Editor

80ರ ಮುದುಕನಿಂದ ಮೊಮ್ಮಗಳ ಅತ್ಯಾಚಾರ..!

ಡಿಜಿಟಲ್ ಡೆಸ್ಕ್: ಲೈಂಗಿಕ ಕಿರುಕುಳ ಆರೋಪದ ಮೇಲೆ 80 ವರ್ಷದ ವ್ಯಕ್ತಿಯನ್ನ ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ. ಲೈಂಗಿಕ ಸಂಬಂಧ ಹೊಂದಿದ್ದ ಮಹಿಳೆಯ ಮೊಮ್ಮಗಳ ಮೇಲೆ ಅತ್ಯಾಚಾರ ಎಸಗಿದ ವೃದ್ದನೊಬ್ಬನ ಕಾಮತೃಷೆ ನಗರದಲ್ಲಿ ಸಂಚಲನ ಮೂಡಿಸಿದೆ. ಪೊಲೀಸರ ಪ್ರಕಾರ, ಹಬೀಬುದ್ದೀನ್ ಅಲಿಯಾಸ್ ಬಶೀರ್ (80) ಓಲ್ಡ್ ಸಿಟಿಯ ಪಂಜೇಶ ಪ್ರದೇಶದ ನಿವಾಸಿಯಾಗಿದ್ದು, ವಿವಿಧ ಕಾರಣಗಳಿಗಾಗಿ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದನು. ಯಾರಿಗಾದರೂ ಹೇಳಿದರೆ ಸಹಜೀವನ ಮಾಡುವುದಾಗಿ ಬೆದರಿಸಿದ್ದ. ಇನ್ನು ಹಿರಿಯ ಮಹಿಳೆಯೊಂದಿಗೆ ಸಂಪರ್ಕ ಬೆಳೆಸಿ ಮೊಮ್ಮಗಳ ಮೇಲೆ ನೀಚ

80ರ ಮುದುಕನಿಂದ ಮೊಮ್ಮಗಳ ಅತ್ಯಾಚಾರ..! Read More »

ಕೊನೆ ಕ್ಷಣದಲ್ಲಿ ಕಾಂಗ್ರೆಸ್ ನಿಂದ ಪರಿಷತ್ ಚುನಾವಣಾ ಅಭ್ಯರ್ಥಿಗಳ ಪಟ್ಟಿ ಪ್ರಕಟ| ದ.ಕನ್ನಡದಲ್ಲಿ ಮಂಜುನಾಥ ಭಂಡಾರಿಗೆ ಟಿಕೆಟ್|

ಮಂಗಳೂರು: ಭಾರೀ ಕುತೂಹಲ ಕೆರಳಿಸಿದ್ದ ವಿಧಾನ ಪರಿಷತ್ ಚುನಾವಣೆಯ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಸಹ್ಯಾದ್ರಿ ಇಂಜಿನಿಯನಿರಿಂಗ್ ಕಾಲೇಜಿನ ಮುಖ್ಯಸ್ಥ ಮಂಜುನಾಥ ಭಂಡಾರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಕಾಂಗ್ರೆಸ್ ಹೈಕಮಾಂಡ್ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿದ್ದು ಸೋಮವಾರ ಸಂಜೆ ಪಟ್ಟಿ ಬಿಡುಗಡೆಗೊಳಿಸಿದೆ. ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದ್ದಾಗಿ ಕೆಲ ಮಾಧ್ಯಮಗಳು ಮತ್ತು ಪ್ರತಿಷ್ಠಿತ ಪತ್ರಿಕೆಯೊಂದರ ವೆಬ್ ಸೈಟ್ ನಲ್ಲಿ ಬರೆಯಲಾಗಿತ್ತು. ಇಂದು ಮಧ್ಯಾಹ್ನ ಸಂಭಾವ್ಯರ ಲಿಸ್ಟ್

ಕೊನೆ ಕ್ಷಣದಲ್ಲಿ ಕಾಂಗ್ರೆಸ್ ನಿಂದ ಪರಿಷತ್ ಚುನಾವಣಾ ಅಭ್ಯರ್ಥಿಗಳ ಪಟ್ಟಿ ಪ್ರಕಟ| ದ.ಕನ್ನಡದಲ್ಲಿ ಮಂಜುನಾಥ ಭಂಡಾರಿಗೆ ಟಿಕೆಟ್| Read More »

ಸಂಸದ ಪ್ರತಾಪ್ ಸಿಂಹ ತೆರಳುತ್ತಿದ್ದಂಥ ಕಾರು ಪಲ್ಟಿ?

ರಾಮನಗರ: ಮೈಸೂರಿನಿಂದ ಬೆಂಗಳೂರಿಗೆ ಕಾರ್ಯ ನಿಮಿತ್ತ ತೆರಳುತ್ತಿದ್ದಂತ ಸಂಸದ ಪ್ರತಾಪ್ ಸಿಂಹ ಕಾರು, ಪಲ್ಟಿಯಾಗಿದೆ ಎಂಬ ಸುದ್ದಿಯೊಂದು ಹರಿದಾಡುತ್ತಿದೆ.. ಸಂಸದ ಪ್ರತಾಪ್ ಸಿಂಹ ಅವರು, ಅವರ ಪತ್ನಿ, ಮಗಳು, ಕಾರು ಚಾಲಕ ಸೇರಿದಂತೆ ಆರು ಜನರೊಂದಿಗೆ ತಮ್ಮ ಕಾರಿನಲ್ಲಿ ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದರು. ರಾಮನಗರ ಜಿಲ್ಲೆಯ ಚೆನ್ನಪಟ್ಟಣ ತಾಲೂಕಿನ ಮುದುಗೆರೆ ಬಳಿಯಲ್ಲಿ ಕಾರು ನಿಲ್ಲಿಸಿ ಊಟ ಮಾಡುತ್ತಿದ್ದ ವೇಳೆ ಪ್ರಯಾಣಿಕರಿದ್ದ ಕಾರೊಂದು ಪಲ್ಟಿಯಾಗಿದೆ. ಈ ವೇಳೆ ಅಲ್ಲಿದೆ ಧಾವಿಸಿದ ಸಂಸದರು ಕಾರಿನಲ್ಲಿದ್ದವರನ್ನು ರಕ್ಷಿಸಿದ್ದಾರೆ. ಘಟನೆ ಹೇಗೆ ನಡೆಯಿತು

ಸಂಸದ ಪ್ರತಾಪ್ ಸಿಂಹ ತೆರಳುತ್ತಿದ್ದಂಥ ಕಾರು ಪಲ್ಟಿ? Read More »

ಕ್ಯಾಪ್ಟನ್ ಅಭಿನಂದನ್ ಗೆ ವೀರಚಕ್ರ ಪ್ರಶಸ್ತಿ ಪ್ರದಾನ

ನವದೆಹಲಿ: 2019ರ ಫೆಬ್ರವರಿ 27ರಂದು ಬಾಲಾಕೋಟ್ ವೈಮಾನಿಕ ದಾಳಿಯ ಸಂದರ್ಭದಲ್ಲಿ ಪಾಕಿಸ್ತಾನದ ಎಫ್-16 ಯುದ್ಧ ವಿಮಾನವನ್ನು ವೈಮಾನಿಕ ಯುದ್ಧದಲ್ಲಿ ಹೊಡೆದುರುಳಿಸಿದ ಗ್ರೂಪ್ ಕ್ಯಾಪ್ಟನ್ ಅಭಿನಂದನ್ ವರ್ತಮಾನ್ ಅವರಿಗೆ ವೀರ ಚಕ್ರ ಪ್ರಶಸ್ತಿ ದೊರೆತಿದೆ. ರಾಷ್ಟ್ರಪತಿ ಭವನದಲ್ಲಿ ಇಂದು ನಡೆದ ರಕ್ಷಣಾ ಹೂಡಿಕೆ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಈ ಪ್ರಶಸ್ತಿಯನ್ನು ಪ್ರದಾನ ಮಾಡಿದರು. ಪ್ರಶಸ್ತಿ ಪಡೆದ ಇತರಪ್ರಮುಖ ವಿಭೂತಿ ಧೌಂಧಿಯಾಲ್ ಅವರಿಗೆ ಶೌರ್ಯ ಚಕ್ರವನ್ನು ಮರಣೋತ್ತರವಾಗಿ, ನಯಾಬ್ ಸುಬೇದಾರ್ ಸೋಮವೀರ್ ಶೌರ್ಯ ಚಕ್ರ (ಮರಣೋತ್ತರ) ನೀಡಲಾಯಿತು

ಕ್ಯಾಪ್ಟನ್ ಅಭಿನಂದನ್ ಗೆ ವೀರಚಕ್ರ ಪ್ರಶಸ್ತಿ ಪ್ರದಾನ Read More »

ಪುತ್ತೂರು: ಸ್ವಂತ ಮೈದುನನಿಂದ ಅತ್ತಿಗೆ ಮೇಲೆ ಗುಂಡಿನ ದಾಳಿ| ಆರೋಪಿ ಪರಾರಿ|

ಪುತ್ತೂರು: ಜಾಗದ ತಕರಾರಿನಲ್ಲಿ ಮಾತಿನ ಚಕಮಕಿ ನಡೆದು, ಮೈದುನನೇ ಮಹಿಳೆಯ ಮೇಲೆ ನಾಡ ಬಂದೂಕಿನಲ್ಲಿ ಗುಂಡು ಹಾರಿಸಿ ಕೊಲ್ಲಲು ಯತ್ನಿಸಿದ ಬಗ್ಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರು ತಾಲೂಕಿನ ಶಾಂತಿಗೋಡು ಗ್ರಾಮದ ವೀರಮಂಗಲ ಕೊಯಕುಡೆ ಎಂಬಲ್ಲಿ ಘಟನೆ ನಡೆದಿದೆ. ದರ್ನಮ್ಮ(54), ಆಕೆಯ ಗಂಡ ಬಾಬು ಗೌಡ ಮತ್ತು ಅವರ ಮಗ ರವಿ ತಮ್ಮ ಮನೆಯ ಬಳಿಯ ಜಮೀನಿನಲ್ಲಿ ತೊಂಡೆಕಾಯಿ ಬಳ್ಳಿಗೆ ಚಪ್ಪರ ಹಾಕುತ್ತಿದ್ದಾಗ, ಮಹಿಳೆಯ ಮೈದುನನಾಗಿರುವ ದೇವಪ್ಪ ಗೌಡ ತನ್ನ ಬಂದೂಕು ಹಿಡಿದು ತಂದಿದ್ದು

ಪುತ್ತೂರು: ಸ್ವಂತ ಮೈದುನನಿಂದ ಅತ್ತಿಗೆ ಮೇಲೆ ಗುಂಡಿನ ದಾಳಿ| ಆರೋಪಿ ಪರಾರಿ| Read More »

ರಾಜ್ಯ ಸರಕಾರದಿಂದ ‘ಮಳೆಹಾನಿ’ ಪರಿಹಾರ ಘೋಷಣೆ |ತಕ್ಷಣ ಹಣ ಬಿಡುಗಡೆ ಮಾಡಲು ಡಿಸಿಗಳಿಗೆ ಸೂಚನೆ|

ಬೆಂಗಳೂರು : ವರುಣನ ಆರ್ಭಟಕ್ಕೆ ರಾಜ್ಯದ ಹಲವು ಭಾಗಗಳು ತತ್ತರಿಸಿದ್ದು, ಸದ್ಯ ಮಳೆಯಿಂದ ಭಾರಿ ಹಾನಿಯಾಗಿದೆ. ಈ ಹಿನ್ನಲೆಯಲ್ಲಿ ಸಂತ್ರಸ್ತರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪರಿಹಾರ ಘೋಷಿಸಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಮಾತನಾಡಿದ ಸಿಎಂ, ‘ನೀರು ನುಗ್ಗಿ ಹಾನಿಯಾದ ಮನೆಗಳಿಗೆ 10,000 ರೂ., ಸಂಪೂರ್ಣ ಹಾನಿಯಾದ ಮನೆಗಳಿಗೆ 95,000 ರೂ. ಕೂಡಲೇ ಹಣ ಬಿಡುಗಡೆ ಮಾಡುವಂತೆ ಆಯಾ ಜಿಲ್ಲಾ ಡಿಸಿಗೆ ಸೂಚಿಸಿದ್ದೇನೆ’ ಎಂದರು. ಅದ್ರಂತೆ, ನೆಲಸಮವಾದ ಮನೆಗಳಿಗೆ 5 ಲಕ್ಷ ರೂಪಾಯಿ, ಅಲ್ಪ ಪ್ರಮಾಣದಲ್ಲಿ ಹಾನಿಯಾದ ಮನೆಗಳಿಗೆ 50 ಸಾವಿರ

ರಾಜ್ಯ ಸರಕಾರದಿಂದ ‘ಮಳೆಹಾನಿ’ ಪರಿಹಾರ ಘೋಷಣೆ |ತಕ್ಷಣ ಹಣ ಬಿಡುಗಡೆ ಮಾಡಲು ಡಿಸಿಗಳಿಗೆ ಸೂಚನೆ| Read More »

ಕಾನೂನು ಮಧ್ಯಪ್ರವೇಶ| ಬೀಸೋ ಕೊಡಲಿಯಿಂದ ತಪ್ಪಿಸಿಕೊಂಡ “ಶ್ರೀತಾಳೆ”

ಬೆಳ್ತಂಗಡಿ: ಅಳಿವಿನಂಚಿನಲ್ಲಿರುವ ಶ್ರೀ ತಾಳೆ ಮರ ಹೂ ಬಿಟ್ಟರೆ ಊರಿಗೆ ಅನಿಷ್ಠ ಎಂಬ ಕಾರಣಕ್ಕಾಗಿ ಹೂ ಬಿಟ್ಟ ತಾಳೆ ಮರವನ್ನು ಕಡಿಯಲು ಮುಂದಾಗಿದ್ದ ಗ್ರಾಮಸ್ಥರನ್ನು ಅರಣ್ಯ ಇಲಾಖೆ ತಡೆದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕರಿಮಣೇಲು ಗ್ರಾಮದ ದೇಲಂಪುರಿ ಎಂಬಲ್ಲಿ ಚಂದ್ರಶೇಖರ್ ಮತ್ತು ಗಿರಿಜಮ್ಮ ಎಂಬುವವರ ಜಾಗದಲ್ಲಿ 80 ವರ್ಷದ ಹಳೆಯದಾದ ತಾಳೆ ಮರ ಹೂ ಬಿಟ್ಟಿದ್ದು, ಈ ಮರ ಹೂ ಬಿಟ್ಟಿರೋದು ಊರಿಗೆ ಅನಿಷ್ಠ ಎಂಬ ಭಾವನೆ ಮನೆಯವರು ಮತ್ತು ಊರವರಿಗೆ ಕಾಡಿದೆ. ಈ

ಕಾನೂನು ಮಧ್ಯಪ್ರವೇಶ| ಬೀಸೋ ಕೊಡಲಿಯಿಂದ ತಪ್ಪಿಸಿಕೊಂಡ “ಶ್ರೀತಾಳೆ” Read More »

ಕಡಬ: ಹಾಡುಹಗಲು ಮನೆಯಂಗಳದಲ್ಲೇ ಓಡಾಡಿದ ಕಾಡಾನೆ ಹಿಂಡು

ಕಡಬ. ಹಾಡುಹಗಲೇ ಕಾಡಾನೆ ಹಿಂಡೊಂದು ಮನೆ ಅಂಗಳ ಹಾಗೂ ತೋಟಕ್ಕೆ ಲಗ್ಗೆಯಿಟ್ಟು ಜನರನ್ನು ಭಯಬೀತಿ ಗೊಳಿಸುತ್ತಿರುವ ಘಟನೆ ಕಡಬ ತಾಲೂಕಿನ ಕಡ್ಯ ಕೊಣಾಜೆ ವ್ಯಾಪ್ತಿಯಲ್ಲಿ ಸಂಭವಿಸಿದೆ. ಸುಬ್ರಹ್ಮಣ್ಯ ವಲಯ ಅರಣ್ಯ ವ್ಯಾಪ್ತಿಯ ಕೊಣಾಜೆ ಕಡ್ಯ ಪ್ರದೇಶದಲ್ಲಿ ಕಾಡಾನೆ ರಾತ್ರಿ ಹಾಗೂ ಹಾಡು ಹಗಲಲ್ಲೂ ತೋಟಕ್ಕೆ ನುಗ್ಗಿ ಕೃಷಿ ನಾಶ ಪಡಿಸುತ್ತಿರುವ ದೂರು ಕೇಳಿಬಂದಿದೆ. ಹಲವರ ತೋಟಕ್ಕೆ ಲಗ್ಗೆ ಇಟ್ಟಿರುವ ಕಾಡಾನೆ ನೂರಾರು ಅಡಿಕೆ ಗಿಡ, ಬಾಳೆ ಸೇರಿದಂತೆ ಇತರೆ ಕೃಷಿಗಳನ್ನು ನಾಶ ಪಡಿಸಿದೆ. ಕಾಡಾನೆ ದಾಳಿಯಿಂದ ಜನತೆ

ಕಡಬ: ಹಾಡುಹಗಲು ಮನೆಯಂಗಳದಲ್ಲೇ ಓಡಾಡಿದ ಕಾಡಾನೆ ಹಿಂಡು Read More »

T 20 ಸರಣಿ: ಕ್ಲೀನ್ ಸ್ವೀಪ್ ಮಾಡಿದ ಭಾರತ

ಕೋಲ್ಕತ್ತಾ: ಇಲ್ಲಿನ ಈಡನ್ ಗಾರ್ಡನ್ಸ್ ಮೈದಾನದಲ್ಲಿ ಭಾನುವಾರ ನಡೆದ ಕೊನೆಯ ಪಂದ್ಯವನ್ನು ಗೆಲ್ಲುವ ಮೂಲಕ ನ್ಯೂಜಿಲೆಂಡ್ ವಿರುದ್ಧದ ಟಿ20 ಸರಣಿಯನ್ನು ಭಾರತ ಕ್ಲೀನ್ ಸ್ವೀಪ್ ಮಾಡಿದೆ. ರೋಹಿತ್ ಶರ್ಮ ಭರ್ಜರಿ ಬ್ಯಾಟಿಂಗ್, ಅಕ್ಷರ್ ಪಟೇಲ್ ಬೌಲಿಂಗ್ ನೆರವಿನಿಂದ 73 ರನ್ ಜಯಗಳಿಸಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರುಗಳಲ್ಲಿ 7 ವಿಕೆಟ್ ನಷ್ಟಕ್ಕೆ 184 ರನ್ ಗಳಿಸಿತು. ರೋಹಿತ್ ಶರ್ಮಾ 31 ಎಸೆತಗಳಲ್ಲಿ 5 ಬೌಂಡರಿ ಹಾಗೂ 3 ಸಿಕ್ಸರ್ ನೆರವಿನಿಂದ 56

T 20 ಸರಣಿ: ಕ್ಲೀನ್ ಸ್ವೀಪ್ ಮಾಡಿದ ಭಾರತ Read More »

ಮಂಗಳೂರು: ಅತ್ಯಾಚಾರ ನಡೆಸಿ‌ ಎಂಟು ವರ್ಷದ ಕಂದಮ್ಮನ ಕೊಲೆಗೈದ ಕಿರಾತಕರು..!?

ಮಂಗಳೂರು, ನ.21: ಕಂಕನಾಡಿ ಗ್ರಾಮಾಂತರ ಠಾಣೆ ವ್ಯಾಪ್ತಿಯ ಉಳಾಯಿಬೆಟ್ಟು ಬಳಿಯ ಪರಾರಿ ಎಂಬಲ್ಲಿ ಟೈಲ್ಸ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕರ ಎಂಟು ವರ್ಷದ ಮಗುವನ್ನು ಅತ್ಯಾಚಾರಗೈದು ಕೊಲೆಗೈದಿರುವ ಘಟನೆ ಬೆಳಕಿಗೆ ಬಂದಿದೆ. ರಾಜ್ ಟೈಲ್ಸ್ ಎನ್ನುವ ಹೆಸರಿನ ಇಂಟರ್ಲಾಕ್ ಕಾರ್ಖಾನೆ ಆವರಣದಲ್ಲಿ ಘಟನೆ ನಡೆದಿದೆ. ಜಾರ್ಖಂಡ್ ಮೂಲದ ಕಾರ್ಮಿಕರು ಅಲ್ಲಿ ಕೆಲಸ ಮಾಡುತ್ತಿದ್ದರು. ಕುಟುಂಬದ ಒಂದು ಮಗು ಸಂಜೆ ವೇಳೆಗೆ ಕಾಣೆಯಾಗಿತ್ತು. ಕಾರ್ಮಿಕರು, ಕುಟುಂಬಸ್ಥರು ಹುಡುಕಾಟ ನಡೆಸಿದಾಗ ಸಂಜೆ 6 ಗಂಟೆ ಸುಮಾರಿಗೆ ಅಲ್ಲಿಯೇ ಪಕ್ಕದ

ಮಂಗಳೂರು: ಅತ್ಯಾಚಾರ ನಡೆಸಿ‌ ಎಂಟು ವರ್ಷದ ಕಂದಮ್ಮನ ಕೊಲೆಗೈದ ಕಿರಾತಕರು..!? Read More »