Editor

ಮಂಗಳೂರು: ಕೊರಗಜ್ಜನ ಕಾಣಿಕೆ ಹುಂಡಿಯಲ್ಲಿ ಕಾಂಡೋಮ್| ಹಿಂದೂ ಸಂಘಟನೆಗಳಿಂದ ಆಕ್ರೋಶ|

ಮಂಗಳೂರು: ಮಂಗಳೂರಿನಲ್ಲಿ ಮತ್ತೊಮ್ಮೆ ಕೊರಗಜ್ಜನ ಗುಡಿಯನ್ನು ದುಷ್ಕರ್ಮಿಗಳು ಅಪವಿತ್ರಗೊಳಿಸಿದ್ದಾರೆ. ಮಂಗಳೂರಿನ ಮಾರ್ನಮಿಕಟ್ಟೆಯಲ್ಲಿರುವ ಕೊರಗಜ್ಜನ‌ಗುಡಿಯಲ್ಲಿ ಕಾಂಡೋಮ್ ಹಾಕಿರುವುದು ಇಂದು ಬೆಳಕಿಗೆ ಬಂದಿದೆ. ಕೊರಗಜ್ಜನ ಗುಡಿಯ ಕಲ್ಲಿನ ಮೂರ್ತಿ ಮೇಲೆ ದುಷ್ಕರ್ಮಿಗಳು ಉಪಯೋಗಿಸಿದ ಕಾಂಡೋಮ್ ಹಾಕಿದ್ದಾರೆ. ಈ ವಿಚಾರ ತಿಳಿದ ಭಕ್ತರು ಮತ್ತು ಹಿಂದೂ ಸಂಘಟನೆಗಳ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ವರ್ಷದ ಜನವರಿ ಫೆಬ್ರವರಿ ತಿಂಗಳಿ‌ನಲ್ಲಿಯೂ ಇಂತಹದೆ ದುಷ್ಕೃತ್ಯವನ್ನು ಮಂಗಳೂರಿನಲ್ಲಿ ನಡೆಸಲಾಗಿತ್ತು.

ಮಂಗಳೂರು: ಕೊರಗಜ್ಜನ ಕಾಣಿಕೆ ಹುಂಡಿಯಲ್ಲಿ ಕಾಂಡೋಮ್| ಹಿಂದೂ ಸಂಘಟನೆಗಳಿಂದ ಆಕ್ರೋಶ| Read More »

ಕಾರು ಅಡ್ಡಗಟ್ಟಿ ಮಹಿಳೆಯನ್ನು ಬರ್ಬರವಾಗಿ ಕೊಲೆಗೈದ ದುಷ್ಕರ್ಮಿಗಳು|

ಆನೇಕಲ್: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಜಿಗಿಣಿ ಬಳಿ ಕಾರು ಅಡ್ಡಗಟ್ಟಿ ದುಷ್ಕರ್ಮಿಗಳು ಮಹಿಳೆಯನ್ನು ಬರ್ಬರ ಕೊಲೆ ಮಾಡಿದ್ದಾರೆ. ಜಿಗಣಿ ನಿವಾಸಿ ಅರ್ಚನಾ ರೆಡ್ಡಿಯನ್ನು ಹತ್ಯೆಗೈದಿದ್ದಾರೆ. ನವೀನ್, ಸಂತೋಷ್ ಎಂಬುವವರು ಅರ್ಚನಾ ರೆಡ್ಡಿಯನ್ನು ಹತ್ಯೆ ಮಾಡಿದ್ದಾರೆ. ಅನೈತಿಕ ಸಂಬಂದ ಹಿನ್ನಲೆ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ತಡರಾತ್ರಿ ಈ ಘಟನೆ ನಡೆದಿದ್ದು, ಎಲೆಕ್ಟ್ರಾನಿಕ್ಸ್ ಸಿಟಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಪತಿಯೇ ತನ್ನ ಹೆಂಡತಿಯನ್ನು ಕೊಚ್ಚಿ ಕೊಲೆ ಮಾಡಿದ್ದಾನೆ ಎಂಬ ಮಾಹಿತಿ ತಿಳಿದುಬಂದಿದೆ. ನಿನ್ನೆ ರಾತ್ರಿ

ಕಾರು ಅಡ್ಡಗಟ್ಟಿ ಮಹಿಳೆಯನ್ನು ಬರ್ಬರವಾಗಿ ಕೊಲೆಗೈದ ದುಷ್ಕರ್ಮಿಗಳು| Read More »

ಪ್ರಧಾನಿ ಮೋದಿಗಾಗಿ 12ಕೋಟಿ ಮೌಲ್ಯದ ಮರ್ಸಿಡಿಸ್ ಬೆಂಜ್ ಕಾರು ಖರೀದಿ

ನವದೆಹಲಿ:- ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 12 ಕೋಟಿ ರೂಪಾಯಿಗೂ ಅಧಿಕ ಮೌಲ್ಯ ಐಶಾರಾಮಿ ಕಾರನ್ನು ಬಳಕೆ ಮಾಡಲಾರಂಭಿಸಿದ್ದಾರೆ. ಮರ್ಸಿಡೇಸ್ ಬೆಂಜ್ ಕಂಪೆನಿಯ ಮೇ ಬ್ಯಾಕ್ ಎಸ್650 ಸರಣಿಯ ಶಸ್ತ್ರಸ್ತ್ರ ಸಜ್ಜಿತ ಕಾರನ್ನು ಪ್ರಧಾನಿ ಅವರಿಗಾಗಿ ಮತ್ತಷ್ಟು ಮಾರ್ಪಡಿಸಲಾಗಿದೆ. ಈಗಾಗಲೇ ರೆಂಜ್‍ರೋವರ್ ವೋಗ್ ಮತ್ತು ಟೊಯೋಟಾ ಲ್ಯಾಂಡ್ ಕ್ರೂಸರ್ ಕಾರುಗಳು ಪ್ರಧಾನಿ ಅವರ ಕಚೇರಿಯಲ್ಲಿವೆ. ಅವುಗಳ ಜೊತೆ ಈಗ ಮರ್ಸಿಡೆಸ್ ಬೆಂಜ್ ಸೇರ್ಪಡೆಯಾಗಿದೆ. ಇತ್ತೀಚೆಗೆ ರಷ್ಯಾ ಅಧ್ಯಕ್ಷ ವಾಡ್ಲಿಮಿರ್ ಪುಟೀನ್ ಭಾರತಕ್ಕೆ ಭೇಟಿ ನೀಡಿದಾಗ ಅವರನ್ನು

ಪ್ರಧಾನಿ ಮೋದಿಗಾಗಿ 12ಕೋಟಿ ಮೌಲ್ಯದ ಮರ್ಸಿಡಿಸ್ ಬೆಂಜ್ ಕಾರು ಖರೀದಿ Read More »

ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ವೇಳೆ ಕಳಚಿ‌ ಬಿದ್ದ ಧ್ವಜ|

ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಪ್ರಯುಕ್ತ ನಡೆದ ಧ್ವಜಾರೋಹಣದ ವೇಳೆ ಕಾಂಗ್ರೆಸ್ ಬಾವುಟ ಕೆಳಗೆ ಬಿದ್ದಿದ್ದು, ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಿಡಿದಿದ್ದಾರೆ. ಮಂಗಳವಾರ ದೆಹಲಿಯ ಕಾಂಗ್ರೆಸ್ ಕಚೇರಿ ಮುಂದೆ 137ನೇ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಈ ಎಡವಟ್ಟು ಸಂಭವಿಸಿದ್ದು, ನೆಲಕ್ಕೆ ಬೀಳದಂತೆ ಸೋನಿಯಾ ಗಾಂಧಿ ಬಾವುಟವನ್ನು ಹಿಡಿದಿದ್ದಾರೆ. ಘಟನೆ ಬೆನ್ನಲ್ಲೇ ಎಚ್ಚೆತ್ತ ಕಾರ್ಯಕರ್ತರು ಬಾವುಟವನ್ನು ಸರಿಪಡಿಸಿ ಮತ್ತೊಮ್ಮೆ ಧ್ವಜಾರೋಹಣಕ್ಕೆ ವ್ಯವಸ್ಥೆ ಮಾಡಿದರು. ಭಾರತದ ತ್ರಿವರ್ಣ ಧ್ವಜವನ್ನು ಹೋಲುವ ರೀತಿ ಇರುವ ಕಾಂಗ್ರೆಸ್

ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ ವೇಳೆ ಕಳಚಿ‌ ಬಿದ್ದ ಧ್ವಜ| Read More »

ಇಂದಿನಿಂದ ರಾಜ್ಯದಲ್ಲಿ ನೈಟ್ ಕರ್ಪ್ಯೂ| ಕಠಿಣ ಕ್ರಮಕ್ಕೆ ಗೃಹ ಇಲಾಖೆ ಸಿದ್ದತೆ

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ನೈಟ್ ಕರ್ಪ್ಯೂ ಜಾರಿ ಮಾಡಲಾಗಿದ್ದು, ಕಟ್ಟುನಿಟ್ಟಿನ ಕ್ರಮಕ್ಕಾಗಿ ಪೊಲೀಸರು ಸಿದ್ಧತೆ ನಡೆಸಿದ್ದಾರೆ. ರಾಜ್ಯಾದ್ಯಂತ ಇಂದಿನಿಂದ 10 ದಿನಗಳ ಕಾಲ ನೈಟ್ ಕರ್ಪ್ಯೂ ಜಾರಿಯಲ್ಲಿರಲಿದ್ದು, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಇಂದು ಡಿಸಿಪಿಗಳ ಜೊತೆಗೆ ಬೆಂಗಳೂರು ಪೊಲೀಸರು ಆಯುಕ್ತ ಗೌರವ್ ಗುಪ್ತಾ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಸಭೆಯಲ್ಲಿ ನೈಟ್ ಕರ್ಪ್ಯೂ ಜಾರಿ ಸಂಬಂಧ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆ ನಡೆಯಲಿದೆ.

ಇಂದಿನಿಂದ ರಾಜ್ಯದಲ್ಲಿ ನೈಟ್ ಕರ್ಪ್ಯೂ| ಕಠಿಣ ಕ್ರಮಕ್ಕೆ ಗೃಹ ಇಲಾಖೆ ಸಿದ್ದತೆ Read More »

ಅಲ್ಲಾ, ಈಶ್ವರ, ಏಸುವನ್ನು ದೇವರೆಂದು‌ ಒಪ್ಪಿಕೊಂಡರೆ ಸಂಘರ್ಷವಿಲ್ಲ – ಸಿ.ಟಿ ರವಿ

ಚಿಕ್ಕಮಗಳೂರು: ಅಲ್ಲಾ, ಈಶ್ವರ, ಜೀಸಸ್​ರನ್ನ ದೇವರೆಂದು ಒಪ್ಪಿಕೊಂಡರೆ ಜಗತ್ತಿನಲ್ಲಿ ಸಂಘರ್ಷ ಇರೋದಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದ್ದಾರೆ. ಒಬ್ಬ ಹಿಂದೂವಾಗಿ ಜೀಸಸ್, ಅಲ್ಲಾನನ್ನ ದೇವರು ಎಂದು ಒಪ್ಪಿಕೊಳ್ಳಬಹುದು. ಹಿಂದೂವಾಗಿ ಚರ್ಚ್, ಮಸೀದಿಗೂ ಕೂಡ ಹೋಗಬಹುದು ನಮ್ಮಲ್ಲಿ ದೇವನೊಬ್ಬ ನಾಮ ಹಲವು ಎಂಬ ತತ್ವವಿದೆ ಆದರೆ ಇಸ್ಲಾಂ ಆದ ತಕ್ಷಣ ಮಸೀದಿ ಹೊರತುಪಡಿಸಿ ದೇವಸ್ಥಾನದ ಬಾಗಿಲು ಬಂದ್ ಆಗುತ್ತೆ. ಇಸ್ಲಾಂ, ಕ್ರಿಶ್ಚಿಯನ್ ಧರ್ಮಗಳಲ್ಲಿ ಉಳಿದ ದೇವರುಗಳ ಅಸ್ತಿತ್ವದ ಬಗ್ಗೆ ನಿರಾಕರಣೆ ಇದೆ. ಈ

ಅಲ್ಲಾ, ಈಶ್ವರ, ಏಸುವನ್ನು ದೇವರೆಂದು‌ ಒಪ್ಪಿಕೊಂಡರೆ ಸಂಘರ್ಷವಿಲ್ಲ – ಸಿ.ಟಿ ರವಿ Read More »

‘ಡ್ರಗ್ಸ್ ದಂಧೆಯಲ್ಲಿ ಸಿಲುಕಿರುವ ನನ್ನ ಮಗಳನ್ನು ರಕ್ಷಿಸಿ’| ವಿಎಚ್ ಪಿ ಗೆ ದೂರು ನೀಡಿದ ಕ್ರೈಸ್ತ ಮಹಿಳೆ|

ಮಂಗಳೂರು: ಡ್ರಗ್ಸ್ ದಂಧೆಯಲ್ಲಿ ಸಿಲುಕಿರುವ ಮಗಳನ್ನು ರಕ್ಷಣೆ ಮಾಡುವಂತೆ ಕ್ರೈಸ್ತ ಮಹಿಳೆ ವಿಶ್ವ ಹಿಂದೂ ಪರಿಷತ್ ಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರಿನ ಮಹಿಳೆ ತಮ್ಮ ಮಗಳು ಸುರತ್ಕಲ್ ನ ಶರೀಫ್ ಸಿದ್ದಿಕಿ ಬಳಿ ಮೂರು ವರ್ಷದಿಂದ ಡ್ರಗ್ಸ್ ದಂಧೆಯಲ್ಲಿ ಸಿಲುಕಿದ್ದಾಳೆ. ಮಗಳಿಗೆ ನಿತ್ಯವೂ ಡ್ರಗ್ಸ್ ಪೂರೈಕೆ, ಲೈಂಗಿಕ ದೌರ್ಜನ್ಯ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಪದವೀಧರೆಯಾಗಿರುವ ತಮ್ಮ ಮಗಳಿಗೆ ಡ್ರಗ್ಸ್ ನೀಡಿ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಬೆದರಿಕೆ ಹಾಕಿರುವುದಾಗಿ ಮಹಿಳೆ

‘ಡ್ರಗ್ಸ್ ದಂಧೆಯಲ್ಲಿ ಸಿಲುಕಿರುವ ನನ್ನ ಮಗಳನ್ನು ರಕ್ಷಿಸಿ’| ವಿಎಚ್ ಪಿ ಗೆ ದೂರು ನೀಡಿದ ಕ್ರೈಸ್ತ ಮಹಿಳೆ| Read More »

ವಿದ್ಯುತ್ ಶಾಕ್ ಹೊಡೆದು, ತಂದೆ‌ ಮಗು‌ ಸಾವು|

ತೆಲಂಗಾಣ: ಕಬ್ಬಿಣದ ಸರಳುಗಳ ಮೇಲೆ ಹಾಕಿದ್ದ ಬಟ್ಟೆ ತೆಗೆಯಲು ಹೋದ ಸಂದರ್ಭದಲ್ಲಿ ವಿದ್ಯುತ್ ತಗುಲಿ ತಂದೆ ಹಾಗೂ ಎರಡು ವರ್ಷದ ಮಗಳು ಸಾವನ್ನಪ್ಪಿದ್ದು, ತಾಯಿಯ ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದೆ. ತೆಲಂಗಾಣ ರಾಜ್ಯದ ಸಂಗಾರೆಡ್ಡಿ ಇಸ್ನಾಪುರದಲ್ಲಿ ನಡೆದಿದ್ದು, ವಾಸು ಮಲ್ಲಿಕ್ ಹಾಗೂ ಆತನ ಎರಡು ವರ್ಷದ ಮಗಳು ಸಾವನ್ನಪ್ಪಿದವರು. ಪತ್ನಿ ರೀನಾ ಮಲ್ಲಿಕ್ ಸ್ಥಿತಿ ಗಂಭೀರವಾಗಿದೆ. ಮೃತರು ಒಡಿಶಾ ರಾಜ್ಯದವರು ಎನ್ನಲಾಗಿದ್ದು, ಕೆಲಸ ಅರಸಿ, ಇಲ್ಲಿಗೆ ಬಂದು ನೆಲೆಸಿದ್ದರು ಎನ್ನಲಾಗಿದೆ. ಕಬ್ಬಿಣದ ಸರಳಿನ ಮೇಲೆ ಬಟ್ಟೆಗಳನ್ನು ಸ್ವಚ್ಛಗೊಳಿಸಿ

ವಿದ್ಯುತ್ ಶಾಕ್ ಹೊಡೆದು, ತಂದೆ‌ ಮಗು‌ ಸಾವು| Read More »

ಮಂಗಳೂರು: ಸಿನಿಮಾ ಪ್ರದರ್ಶನಕ್ಕೆ ತೆರೆ ಎಳೆದ “ಜ್ಯೋತಿ”,|50 ವರ್ಷದ ಬಣ್ಣದ ಪಯಣ ಇನ್ನು ನೆನಪು ಮಾತ್ರ|

ಮಂಗಳೂರು: ‘ತುಳು ಸಿನಿಮಾ’ ಎಂದ ತಕ್ಷಣ ನೆನಪಾಗುವುದು ಮಂಗಳೂರಿನ ಹೃದಯಭಾಗದಲ್ಲಿದ್ದ ‘ಜ್ಯೋತಿ’ ಚಿತ್ರಮಂದಿರ. ಎಲ್ಲರ ಅಚ್ಚುಮೆಚ್ಚಿನ ಈ ಥಿಯೇಟರ್‌ ಕೋವಿಡ್‌ ಲಾಕ್‌ಡೌನ್‌ ಬಳಿಕ ನೆನಪಿನಂಗಳಕ್ಕೆ ಜಾರಿದೆ. ಬಹುತೇಕ ತುಳು ಸಿನಿಮಾಗಳ ಸೋಲು- ಗೆಲುವಿನಲ್ಲಿ ಪಾಲು ಪಡೆದ ಈ ಒಂಟಿ ಪರದೆ ಮರೆಯಾಗಿರುವುದು ತುಳು ಚಿತ್ರರಂಗಕ್ಕೆ ದೊಡ್ಡ ಹೊಡೆತ. 50 ವರ್ಷಗಳ ಕಾಲ ನಾನಾ ಭಾಷೆಯ ಸಿನಿಮಾಗಳನ್ನು ಪ್ರದರ್ಶಿಸಿದ್ದ ‘ಜ್ಯೋತಿ’, ನಗರದ ಪ್ರಮುಖ ವೃತ್ತವೊಂದರ ಹೆಸರಾಗಿದೆ. ಚಿತ್ರಮಂದಿರದ ಮುಂದಿನ ವೃತ್ತವನ್ನೇ ಜನರು ‘ಜ್ಯೋತಿ’ ವೃತ್ತ ಎನ್ನುತ್ತಿದ್ದರು. ಹೀಗೆ ಕೋಸ್ಟಲ್‌ವುಡ್‌

ಮಂಗಳೂರು: ಸಿನಿಮಾ ಪ್ರದರ್ಶನಕ್ಕೆ ತೆರೆ ಎಳೆದ “ಜ್ಯೋತಿ”,|50 ವರ್ಷದ ಬಣ್ಣದ ಪಯಣ ಇನ್ನು ನೆನಪು ಮಾತ್ರ| Read More »

ಕುಕ್ಕೆಯಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಬ್ದುಲ್ ನಝೀರ್ ವಿಶೇಷ ಪೂಜೆ

ಸುಬ್ರಹ್ಮಣ್ಯ: ಭಾರತದ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಅಬ್ದುಲ್‌ ನಝೀರ್‌ ಅವರು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ ಕುಟುಂಬ ಸಮೇತರಾಗಿ ಭಾನುವಾರ ರಾತ್ರಿ ಆಗಮಿಸಿ ವಾಸ್ತವ್ಯ ಹೂಡಿದರು. ಸೋಮವಾರ ಬೆಳಗ್ಗೆ ಶ್ರೀ ದೇವಳಕ್ಕೆ ಆಗಮಿಸಿದ ಅವರು, ಶ್ರೀ ದೇವರ ದರುಶನ ಪಡೆದರು. ಬಳಿಕ ಪವಿತ್ರ ಸೇವೆಗಳಲ್ಲಿ ಒಂದಾದ ಆಶ್ಲೇಷ ಬಲಿ ಪೂಜೆಯನ್ನು ನೆರವೇರಿಸಿದರು. ಬಳಿಕ ಪ್ರಸಾದ ಸ್ವೀಕರಿಸಿದರು. ಸೋಮವಾರ ಸುಬ್ರಹ್ಮಣ್ಯದಲ್ಲೇ ವಾಸ್ತವ್ಯವಾಗಿರುವ ನ್ಯಾಯಧೀಶರು ಇಂದು ಇಲ್ಲಿಂದ ನಿರ್ಗಮಿಸಲಿದ್ದು, ಬಳಿಕ ಜಿಲ್ಲೆಯ ವಿವಿಧೆಡೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿದುಬಂದಿದೆ.

ಕುಕ್ಕೆಯಲ್ಲಿ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಬ್ದುಲ್ ನಝೀರ್ ವಿಶೇಷ ಪೂಜೆ Read More »