Editor

ಹಾಸನ: ಪತ್ನಿ ಕಿರುಕುಳಕ್ಕೆ ಇಂಜಿನಿಯರ್ ಆತ್ಮಹತ್ಯೆ

ಸಮಗ್ರ ನ್ಯೂಸ್: ಪತ್ನಿ ಕಿರುಕುಳಕ್ಕೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದ್ದು, ನದಿಗೆ ಹಾರಿ ಇಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ತಾಲೂಕಿನ ಗೊರೂರು ಶೆಟ್ಟಿಹಳ್ಳಿಯಲ್ಲಿ ಘಟನೆ ನಡೆದಿದೆ. ಇಂದಿರಾನಗರದ ನಿವಾಸಿ ಜೆಜೆ ಪ್ರಮೋದ್ ಎಂಬುವವರು ಹೇಮಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಪತ್ನಿ ಕಿರುಕುಳಕ್ಕೆ ಬೇಸತ್ತು ನದಿಗೆ ಹಾರಿ ಎಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಮೋದ್ ಹಾಗೂ ಅವರ ಪತ್ನಿ ನಡುವೆ ಆಗಾಗ ಜಗಳ ನಡೆಯುತ್ತಿತ್ತು. ಪತ್ನಿಯ ತಮ್ಮಂದಿರು ಕೂಡ ಪ್ರಮೋದ್ ಗೆ ಕಿರುಕುಳ ನೀಡುತ್ತಿದ್ದರು ಎಂಬ […]

ಹಾಸನ: ಪತ್ನಿ ಕಿರುಕುಳಕ್ಕೆ ಇಂಜಿನಿಯರ್ ಆತ್ಮಹತ್ಯೆ Read More »

ದ್ವಾದಶ ರಾಶಿಗಳ ವರ್ಷ ಭವಿಷ್ಯ

ಸಮಗ್ರ ನ್ಯೂಸ್: 2024ರ ಕ್ಯಾಲೆಂಡರ್ ವರ್ಷವನ್ನು ಕಳೆದು 2025ರ ಇಸವಿಗೆ ಕಾಲಿಟ್ಟಿದ್ದೇವೆ. ಈ ವರ್ಷದಲ್ಲಿ ಯಾವ ರಾಶಿಗೆ ಯಾವ ಫಲ? ಯಾರಿಗೆ ಈ ವರ್ಷ ಅದೃಷ್ಟ ತಂದುಕೊಡುತ್ತೆ? ಯಾರಿಗೆ ಲಾಭ? ದ್ವಾದಶ ರಾಶಿಗಳ ಈ ವರ್ಷದ ಫಲಾಫಲಗಳೇನು? ತಿಳಿಯೋಣ ಬನ್ನಿ… ಮೇಷ ರಾಶಿ:ಈ ರಾಶಿಯಲ್ಲಿ ಜನಿಸಿದ ವ್ಯಕ್ತಿಗಳಿಗೆ 2025 ರ ಆರಂಭವು ಅನುಕೂಲಕರ ಸಮಯವಾಗಿದೆ. ನಿಮ್ಮ ಮನೆಯಲ್ಲಿ ಯಾರಾದರೂ ಈ ವರ್ಷ ವೈವಾಹಿಕ ಜೀವನಕ್ಕೆ ಕಾಲಿಡುವ ಸಾಧ್ಯತೆಯಿದೆ. ಮಕ್ಕಳಿಲ್ಲದವರಿಗೆ, ನೀವು ಕುಟುಂಬವನ್ನು ಪ್ರಾರಂಭಿಸುವ ಅವಕಾಶವಿದೆ. ಪ್ರೇಮ ಜೀವನಕ್ಕೆ

ದ್ವಾದಶ ರಾಶಿಗಳ ವರ್ಷ ಭವಿಷ್ಯ Read More »

ಮಂಗಳೂರು: ರಸ್ತೆ ಅಪಘಾತದಲ್ಲಿ ಯುವ ಯಕ್ಷಗಾನ ಕಲಾವಿದ ಸಾವು

ಸಮಗ್ರ ನ್ಯೂಸ್: ಮಂಗಳೂರು ನಗರ ಹೊರವಲಯದ ಅರ್ಕುಳ ಜಂಕ್ಷನ್‌ ಬಳಿ ಮಂಗಳವಾರ ಸಂಜೆ ನಡೆದ ರಸ್ತೆ ಅಪಘಾತದಲ್ಲಿ ಕಾಲೇಜು ವಿದ್ಯಾರ್ಥಿ, ಯಕ್ಷಗಾನ ಕಲಾವಿದ ಮೃತಪಟ್ಟಿದ್ದಾರೆ. ವಿಟ್ಲ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ವರ್ಷದ ಸ್ನಾತಕೋತ್ತರ ಸಮಾಜಕಾರ್ಯ ವಿಭಾಗದ ವಿದ್ಯಾರ್ಥಿಯಾಗಿದ್ದು, ಸಸಿಹಿತ್ಲು ಭಗವತೀ ಯಕ್ಷಗಾನ ಮೇಳದ ಕಲಾವಿದ ಪ್ರವೀತ್‌ ಕುಮಾರ್‌ (22) ಮೃತಪಟ್ಟವರು. ಮೇಳದಲ್ಲಿ ಸ್ತ್ರೀವೇಷಧಾರಿಯಾಗಿದ್ದ ಪ್ರವೀತ್‌ ಮಂಗಳವಾರ ಬಜಪೆ ಕಂದಾವರ ಬೈಲಿನಲ್ಲಿ ನಿಗದಿಯಾಗಿದ್ದ ಮೇಳದ ಯಕ್ಷಗಾನಕ್ಕೆ ತೆರಳುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಅರ್ಕುಳ ಜಂಕ್ಷನ್‌ ಬಳಿ ಬೈಕ್‌

ಮಂಗಳೂರು: ರಸ್ತೆ ಅಪಘಾತದಲ್ಲಿ ಯುವ ಯಕ್ಷಗಾನ ಕಲಾವಿದ ಸಾವು Read More »

ಸಂಸದ ತೇಜಸ್ವಿ ಸೂರ್ಯಗೆ ಕೂಡಿ ಬಂದ ಕಂಕಣ ಬಲ| ಯಾವಾಗ ಮದುವೆ? ಯಾರು ಕೈ ಹಿಡಿವ ಕುವರಿ? ಇಲ್ಲಿದೆ ಡೀಟೈಲ್ಸ್

ಸಮಗ್ರ ನ್ಯೂಸ್: ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯಗೆ ಮುಂದಿನ ಮಾರ್ಚ್‌ 4ರಂದು ಹಸಮಣೆ ಏರಲಿದ್ದಾರೆ. ತೇಜಸ್ವಿ ಸೂರ್ಯಗೆ ಕಂಕಣ ಭಾಗ್ಯ ಕೂಡಿ ಬಂದಿದ್ದು, ಗಾಯಕಿ, ಭರತನಾಟ್ಯ ಕಲಾವಿದೆಯಾಗಿರುವ ಚೆನ್ನೈ ಮೂಲದ ಸಿವಶ್ರೀ ಸ್ಕಂದಕುಮಾರ್ ಎನ್ನುವವರನ್ನು ವರಿಸಲು ಸಜ್ಜಾಗಿದ್ದಾರೆ. ಸಿವಶ್ರೀ ಸ್ಕಂದಪ್ರಸಾದ್ ಅವರು ಶಾಸ್ತ್ರೀಯ ಸಂಗೀತ ಗಾಯಕಿ ಹಾಗೂ ಭರತನಾಟ್ಯ ಕಲಾವಿದೆ. ಶಾಸ್ತ್ರ ವಿಶ್ವವಿದ್ಯಾಲಯದಲ್ಲಿ ಬಯೋ ಎಂಜಿನಿಯರಿಂಗ್ ವಿಷಯದಲ್ಲಿ ಬಿ.ಟೆಕ್ ಪದವಿಯನ್ನು ಹಾಗೂ ಚೆನ್ನೈ ವಿಶ್ವವಿದ್ಯಾನಿಲಯದಿಂದ ಭರತನಾಟ್ಯದಲ್ಲಿ ಎಂಎ ಮತ್ತು ಚೆನ್ನೈ ಸಂಸ್ಕೃತ ಕಾಲೇಜಿನಲ್ಲಿ ಸಂಸ್ಕೃತದಲ್ಲಿ ಎಂಎ

ಸಂಸದ ತೇಜಸ್ವಿ ಸೂರ್ಯಗೆ ಕೂಡಿ ಬಂದ ಕಂಕಣ ಬಲ| ಯಾವಾಗ ಮದುವೆ? ಯಾರು ಕೈ ಹಿಡಿವ ಕುವರಿ? ಇಲ್ಲಿದೆ ಡೀಟೈಲ್ಸ್ Read More »

ಮಂಗಳೂರು: ತನ್ನ ಮೂವರು ಮಕ್ಕಳ ಕೊಂದ ಪಾಪಿಗೆ ಶಿಕ್ಷೆ ಪ್ರಕಟ

ಸಮಗ್ರ ನ್ಯೂಸ್: ತನ್ನ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ಕೊಲೆ ಮಾಡಿದ ಹಾಗೂ ಪತ್ನಿಯನ್ನೂ ಬಾವಿಗೆ ದೂಡಿ ಕೊಲ್ಲಲು ಯತ್ನಿಸಿದ್ದ ಪ್ರಕರಣದಲ್ಲಿ ಮಂಗಳೂರು ತಾಲ್ಲೂಕಿನ ತಾಳಿಪಾಡಿ ಗ್ರಾಮದ ಪದ್ಮನೂರು ಶೆಟ್ಟಿಕಾಡು ಮನೆಯ ಹಿತೇಶ್‌ ಶೆಟ್ಟಿಗಾರ್‌ಗೆ ಇಲ್ಲಿನ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಮರಣ ದಂಡನೆ ಶಿಕ್ಷೆಯನ್ನು ಮಂಗಳವಾರ ವಿಧಿಸಿದೆ. ತಾಳಿಪಾಡಿ ಗ್ರಾಮದ ಪದ್ಮನೂರು ಎಂಬಲ್ಲಿ 2022ರ ಜೂನ್ 23ರಂದು ಸಂಜೆ 5:15ಕ್ಕೆ ಹಿತೇಶ್ ಶೆಟ್ಟಿಗಾರ್ ತನ್ನ ಮಕ್ಕಳಾದ ರಶ್ಮೀತಾ (13), ಉದಯ ಕುಮಾರ (11),

ಮಂಗಳೂರು: ತನ್ನ ಮೂವರು ಮಕ್ಕಳ ಕೊಂದ ಪಾಪಿಗೆ ಶಿಕ್ಷೆ ಪ್ರಕಟ Read More »

ಹೈನುಗಾರರಿಗೆ ಹೊಸವರ್ಷದ ಗಿಪ್ಟ್ ನೀಡಿದ ಕೆಎಂಎಫ್| ಹಾಲಿನ ಪ್ರೋತ್ಸಾಹ ಧನ‌ ಹೆಚ್ಚಳ

ಸಮಗ್ರ ನ್ಯೂಸ್: ಜನವರಿ 1ರಿಂದ ಹಾಲು ಉತ್ಪಾದಕರಿಗೆ ವಿಶೇಷ ಪ್ರೋತ್ಸಾಹ ಧನವನ್ನು 1 ರೂ.ನಿಂದ 1.50 ರೂ.ಗೆ ಹೆಚ್ಚಳ ಮಾಡಲು ಕಳೆದ ನವೆಂಬರ್ 30ರಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಅಂತೆಯೇ 4.5 ಫ್ಯಾಟ್ ನಿಂದ 8.5 ಎಸ್‌ಎಂಎಫ್ ಗೆ ರೈತರಿಗೆ ನೀಡುವ ದರವನ್ನು 36.74 ರೂ.ನಿಂದ 36.95 ರೂ.ಗೆ ಏರಿಕೆ ಮಾಡಲಾಗಿದೆ ಎಂದು ದಕ್ಷಿಣ ಕನ್ನಡ ಹಾಲು ಒಕ್ಕೂಟದ ಅಧ್ಯಕ್ಷ ಸುಚರಿತ್ ಶೆಟ್ಟಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಹೈನುಗಾರರಿಗೆ ಹಾಲು ಉತ್ಪಾದನೆಗೆ

ಹೈನುಗಾರರಿಗೆ ಹೊಸವರ್ಷದ ಗಿಪ್ಟ್ ನೀಡಿದ ಕೆಎಂಎಫ್| ಹಾಲಿನ ಪ್ರೋತ್ಸಾಹ ಧನ‌ ಹೆಚ್ಚಳ Read More »

ದೇಶದ ಮುಖ್ಯಮಂತ್ರಿಗಳ ಆಸ್ತಿ ವಿವರ ಪ್ರಕಟ| ಸಿದ್ದರಾಮಯ್ಯ ಮೂರ‌ನೇ ಅತೀ ಶ್ರೀಮಂತ ಸಿಎಂ

ಸಮಗ್ರ ನ್ಯೂಸ್: ದೇಶದ ಮುಖ್ಯಮಂತ್ರಿಗಳ ಆಸ್ತಿ ವಿವರವನ್ನು ಅಸೋಸಿಯೇಷನ್ ​​​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಬಿಡುಗಡೆ ಮಾಡಿದ್ದು, ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 51 ಕೋಟಿ ರೂ. ಮೌಲ್ಯದ ಆಸ್ತಿಯೊಂದಿಗೆ ಶ್ರೀಮಂತ ಸಿಎಂಗಳ ಪಟ್ಟಿಯಲ್ಲಿ 3 ನೇ ಸ್ಥಾನದಲ್ಲಿದ್ದಾರೆ. ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಅವರು 931 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಹೊಂದಿರುವ ಭಾರತದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿಯಾಗಿದ್ದಾರೆ, ಆದರೆ ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಕೇವಲ 15 ಲಕ್ಷ ರೂಪಾಯಿಗಳೊಂದಿಗೆ ಅತ್ಯಂತ ಬಡವ

ದೇಶದ ಮುಖ್ಯಮಂತ್ರಿಗಳ ಆಸ್ತಿ ವಿವರ ಪ್ರಕಟ| ಸಿದ್ದರಾಮಯ್ಯ ಮೂರ‌ನೇ ಅತೀ ಶ್ರೀಮಂತ ಸಿಎಂ Read More »

ಖ್ಯಾತ ಹಾಸ್ಯ ಭಾಷಣಕಾರ್ತಿ ಸುಧಾ ಬರಗೂರುಗೆ ಪತಿ ವಿಯೋಗ

ಸಮಗ್ರ ನ್ಯೂಸ್: ಪ್ರಖ್ಯಾತ ವಾಗ್ಮಿ, ಹಾಸ್ಯ ಭಾಷಣದಿಂದಲೇ ಜನಪ್ರಿಯರಾಗಿದ್ದ ಸುಧಾ ಬರಗೂರು ಅವರ ಪತಿ ಜಯಪ್ರಕಾಶ್‌ ಬರಗೂರು ನಿಧನರಾಗಿದ್ದಾರೆ. ಬಹಳ ಕಾಲದಿಂದ ಅನಾರೋಗ್ಯದಲ್ಲಿದ್ದ ಜಯಪ್ರಕಾಶ್‌ ಬರಗೂರು ಸೋಮವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 67 ವರ್ಷ ವಯಸ್ಸಾಗಿತ್ತು. ಜಯಪ್ರಕಾಶ್‌ ಬರಗೂರು ಅವರಿಗೆ ಕೆಲವು ವರ್ಷಗಳಿಂದ ಹೃದಯ ಸಮಸ್ಯೆ ಭಾದಿಸುತ್ತಿತ್ತು. ಜಯದೇವ ಆಸ್ಪತ್ರೆಯ ನಿರ್ದೇಶಕರಾಗಿದ್ದ ಹಾಗೂ ಹಾಲಿ ಸಂಸದರಾಗಿರುವ ಡಾ.ಸಿಎನ್‌ ಮಂಜುನಾಥ್‌ ಇವರಿಗೆ ಶಸ್ತ್ರಚಿಕಿತ್ಸೆಯನ್ನೂ ಮಾಡಿದ್ದರು. ಈ ಬಗ್ಗೆ ಸ್ವತಃ ಸುಧಾರ ಬರಗೂರು ವೀಕೆಂಡ್‌ ವಿತ್‌ ರಮೇಶ್‌

ಖ್ಯಾತ ಹಾಸ್ಯ ಭಾಷಣಕಾರ್ತಿ ಸುಧಾ ಬರಗೂರುಗೆ ಪತಿ ವಿಯೋಗ Read More »

ಕಾಸರಗೋಡು: ಪ್ರತ್ಯೇಕ ಪ್ರಕರಣಗಳಲ್ಲಿ ಮೂರು ವರ್ಷದ ಮಗು ಸೇರಿ ನಾಲ್ಕು ಮಕ್ಕಳು ದುರ್ಮರಣ

ಸಮಗ್ರ ನ್ಯೂಸ್: ಮನೆಯ ಹೊರಗಿನ ಅರ್ತ್‌ ತಂತಿಯಿಂದ ವಿದ್ಯುತ್‌ ಶಾಕ್‌ ತಗುಲಿ ಮೂರೂವರೆ ವರ್ಷದ ಮಗು ಸಾವಿಗೀಡಾದ ಘಟನೆ ಕಾಸರಗೋಡು ಜಿಲ್ಲೆಯ ಗಾಳಿಮುಖದಲ್ಲಿ ನಡೆದಿದೆ. ಗಾಳಿಮುಖ ನಿವಾಸಿ ಶಿನ್ಸಾದ್‌ ಅವರ ಪುತ್ರ ಮುಹಮ್ಮದ್‌ ಶಿನ್ಸಾದ್‌ ಸಾವಿಗೀಡಾದ ಬಾಲಕ. ಡಿ.29 ರಂದು ಸಂಜೆ 4 ಗಂಟೆಗೆ ಮನೆಯ ಹೊರಗೆ ಆಟ ಆಡುತ್ತಿದ್ದಾಗ ಅರ್ತ್‌ ತಂತಿಯನ್ನು ಸ್ಪರ್ಶಿಸಿದಾಗ ವಿದ್ಯುತ್‌ ಶಾಕ್‌ ತಗುಲಿದೆ. ವಿಷಯ ತಿಳಿದು ಮಗುವಿನ ಅಜ್ಜ ಮುಹಮ್ಮದ್‌ ಶಾಫಿ ಮನೆಯ ವಿದ್ಯುತ್‌ ಸಂಪರ್ಕವನ್ನು ಕಡಿತಗೊಳಿಸಿದರೂ ರಕ್ಷಿಸಲು ಸಾಧ್ಯವಾಗಲಿಲ್ಲ. ಮಗುವನ್ನು

ಕಾಸರಗೋಡು: ಪ್ರತ್ಯೇಕ ಪ್ರಕರಣಗಳಲ್ಲಿ ಮೂರು ವರ್ಷದ ಮಗು ಸೇರಿ ನಾಲ್ಕು ಮಕ್ಕಳು ದುರ್ಮರಣ Read More »

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಹಿನ್ನೆಲೆ| ಡಿ.27ರಂದು ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ

ಸಮಗ್ರ ನ್ಯೂಸ್: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಡಿ.27ರಂದು ಸರಕಾರಿ ರಜೆ ಘೋಷಣೆ ಮಾಡಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಆದೇಶ ಹೊರಡಿಸಿದ್ದಾರೆ. ರಾಜ್ಯದಲ್ಲಿ ಏಳು ದಿನಗಳವರೆಗೆ ಶೋಕಾಚರಣೆಯ ಜೊತೆಗೆ ನಾಳೆ ಸರಕಾರಿ ರಜೆ ಘೋಷಣೆ ಮಾಡಲಾಗಿದೆ. ಬೆಳಗಾವಿಯಲ್ಲಿ ನಡೆಯಬೇಕಾಗಿದ್ದ ಸಮಾವೇಶ ಕೂಡಾ ರದ್ದಾಗಿದ್ದು, ಸರಕಾರಿ ರಜೆ ಘೋಷಣೆ ಮಾಡಲಾಗಿದೆ. ಭಾರತ ಕಂಡ ಶ್ರೇಷ್ಠ ಅರ್ಥ ಶಾಸ್ತ್ರಜ್ಞರಲ್ಲಿ ಒಬ್ಬರು ಹಾಗೂ ಒಂದು ದಶಕದ ಕಾಲ ದೇಶದ ಪ್ರಧಾನಿಯಾಗಿದ್ದ ಡಾ.ಮನಮೋಹನ್ ಸಿಂಗ್ ಗುರುವಾರ ರಾತ್ರಿ ದಿಲ್ಲಿಯ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಹಿನ್ನೆಲೆ| ಡಿ.27ರಂದು ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ Read More »