Editor

ಪುತ್ತೂರು: ಜೀಪ್-ರಿಕ್ಷಾ ಅಪಘಾತ – ಮೂವರು ಕೂಲಿ ಕಾರ್ಮಿಕರು ಗಂಭೀರ

ಪುತ್ತೂರು: ಜೀಪ್ ಮತ್ತು ರಿಕ್ಷಾ ಅಪಘಾತದಲ್ಲಿ ಮೂವರ ಕೂಲಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ಕೆಯ್ಯೂರು ಗ್ರಾಮದ ಪೊಯ್ಯೋಳೆ ಎಂಬಲ್ಲಿ ನಡೆದಿದೆ. ಕೆಯ್ಯೂರಿನಿಂದ ದೇರ್ಲ ಕಡೆಗೆ ಹೋಗುತ್ತಿದ್ದ ಜೀಪು, ದೇರ್ಲ ಕಡೆಯಿಂದ ಕೆಯ್ಯೂರು ಕಡೆಗೆ ಕೂಲಿ ಕಾರ್ಮಿಕರನ್ನು ಸಾಗಿಸುತ್ತಿದ್ದ ರಿಕ್ಷಾ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ರಿಕ್ಷಾದಲ್ಲಿದ್ದ ಕೂಲಿ ಕಾರ್ಮಿಕರಾದ ಪ್ರವೀಣ್, ಗುರು, ಅನೀಶ್ ಎಂಬವರು ತ್ರೀವವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಪುತ್ತೂರು ಆಸ್ಪತ್ರೆಗೆ ಕರೆದ್ಯೊಯ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ರವಾನಿಸಲಾಗಿದೆ. ರಿಕ್ಷಾ ಚಾಲಕ ಗಿರಿಧರ ಎಟ್ಯಡ್ಕ,

ಪುತ್ತೂರು: ಜೀಪ್-ರಿಕ್ಷಾ ಅಪಘಾತ – ಮೂವರು ಕೂಲಿ ಕಾರ್ಮಿಕರು ಗಂಭೀರ Read More »

ಐಪಿಎಸ್ ಅಧಿಕಾರಿ ರವಿ‌ ಡಿ. ಚೆನ್ನಣ್ಣನವರ್ ವರ್ಗಾವಣೆಗೆ ಬ್ರೇಕ್

ಸಮಗ್ರ ನ್ಯೂಸ್ ಡೆಸ್ಕ್: ಐಪಿಎಸ್ ಅಧಿಕಾರಿ ರವಿ.ಡಿ.ಚೆನ್ನಣ್ಣನವರ್ ರನ್ನು ವಾಲ್ಮೀಕಿ ಬುಡಕಟ್ಟು ನಿಗಮದ ಎಂಡಿ ಆಗಿ ವರ್ಗಾಯಿಸಿದ್ದ ರಾಜ್ಯ ಸರ್ಕಾರ ಇದೀಗ ಆದೇಶಕ್ಕೆ ತಡೆ ಹಿಡಿದಿದೆ.ರಾಜ್ಯ ಸರ್ಕಾರವು ಜನವರಿ 26 ರಂದು ರವಿ ಡಿ.ಚೆನ್ನಣ್ಣನವರ್ ಸೇರಿ ಒಟ್ಟು 9 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ರವಿ.ಡಿ.ಚೆನ್ನಣ್ಣನವರ್ ಸಿಐಡಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ರಾಜ್ಯ ಸರ್ಕಾರ ರವಿ. ಡಿ.ಚೆನ್ನಣ್ಣನವರ್ ರನ್ನು ವಾಲ್ಮೀಕಿ ಬುಡಕಟ್ಟು ನಿಗಮದ ಎಂಡಿ ಆಗಿ ವರ್ಗಾವಣೆ ಮಾಡಿತ್ತು. ರವಿ ಚೆನ್ನಣ್ಣನವರ್ ಸೇರಿದಂತೆ ಕೆಲ ಪೊಲೀಸ್ ಅಧಿಕಾರಿಗಳ

ಐಪಿಎಸ್ ಅಧಿಕಾರಿ ರವಿ‌ ಡಿ. ಚೆನ್ನಣ್ಣನವರ್ ವರ್ಗಾವಣೆಗೆ ಬ್ರೇಕ್ Read More »

ವಿಟ್ಲ: ಮೇಯಲು ಬಿಟ್ಟಿದ್ದ ದನದ ಕಾಲನ್ನು ಕತ್ತರಿಸಿದ ದುಷ್ಕರ್ಮಿಗಳು

ವಿಟ್ಲ: ಮೇಯಲು ಬಿಟ್ಟಿದ್ದ ಹಸುವಿನ ಕಾಲನ್ನು ಕತ್ತರಿಸಿ ವಿಕೃತಿ ಮೆರೆದ ಘಟನೆ ವಿಟ್ಲ ತಾಲೂಕಿನ ಅಡ್ಯನಡ್ಕ ಎಂಬಲ್ಲಿ ನಡೆದಿದೆ. ಅಡ್ಯನಡ್ಕ ಕೆದುಮೂಲೆ ನಿವಾಸಿ ಕೃಷಿಕರೊಬ್ಬರಿಗೆ ಸೇರಿದ ದನವನ್ನು ನೆಗಳಗುಳಿ ಎಂಬ ಪ್ರದೇಶದಲ್ಲಿ ಎಂದಿನಂತೆ ಮೇಯಲು ಬಿಟ್ಟಿದ್ದರು. ಆದ್ರೆ ಈ ವೇಳೆ ದುಷ್ಕರ್ಮಿಗಳು ದನದ ಕಾಲನ್ನು ಕ್ರೂರವಾಗಿ ಕತ್ತರಿಸುವ ಮೂಲಕ ರಾಕ್ಷಸಿ ಕೃತ್ಯ ಮೆರೆದಿದ್ದಾರೆ ಎಂಬ ಆರೋಪ ವ್ಯಕ್ತವಾಗಿದೆ. ಸದ್ಯ ದನಕ್ಕೆ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಘಟನೆಯ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಮೂಕ ಪ್ರಾಣಿಯನ್ನು ಹಿಂಸಿಸುವ ರಾಕ್ಷಸರಿಗೆ

ವಿಟ್ಲ: ಮೇಯಲು ಬಿಟ್ಟಿದ್ದ ದನದ ಕಾಲನ್ನು ಕತ್ತರಿಸಿದ ದುಷ್ಕರ್ಮಿಗಳು Read More »

ಮಂಗಳೂರು: ಸಮುದ್ರಕ್ಕೆ ಹಾರಿದ ಪ್ರೇಯಸಿಯ ರಕ್ಷಿಸಹೋದ ಪ್ರಿಯಕರ ಸಾವು

ಸಮಗ್ರ ವರದಿ: ಸೋಮೇಶ್ವರ ಬೀಚ್ ನ ರುದ್ರಪಾದೆ ಎಂಬಲ್ಲಿ ಜೋಡಿಯೊಂದು ಮಾತನಾಡುತ್ತಿದ್ದಂತೆ ಪ್ರೇಯಸಿ ಸಮುದ್ರಕ್ಕೆ ಹಾರಿದ್ದು ಆಕೆಯನ್ನು ರಕ್ಷಿಸಲು ಹೋಗಿ ಪ್ರಿಯಕರ ಸಾವನ್ನಪ್ಪಿದ ಘಟನೆ ನಡೆದಿದೆ. ಉಳ್ಳಾಲ ರಾಣಿಪುರ ಉಳಿಯಾ ನಿವಾಸಿ ಲಾಯ್ಡ್ ಡಿಸೋಜಾ(28) ತನ್ನ ಪ್ರೇಯಸಿಯೊಂದಿಗೆ ಮಾತನಾಡುತ್ತಿದ್ದಂತೆ ಸಮುದ್ರಕ್ಕೆ ಹಾರಿದ್ದ ಪ್ರೇಯಸಿ ಕೋಟೆಕಾರು ಪಾನೀರು ನಿವಾಸಿ ಅಶ್ವಿತಾ ಫೆರಾವೋ (22) ರಕ್ಷಿಸಲು ಸಮುದ್ರಕ್ಕೆ ಹಾರಿದ್ದ ಸಂದರ್ಭದಲ್ಲಿ ತಲೆಗೆ ಬಂಡೆ ಕಲ್ಲು ತಗುಲಿ ಸಾವನ್ನಾಪ್ಪಿದ್ದಾನೆಂದು ತಿಳಿದು‌ ಬಂದಿದೆ. ಯುವತಿಯನ್ನು ರಕ್ಷಣೆ ಮಾಡಲಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಂತಾಜನಕ ಸ್ಥಿತಿ‌ಯಲ್ಲಿದ್ದಳೆಂದು

ಮಂಗಳೂರು: ಸಮುದ್ರಕ್ಕೆ ಹಾರಿದ ಪ್ರೇಯಸಿಯ ರಕ್ಷಿಸಹೋದ ಪ್ರಿಯಕರ ಸಾವು Read More »

ಕೆಂಪೇಗೌಡರಿಗೆ ಒಲಿದ ಆನಂದ್ ಮಹೀಂದ್ರಾ| ಕುಟುಂಬಕ್ಕೆ ಸ್ವಾಗತ ಕೋರಿದ ಆನಂದ್

ಸಮಗ್ರ ನ್ಯೂಸ್ ಡೆಸ್ಕ್: ತುಮಕೂರಿನ ಯುವ ರೈತ ಕೆಂಪೇಗೌಡನನ್ನು ಮಹೀಂದ್ರ ಕಂಪನಿ ಅಧ್ಯಕ್ಷ ಆನಂದ್ ಮಹೀಂದ್ರ ಮಹೀಂದ್ರ ಕುಟುಂಬಕ್ಕೆ ಸ್ವಾಗತಿಸಿದ್ದಾರೆ. ಕೆಂಪೇಗೌಡರ ಬೇಡಿಕೆಯಂತೆ ಬೋಲೆರೋ ವಾಹನ ಅವರ ಕೈ ಸೇರಿದೆ. ಸಾಮಾಜಿಕ ತಾಲತಾಣದಲ್ಲಿ ಸಕ್ರಿಯರಾಗಿರುವ ಆನಂದ್ ಮಹೀಂದ್ರ ಶುಕ್ರವಾರ ರಾತ್ರಿ ಕೆಂಪೇಗೌಡರನ್ನು ಕುಟುಂಬಕ್ಕೆ ಬರಮಾಡಿಕೊಂಡು ಟ್ವೀಟ್ ಮಾಡಿದ್ದಾರೆ. ತುಮಕೂರಿನ ಕಾರು ಶೋ ರೂಂ ಸೇಲ್ಸ್ ಏಜೆಂಟ್‌ಗಳು ರೈತ ಕೆಂಪೇಗೌಡನಿಗೆ ಮಾಡಿದ ಅವಮಾನ ಭಾರೀ ಸುದ್ದಿಯಾಗಿತ್ತು. ರಾಮನಪಾಳ್ಯ ಶೋ ರೂಂನಲ್ಲಿ ನಡೆದ ಘಟನೆ ಬಗ್ಗೆ ಜನವರಿ 25ರಂದು ಮಹೀಂದ್ರ

ಕೆಂಪೇಗೌಡರಿಗೆ ಒಲಿದ ಆನಂದ್ ಮಹೀಂದ್ರಾ| ಕುಟುಂಬಕ್ಕೆ ಸ್ವಾಗತ ಕೋರಿದ ಆನಂದ್ Read More »

ಮರಗಳ್ಳರ ರಕ್ಷಣೆಗೆ ನಿಂತರಾ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ? ಮಹಿಳಾ ಅರಣ್ಯಾಧಿಕಾರಿಗೆ ಏಕಾಏಕಿ ವರ್ಗಾವಣೆ ಯಾಕೆ? ಇದರ ಹಿಂದಿನ ಮಸಲತ್ತೇನು?

ಸಮಗ್ರ ವರದಿ: ಅರಣ್ಯ ಸಂಚಾರಿ ದಳ ಉಡುಪಿ ವಲಯ ಅರಣ್ಯಾಧಿಕಾರಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಅರಣ್ಯ ಸಂಚಾರಿ ದಳದ ಪ್ರಭಾರ ಅಧಿಕಾರಿಯಾಗಿಯೂ ಕಾರ್ಯನಿರ್ವಹಿಸುತ್ತಿದ್ದ ಸಂಧ್ಯಾ ಸಚಿನ್ ಅವರನ್ನು ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜಾ ಮುಖ್ಯಮಂತ್ರಿಗೆ ಮನವಿ ಮಾಡಿ ಬೀದರ್ ನ ನೌಬಾದ್ ಅರಣ್ಯ ತರಬೇತಿ ಕೇಂದ್ರಕ್ಕೆ ವರ್ಗಾವಣೆ ಮಾಡಿರುವುದು ರಾಜಕೀಯ ದ್ವೇಷ ಮತ್ತು ದಂಧೆಕೋರರ ಮಸಲತ್ತು ಎಂಬ ಮಾತುಗಳು ಕೇಳಿಬರುತ್ತಿದೆ. ಮರಗಳ್ಳರಿಗೆ ಬೆಳ್ತಂಗಡಿ ಶಾಸಕರೇ ರಕ್ಷಕರಾದರಾ? ಎಂಬ ಅನುಮಾನ ಈಗ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿದೆ.

ಮರಗಳ್ಳರ ರಕ್ಷಣೆಗೆ ನಿಂತರಾ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ? ಮಹಿಳಾ ಅರಣ್ಯಾಧಿಕಾರಿಗೆ ಏಕಾಏಕಿ ವರ್ಗಾವಣೆ ಯಾಕೆ? ಇದರ ಹಿಂದಿನ ಮಸಲತ್ತೇನು? Read More »

‘ಪದೇ ಪದೇ ಹೇಳುವ ಅಭ್ಯಾಸ ನನಗಿಲ್ಲ, ಕಾಲಮಿತಿಯೊಳಗೆ ಕೆಲಸ ಮಾಡಿ’ – ಅಧಿಕಾರಿಗಳಿಗೆ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ತಾಕೀತು

ಸಮಗ್ರ ನ್ಯೂಸ್ ಡೆಸ್ಕ್: ‘ಒಂದು ಕೆಲಸವನ್ನು ಮಾಡುವಂತೆ ಅಥವಾ ಆದೇಶವನ್ನು ಪಾಲಿಸುವಂತೆ ಒಂದು ಬಾರಿ ಮಾತ್ರ ಹೇಳುವ ಸ್ವಭಾವ ನನ್ನದು. ಅದೇ ಕೆಲಸವನ್ನು ಮಾಡುವಂತೆ ಅಥವಾ ಆದೇಶವನ್ನು ಪಾಲಿಸುವಂತೆ ಎರಡನೇ ಬಾರಿ ನೆನಪಿಸುವ ಅಭ್ಯಾಸ ನನಗಿಲ್ಲ. ಹಾಗಾಗಿ ಅಧಿಕಾರಿ, ಸಿಬ್ಬಂದಿಗಳೆಲ್ಲರೂ ಕಾಲಮಿತಿಯೊಳಗೆ ಕೆಲಸ ಮಾಡಬೇಕು’ ಎಂದು ದ.ಕ.ಜಿಲ್ಲಾ ನೂತನ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಹೇಳಿದರು. ಅವರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜನಪ್ರತಿನಿಧಿಗಳು ಹಾಗೂ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಸಭೆಯ ಅಧ್ಯಕ್ಷತೆ

‘ಪದೇ ಪದೇ ಹೇಳುವ ಅಭ್ಯಾಸ ನನಗಿಲ್ಲ, ಕಾಲಮಿತಿಯೊಳಗೆ ಕೆಲಸ ಮಾಡಿ’ – ಅಧಿಕಾರಿಗಳಿಗೆ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ತಾಕೀತು Read More »

ತಿಮಿಂಗಿಲ ವಾಂತಿ ಮಾರಾಟಕ್ಕೆ ಯತ್ನ| ಇಬ್ಬರನ್ನು ಬಂಧಿಸಿದ ಪೊಲೀಸರು

ಸಮಗ್ರ ಕ್ರೈಂ ಬ್ಯೂರೋ: ಲಕ್ಷಾಂತರ ಮೌಲ್ಯದ ತಿಮಿಂಗಿಲ ವಾಂತಿಯನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಚನ್ನಮ್ಮನ ಕೆರೆ ಅಚ್ಚುಕಟ್ಟು ಠಾಣೆ ಪೊಲೀಸರು ಬಂಧಿಸಿದ್ದಾರೆ. ಬನಶಂಕರಿ 2ನೇ ಹಂತದ ನಿವಾಸಿಗಳಾದ ಮೊಹಮ್ಮದ್‌ ರಿಯಾಜ್‌ ಅಹಮ್ಮದ್‌(58) ಮತ್ತು ಮೊಹಮ್ಮದ್‌ ಗೌಸ್‌ (51) ಬಂಧಿತ ಆರೋಪಿಗಳು. ಬಂಧಿತರಿಂದ ಸುಮಾರು 3.6 ಕೆಜಿ ತೂಕದ ಅಂಬರ್‌ಗ್ರೀಸ್‌ ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳು ಜ.26ರಂದು ಬನಶಂಕರಿ 3ನೇ ಹಂತದ ಬನಗಿರಿ ನಗರದ ವರಸಿದ್ಧಿ ವಿನಾಯಕ ದೇವಾಲಯ ಸಮೀಪದ ವಾಟರ್‌ ಟ್ಯಾಂಕ್‌

ತಿಮಿಂಗಿಲ ವಾಂತಿ ಮಾರಾಟಕ್ಕೆ ಯತ್ನ| ಇಬ್ಬರನ್ನು ಬಂಧಿಸಿದ ಪೊಲೀಸರು Read More »

ಮಳೆ ಬರುವ ಹಾಗಿದೆ…| ಹವಾಮಾನ ಇಲಾಖೆಯಿಂದ ಎಚ್ಚರಿಕೆ ಸಂದೇಶ|

ಸಮಗ್ರ ನ್ಯೂಸ್ ಡೆಸ್ಕ್: ರಾಜ್ಯದಲ್ಲಿ ಚಳಿಯ ತೀವ್ರತೆ ಕೊಂಚ ಕಡಿಮೆಯಾಗಿದ್ದು ಮತ್ತೆ ಮಳೆಯಾಗುವ ಲಕ್ಷಣಗಳು ಕಂಡು ಬರುತ್ತಿದೆ. ಈ ಕುರಿತು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರ್ನಾಟಕದಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದಿದೆ. ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಲಘು ಮಳೆಯಾಗಲಿದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ. ಚಳಿಗಾಲದಲ್ಲಿ ಮಳೆಯಾಗುವುದು ಸಹಜ ಮತ್ತು ಹವಾಮಾನದಲ್ಲಿ ಬದಲಾವಣೆಯಾಗುತ್ತಿರುವುದರಿಂದ ಮುಂದಿನ ತಿಂಗಳ ಮಧ್ಯ ಭಾಗದವರೆಗೂ ಮಳೆ, ಚಳಿಯ ಕಣ್ಣಾಮುಚ್ಚಾಲೆ ಆಟ

ಮಳೆ ಬರುವ ಹಾಗಿದೆ…| ಹವಾಮಾನ ಇಲಾಖೆಯಿಂದ ಎಚ್ಚರಿಕೆ ಸಂದೇಶ| Read More »

ನಿರ್ದೇಶಕ ಕಟ್ಟೆ ರಾಮಚಂದ್ರ ಕೋವಿಡ್ ಗೆ ಬಲಿ

ಸಮಗ್ರ ನ್ಯೂಸ್ ಡೆಸ್ಕ್: ಚಲನಚಿತ್ರ ಹಾಗೂ ಕಿರುತೆರೆ ನಿರ್ದೇಶಕ ಕಟ್ಟೆ ರಾಮಚಂದ್ರ(75) ಅವರು ಶುಕ್ರವಾರ ಕೋವಿಡ್‌ ಕಾರಣದಿಂದ ನಗರದ ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ ಮೂರು ದಿನಗಳ ಹಿಂದೆ ಅವರ ಪತ್ನಿಯೂ ನಿಧನರಾಗಿದ್ದು, ಕುಟುಂಬ ಶೋಕಸಾಗರದಲ್ಲಿ ಮುಳುಗಿದೆ. ಚಿತ್ರರಂಗದಲ್ಲಿ ಹಲವು ದಶಕಗಳಿಂದ ಸಕ್ರಿಯರಾಗಿದ್ದ ರಾಮಚಂದ್ರ ಅವರು, ವೈಶಾಖದ ದಿನಗಳು, ಮಹಾಲಕ್ಷ್ಮೀ ಚಿತ್ರಗಳನ್ನು ನಿರ್ಮಿಸಿದ್ದರು. ಮನೆ ಮನೆ ಕಥೆ, ಅಲೆಗಳು ಮತ್ತು ಇತರ ಧಾರಾವಾಹಿಗಳಲ್ಲಿ ನಟಿಸಿದ್ದರು. ಅವರ ನಿರ್ದೇಶನದ ‘ಅರಿವು’ ಚಿತ್ರಕ್ಕೆ ರಾಷ್ಟ್ರಪ್ರಶಸ್ತಿ ದೊರಕಿತ್ತು. ‘ತನು ನಿನ್ನದು

ನಿರ್ದೇಶಕ ಕಟ್ಟೆ ರಾಮಚಂದ್ರ ಕೋವಿಡ್ ಗೆ ಬಲಿ Read More »