ಬೆಳ್ತಂಗಡಿ: ಮಚ್ಚಿನಿಂದ ಕೊಚ್ಚಿ ಕೊಲೆಗೈಯಲು ಯತ್ನ| ಸಹೋದರರಿಬ್ಬರು ಗಂಭೀರ, ಆರೋಪಿಗಳನ್ನು ಕಂಬಿಹಿಂದೆ ಕಳುಹಿಸಿದ ಪೊಲೀಸರು|
ಬೆಳ್ತಂಗಡಿ: ಸಹೋದರರಿಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈಯ್ಯಲೆತ್ನಿಸಿದ ಘಟನೆ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಗೋವಿಂದೂರು ಎಂಬಲ್ಲಿ ನಡೆದಿದ್ದು, ತಕ್ಷಣವೇ ಕಾರ್ಯಪೃವೃತ್ತರಾದ ಪೊಲೀಸರು ಮಂಗಳವಾರ ರಾತ್ರಿಯೇ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಹಲ್ಲೆಗೊಳಗಾದವರನ್ನು ನೆಲ್ಲಿಗುಡ್ಡೆ ನಿವಾಸಿಗಳಾದ ಹೈದರ್ ಯಾನೆ ಜಾಕ್ ಹೈದರ್ ಮತ್ತು ಅವರ ಅಣ್ಣ ರಫೀಕ್ ಎಂದು ಗುರುತಿಸಲಾಗಿದೆ. ಮಂಗಳವಾರದಂದು ರಾತ್ರಿ ಸುಮಾರು 11:45ರ ವೇಳೆ ಹೈದರ್ ಮತ್ತು ರಫೀಕ್ ಆಟೋದಲ್ಲಿ ಬಾಡಿಗೆ ಹೋಗಿ ವಾಪಾಸ್ಸು ಮನೆಗೆ ಹಿಂತಿರುಗುತ್ತಿದ್ದ ವೇಳೆ ಕಳಿಯ ಗ್ರಾಮದ ಗೋವಿಂದೂರು ಶಾಲೆಯ ಬಳಿಯಲ್ಲಿ ಅಶುತೋಷ್







