Editor

ಮಾಜಿ ಸಿಎಂ ಯಡಿಯೂರಪ್ಪ ಮೊಮ್ಮಗಳು ಆತ್ಮಹತ್ಯೆಗೆ ಶರಣು

ಬೆಂಗಳೂರು: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಮೊಮ್ಮಗಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಿ ಎಸ್ ವೈ ಪುತ್ರಿ ಪದ್ಮಾವತಿ ಅವರ ಮಗಳು ಸೌಂದರ್ಯ (30) ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೈಗ್ರೌಂಡ್ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೌಂದರ್ಯ ಅವರು ಎಂ.ಎಸ್.‌ ರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಸೇವೆ ಸಲ್ಲಿಸುತ್ತಿದ್ದರು ಎಂದು ತಿಳಿದುಬಂದಿದೆ. ಮೊಮ್ಮಗಳು ಸಾವನ್ನಪ್ಪಿದ ಸುದ್ದಿ ತಿಳಿಯುತ್ತಿದ್ದಂತೆ ಬಿಎಸ್​​ ಯಡಿಯೂರಪ್ಪ ಮತ್ತು ಸಿಎಂ ಸೇರಿದಂತೆ

ಮಾಜಿ ಸಿಎಂ ಯಡಿಯೂರಪ್ಪ ಮೊಮ್ಮಗಳು ಆತ್ಮಹತ್ಯೆಗೆ ಶರಣು Read More »

ಬೆಂಗಳೂರಿನ ಸುತ್ತಮುತ್ತ ನಕಲಿ ನಂದಿನಿ ತುಪ್ಪ ಜಾಲ

ಬೆಂಗಳೂರು: ಮೈಸೂರಿನ ಬಳಿಕ ಬೆಂಗಳೂರಿನಲ್ಲಿಯೂ ನಕಲಿ ತುಪ್ಪದ ಜಾಲ ಪತ್ತೆಯಾಗಿದ್ದು ಅಧಿಕಾರಿಗಳು ಪರಿಶೀಲನೆ ಕೈಗೊಂಡಿದ್ದಾರೆ ಮೈಸೂರಿನಲ್ಲಿ ಉತ್ಪಾದಿಸಲ್ಪಟ್ಟ ನಕಲಿ ತುಪ್ಪ ಬೆಂಗಳೂರು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಮಾರಾಟ ಮಾಡಲಾಗುತ್ತಿದ್ದು, ಕೆಎಂಎಫ್ ಅಧಿಕಾರಿಗಳ ಪರಿಶೀಲನೆ ವೇಳೆ ನಕಲಿ ತುಪ್ಪದ ಜಾಲ ಬಯಲಾಗಿದೆ. ನಕಲಿ ತುಪ್ಪ ಪತ್ತೆಗಾಗಿ ಹಲವು ತಂಡಗಳನ್ನು ರಚನೆ ಮಾಡಿದ್ದ ಕೆಎಂಎಫ್ ಅಧಿಕಾರಿಗಳು ಬೆಂಗಳೂರಿನ ಹನುಮಂತನಗರ, ಜಯನಗರ, ರಾಜಾಜಿನಗರ ನೆಲಮಂಗಲ ಬಳಿಯ ಮಾಕಳಿ, ಹೊಸಕೋಟೆಯ ದೇವನಗೊಂದಿ ಹಾಗೂ ಇನ್ನಿತರ ಕಡೆಗಳಲ್ಲಿ ಸಗಟು ಮಾರಾಟದ ಅಂಗಡಿಗಳು ಮತ್ತು ಗೋದಾಮುಗಳಲ್ಲಿ

ಬೆಂಗಳೂರಿನ ಸುತ್ತಮುತ್ತ ನಕಲಿ ನಂದಿನಿ ತುಪ್ಪ ಜಾಲ Read More »

ಹಿಜಬ್ ವಿವಾದ: ಆನ್ ಲೈನ್ ತರಗತಿ ಬೇಡ ಎಂದ ವಿಧ್ಯಾರ್ಥಿನಿಯರು..!! ಮಾನವ ಹಕ್ಕು ಆಯೋಗದಿಂದ ನೋಟೀಸ್ ಜಾರಿ

ಉಡುಪಿ: ಉಡುಪಿ ಸರಕಾರಿ ಕಾಲೇಜಿನಲ್ಲಿ ನಡೆಯುತ್ತಿರುವ ಹಿಜಬ್ ವಿವಾದ ತಣ್ಣಗಾಗುವ ಲಕ್ಷಣ ಕಂಡು ಬರುತ್ತಿಲ್ಲ. ವಿಧ್ಯಾರ್ಥಿನಿಯರ ಹಿತ ದೃಷ್ಠಿಯಿಂದ ಅನ್ ಲೈನ್ ಕ್ಲಾಸ್ ತೆಗೆದುಕೊಳ್ಳಲು ಸರಕಾರ ಸೂಚಿಸಿದರು, ಇದೀಗ ವಿಧ್ಯಾರ್ಥಿಗಳು ಆನ್‍ಲೈನ್ ಕ್ಲಾಸ್ ಮೂಲಕ ಮತ್ತೆ ವಿದ್ಯಾರ್ಥಿಗಳ ಜೊತೆ ನಮ್ಮನ್ನು ತಾರತಮ್ಯ ಮಾಡಬೇಡಿ. ನಾವು ಆನ್‍ಲೈನ್ ಕ್ಲಾಸ್ ಅಟೆಂಡ್ ಆಗುವುದಿಲ್ಲ ಎಂದು ಹಿಜಬ್ ಬಗ್ಗೆ ತರಗತಿ ಬಹಿಷ್ಕರಿಸಿ ಪ್ರತಿಭಟನೆ ಮಾಡುತ್ತಿರುವ ಉಡುಪಿಯ ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿಯರು ಹೇಳಿದ್ದಾರೆ. ಹಿಜಬ್ ನಮ್ಮ ಸಂವಿಧಾನಾತ್ಮಕ ಹಕ್ಕು. ನಾವು ಹಿಜಬ್

ಹಿಜಬ್ ವಿವಾದ: ಆನ್ ಲೈನ್ ತರಗತಿ ಬೇಡ ಎಂದ ವಿಧ್ಯಾರ್ಥಿನಿಯರು..!! ಮಾನವ ಹಕ್ಕು ಆಯೋಗದಿಂದ ನೋಟೀಸ್ ಜಾರಿ Read More »

ಮಲಿನಗೊಂಡಿದೆ ಮಂಗಳೂರು, ಬೆಂಗಳೂರು| ದ.ಬಾರತದ 10 ನಗರಗಳಲ್ಲಿ ಹೆಚ್ಚಾಗಿದೆ ಮಾಲಿನ್ಯ

ಬೆಂಗಳೂರು: ಕೊರೊನಾ ನಡುವೆಯೂ ದಕ್ಷಿಣ ಭಾರತದ ಬೆಂಗಳೂರು, ಮಂಗಳೂರು ಮತ್ತು ಮೈಸೂರು ಸಹಿತ 10 ನಗರಗಳಲ್ಲಿ ವಾಯುಮಾಲಿನ್ಯ ಹೆಚ್ಚಾಗಿರುವ ಕುರಿತ‌ ಆತಂಕಕಾರಿ ವರದಿಯೊಂದು ಹೊರಬಿದ್ದಿದೆ. ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ನಿಗದಿಪಡಿಸಿರುವ ಗುಣಮಟ್ಟಕ್ಕಿಂತಲೂ ಈ ನಗರಗಳಲ್ಲಿ ಹೆಚ್ಚಿನ ಮಾಲಿನ್ಯವಿದೆ ಎಂದು ಗ್ರೀನ್‌ಪೀಸ್‌ ಇಂಡಿಯಾ ಹೇಳಿದೆ. ಕೊಯಮತ್ತೂರು, ಬೆಂಗಳೂರು, ಮಂಗಳೂರು ಮತ್ತು ಅಮರಾವತಿಯ ಪಿಎಂ 2.5 ಮಟ್ಟ ವಿಶ್ವ ಆರೋಗ್ಯ ಸಂಸ್ಥೆಯ ಮಾರ್ಗಸೂಚಿಯಲ್ಲಿ ತಿಳಿಸಿರುವ ಮಟ್ಟಕ್ಕಿಂತ 6ರಿಂದ 7 ಪಟ್ಟು ಹೆಚ್ಚಾಗಿದೆ. ಮೈಸೂರು, ಕೊಚ್ಚಿ, ಚೆನ್ನೈ ಮತ್ತು ಪುದುಚೇರಿಯ

ಮಲಿನಗೊಂಡಿದೆ ಮಂಗಳೂರು, ಬೆಂಗಳೂರು| ದ.ಬಾರತದ 10 ನಗರಗಳಲ್ಲಿ ಹೆಚ್ಚಾಗಿದೆ ಮಾಲಿನ್ಯ Read More »

ಈಕೆಯ ಬ್ರಾ ಸೈಜ್ ದೇವರು ತೆಗೆದುಕೊಳ್ಳುತ್ತಿದ್ದಾರೆ ಅಂತೆ..!?

ಮುಂಬೈ : ವೆಬ್ ಸಿರೀಸ್ ಒಂದರ ಕಾರ್ಯಕ್ರಮದಲ್ಲಿ ಕಿರುತೆರೆ ನಟಿ ಶ್ವೇತಾ ತಿವಾರಿ ದೇವರು ನನ್ನ ಬ್ರಾ ಸೈಜ್ ತೆಗೆದುಕೊಳ್ಳುತ್ತಿದ್ದಾನೆ ಎಂದು ಹೇಳಿಕೆ ನೀಡಿ ವಿವಾದ ಸೃಷ್ಠಿಸಿದ್ದಾರೆ. ಶ್ವೇತಾ ತಿವಾರಿಯ ಹೇಳಿಕೆಯ ವೀಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗುತ್ತಿದ್ದು, ಪರ ವಿರೋಧ ಕಾಮೆಂಟ್ ಗಳು ಬರುತ್ತಿವೆ. ಇನ್ನೂ ಈ ಹೇಳಿಕೆ ಸಂಬಂಧ ತನಿಖೆ ನಡೆಸುವಂತೆ ಭೋಪಾಲ್ ಕಮಿಷನರ್‍ಗೆ ಗೃಹ ಸಚಿವರು ಸೂಚನೆ ನೀಡಿದ್ದಾರೆ. ಮಹಾಭಾರತ ಧಾರಾವಾಹಿಯಲ್ಲಿ ಭಗವಾನ್ ಕೃಷ್ಣ ಖ್ಯಾತಿಯ ಸೌರಭ್ ರಾಜ್ ಜೈನ್

ಈಕೆಯ ಬ್ರಾ ಸೈಜ್ ದೇವರು ತೆಗೆದುಕೊಳ್ಳುತ್ತಿದ್ದಾರೆ ಅಂತೆ..!? Read More »

ಕೊರೊನಾ, ಒಮಿಕ್ರಾನ್ ನಡುವೆಯೇ ಮತ್ತೆ ಕಾಣಿಸಿಕೊಂಡ ಬ್ಲ್ಯಾಕ್ ಫಂಗಸ್ ಸದ್ದು| ಏನಿದು ಕಪ್ಪು ಶಿಲೀಂಧ್ರ?

ಸಮಗ್ರ ನ್ಯೂಸ್ ಡೆಸ್ಕ್: ಹೆಚ್ಚುತ್ತಿರುವ ಕೊರೊನಾವೈರಸ್ ಪ್ರಕರಣಗಳ ನಡುವೆ, ಬ್ಲಾಕ್ ಫಂಗಸ್ ಅಥವಾ ಮ್ಯೂಕೋರ್ಮೈಕೋಸಿಸ್ ಮರುಕಳಿಸಬಹುದೇ ಎಂಬ ಪ್ರಶ್ನೆಗಳು ಉದ್ಭವಿಸಿವೆ. ಕರೋನಾ ಎರಡನೇ ಅಲೆಯಲ್ಲಿ ಹಲವಾರು ಜನರ ಸಾವಿಗೆ ಕಾರಣವಾಗಿದ್ದ ಬ್ಲಾಕ್ ಫಂಗಸ್ ಮತ್ತೊಮ್ಮೆ ಸಮಸ್ಯೆಯಾಗಬಹುದೇ ಎಂಬ ಆತಂಕ ಮನೆಮಾಡಿದೆ. ಏನಿದು ಬ್ಲಾಕ್ ಫಂಗಸ್?ವರದಿಯೊಂದರ ಪ್ರಕಾರ, ಬ್ಲಾಕ್ ಫಂಗಸ್ ಕುರುಡುತನ, ಅಂಗಗಳ ಅಪಸಾಮಾನ್ಯ ಕ್ರಿಯೆ, ಅಂಗಾಂಶಗಳಿಗೆ ಹಾನಿ ಮತ್ತು ಸಮಯಕ್ಕೆ ಚಿಕಿತ್ಸೆ ನೀಡದಿದ್ದರೆ ಸಾವಿಗೆ ಕಾರಣವಾಗಬಹುದು. ಇದು ಮೂಗು, ಸೈನಸ್ ಮತ್ತು ಶ್ವಾಸಕೋಶದಂತಹ ದೇಹವನ್ನು ಪ್ರವೇಶಿಸುವ ಮಾರ್ಗಗಳ

ಕೊರೊನಾ, ಒಮಿಕ್ರಾನ್ ನಡುವೆಯೇ ಮತ್ತೆ ಕಾಣಿಸಿಕೊಂಡ ಬ್ಲ್ಯಾಕ್ ಫಂಗಸ್ ಸದ್ದು| ಏನಿದು ಕಪ್ಪು ಶಿಲೀಂಧ್ರ? Read More »

ವೀಕೆಂಡ್ ಕರ್ಪ್ಯೂ ರದ್ದು ಹಿನ್ನೆಲೆ| ಶನಿವಾರದ ರಜೆ ಹಿಂಪಡೆದ ರಾಜ್ಯ ಸರ್ಕಾರ| ಈ ವಾರದಿಂದ ಮತ್ತೆ ಫುಲ್ ಡ್ಯೂಟಿ

ಬೆಂಗಳೂರು: ಕೊರೋನಾ ಸೋಂಕಿನ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರದಿಂದ ವೀಕೆಂಡ್ ಕರ್ಪ್ಯೂ ಜಾರಿಗೊಳಿಸಲಾಗಿತ್ತು. ಈ ಸಂದರ್ಭದಲ್ಲಿ ಸರ್ಕಾರಿ ನೌಕರರಿಗೆ ವಾರದಲ್ಲಿ ಐದು ದಿನ ಮಾತ್ರ ಕೆಲಸ ಮಾಡಿ, ಶನಿವಾರದಂದು ರಜೆ ಘೋಷಣೆ ಮಾಡಲಾಗಿತ್ತು. ವೀಕೆಂಡ್ ಕರ್ಪ್ಯೂ ರದ್ದುಗೊಂಡ ಕಾರಣ, ಈಗ ಆ ಆದೇಶವನ್ನು ವಾಪಾಸ್ ಪಡೆಯಲಾಗಿದೆ. ಹೀಗಾಗಿ ಇನ್ಮುಂದೆ ವಾರದ 6 ದಿನ ರಜೆ ಮಾಡುವಂತೆ ತಿಳಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಸ್ಪಷ್ಟೀಕರಣ ಆದೇಶ ಹೊರಡಿಸಿದ್ದು, ರಾಜ್ಯದಲ್ಲಿ ಕೋವಿಡ್-19 ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು

ವೀಕೆಂಡ್ ಕರ್ಪ್ಯೂ ರದ್ದು ಹಿನ್ನೆಲೆ| ಶನಿವಾರದ ರಜೆ ಹಿಂಪಡೆದ ರಾಜ್ಯ ಸರ್ಕಾರ| ಈ ವಾರದಿಂದ ಮತ್ತೆ ಫುಲ್ ಡ್ಯೂಟಿ Read More »

ಸದ್ಯದಲ್ಲೇ ನಡೆಯಲಿದೆ 400 ಪಶುವೈದ್ಯರ ನೇಮಕ| ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ

ಬೆಂಗಳೂರು: ಪಶು ವೈದ್ಯ ಇಲಾಖೆಗೆ 400 ಪಶು ವೈದ್ಯರನ್ನು ನೇಮಕ ಮಾಡಲು ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಸುಮಾರು 800 ಹುದ್ದೆಗಳು ಖಾಲಿ ಇದ್ದು, ಪಶು ವೈದ್ಯರ ತೀವ್ರ ಕೊರತೆ ಅನುಭವಿಸುತ್ತಿರುವುದರಿಂದ, 400 ವೈದ್ಯರನ್ನು ಇಲಾಖಾ ನೇಮಕಾತಿ ಮೂಲಕ ಭರ್ತಿ ಮಾಡಲು ಒಪ್ಪಿಗೆ ನೀಡಲಾಯಿತು ಎಂದು ಗುರುವಾರ ಸಚಿವ ಸಂಪುಟ ಸಭೆಯ ಬಳಿಕ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ರಾಜ್ಯದ 430 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, 14 ಎಂಜಿನಿಯರಿಂಗ್‌

ಸದ್ಯದಲ್ಲೇ ನಡೆಯಲಿದೆ 400 ಪಶುವೈದ್ಯರ ನೇಮಕ| ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ Read More »

ಫೆ.14ರಿಂದ ರಾಜ್ಯ ಬಜೆಟ್ ಅಧಿವೇಶನ

ಬೆಂಗಳೂರು: ಫೆಬ್ರವರಿ 14ರಿಂದ ವಿಧಾನಮಂಡಲ ಜಂಟಿ ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿ, ಬಿಬಿಎಂಪಿ ಚುನಾವಣೆ ಕುರಿತು ಸುದೀರ್ಘ ಚರ್ಚೆ ನಡೆದಿದೆ. ಕೋವಿಡ್ ನಿರ್ವಹಣೆ ಕುರಿತಾಗಿಯೂ ಹಲವು ಸಲಹೆ ಸೂಚನೆಗಳು ಬಂದಿವೆ. ಸಂಪುಟ ಸಭೆಯಲ್ಲಿ ಹಲವು ವಿಚಾರಗಳು ಚರ್ಚೆಯಾಗಿವೆ ಎಂದರು. ಫೆಬ್ರವರಿ 14ರಿಂದ ಜಂಟಿ ಅಧಿವೇಶನ ನಡೆಸಲು ನಿರ್ಧರಿಸಲಾಗಿದೆ. ಮಾರ್ಚ್ ಮೊದಲ ವಾರದಲ್ಲಿ ಬಜೆಟ್ ಮಂಡಿಸುತ್ತೇವೆ. ಸಂಪುಟ ಸಭೆಯಲ್ಲಿ ಆದ ತೀರ್ಮಾನಗಳ

ಫೆ.14ರಿಂದ ರಾಜ್ಯ ಬಜೆಟ್ ಅಧಿವೇಶನ Read More »

ಸುಳ್ಯ: ನಾಪತ್ತೆಯಾಗಿದ್ದ ವಿವಾಹಿತ ಮಹಿಳೆ‌ ಪ್ರಿಯಕರನೊಂದಿಗೆ ಪತ್ತೆ

ಸುಳ್ಯ: ನಾಪತ್ತೆಯಾಗಿದ್ದ ಅಸ್ಸಾಂ ಮೂಲದ ವಿವಾಹಿತ ಮಹಿಳೆ ಪ್ರಿಯಕರನೊಂದಿಗೆ ಪತ್ತೆಯಾದ ಘಟನೆ ನಡೆದಿದೆ. ಈ ಮಹಿಳೆ ಜ. 25 ರಂದು ಪೈಚಾರು ಮನೆಯಿಂದ ಕಾಣೆಯಾಗಿ ಸಂಜೆಯಾದರೂ ಬಾರದ ಹಿನ್ನೆಲೆಯಲ್ಲಿ ಆಕೆಯ ಪತಿ ಪತಿ ಕೋಗನ್ ತಾತಿ ಅದೇ ದಿನ ಸಂಜೆ ಸುಳ್ಯ ಠಾಣೆಯಲ್ಲಿ ದೂರು ನೀಡಿದ್ದರು. ಕಳೆದ ನಾಲ್ಕು ತಿಂಗಳಿಂದ ಸುಳ್ಯದ ಪೈಚಾರು ಸಂಸ್ಥೆ ಯೊಂದರಲ್ಲಿ ತೆಂಗಿನಕಾಯಿ ಸುಲಿಯುವ ಕೆಲಸವನ್ನು ಮಾಡುತ್ತಿದ್ದ ಮಹಿಳೆ ಮತ್ತು ಆಕೆಯ ಪತಿ, ಎರಡು ಮಕ್ಕಳೊಂದಿಗೆ ತಾನು ಕೆಲಸ ಮಾಡುತ್ತಿರುವ ಸಂಸ್ಥೆಯವರು ನೀಡಿದ

ಸುಳ್ಯ: ನಾಪತ್ತೆಯಾಗಿದ್ದ ವಿವಾಹಿತ ಮಹಿಳೆ‌ ಪ್ರಿಯಕರನೊಂದಿಗೆ ಪತ್ತೆ Read More »