ಮಂಗಳೂರು: ಲಾರಿಯಲ್ಲಿದ್ದ ಗ್ರಾನೈಟ್ ಬಿದ್ದು ಯುವಕ ಮೃತ್ಯು
ಮಂಗಳೂರು: ಲಾರಿಯಲ್ಲಿದ್ದ ಗ್ರಾನೈಟ್ ಆಕಸ್ಮಿಕವಾಗಿ ಬಿದ್ದು ಯುವಕ ಸಾವನ್ನಪ್ಪಿದ ಘಟನೆ ನ.13ರ ಶನಿವಾರದಂದು ಅತ್ತಾವರದಲ್ಲಿ ನಡೆದಿದೆ. ಮೃತರನ್ನು ಜೆಪ್ಪು ನಿವಾಸಿ ಹಮೀದ್ ಎಂಬವರ ಪುತ್ರ ಅಬ್ದರ್ರಹ್ಮಾನ್ ರಿಲ್ವಾನ್ (30) ಎಂದು ಗುರುತಿಸಲಾಗಿದೆ. ಶನಿವಾರ ರಾಜಸ್ಥಾನದಿಂದ ಅತ್ತಾವರಲ್ಲಿ ನಿರ್ಮಾಣ ಹಂತದ ಕಟ್ಟಡಕ್ಕೆ ಲಾರಿ ಬಂದಿತ್ತು. ಈ ಸಂದರ್ಭ ಕಟ್ಟಡದ ರೈಟರ್ ಆಗಿದ್ದ ರಿಲ್ವಾನ್ ಅವರಲ್ಲಿ ಗ್ರಾನೈಟ್ನ ಫೋಟೋ ತೆಗೆಯಲು ಕಟ್ಟಡದ ಸೂಪರ್ ವೈಸರ್ ಸೂಚಿಸಿದ್ದಾರೆ ಎನ್ನಲಾಗಿದೆ. ಹಾಗಾಗಿ ರಿಲ್ವಾನ್ ಫೋಟೋ ತೆಗೆಯಲು ಲಾರಿಯ ಹಿಂಬದಿಗೆ ತೆರಳಿದ್ದಾರೆ ಎನ್ನಲಾಗಿದೆ. ಈ
ಮಂಗಳೂರು: ಲಾರಿಯಲ್ಲಿದ್ದ ಗ್ರಾನೈಟ್ ಬಿದ್ದು ಯುವಕ ಮೃತ್ಯು Read More »










