Editor

ವಿದ್ಯಾರ್ಥಿನಿ ಜೊತೆಗೆ ಶಾಲಾ ಕೊಠಡಿಯಲ್ಲೇ ಮುಖ್ಯಶಿಕ್ಷಕನ ಸರಸ| ಮೊಬೈಲ್ ನಲ್ಲಿ ಚಿತ್ರೀಕರಿಸಿ ವೈರಲ್ ಮಾಡಿದ ವಿದ್ಯಾರ್ಥಿಗಳು

ಮೈಸೂರು: ಜಿಲ್ಲೆಯ ಹೆಚ್.ಡಿ ಕೋಟೆ ತಾಲೂಕಿನ ಶಾಲೆಯೊಂದರಲ್ಲಿ ವಿದ್ಯಾರ್ಥಿನಿ ಜೊತೆ ಮುಖ್ಯ ಶಿಕ್ಷಕ ರೊಮ್ಯಾನ್ಸ್ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಮುಖ್ಯ ಶಿಕ್ಷಕ ಶಾಲಾ ಕೊಠಡಿಯಲ್ಲೇ ವಿದ್ಯಾರ್ಥಿನಿ ಜೊತೆ ರೊಮ್ಯಾನ್ಸ್ ಮಾಡಿದ್ದು, ಶಾಲೆಯ ಇತರ ವಿದ್ಯಾರ್ಥಿಗಳು ಈ ದೃಶ್ಯವನ್ನು ಮೊಬೈಲ್​ನಲ್ಲಿ ಸೆರೆ ಹಿಡಿದಿದ್ದಾರೆ. ಸದ್ಯ ವಿಡಿಯೋ ವೈರಲ್​ ಆಗಿದ್ದು, ವಿಡಿಯೋ ಆಧರಿಸಿ ಮುಖ್ಯ ಶಿಕ್ಷಕರ ವಿರುದ್ಧ ಕ್ಷೇತ್ರ ಶಿಕ್ಷಣಾಧಿಕಾರಿಗೆ ದೂರು ನೀಡಲಾಗಿದೆ. ದೂರು ಸ್ವೀಕರಿಸಿರುವ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲಿಸುವ ಭರವಸೆ ನೀಡಿದ್ದಾರೆ.

ವಿದ್ಯಾರ್ಥಿನಿ ಜೊತೆಗೆ ಶಾಲಾ ಕೊಠಡಿಯಲ್ಲೇ ಮುಖ್ಯಶಿಕ್ಷಕನ ಸರಸ| ಮೊಬೈಲ್ ನಲ್ಲಿ ಚಿತ್ರೀಕರಿಸಿ ವೈರಲ್ ಮಾಡಿದ ವಿದ್ಯಾರ್ಥಿಗಳು Read More »

ಕಾರಿಗೆ ಹಂದಿ ಡಿಕ್ಕಿ – ಬಿಜೆಪಿ ಶಾಸಕನ ಪುತ್ರ ಸೇರಿ 7 ವೈದ್ಯಕೀಯ ವಿದ್ಯಾರ್ಥಿಗಳ ದುರ್ಮರಣ!

ಮುಂಬೈ: ಕಾರು ಅಪಘಾತದಲ್ಲಿ ಬಿಜೆಪಿ ಶಾಸಕನ ಪುತ್ರ ಸೇರಿದಂತೆ 7 ವೈದ್ಯಕೀಯ ವಿದ್ಯಾರ್ಥಿಗಳು ದುರ್ಮರಣವನ್ನಪ್ಪಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಗಳಲ್ಲಿ ಒಬ್ಬ ಗೊಂಡಿಯಾ ಜಿಲ್ಲೆಯ ತಿರೋರಾ ಕ್ಷೇತ್ರದ ಶಾಸಕ ವಿಜಯ್ ರಹಾಂಗದಲೆ ಅವರ ಪುತ್ರ ಆವಿಷ್ಕಾರ್ ಎಂದು ಗುರುತಿಸಲಾಗಿದೆ. ನೀರಜ್ ಚೌಹಾಣ್ (ಪ್ರಥಮ ವರ್ಷದ ಎಂಬಿಬಿಎಸ್), ನಿತೇಶ್ ಸಿಂಗ್ (2015 ಇಂಟರ್ನ್ ಎಂಬಿಬಿಎಸ್), ವಿವೇಕ್ ನಂದನ್ (2018, ಎಂಬಿಬಿಎಸ್ ಫೈನಲ್), ಪ್ರತ್ಯುಷ್ ಸಿಂಗ್ (2017 ಎಂಬಿಬಿಎಸ್), ಶುಭಂ ಜೈಸ್ವಾಲ್ (2017 ಎಂಬಿಬಿಎಸ್) ಮತ್ತು ಪವನ್ ಶಕ್ತಿ

ಕಾರಿಗೆ ಹಂದಿ ಡಿಕ್ಕಿ – ಬಿಜೆಪಿ ಶಾಸಕನ ಪುತ್ರ ಸೇರಿ 7 ವೈದ್ಯಕೀಯ ವಿದ್ಯಾರ್ಥಿಗಳ ದುರ್ಮರಣ! Read More »

ವಕೀಲರೊಟ್ಟಿಗೆ ಪ್ರಯಾಣಿಸುತ್ತಿದ್ದ ನ್ಯಾಯಾದೀಶೆ| ಕಾರನ್ನುಅಡ್ಡಗಟ್ಟಿದ ಸ್ಥಳೀಯ ವಕೀಲರ ಗುಂಪು

ದೊಡ್ಡಬಳ್ಳಾಪುರ: ನ್ಯಾಯಾಧೀಶೆಯೊಬ್ಬರು ರಾತ್ರಿ ವೇಳೆ ವಕೀಲರೊಟ್ಟಿಗೆ ಪ್ರಯಾಣಿಸುತ್ತಿದ್ದ ಕಾರನ್ನು ಅಡ್ಡಗಟ್ಟಿದ ಸ್ಥಳೀಯ ವಕೀಲರ ಗುಂಪೊಂದು ಇಬ್ಬರನ್ನೂ ತರಾಟೆಗೆ ತೆಗೆದುಕೊಂಡ ವಿಡಿಯೊ ವೈರಲ್‌ ಆಗಿದೆ. ನಗರದ ಹೊರವಲಯದಲ್ಲಿ ಶುಕ್ರವಾರ ರಾತ್ರಿ ನ್ಯಾಯಾಧೀಶೆ ಮತ್ತು ವಕೀಲರೊಬ್ಬರ ಜೊತೆ ವಕೀಲರ ಗುಂಪು ನಡೆಸಿದ ಜಟಾಪಟಿ ದೃಶ್ಯಗಳನ್ನು ಮೊಬೈಲ್‌ನಲ್ಲಿ ಸೆರೆ ಹಿಡಿಯಲಾಗಿದೆ.ಈ ವಿಡಿಯೊ ತುಣುಕು ಈಗ ಎಲ್ಲೆಡೆ ಹರಿದಾಡುತ್ತಿದೆ. ಕಾರಿನಲ್ಲಿ ಕುಳಿತಿದ್ದ ವಕೀಲನನ್ನು ಕೆಳಗಿಳಿಸಿ ತರಾಟೆಗೆ ತೆಗೆದುಕೊಂಡ ಗುಂಪು ನಂತರ ಕಾರು ಚಾಲನೆ ಮಾಡುತ್ತಿದ್ದ ನ್ಯಾಯಾಧೀಶೆಯನ್ನೂ ಕೆಳಗೆ ಇಳಿಯುವಂತೆ ‌ಒತ್ತಾಯಿಸಿರುವುದು ವಿಡಿಯೊದಲ್ಲಿದೆ. ಈ

ವಕೀಲರೊಟ್ಟಿಗೆ ಪ್ರಯಾಣಿಸುತ್ತಿದ್ದ ನ್ಯಾಯಾದೀಶೆ| ಕಾರನ್ನುಅಡ್ಡಗಟ್ಟಿದ ಸ್ಥಳೀಯ ವಕೀಲರ ಗುಂಪು Read More »

ಸಂಪಾಜೆ: ಲಾರಿಯಲ್ಲಿ ಅಕ್ರಮ ಗೋ ಸಾಗಾಟ| ತಪಾಸಣೆ ವೇಳೆ ಪಲಾಯನಗೈದ ಖದೀಮರು

ಮಡಿಕೇರಿ: ಮಾಣಿ – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಸಂಪಾಜೆ ಗೇಟಿನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಈಚರ್ ಲಾರಿಯೊಂದರಲ್ಲಿ 25 ಕ್ಕೂ ಹೆಚ್ಚು ದನಗಳು ಪತ್ತೆಯಾದ ಘಟನೆ ನಿನ್ನೆ ತಡರಾತ್ರಿ ವರದಿಯಾಗಿದೆ. ಮಡಿಕೇರಿ ಕಡೆಯಿಂದ ಈಚರ್ ಲಾರಿಯಲ್ಲಿ ದನಗಳನ್ನು ತುಂಬಿಕೊಂಡು ಬರಲಾಗಿದ್ದು, ಸಂಪಾಜೆ ಗೇಟಿನ ಸಿಬ್ಬಂದಿ ವಿಚಾರಣೆ ನಡೆಸಿದಾಗ ಇದು ಪಶುಆಹಾರ ಸಾಗಾಟ ಎಂದು ಚಾಲಕ ಹೇಳಿದನೆಂದೂ ಗೇಟಿನ ಸಿಬ್ಬಂದಿ ಅನುಮಾನ ಬಂದು ಲಾರಿಯನ್ನು ತಪಾಸಣೆ ನಡೆಸಿದಾಗ ಒಳಗೆ ದನದ ಫುಡ್ ನ ಜತೆಗೆ 25 ಕ್ಕೂ

ಸಂಪಾಜೆ: ಲಾರಿಯಲ್ಲಿ ಅಕ್ರಮ ಗೋ ಸಾಗಾಟ| ತಪಾಸಣೆ ವೇಳೆ ಪಲಾಯನಗೈದ ಖದೀಮರು Read More »

ಸುಳ್ಯ: ತಂದೆಯಿಂದ ಮಗನಿಗೆ ಕತ್ತಿಯೇಟು| ಆಸ್ಪತ್ರೆಗೆ ದಾಖಲು

ಸುಳ್ಯ: ತಂದೆ ಮತ್ತು ಮಗನ ಮಧ್ಯೆ ಹೊಡೆದಾಟ ನಡೆದು ಮಗನಿಗೆ ಕತ್ತಿಯಿಂದ ಕಡಿದ ಘಟನೆ ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಗುಂಡ್ಯ ಎಂಬಲ್ಲಿ ನಡೆದಿದೆ. ಕತ್ತಿಯೇಟಿನಿಂದ ಯುವಕನ ಎದೆಗೆ ಗಂಭೀರವಾಗಿದ್ದು ಹಲ್ಲೆಗೊಳಗಾದ ಆತನನ್ನು ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುಂಡ್ಯ ನಿವಾಸಿ ಐತಪ್ಪ ನಾಯ್ಕ ಮತ್ತು ಅವರ ಮಗ ಜಯಪ್ರಕಾಶ್ ರವರ ಮಧ್ಯೆ ಮಾತಿನ ಚಕಮಕಿಯಾಗಿ ಹೊಡೆದಾಟ ನಡೆದಿದೆ ಎನ್ನಲಾಗಿದೆ. ತಂದೆಯೇ ಮಗನ ಎದೆಗೆ ಕತ್ತಿಯಿಂದ ಕಡಿದಿದ್ದು ಗಂಭೀರ ಗಾಯಗೊಂಡು ವಿಪರೀತ ರಕ್ತಸ್ರಾವಕ್ಕೊಳಗಾದ ಯುವಕನನ್ನು ಸುಳ್ಯ

ಸುಳ್ಯ: ತಂದೆಯಿಂದ ಮಗನಿಗೆ ಕತ್ತಿಯೇಟು| ಆಸ್ಪತ್ರೆಗೆ ದಾಖಲು Read More »

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಏಪ್ರಿಲ್. 27ರಂದು 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ – ಅರ್ಜಿ ಸಲ್ಲಿಸಲು ಇಲ್ಲಿದೆ ಮಾಹಿತಿ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಏ 27ರಂದು ಬುಧವಾರ ಸಂಜೆ 6.50ಕ್ಕೆ ಗೋಧೋಳಿ ಲಗ್ನದಲ್ಲಿ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ. ಮದುವೆಯ ಎಲ್ಲ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್‌ ವತಿಯಿಂದಲೇ ಭರಿಸಲಾಗುತ್ತದೆ.ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆಕಣ ಹಾಗೂ ಮಂಗಳ ಸೂತ್ರ, ಹೂವಿನ ಹಾರ ನೀಡಲಾಗುವುದು.ಆದರೆ ಎರಡನೇ ವಿವಾಹಕ್ಕೆ ಅವಕಾಶವಿರುವುದಿಲ್ಲ. ವರದಕ್ಷಿಣೆ ಹಾಗೂ ಮದುವೆಗಾಗುವ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ ಧರ್ಮಾಧಿಕಾರಿಯವರಾದ ಡಾ| ಡಿ.ವೀರೇಂದ್ರ ಹೆಗ್ಗಡೆಯವರು 1972ರಲ್ಲಿ ಆರಂಭಿಸಿದ ಉಚಿತ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಏಪ್ರಿಲ್. 27ರಂದು 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ – ಅರ್ಜಿ ಸಲ್ಲಿಸಲು ಇಲ್ಲಿದೆ ಮಾಹಿತಿ Read More »

ಬಿಹಾರದಲ್ಲಿ ಗಂಡು ಮಕ್ಕಳಿಗೂ ನ್ಯಾಪ್ ಕಿನ್ ಭತ್ಯೆ!

ಪಾಟ್ನಾ: ವಿದ್ಯಾರ್ಥಿನಿಯರು ಋತುಚಕ್ರದ ಸಮಯದಲ್ಲಿ ಬಳಸಲೆಂದು ನೀಡಲಾಗುವ ಸ್ಯಾನಿಟರಿ ನ್ಯಾಪ್‌ಕೀನ್‌ ಭತ್ಯೆಯನ್ನು ಬಿಹಾರದ ಶಾಲೆಯೊಂದರಲ್ಲಿ ಗಂಡು ಮಕ್ಕಳಿಗೂ ನೀಡಿದ್ದ ವಿಷಯ ಬೆಳಕಿಗೆ ಬಂದಿದೆ. ಸರನ್‌ ಜಿಲ್ಲೆಯ ಹಲ್ಕೋರಿ ಸಾಹ್‌ ಪ್ರೌಢಶಾಲೆಯ 7 ವಿದ್ಯಾರ್ಥಿಗಳಿಗೆ ನ್ಯಾಪ್‌ಕೀನ್‌ ಖರೀದಿಗೆಂದು 2016-17ನೇ ಸಾಲಿನಲ್ಲಿ ವಾರ್ಷಿಕ 150 ರೂ.ವಿತರಣೆ ಮಾಡಿದ್ದ ವಿಷಯವನ್ನು ಶಾಲೆಯ ಹೊಸ ಮುಖ್ಯೋಪಾಧ್ಯಾಯರು ಪತ್ತೆ ಮಾಡಿದ್ದು, ಈ ಕುರಿತು ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಘಟನೆ ಕುರಿತು ತನಿಖೆಗೆ ಆದೇಶಿಸಲಾಗಿದೆ. ವಿದ್ಯಾರ್ಥಿಗಳ ಹೆಸರಲ್ಲಿ ಶಾಲಾ ಸಿಬ್ಬಂದಿಯೇ ವಂಚನೆ ಮಾಡಿದ್ದಾರಾ?

ಬಿಹಾರದಲ್ಲಿ ಗಂಡು ಮಕ್ಕಳಿಗೂ ನ್ಯಾಪ್ ಕಿನ್ ಭತ್ಯೆ! Read More »

ಮಂಗಳೂರಿನ ಬಾಲೆಯ ಜತೆ ಮಾತನಾಡಿದ ಪ್ರಧಾನಿ ಮೋದಿ: ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರಧಾನ

ಮಂಗಳೂರು: ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ್ ಪ್ರಶಸ್ತಿ ವಿಜೇತ ರಾಜ್ಯದ ಏಕೈಕ ಬಾಲಕಿ ಮಂಗಳೂರಿನ ಭರತನಾಟ್ಯ ಕಲಾವಿದೆ ರೆಮೋನಾ ಪರೇರಾ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಪ್ರಶಸ್ತಿ ಪ್ರದಾನ ಮಾಡಿದರು. ಹೊಸದಿಲ್ಲಿಯಿಂದ ಡಿಜಿಟಲ್ ಮಾದ್ಯಮದ ಮೂಲಕ ಪ್ರಶಸ್ತಿ ವಿತರಿಸಿ ಪ್ರಧಾನಿ ಬಾಲಕಿ ಜತೆ ಮಾತನಾಡಿದರು.

ಮಂಗಳೂರಿನ ಬಾಲೆಯ ಜತೆ ಮಾತನಾಡಿದ ಪ್ರಧಾನಿ ಮೋದಿ: ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಪ್ರಧಾನ Read More »

ಮಂಗಳೂರು: ದಾಖಲೆಯಿಲ್ಲದ 1.5 ಕೋಟಿಗೂ ಮಿಕ್ಕಿ ನಗದು ಮತ್ತು ಚಿನ್ನಾಭರಣ ಪತ್ತೆ

ಮಂಗಳೂರು: ಮಂಗಳೂರು ಜಂಕ್ಷನ್ ರೈಲ್ವೆ ನಿಲ್ದಾಣದಲ್ಲಿ 12223 ದುರಂತ್ ಎಕ್ಸ್​ಪ್ರೆಸ್​​ ರೈಲಿನಲ್ಲಿ ದಾಖಲೆ ಇಲ್ಲದ ಅಪಾರ ಪ್ರಮಾಣದ ನಗದು ಹಾಗೂ ಚಿನ್ನಾಭರಣ ಪತ್ತೆಯಾಗಿದೆ. ರೈಲಿನಲ್ಲಿ ಕಪ್ಪು ಬಣ್ಣದ ಬ್ಯಾಗ್ ಕಂಡು ಮಂಗಳೂರು ರೈಲ್ವೆ ಪೊಲೀಸರು ತಪಾಸಣೆ ನಡೆಸಿದ್ದು, ಬ್ಯಾಗ್​ನಲ್ಲಿ 1ಕೋಟಿ 48ಲಕ್ಷದ 58ಸಾವಿರ ನಗದು ಹಾಗೂ 40 ಲಕ್ಷ ಮೌಲ್ಯದ 800ಗ್ರಾಂ ಚಿನ್ನ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಯಾವುದೇ ದಾಖಲೆ ಇಲ್ಲದ ಕಾರಣ ಸದ್ಯ ಅಪಾರ ನಗದು ಹಾಗೂ ಚಿನ್ನಾಭರಣವನ್ನು ರೈಲ್ವೆ ಪೊಲೀಸರು ವಶಪಡಿಸಿಕೊಂಡಿದ್ದು, ಹಣದ ಮೂಲದ

ಮಂಗಳೂರು: ದಾಖಲೆಯಿಲ್ಲದ 1.5 ಕೋಟಿಗೂ ಮಿಕ್ಕಿ ನಗದು ಮತ್ತು ಚಿನ್ನಾಭರಣ ಪತ್ತೆ Read More »

ಜಿಲ್ಲಾ ಉಸ್ತುವಾರಿ ಸಚಿವರ ನೇಮಕ -ದ.ಕ. ಜಿಲ್ಲೆಗೆ ಸುನೀಲ್ ಕುಮಾರ್ – ಉಡುಪಿಗೆ ಎಸ್. ಅಂಗಾರ

ಬೆಂಗಳೂರು: ಕಳೆದ ವರ್ಷ ಸೆಪ್ಟೆಂಬರ್​ನಲ್ಲಿ ಹೊರಡಿಸಲಾಗಿದ್ದ ಆದೇಶವನ್ನು ಮಾರ್ಪಡಿಸಿ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳು ಮತ್ತು ಸಚಿವರುಗಳಿಗೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಈ ಕೆಳಕಂಡ ಜಿಲ್ಲೆಗಳ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ, ಕರ್ನಾಟಕ ಸರ್ಕಾರದ ಸಚಿವಾಲಯ ಆದೇಶ ಹೊರಡಿಸಿದೆ. ಈ ಪೈಕಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಜಿಲ್ಲೆಗೆ ಸಚಿವ ಸುನೀಲ್ ಕುಮಾರ್, ಉಡುಪಿ ಜಿಲ್ಲೆಗೆ ಎಸ್. ಅಂಗಾರ ಕೋಟಾ ಶ್ರೀನಿವಾಸ ಪೂಜಾರಿ ಅವರು ಉತ್ತರ ಕನ್ನಡ ಜಿಲ್ಲೆಗೆ ಉಸ್ತುವಾರಿ ಸಚಿವರಾಗಿ ನೇಮಕಗೊಂಡಿದ್ದಾರೆ. ಬಸವರಾಜ ಬೊಮ್ಮಾಯಿ

ಜಿಲ್ಲಾ ಉಸ್ತುವಾರಿ ಸಚಿವರ ನೇಮಕ -ದ.ಕ. ಜಿಲ್ಲೆಗೆ ಸುನೀಲ್ ಕುಮಾರ್ – ಉಡುಪಿಗೆ ಎಸ್. ಅಂಗಾರ Read More »