇನ್ನೊರ್ವ ಗಂಭೀರವಾಗಿ ಗಾಯಗೊಂಡ ಘಟನೆ ಉಪ್ಪಿನಂಗಡಿ ಸಮೀಪದ ನೆಕ್ಕಿಲಾಡಿ ಎಂಬಲ್ಲಿ ನಡೆದಿದೆ. ಉಪ್ಪಿನಂಗಡಿ ರಾಷ್ಟ್ರೀಯ ಹೆದ್ದಾರಿ ನೆಕ್ಕಿಲಾಡಿ ಎಂಬಲ್ಲಿ ಈ ದುರ್ಘಟನೆ ನಡೆದಿದ್ದು, ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನು ಬೆದ್ರೊಡಿ ನಿವಾಸಿ ನವಾಝ್ (34) ಎಂದು ತಿಳಿದು ಬಂದಿದೆ. ಇನ್ನೊರ್ವ ರಶೀದ್ ಎಂಬವರು ಗಾಯಗೊಂಡಿದ್ದು ಪುತ್ತೂರು ಖಾಸಗಿ ಆಸ್ಪತ್ರೆಯಲ್ಸಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಲಸ ಬಿಟ್ಟು ಬರುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ

ಉಪ್ಪಿನಂಗಡಿ: ದ್ವಿಚಕ್ರ ವಾಹನಗಳ ನಡುವೆ ಅಪಘಾತ; ಓರ್ವ ಸಾವು Read More »

ನಾಳೆ ಸಿಎಂ ಬೊಮ್ಮಾಯಿ ಮಂಗಳೂರು ಭೇಟಿ

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇದೇ ಫೆ.28ರ ಸೋಮವಾರ ಮಂಗಳೂರಿಗೆ ಪ್ರವಾಸ ಕೈಗೊಂಡಿದ್ದಾರೆ. ಫೆ.28ರ ಸೋಮವಾರ ಮಧ್ಯಾಹ್ನ 3 ಗಂಟೆಗೆ ಹುಬ್ಬಳ್ಳಿಯಿಂದ ವಿಶೇಷ ವಿಮಾನದ ಮೂಲಕ ಹೊರಟು 3.45ಕ್ಕೆ ಮಂಗಳೂರಿನ ಬಜಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸುವರು. ಸಂಜೆ 4.30ಕ್ಕೆ ನಗರದ ಕುಲಶೇಖರದ ಕಾರ್ಡೆಲ್ ಹಾಲ್‍ನಲ್ಲಿ ರಾಷ್ಟ್ರೀಯ ಹೆದ್ದಾರಿಗಳ ಮಂತ್ರಾಲಯ, ಭಾರತೀಯ ಹೆದ್ದಾರಿಗಳ ಪ್ರಾಧಿಕಾರ ಹಾಗೂ ಲೋಕೋಪಯೋಗಿ ಇಲಾಖೆಯ ಸಹಯೋಗದಲ್ಲಿ ಆಯೋಜಿರುವ 15 ರಾಷ್ಟ್ರೀಯ ಹೆದ್ದಾರಿ ಯೋಜನೆಗಳ ಶಂಕುಸ್ಥಾಪನೆ ಮತ್ತು ರಾಷ್ಟ್ರಕ್ಕೆ ಲೋಕಾರ್ಪಣೆ ಸಮಾರಂಭದಲ್ಲಿ

ನಾಳೆ ಸಿಎಂ ಬೊಮ್ಮಾಯಿ ಮಂಗಳೂರು ಭೇಟಿ Read More »

ವಿವಿಧ ಬೇಡಿಕೆಗಳಿಗೆ ಒತ್ತಾಯ| ಮಾರ್ಚ್ 4ರಂದು ರಾಜ್ಯಾದ್ಯಂತ ಅನುದಾನಿತ ಶಾಲಾ-ಕಾಲೇಜುಗಳು ಬಂದ್

ಸಮಗ್ರ ನ್ಯೂಸ್: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಇದೀಗ ರಾಜ್ಯ ಅನುದಾನಿತ ಶಾಲಾ- ಕಾಲೇಜುಗಳ ನೌಕರರ ಸಂಘ ಬೃಹತ್ ಪ್ರತಿಭಟನೆಗೆ ಸಜ್ಜಾಗಿದ್ದಾರೆ. ಮಾರ್ಚ್ 4ರಂದು ರಾಜ್ಯಾದ್ಯಂತ ಶಾಲಾ-ಕಾಲೇಜುಗಳನ್ನ ಬಂದ್ ಮಾಡಿ, ಮೆಜೆಸ್ಟಿಕ್​​ನಿಂದ ವಿಧಾನಸೌಧದ ತನಕ ಬೃಹತ್ ರ್ಯಾಲಿ ನಡೆಸಲಿದ್ದಾರೆ. ಅನಿರ್ದಿಷ್ಟ ಅಹೋರಾತ್ರಿ ಧರಣಿಗೂ ಸಿದ್ದವಾಗಿರುವುದಾಗಿ ರಾಜ್ಯ ಅನುದಾನಿತ ಶಾಲಾ ಕಾಲೇಜುಗಳ ನೌಕರರ ಸಂಘದ ರಾಜ್ಯಾಧ್ಯಕ್ಷ ಗೋಪಿನಾಥ್ ತಿಳಿಸಿದ್ದಾರೆ. ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಅವರು, ಕಳೆದ 2014ರಿಂದಲ್ಲೂ ಅನೇಕ ಮನವಿಯನ್ನ ಸಲ್ಲಿಸಿದ್ದರೂ, ಹೋರಾಟಗಳನ್ನ ನಡೆಸಿದ್ದರೂ ಸರ್ಕಾರ ನಿರ್ಲಕ್ಷ್ಯವಹಿಸುತ್ತಿದೆ ಎಂದು

ವಿವಿಧ ಬೇಡಿಕೆಗಳಿಗೆ ಒತ್ತಾಯ| ಮಾರ್ಚ್ 4ರಂದು ರಾಜ್ಯಾದ್ಯಂತ ಅನುದಾನಿತ ಶಾಲಾ-ಕಾಲೇಜುಗಳು ಬಂದ್ Read More »