Editor

ಕಡಬ: ಒಂದೂವರೆ ವರ್ಷದಿಂದ ನಿರಂತರ ಲೈಂಗಿಕ ದೌರ್ಜನ್ಯ| ಗರ್ಭಿಣಿಯಾದ ಅಪ್ರಾಪ್ತೆ, ಆರೋಪಿ ಅಂದರ್|

ಕಡಬ: ತಾಲೂಕಿನ ಕೋಡಿಂಬಾಳ ಗ್ರಾಮದಲ್ಲಿ ಅಪ್ರಾಪ್ತೆ ಗರ್ಭಿಣಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಬಾಲಕಿಯ ಸಂಬಂಧಿಕನನ್ನು ಪೊಕ್ಸೊ ಕಾಯ್ದೆಯಡಿ ಪೊಲೀಸರು ಬಂಧಿಸಿದ್ದಾರೆ. ಕೋಡಿಂಬಾಳ ಗ್ರಾಮದ ಪಾಜೋವು ಸಮೀಪದ ರಮೇಶ್ ಎಂಬಾತ ತನ್ನ ಸಂಬಂಧಿಕರಾಗಿರುವ ಅಪ್ರಾಪ್ತೆಯನ್ನು ಕಳೆದ ಒಂದೂವರೆ ವರ್ಷದಿಂದ ಲೈಂಗಿಕವಾಗಿ ಬಳಸಿಕೊಂಡಿದ್ದು, ಇದೀಗ ಆಕೆ ಗರ್ಭವತಿಯಾಗಿದ್ದು ಪ್ರಕರಣ ಬೆಳಕಿಗೆ ಬಂದಿದೆ.ಆರೋಪಿ ರಮೇಶನನ್ನು ಕಡಬ ಪೊಲೀಸರು ಬಂಧಿಸಿದ್ದು, ಆತನ ವಿರುದ್ಧ ಪೊಕ್ಸೊ ಪ್ರಕರಣ ದಾಖಲಿಸಿದ್ದಾರೆ. 2020ರ ಏಪ್ರಿಲ್ ತಿಂಗಳಿನಿಂದ ರಮೇಶ್ ಆಗಾಗ ಬಾಲಕಿಯ ಮನೆಗೆ ಬರುತ್ತಿದ್ದ

ಕಡಬ: ಒಂದೂವರೆ ವರ್ಷದಿಂದ ನಿರಂತರ ಲೈಂಗಿಕ ದೌರ್ಜನ್ಯ| ಗರ್ಭಿಣಿಯಾದ ಅಪ್ರಾಪ್ತೆ, ಆರೋಪಿ ಅಂದರ್| Read More »

ಅಷ್ಟಕ್ಕೂ ಹಾಜಬ್ಬರ ಕೈಗೆ ಏನಾಗಿತ್ತು?: ಕೈಗೆ ಗಾಯವಾಗಲು ಕಾರಣ ಏನು ಗೊತ್ತಾ?

ಮಂಗಳೂರು: ಹರೇಕಳ ಹಾಜಬ್ಬರ ವ್ಯಕ್ತಿತ್ವದ‌ ಬಗ್ಗೆ ತಿಳಿದುಕೊಳ್ಬೇಕಾದ್ರೆ ಈ ಸ್ಟೋರಿ ಓದ್ಲೇ ಬೇಕು. ಇದು ಅವರ ವ್ಯಕ್ತಿತ್ವದ ಅನಾವರಣ. ಹಾಜಬ್ಬ ಕಡುಬಡತನ ಹೊಂದಿದರೂ ಮನೆಗೆ ಬಂದವರಿಗೆ ಸತ್ಕಾರ ಮಾಡದೇ ಕಳುಹಿಸಿದವರಲ್ಲ. ತಮ್ಮ ಕುಟುಂಬ ಸದಸ್ಯರಿಗೆ ಅನಾರೋಗ್ಯವಿದ್ದರೂ ಯಾರ ಮುಂದೆಯೂ ವೈಯುಕ್ತಿಕವಾಗಿ ಹಣ ಕೇಳಿದವರಲ್ಲ. ಮನೆಗೆ ಬಂದವರಿಗೆ ಸೀಯಾಳ ನೀಡಿ ಸತ್ಕರಿಸೋದು ಹಾಜಬ್ಬರ ಸಂಪ್ರದಾಯ. ನವೆಂಬರ್ 8ರಂದು ಹಾಜಬ್ಬರು ರಾಷ್ಟ್ರಪತಿ ಭವನದಲ್ಲಿ ಪದ್ಮಶ್ರೀ ಪ್ರಶಸ್ತಿ ಸ್ವೀಕಾರ ಮಾಡಿದ್ದರು. ನವೆಂಬರ್ 7ರಂದು ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ಪ್ರಯಾಣ

ಅಷ್ಟಕ್ಕೂ ಹಾಜಬ್ಬರ ಕೈಗೆ ಏನಾಗಿತ್ತು?: ಕೈಗೆ ಗಾಯವಾಗಲು ಕಾರಣ ಏನು ಗೊತ್ತಾ? Read More »

ಕಣ್ಣೀರು ತರಿಸುತ್ತೆ ಈ ಕಥೆ..! ಮೃತ ಗರ್ಭಿಣಿ ಹೊಟ್ಟೆಯಲ್ಲಿ ಜೀವಂತ ಮಗು| ವೈದ್ಯಲೋಕದ ಅಚ್ಚರಿ

ಗದಗ : ದಂಡಪ್ಪ ಮಾನ್ವಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ವೈದ್ಯರು ಮೃತ ಗರ್ಭಿಣಿ ಹೊಟ್ಟೆಯಿಂದ ಜೀವಂತ ಮಗುವನ್ನು ಹೊರತೆಗೆದಿದ್ದಾರೆ. ಗರ್ಭಿಣಿ ಅನ್ನಪೂರ್ಣ ಎಂಬುವವರು ಲೋ ಬಿಪಿ, ಮೂರ್ಛೆ ರೋಗದಿಂದ ಬಳಲುತ್ತಿದ್ದರು. ಊರಿನಿಂದ ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಗರ್ಭಿಣಿ ಮೃತಪಟ್ಟಿದ್ದಾರೆ. ಆದರೆ ಹೊಟ್ಟೆಯಲ್ಲಿದ್ದ ಮಗು ಜೀವಂತವಿರುವುದು ವೈದ್ಯರಿಗೆ ತಿಳಿದ ತಕ್ಷಣ ಆಪರೇಷನ್ ಮಾಡಿದ್ದಾರೆ. ಆಪರೇಷನ್ ನಡೆಸಿದ ವೈದ್ಯರ ತಂಡ ಹೆಣ್ಣು ಮಗುವನ್ನು ಹೊರತೆಗೆದಿದ್ದಾರೆ. ನವೆಂಬರ್ 4ರಂದು ನಡೆದ ಅಪರೂಪದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಗದಗ ಜಿಲ್ಲೆಯ ರೋಣ

ಕಣ್ಣೀರು ತರಿಸುತ್ತೆ ಈ ಕಥೆ..! ಮೃತ ಗರ್ಭಿಣಿ ಹೊಟ್ಟೆಯಲ್ಲಿ ಜೀವಂತ ಮಗು| ವೈದ್ಯಲೋಕದ ಅಚ್ಚರಿ Read More »

ರಾಜ್ಯದಲ್ಲಿ ಮತ್ತೊಂದು ಹೇಯ ಕೃತ್ಯ| ಟಿವಿ ತೋರಿಸುವ ನೆಪದಲ್ಲಿ 3 ವರ್ಷದ ಕಂದಮ್ಮನ ಅತ್ಯಾಚಾರ|

ಶಿವಮೊಗ್ಗ: 3 ವರ್ಷದ ಕಂದಮ್ಮನ ಮೇಲೆ ಪಕ್ಕದ ಮನೆಯ ಯುವಕನೇ ಅತ್ಯಾಚಾರವೆಸಗಿರುವ ಘೋರ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿ ನಡೆದಿದೆ. ಮಗುವಿಗೆ ಟಿವಿ ತೋರಿಸುವ ಆಮಿಷವೊಡ್ಡಿ ಕರೆದೊಯ್ದ ನೆರೆಮನೆ ಯುವಕ ಬಳಿಕ ನೀಚ ಕೃತ್ಯವೆಸಗಿದ್ದಾನೆ. ಮಗುವಿಗೆ ರಕ್ತಸ್ರಾವವಾಗುತ್ತಿರುವುದನ್ನು ಕಂಡ ಪೋಷಕರು ತಾಲೂಕು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಈ ವೇಳೆ ಕೃತ್ಯದ ಬಗ್ಗೆ ಗೊತ್ತಾಗಿದೆ. ಆರೋಪಿ ಯುವಕನನ್ನು ಹಿಡಿದು ಪೋಷಕರು ಪೊಲೀಸರಿಗೆ ಒಪ್ಪಿಸಿದ್ದಾರೆ. ಶಿಕಾರಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಜ್ಯದಲ್ಲಿ ಮತ್ತೊಂದು ಹೇಯ ಕೃತ್ಯ| ಟಿವಿ ತೋರಿಸುವ ನೆಪದಲ್ಲಿ 3 ವರ್ಷದ ಕಂದಮ್ಮನ ಅತ್ಯಾಚಾರ| Read More »

ಧಾರವಾಡ: ಖ್ಯಾತ ತಬಲಾ ಕಲಾವಿದ ಪಂ. ಷಡಾಕ್ಷರಯ್ಯ ಗುಡ್ಡದಮಠ ನಿಧನ

ಧಾರವಾಡ: ಉತ್ತರ ಕರ್ನಾಟಕದ ಪ್ರಸಿದ್ಧ ತಬಲಾ ಕಲಾವಿದ ಪಂ. ಷಡಾಕ್ಷರಯ್ಯ ಗುಡ್ಡದಮಠ (74) ಇಂದು (ಗುರುವಾರ) ಬೆಳಿಗ್ಗೆ ನಿಧನರಾಗಿದ್ದಾರೆ. ಪಂ.ಷಡಕ್ಷರಯ್ಯ ಅವರು ಪತ್ನಿ, ಪುತ್ರ, ಪುತ್ರಿ, ಅಪಾರ ಬಂದು ಬಳಗ ಹಾಗೂ ಶಿಷ್ಯ ವೃಂದವನ್ನು ಅಗಲಿದ್ದಾರೆ. ಪಂ.ಷಡಕ್ಷರಯ್ಯ ಅವರು ರಾಜ್ಯ ಹಾಗೂ ದೇಶದ ವಿವಿಧ ಭಾಗದಲ್ಲಿ ತಬಲಾ ಕಾರ್ಯಕ್ರಮ ನೀಡಿದ್ದರು. ಅವರ ತಬಲಾ ಸೇವೆಗೆ ವಿವಿಧ ಪ್ರಶಸ್ತಿ, ಪುರಸ್ಕಾರ ಒಲಿದು ಬಂದಿವೆ. ಅವರು ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಗ್ರಂಥಾಲಯದಲ್ಲಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ್ದರು.

ಧಾರವಾಡ: ಖ್ಯಾತ ತಬಲಾ ಕಲಾವಿದ ಪಂ. ಷಡಾಕ್ಷರಯ್ಯ ಗುಡ್ಡದಮಠ ನಿಧನ Read More »

ಸುಳ್ಯ: ಅವೈಜ್ಞಾನಿಕ ಸ್ಲಾಬ್ ಅಳವಡಿಕೆ| ಪಾದಾಚಾರಿಗಳ ಪ್ರಾಣ ಹಿಂಡುತ್ತಿವೆ ಚರಂಡಿಗಳು|

ಸುಳ್ಯ: ನಗರದ ಮುಖ್ಯರಸ್ತೆಯ ಎರಡು ಭಾಗಗಳಲ್ಲಿ ಅಳವಡಿಸಲಾಗಿರುವ ಚರಂಡಿಯ ಸ್ಲ್ಯಾಬ್ ಗಳ ಅವೈಜ್ಞಾನಿಕತೆಯ ಕಾಮಗಾರಿಯಿಂದ ಹಲವಾರು ಮಂದಿ ಪಾದಚಾರಿಗಳು ಬಿದ್ದು ಗಾಯಗೊಂಡಿದ್ದಾರೆ. ಪ್ರತೀದಿನ ಒಂದಿಲ್ಲೊಂದು ಘಟನೆಗಳು ನಡೆಯುತ್ತಿದ್ದು, ಇದರಿಂದ ನಾಗರೀಕರು ಕಂಗೆಟ್ಟಿದ್ದಾರೆ. ನಿನ್ನೆ ನಗರದ ಗಾಂಧಿನಗರದಲ್ಲಿ ಪತ್ರಕರ್ತರೊಬ್ಬರು ಈ ಪಾದಾಚಾರಿ ರಸ್ತೆಮೇಲೆ ನಡೆದುಕೊಂಡು ಹೋಗುತ್ತಿದ್ದ‌ ವೇಳೆ ಸ್ಲ್ಯಾಬ್ ಕುಸಿದು ಬಿದ್ದು ಅವರ ಕಾಲಿಗೆ ಬಲವಾದ ಗಾಯ ಉಂಟಾಗಿದೆ. ಘಟನೆಯನ್ನು ನೋಡಿದ ಸ್ಥಳೀಯರು ವರದಿಗಾರರನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕೊಂಡೊಯ್ದಿದ್ದಾರೆ. ಘಟನೆಯಿಂದ ಅವರ ಮೊಣಕಾಲಿಗೆ ಗಾಯವಾಗಿದ್ದು ಚಿಕಿತ್ಸೆ

ಸುಳ್ಯ: ಅವೈಜ್ಞಾನಿಕ ಸ್ಲಾಬ್ ಅಳವಡಿಕೆ| ಪಾದಾಚಾರಿಗಳ ಪ್ರಾಣ ಹಿಂಡುತ್ತಿವೆ ಚರಂಡಿಗಳು| Read More »

ವಿಧಾನ ಪರಿಷತ್ ಚುನಾವಣೆ| ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್ ರಾಜೇಂದ್ರಕುಮಾರ್| ಬಿಜೆಪಿ-ಕಾಂಗ್ರೇಸ್ ಗೆ ಬಿಸಿ ತುಪ್ಪವಾಗುವುದೇ ಈ ಬೆಳವಣಿಗೆ?

ಉಡುಪಿ: ಸ್ಥಳೀಯಾಡಳಿತ ಸಂಸ್ಥೆಗಳಿಂದ ನಡೆಯುವ ವಿಧಾನ ಪರಿಷತ್ ಚುನಾವಣಾ ಕಣಕ್ಕೆ ಈ ಬಾರಿ ಪಕ್ಷೇತರ ಅಭ್ಯರ್ಥಿಯಾಗಿ ಸಹಕಾರಿ ಧುರೀಣ, ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಸ್ಪರ್ಧಿಸಲು ಮುಂದಾಗಿದ್ದಾರೆ. ಈ ಬಗ್ಗೆ ನಿರ್ಧಾರ ಪ್ರಕಟಿಸಿದ ಬೆನ್ನಲ್ಲೇ ರಾಜಕೀಯ ಪಕ್ಷಗಳಿಗೆ ಹೊಸ ತಲೆನೋವು ಶುರುವಾಗಿದೆ. ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷರೂ ಆಗಿರುವ ರಾಜೇಂದ್ರ ಕುಮಾರ್, ಪರಿಷತ್ ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. ‌ಆದರೆ ಯಾವುದೇ ಒಂದು ಪಕ್ಷದಿಂದ ಸ್ಪರ್ಧಿಸಲ್ಲ. ಸ್ಪರ್ಧಿಸಿದರೆ ಪಕ್ಷೇತರ ಅಭ್ಯರ್ಥಿಯಾಗಿ

ವಿಧಾನ ಪರಿಷತ್ ಚುನಾವಣೆ| ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿದ ಎಸ್ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಎಂ.ಎನ್ ರಾಜೇಂದ್ರಕುಮಾರ್| ಬಿಜೆಪಿ-ಕಾಂಗ್ರೇಸ್ ಗೆ ಬಿಸಿ ತುಪ್ಪವಾಗುವುದೇ ಈ ಬೆಳವಣಿಗೆ? Read More »

ಬಿಟ್ ಕಾಯಿನ್ ಎಂಬ ಮಾಯಾಂಗನೆ..! ಏನಿದು ಗೊತ್ತಾ ನಿಮ್ಗೆ?

ಡಿಜಿಟಲ್ ಡೆಸ್ಕ್: ಸದ್ಯ‌ ಬಿಟ್ ಕಾಯಿನ್ ಸುದ್ದಿಗಳು ಎಲ್ಲೆಡೆ ಹರಿದಾಡುತ್ತಿವೆ. ರಾಜ್ಯ ರಾಜಕೀಯದಲ್ಲೂ ಪರಸ್ಪರ ಕೆಸರೆರಚಾಟ, ಸಂಚಲಕ್ಕೆ ಕಾರಣವಾಗಿರುವ ಈ ಮಾಯಾ ಕರೆನ್ಸಿ‌ ಬಗ್ಗೆ ಎಲ್ಲರೂ ಕುತೂಹಲದಿಂದ ವಿಚಾರ ವಿನಿಮಯ ಮಾಡಿಕೊಳ್ಳುತ್ತಿದ್ದಾರೆ. ಹಾಗಿದ್ದರೆ ಏನಿದು ಬಿಟ್ ಕಾಯಿನ್? ಬಗ್ಗೆ ತಿಳಿದುಕೊಳ್ಳೋಣ ಬನ್ನಿ.. ಬಿಟ್ ಕಾಯಿನ್ ಏನಿದು? ಇದರ ಬಗ್ಗೆ ಎಚ್ಚರವಿರಲಿ.. ಬಿಟ್ ಕಾಯಿನ್ ಡಿಜಿಟಲ್ ಯುಗದ ಡಿಜಿಟಲ್ ಕರೆನ್ಸಿ. ಇದಕ್ಕೆ ಮುದ್ರಣ ರೂಪ ಇಲ್ಲ. ಬಿಟ್ ಕಾಯಿನ್ ಎಂಬ ಮಾಯಾಂಗನೆ ಕೇವಲ ಎಲೆಕ್ಟ್ರಾನಿಕ್ ರೂಪದಲ್ಲಿದ್ದು, ರೂಪಾಯಿ, ಡಾಲರ್,

ಬಿಟ್ ಕಾಯಿನ್ ಎಂಬ ಮಾಯಾಂಗನೆ..! ಏನಿದು ಗೊತ್ತಾ ನಿಮ್ಗೆ? Read More »

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸಾಲುಮರದ ತಿಮ್ಮಕ್ಕ ಅವರಿಗೆ ಸೂರು ಕಟ್ಟಿಕೊಳ್ಳಲು ಎಂ.ಆರ್.ಜಿ ಗ್ರೂಪಿನ ಕೆ. ಪ್ರಕಾಶ್ ಶೆಟ್ಟಿ ಅವರಿಂದ ನೆರವು

ಮಂಗಳೂರು: ಪ್ರಖ್ಯಾತ ಪರಿಸರವಾದಿ ಹಾಗು 2019 ರ ಸಾಲಿನ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ ಸಾಲು ಮರದ ತಿಮ್ಮಕ್ಕ ಅವರಿಗೆ ಸೂರು ಕಟ್ಟಿಕೊಳ್ಳಲು ಎಂ.ಆರ್.ಜಿ. ಗುಂಪಿನಿಂದ 5 ಲಕ್ಷ ರೂಪಾಯಿಗಳ ನೆರವನ್ನು ನೀಡಲಾಗಿದೆ. ಸಾಲು ಮರದ ತಿಮ್ಮಕ್ಕ ಅವರ ವೃಕ್ಷ ಪ್ರೇಮ, ಗಿಡಗಳನ್ನು ನೆಟ್ಟು ಅವುಗಳನ್ನು ಮಕ್ಕಳಂತೆ ಲಾಲನೆ ಪಾಲನೆ ಮಾಡುವಲ್ಲಿ ತೋರುವ ಅರ್ಪಣಾಭಾವಕ್ಕೆ ಪರ್ಯಾಯವಾದ ಹೋಲಿಕೆ ಇಲ್ಲ. ಅವರಿಗೆ ಈ ನೆರವನ್ನು ಅತ್ಯಂತ ಗೌರವದಿಂದ ಕೊಡಮಾಡಲಾಗಿದೆ ಎಂದು ಎಂ.ಆರ್.ಜಿ. ಗುಂಪಿನ ಸ್ಥಾಪಕಾಧ್ಯಕ್ಷ ಕೆ. ಪ್ರಕಾಶ ಶೆಟ್ಟಿ ಹೇಳಿದ್ದಾರೆ.

ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಸಾಲುಮರದ ತಿಮ್ಮಕ್ಕ ಅವರಿಗೆ ಸೂರು ಕಟ್ಟಿಕೊಳ್ಳಲು ಎಂ.ಆರ್.ಜಿ ಗ್ರೂಪಿನ ಕೆ. ಪ್ರಕಾಶ್ ಶೆಟ್ಟಿ ಅವರಿಂದ ನೆರವು Read More »

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಬಿ. ಎಸ್. ಕುಲಾಲ್ ವರಿಗೆ ಗೌರವಾರ್ಪಣೆ

ಮಂಗಳೂರು :ದ. ಕ. ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘ ದ ಕಾರ್ಯಾಲಯದಲ್ಲಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಬಿ. ಎಸ್. ಕುಲಾಲ್ ಅವರನ್ನು ನ.7ರಂದು ಸಂಘದ ಅಧ್ಯಕ್ಷರಾಗಿರುವ ಮಯೂರ್ ಉಳ್ಳಾಲ್ ಅವರ ಅಧ್ಯಕ್ಷತೆಯಲ್ಲಿ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿದ ಪತ್ರಕರ್ತ ಬಿ.ಎಸ್ ಕುಲಾಲ್ ಮಾತನಾಡುತ್ತಾ ಪತ್ರಿಕೋದ್ಯಮದಲ್ಲಿ ನನ್ನ ಕರ್ತವ್ಯದ ಸೇವೆಯನ್ನು ಮಾಡಿದ್ದೇನೆ ಪ್ರಶಸ್ತಿಗಾಗಿ ಯಾವುದೇ ರೀತಿಯ ಶಿಫಾರಸನ್ನು ಮಾಡಿಲ್ಲ ಮತ್ತು ಅರ್ಜಿಯನ್ನು ನೀಡಿಲ್ಲ ನನ್ನ ಪತ್ರಿಕಾ ಮಾಧ್ಯಮದ ಸೇವೆಯನ್ನು ಜಿಲ್ಲಾಡಳಿತ ಗುರುತಿಸಿದೆ

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಬಿ. ಎಸ್. ಕುಲಾಲ್ ವರಿಗೆ ಗೌರವಾರ್ಪಣೆ Read More »