Editor

ಈ ವರ್ಷ ಕೊರೊನಾ ಪಾಸ್ ಇಲ್ಲ| ಹತ್ತನೇ ತರಗತಿ ಪರೀಕ್ಷೆ ನಡೆಯುತ್ತೆ- ಸಚಿವ ನಾಗೇಶ್

ಬೆಂಗಳೂರು : ರಾಜ್ಯದಲ್ಲಿ ಎಸ್‌ಎಸ್‌ಎಲ್ ಸಿ ಪರೀಕ್ಷೆ ಕುರಿತಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಹತ್ವದ ಮಾಹಿತಿ ನೀಡಿದ್ದು, ಕಳೆದ ವರ್ಷದಂತೆ ಈ ವರ್ಷ ಕೊರೋನಾ ಪಾಸ್ ಇರುವುದಿಲ್ಲ. ಎಲ್ಲಾ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುತ್ತಾರೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ವೈರಸ್ ಹಿನ್ನೆಲೆಯಲ್ಲಿ 2020-21 ಶೈಕ್ಷಣಿಕ ವರ್ಷದಲ್ಲಿ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗಿತ್ತು. ವಿದ್ಯಾರ್ಥಿಗಳು ಮತ್ತು ಶಾಲೆಗಳು ತೀವ್ರವಾದ ಕೋವಿಡ್-ಸಂಬಂಧಿತ ಸಮಸ್ಯೆಗಳನ್ನು ಎದುರಿಸುತ್ತಿರುವ ಕಾರಣ ಕಳೆದ ವರ್ಷ ಸಮಸ್ಯೆ ವಿಭಿನ್ನವಾಗಿತ್ತು ಎಂದು ಹೇಳಿದ್ದಾರೆ.

ಈ ವರ್ಷ ಕೊರೊನಾ ಪಾಸ್ ಇಲ್ಲ| ಹತ್ತನೇ ತರಗತಿ ಪರೀಕ್ಷೆ ನಡೆಯುತ್ತೆ- ಸಚಿವ ನಾಗೇಶ್ Read More »

ಸಾಗರ: ಹೃದಯಾಘಾತದಿಂದ ಐದರ ಬಾಲೆ ಸಾವು

ಸಾಗರ: ನಗರದ ಅಣಲೆಕೊಪ್ಪದಲ್ಲಿ ಆಯತಪ್ಪಿ ಬಿದ್ದ ಮಗು, ಆಘಾತಗೊಂಡು ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ಘಟನೆ ಶನಿವಾರ ಸಂಜೆ ನಡೆದಿದೆ. ಕ್ರಿಶಾ (5) ಮೃತಪಟ್ಟ ಮಗು. ಈಕೆ ಸಂಜೆ ಆಟವಾಡಿಕೊಂಡಿದ್ದಾಗ ಆಯತಪ್ಪಿ ಬಿದ್ದಿದ್ದಾಳೆ. ಕೂಡಲೇ ಮಗುವನ್ನು ಸಾಗರ ಉಪ ವಿಭಾಗೀಯ ಆಸ್ಪತ್ರೆಗೆ ಸೇರಿಸಿದ್ದಾರೆ. ಆದರೆ ಆ ವೇಳೆಗೆ ಮಗು ಸಾವನ್ನಪ್ಪಿರುವುದಾಗಿ ವೈದ್ಯರು ಖಚಿತಪಡಿಸಿದ್ದಾರೆ.

ಸಾಗರ: ಹೃದಯಾಘಾತದಿಂದ ಐದರ ಬಾಲೆ ಸಾವು Read More »

ದ್ವಾದಶ ರಾಶಿಗಳ ವಾರಭವಿಷ್ಯ

ಈ ವಾರದಲ್ಲಿ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಸಾಕಷ್ಟು ಗ್ರಹಗಳ ಬದಲಾವಣೆಗಳು ಉಂಟಾಗುತ್ತದೆ ಮತ್ತು ಅವುಗಳ ಪ್ರಭಾವ ರಾಶಿಚಕ್ರಗಳ ಮೇಲೆ ಗಣನೀಯವಾಗಿರುತ್ತವೆ. ಇದರಿಂದ ನಮ್ಮ ಜೀವನದಲ್ಲಿ ಅನೇಕ ಬದಲಾವಣೆಗಳನ್ನು ಕಾಣಬಹುದು. ಅಂತಹ ಬದಲಾವಣೆಗಳ ಪರಿಣಾಮದಿಂದ ಈ ವಾರ ರಾಶಿಗಳ ಭವಿಷ್ಯ ಹೇಗಿರುತ್ತದೆ ಎನ್ನುವುದನ್ನು ತಿಳಿಯಲು ಮುಂದೆ ಓದಿರಿ. ಮೇಷ ರಾಶಿ (ಅಶ್ವಿನಿ ಭರಣಿ ಕೃತಿಕ 1)ಕೃಷಿ ಯಂತ್ರೋಪಕರಣಗಳನ್ನು ಬಳಸುವವರಿಗೆ ಬರಬೇಕಿದ್ದ ಸಹಾಯಧನ ಈಗ ಬರುತ್ತದೆ. ಎದುರಾದ ಸಮಸ್ಯೆಗಳಿಗೆ ಸ್ನೇಹಿತರಿಂದ ಸೂಕ್ತ ಪರಿಹಾರ ಒದಗಿಬರುತ್ತದೆ. ದೂರ ಪ್ರಯಾಣದಿಂದ ಹೆಚ್ಚಿನ ಖರ್ಚು

ದ್ವಾದಶ ರಾಶಿಗಳ ವಾರಭವಿಷ್ಯ Read More »

ಸುಳ್ಯ: ಮಂಗಳೂರಿನಲ್ಲಿ ನಾಪತ್ತೆಯಾದ ಬೆಳ್ಳಾರೆಯ ಮಹಿಳೆ ಮೈಸೂರಿನಲ್ಲಿ ಪತ್ತೆ

ಮಂಗಳೂರು : ಬ್ಯಾಂಕಿಗೆ ಹೋಗಿ ಬರುತ್ತೇನೆ ಎಂದು ಮಂಗಳೂರಿನ ಉರ್ವ ಸ್ಟೋರ್ ನಿಂದ ನಾಪತ್ತೆಯಾಗಿದ್ದ ಬೆಳ್ಳಾರೆ ಮೂಲದ ವಿವಾಹಿತ ಮಹಿಳೆ ಪತ್ತೆಯಾದ ಬಗ್ಗೆ ವರದಿಯಾಗಿದೆ. ದಿವ್ಯಾ(29) ನಾಪತ್ತೆಯಾದವರು. ಇವರು ಶುಕ್ರವಾರ ಬೆಳ್ಳಾರೆ ಕಲ್ಮಡ್ಕದ ಮನೆಯಿಂದ ಮುಂಜಾನೆ ತನ್ನ ಅಕ್ಕ ಚೈತ್ರಾ ಅವರೊಂದಿಗೆ ಮಂಗಳೂರಿಗೆ ಬಂದಿದ್ದು ಉರ್ವ ಸ್ಟೋರ್ ಮೂಡ ಬಿಲ್ಡಿಂಗ್ ಮುಂಭಾಗ ಎಸ್.ಆರ್. ಫ್ಯಾನ್ಸಿ ಬಳಿ ಬಂದ ಬಳಿಕ ಬ್ಯಾಂಕಿಗೆ ಹೋಗಿ ಬರುತ್ತೇನೆ ಎಂದು ತಿಳಿಸಿ ಬಳಿಕ ಬಾರದೆ, ಫೋನ್ ಕರೆಗೂ ಸಿಗದೇ ನಾಪತ್ತೆಯಾಗಿದ್ದರು. ಆಕೆಯ ಮೊಬೈಲ್

ಸುಳ್ಯ: ಮಂಗಳೂರಿನಲ್ಲಿ ನಾಪತ್ತೆಯಾದ ಬೆಳ್ಳಾರೆಯ ಮಹಿಳೆ ಮೈಸೂರಿನಲ್ಲಿ ಪತ್ತೆ Read More »

ಶಿವಮೊಗ್ಗ: ಪರಿಚಯಸ್ಥರಿಂದಲೇ ಬಾಲಕಿಯ ಅತ್ಯಾಚಾರ| ವಿಡಿಯೋ ವೈರಲ್, ಇಬ್ಬರ ಬಂಧನ

ಶಿವಮೊಗ್ಗ: ಹೊಸನಗರ ಬಸ್​ ನಿಲ್ದಾಣದಲ್ಲಿ ಬಸ್ಸಿಗೆ ಕಾಯುತ್ತಿದ್ದ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಪುಸಲಾಯಿಸಿ ಕಾರಿನಲ್ಲಿ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ. ಸಂತೋಷ್ (24) ಹಾಗೂ ಸುನೀಲ್ (26) ಎಂಬವರು ಬಂಧಿತ ಆರೋಪಿಗಳು ಎಂದು ತಿಳಿದು ಬಂದಿದೆ. ಬಾಲಕಿ ಬಸ್​ಗಾಗಿ ಕಾಯುತ್ತಾ ನಿಂತಿದ್ದ ವೇಳೆ ಕಾರಿನಲ್ಲಿ ಬಂದ ಈ ಇಬ್ಬರು ಯುವಕರು, ನಾವು ನಿನ್ನ ಗ್ರಾಮಕ್ಕೆ ಹೋಗುತ್ತಿದ್ದೇವೆ ಎಂದು ಪುಸಲಾಯಿಸಿ ಆಕೆಯನ್ನು ಕಾರಿನಲ್ಲಿ ಕರೆದೊಯ್ದು ಅತ್ಯಾಚಾರವೆಸಗಿದ್ದಾರೆ. ಅತ್ಯಾಚಾರವೆಸಗಿ ವಿಡಿಯೋ ಸಹ ಮಾಡಿದ್ದರು. ಘಟನೆ ಬಗ್ಗೆ

ಶಿವಮೊಗ್ಗ: ಪರಿಚಯಸ್ಥರಿಂದಲೇ ಬಾಲಕಿಯ ಅತ್ಯಾಚಾರ| ವಿಡಿಯೋ ವೈರಲ್, ಇಬ್ಬರ ಬಂಧನ Read More »

ಮದುವೆ ಸಮಾರಂಭದಲ್ಲಿ ಸಹೋದರನ ಸಂಬಂಧಿಯೊಡನೆ ಭರ್ಜರಿ ಡ್ಯಾನ್ಸ್ |ಪಿತ್ತ ನೆತ್ತಿಗೇರುತ್ತಿದ್ದಂತೆ ಭಾವಿ ಪತ್ನಿಯ ಕೆಪ್ತಂಡೆಗೆ ಕೊಟ್ಟ ಪತಿ |ಕೆರಳಿದ ವಧುವಿನಿಂದ ವರನ ಬದಲಾವಣೆ

ತಮಿಳುನಾಡು: ವಿವಾಹ ಸಮಾರಂಭದಲ್ಲಿ ಮದುಮಗಳು ಡ್ಯಾನ್ಸ್ ಮಾಡಿದ್ದು, ಈ ಸಂದರ್ಭದಲ್ಲಿ ಆಕ್ರೋಶಗೊಂಡ ವರ ಆಕೆಯ ಕೆನ್ನೆಗೆ ಹೊಡೆದಿದ್ದ, ಇದರ ಪರಿಣಾಮ ಮಧುಮಗಳು ತನ್ನ ಸಹೋದರ ಸಂಬಂಧಿಯನ್ನು ವಿವಾಹವಾಗಿರುವ ಪ್ರಕರಣ ಇದಾಗಿದೆ. ಒಟ್ಟಾಗಿ ಮೂವರ ಜೀವನದ ದಿಕ್ಕನ್ನೇ ಬದಲಿಸಿರುವ ಅಪರೂಪದ ಪ್ರಸಂಗವೊಂದು ತಮಿಳುನಾಡಿನ ಕಡಲೂರಿನಲ್ಲಿ ನಡೆದಿದೆ. ಏನಿದು ಘಟನೆ: ಇದೊಂದು ಸಿನಿಮಾ ಶೈಲಿಯಲ್ಲಿ ನಡೆದ ಘಟನೆಯಂತಿದ್ದು, ಸ್ಥಳೀಯ ಪ್ರಸಿದ್ಧ ಉದ್ಯಮಿಯೊಬ್ಬರ ಮಗಳ ವಿವಾಹ ತಮಿಳುನಾಡಿನ ಕಡಂಪುಲಿಯೂರ್ ನಲ್ಲಿ ಜನವರಿ 20ರಂದು ನಡೆಯಬೇಕಾಗಿತ್ತು. ಪನ್ರುಟಿಯ ವಧು ಹಾಗೂ ಪೆರಿಯಕುಟ್ಟುಪಾಳ್ಯಂನ ವರ

ಮದುವೆ ಸಮಾರಂಭದಲ್ಲಿ ಸಹೋದರನ ಸಂಬಂಧಿಯೊಡನೆ ಭರ್ಜರಿ ಡ್ಯಾನ್ಸ್ |ಪಿತ್ತ ನೆತ್ತಿಗೇರುತ್ತಿದ್ದಂತೆ ಭಾವಿ ಪತ್ನಿಯ ಕೆಪ್ತಂಡೆಗೆ ಕೊಟ್ಟ ಪತಿ |ಕೆರಳಿದ ವಧುವಿನಿಂದ ವರನ ಬದಲಾವಣೆ Read More »

ಮುಂಬೈ: ಬಹುಮಹಡಿ ಕಟ್ಟಡದಲ್ಲಿ ಬೆಂಕಿ| ಏಳು ಮಂದಿ ಸಜೀವ ದಹನ

ಮುಂಬೈ: ಇಲ್ಲಿನ ತದ್ದೇವ್ ಪ್ರದೇಶದ ಭಾಟಿಯಾ ಆಸ್ಪತ್ರೆ ಬಳಿಯ ಕಟ್ಟಡದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ 7 ಜನರು ಸಾವನ್ನಪ್ಪಿದ್ದಾರೆ. ಹಲವರಿಗೆ ಸುಟ್ಟ ಗಾಯಗಳಾಗಿವೆ. ಮೃತಪಟ್ಟ ಏಳು ಮಂದಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ವೇಳೆ ಅವರು ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದವರಲ್ಲಿ 5 ಜನರು ನಾಯರ್ ಆಸ್ಪತ್ರೆಯಲ್ಲಿ, ಒಬ್ಬರು ಕಸ್ತೂರ್ಬಾ ಆಸ್ಪತ್ರೆಯಲ್ಲಿ ಮತ್ತು ಇನ್ನೊಬ್ಬರು ಭಾಟಿಯಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಮಾಹಿತಿ ಪ್ರಕಾರ ಬೆಳಗ್ಗೆ 7.30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಕಟ್ಟಡದ 15ನೇ ಮಹಡಿಯಲ್ಲಿ ಮೊದಲು ಬೆಂಕಿ ಕಾಣಿಸಿಕೊಂಡು ನಂತರ ಮೇಲಕ್ಕೆ

ಮುಂಬೈ: ಬಹುಮಹಡಿ ಕಟ್ಟಡದಲ್ಲಿ ಬೆಂಕಿ| ಏಳು ಮಂದಿ ಸಜೀವ ದಹನ Read More »

ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರಿಗೆ ಕೋವಿಡ್ ಪಾಸಿಟಿವ್

ಬೆಂಗಳೂರು : ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಹೆಚ್.ಡಿ.ದೇವೇಗೌಡ ಅವರಿಗೆ ಕೊರೊನಾ ಪಾಸಿಟಿವ್ ಬಂದಿದೆ. ಅವರು ನಗರದ ಮಣಿಪಾಲ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗೌಡರು ನಿನ್ನೆ ಪರೀಕ್ಷೆಗೆ ಒಳಪಟ್ಟಿದ್ದು, ಕೊರೊನಾ ಸೋಂಕು ದೃಢಪಟ್ಟಿದೆ. ಪಾಸಿಟಿವ್ ಬಂದಿದ್ದರೂ ದೇವೇಗೌಡರು ಆರೋಗ್ಯವಾಗಿದ್ದು, ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. ಕೋವಿಡ್ ಎರಡನೇ ಅಲೆಯಲ್ಲೂ ದೇವೇಗೌಡರಿಗೆ ಕೋವಿಡ್‌ ಪಾಸಿಟಿವ್‌ ಬಂದಿತ್ತು. ಆಗಲೂ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು. ಎರಡು ಡೋಸ್ ಕೋವಿಡ್ ಲಸಿಕೆ ಕೂಡ ದೇವೇಗೌಡರು ಪಡೆದಿದ್ದಾರೆ.

ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡರಿಗೆ ಕೋವಿಡ್ ಪಾಸಿಟಿವ್ Read More »

ಕುಕ್ಕೆ: ಸರ್ಕಾರ ಒಪ್ಪಿದರೆ ಸೇವೆಗೆ ಅವಕಾಶ- ಡಿಸಿ

ಕುಕ್ಕೆಸುಬ್ರಹ್ಮಣ್ಯ: ಧಾರ್ಮಿಕ ಕೇಂದ್ರಗಳಲ್ಲಿ ಪೂಜೆ, ಸೇವೆಗಳಿಗೆ ಬೇಡಿಕೆ ಇರುತ್ತದೆ. ಈ ನಿಟ್ಟಿನಲ್ಲಿ ಮುಂದಿನ ವಾರ ದೇವಸ್ಥಾನಗಳ ಆಡಳಿತ ಮಂಡಳಿ, ಅಧಿಕಾರಿಗಳು, ಜನಪ್ರತಿನಿಧಿಗಳ ಜತೆ ಸಭೆ ನಡೆಸಿ ಚರ್ಚಿಸುತ್ತೇವೆ. ಸರಕಾರ ಒಪ್ಪಿಗೆ ಸೂಚಿಸಿದಲ್ಲಿ ಮುಂದಿನ ವಾರದಿಂದ ಸೇವೆಗಳನ್ನು ಮಾಡಲು ಅವಕಾಶ ಕಲ್ಪಿಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ತಿಳಿಸಿದರು. ಅವರು ಶುಕ್ರವಾರ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ| ಕುಮಾರ್‌ ಜತೆಯಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.

ಕುಕ್ಕೆ: ಸರ್ಕಾರ ಒಪ್ಪಿದರೆ ಸೇವೆಗೆ ಅವಕಾಶ- ಡಿಸಿ Read More »

ಮಂಗಳೂರು: ಹೆರಿಗೆಗೆ ತೆರಳಿದ ತಾಯಿ, ಮಗು ಸಾವು| ಮಗು ಹೊಟ್ಟೆಯಲ್ಲೇ ಸತ್ತರೂ ಹೊರತೆಗೆಯದ ವೈದ್ಯರು

ಮಂಗಳೂರು: ಮಂಗಳೂರಿನ ಕಂಕನಾಡಿಯಲ್ಲಿರುವ ಫಾದರ್ ಮುಲ್ಲರ್ ಆಸ್ಪತ್ರೆಗೆ ಹೆರಿಗೆಗೆ ತೆರಳಿದ್ದ ತಾಯಿ-ಮಗು ಮೃತಪಟ್ಟ ಘಟನೆ ನಡೆದಿದೆ. ವಿಟ್ಲದ ಸವಿತಾ ಎಂಬವರು ಹೆರಿಗೆಗೆ ಮಂಗಳೂರಿನ ಕಂಕನಾಡಿಯಲ್ಲಿರುವ ಫಾದರ್ ಮುಲ್ಲರ್ ಆಸ್ಪತ್ರೆಗೆ ಬಂದಿದ್ದರು. ಆದರೆ, ಆ ಸಂದರ್ಭದಲ್ಲಿ ಗರ್ಭಿಣಿ ಹೊಟ್ಟೆಯಲ್ಲಿರುವ ಮಗು ಸಾವನ್ನಪ್ಪಿದೆ ಎಂದು ವೈದ್ಯರು ಮನೆಯವರ ಗಮನಕ್ಕೆ ತಂದಿದ್ದರು, ಸಂಜೆಯ ವೇಳೆಗೆ ಗರ್ಭಿಣಿ ತಾಯಿ ಮೃತಪಟ್ಟಿದ್ದಾರೆ. ಸವಿತಾ ಕಡೆಯವರು ಮಂಗಳೂರಿನ ಕಂಕನಾಡಿಯಲ್ಲಿರುವ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷ್ಯ ನಡೆದಿದೆ, ವೈದ್ಯರು ಹೊಟ್ಟೆಯಲ್ಲಿದ್ದ ಮಗುವನ್ನು ತೆಗೆಯದೆ ಗರ್ಭಿಣಿ ಮೃತಪಟ್ಟಿದ್ದಾರೆ

ಮಂಗಳೂರು: ಹೆರಿಗೆಗೆ ತೆರಳಿದ ತಾಯಿ, ಮಗು ಸಾವು| ಮಗು ಹೊಟ್ಟೆಯಲ್ಲೇ ಸತ್ತರೂ ಹೊರತೆಗೆಯದ ವೈದ್ಯರು Read More »