Editor

ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ‌ ಕಾಂಗ್ರೆಸ್ ನಿಂದ ಸದನದಲ್ಲಿ ಅಹೋರಾತ್ರಿ ಧರಣಿ

ಸಮಗ್ರ ನ್ಯೂಸ್ ಡೆಸ್ಕ್: ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ ಸಚಿವ ಕೆ.ಎಸ್. ಈಶ್ವರಪ್ಪ ರಾಜೀನಾಮೆ ನೀಡಬೇಕು. ಸಂಪುಟದಿಂದ ಅವರನ್ನು ವಜಾಗೊಳಿಸಬೇಕೆಂದು ಒತ್ತಾಯಿಸಿ ಕಾಂಗ್ರೆಸ್ ಸದಸ್ಯರು ಎರಡೂ ಸದನದಲ್ಲಿ ಅಹೋರಾತ್ರಿ ಹೋರಾಟ ನಡೆಸಿದ್ದಾರೆ. ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಗೃಹಸಚಿವ ಆರಗ ಜ್ಞಾನೇಂದ್ರ, ಹಿರಿಯ ನಾಯಕರು ಮನವೊಲಿಸಲು ಮುಂದಾದರೂ ಪಟ್ಟು ಸಡಿಲಿಸದ ಕಾಂಗ್ರೆಸ್ ಸದಸ್ಯರು ರಾತ್ರಿ ಧರಣಿ ನಡೆಸಿದ್ದಾರೆ. ರಾಷ್ಟ್ರಧ್ವಜದ ಕುರಿತಾಗಿ ಸಚಿವ ಈಶ್ವರಪ್ಪ ನೀಡಿದ ಹೇಳಿಕೆ ಉಭಯ

ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ‌ ಕಾಂಗ್ರೆಸ್ ನಿಂದ ಸದನದಲ್ಲಿ ಅಹೋರಾತ್ರಿ ಧರಣಿ Read More »

ದುಬೈ: ಫೆಬ್ರವರಿ 19ರಂದು ವಿಜಯ್ ಪ್ರಕಾಶ್ ಸಂಗೀತ ಸಂಜೆ ‘ನೀನೇ ರಾಜಕುಮಾರ’!

ಕರ್ನಾಟಕ ರತ್ನ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಹಾಗೂ ಸ್ವರ ಮಾಂತ್ರಿಕ ಎಸ್. ಪಿ. ಬಾಲಸುಬ್ರಹ್ಮಣ್ಯಂ ರವರ ಸ್ಮರಣಾರ್ಥ ವಿಜಯ್ ಪ್ರಕಾಶ್ ಸಂಗೀತ ಸಂಜೆ ಕಾರ್ಯಕ್ರಮ ‘ನೀನೇ ರಾಜಕುಮಾರ’ ದುಬೈನಲ್ಲಿ 2022 ಫೆಬ್ರವರಿ 19 ರಂದು ಸಂಜೆ 6 ಗಂಟೆಗೆ ಸರಿಯಾಗಿ ಅಲ್ ನಸರ್ ಲೀಸರ್ ಲ್ಯಾಂಡ್ ನಲ್ಲಿ ನಡೆಯಲಿದ್ದು. ಪೂರ್ವ ಸಿದ್ಧತೆಗಳು ಭರದಿಂದ ಸಾಗಿದೆ. ಕೋವಿಡ್ ಸಂಕಷ್ಟಗಳ ನಂತರ ನಡೆಯುತ್ತಿರುವ ಪ್ರಥಮ ಕನ್ನಡ ಸಂಗೀತ ಕಾರ್ಯಕ್ರಮದಲ್ಲಿ ಪ್ರಸಿದ್ಧ ಹಿನ್ನೆಲೆ ಗಾಯಕ ವಿಜಯ್ ಪ್ರಕಾಶ್ ಮತ್ತು ಅನುರಾಧ

ದುಬೈ: ಫೆಬ್ರವರಿ 19ರಂದು ವಿಜಯ್ ಪ್ರಕಾಶ್ ಸಂಗೀತ ಸಂಜೆ ‘ನೀನೇ ರಾಜಕುಮಾರ’! Read More »

ಮದುವೆ ಸಮಾರಂಭದಂದು ಬಾವಿಗೆ ಬಿದ್ದು 9 ಮಕ್ಕಳು ಸೇರಿದಂತೆ 13 ಮಂದಿ ಸಾವು

ಖುಷಿನಗರ: ವಿವಾಹದ ಸಂದರ್ಭದಲ್ಲಿ ನಡೆಸುವ ಗಂಗಾ ಪೂಜೆ ವೇಳೆ ಹಳೆಯ ಬಾವಿಗೆ ಬಿದ್ದ ಮಕ್ಕಳು ಮತ್ತು ಮಹಿಳೆಯರು ಸೇರಿದಂತೆ 13 ಮಂದಿ ಸಾವನಪ್ಪಿರುವ ಘಟನೆ ಉತ್ತರ ಪ್ರದೇಶದ ನೆಬುವಾ ನೌರಂಗಿಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬುಧವಾರ ನಡೆದಿದೆ. ವಿವಾಹದ ಸಂದರ್ಭದಲ್ಲಿ ಗಂಗೆ ಪೂಜೆ ಮಾಡುವುದು ಕುಟುಂಬದ ಸಂಪ್ರದಾಯವಾಗಿದ್ದು, ಗಂಗೆ ಪೂಜೆಗೆಂದು ಬಾವಿ ಬಳಿ ನೂರಾರು ಜನರು ಸೇರಿದ್ದಾರೆ. ಕೆಲವ ಮಹಿಳೆಯರು ಹಾಗೂ ಮಕ್ಕಳು ಗಂಗೆ ಪೂಜೆಯನ್ನು ಬಾವಿಯ ಮೇಲ್ಚಾವಣಿ ಮೇಲೆ ಕುಳಿತು ನೋಡುತ್ತಿದ್ದರು. ಬಾವಿಯು ಹಳೆಯದಾಗಿದ್ದು, ಮೇಲ್ಚಾವಣಿ

ಮದುವೆ ಸಮಾರಂಭದಂದು ಬಾವಿಗೆ ಬಿದ್ದು 9 ಮಕ್ಕಳು ಸೇರಿದಂತೆ 13 ಮಂದಿ ಸಾವು Read More »

ಮಲಯಾಳಂನ ಕೊಟ್ಟಾಯಂ ಪ್ರದೀಪ್ ವಿಧಿವಶ

ತಿರುವನಂತಪುರಂ: ಮಲಯಾಳಂನ ಖ್ಯಾತ ನಟ ಕೊಟ್ಟಾಯಂ ಪ್ರದೀಪ್ ಅಂತ ಕರೆಯಲ್ಪಡುವ ಪ್ರದೀಪ್ ಕೆ. ಆರ್ (61) ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಪ್ರದೀಪ್ ಅವರು ಕೊಟ್ಟಾಯಂ ಎಂಬ ತಮ್ಮ ಸ್ಥಳೀಯ ಸ್ಥಳದ ಹೆಸರನ್ನು ತಮ್ಮ ಹೆಸರಿಗೆ ಸೇರಿಸಿಕೊಂಡಿದ್ದರು. ಜೂನಿಯರ್ ಕಲಾವಿದರಾಗಿ ತಮ್ಮ ಚಲನಚಿತ್ರ ವೃತ್ತಿಜೀವನವನ್ನು ಪ್ರಾರಂಭಿಸಿದ್ದರು. ಅವರು ರಂಗಭೂಮಿ ಮತ್ತು ದೂರದರ್ಶನ ಉದ್ಯಮದ ಭಾಗವಾಗಿದ್ದರು. ಪ್ರದೀಪ್ ಅವರಿಗೆ ಇಂದು ಬೆಳಗ್ಗೆ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ಅಡ್ಮಿಟ್ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಪ್ರದೀಪ್ ತಮ್ಮ ಶಾಲಾ

ಮಲಯಾಳಂನ ಕೊಟ್ಟಾಯಂ ಪ್ರದೀಪ್ ವಿಧಿವಶ Read More »

ಉಡುಪಿ: ಪಿ.ಯು ಪ್ರಾಯೋಗಿಕ ಪರೀಕ್ಷೆ ಮುಂದೂಡಿಕೆ

ಉಡುಪಿ: ಇಂದಿನಿಂದ ಪ್ರಾರಂಭಗೊಳ್ಳಬೇಕಿದ್ದ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಪ್ರಾಯೋಗಿಕ ಪರೀಕ್ಷೆಗಳನ್ನು ತಾಂತ್ರಿಕ ಕಾರಣಗಳಿಗಾಗಿ ನಾಳೆಗೆ ಮುಂದೂಡಲಾಗಿದೆ ಎಂದು ಡಿಡಿಪಿಯು ಮಾರುತಿ ತಿಳಿಸಿದ್ದಾರೆ. ಜಿಲ್ಲೆಯ ಎಲ್ಲಾ ಪದವಿಪೂರ್ವ ಕಾಲೇಜುಗಳಲ್ಲಿ ನಾಳೆಯಿಂದ ಪ್ರಾಯೋಗಿಕ ಪರೀಕ್ಷೆಗಳು ಪ್ರಾರಂಭಗೊಳ್ಳಲಿವೆ ಎಂದವರು ಹೇಳಿದ್ದಾರೆ. ದ್ವಿತೀಯ ಪಿಯು ಪ್ರಾಯೋಗಿಕ ಪರೀಕ್ಷೆಗಳನ್ನು ಇಂದಿನಿಂದ ಮಾ.25ರೊಳಗೆ ಮುಗಿಸಲು ರಾಜ್ಯ ಪ.ಪೂ. ಶಿಕ್ಷಣ ಮಂಡಳಿ ಸೂಚನೆ ನೀಡಿದೆ. ಅದರಂತೆ ಜಿಲ್ಲೆಯ ವೇಳಾಪಟ್ಟಿ ತಯಾರಿಸಲಾಗುವುದು ಎಂದು ಮಾರುತಿ ತಿಳಿಸಿದ್ದಾರೆ. ಇಂದು ನಡೆಯಬೇಕಿದ್ದ ಪ್ರಾಯೋಗಿಕ ಪರೀಕ್ಷೆಯನ್ನು ಮಾ.11ರಂದು ನಡೆಸಲಾಗುತ್ತಿದೆ ಎಂದೂ ಅವರು

ಉಡುಪಿ: ಪಿ.ಯು ಪ್ರಾಯೋಗಿಕ ಪರೀಕ್ಷೆ ಮುಂದೂಡಿಕೆ Read More »

ಪದವಿ ಕಾಲೇಜುಗಳಲ್ಲೂ ಬೇಕು ಡ್ರೆಸ್ ಕೋಡ್| ಸಚಿವ ಅಶ್ವಥ್ ನಾರಾಯಣ ಸ್ಪಷ್ಟನೆ

ಸಮಗ್ರ ನ್ಯೂಸ್ ಡೆಸ್ಕ್: ಡಿಗ್ರಿ ಕಾಲೇಜು ವಿದ್ಯಾರ್ಥಿಗಳಿಗೆ ಯಾವುದೇ ಡ್ರೆಸ್ ಕೋಡ್ ಇಲ್ಲ, ಯಾವುದೇ ರೀತಿಯ ವಸ್ತ್ರವನ್ನು ಮುಕ್ತವಾಗಿ ಧರಿಸಬಹುದು ಎಂದು ಮಂಗಳವಾರ ಹೇಳಿಕೆ ನೀಡಿದ್ದ ಉನ್ನತ ಶಿಕ್ಷಣ ಸಚಿವ ಸಿ.ಎನ್. ಅಶ್ವತ್ಥ ನಾರಾಯಣ ಇದೀಗ ಉಲ್ಟಾ ಹೊಡೆದಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅಶ್ವತ್ಥ ನಾರಾಯಣ, ಶಿಕ್ಷಣ ಸಂಸ್ಥೆಗಳು ಮತ್ತು ಕಾಲೇಜ್ ಅಭಿವೃದ್ಧಿ ಸಮಿತಿ ಸೂಚಿಸಿರುವ ವಸ್ತ್ರ ಸಂಹಿತೆ ಬಗ್ಗೆ ಹೈಕೋರ್ಟ್ ನೀಡಿರುವ ಆದೇಶ ಸ್ಪಷ್ಟವಾಗಿದೆ. ಇದೇ ಆದೇಶ ಸರ್ಕಾರಿ ಮತ್ತು ಖಾಸಗಿ ಪಿಯುಸಿ,

ಪದವಿ ಕಾಲೇಜುಗಳಲ್ಲೂ ಬೇಕು ಡ್ರೆಸ್ ಕೋಡ್| ಸಚಿವ ಅಶ್ವಥ್ ನಾರಾಯಣ ಸ್ಪಷ್ಟನೆ Read More »

ಉಪ್ಪಿನಂಗಡಿಯಲ್ಲಿ ಹಿಜಾಬ್ ಧರಿಸಿ ಕಾಲೇಜು ಪ್ರವೇಶಕ್ಕೆ ನಿರಾಕರಣೆ| ಕಾಲೇಜಿಗೆ ಎರಡು ದಿನ ರಜೆ

ಪುತ್ತೂರು: ಹಿಜಾಬ್‍ ಧರಿಸಿದ ವಿದ್ಯಾರ್ಥಿನಿಯರಿಗೆ ತರಗತಿಗೆ ಪ್ರವೇಶ ನೀಡದೇ ಇರುವುದನ್ನು ವಿರೋಧಿಸಿ ಅವರ ಬೆಂಬಲವಾಗಿ ನಿಂತ ಕೆಲವು ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿದ ಬಳಿಕ ಇನ್ನಷ್ಟು ಗೊಂದಲಗಳಿಗೆ ಕಾರಣವಾಗುವುದು ಬೇಡ ಎಂದು ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿಗೆ ಎರಡು ದಿನಗಳ ಕಾಲ ರಜೆ ಘೋಷಿಸಲಾಗಿದೆ ಎಂದು ಪ್ರಾಂಶುಪಾಲರು ತಿಳಿಸಿದ್ದಾರೆ. ಉಪ್ಪಿನಂಗಡಿ ಪ್ರಥಮ ದರ್ಜೆ ಕಾಲೇಜಿನ ಕೆಲ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಕೊಂಡು ಕಾಲೇಜಿಗೆ ಬಂದಿದ್ದು, ಅವರಿಗೆ ಪ್ರಾಂಶುಪಾಲರು ತರಗತಿ ಕೊಠಡಿಯೊಳಗೆ ಪ್ರವೇಶ ನಿರಾಕರಿಸಿದ್ದಾರೆ. ನಂತರ ಸರಕಾರದ ಮತ್ತು ನ್ಯಾಯಾಲಯದ ಆದೇಶವನ್ನು

ಉಪ್ಪಿನಂಗಡಿಯಲ್ಲಿ ಹಿಜಾಬ್ ಧರಿಸಿ ಕಾಲೇಜು ಪ್ರವೇಶಕ್ಕೆ ನಿರಾಕರಣೆ| ಕಾಲೇಜಿಗೆ ಎರಡು ದಿನ ರಜೆ Read More »

ಸುಳ್ಯ: ಖಾಸಗಿ ಕಾಲೇಜಿನಲ್ಲಿ ಹಿಜಾಬ್ ಕಿಚ್ಚು| ವರದಿಗೆ ತೆರಳಿದ್ದ ಪತ್ರಕರ್ತನ ಮೇಲೆ ಕಾಲೇಜು ಸಿಬ್ಬಂದಿಯಿಂದ ಹಲ್ಲೆ ಯತ್ನ

ಸಮಗ್ರ ನ್ಯೂಸ್ ಡೆಸ್ಕ್: ಪದವಿ ಪೂರ್ವ ಕಾಲೇಜು ಆವರಣದಲ್ಲಿ ಹಿಜಾಬ್ ಧರಿಸಬಹುದು ಎಂದು ಸರ್ಕಾರದ ಆದೇಶ ‌ಇದ್ದರೂ, ಸುಳ್ಯದ ಎನ್.ಎಂ.ಸಿ ಕಾಲೇಜಿನಲ್ಲಿ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿಗಳಿಗೆ ಪ್ರವೇಶ ನಿರಾಕರಿಸಿದ ಘಟನೆ ನಡೆದಿದೆ. ಕಾಲೇಜಿನ ಮೈದಾನದಲ್ಲಿ ಬಿರುಬಿಸಿಲಿನಲ್ಲಿ ವಿದ್ಯಾರ್ಥಿನಿಗಳು ಇರುವ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವರದಿಗಾರಿಕೆ ಮಾಡಲು ತೆರಳಿದ ಸುಳ್ಯದ ಪತ್ರಿಕಾ ವರದಿಗಾರರಾದ ಹಸೈನಾರ್ ಜಯನಗರ ಮೇಲೆ ಕಾಲೇಜಿನ ಸಿಬ್ಬಂದಿ ಹಲ್ಲೆಗೆ ಯತ್ನಿಸಿ, ತಳ್ಳಾಟ ನಡೆಸಿದ ಘಟನೆ ನಡೆದಿದೆ. ಕಾಲೇಜು ಪುನರಾರಂಭವಾದ ಇಂದು ಸುಳ್ಯದ

ಸುಳ್ಯ: ಖಾಸಗಿ ಕಾಲೇಜಿನಲ್ಲಿ ಹಿಜಾಬ್ ಕಿಚ್ಚು| ವರದಿಗೆ ತೆರಳಿದ್ದ ಪತ್ರಕರ್ತನ ಮೇಲೆ ಕಾಲೇಜು ಸಿಬ್ಬಂದಿಯಿಂದ ಹಲ್ಲೆ ಯತ್ನ Read More »

ಸುರತ್ಕಲ್ ‌: ಆಸಿಫ್ ಆಪದ್ಬಾಂಧವ ಅವರ ಮೇಲೆ ಹಲ್ಲೆಗೆ ಮುಂದಾಗಿದ್ದ ಮಂಗಳಮುಖಿಯರು ಪೋಲಿಸ್ ವಶಕ್ಕೆ

ಸುರತ್ಕಲ್ : ಎನ್ಐಟಿಕೆ ಟೋಲ್ ಗೇಟ್ ವಿರುದ್ಧದ ಧರಣಿ ಸ್ಥಳಕ್ಕೆ ಮಧ್ಯರಾತ್ರಿ ನುಗ್ಗಿ ಮಂಗಳಮುಖಿಯರ ದಾಂಧಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ‌ಆರು ಮಂದಿ ಮಂಗಳಮುಖಿಯರನ್ನು‌ ಪೋಲಿಸರು‌ ಬಂಧಿಸಿದ್ದಾರೆ. ಬಂಧಿತರನ್ನು ಮಂಡ್ಯ ಮೂಲದ ವಾಸವಿ‌ ಗೌಡ(32), ದಾವಣಗೆರೆ ಮೂಲದ ಲಿಪಿಕಾ‌(19) , ಹಾಸನ ಮೂಲದ ಹಿಮಾ(24), ಮೈಸೂರು ಮೂಲದ ಆದ್ಯ (22) ಹಾಗೂ ಮಾಯಾ(28) ಮತ್ತು ರಾಮನಗರ ಜಿಲ್ಲೆಯ ಮೈತ್ರಿ(28) ಎಂದು ಗುರುತಿಸಲಾಗಿದೆ.

ಸುರತ್ಕಲ್ ‌: ಆಸಿಫ್ ಆಪದ್ಬಾಂಧವ ಅವರ ಮೇಲೆ ಹಲ್ಲೆಗೆ ಮುಂದಾಗಿದ್ದ ಮಂಗಳಮುಖಿಯರು ಪೋಲಿಸ್ ವಶಕ್ಕೆ Read More »

ಸುಳ್ಯದ ಕಾಲೇಜೊಂದರಲ್ಲಿ ಹಿಜಾಬ್ ಸಂಘರ್ಷ

ಸುಳ್ಯ: ರಾಜ್ಯಾದ್ಯಂತ ವಿವಾದಕ್ಕೆ ಕಾರಣವಾದ ಹಿಜಾಬ್ ವಿವಾದ ಸುಳ್ಯಕ್ಕೂ ಕಾಲಿಟ್ಟಿದ್ದು, ನೆಹರೂ ಮೆಮೊರಿಯಲ್ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಕೆಲವರು ಹಿಜಾಬ್ ಧರಿಸಿ ಬಂದ ಘಟನೆ ಇಂದು ವರದಿಯಾಗಿದೆ. ಹಿಜಾಬ್ ಧರಿಸಿದ ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲಿ ಪ್ರವೇಶ ನಿರಾಕರಿಸಿದ ಹಿನ್ನೆಲೆ ಕಾಲೇಜಿನ ಆವರಣದಲ್ಲಿ ವಿದ್ಯಾರ್ಥಿಗಳು ಒಂದುಗೂಡಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಬಂದೋಬಸ್ತ್ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

ಸುಳ್ಯದ ಕಾಲೇಜೊಂದರಲ್ಲಿ ಹಿಜಾಬ್ ಸಂಘರ್ಷ Read More »