Editor

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಇನ್ನಿಲ್ಲ

ಸಮಗ್ರ ನ್ಯೂಸ್: ಮಾಜಿ ಪ್ರಧಾನಿ ಮನಮೋಹನ್ ಸಿಂಗ್(92) ಅವರು ಇಂದು ರಾತ್ರಿ(ಡಿ.26) ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಇಂದು ಆರೋಗ್ಯದಲ್ಲಿ ತೀವ್ರ ಏರುಪೇರು ಉಂಟಾದ ಕಾರಣ ದೆಹಲಿಯ ಏಮ್ಸ್ ಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅಸುನೀಗಿದ್ದಾರೆ‌ ಎಂದು ಮೂಲಗಳು ತಿಳಿಸಿವೆ. ಮನಮೋಹನ್ ಸಿಂಗ್ ಅವರು ಭಾರತದ 13ನೇ ಪ್ರಧಾನಿಯಾಗಿ 10 ವರ್ಷಗಳ ಕಾಲ ಭಾರತದಲ್ಲಿ ಆಡಳಿತ ನಡೆಸಿದ್ದಾರೆ, ಆರ್ಥಿಕ ತಜ್ಞರಾಗಿಯು ಸೇವೆ ಮಾಡಿದ ಕೀರ್ತಿ ಇವರಿಗೆ ಸಲ್ಲುತ್ತದೆ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಇನ್ನಿಲ್ಲ ಅನ್ನೋ ಸುದ್ದಿ […]

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಇನ್ನಿಲ್ಲ Read More »

ರಾಜ್ಯದ ಜನತೆಗೆ‌ ಮತ್ತೆ ‌ಬೆಲೆ ಏರಿಕೆ ಶಾಕ್ ಗ್ಯಾರಂಟಿ| ಸಂಕ್ರಾಂತಿ ಬಳಿಕ ಹಾಲಿನ ದರದಲ್ಲಿ ₹ 5 ಏರಿಕೆ ಪಕ್ಕಾ!!

ಸಮಗ್ರ ನ್ಯೂಸ್: ಸಂಕ್ರಾಂತಿ ಬಳಿಕ ನಂದಿನಿ ಹಾಲಿನ ದರ 5 ರೂ. ಏರಿಕೆಯಾಗುವ ಸಾಧ್ಯತೆ ಇದ್ದು, ದರ ಏರಿಕೆಯ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮನಾಯ್ಕ್ ಸುಳಿವು ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಂದಿನಿ ಹಾಲಿನ ದರವನ್ನು 5 ರೂ. ಹೆಚ್ಚಳ ಮಾಡಲು ಪ್ರಸ್ತಾವನೆ ಬಂದಿದೆ. ಸಿಎಂ ಸಿದ್ದರಾಮಯ್ಯ ಒಪ್ಪಿಗೆ ಕೊಟ್ಟ ತಕ್ಷಣ ನಂದಿನಿ ಹಾಲಿನ ದರ ಹೆಚ್ಚಳ ಮಾಡಲಾಗುವುದು ಎಂದು ತಿಳಿಸಿದ್ದಾರೆ. ನಂದಿನಿ ಹಾಲಿನ ದರದಲ್ಲಿ 2 ರೂ.ಕಡಿತ ಮಾಡಲು ನಿರ್ಧರಿಸಲಾಗಿದ್ದು, ಇದೀಗ ನಂದಿನಿ ಹಾಲಿನ ದರ

ರಾಜ್ಯದ ಜನತೆಗೆ‌ ಮತ್ತೆ ‌ಬೆಲೆ ಏರಿಕೆ ಶಾಕ್ ಗ್ಯಾರಂಟಿ| ಸಂಕ್ರಾಂತಿ ಬಳಿಕ ಹಾಲಿನ ದರದಲ್ಲಿ ₹ 5 ಏರಿಕೆ ಪಕ್ಕಾ!! Read More »

ಜಮ್ಮು- ಕಾಶ್ಮೀರದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ| ರಾಜ್ಯದ ಮೂವರು ಯೋಧರು ಹುತಾತ್ಮ

ಸಮಗ್ರ ನ್ಯೂಸ್: ಜಮ್ಮು-ಕಾಶ್ಮೀರದ ಪೂಂಚ್ ಜಿಲ್ಲೆಯ ಮೆಂಧರ್‌ನ ಬಲ್ನೋಯಿ ಪ್ರದೇಶದಲ್ಲಿ ಚಲಿಸುತ್ತಿದ್ದ ಸೇನಾ ವಾಹನ 150 ಅಡಿ ಕಂದಕಕ್ಕೆ ಉರುಳಿ ಬಿದ್ದು ಕರ್ನಾಟಕದ ಮೂವರು ಯೋಧರು ಹುತಾತ್ಮರಾಗಿದ್ದಾರೆ. ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿ ತಾಲೂಕಿನ ಮಹಾಲಿಂಗಪುರ ನಿವಾಸಿ 25 ವರ್ಷ ಮಹೇಶ್ ಮರಿಗೊಂಡ, ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ಬಿಜಾಡಿಯ ಯೋಧ ಅನೂಪ್ (32 ವರ್ಷ), ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ದಯಾನಂದ ತಿರಕಣ್ಣನವರ (45 ವರ್ಷ) ದುರಂತದಲ್ಲಿ ಸಾವನ್ನಪ್ಪಿದ್ದಾರೆ. 11 ಮರಾಠಾ ಲೈಟ್ ಇನ್‌ಫೆಂಟ್ರಿಯ ಸೇನಾ ವಾಹನವು

ಜಮ್ಮು- ಕಾಶ್ಮೀರದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ| ರಾಜ್ಯದ ಮೂವರು ಯೋಧರು ಹುತಾತ್ಮ Read More »

ಮಂಗಳೂರು: 500 ನಕಲಿ ಚಿನ್ನದ ಬಳೆ ಅಡವಿಟ್ಟು ಮಹಾವಂಚನೆ| ಪುತ್ತೂರಿನ ವ್ಯಕ್ತಿ ವಿರುದ್ಧ ದೂರು ದಾಖಲು

ಸಮಗ್ರ ನ್ಯೂಸ್: ನಕಲಿ ಚಿನ್ನ ಅಡವಿಟ್ಟ ವ್ಯಕ್ತಿಯೋರ್ವ ಎರಡು ಕೋಟಿ ರೂ ಅಧಿಕ ಸಾಲ ಪಡೆದು ವಂಚನೆ ಮಾಡಿರುವ ಪ್ರಕರಣವೊಂದರ ಆರೋಪ ಕೇಳಿ ಬಂದಿದೆ. ಮಂಗಳೂರಿನ ಸಮಾಜ ಸೇವಾ ಸಹಕಾರಿ ಸಂಘದಲ್ಲಿ 500 ನಕಲಿ ಚಿನ್ನದ ಬಳೆ ಅಡವಿಟ್ಟು ವಂಚನೆ ಮಾಡಲಾಗಿದೆ. ಪುತ್ತೂರು ತಾಲೂಕಿನ ಈಶ್ವರ ಮಂಗಲ ಗ್ರಾಮದ ಅಬೂಬಕ್ಕರ್‌ ಸಿದ್ದಿಕ್‌ ಎಂಬಾತನೇ ಆರೋಪಿ. ನಕಲಿ ಚಿನ್ನದ ಬಳೆಗಳನ್ನಿಟ್ಟ ಅಬೂಬಕ್ಕರ್‌ ಸಿದ್ದಿಕ್‌ ಸರಿಸುಮಾರು 2,11,89,800 ರೂ. ಸಾಲ ಪಡೆದಿರುವುದಾಗಿ ವರದಿಯಾಗಿದೆ. ಈ ವಂಚನೆ ಕುರಿತು ಅಬೂಬಕ್ಕರ್‌ ಸಿದ್ದಿಕ್‌,

ಮಂಗಳೂರು: 500 ನಕಲಿ ಚಿನ್ನದ ಬಳೆ ಅಡವಿಟ್ಟು ಮಹಾವಂಚನೆ| ಪುತ್ತೂರಿನ ವ್ಯಕ್ತಿ ವಿರುದ್ಧ ದೂರು ದಾಖಲು Read More »

ಬಣಕಲ್ ನಜರೆತ್ ಶಾಲೆಯ ವಾರ್ಷಿಕೋತ್ಸವ| ಪೋಷಕರು ಮಕ್ಕಳಿಗೆ ಆಸ್ತಿ ಮಾಡದೇ ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿ: ಫಾ.ಮಾರ್ಸೆಲ್ ಪಿಂಟೊ

ಸಮಗ್ರ ನ್ಯೂಸ್: ‘ಪೋಷಕರು ಮಕ್ಕಳಿಗೆ ಆಸ್ತಿ ಮಾಡಿ ಇಡದೇ ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿ ಎಂದು ಚಿಕ್ಕಮಗಳೂರು ಸಂತ ಜೋಸೆಫರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಫಾ.ಮಾರ್ಸೆಲ್ ಪಿಂಟೊ ಹೇಳಿದರು. ಅವರು ಸೋಮವಾರ ರಾತ್ರಿ ಬಣಕಲ್ ನಜರೆತ್ ಶಾಲೆಯ (ನಜ್ ಉತ್ಸವ) 27ನೇ ವಾರ್ಷಿಕೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ‘ಪೋಷಕರು ಮಕ್ಕಳ ಅಭಿರುಚಿಗೆ ತಕ್ಕಂತೆ ಶಿಕ್ಷಣ ನೀಡಿ ಮಕ್ಕಳ ಸಮಾಜದಲ್ಲಿ ಉತ್ತಮ ವ್ಯಕ್ತಿಗಳಾಗಲು ಸಾಧ್ಯವಾಗುತ್ತದೆ. ಮಕ್ಕಳಿಗೆ ಉತ್ತಮ ಸಂಸ್ಕಾರ,ಶಿಕ್ಷಣ ನೀಡಿ ಅವರನ್ನೇ ಆಸ್ತಿಯನ್ನಾಗಿ ಮಾಡಿದರೆ ಮುಂದೆ ಅವರು ಬುದ್ದಿ ಶಕ್ತಿ,

ಬಣಕಲ್ ನಜರೆತ್ ಶಾಲೆಯ ವಾರ್ಷಿಕೋತ್ಸವ| ಪೋಷಕರು ಮಕ್ಕಳಿಗೆ ಆಸ್ತಿ ಮಾಡದೇ ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿ: ಫಾ.ಮಾರ್ಸೆಲ್ ಪಿಂಟೊ Read More »

ಪಿಲಿಕುಳದಲ್ಲಿ ಎರಡು ಮರಿಗಳಿಗೆ ಜನ್ಮ ನೀಡಿದ “ರಾಣಿ”

ಸಮಗ್ರ ನ್ಯೂಸ್: ಮಂಗಳೂರಿನ ಪಿಲಿಕುಳ ಜೈವಿಕ ಉದ್ಯಾನವನದಲ್ಲಿ 14ರ ಹರೆಯದ “ರಾಣಿ’ ಹೆಸರಿನ ಹುಲಿ ಡಿ.20ರಂದು ರಾತ್ರಿ ಎರಡು ಮರಿಗಳಿಗೆ ಜನ್ಮ ನೀಡಿದೆ. ತಾಯಿ ಮತ್ತು ಮರಿಗಳು ಆರೋಗ್ಯವಾಗಿದೆ. ರಾಣಿಯು 2016ರಲ್ಲಿ ದಾಖಲೆ ಸಂಖ್ಯೆಯ ಐದು ಆರೋಗ್ಯವಂತ ಮರಿಗಳಿಗೆ ಹಾಗೂ 2021ರಲ್ಲಿ ಮೂರು ಮರಿಗಳಿಗೆ ಜನ್ಮ ನೀಡಿತ್ತು. ಪ್ರಸ್ತುತ ಪಿಲಿಕುಲ ಮೃಗಾಲಯ ದಲ್ಲಿ ಹುಲಿಗಳ ಸಂಖ್ಯೆ 10ಕ್ಕೇರಿದೆ. ಈ ಪೈಕಿ 4 ಗಂಡು ಮತ್ತು 4 ಹೆಣ್ಣು ಹುಲಿಗಳಿವೆ. ಈಗ ಜನಿಸಿದ ಮರಿಗಳ ಲಿಂಗವನ್ನು ಎರಡು ತಿಂಗಳ

ಪಿಲಿಕುಳದಲ್ಲಿ ಎರಡು ಮರಿಗಳಿಗೆ ಜನ್ಮ ನೀಡಿದ “ರಾಣಿ” Read More »

ಪಡಿತರ ಚೀಟಿದಾರರೇ ಗಮನಿಸಿ… ಡಿ. 31ರ ಒಳಗೆ ಈ ಕೆಲಸ ತಪ್ಪದೇ ಮಾಡಿ…

ಸಮಗ್ರ ನ್ಯೂಸ್: ಒಂದು ಬಾರಿ ತಮ್ಮ ಪಡಿತರ ಚೀಟಿಯಲ್ಲಿರುವ ಎಲ್ಲಾ ಸದಸ್ಯರ ‘ಇಕೆವೈಸಿ’ (ಆಧಾರ್ ಆಧಾರಿತ ಬೆರಳಚ್ಚಿನ ದೃಢೀಕರಣ) ಮಾಡಿಸುವುದು ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ವಯ ಕಡ್ಡಾಯವಾಗಿದೆ. ಆದ್ದರಿಂದ ಯಾರು ಕಳೆದ ಹಲವು ವರ್ಷಗಳಿಂದ ತಮ್ಮ ಬಿಪಿಎಲ್ ಪಡಿತರ ಚೀಟಿಗೆ ಈವರೆಗೆ ಇಕೆವೈಸಿ ನೋಂದಣಿಯಾಗಿಲ್ಲ ಅಂತಹ ಕುಟುಂಬದವರು ತಪ್ಪದೇ ತಮ್ಮ ಹತ್ತಿರದ ನ್ಯಾಯಬೆಲೆ ಅಂಗಡಿಗೆ ತೆರಳಿ ಇಕೆವೈಸಿ (ಆಧಾರ್ ಆಧಾರಿತ ಬೆರಳಚ್ಚಿನ ದೃಢೀಕರಣ) ಮಾಡಿಸಲು ತಿಳಿಸಿದೆ. ಸರ್ಕಾರದ ಮಾನದಂಡಗಳನ್ವಯ ಒಂದೇ ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಪಡಿತರ ಚೀಟಿ ಇರುವುದು

ಪಡಿತರ ಚೀಟಿದಾರರೇ ಗಮನಿಸಿ… ಡಿ. 31ರ ಒಳಗೆ ಈ ಕೆಲಸ ತಪ್ಪದೇ ಮಾಡಿ… Read More »

ವಾಯುಭಾರ ಕುಸಿತ| ರಾಜ್ಯದ 13 ಜಿಲ್ಲೆಗಳಲ್ಲಿ ಮೂರು ದಿನ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಆಂಧ್ರಪ್ರದೇಶ ಕರಾವಳಿಯ ಪಶ್ಚಿಮ ಬಂಗಾಳ ಕೊಲ್ಲಿಯ ಮೇಲಿನ ವಾಯುಭಾರ ಕುಸಿತ ಆಗಿರುವ ಕಾರಣ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ನಾಳೆಯಿಂದ ಮೂರು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ ಎಂದು ಹೇಳಿದೆ. ವಾಯುಭಾರ ಕುಸಿತವು ಗಂಟೆಗೆ 7 ಕಿ.ಮೀ ವೇಗದಲ್ಲಿ ಪೂರ್ವ-ಈಶಾನ್ಯಕ್ಕೆ ಚಲಿಸಿದೆ. ನಿನ್ನೆ ಅದೇ ಪ್ರದೇಶದ ಮೇಲೆ ಕೇಂದ್ರೀಕೃತವಾಗಿದ್ದು, ಚೆನ್ನೈನ ಪೂರ್ವ-ಈಶಾನ್ಯಕ್ಕೆ ಸುಮಾರು 450 ಕಿ.ಮೀ. ಆಂಧ್ರ ಪ್ರದೇಶದ ವಿಶಾಖಪಟ್ಟಣದ ದಕ್ಷಿಣ-ಆಗ್ನೇಯಕ್ಕೆ

ವಾಯುಭಾರ ಕುಸಿತ| ರಾಜ್ಯದ 13 ಜಿಲ್ಲೆಗಳಲ್ಲಿ ಮೂರು ದಿನ ಮಳೆ ಮುನ್ಸೂಚನೆ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ನಿತ್ಯ ಕರ್ಮಗಳನ್ನು ಆರಂಭಿಸುವ ಮುನ್ನ ರಾಶಿ ಭವಿಷ್ಯವನ್ನು ತಿಳಿದುಕೊಳ್ಳುವುದು ಭಾರತೀಯ ಸಂಸ್ಕೃತಿಯಲ್ಲಿ ರೂಢಿ. ದೈನಂದಿನ ಜೀವನದಲ್ಲಿ ರಾಶಿಗಳು ಪ್ರಮುಖ ಪಾತ್ರ ವಹಿಸುತ್ತವೆ. ಪ್ರತಿಯೊಬ್ಬ ಮನುಷ್ಯನ ಜೀವನದಲ್ಲಿ ಇವುಗಳ ಪಾತ್ರ ಮಹತ್ತರವಾದುದು. ಈ ವಾರ‌ ದ್ವಾದಶ ರಾಶಿಗಳ ಗೋಚಾರಫಲ ಏನು? ಯಾವ ರಾಶಿಗೆ ಶುಭ? ಯಾವ ರಾಶಿಗೆ ಅಶುಭ? ನೋಡೋಣ ಬನ್ನಿ. ಡಿ.22ರಿಂದ 28ರವರೆಗಿನ ದ್ವಾದಶ ರಾಶಿಗಳ ಗೋಚಾರಫಲ ಇಲ್ಲಿದೆ… ಮೇಷರಾಶಿ:ವೃತ್ತಿ ಬದುಕು ತುಂಬಾ ಚೆನ್ನಾಗಿರಲಿದೆ, ನಿಮ್ಮ ಕೆಲಸ ಕಾರ್ಯಗಳು ಉತ್ತಮವಾಗಿರಲಿದೆ.ಆರ್ಥಿಕವಾಗಿ ಈ ಅವಧಿ ಉತ್ತಮವಾಗಿರಲಿದೆ,

ದ್ವಾದಶ ರಾಶಿಗಳ ವಾರಭವಿಷ್ಯ Read More »

ಸೈಲೆಂಟಾಗಿ‌ ಹಿಂದೂ ಧಾರ್ಮಿಕ ಬದ್ಧತೆ ಪ್ರತಿಪಾದಿಸಿದ ಸಚಿವ ರಾಮಲಿಂಗಾರೆಡ್ಡಿ| ಇದೇ ನಿಜವಾದ ಹಿಂದುತ್ವ ಎಂದ ಅರ್ಚಕ ಸಮುದಾಯ| 10700 ಎಕ್ರೆ ಆಸ್ತಿ ರಕ್ಷಣೆಗೆ ಮಾಡಿದ ಸಚಿವರು

ಸಮಗ್ರ ನ್ಯೂಸ್: ಬುಟಾಟಿಕೆ ಮತ್ತು ಪೊಳ್ಳು ಹಿಂದುತ್ವವಾದ ಪ್ರತಿಪಾದಕರಾದ ಬಿಜೆಪಿಯವರು ಧರ್ಮ ಧರ್ಮಗಳ‌ ನಡುವೆ ದ್ವೇಷದ ಬೆಂಕಿ ಹಚ್ಚಿ, ಹಿಂದೂ ಧರ್ಮದ ಉಳಿವಿಗಾಗಿ ಯಾವುದೇ ಕಾರ್ಯ ಮಾಡದಿದ್ದರೂ, ಬರೀ ಬಾಯಿ ಮಾತಿನಲ್ಲಿ ಹಿಂದೂ ಧರ್ಮ, ದೇವಾಲಯಗಳ ಬಗ್ಗೆ ಪುಂಖಾನುಪುಂಖವಾಗಿ ಬೊಗಳೆ ಭಾಷಣ ಮಾಡುವವರ ಮುಂದೆ ಯಾವುದೇ ಸದ್ದುಗದ್ದಲವಿಲ್ಲದೆ ತಮ್ಮ‌ ಕಾರ್ಯಕ್ರಮಗಳು ಹಾಗೂ ಯೋಜನೆಗಳ ಮೂಲಕ ಹಿಂದೂ ಧರ್ಮ ಮತ್ತು ದೇವಾಲಯಗಳ ರಕ್ಷಣೆಗೆ ಪಣ ತೊಟ್ಟಿರುವ ರಾಮಲಿಂಗಾರೆಡ್ಡಿಯವರ ಕಾರ್ಯ ಆಸ್ತಿಕ ಸಮುದಾಯದಲ್ಲಿ ಸಂತೋಷದ ಹೊನಲನ್ನು‌ ಹರಿಸಿದೆ ಎಂದು ಅರ್ಚಕ

ಸೈಲೆಂಟಾಗಿ‌ ಹಿಂದೂ ಧಾರ್ಮಿಕ ಬದ್ಧತೆ ಪ್ರತಿಪಾದಿಸಿದ ಸಚಿವ ರಾಮಲಿಂಗಾರೆಡ್ಡಿ| ಇದೇ ನಿಜವಾದ ಹಿಂದುತ್ವ ಎಂದ ಅರ್ಚಕ ಸಮುದಾಯ| 10700 ಎಕ್ರೆ ಆಸ್ತಿ ರಕ್ಷಣೆಗೆ ಮಾಡಿದ ಸಚಿವರು Read More »