Editor

ಕ್ರಿಕೆಟ್ ಶಿಶುಗಳ ಮುಂದೆ ಮಂಡಿಯೂರಿದ ಭಾರತ| ಐರ್ಲೆಂಡ್ ವಿರುದ್ಧ ಟೀಂ ಇಂಡಿಯಾಗೆ ಸೋಲು

ಸಮಗ್ರ ನ್ಯೂಸ್: ಟೀಮ್ ಇಂಡಿಯಾ ಐರ್ಲೆಂಡ್ ಪ್ರವಾಸವನ್ನು ಕೈಗೊಂಡಿದ್ದು, ಎರಡು ಟಿ ಟ್ವೆಂಟಿ ಪಂದ್ಯಗಳನ್ನು ಆಡುತ್ತಿದೆ. ನಿನ್ನೆ ( ಜೂನ್ 26 ) ಬೆಲ್‌ಫಾಸ್ಟ್‌ನ ಸಿವಿಲ್ ಸರ್ವಿಸ್ ಕ್ರಿಕೆಟ್ ಕ್ಲಬ್‌ನಲ್ಲಿ ನಡೆದ ಮೊದಲ ಟಿ ಟ್ವೆಂಟಿ ಪಂದ್ಯದಲ್ಲಿ ಐರ್ಲೆಂಡ್ ಭಾರತವನ್ನು ಮಣಿಸಿ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಭಾರತದ ವಿರುದ್ಧ ಅಂತಾರಾಷ್ಟ್ರೀಯ ಪಂದ್ಯವನ್ನು ಗೆದ್ದ ಐತಿಹಾಸಿಕ ದಾಖಲೆ ಬರೆದಿದೆ. ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬೌಲಿಂಗ್ ಆರಿಸಿಕೊಂಡು ಐರ್ಲೆಂಡ್ ತಂಡವನ್ನು ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನಿಸಿತು. […]

ಕ್ರಿಕೆಟ್ ಶಿಶುಗಳ ಮುಂದೆ ಮಂಡಿಯೂರಿದ ಭಾರತ| ಐರ್ಲೆಂಡ್ ವಿರುದ್ಧ ಟೀಂ ಇಂಡಿಯಾಗೆ ಸೋಲು Read More »

ಕರಾವಳಿ ಪ್ರದೇಶದಲ್ಲಿ ಬಿಸಿಲು ಮಳೆ‌ ಜೊತೆಯಾಟ| ಜೂನ್ ಅಂತ್ಯಕ್ಕೆ ಮಳೆ‌ ಹೆಚ್ಚಾಗುವ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಹವಾಮಾನದ ವೈವಿಧ್ಯಮಯ ಆಟ ಮುಂದುವರಿದಿದ್ದು, ಶುಕ್ರವಾರದಂದು ದಿನವಿಡೀ ಮೋಡ ಕವಿದ ಹಾಗೂ ಬಿಸಿಲಿನ ಮಿಶ್ರ ವಾತಾವರಣ ಕಂಡುಬಂದಿದೆ. ಬೆಳಗ್ಗಿನ ಜಾವ ಸುರಿದ ದಿಢೀರ್ ಮಳೆ ಸಾರ್ವಜನಿಕರಲ್ಲಿ ಮುಂಗಾರಿನ ಚುರುಕಿನ ಮುನ್ಸೂಚನೆ ನೀಡಿದರೂ, ಮಧ್ಯಾಹ್ನದ ವೇಳೆಗೆ ಬಿಸಿಲಿನ ಬೇಗೆ ಹೆಚ್ಚಾಗಿತ್ತು. ಶುಕ್ರವಾರ ಬೆಳಗ್ಗೆ ಕರಾವಳಿಯ ಪ್ರಮುಖ ಗ್ರಾಮೀಣ ಹಾಗೂ ಘಟ್ಟ ಪ್ರದೇಶಗಳಾದ ಬೆಳ್ತಂಗಡಿ, ಸುಳ್ಯ, ಧರ್ಮಸ್ಥಳ ಮತ್ತು ಚಾರ್ಮಾಡಿ ಸುತ್ತಮುತ್ತ ಉತ್ತಮ ಮಳೆಯಾಗಿದೆ. ಇದರಿಂದಾಗಿ ಕೃಷಿ ಚಟುವಟಿಕೆಗಳಿಗೆ ಕೊಂಚ ವೇಗ ಸಿಕ್ಕಂತಾಗಿದೆ.

ಕರಾವಳಿ ಪ್ರದೇಶದಲ್ಲಿ ಬಿಸಿಲು ಮಳೆ‌ ಜೊತೆಯಾಟ| ಜೂನ್ ಅಂತ್ಯಕ್ಕೆ ಮಳೆ‌ ಹೆಚ್ಚಾಗುವ ಸಾಧ್ಯತೆ Read More »

ಮೈಸೂರು ದಸರಾದಲ್ಲಿ ಕಂಬಳ ನಡೆಸಲು ಆಹ್ವಾನ| ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಶಾಸಕ ಅಶೋಕ್ ರೈ

ಸಮಗ್ರ ನ್ಯೂಸ್: ಈ ಬಾರಿಯ ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಬೇಕು ಮತ್ತು ಇದಕ್ಕೆ ಬೇಕಾದ ಸಿದ್ದತೆಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ರವರು ಕಳೆದ ವಾರ ಬೆಂಗಳೂರು ಕಂಬಳದ ರುವಾರಿ ಪುತ್ತೂರು ಶಾಸಕ ಅಶೋಕ್ ರೈಗೆ ಸೂಚನೆ ನೀಡಿದ್ದು , ಶುಕ್ರವಾರ ಮೈಸೂರಿನ ನಾಡದೇವತೆ ತಾಯಿ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ ಕಂಬಳ ನಡೆಸುವ ಮೂಲಕ ತುಳುನಾಡಿನ ಜನಪದ ಕ್ರೀಡೆಯನ್ನು ಕನ್ನಡಿಗರಿಗೆ ವೀಕ್ಷಣೆಗೆ ಅವಕಾಶ ಮಾಡುವುದರ ಜೊತೆ ವಿಶ್ವದೆಲ್ಲಡೆ ಕಂಬಳವನ್ನು ಪರಿಚಯಿಸುವ ಕೆಲಸವನ್ನು

ಮೈಸೂರು ದಸರಾದಲ್ಲಿ ಕಂಬಳ ನಡೆಸಲು ಆಹ್ವಾನ| ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿದ ಶಾಸಕ ಅಶೋಕ್ ರೈ Read More »

ರಾಜ್ಯಾದ್ಯಂತ ಏಕರೂಪದ ಶೈಕ್ಷಣಿಕ ವೇಳಾಪಟ್ಟಿ ಜಾರಿ| ಶನಿವಾರ ಮುಂಜಾನೆ 8.30ಕ್ಕೆ ತರಗತಿ ಆರಂಭ

ಸಮಗ್ರ ನ್ಯೂಸ್: ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಶಿಕ್ಷಣ ಇಲಾಖೆಯು ಮಹತ್ವದ ಸಿಹಿ ಸುದ್ದಿಯೊಂದನ್ನು ನೀಡಿದೆ. ಇನ್ಮುಂದೆ ಶನಿವಾರದ ತರಗತಿಗಳ ವೇಳಾಪಟ್ಟಿಯಲ್ಲಿ ದೊಡ್ಡ ಬದಲಾವಣೆ ತರಲಾಗಿದ್ದು, ಇಡೀ ಕರ್ನಾಟಕದಾದ್ಯಂತ ಎಲ್ಲಾ ಶಾಲೆಗಳಿಗೂ ಅನ್ವಯವಾಗುವಂತೆ ಏಕರೂಪದ ಹೊಸ ಸಮಯವನ್ನು ಅಧಿಕೃತವಾಗಿ ಜಾರಿಗೆ ತರಲಾಗಿದೆ. ಶಾಲಾ ಶಿಕ್ಷಣ ಇಲಾಖೆಯ ಹೊಸ ಆದೇಶದ ಪ್ರಕಾರ, ಇನ್ಮುಂದೆ ಶನಿವಾರದ ದಿನದಂದು ಬೆಳಗ್ಗೆ 8.30 ರಿಂದ ಮಧ್ಯಾಹ್ನ 12:30 ರವರೆಗೆ ತರಗತಿಗಳು ನಡೆಯಲಿವೆ. ಈ ಹಿಂದೆ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿ ಶನಿವಾರದ ಶಾಲಾ ಅವಧಿಯಲ್ಲಿ

ರಾಜ್ಯಾದ್ಯಂತ ಏಕರೂಪದ ಶೈಕ್ಷಣಿಕ ವೇಳಾಪಟ್ಟಿ ಜಾರಿ| ಶನಿವಾರ ಮುಂಜಾನೆ 8.30ಕ್ಕೆ ತರಗತಿ ಆರಂಭ Read More »

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ ಮುನ್ಸೂಚನೆ| ಕರಾವಳಿ ಜಿಲ್ಲೆಗಳಿಗೆ ಆರೆಂಟ್ ಅಲರ್ಟ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 29 ರವರೆಗೆ ಕರಾವಳಿ ಭಾಗದಲ್ಲಿ ಯೆಲ್ಲೋ ಅಲರ್ಟ್ ಇರಲಿದ್ದು, ಜೂನ್ 29 ರಿಂದ ಜುಲೈ 1 ರವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಹಾಗೂ ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದು ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ ಮುನ್ಸೂಚನೆ| ಕರಾವಳಿ ಜಿಲ್ಲೆಗಳಿಗೆ ಆರೆಂಟ್ ಅಲರ್ಟ್ Read More »

ಅಂತ್ಯೋದಯ ಪಡಿತರದಾರರಿಗೆ ಶಾಕ್ ನೀಡಿದ ಕೇಂದ್ರ| ಪ್ರತಿ ಸದಸ್ಯರಿಗೆ 7 ಕೆ.ಜಿ ಅಕ್ಕಿ ನೀಡಲು ಚಿಂತನೆ

ಸಮಗ್ರ ನ್ಯೂಸ್: ರೇಷನ್ ಕಾರ್ಡ್ ಹೊಂದಿರುವವರಿಗೆ ಕೇಂದ್ರ ಸರ್ಕಾರ ಮಹತ್ವದ ಬದಲಾವಣೆಗೆ ಮುಂದಾಗಿದೆ. ಅಂತ್ಯೋದಯ ಅನ್ನ ಯೋಜನೆ ಕಾರ್ಡ್‌ದಾರರಿಗೆ ನೀಡಲಾಗುತ್ತಿರುವ ರೇಷನ್ ವಿತರಣಾ ವ್ಯವಸ್ಥೆಯಲ್ಲಿ ಬದಲಾವಣೆ ತರಲು ನಿರ್ಧರಿಸಿದೆ. ಇನ್ನು ಮುಂದೆ ಕುಟುಂಬದ ಆಧಾರದ ಬದಲಿಗೆ, ಪ್ರತಿ ವ್ಯಕ್ತಿಗೆ 7 ಕೆಜಿ ಅಕ್ಕಿ ಅಥವಾ ಗೋಧಿ ನೀಡುವ ಹೊಸ ನಿಯಮ ಜಾರಿಗೆ ತರಲು ಸರ್ಕಾರ ಮುಂದಾಗಿದೆ. ಇದುವರೆಗೆ ಅಂತ್ಯೋದಯ ಅನ್ನ ಯೋಜನೆಯಡಿ ಕುಟುಂಬದಲ್ಲಿ ಎಷ್ಟು ಸದಸ್ಯರಿದ್ದರೂ ತಿಂಗಳಿಗೆ 35 ಕೆಜಿ ಉಚಿತ ರೇಷನ್ ನೀಡಲಾಗುತ್ತಿತ್ತು. ಆದರೆ ಹೊಸ

ಅಂತ್ಯೋದಯ ಪಡಿತರದಾರರಿಗೆ ಶಾಕ್ ನೀಡಿದ ಕೇಂದ್ರ| ಪ್ರತಿ ಸದಸ್ಯರಿಗೆ 7 ಕೆ.ಜಿ ಅಕ್ಕಿ ನೀಡಲು ಚಿಂತನೆ Read More »

ಗ್ಯಾಸ್ ಬಳಕೆದಾರರಿಗೆ ಗುಡ್ ನ್ಯೂಸ್| ಎಲ್ಲಾ ನಿರ್ಬಂಧ ತೆರವುಗೊಳಿಸಿದ ಕೇಂದ್ರ

ಸಮಗ್ರ ನ್ಯೂಸ್: ದೇಶದ ವಾಣಿಜ್ಯ ಹಾಗೂ ಕೈಗಾರಿಕಾ ಕ್ಷೇತ್ರಕ್ಕೆ ದೊಡ್ಡ ನೆಮ್ಮದಿ ನೀಡುವ ಕ್ರಮವಾಗಿ, ಕೇಂದ್ರ ಸರ್ಕಾರ ಎಲ್‌ಪಿಜಿ ಪೂರೈಕೆಯ ಮೇಲಿದ್ದ ಎಲ್ಲಾ ರೀತಿಯ ನಿರ್ಬಂಧಗಳನ್ನು ತಕ್ಷಣದಿಂದಲೇ ಹಿಂತೆಗೆದುಕೊಂಡಿದೆ. ಗೃಹೇತರ ಪ್ಯಾಕೇಜ್ಡ್ ಎಲ್‌ಪಿಜಿ ಪೂರೈಕೆಗೆ ವಿಧಿಸಲಾಗಿದ್ದ ವಲಯವಾರು ಮಿತಿಗಳನ್ನು ಸಂಪೂರ್ಣವಾಗಿ ರದ್ದುಗೊಳಿಸಿರುವುದಾಗಿ ಸರ್ಕಾರ ಘೋಷಿಸಿದೆ. ದೇಶದ ವಾಣಿಜ್ಯ ಹಾಗೂ ಕೈಗಾರಿಕಾ ಕ್ಷೇತ್ರಕ್ಕೆ ಕೇಂದ್ರ ಸರ್ಕಾರ ಸಿಹಿಸುದ್ದಿ ನೀಡಿದೆ. ಎಲ್‌ಪಿಜಿ (LPG) ಗ್ಯಾಸ್ ಪೂರೈಕೆಯ ಮೇಲಿನ ಎಲ್ಲಾ ನಿರ್ಬಂಧಗಳನ್ನು ತಕ್ಷಣದಿಂದಲೇ ತೆರವುಗೊಳಿಸಿದ್ದು, ಇದರಿಂದ ಹೋಟೆಲ್‌ಗಳು, ಕೈಗಾರಿಕೆಗಳು ಹಾಗೂ ವಾಣಿಜ್ಯ

ಗ್ಯಾಸ್ ಬಳಕೆದಾರರಿಗೆ ಗುಡ್ ನ್ಯೂಸ್| ಎಲ್ಲಾ ನಿರ್ಬಂಧ ತೆರವುಗೊಳಿಸಿದ ಕೇಂದ್ರ Read More »

ಮಂಗಳೂರು: ವಿಮಾನ ನಿಲ್ದಾಣ ‘ಉಬರ್’ ಟ್ಯಾಕ್ಸಿ ಸೇವೆ ಬಂದ್

ಸಮಗ್ರ ನ್ಯೂಸ್: ಹಲವು ದಿನಗಳಿಂದ ಚಾಲಕರಿಗೆ ಅನ್ಯಾಯ ಮಾಡುತ್ತಿರುವ ಉಬರ್ ಕಂಪನಿಯ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಆನ್‌ಲೈನ್‌ ಟ್ಯಾಕ್ಸಿ ಚಾಲಕರು ಪ್ರತಿಭಟನೆಗೆ ಮುಂದಾಗಿದ್ದು, ವಿಮಾನ ನಿಲ್ದಾಣದಲ್ಲಿ ಉಬ‌ರ್ ಟ್ಯಾಕ್ಸಿ ಸೇವೆಯನ್ನು ಬಂದ್‌ ಮಾಡಿದ್ದಾರೆ. ಚಾಲಕರ ಹಲವು ಬೇಡಿಕೆಗಳು, ಸಮಸ್ಯೆಗಳು ಹಾಗೂ ನ್ಯಾಯಯುತ ಹಕ್ಕುಗಳ ಕುರಿತು ಅನೇಕ ಬಾರಿ ಮನವಿ ಸಲ್ಲಿಸಿದರೂ, ಉಬರ್ ಕಂಪನಿಯಿಂದ ಯಾವುದೇ ಸಮರ್ಪಕ ಸ್ಪಂದನೆ ದೊರೆಯದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮಂಗಳೂರು ಆನ್‌ಲೈನ್ ಟ್ಯಾಕ್ಸಿ ಯೂನಿಯನ್ ಒಕ್ಕೂಟ ತಿಳಿಸಿದೆ.ಚಾಲಕರ ಆದಾಯದ

ಮಂಗಳೂರು: ವಿಮಾನ ನಿಲ್ದಾಣ ‘ಉಬರ್’ ಟ್ಯಾಕ್ಸಿ ಸೇವೆ ಬಂದ್ Read More »

“ಕುಡ್ಲದ ಜನಕುಲು ಪೊಲೀಸ್ ಕೆಲ್ಸೊಗು ಸೇರ್ಲೆ”| ತುಳು ಗೊತ್ತಿದ್ರೆ ಪ್ಲಸ್ ಪಾಯಿಂಟ್| ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಸಂದೇಶ

ಸಮಗ್ರ ನ್ಯೂಸ್: “ಎನ್ನ ವೃತ್ತಿ ಜೀವನಡ್‌ ಕುಡ್ಲ ಎನ್ನ ಇಷ್ಟದ ಊರು. ಎನ್ನ ಸೇವಾವಧಿಡ್‌ ಎಚ್ಚ ಸರ್ವಿಸ್‌ ಮಲ್ತಿನ ಊರುಲ ಉಂದುವೇ. ಕುಡ್ಲದ ಜನಕುಲು ಮಸ್ತ್‌ ಎಡ್ಡೆಂತಿನಕುಲು, ಬೊಕ್ಕ ಮಸ್ತ್‌ ಬುದ್ಧಿವಂತೆರ್‌ ಪೊಲೀಸ್‌ ಇಲಾಖೆಡ್‌ ಕರ್ತವ್ಯ ಮುಲ್ಪುನ ಗೌರವದ ಕೆಲಸ. ಕುಡ್ಲದಕುಲು ಪೊಲೀಸ್‌ ಡಿಪಾರ್ಟ್‌ಮೆಂಟ್‌ ಸೇರ್ಲೆ, ಅವು ಬೊಕ್ಕಲಾತ್‌ ಇಲಾಖೆಗ್‌ ಶಕ್ತಿ ಆಪುಂಡು.” ಮಂಗಳೂರಿನ ಬಗ್ಗೆ ಹಾಗೂ ಇಲ್ಲಿನ ಜನರ ಬಗ್ಗೆ ಮೆಚ್ಚುಗೆಯ ಮಾತುಗಳೊಂದಿಗೆ ನಗರ ಪೊಲೀಸ್‌ ಕಮಿಷನರ್‌ ಸುಧೀರ್‌ ಕುಮಾರ್‌ ರೆಡ್ಡಿ ಅವರು ಯುವ ಸಮುದಾಯ

“ಕುಡ್ಲದ ಜನಕುಲು ಪೊಲೀಸ್ ಕೆಲ್ಸೊಗು ಸೇರ್ಲೆ”| ತುಳು ಗೊತ್ತಿದ್ರೆ ಪ್ಲಸ್ ಪಾಯಿಂಟ್| ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಸಂದೇಶ Read More »

ಚುರುಕುಗೊಂಡ ಮುಂಗಾರು| ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಕರಾವಳಿ ಸೇರಿದಂತೆ ಇಂದು ರಾಜ್ಯದ ಹಲವೆಡೆ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇತ್ತ ಬೆಂಗಳೂರು ಸೇರಿದಂತೆ ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಗುಡುಗು, ಮಿಂಚು  (Weather) ಹಾಗೂ ಬಲವಾದ ಬಿರುಗಾಳಿ ಸಹಿತ ಲಘುವಾಗಿ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕರಾವಳಿ

ಚುರುಕುಗೊಂಡ ಮುಂಗಾರು| ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ Read More »