Editor

ಮಂಗಳೂರು ಏರ್ ಪೋರ್ಟ್ ನಲ್ಲಿ ಅಕ್ರಮ ಚಿನ್ನ ವಶ| ಸುಳ್ಯ ಮೂಲದ ವ್ಯಕ್ತಿಯ ಬಂಧನ|

ಮಂಗಳೂರು: ಅಕ್ರಮ ಸಾಗಾಟದ 34.32ಲಕ್ಷ ರೂ. ಮೌಲ್ಯದ ಚಿನ್ನವನ್ನು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು‌ ವಶಪಡಿಸಿಕೊಂಡಿದ್ದಾರೆ. ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನದಲ್ಲಿ ದುಬೈನಿಂದ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ನಡೆಸಿದಾಗ ಆತನಲ್ಲಿ ಅಕ್ರಮ ಚಿನ್ನ ಪತ್ತೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಮೂಲದ ಈ ಪ್ರಯಾಣಿಕ ಚಿನ್ನವನ್ನು ಪೇಸ್ಟ್ ರೂಪದಲ್ಲಿ ದೇಹದಲ್ಲಿ ಬಚ್ಚಿಟ್ಟು ಕಳ್ಳಸಾಗಣೆ ಮಾಡುತ್ತಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಈತನಿಂದ 681 ಗ್ರಾಂ ತೂಕದ 34,32,240 ಲಕ್ಷ

ಮಂಗಳೂರು ಏರ್ ಪೋರ್ಟ್ ನಲ್ಲಿ ಅಕ್ರಮ ಚಿನ್ನ ವಶ| ಸುಳ್ಯ ಮೂಲದ ವ್ಯಕ್ತಿಯ ಬಂಧನ| Read More »

ರಾಜ್ಯದಲ್ಲಿ ಮುಂದುವರಿದ ವರ್ಷಧಾರೆ| ಅಪಾರ ಹಾನಿ, ಬೆಳೆನಾಶ| ಇನ್ನೂ ಮೂರುದಿನ ಭಾರೀ ಮಳೆ ಸಾಧ್ಯತೆ|

ಬೆಂಗಳೂರು: ಕಳೆದೆರಡು ವಾರಗಳಿಂದ ಸತತವಾಗಿ ಬೀಳುತ್ತಿರುವ ಮಳೆ ಇನ್ನೂ ಮೂರು ದಿನಗಳ ಕಾಲ ಮುಂದುವರೆಯುವ ಮುನ್ಸೂಚನೆಗಳಿವೆ. ನಿರಂತರವಾಗಿ ಬೀಳುತ್ತಿರುವ ಮಳೆಗೆ ರಸ್ತೆಗಳು ಹಾನಿಗೀಡಾಗಿವೆ. ಕೆಲವೆಡೆ ಮನೆ ಕುಸಿತ, ರಸ್ತೆ ಕುಸಿತವೂ ಉಂಟಾದ ವರದಿಯಾಗಿದೆ. ಮುಂಗಾರು ಹಂಗಾಮಿನ ಬಹುತೇಕ ಬೆಳೆಗಳು ಸತತ ಮಳೆಗೆ ಸಿಕ್ಕಿ ಹಾನಿಗೀಡಾಗಿವೆ. ಅಕಾಲಿಕ ಮಳೆಗೆ ಜನಜೀವನ ತತ್ತರಿಸುವಂತಾಗಿದೆ. ಹಿಂಗಾರು ಮಳೆ ಆರಂಭದಿಂದಲೂ ಚುರುಕಾಗಿದ್ದು, ನಿರಂತರವಾಗಿ ಬೀಳುತ್ತಿದೆ. ನಿನ್ನೆಯೂ ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಿದೆ. ಕೆಲವೆಡೆ ಸಾಧಾರಣ ಮಳೆಯಾಗಿದ್ದರೆ, ಮತ್ತೆ ಕೆಲವೆಡೆ

ರಾಜ್ಯದಲ್ಲಿ ಮುಂದುವರಿದ ವರ್ಷಧಾರೆ| ಅಪಾರ ಹಾನಿ, ಬೆಳೆನಾಶ| ಇನ್ನೂ ಮೂರುದಿನ ಭಾರೀ ಮಳೆ ಸಾಧ್ಯತೆ| Read More »

ಮಂಗಳೂರು: ಸಮುದ್ರದ ತಂಗಾಳಿಗೆ ಮೈಯೊಡ್ಡಿ ಸಲ್ಲಾಪದಲ್ಲಿದ್ದ ಭಿನ್ನಕೋಮಿನ ಜೋಡಿ ಪೊಲೀಸ್ ವಶ|

ಮಂಗಳೂರು: ನಗರದ ಹೊರವಲಯದ ‌ಸುರತ್ಕಲ್ ಬೀಚ್ ಬಳಿ ಕಾರೊಂದರಲ್ಲಿ ಸಲ್ಲಾಪದಲ್ಲಿ‌ ತೊಡಗಿದ್ದ ಭಿನ್ನ ಕೋಮಿನ ಜೋಡಿಯೊಂದು ಪೊಲೀಸರ ವಶವಾಗಿದೆ. ಕುದ್ರೋಳಿಯ ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿಯೊಬ್ಬಳು ಕಾರಿನಲ್ಲಿ ಇಂದು ಸಂಜೆ ಪತ್ತೆಯಾಗಿದ್ದು ಇವರಿಗೆ ಪಕ್ಕದಲ್ಲೇ ಇನ್ನೊಬ್ಬಾತ ಅವರಿಗೆ ಸೆಕ್ಯುರಿಟಿ ನೀಡುವ ಕಾರ್ಯ ಮಾಡುತ್ತಿದ್ದ ಎನ್ನಲಾಗಿದೆ. ಇದನ್ನು ಗಮನಿಸಿದ ಸುರತ್ಕಲ್ ಭಜರಂಗದಳದ ಕಾರ್ಯಕರ್ತರು ಮೊದಲು ಆತನನ್ನು ವಿಚಾರಿಸಿದ್ದು ನಂತರ ಜೋಡಿಗಳನ್ನು ಠಾಣೆಗೆ ಕರೆದೊಯ್ದಿದ್ದಾರೆ. ಅನ್ಯಕೋಮಿನ ಯುವಕನ ಜೊತೆ ಪತ್ತೆಯಾದ ಯುವತಿ ಸುರತ್ಕಲ್ ಪೋಲಿಸರ ವಶದಲ್ಲಿದ್ದು, ಪತ್ತೆಯಾದ ಯುವಕನನ್ನು ಮೆಹಬೂಬ್

ಮಂಗಳೂರು: ಸಮುದ್ರದ ತಂಗಾಳಿಗೆ ಮೈಯೊಡ್ಡಿ ಸಲ್ಲಾಪದಲ್ಲಿದ್ದ ಭಿನ್ನಕೋಮಿನ ಜೋಡಿ ಪೊಲೀಸ್ ವಶ| Read More »

ಪುತ್ತೂರು: ಕಾಲೇಜು ವಿದ್ಯಾರ್ಥಿನಿಯರನ್ನು ಹಿಂಬಾಲಿಸಿಕೊಂಡು ಬಂದ ಅಪರಿಚಿತ ಗುಂಪು| ಮಾತಿನ ಚಕಮಕಿ, ಪೊಲೀಸರ ಮದ್ಯಪ್ರವೇಶ|

ಪುತ್ತೂರು: ಕಾಲೇಜು ವಿದ್ಯಾರ್ಥಿನಿಯರನ್ನು ಅಪರಿಚಿತ ಯುವಕರ ಗುಂಪೊಂದು ಹಿಂಬಾಲಿಸಿಕೊಂಡು ಬಂದಿದ್ದು, ಹಾಗೂ ವಿದ್ಯಾರ್ಥಿಗಳ ಮದ್ಯೆ ಮಾತಿನ ಚಕಮಕಿ ನಡೆದ ಘಟನೆ ಇಂದು ಸಂಜೆ ನಗರದ ನೆಲ್ಲಿಕಟ್ಟೆಯಲ್ಲಿ ನಡೆದಿದೆ. ಅಪರಿಚಿತ ಯುವಕರ ಗುಂಪೊಂದು ವಿದ್ಯಾರ್ಥಿನಿಯರನ್ನು ಹಿಂಬಾಲಿಸಿಕೊಂಡು ಬಂದಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿನಿಯರು ತಮ್ಮ ಸಹಪಾಠಿ ಗೆಳೆಯರಲ್ಲಿ ತಿಳಿಸಿದ್ದಾರೆ. ಆಗ ಸಹಪಾಠಿ ವಿದ್ಯಾರ್ಥಿಗಳು ಆಗಮಿಸಿ ಹಿಂಬಾಲಿಸಿಕೊಂಡು ಬಂದ ಯುವಕರಲ್ಲಿ ಪ್ರಶ್ನಿಸಿದ್ದಾರೆ. ಅಲ್ಲಿ ಮಾತಿಗೆ ಮಾತು ಬೆಳೆದು ಚಕಮಕಿ ಯಾಗಿದೆ. ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಯುವಕರನ್ನು ಪುತ್ತೂರು ಮಹಿಳಾ ಠಾಣೆಗೆ ಕರೆದೊಯ್ದಿದ್ದಾರೆ.

ಪುತ್ತೂರು: ಕಾಲೇಜು ವಿದ್ಯಾರ್ಥಿನಿಯರನ್ನು ಹಿಂಬಾಲಿಸಿಕೊಂಡು ಬಂದ ಅಪರಿಚಿತ ಗುಂಪು| ಮಾತಿನ ಚಕಮಕಿ, ಪೊಲೀಸರ ಮದ್ಯಪ್ರವೇಶ| Read More »

ಪಾಕ್ ಶಾಸಕಿಯ ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್

ಲಾಹೋರ್ : ಪಾಕಿಸ್ತಾನ್ ಮುಸ್ಲಿಮ್ ಲೀಗ್-ನವಾಜ್ ಪಕ್ಷದ ಮಹಿಳಾ ಶಾಸಕಿಯೊಬ್ಬರ ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಪಾಕಿಸ್ತಾನದ ಪಂಜಾಬ್ ನ ತಕ್ಷಿಲಾ ವಿಧಾನಸಭಾ ಕ್ಷೇತ್ರದ ಶಾಸಕಿ ಸಾನಿಯಾ ಆಶಿಖ್ ಅವರ ವಿಡಿಯೋ ಇದಾಗಿದೆ ಎಂದು ಹೇಳಲಾಗಿದ್ದು, ಕಳೆದ ಕೆಲ ದಿನಗಳಿಂದ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವಿಚಾರ ಶಾಸಕಿಯ ಗಮನಕ್ಕೆ ಬಂದಿದ್ದು. ದುರುದ್ದೇಶದಿಂದ ತಿರುಚಿ ಮಾಡಿರುವ ವಿಡಿಯೋವಾಗಿದ್ದು, ಈ

ಪಾಕ್ ಶಾಸಕಿಯ ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ Read More »

ದ.ಕ ಮತ್ತು ಕಾಸರಗೋಡು ನಡುವೆ ಅಂತರಾಜ್ಯ ಬಸ್ ಸೇವೆ ಪುನರಾರಂಭ

ಮಂಗಳೂರು: ಕೋವಿಡ್-19 ಹಾವಳಿ ಉಲ್ಬಣಗೊಂಡಿದ್ದರಿಂದ ಕಳೆದ ಕೆಲವು ತಿಂಗಳುಗಳಿಂದ ಸ್ಥಗಿತಗೊಂಡಿದ್ದ ದ.ಕ. – ಕಾಸರಗೋಡು ಅಂತಾರಾಜ್ಯ ಬಸ್ ಸಂಚಾರ ಶುಕ್ರವಾರ ಬೆಳಗ್ಗೆಯಿಂದ ಪುನಾರಂಭಗೊಂಡಿದೆ. ಕರ್ನಾಟಕ ಮತ್ತು ಕೇರಳದ ತಲಾ 25 ಬಸ್‌ಗಳು ಸಂಚಾರ ಆರಂಭಿಸಿದ್ದು, ಶನಿವಾರದಿಂದ ಎಲ್ಲಾ ಬಸ್‌ಗಳು ಓಡಾಟ ನಡೆಸಲಿದೆ ಎಂದು ಕೆಎಸ್ಸಾರ್ಟಿಸಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕೋವಿಡ್‌ನಿಂದ ಸ್ಥಗಿತಗೊಂಡಿದ್ದ ಬಸ್‌ಗಳು ಲಾಕ್‌ಡೌನ್ ತೆರವು ಬಳಿಕ‌ ತಲಪಾಡಿ ಗಡಿಯವರೆಗೆ ಮಾತ್ರ ಸಂಚರಿಸುತ್ತಿದ್ದವು. ಇದೀಗ ಮಂಗಳೂರಿನಿಂದ ಕಾಸರಗೋಡುವರೆಗೆ ಮತ್ತು ಕಾಸರಗೋಡಿನಿಂದ ಮಂಗಳೂರುವರೆಗೆ ಸಂಚರಿಸಲು ಆರಂಭಿಸಿದೆ. ಸುಳ್ಯ-ಕಾಸರಗೋಡು ಮಧ್ಯೆ

ದ.ಕ ಮತ್ತು ಕಾಸರಗೋಡು ನಡುವೆ ಅಂತರಾಜ್ಯ ಬಸ್ ಸೇವೆ ಪುನರಾರಂಭ Read More »

ವೃತ್ತಿ ಜೀವನಕ್ಕೆ ಇತಿಶ್ರೀ ಹಾಡಿದ ಕ್ರಿಕೆಟ್ ದಂತಕಥೆ| ಎಬಿ‌ ಡಿವಿಲಿಯರ್ಸ್ ಕ್ರಿಕೆಟ್ ಮೈದಾನಕ್ಕೆ ವಿದಾಯ

ನವದೆಹಲಿ: ಎಬಿ ಡಿ ವಿಲಿಯರ್ಸ್ ಕ್ರಿಕೆಟ್ ನ ಎಲ್ಲಾ ಸ್ವರೂಪಗಳಿಂದ ನಿವೃತ್ತಿ ಘೋಷಿಸಿದ್ದು, ಇದೇ ವೇಳೆ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರಿನ ಒಡನಾಟವನ್ನು ಕೊನೆಗೊಳಿಸಿದ್ದಾರೆ ಎನ್ನಲಾಗಿದೆ. 2011 ರಲ್ಲಿ ಆರ್ ಸಿಬಿ ಪರವಾಗಿ ILP ವೃತ್ತಿಜೀವನವನ್ನು ಪ್ರಾರಂಭಿಸಿದ ಎಬಿ ಡಿ ವಿಲಿಯರ್ಸ್ 10 ಸೀಸನ್‌ನಲ್ಲಿ ಅವರು ಆರ್‌ಸಿಬಿ ಪರವಾಗಿ ಆಟವಾಡಿದ್ದಾರೆ.

ವೃತ್ತಿ ಜೀವನಕ್ಕೆ ಇತಿಶ್ರೀ ಹಾಡಿದ ಕ್ರಿಕೆಟ್ ದಂತಕಥೆ| ಎಬಿ‌ ಡಿವಿಲಿಯರ್ಸ್ ಕ್ರಿಕೆಟ್ ಮೈದಾನಕ್ಕೆ ವಿದಾಯ Read More »

ಉಪ್ಪಿನಂಗಡಿ: ವಿದ್ಯಾರ್ಥಿನಿಗಾಗಿ ಹೊಡೆದಾಡಿಕೊಂಡ ವಿದ್ಯಾರ್ಥಿಗಳು| ಐವರು ಆಸ್ಪತ್ರೆಗೆ ಅಡ್ಮಿಟ್|

ಉಪ್ಪಿನಂಗಡಿ: ವಿದ್ಯಾರ್ಥಿನಿಗಾಗಿ ಕಾಲೇಜು ಆವರಣದಲ್ಲಿ ಎರಡು ವಿದ್ಯಾರ್ಥಿ ತಂಡಗಳ ಮಧ್ಯೆ ಹೊಡೆದಾಟ ನಡೆದ ಘಟನೆ ಉಪ್ಪಿನಂಗಡಿ ಕಾಲೇಜೊಂದರಲ್ಲಿ ನಡೆದಿದೆ. ಹೊಡೆದಾಟದಲ್ಲಿ ಎರಡೂ ಕಡೆಯ 5 ಮಂದಿ ಪುತ್ತೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ. ವಿದ್ಯಾರ್ಥಿನಿಯೋರ್ವಳ ಮೊಬೈಲ್ ಸಂಖ್ಯೆಯನ್ನು ನೀಡಬೇಕೆಂದು ಭಿನ್ನ ಕೋಮಿನ ಸಹಪಾಠಿ ವಿದ್ಯಾರ್ಥಿಯೋರ್ವ ಕೇಳಿದ್ದು ಇದನ್ನು ಆಕ್ಷೇಪಿಸಿ ವಿದ್ಯಾರ್ಥಿನಿ ಪರ ತಂಡದ ಮೂವರು ವಿದ್ಯಾರ್ಥಿಗಳು ವಿಚಾರಿಸಲು ಹೋಗಿದ್ದಾಗ ಇವರ ಮೇಲೆ ಮೂವತ್ತಕ್ಕೂ ಹೆಚ್ಚಿನ ವಿದ್ಯಾರ್ಥಿಗಳ ಗುಂಪು ಮುಗಿಬಿದ್ದು, ಪರಸ್ಪರ ಹೊಡೆದಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ. ಇನ್ನೊಂದು

ಉಪ್ಪಿನಂಗಡಿ: ವಿದ್ಯಾರ್ಥಿನಿಗಾಗಿ ಹೊಡೆದಾಡಿಕೊಂಡ ವಿದ್ಯಾರ್ಥಿಗಳು| ಐವರು ಆಸ್ಪತ್ರೆಗೆ ಅಡ್ಮಿಟ್| Read More »

ರೈತರ ಪರವಾಗಿ ಪ್ರಧಾನಿಗೆ ಅಭಿನಂದನೆ- ಯಡಿಯೂರಪ್ಪ ಟ್ವೀಟ್

ಬೆಂಗಳೂರು: ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿದ ಕೇಂದ್ರ ಬಿಜೆಪಿ ಸರ್ಕಾರದ ನಿರ್ಧಾರಕ್ಕೆ ದೇಶದ ರೈತರ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಟ್ವೀಟಿಸಿದ್ದಾರೆ. ರೈತರ ಕೃಷಿ ಕಾಯ್ದೆ ವಿರುದ್ಧ ದೇಶದ ಹಲವು ಭಾಗದ ರೈತರ ವಿರೋಧಕ್ಕೆ ಸ್ಪಂದಿಸಿ ಕಾಯ್ದೆಗಳನ್ನು ಹಿಂಪಡೆದ ಪ್ರಧಾನಿ ಅವರಿಗೆ ರೈತರ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಸದಾ ರೈತರ ಹಿತ, ರೈತ ಪರವಾದ ಬದ್ಧತೆ ಹೊಂದಿರುವ ಕೇಂದ್ರ ಸರ್ಕಾರ, ಪ್ರತಿಷ್ಠೆ, ರಾಜಕೀಯಗಳನ್ನೆಲ್ಲಾ ಪರಿಗಣಿಸದೆ ಸಂವೇದನಾಶೀಲತೆಯನ್ನು ಪ್ರದರ್ಶಿಸಿದೆ ಎಂದು ಅವರು ತಿಳಿಸಿದ್ದಾರೆ.

ರೈತರ ಪರವಾಗಿ ಪ್ರಧಾನಿಗೆ ಅಭಿನಂದನೆ- ಯಡಿಯೂರಪ್ಪ ಟ್ವೀಟ್ Read More »

ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿರಲಿ;ಎದೆಯಗಲ ಎಷ್ಟೇ ಇಂಚಿನದ್ದಾಗಿರಲಿ, ಜನಶಕ್ತಿಯ ಎದುರು ಆತ ಮಣಿಯಲೇಬೇಕು. ಇದುವೇ ಪ್ರಜಾಪ್ರಭುತ್ವದ ಸೊಗಸು: ಪ್ರಧಾನಿ ನಡೆಯನ್ನು ಹೊಗಳಿ, ಕಿಚಾಯಿಸಿದ ಸಿದ್ದು

ಬೆಂಗಳೂರು: ಕರಾಳ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಿದ ಕೇಂದ್ರ ಬಿಜೆಪಿ ಸರ್ಕಾರದ ನಿರ್ಧಾರ ದೇಶದ ಮಣ್ಣಿನ ಮಕ್ಕಳ ಅಭೂತಪೂರ್ವ ಹೋರಾಟಕ್ಕೆ ಸಿಕ್ಕ ಗೆಲುವಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ರೈತ ಹೋರಾಟಗಾರರಿಗೆ ಅಭಿನಂದನೆಗಳು ಜೈಕಿಸಾನ್ ಎಂದು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಕೃಷಿ ಕಾಯ್ದೆ ರದ್ದುಗೊಳಿಸಿದರಷ್ಟೇ ಸಾಲದು ಈ ಕರಾಳ ಕಾಯ್ದೆ ರದ್ದತಿಗಾಗಿ ನಡೆದ ಹೋರಾಟದಲ್ಲಿ ಹುತಾತ್ಮರಾದ ರೈತ ಕುಟುಂಬಗಳಿಗೆ ಕೇಂದ್ರ ಬಿಜೆಪಿ ಸರ್ಕಾರ ತಲಾ 25 ಲಕ್ಷ ರೂಪಾಯಿ ಪರಿಹಾರ ಕೊಡಬೇಕು ಎಂದು ಒತ್ತಾಯಿಸಿದ್ದಾರೆ. ಸರ್ವಾಧಿಕಾರಿ

ಸರ್ವಾಧಿಕಾರಿ ಎಷ್ಟೇ ಶಕ್ತಿಶಾಲಿಯಾಗಿರಲಿ;ಎದೆಯಗಲ ಎಷ್ಟೇ ಇಂಚಿನದ್ದಾಗಿರಲಿ, ಜನಶಕ್ತಿಯ ಎದುರು ಆತ ಮಣಿಯಲೇಬೇಕು. ಇದುವೇ ಪ್ರಜಾಪ್ರಭುತ್ವದ ಸೊಗಸು: ಪ್ರಧಾನಿ ನಡೆಯನ್ನು ಹೊಗಳಿ, ಕಿಚಾಯಿಸಿದ ಸಿದ್ದು Read More »