Editor

ಮಂಗಳೂರು: ವಿಮಾನ ನಿಲ್ದಾಣಕ್ಕೆ ನಾಡಕೋವಿ ತಂದವ ಅಂದರ್

ಮಂಗಳೂರು : ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದ ಕಾರಿನಲ್ಲಿ ಅಕ್ರಮವಾಗಿ ನಾಡಕೋವಿ ಇರಿಸಿಕೊಂಡಿದ್ದ ಯುವಕನನ್ನು ಸಿಐಎಸ್‌ಎಫ್ ಭದ್ರತಾ ಸಿಬಂದಿ ಬಂಧಿಸಿದ್ದಾರೆ. ಬ್ರಹ್ಮಾವರ ಮೂಲದ ರೆನಾಲ್ಡ್ ಡಿಸೋಜ(24) ಬಂಧಿತ ಯುವಕ. ಈತ ವಿದೇಶದಿಂದ ಬಂದಿದ್ದ ತನ್ನ ಸಂಬಂಧಿಕ ವ್ಯಕ್ತಿಯನ್ನು ಕಾರಿನಲ್ಲಿ ಕರೆದೊಯ್ಯಲು ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಕಾರನ್ನು ಪಾರ್ಕಿಂಗ್ ಏರಿಯಾದಲ್ಲಿ ಪಾರ್ಕ್ ಮಾಡಿದ್ದಾಗ ಸಿಐಎಸ್‌ಎಫ್ ಭದ್ರತಾ ಸಿಬಂದಿ ತಪಾಸಣೆ ನಡೆಸುತ್ತಿದ್ದರು. ಈ ವೇಳೆ, ಕಾರಿನ ಮುಂಭಾಗದಲ್ಲಿ ಎರಡು ಕಂಟ್ರಿ ಮೇಡ್ ಪಿಸ್ತೂಲ್ ಪತ್ತೆಯಾಗಿದ್ದು ಈ ಬಗ್ಗೆ ಯುವಕನನ್ನು

ಮಂಗಳೂರು: ವಿಮಾನ ನಿಲ್ದಾಣಕ್ಕೆ ನಾಡಕೋವಿ ತಂದವ ಅಂದರ್ Read More »

ರಾಜ್ಯದಲ್ಲಿ ಪತ್ತೆಯಾಯ್ತು ಮಹಾಮಾರಿಯ‌ ಮತ್ತೊಂದು ಕರಾಳಛಾಯೆ| ಒಮಿಕ್ರಾನ್ ಪತ್ತೆ ಬೆನ್ನಲ್ಲೇ ನಾಳೆ ಸಿಎಂ ಮಹತ್ವದ ಸಭೆ| ಟಫ್ ರೂಲ್ಸ್ ಜಾರಿ‌ ಸಾಧ್ಯತೆ|

ಬೆಂಗಳೂರು : ಬೆಂಗಳೂರಿಗೆ ಬಂದಿಳಿದ ಇಬ್ವರಲ್ಲಿ ಒಮಿಕ್ರಾನ್ ವೈರಸ್ ಧೃಡವಾದ ಹಿನ್ನೆಲೆ ರಾಜ್ಯದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಈ ಹಿನ್ನೆಲೆ ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹತ್ವದ ಸಭೆ ನಡೆಸಲಿದ್ದಾರೆ. ಸದ್ಯ, ದೆಹಲಿಯಲ್ಲಿರುವ ಸಿಎಂ ಬೊಮ್ಮಾಯಿ ಅವರು ನಾಳೆ ಬೆಂಗಳೂರಿಗೆ ಧಾವಿಸಲಿದ್ದು, ನಾಳೆ ಮಧ್ಯಾಹ್ನ 1 ಗಂಟೆಗೆ ಆರೋಗ್ಯ ತಜ್ಞರ ಜೊತೆ ಸಭೆ ನಡೆಸಿ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಿದ್ದೇವೆ ಎಂದು ದೆಹಲಿಯಲ್ಲಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ. ನಾಳಿನ ಸಭೆ ಬಳಿಕ ರಾಜ್ಯದಲ್ಲಿ ಟಫ್ ರೂಲ್ಸ್ ಜಾರಿಗೆ

ರಾಜ್ಯದಲ್ಲಿ ಪತ್ತೆಯಾಯ್ತು ಮಹಾಮಾರಿಯ‌ ಮತ್ತೊಂದು ಕರಾಳಛಾಯೆ| ಒಮಿಕ್ರಾನ್ ಪತ್ತೆ ಬೆನ್ನಲ್ಲೇ ನಾಳೆ ಸಿಎಂ ಮಹತ್ವದ ಸಭೆ| ಟಫ್ ರೂಲ್ಸ್ ಜಾರಿ‌ ಸಾಧ್ಯತೆ| Read More »

ರಾಷ್ಟ್ರೀಯ ಶಿಕ್ಷಣ ನೀತಿ ಶೈಕ್ಷಣಿಕ ವ್ಯವಸ್ಥೆಯ ದುರ್ಬಲೀಕರಣ – ಕೀರ್ತನ್

ಸುಳ್ಯ: ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕರ್ನಾಟಕದಲ್ಲಿ ಜಾರಿಗೊಳಿಸುವ ಮೂಲಕ ಶಿಕ್ಷಣ ವ್ಯವಸ್ಥೆಯನ್ನು ದುರ್ಬಲಗೊಳಿಸಿ ಶಿಕ್ಷಣ ಸಂಸ್ಥೆಯನ್ನು ಖಾಸಗೀಕರಣಗೊಳಿಸುವ ಹುನ್ನಾರ ಅತ್ಯಂತ ವ್ಯವಸ್ಥಿತವಾಗಿ ನಡೆಯುತ್ತಿದ್ದು, ಇದನ್ನು ವಿರೋಧಿಸಿ ಹೋರಾಟ ಮುಂದುವರಿಯಲಿದೆ ಎಂದು ಎನ್ ಎಸ್ ಯು ಐ ಸುಳ್ಯ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಕೀರ್ತನ್ ಗೌಡ ಕೊಡಪಾಲ ಇವರು ತಿಳಿಸಿದ್ದಾರೆ. ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಾಜ್ಯ ಸರಕಾರ ತರಾತುರಿಯಲ್ಲಿ ಜಾರಿಗೊಳಿಸಲು ಹೊರಟಿದ್ದು ಈ ಬಗ್ಗೆ ಶೈಕ್ಷಣಿಕ ಸಂಸ್ಥೆಗಳ ಮುಖ್ಯಸ್ಥರು ಸೇರಿದಂತೆ ಯಾರಿಗೂ ಅರಿವು ಇಲ್ಲದಾಗಿದೆ. ಇದು ಶಿಕ್ಷಣ ವ್ಯವಸ್ಥೆಯನ್ನೇ

ರಾಷ್ಟ್ರೀಯ ಶಿಕ್ಷಣ ನೀತಿ ಶೈಕ್ಷಣಿಕ ವ್ಯವಸ್ಥೆಯ ದುರ್ಬಲೀಕರಣ – ಕೀರ್ತನ್ Read More »

ದೇಶದಲ್ಲಿ ರೂಪಾಂತರಿ ಒಮಿಕ್ರಾನ್ ವೈರಸ್ ಪತ್ತೆ| ಕರ್ನಾಟಕದ ಇಬ್ಬರಲ್ಲಿ ಸೋಂಕು ದೃಢ|

ನವದೆಹಲಿ: ದೇಶದಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದ್ದ ಕೊರೊನಾ ಹೊಸ ರೂಪಾಂತರಿ ವೈರಸ್ ‘ಒಮಿಕ್ರಾನ್’ ರಾಜ್ಯದಲ್ಲಿ ಇಬ್ಬರಲ್ಲಿ ಪತ್ತೆಯಾಗಿರುವುದಾಗಿ ಕೇಂದ್ರ ಆರೋಗ್ಯ ಇಲಾಖೆ ದೃಢಪಡಿಸಿದೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ಈ ಮಾಹಿತಿ ನೀಡಿದ್ದು, ಭಾರತದಲ್ಲಿಯೇ ಮೊದಲ ಒಮಿಕ್ರಾನ್ ಕೇಸ್ ಕರ್ನಾಟಕದಲ್ಲಿ ಪತ್ತೆಯಾಗಿದ್ದು, ಆಫ್ರಿಕಾದಿಂದ ಬಂದಿದ್ದ ಇಬ್ಬರಲ್ಲಿ ಹೊಸ ರೂಪಾಂತರಿ ತಳಿ ಪತ್ತೆಯಾಗಿದೆ ಎಂದರು. 66 ವರ್ಷದ ವೃದ್ಧ ಹಾಗೂ 46 ವರ್ಷದ ವ್ಯಕ್ತಿಯಲ್ಲಿ ಒಮಿಕ್ರಾನ್ ಪತ್ತೆಯಾಗಿದೆ. ಕರ್ನಾಟಕದ ಮೂಲಕವೇ ಭಾರತಕ್ಕೆ ಒಮಿಕ್ರಾನ್ ಎಂಟ್ರಿಯಾಗಿದ್ದಾಗಿ

ದೇಶದಲ್ಲಿ ರೂಪಾಂತರಿ ಒಮಿಕ್ರಾನ್ ವೈರಸ್ ಪತ್ತೆ| ಕರ್ನಾಟಕದ ಇಬ್ಬರಲ್ಲಿ ಸೋಂಕು ದೃಢ| Read More »

ಕಡಬ: ಪಾಳು ಪ್ರವಾಸಿ ಬಂಗಲೆಯಲ್ಲೊಂದು ಅರೆಬೆಂದ ಮೃತದೇಹ| ಅನುಮಾನ ಹುಟ್ಟಿಸುವಂತಿದೆ ದೃಶ್ಯ|

ಕಡಬ: ನಗರದ ಹೃದಯ ಭಾಗದಲ್ಲಿರುವ ಪಾಳು ಬಿದ್ದ ಪ್ರವಾಸಿ ಬಂಗಲೆಯಲ್ಲಿ ವ್ಯಕ್ತಿಯೊಬ್ಬರ ಮೃತ ದೇಹ ಅರೆ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತದೇಹವನ್ನು ಉಳಿಪು ನಿವಾಸಿ ಮೋನೆಚ್ಚನ್‌ ಎಂಬವರದ್ದು ಎಂದು ಗುರುತಿಸಲಾಗಿದೆ. ಇಂದು ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ಮೃತ ದೇಹ ಬಿದ್ದಿರುವುದನ್ನು ಗಮನಿಸಿದ ಸಾರ್ವಜನಿಕರು ಇದನ್ನು ಪೊಲೀಸರ ಗಮನಕ್ಕೆ ತಂದಿದ್ದಾರೆ. ಬಳಿಕ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ . ಮೃತ ದೇಹವೂ ಅರೆ ಬೆಂದ ಸ್ಥಿತಿಯಲ್ಲಿದ್ದೂ, ನಿನ್ನೆ ರಾತ್ರಿ ಮೃತಪಟ್ಟಿರಬಹುದೆಂದು ಸಂಶಯಿಸಲಾಗಿದೆ. ಸ್ಥಳದ ಮಹಜರು ಹಾಗೂ

ಕಡಬ: ಪಾಳು ಪ್ರವಾಸಿ ಬಂಗಲೆಯಲ್ಲೊಂದು ಅರೆಬೆಂದ ಮೃತದೇಹ| ಅನುಮಾನ ಹುಟ್ಟಿಸುವಂತಿದೆ ದೃಶ್ಯ| Read More »

ಬೆಂಗಳೂರು: ಹಿರಿಯ ನಟ ಶಿವರಾಂ ಗಂಭೀರ

ಬೆಂಗಳೂರು: ಮೆದುಳಿನಲ್ಲಿ ರಕ್ತಸ್ರಾವ ಉಂಟಾದ ಹಿನ್ನೆಲೆಯಲ್ಲಿ ಹಿರಿಯ ನಟ ಶಿವರಾಂ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬೆಂಗಳೂರಿನ ಹೊಸಕರೆ ಹಳ್ಳಿಗೆ ಕಾರಿನಲ್ಲಿ ಅವರು ಹೋಗಿದ್ದ ವೇಳೆ, ಈ ಘಟನೆ ಸಂಭವಿಸಿದೆ ಅನ್ನುವ ಮಾಹಿತಿ ಲಭ್ಯವಾಗಿದೆ. ಇನ್ನು ಮೂಲಗಳ ಮಾಹಿತಿ ಪ್ರಕಾರ ಬಿದ್ದು ತಲೆಗೆ ತೀವ್ರವಾದ ಪೆಟ್ಟಾಗಿದೆ ಎಂದು ಹೇಳಲಾಗಿದೆ. 84 ವರ್ಷದ ಹಿರಿಯ ನಟ ಶಿವರಾಮ್​ ಅವರನ್ನು ವಿದ್ಯಾಪೀಠ ಸರ್ಕಲ್ ಬಳಿಯ ಪ್ರಶಾಂತ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಇನ್ನು ಆಸ್ಪತ್ರೆ ಮೂಲಗಳ ಪ್ರಕಾರ

ಬೆಂಗಳೂರು: ಹಿರಿಯ ನಟ ಶಿವರಾಂ ಗಂಭೀರ Read More »

ತಾಯಿಯಾಗುತ್ತಿರುವ ಚಿತ್ತಾರ ಬೆಡಗಿ ಅಮೂಲ್ಯ

ಬೆಂಗಳೂರು: ಚೆಲುವಿನ ಚಿತ್ತಾರದ ನಟಿ ಅಮೂಲ್ಯ ಜಗದೀಶ್ ಇದೀಗ ತಮ್ಮ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಅವರು ಪತಿ ಜಗದೀಶ್ ಜೊತೆ ಇರುವ ಒಂದು ವಿಶೇಷ ಫೋಟೋವನ್ನು ಹಂಚಿಕೊಂಡು ‘ಸದ್ಯ ನಾವು ಈಗ ಇಬ್ಬರಲ್ಲ. 2022ರಲ್ಲಿ ಮೂವರಾಗುತ್ತಿದ್ದೇವೆ’ ಎಂದು ಬರೆದುಕೊಂಡಿದ್ದಾರೆ. ಬಾಲನಟಿಯಾಗಿಯೇ ಚಿತ್ರರಂಗಕ್ಕೆ ಕಾಲಿಟ್ಟ ಅಮೂಲ್ಯ ಅವರು ‘ಚೆಲುವಿನ ಚಿತ್ತಾರ’ ಸಿನಿಮಾ ಮೂಲಕ ಹೀರೋಯಿನ್ ಆಗಿ ಚಿರಪರಿಚಿತರಾದರು. ಇತ್ತ ಚಿತ್ರರಂಗದಲ್ಲಿ ಬೇಡಿಕೆ ಇರುವಾಗಲೇ 2017ರಲ್ಲಿ ರಾಜಕೀಯ ಹಿನ್ನೆಲೆ ಇರುವ

ತಾಯಿಯಾಗುತ್ತಿರುವ ಚಿತ್ತಾರ ಬೆಡಗಿ ಅಮೂಲ್ಯ Read More »

ಪ್ರಪಂಚ ಅರಿಯದ ಹಸುಗೂಸನ್ನು ಪೊದೆಗೆ ಬಿಸಾಡಿದ ಹೆತ್ತವರು

ಕುಂದಾಪುರ: ತಾಲೂಕಿನ ಮುಚ್ಚಟ್ಟು ಸೇತುವೆ ಬಳಿ ಪೊದೆಯ ನಡುವೆ ವಾರದ ಹಸುಳೆಯನ್ನು ಬಿಟ್ಟು ಎಸೆದು ಪರಾರಿಯಾಗಿರುವ ಘಟನೆ ಪತ್ತೆಯಾಗಿದೆ. ಮುಂಜಾನೆ ಡೇರಿಗೆ ಹಾಲು ಹಾಕಲು ತೆರಳುತ್ತಿದ್ದ ಮಹಿಳೆಯೊಬ್ಬರಿಗೆ ಈ ದೃಶ್ಯ ಕಂಡುಬಂದಿದೆ. ಮುಂಜಾನೆ 4.30ರ ಸುಮಾರಿಗೆ ರಸ್ತೆ ಪಕ್ಕದ ಪೊದೆಯಲ್ಲಿ ಶಿಶುವಿನ ಅಳಲು ಮಹಿಳೆ ಗೀತಾ ಅವರಿಗೆ ಕೇಳಿದೆ. ಹೆಣ್ಣು ಶಿಶುವನ್ನು ರಕ್ಷಿಸಿ ಠಾಣೆಗೆ ಕರೆತಂದಿದ್ದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಗುವಿನ ಪೋಷಕರು ಉದ್ದೇಶಪೂರ್ವಕವಾಗಿ ಮಗುವನ್ನು ಅಪಾಯಕಾರಿ ಪರಿಸರದಲ್ಲಿ ಎಸೆದಿದ್ದಾರೆ ಎಂದು ಅಮಾಸೆಬೈಲ್ ಪೊಲೀಸ್ ಠಾಣೆಯ ಸಬ್

ಪ್ರಪಂಚ ಅರಿಯದ ಹಸುಗೂಸನ್ನು ಪೊದೆಗೆ ಬಿಸಾಡಿದ ಹೆತ್ತವರು Read More »

‘ಹೀಟ್’ನಲ್ಲಿದ್ದ ಶಿಕ್ಷಕನಿಂದ ‘ಕಿಸ್’ ಕೀಟಲೆ| ವಿದ್ಯಾರ್ಥಿನಿಗೆ ಅಶ್ಲೀಲ ಮೆಸೇಜ್ ಹಾಕಿದ ಪೋಲಿ ಮೇಷ್ಟ್ರು!

ಹಾವೇರಿ: ಆನ್​ಲೈನ್​ ಕ್ಲಾಸ್ ನೆಪದಲ್ಲಿ ಶಿಕ್ಷಕನೊಬ್ಬ ವಿದ್ಯಾರ್ಥಿನಿಗೆ ವಾಟ್ಸ್ ಆಪ್ ನಲ್ಲಿ ಅಶ್ಲೀಲ ಮೆಸೇಜ್ ಕಳುಹಿಸಿ ಕಿರುಕುಳ ನೀಡಿದ ಘಟನೆ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಳಕಿಗೆ ಬಂದಿದೆ. ರಾಣೆಬೆನ್ನೂರು ತಾಲೂಕು ದೇವರಗುಡ್ಡ ಸರ್ಕಾರಿ ಶಾಲೆಯ ಶಿಕ್ಷಕ ಮಲ್ಲಪ್ಪ ತಳವಾರ ಎಂಬಾತ ಪ್ರಕರಣದ ಆರೋಪಿಯಾಗಿದ್ದಾನೆ. ಈತ ಆನ್ ಲೈನ್ ಕ್ಲಾಸ್ ನೆಪದಲ್ಲಿ ವಿದ್ಯಾರ್ಥಿನಿಯ ಮೊಬೈಲ್ ನಂಬರ್ ಪಡೆದು ವಾಟ್ಸ್ ಆಪ್ ಮೂಲಕ ಚಾಟ್ ಮಾಡುತ್ತಿದ್ದ. ಕಿಸ್ ಕೊಡು ಅಂತ ಮೆಸೇಜ್ ಮಾಡಿ ಕಿರುಕುಳ

‘ಹೀಟ್’ನಲ್ಲಿದ್ದ ಶಿಕ್ಷಕನಿಂದ ‘ಕಿಸ್’ ಕೀಟಲೆ| ವಿದ್ಯಾರ್ಥಿನಿಗೆ ಅಶ್ಲೀಲ ಮೆಸೇಜ್ ಹಾಕಿದ ಪೋಲಿ ಮೇಷ್ಟ್ರು! Read More »

2022 ರ ಸರ್ಕಾರಿ ರಜಾದಿನಗಳ ಪಟ್ಟಿ ಬಿಡುಗಡೆ ಮಾಡಿದ ಕರ್ನಾಟಕ|

2022ನೇ ಸಾಲಿಗೆ ಸರ್ಕಾರಿ ಸಿಬ್ಬಂದಿಗೆ ಕರ್ನಾಟಕ ಸರ್ಕಾರದಿಂದ ಅಧಿಕೃತ ರಜಾ ದಿನಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಆ ಬಗ್ಗೆ ಮಾಹಿತಿ ಇಲ್ಲಿದೆ. ಕರ್ನಾಟಕ ಸರ್ಕಾರವು ನವೆಂಬರ್ 30ನೇ ತಾರೀಕಿನಂದು 2022ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಎಲ್ಲ ಎರಡನೇ ಮತ್ತು ನಾಲ್ಕನೇ ಶನಿವಾರ ಹಾಗೂ ಭಾನುವಾರಗಳಂದು ಸರ್ಕಾರಿ ಸಿಬ್ಬಂದಿಗೆ ರಜಾ ಇರುತ್ತದೆ. ಅದನ್ನು ಹೊರತುಪಡಿಸಿದಂತೆ ಇರುವ ರಜಾ ದಿನಗಳು ಈ ಕೆಳಗಿನಂತಿವೆ: 15-1-2022: ಶನಿವಾರ- ಉತ್ತರಾಯಣ ಪುಣ್ಯಕಾಲ, ಮಕರ ಸಂಕ್ರಾಂತಿ ಹಬ್ಬ26-1-2022: ಬುಧವಾರ-

2022 ರ ಸರ್ಕಾರಿ ರಜಾದಿನಗಳ ಪಟ್ಟಿ ಬಿಡುಗಡೆ ಮಾಡಿದ ಕರ್ನಾಟಕ| Read More »