Editor

85 ನಿಮಿಷಗಳ ಅವದಿ ಅಮೇರಿಕಾದ ಅಧ್ಯಕ್ಷೆಯಾದ ಭಾರತ ಮೂಲದ ಕಮಲಾ ಹ್ಯಾರೀಸ್!

ವಾಷಿಂಗ್ಟನ್: ಕಮಲಾ ಹ್ಯಾರಿಸ್ ಯುನೈಟೆಡ್‌ ಸ್ಟೇಟ್ಸ್‌ನಲ್ಲಿ ಅಧ್ಯಕ್ಷೀಯ ಅಧಿಕಾರ ಹಿಡಿದ ಮೊದಲ ಮಹಿಳೆ ಎನಿಸಿಕೊಂಡಿದ್ದಾರೆ. ಅವರು ಈಗಾಗಲೇ ಅಮೆರಿಕದ ಮೊದಲ ಮಹಿಳಾ ಉಪಾಧ್ಯಕ್ಷೆಯಾಗಿದ್ದಾರೆ. ಅಮೆರಿಕದ ಉಪಾಧ್ಯಕ್ಷೆ, ಅಧ್ಯಕ್ಷೆ ಯಾವಾಗ ಆದರು ಎಂಬ ಪ್ರಶ್ನೆ ನಿಮ್ಮ ಮನಸ್ಸಲ್ಲಿ ಬಂತಾ..? ಅವರು ಅಧ್ಯಕ್ಷೆಯಾಗಿಲ್ಲ. ಬದಲಾಗಿ ಕೇವಲ 1 ಗಂಟೆ 25 ನಿಮಿಷಗಳ ಕಾಲ ಅಧ್ಯಕ್ಷೀಯ ಅಧಿಕಾರ ಹೊಂದಿದ್ದರು. ಯಾಕೆ ಗೊತ್ತಾ… ಇಲ್ಲಿದೆ ಸ್ಟೋರಿ… ನಿಯಮಿತ ಆರೋಗ್ಯ ತಪಾಸಣೆಯ ಭಾಗವಾಗಿ ಕೊಲೊನೋಸ್ಕೋಪಿಗಾಗಿ ಅನಸ್ಥೇಸಿಯಾ ನಡೆಯುವ ಕಾರಣ ಅಧ್ಯಕ್ಷ ಜೋ ಬೈಡೆನ್‌ ಶುಕ್ರವಾರ

85 ನಿಮಿಷಗಳ ಅವದಿ ಅಮೇರಿಕಾದ ಅಧ್ಯಕ್ಷೆಯಾದ ಭಾರತ ಮೂಲದ ಕಮಲಾ ಹ್ಯಾರೀಸ್! Read More »

ಹಿಂದೂ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿ ಹತ್ಯೆ

ಇಸ್ಲಾಮಾಬಾದ್: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 11 ವರ್ಷದ ಹಿಂದೂ ಬಾಲಕಿಯನ್ನು ಲೈಂಗಿಕ ದೌರ್ಜನ್ಯದ ನಂತರ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕುಟುಂಬಸ್ಥರ ಪ್ರಕಾರ ಶುಕ್ರವಾರ ಸಂಜೆ ಅಪ್ರಾಪ್ತ ಬಾಲಕಿ ನಾಪತ್ತೆಯಾಗಿದ್ದಳು. ಬಾಲಕನ ಶವ ಶನಿವಾರ ಖೈರ್‌ಪುರ ಮಿರ್ ಪ್ರದೇಶದ ಬಾಬರ್ಲೋಯ್ ಪಟ್ಟಣದ ನಿರ್ಜನ ಮನೆಯಲ್ಲಿ ಪತ್ತೆಯಾಗಿದೆ. ಅಪ್ರಾಪ್ತ ಬಾಲಕಿ 5ನೇ ತರಗತಿಯಲ್ಲಿ ಓದುತ್ತಿರುವುದಾಗಿ ತಿಳಿದುಬಂದಿದೆ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ನಂತರ ದುಷ್ಕರ್ಮಿಗಳು ಕತ್ತು ಹಿಸುಕಿ ಕೊಂದಿದ್ದಾರೆ . ಇಗಾಗಲೇ ಇಬ್ಬರನ್ನು ಬಂಧಿಸಿದ್ದು, ಅವರಲ್ಲಿ ಒಬ್ಬರು ತಮ್ಮ

ಹಿಂದೂ ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯವೆಸಗಿ ಹತ್ಯೆ Read More »

ವಿಟ್ಲ: ಕಾರು – ಬೈಕ್‌ ಢಿಕ್ಕಿ – ಸವಾರ ಮೃತ್ಯು

ವಿಟ್ಲ: ಬೈಕ್‌ ಕಾರು ಢಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಸಾವನ್ನಪ್ಪಿದ ಘಟನೆ ಫರಂಗಿಪೇಟೆ ಸಮೀಪದ ಅರ್ಕುಳದಲ್ಲಿ ಇಂದು ನಡೆದಿದೆ. ಮೃತ ಸವಾರನನ್ನು ಕೇಪು ಗ್ರಾಮದ ನೀರ್ಕಜೆ ನಿವಾಸಿ ಬಾಬು ನಾಯ್ಕ ಅವರ ಪುತ್ರ ಪ್ರಜ್ವಲ್‌ (26) ಎಂದು ಗುರುತಿಸಲಾಗಿದೆ. ಇವರು ಮಂಗಳೂರಿನ ಎನ್‌ಎಂಪಿಟಿ ಉದ್ಯೋಗಿಯಾಗಿದ್ದರು. ಹಾಗಾಗಿ ಕಂಪೆನಿಗೆ ಬೈಕ್‌‌ನಲ್ಲಿ ಹೋಗುತ್ತಿದ್ದ ಸಂದರ್ಭ ಬೈಕ್‌ ಕಾರು ಢಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆ ಪರಿಣಾಮ ಪ್ರಜ್ವಲ್‌ ಗಂಭೀರ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ವಿಟ್ಲ: ಕಾರು – ಬೈಕ್‌ ಢಿಕ್ಕಿ – ಸವಾರ ಮೃತ್ಯು Read More »

ಪ್ರೀತಿ ನಿರಾಕರಿಸಿ ಇನ್ನೊಬ್ಬಳ ವರಿಸಲು ಮುಂದಾದ ಪ್ರಿಯಕರ| ನೊಂದ ಪ್ರಿಯತಮೆ ಆತನಿಗೆ ಮಾಡಿದ್ದೇನು ಗೊತ್ತಾ?

ತಿರುವನಂತಪುರಂ: 35 ವರ್ಷದ ಮಹಿಳೆ ತನ್ನ ಮದುವೆಯ ಪ್ರಸ್ತಾಪವನ್ನು ತಿರಸ್ಕರಿಸಿದ ನಂತರ ತನ್ನ ಪ್ರಿಯಕರನ ಮೇಲೆ ಆಸಿಡ್ ಎಸೆದ ಆರೋಪದ ಮೇಲೆ ಬಂಧಿಸಲಾಗಿದೆ. ಕೇರಳದ ಇಡುಕ್ಕಿ ಜಿಲ್ಲೆಯ ಆದಿಮಾಲಿ ಎಂಬಲ್ಲಿ ಈ ಘಟನೆ ನಡೆದಿದೆ ಗಾಯಗೊಂಡ ಅರುಣ್ ಕುಮಾರ್ (27) ತಿರುವನಂತಪುರಂ ಜಿಲ್ಲೆಯ ಪೂಜಾಪ್ಪುರ ಮೂಲದವರು. ಆರೋಪಿ ಶೀಬಾಳನ್ನು ಸಾಮಾಜಿಕ ಜಾಲತಾಣಗಳ ಮೂಲಕ ಭೇಟಿಯಾಗಿದ್ದ ಆತ ಇಬ್ಬರ ನಡುವೆ ಪ್ರೇಮಾಂಕುರವಾಗಿತ್ತು. ಆದರೆ, ಅರುಣ್ ಬೇರೆ ಹುಡುಗಿಯನ್ನು ಮದುವೆಯಾಗಲು ನಿರ್ಧರಿಸಿದ್ದು ಶೀಬಾಳ ಮನಸ್ತಾಪಕ್ಕೆ ಕಾರಣವಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರೀತಿ ನಿರಾಕರಿಸಿ ಇನ್ನೊಬ್ಬಳ ವರಿಸಲು ಮುಂದಾದ ಪ್ರಿಯಕರ| ನೊಂದ ಪ್ರಿಯತಮೆ ಆತನಿಗೆ ಮಾಡಿದ್ದೇನು ಗೊತ್ತಾ? Read More »

ಪಠ್ಯಕ್ರಮ ಪೂರ್ಣಗೊಳಿಸಲು ಕಾಲಾವಕಾಶ ಕೊರತೆ| ಈ ಬಾರಿಯೂ ಎಸ್ಸೆಸ್ಸೆಲ್ಸಿ ಪರೀಕ್ಷೆ ವಿಳಂಬ ಸಾಧ್ಯತೆ|

ಬೆಂಗಳೂರು : 2021-22 ನೇ ಸಾಲಿನ ಶೈಕ್ಷಣಿಕ ಅವಧಿ ವಿಳಂಬ ಹಾಗೂ ಪಠ್ಯಕ್ರಮ ಪರಿಪೂರ್ಣಗೊಳಿಸಲು ಕಾಲಾವಕಾಶದ ಕೊರತೆ ಇರುವುದರಿಂದ ಈ ಬಾರಿಯೂ ಎಸ್‌ಎಸ್‌ಎಲ್ ಸಿ ಪರೀಕ್ಷೆ ವಿಳಂಬವಾಗುವ ಸಾಧ್ಯತೆ ಇದೆ. ಶೈಕ್ಷಣಿಕ ಅವಧಿ ವಿಳಂಬ ಮತ್ತು ಪಠ್ಯ ಕ್ರಮ ಪೂರ್ಣಗೊಳಿಸಲು ಕಾಲಾವಕಾಶದ ಹಿನ್ನೆಲೆಯಲ್ಲಿ 2022 ರ ಎಸ್‌ಎಸ್‌ಎಲ್ ಸಿ ಪರೀಕ್ಷೆಯನ್ನು ಮೇ ಕೊನೆಯ ವಾರದಿಂದ ಜೂನ್ ಮೊದಲ ವಾರದ ವೇಳೆಗೆ ನಡೆಸಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ ಎನ್ನಲಾಗಿದೆ. ಪ್ರತಿ ವರ್ಷ ಮಾರ್ಚ್ ಕೊನೆಯ ವಾರದಿಂದ ಏಪ್ರಿಲ್

ಪಠ್ಯಕ್ರಮ ಪೂರ್ಣಗೊಳಿಸಲು ಕಾಲಾವಕಾಶ ಕೊರತೆ| ಈ ಬಾರಿಯೂ ಎಸ್ಸೆಸ್ಸೆಲ್ಸಿ ಪರೀಕ್ಷೆ ವಿಳಂಬ ಸಾಧ್ಯತೆ| Read More »

ಅತ್ಯಾಚಾರ ಎಸಗಿ ಸಂತ್ರಸ್ತೆಯನ್ನು ಮದ್ವೆಯಾದ್ರೂ ಪ್ರಕರಣ ರದ್ದಾಗಲ್ಲ- ಹೈಕೋರ್ಟ್

ಬೆಂಗಳೂರು: ಅತ್ಯಾಚಾರ ಎಸಗಿ‌ ಸಂತ್ರಸ್ತೆಯನ್ನು ಮದುವೆಯಾದರೂ ಕೇಸ್ ರದ್ದಾಗುವುದಿಲ್ಲ ಎಂಬ ಮಹತ್ವದ ಸ್ಪಷ್ಟನೆಯನ್ನು ಹೈ ಕೋರ್ಟ್ ನೀಡಿದೆ. ಸಮಾಜದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಹಿನ್ನೆಲೆಯಲ್ಲಿ ಪೋಕ್ಸೋ ಪ್ರಕರಣ ಕೈಬಿಡಲು ಹೈಕೋರ್ಟ್ ನಿರಾಕರಿಸಿದೆ. ಪೋಕ್ಸೋ ಪ್ರಕರಣದಲ್ಲಿ ಸಂತ್ರಸ್ಥೆಯನ್ನು ಆರೋಪಿ ಮದುವೆಯಾಗಿದ್ದರೂ ಕೂಡ ಅತ್ಯಾಚಾರ ಪ್ರಕರಣ ರದ್ದಾಗುವುದಿಲ್ಲವೆಂದು ಸ್ಪಷ್ಟಪಡಿಸಿದೆ. ವಿಜಯಪುರದ ಬಸವನ ಬಾಗೇವಾಡಿಯ ಆರೋಪಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೆಚ್.ಪಿ. ಸಂದೇಶ್ ಅವರ ಪೀಠ, ಪ್ರಕರಣದಲ್ಲಿ ಆರೋಪಿ ಮತ್ತು ಸಂತ್ರಸ್ಥೆ ರಾಜಿಯಾದ ಮಾತ್ರಕ್ಕೆ ಕೇಸ್

ಅತ್ಯಾಚಾರ ಎಸಗಿ ಸಂತ್ರಸ್ತೆಯನ್ನು ಮದ್ವೆಯಾದ್ರೂ ಪ್ರಕರಣ ರದ್ದಾಗಲ್ಲ- ಹೈಕೋರ್ಟ್ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಈ ವಾರದಲ್ಲಿ ಯಾವ ರಾಶಿಗೆ ಏನು ಫಲ? ಒಂದಿಡೀ ವಾರದ ಶುಭಾಶುಭ ಫಲಗಳ ವಿವರ ಇಲ್ಲಿದೆ. ಈ ವಾರ ಭವಿಷ್ಯವು ಗೋಚಾರ ಫಲವನ್ನು ಅವಲಂಬಿಸಿದೆ. ಸಮಸ್ಯೆಗಳಿಗೆ ಪರಿಹಾರದ ವಿವರಗಳನ್ನೂ ನೀಡಲಾಗಿದೆ. ನೆಮ್ಮದಿಯ ಬಾಳು ನಿಮ್ಮದಾಗಲಿ. ಮೇಷ ರಾಶಿ ( ಅಶ್ವಿನಿ ಭರಣಿ ಕೃತಿಕ 1) ವೈಯಕ್ತಿಕ ತೊಂದರೆಯಿಂದ ಕೆಲಕಾಲ ಬಿಡುಗಡೆಯನ್ನು ಹೊಂದುವಿರಿ. ಪತ್ನಿಯ ಆರೋಗ್ಯದಲ್ಲಿ ಸಾಕಷ್ಟು ಸುಧಾರಣೆ ಕಾಣಬಹುದು. ಉದ್ಯೋಗ ಆಕಾಂಕ್ಷಿಗಳಿಗೆ ಉದ್ಯೋಗದ ಬಗ್ಗೆ ಭರವಸೆ ದೊರೆಯುತ್ತದೆ.ವಿದೇಶಿ ವ್ಯವಹಾರಸ್ಥರ ಪರಿಚಯದಿಂದಾಗಿ ವ್ಯವಹಾರಕ್ಕೆ ಹೊಸ ತಿರುವು ದೊರೆಯುತ್ತದೆ. ಅತಿಯಾದ

ದ್ವಾದಶ ರಾಶಿಗಳ ವಾರಭವಿಷ್ಯ Read More »

ಮಳೆಹೊಡೆತಕ್ಕೆ ನಲುಗಿದ ಆಂದ್ರಪ್ರದೇಶ| ಪ್ರವಾಹ ವಿಕೋಪಕ್ಕೆ 23 ಬಲಿ, ನೂರಾರು ಮಂದಿ ಕಣ್ಮರೆ

ಅನಂತಪುರ: ಭಾರಿ ಮಳೆಯಿಂದಾಗಿ ಭಾರಿ ಪ್ರವಾಹಕ್ಕೆ ಸಿಲುಕಿರುವ ಆಂಧ್ರ ಪ್ರದೇಶದಲ್ಲಿ ಮಳೆಯಿಂದಾಗಿ ಸಂಭವಿಸಿದ ಅವಘಡಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ 23ಕ್ಕೆ ಏರಿಕೆಯಾಗಿದ್ದು, ಇನ್ನೂ ನೂರಾರು ಮಂದಿ ನಾಪತ್ತೆಯಾಗಿದ್ದಾರೆ. ದಕ್ಷಿಣ ಆಂಧ್ರ ಪ್ರದೇಶದ ರಾಯಲಸೀಮ ಪ್ರಾಂತ್ಯದಲ್ಲಿ ಪ್ರವಾಹ ಹೆಚ್ಚಾಗಿದ್ದು, ಅನಂತಪುರ, ತಿರುಪತಿ, ಚಿತ್ತೂರಿನಲ್ಲಿ ಭಾರಿ ಮಳೆ ಮತ್ತು ಪ್ರವಾಹ ಮುಂದುವರೆದಿದೆ. ರಾಯಲಸೀಮಾ ಪ್ರದೇಶವು ಹೆಚ್ಚು ಹಾನಿಗೊಳಗಾಗಿದೆ. ರಾಜ್ಯದ ಚಿತ್ತೂರು, ಕಡಪ, ಕರ್ನೂಲು ಮತ್ತು ಅನಂತಪುರ ಜಿಲ್ಲೆಗಳು ಹಾನಿಗೀಡಾಗಿವೆ. ಗುರುವಾರದಿಂದ ಮಳೆ ಎಡೆಬಿಡದೆ ಸುರಿಯುತ್ತಿದ್ದು ಪರಿಣಾಮ ಚೆಯ್ಯೂರು ನದಿ ತುಂಬಿ ಹರಿಯುತ್ತಿದೆ.

ಮಳೆಹೊಡೆತಕ್ಕೆ ನಲುಗಿದ ಆಂದ್ರಪ್ರದೇಶ| ಪ್ರವಾಹ ವಿಕೋಪಕ್ಕೆ 23 ಬಲಿ, ನೂರಾರು ಮಂದಿ ಕಣ್ಮರೆ Read More »

ಮುಸ್ಲಿಂ ಹುಡುಗನ ಜೊತೆ ಮದುವೆಗೆ ರೆಡಿಯಾಗಿದ್ದ ಹಿಂದೂ ಹುಡುಗಿ| ಮಠಾಧೀಶರ ಮನವೊಲಿಕೆ ಬಳಿಕ ನಿರ್ಧಾರದಿಂದ ಹಿಂದೆ ಸರಿದ ಯುವತಿ|

ಮಂಗಳೂರು: ಕಳೆದ ಎರಡು ದಿನಗಳಿಂದ ವೈರಲ್ ಆಗಿದ್ದ ಹಿಂದು ಯುವತಿ ಮತ್ತು ಮುಸ್ಲಿಂ ಯುವಕನ ಮದುವೆ ವಿಚಾರದಲ್ಲಿ ಹಿಂದು ಸಂಘಟನೆಗಳ ನಾಯಕರು ಎಂಟ್ರಿ ಆಗಿದ್ದು, ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿಯವರ ಮನವೊಲಿಕೆ ಬಳಿಕ ಆಕೆ ತನ್ನ ನಿರ್ಧಾರದಿಂದ ಹಿಂದೆ ಸರಿದಿದ್ದಾಳೆ. ಪಾಂಡೇಶ್ವರದ ಯುವತಿಯ ಮನೆಗೆ ತೆರಳಿದ ಸ್ವಾಮೀಜಿ, ಯುವತಿ ಮತ್ತು ಆಕೆಯ ಹೆತ್ತವರಲ್ಲಿ ಮಾತನಾಡಿದ್ದಾರೆ. ಇತ್ತೀಚಿಗೆ ಸುಳ್ಯದಲ್ಲಿ ‌ನಡೆದ ಆಸಿಯಾ ಪ್ರಕರಣ ಸೇರಿದಂತೆ ಹತ್ತಾರು ಪ್ರಕರಣದಲ್ಲಿ ಹಿಂದು ಯುವತಿಯರನ್ನು ಪ್ರೀತಿಯ ಬಲೆಗೆ ಬೀಳಿಸಿ, ಮತಾಂತರ ಮಾಡಿರುವ

ಮುಸ್ಲಿಂ ಹುಡುಗನ ಜೊತೆ ಮದುವೆಗೆ ರೆಡಿಯಾಗಿದ್ದ ಹಿಂದೂ ಹುಡುಗಿ| ಮಠಾಧೀಶರ ಮನವೊಲಿಕೆ ಬಳಿಕ ನಿರ್ಧಾರದಿಂದ ಹಿಂದೆ ಸರಿದ ಯುವತಿ| Read More »

ಬಂಟ್ವಾಳ: ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿದ ಮಹಿಳೆ

ಬಂಟ್ವಾಳ: ಮಹಿಳೆಯೋರ್ವರು ಪಾಣೆಮಂಗಳೂರು ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಬೆಳಗ್ಗೆ 10 ಗಂಟೆಯ ಸುಮಾರಿಗೆ ಮಹಿಳೆಯೋರ್ವರು ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿದ್ದನ್ನು ವಾಹನ ಸವಾರರು ನೋಡಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ವಿಷಯ ತಿಳಿದ ತಕ್ಷಣವೇ ಮುಳುಗಾರರು ದೋಣಿಯ ಮೂಲಕ ನೇತ್ರಾವತಿ ಸೇತುವೆ ಬಳಿ ಧಾವಿಸಿದ್ದು, ಮಹಿಳೆ ಅದಾಗಲೇ ನೀರಿನಲ್ಲಿ ಮುಳುಗಿ ಕೊಚ್ಚಿಕೊಂಡು ಹೋಗಿದ್ದಾರೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಇನ್ನೂ ನದಿಗೆ ಹಾರಿದ ಮಹಿಳೆ ಯಾರು ಎನ್ನುವ ಮಾಹಿತಿ ಇನ್ನೂ ಲಭ್ಯವಾಗಿಲ್ಲ.

ಬಂಟ್ವಾಳ: ನೇತ್ರಾವತಿ ಸೇತುವೆಯಿಂದ ನದಿಗೆ ಹಾರಿದ ಮಹಿಳೆ Read More »