Editor

ಸಮಗ್ರ ಸಮಾಚಾರ ದಿನದ ಪ್ರಮುಖ ಸುದ್ದಿಗಳು

ಜ.13ರಿಂದ ‘ಚಂದನ’ ದಲ್ಲಿ ಮತ್ತೆ ಪಾಠ ಪ್ರಸಾರ ಬೆಂಗಳೂರು: ಕೊರೋನಾ ಕಾರಣದಿಂದಾಗಿ 1 ರಿಂದ 9ನೇ ತರಗತಿ ಮಕ್ಕಳಿಗೆ ಭೌತಿಕ ತರಗತಿಗಳು ಕೆಲವು ಜಿಲ್ಲೆಗಳಲ್ಲಿ ಬಂದ್ ಆಗಿದ್ದು, ಮಕ್ಕಳಿಗೆ ಪರ್ಯಾಯ ಕಲಿಕೆ ವ್ಯವಸ್ಥೆ ರೂಪಿಸುವ ಉದ್ದೇಶದಿಂದ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಸೋಮವಾರದಿಂದ ಶುಕ್ರವಾರದವರೆಗೆ ಚಂದನ ವಾಹಿನಿಯಲ್ಲಿ ವಿಡಿಯೋ ಪಾಠ ಪ್ರಸಾರ ಮಾಡಲು ನಿರ್ಧರಿಸಿದೆ. ಜನವರಿ 13ರಿಂದ ದೂರದರ್ಶನ ಚಂದನ ವಾಹಿನಿಯಲ್ಲಿ ವಿಡಿಯೋ ಮೂಲಕ ಪಾಠಗಳನ್ನು ಪ್ರಸಾರಿಸಲಾಗುತ್ತದೆ. ಕಾಲುವೆಯಲ್ಲಿ ಸಿಕ್ಕಿ‌ ಒದ್ದಾಡಿದ ಗಜಪಡೆ| ಅರಣ್ಯ

ಸಮಗ್ರ ಸಮಾಚಾರ ದಿನದ ಪ್ರಮುಖ ಸುದ್ದಿಗಳು Read More »

ಮದುವೆಗೆ ಸಿಂಗರಿಸಿದಂತಿದ್ದ ಕಾರಿನೊಳಗೆ ಗೋವುಗಳ ಗುದ್ದಾಟ| ಅಕ್ರಮ ಗೋಸಾಗಾಟಕ್ಕೆ ಹೊಸ ಮಾರ್ಗ ಕಂಡುಕೊಂಡ ಗೋಕಳ್ಳರು|

ಉಡುಪಿ: ಮದುವೆ ಮನೆಗೆ ಹೊರಟಿರುವಂತೆ ಕಾರಿನ ಹೊರಗಡೆ ಸಿಂಗಾರ ಮಾಡಿ, ಒಳಗಡೆ ಹಸುಗಳ ಕಳ್ಳ ಸಾಗಾಣಿಕೆ ಮಾಡುತ್ತಿದ್ದ ಭಯಾನಕ ಕೃತ್ಯವೊಂದು ಉಡುಪಿಯಲ್ಲಿ ನಡೆದಿದ್ದು, ಖದೀಮರು ಸಿಕ್ಕಿಬಿದ್ದಿದ್ದಾರೆ. ಗೋವುಗಳನ್ನು ಸಾಗಾಟ ಮಾಡಲು ಖದೀಮರು ಕಂಡುಕೊಂಡಿರುವ ಹೊಸ ಮಾರ್ಗ ಎಲ್ಲರನ್ನೂ ದಂಗುಬಡಿಸಿದೆ. ಉಡುಪಿ ಜಿಲ್ಲೆ ಕಾಪು ತಾಲೂಕಿನ ಶಿರ್ವದಲ್ಲಿ ಈ ಘಟನೆ ನಡೆದಿದ್ದು, ಇನ್ನೋವಾ ಕಾರನ್ನು ಮದುವೆ ಕಾರಿನಂತೆ ಸಿಂಗರಿಸಿಕೊಂಡು ಯಾರಿಗೂ ಅನುಮಾನ ಬಾರದಂತೆ ಮಾಡಲಾಗಿದೆ. ಅದರಲ್ಲಿ ಕದ್ದ ಹಸುಗಳನ್ನು ತುಂಬಿಕೊಂಡು ಸಾಗಿಸಲಾಗುತ್ತಿತ್ತು. ವಿಷಯ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರಿಗೆ

ಮದುವೆಗೆ ಸಿಂಗರಿಸಿದಂತಿದ್ದ ಕಾರಿನೊಳಗೆ ಗೋವುಗಳ ಗುದ್ದಾಟ| ಅಕ್ರಮ ಗೋಸಾಗಾಟಕ್ಕೆ ಹೊಸ ಮಾರ್ಗ ಕಂಡುಕೊಂಡ ಗೋಕಳ್ಳರು| Read More »

ಲೋನ್ ಆ್ಯಪ್ ಗಳ ಮೂಲಕ ಸಾಲ ಪಡೆಯಲು ಇಚ್ಛಿಸಿದ್ದೀರಾ? ಹಾಗಾದ್ರೆ ಮಂಗಳೂರು ಕಮಿಷನರ್ ನೀಡಿದ ಮಾಹಿತಿ ತಿಳಿದುಕೊಳ್ಳಿ

ಮಂಗಳೂರು: ಲೋನ್ ಆಯಪ್ ಮೂಲಕ ಸಾಲ ಪಡೆದು ಕಿರುಕುಳ ತಡೆಯಲಾರದೆ ಎರಡು ದಿನಗಳ ಹಿಂದೆ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ. ಹೀಗಾಗಿ, ಸಾರ್ವಜನಿಕರು ಲೋನ್ ಆ್ಯಪ್ ಇನ್ಸ್ಟಾಲ್ ಮಾಡುವಾಗ ಜಾಗ್ರತೆಯಿಂದ ಇರುವಂತೆ ಮಂಗಳೂರು ‌ನಗರ ಪೊಲೀಸ್ ಕಮೀಷನರ್ ಸಲಹೆ ನೀಡಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಎರಡು ದಿನಗಳ ಹಿಂದೆ ಸುರತ್ಕಲ್​ನ ಕುಳಾಯಿಯಲ್ಲಿ ಯುವಕನೋರ್ವ ತನ್ನ ಕಚೇರಿಯಲ್ಲಿ ಬಾತ್ ಟವೆಲ್ ಮೂಲಕ ನೇಣು ಬಿಗಿದು‌ಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದ ಬಗ್ಗೆ ವಿವರಿಸಿದರು. ಯುವಕ

ಲೋನ್ ಆ್ಯಪ್ ಗಳ ಮೂಲಕ ಸಾಲ ಪಡೆಯಲು ಇಚ್ಛಿಸಿದ್ದೀರಾ? ಹಾಗಾದ್ರೆ ಮಂಗಳೂರು ಕಮಿಷನರ್ ನೀಡಿದ ಮಾಹಿತಿ ತಿಳಿದುಕೊಳ್ಳಿ Read More »

ಹೈಕೋರ್ಟ್ ಆದೇಶಿಸಿದರೆ ಪಾದಯಾತ್ರೆ ಕೈಬಿಡಲು ಸಿದ್ಧ – ಸಿದ್ದರಾಮಯ್ಯ

ರಾಮನಗರ: ಹೈಕೋರ್ಟ್ ಆದೇಶದ ವಿರುದ್ಧ ಕಾಂಗ್ರೆಸ್ ನಡೆದುಕೊಳ್ಳುವುದಿಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಹೈಕೋರ್ಟ್ ಛೀಮಾರಿ ಹಾಕಿದ ಬೆನ್ನಲ್ಲಿಯೇ ಅವರು ಈ ಕುರಿತು ಮಾತನಾಡಿದ್ದಾರೆ. ಪಾದಯಾತ್ರೆ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಕಾನೂನಿಗೆ ತಲೆ ಬಾಗುತ್ತೇವೆ. ಹೈಕೋರ್ಟ್ ಪಾದಯಾತ್ರೆ ನಿಲ್ಲಿಸಲು ಸೂಚಿಸಿದರೆ, ನಾವು ಕೋರ್ಟ್ ಗೆ ತಲೆ ಬಾಗುತ್ತೇವೆ ಎಂದು ಹೇಳಿದ್ದಾರೆ. ಕಾಂಗ್ರೆಸ್ ಯಾವಾಗಲೂ ಕಾನೂನನ್ನು ಗೌರವಿಸುತ್ತದೆ. ಆದರೆ, ಬಿಜೆಪಿಗೆ ಕಾನೂನಿನ ಬಗ್ಗೆ ಗೌರವವಿಲ್ಲ. ಕೋವಿಡ್ ನಿಯಮವನ್ನು ಉಲ್ಲಂಘಿಸಿದ್ದು, ಬಿಜೆಪಿಯೇ ಹೊರತು, ಕಾಂಗ್ರೆಸ್ ಅಲ್ಲ.

ಹೈಕೋರ್ಟ್ ಆದೇಶಿಸಿದರೆ ಪಾದಯಾತ್ರೆ ಕೈಬಿಡಲು ಸಿದ್ಧ – ಸಿದ್ದರಾಮಯ್ಯ Read More »

ಕಡಬ: ಆ್ಯಸಿಡ್ ಸೇವಿಸಿ ವ್ಯಕ್ತಿ ಆತ್ಮಹತ್ಯೆ

ಕಡಬ: ರಬ್ಬರ್ ಗೆ ಬೆರೆಸುವ ಆಸಿಡ್ ಸೇವಿಸಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ತಾಲೂಕಿನ ಕುದ್ಮಾರು ಗ್ರಾಮದಲ್ಲಿ ನಡೆದಿದೆ. ಮೃತಪಟ್ಟವರನ್ನು ಮೂಲತಃ ಕೇರಳದ ಶ್ರೀಧರನ್ ಕಾಣಿ ಎಂದು ಗುರುತಿಸಲಾಗಿದೆ. ಶ್ರೀಧರನ್ ಕುದ್ಮಾರಿನ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದು, ರಬ್ಬರ್ ಟ್ಯಾಪಿಂಗ್ ವೃತ್ತಿ ಮಾಡುತ್ತಿದ್ದರು. ಇವರು ರಬ್ಬರ್ ಶೀಟ್ ಮಾಡಲು ಉಪಯೋಗಿಸುವ ಆಸಿಡ್ ನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಈ ವೇಳೆ ಜೊತೆಗಿದ್ದ ರೆಝಿ ಆರ್ ಸೋಮರಾಜ್ ಎಂಬವರು ಸ್ಥಳೀಯರ ಸಹಾಯದಿಂದ ಪುತ್ತೂರು ಆಸ್ಪತ್ರೆಗೆ ದಾಖಲಿಸಿ, ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ

ಕಡಬ: ಆ್ಯಸಿಡ್ ಸೇವಿಸಿ ವ್ಯಕ್ತಿ ಆತ್ಮಹತ್ಯೆ Read More »

ಕರ್ನಾಟಕ ಬ್ಯಾಂಕ್ ನಲ್ಲಿ ಮ್ಯಾನೇಜರ್ ಹುದ್ದೆಗೆ ನೇಮಕಾತಿ

ಮಂಗಳೂರು: ಕರ್ನಾಟಕ ಬ್ಯಾಂಕಿನಲ್ಲಿ ಅಗತ್ಯವಿರುವ ಮ್ಯಾನೇಜರ್ ಹುದ್ದೆಯ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆ: ಮ್ಯಾನೇಜರ್ (Scale -2) ಚಾರ್ಟರ್ಡ್ ಅಕೌಂಟೆಂಟ್ಸ್ ಕರ್ತವ್ಯ ಸ್ಥಳ: ಮಂಗಳೂರು ಶೈಕ್ಷಣಿಕ ಅರ್ಹತೆ: ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಚಾರ್ಟರ್ಡ್ ಅಕೌಂಟೆಂಟ್ ಶೈಕ್ಷಣಿಕ ಅರ್ಹತೆ ಹೊಂದಿರಬೇಕು. (01-12-2021ಕ್ಕೆ ಚಾರ್ಟರ್ಡ್ ಅಕೌಂಟೆಂಟ್ ಆಗಿರಬೇಕು) ವಯೋಮಾನ: ಅಭ್ಯರ್ಥಿಗಳಿಗೆ ದಿನಾಂಕ 01/12/2021ಕ್ಕೆ ಒಳಗೊಂಡಂತೆ ಗರಿಷ್ಠ 30 ವರ್ಷ ವಯೋಮಾನ ನಿಗದಿಪಡಿಸಲಾಗಿದೆ.(ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿಯಲ್ಲಿ ಸಡಿಲಿಕೆ) ವೇತನ: ಮಾಸಿಕ ರೂ.

ಕರ್ನಾಟಕ ಬ್ಯಾಂಕ್ ನಲ್ಲಿ ಮ್ಯಾನೇಜರ್ ಹುದ್ದೆಗೆ ನೇಮಕಾತಿ Read More »

ಶಾಲೆಗಳಿಗೆ ರಜೆ ಕೊಡಲು ಡಿಸಿಗಳಿಗೆ ಅಧಿಕಾರ – ಸಚಿವ ನಾಗೇಶ್

ಬೆಂಗಳೂರು: ಶಾಲೆ-ಕಾಲೇಜುಗಳಲ್ಲಿ ಕೊರೊನಾ ಸ್ಫೋಟ ಹಿನ್ನಲೆಯಲ್ಲಿ ಶಾಲೆಗಳನ್ನು ಬಂದ್ ಮಾಡಬೇಕಾ, ಮುಂದುವರೆಸಬೇಕೇ? ಬೇಡವೇ? ಎಂಬ ವಿಚಾರವಾಗಿ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಮಹತ್ವದ ಸಭೆ ನಡೆಸಿದ್ದಾರೆ. ‘ಗ್ರೌಂಡ್ ರಿಯಾಲಿಟಿ ಆಧರಿಸಿ, ಮಕ್ಕಳಿಗೆ ಯಾವುದೇ ತೊಂದರೆಯಾಗದಂತೆ ಶಾಲೆಗಳನ್ನು ಮುಂದುವರೆಸುವ ಪ್ರಯತ್ನವನ್ನು ನಾವು ಮಾಡುತ್ತೇವೆ. ಟಾಸ್ಕ್‌ಫೋರ್ಸ್ ಜೊತೆಯೂ ಸಭೆ ನಡೆಸಿದ್ದೇವೆ. ತಾಲ್ಲೂಕು ಹಂತಗಳಲ್ಲಿ ಡಿಸಿಗೆ ಅಧಿಕಾರ ಕೊಟ್ಟಿದ್ದೇವೆ. ಸೋಂಕು ಹೆಚ್ಚಾದರೆ ಮತ್ತೊಮ್ಮೆ ಚರ್ಚೆಗೆ ಕೂರುತ್ತೇವೆ’ ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿದ್ದಾರೆ.

ಶಾಲೆಗಳಿಗೆ ರಜೆ ಕೊಡಲು ಡಿಸಿಗಳಿಗೆ ಅಧಿಕಾರ – ಸಚಿವ ನಾಗೇಶ್ Read More »

ಚೆಕ್ ಬೌನ್ಸ್ ಪ್ರಕರಣ| ಕೊಣಾಜೆ ಗ್ರಾ.ಪಂ ಅಧ್ಯಕ್ಷೆ ನಾಪತ್ತೆ|

ಉಳ್ಳಾಲ: ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಣಾಜೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿಯಾಗಿದ್ದು, ಕೊಣಾಜೆ ಠಾಣಾ ಪೊಲೀಸರು ಅವರು ತಲೆಮರೆಸಿಕೊಂಡಿದ್ದಾಗಿ ತಿಳಿಸಿದ್ದಾರೆ. ಗ್ರಾ.ಪಂ ಕಾಂಗ್ರೆಸ್ ಬೆಂಬಲಿತ ಅಧ್ಯಕ್ಷೆ ಚಂಚಲಾಕ್ಷಿ ತಲೆಮರೆಸಿಕೊಂಡಿದ್ದಾರೆ. ಈಕೆ ಮಮತಾ ಶೈನಿ ಡಿಸೋಜ ಎಂಬುವರಿಗೆ ಅಂದಾಜು 3 ಲಕ್ಷ ರೂ. ಚೆಕ್ ನೀಡಿದ್ದು, ಇದು ಬೌನ್ಸ್ ಆಗಿದೆ. ಈ ಪ್ರಕರಣದಲ್ಲಿ ಚಂಚಲಾಕ್ಷಿ ಆರೋಪಿಯಾಗಿದ್ದು, ಇದೀಗ ತಲೆಮರೆಸಿಕೊಂಡಿದ್ದಾರೆ. 2020ರ ಜ.6 ರಂದು ಪ್ರಕರಣ ಸಂಬಂಧ ಕೇಸ್​​ ದಾಖಲಾಗಿತ್ತು. ಆ ಬಳಿಕ ನ್ಯಾಯಾಲಯದಲ್ಲಿ

ಚೆಕ್ ಬೌನ್ಸ್ ಪ್ರಕರಣ| ಕೊಣಾಜೆ ಗ್ರಾ.ಪಂ ಅಧ್ಯಕ್ಷೆ ನಾಪತ್ತೆ| Read More »

ಕಾಲುವೆಯಲ್ಲಿ ಸಿಕ್ಕಿ‌ ಒದ್ದಾಡಿದ ಗಜಪಡೆ| ಅರಣ್ಯ ಇಲಾಖೆಯಿಂದ ಯಶಸ್ವಿ ಕಾರ್ಯಾಚರಣೆ|

ಮೈಸೂರು : ಕಾಲುವೆಯಲ್ಲಿ ಸಿಲುಕಿದ್ದ ಆನೆಗಳ ಹಿಂಜನ್ನು ಅರಣ್ಯಾಧಿಕಾರಿಗಳು ರಕ್ಷಿಸಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಕಾಲುವೆಯಿಂದ ಹೊರಬರಲು ಆನೆಗಳು ಹರಸಾಹಸ ಪಡುತ್ತಿರುವ ವಿಡಿಯೋ ಆನ್‌ಲೈನ್‌ನಲ್ಲಿ ಭಾರಿ ಸದ್ದು ಮಾಡಿತ್ತು. ಸಾಮಾಜಿಕ ಮಾಧ್ಯಮ ಸೈಟ್‌ಗಳಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾದ ವಿಡಿಯೋದಲ್ಲಿ, ಐದು ಆನೆಗಳು ಕಾಲುವೆಯಿಂದ ಹೊರಬರಲು ಅನೇಕ ಬಾರಿ ಪ್ರಯತ್ನಿಸಿದ್ರೂ ಸಾಧ್ಯವಾಗಿಲ್ಲ. ಅವುಗಳು ಕಾಲುವೆ ಏರಲು ಪ್ರಯತ್ನಿಸಿದರೂ ಜಾರಿ ಕಾಲುವೆಗೆ ಬೀಳುತ್ತಿದ್ದವು. ಕಾಲುವೆಯಿಂದ ಹೊರಬರಲು ಹೆಣಗಾಡುತ್ತಿರುವ ಗಜಪಡೆಯ ವಿಡಿಯೋವನ್ನು ಟ್ವಿಟ್ಟರ್ ನಲ್ಲಿ ಭಾರತೀಯ ಅರಣ್ಯ ಸೇವೆ (ಐಎಫ್‌ಎಸ್) ಅಧಿಕಾರಿ

ಕಾಲುವೆಯಲ್ಲಿ ಸಿಕ್ಕಿ‌ ಒದ್ದಾಡಿದ ಗಜಪಡೆ| ಅರಣ್ಯ ಇಲಾಖೆಯಿಂದ ಯಶಸ್ವಿ ಕಾರ್ಯಾಚರಣೆ| Read More »

ರಾಷ್ಟ್ರೀಯ ಯುವ ದಿನಾಚರಣೆ| ವಿವೇಕಾನಂದರ ಆದರ್ಶ ನಮ್ಮದಾಗಲಿ|

ಒಬ್ಬ ಮನುಷ್ಯ ತನ್ನ ಜೀವನದಲ್ಲಿ ಎಷ್ಟು ಅಧ್ಯಯನ ಮಾಡಬಹುದು; ಎಷ್ಟು ಮಾತನಾಡಬಹುದು ಎಂದು ಲೆಕ್ಕ ಹಾಕಿ ಒಂದು ನಿಷ್ಕರ್ಶೆಗೆ ಬಂದರೆ, ಆ ಎಲ್ಲ ಲೆಕ್ಕಾಚಾರಗಳನ್ನು ಮೀರಿ ನಿಲ್ಲುವವರು ಸ್ವಾಮಿ ವಿವೇಕಾನಂದರು. ‌ಅವರ ವಿಚಾರಗಳು ಅಷ್ಟು ಆಳ, ಅಷ್ಟು ವಿಸ್ತಾರವಾದವು. ಬದುಕಿದ್ದು ಕೇವಲ 39 ವರ್ಷಗಳಾದರೂ, ವಿಶ್ವದ ಮೇಲೆ ಅವರ ಪ್ರಭಾವ ಮಾತ್ರ ಅನನ್ಯ. ತಲೆಮಾರಿನಿಂದ ತಲೆಮಾರಿಗೆ ಅವರು ಪ್ರೇರಣೆಯ ಸ್ರೋತವಾಗಿಯೇ ಇದ್ದಾರೆ; ಮುಂದೆಯೂ ಇರುವುದರಲ್ಲಿ ಯಾವ ಸಂಶಯವೂ ಇಲ್ಲ. ಸಾಧಾರಣವಾಗಿ, ಯಾವುದೇ ಮಹಾಪುರುಷರೊಬ್ಬರ ವಿಚಾರಗಳು ದೀರ್ಘಕಾಲ ನಿಲ್ಲುವುದರಿಂದ,

ರಾಷ್ಟ್ರೀಯ ಯುವ ದಿನಾಚರಣೆ| ವಿವೇಕಾನಂದರ ಆದರ್ಶ ನಮ್ಮದಾಗಲಿ| Read More »