Editor

ಇಂದಿನಿಂದ ರಾಜ್ಯದಲ್ಲಿ ಕೆಜಿ ತರಗತಿ, ಅಂಗನವಾಡಿ, ಪ್ಲೇ ಹೋಂ ಆರಂಭ| ಸೂಕ್ತ ನಿಯಮಗಳನ್ನು ಪಾಲಿಸಲು ಸೂಚನೆ|

ಬೆಂಗಳೂರು : ಕೊರೋನಾ ಭೀತಿಯ ನಡುವೆಯೂ ರಾಜ್ಯಾದ್ಯಂತ 1 ರಿಂದ 12 ನೇ ತರಗತಿಗಳನ್ನು ಆರಂಭಿಸಲಾಗಿದೆ. ರಾಜ್ಯಾದ್ಯಂತ ಇಂದಿನಿಂದ ಅಂಗನವಾಡಿ ಕೇಂದ್ರಗಳು ಹಾಗೂ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ಎಲ್ ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಆರ್ಧ ದಿನ ಭೌತಿಕ ತರಗತಿಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಅಂಗನವಾಡಿ ಕೇಂದ್ರ ಆರಂಭದ ಕುರಿತಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ಕೋವಿಡ್-19 ಹಿನ್ನಲೆಯಲ್ಲಿ ಅಂಗನವಾಡಿ ಕೇಂದ್ರಗಳಿಗೆ

ಇಂದಿನಿಂದ ರಾಜ್ಯದಲ್ಲಿ ಕೆಜಿ ತರಗತಿ, ಅಂಗನವಾಡಿ, ಪ್ಲೇ ಹೋಂ ಆರಂಭ| ಸೂಕ್ತ ನಿಯಮಗಳನ್ನು ಪಾಲಿಸಲು ಸೂಚನೆ| Read More »

ನೋಟು ಅಮಾನ್ಯೀಕರಣಕ್ಕೆ ಐದು ವರ್ಷ| ಏರಿಕೆಯಾದ ಡಿಜಿಟಲ್ ವ್ಯವಹಾರ

ನವದೆಹಲಿ: ದೇಶಾದ್ಯಂತ 500 ರೂ. ಮತ್ತು 1000 ರೂಪಾಯಿ ಮುಖಬೆಲೆಯ ನೋಟುಗಳ ಅಮಾನ್ಯೀಕರಣ ಮಾಡಿ ಇಂದಿಗೆ 5 ವರ್ಷವಾಗಿದೆ. ಪ್ರಧಾನಿ ನರೇಂದ್ರ ಮೋದಿ ನೋಟ್ ಬ್ಯಾನ್ ಘೋಷಣೆ ಮಾಡಿದ ನಂತರ ದೇಶದಲ್ಲಿ ಹೊಸದಾಗಿ 2000 ರೂ. ಮತ್ತು 500 ರೂಪಾಯಿ ಹಾಗೂ 200 ರೂ.ಹೊಸ ಸರಣಿ ನೋಟು ಚಲಾವಣೆಗೆ ಬಂದಿವೆ. ನಗದು ವಹಿವಾಟಿನ ಜೊತೆಗೆ ಡಿಜಿಟಲ್ ವಹಿವಾಟು ಕೂಡ ಏರಿಕೆ ಕಂಡಿದೆ. ನೋಟ್ ಬ್ಯಾನ್ ಮಾಡಿದ ಸಂದರ್ಭದಲ್ಲಿ ಯುಪಿಐ, ನೆಟ್ ಬ್ಯಾಂಕಿಂಗ್ ಮೊದಲಾದವುಗಳ ಮೂಲಕ ನಗದು ರಹಿತ

ನೋಟು ಅಮಾನ್ಯೀಕರಣಕ್ಕೆ ಐದು ವರ್ಷ| ಏರಿಕೆಯಾದ ಡಿಜಿಟಲ್ ವ್ಯವಹಾರ Read More »

ಟಿ.20 ವಿಶ್ವಕಪ್ ನಿಂದ ಹೊರಕ್ಕೆ ಬಿದ್ದ ಭಾರತ| ಸೆಮೀಸ್ ಗೆ ಲಗ್ಗೆ ಇಟ್ಟ ಕಿವೀಸ್|

ದುಬೈ : ಟಿ20 ವಿಶ್ವಕಪ್ ಪಂದ್ಯಾವಳಿಯ ಭಾನುವಾರ ನಡೆದ ನಿರ್ಣಾಯಕ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ತಂಡ ಅಫ್ಘಾನಿಸ್ಥಾನವನ್ನು ಅಧಿಕಾರಯುತವಾಗಿ ಸೋಲಿಸಿ ಸೆಮಿ ಫೈನಲ್ ಪ್ರವೇಶಿಸಿದ್ದು, ಭಾರತ ತಂಡದ ಕನಸು ಭಗ್ನಗೊಂಡಿದೆ. ಅಫ್ಘಾನ್ ತಂಡದ ಗೆಲುವನ್ನು ನಂಬಿಕೊಂಡಿದ್ದ ಭಾರತಕ್ಕೆ ಮೊದಲೆರಡು ಪಂದ್ಯಗಳ ಸೋಲು ಮತ್ತೆ ಕಾಡುವಂತೆ ಮಾಡಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಅಫ್ಘಾನಿಸ್ಥಾನ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 124 ರನ್ ಗಳಿಸಿ ಭಾರತೀಯ ಆಶಾವಾದಿಗಳಿಗೆ ನಿರಾಸೆ ಮೂಡಿಸಿತು. ಗುರಿ ಬೆನ್ನಟ್ಟಿದ ಕಿವೀಸ್ ಪಡೆ

ಟಿ.20 ವಿಶ್ವಕಪ್ ನಿಂದ ಹೊರಕ್ಕೆ ಬಿದ್ದ ಭಾರತ| ಸೆಮೀಸ್ ಗೆ ಲಗ್ಗೆ ಇಟ್ಟ ಕಿವೀಸ್| Read More »

ಕಡಬ| ಆಪರೇಶನ್ ಚೀತಾ ಸಕ್ಸಸ್| ಕೋಳಿ ಹಿಡಿಯಲು ಬಂದ ಚಿರತೆ ಬೋನೊಳಗೆ ಬಂಧಿ|

ಕಡಬ: ಕೋಳಿ ಹಿಡಿಯಲು ಬಂದ ಚಿರತೆಯೊಂದು ಬಾವಿಗೆ ಬಿದ್ದಿದ್ದು, ಅರಣ್ಯಾಧಿಕಾರಿಗಳ ಯಶಸ್ವಿ ಕಾರ್ಯಾಚರಣೆಯಿಂದ ಚಿರತೆಯನ್ನು ರಕ್ಷಿಸುವ ಕಾರ್ಯ ನಡೆದಿದೆ. ಕಡಬ ತಾಲೂಕಿನ ಕೊಂಬಾರು ಗ್ರಾಮದ ಕಮರ್ಕಜೆ ಎಂಬಲ್ಲಿ ಭಾನುವಾರ ರಾಮಯ್ಯ ಗೌಡ ಎಂಬವರ ಮನೆಯ ಮುಂಭಾಗದ ಬಾವಿಗೆ ಬಿದ್ದಿತ್ತು. ಮಾಹಿತಿ‌ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಅರಣ್ಯಾಧಿಕಾರಿಗಳು ಸೂಕ್ತ ಭದ್ರತೆಯೊಂದಿಗೆ ಸಂಜೆಯ ವೇಳೆಗೆ ಚಿರತೆಯ ರಕ್ಷಣಾ ಕಾರ್ಯವನ್ನು ಆರಂಭಿಸಿದ್ದರು. ಬೋನು ತಂದು ಬಾವಿಯ ಕಟ್ಟೆಯ ಸಮೀಪ ಇಟ್ಟು ಬಾವಿಯ ಮೇಲಿನ ಭಾಗಕ್ಕೆ ಬಲೆ ಹಾಸಿ ಏಣಿ ಇಳಿಸಲಾಗಿದ್ದು,

ಕಡಬ| ಆಪರೇಶನ್ ಚೀತಾ ಸಕ್ಸಸ್| ಕೋಳಿ ಹಿಡಿಯಲು ಬಂದ ಚಿರತೆ ಬೋನೊಳಗೆ ಬಂಧಿ| Read More »

ಜ್ಯೂಸ್ ನಲ್ಲಿ ಅಮಲು ಪದಾರ್ಥ ಬೆರೆಸಿ ರೌಡಿಶೀಟರ್‌ನಿಂದ ಅಪ್ರಾಪ್ತ ಬಾಲಕಿಯ ಅತ್ಯಾಚಾರ – ಆರೋಪಿ ಅಂದರ್

ಮಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ರೌಡಿಶೀಟರ್‌ ಅತ್ಯಾಚಾರ ನಡೆಸಿರುವ ಘಟನೆ ಮಂಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕೈಕಂಬದ ಹೊಟೇಲ್ ಒಂದರಲ್ಲಿ ಬಾಣಸಿಗನಾಗಿದ್ದ ರೌಡಿಶೀಟರ್ ನವೀನ್ ಸಿಕ್ವೇರ ಎಂದು ಗುರುತಿಸಲಾಗಿದೆ. ಬಾಲಕಿ ಸಹೋದರನ ಪರಿಚಯದ ಹಿನ್ನೆಲೆ ಬಾಲಕಿ‌ ನಂಬರ್ ಪಡೆದಿದ್ದ ರೌಡಿಶೀಟರ್ ಆಕೆ ಮನೆಯಲ್ಲಿ ಒಬ್ಬಳೇ ಇರುವ ವೇಳೆ ಮನೆಗೆ ಬಂದು ಬಾಲಕಿಗೆ ಜ್ಯೂಸ್ ನಲ್ಲಿ ನಿದ್ದೆ ಬರೊ ಮದ್ದು ಬೆರೆಸಿ ಅತ್ಯಾಚಾರ ಮಾಡಿದ್ದ ಎನ್ನಲಾಗಿದೆ. ಇನ್ನು ಅತ್ಯಾಚಾರವೆಸಗಿ ಆರೋಪಿಯು

ಜ್ಯೂಸ್ ನಲ್ಲಿ ಅಮಲು ಪದಾರ್ಥ ಬೆರೆಸಿ ರೌಡಿಶೀಟರ್‌ನಿಂದ ಅಪ್ರಾಪ್ತ ಬಾಲಕಿಯ ಅತ್ಯಾಚಾರ – ಆರೋಪಿ ಅಂದರ್ Read More »

ಕೇದಾರನಾಥ ಆವರಣದಲ್ಲಿ ಶೂ ಧರಿಸಿ ಓಡಾಡಿದ‌ ಪ್ರಧಾನಿ ಮೋದಿ| ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆ|

ನವದೆಹಲಿ: ನವೆಂಬರ್ 5 ರಂದು ಉತ್ತರಾಖಂಡದ ಕೇದಾರನಾಥ ದೇವಾಲಯಕ್ಕೆ ಭೇಟಿ ನೀಡಿದ್ದ ಪ್ರಧಾನಿ ಮೋದಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರಲ್ಲದೆ 12 ಅಡಿಗಳಷ್ಟು ಎತ್ತರದ ಆದಿ ಶಂಕರಾಚಾರ್ಯರ ಪ್ರತಿಮೆಯನ್ನು ಉದ್ಘಾಟಿಸಿದ್ದರು. ಈ ಭೇಟಿ ಸಂದರ್ಭದ ಫೋಟೋಗಳು, ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವ್ಯಾಪಕವಾಗಿ ಹರಿದಾಡಿದ್ದವು. ಮೋದಿ, ಬಿಜೆಪಿ ಅಭಿಮಾನಿಗಳು ಪ್ರಚಾರಾರ್ಥ ಈ ಚಿತ್ರಗಳನ್ನು ಹಂಚಿಕೊಂಡರೆ, ವಿರೋಧಿ ಪಾಳೆಯದವರು ಈ ಶೋ ಆಫ್ ಬೇಕಿತ್ತಾ ಎನ್ನುವ ಅರ್ಥದಲ್ಲಿ ಈ ಚಿತ್ರಗಳನ್ನು ಹಂಚಿಕೊಂಡು ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಎಲ್ಲಕ್ಕಿಂತ ಅಚ್ಚರಿ ಎಂದರೆ

ಕೇದಾರನಾಥ ಆವರಣದಲ್ಲಿ ಶೂ ಧರಿಸಿ ಓಡಾಡಿದ‌ ಪ್ರಧಾನಿ ಮೋದಿ| ಜಾಲತಾಣಗಳಲ್ಲಿ ಪರ-ವಿರೋಧ ಚರ್ಚೆ| Read More »

ಅಡಿಕೆ ಕದ್ದ ನೆಪದಲ್ಲಿ ಬಾಲಕನಿಗೆ ಹಿಗ್ಗಾಮುಗ್ಗ ಹಲ್ಲೆ ಪ್ರಕರಣ| ಆರೋಪಿಗಳಿಗೆ ಜಾಮೀನು ದಯಪಾಲಿಸಿದ ಕೋರ್ಟ್..!

ಪುತ್ತೂರು: ಅಡಿಕೆ ಕದ್ದ ನೆಪದಲ್ಲಿ ಗುತ್ತಿಗಾರಿನ 16 ವರ್ಷದ ಬಾಲಕನಿಗೆ ಹಿಗ್ಗಾಮುಗ್ಗಾ ಥಳಿಸಿದ ವಿಡಿಯೋ ಇತ್ತೀಚೆಗೆ ವೈರಲ್ ಆಗಿತ್ತು. ಈ ಘಟನೆಗೆ ಸಂಬಂಧಿಸಿದಂತೆ ಸಾರ್ವಜನಿಕ ಆಕ್ರೋಶ ಕೇಳಿಬಂದಿದ್ದರಿಂದ ಸುಬ್ರಹ್ಮಣ್ಯ ಠಾಣೆಯ ಪೊಲೀಸರು ಮೊದಲಿಗೆ ಸುಮೊಟೊ ಕೇಸು ದಾಖಲಿಸಿದ್ದರು. ಆನಂತರ, ಸ್ವತಃ ಬಾಲಕನೇ ಹೆತ್ತವರ ಜೊತೆಗೆ ಬಂದು ಠಾಣೆಯಲ್ಲಿ ದೂರು ದಾಖಲಿಸಿದ್ದ. ಗುತ್ತಿಗಾರಿನ ಕಡ್ತಲ್ ಕಜೆ ಎಂಬಲ್ಲಿ ಅ.27ರಂದು ಸಂಜೆ 7 ಗಂಟೆ ಸುಮಾರಿಗೆ ಘಟನೆ ನಡೆದಿತ್ತು. ಹಣ್ಣಡಿಕೆಯನ್ನು ಗೋಣಿಯಲ್ಲಿ ತುಂಬಿಸಿ ಒಯ್ಯುತ್ತಿದ್ದ ಬಾಲಕನನ್ನು, ಆತ ಕದ್ದು ತಂದ

ಅಡಿಕೆ ಕದ್ದ ನೆಪದಲ್ಲಿ ಬಾಲಕನಿಗೆ ಹಿಗ್ಗಾಮುಗ್ಗ ಹಲ್ಲೆ ಪ್ರಕರಣ| ಆರೋಪಿಗಳಿಗೆ ಜಾಮೀನು ದಯಪಾಲಿಸಿದ ಕೋರ್ಟ್..! Read More »

ಪುತ್ತೂರು: ಮೀನು ಹಿಡಿಯಲು ಹೋದ ಯುವಕ ಕೆರೆಪಾಲು

ಪುತ್ತೂರು: ಮೀನು ಹಿಡಿಯಲೆಂದು‌‌ ಸ್ನೇಹಿತರ ಜೊತೆ ಹೋದ ಯುವಕನೊಬ್ಬ ಕೆರೆಯಲ್ಲಿ ಮುಳುಗಿ‌ ಸಾವನ್ನಪ್ಪಿದ ಘಟನೆ ಬೆಳ್ಳಾರೆಯಿಂದ ವರದಿಯಾಗಿದೆ. ಮೃತಪಟ್ಟ ಯುವಕನನ್ನು ಪುತ್ತೂರು ಸಂಪ್ಯದ ಮೂಲೆ ನಿವಾಸಿ ಸುಂದರ ಅವರ ಪುತ್ರ ಅವಿನಾಶ್ (23ವ) ಎಂದು ಗುರುತಿಸಲಾಗಿದೆ. ಈತ ಬೆಳ್ಳಾರೆಯ ಮೊಗಪ್ಪೆ ಕೆರೆಯಲ್ಲಿ ಮೀನು ಹಿಡಯಲೆಂದು ಸ್ನೇಹಿತರೊಂದಿಗೆ ತೆರಳಿದ್ದು, ಬಳಿಕ ಕೆರೆಯಲ್ಲಿ ಕಣ್ಮರೆಯಾಗಿರುವುದಾಗಿ ಹೇಳಲಾಗಿದೆ. ಬಳಿಕ ಪುತ್ತೂರು ಅಗ್ನಿಶಾಮಕ ದಳದವರು ಕಾರ್ಯಾಚರಣೆ ನಡೆಸಿ ಅವಿನಾಶ್ ಅವರ ಮೃತದೇಹವನ್ನು ಕೆರೆಯಿಂದ ಹೊರತೆಗೆದಿದ್ದಾರೆ. ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪುತ್ತೂರು: ಮೀನು ಹಿಡಿಯಲು ಹೋದ ಯುವಕ ಕೆರೆಪಾಲು Read More »

ಅಪ್ರಾಪ್ತೆಯ ಮೇಲೆ ಎರಗಿದ ಕಾಮಾಂಧರು| ಮೂವರು ಅರೆಸ್ಟ್

ಬಂಟ್ವಾಳ: ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಸಂಬಂಧ ಬಾಲಕಿಯ ತಾಯಿ ದೂರು ನೀಡಿದ್ದು ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಪ್ರಾಪ್ತೆ ಬಾಲಕಿಯ ತಾಯಿ ದೂರು ನೀಡಿದ ಆಧಾರದಲ್ಲಿ ರಿಕ್ಷಾ ಚಾಲಕ ರಿಜ್ವಾನ್ ಎಂದು ಗುರುತಿಸಲಾಗಿದ್ದು ವ್ಯಕ್ತಿಯನ್ನು ದಸ್ತಗಿರಿಗೊಳಪಡಿಸಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾನೆ. ಇಷ್ಟು ಮಾತ್ರವಲ್ಲದೇ ಅದೇ ಬಾಲಕಿಯು ತನ್ನ ತಾಯಿಯೊಂದಿಗೆ ಹಾಜರಾಗಿ ಸುಮಾರು 5 ತಿಂಗಳ ಹಿಂದೆ ಇಬ್ಬರು ಯುವಕರು ಪರಿಚಿತರಾಗಿ ತನ್ನನ್ನು

ಅಪ್ರಾಪ್ತೆಯ ಮೇಲೆ ಎರಗಿದ ಕಾಮಾಂಧರು| ಮೂವರು ಅರೆಸ್ಟ್ Read More »

ಉಪ್ಪಿನಂಗಡಿ: ನವವಿವಾಹಿತ ಆತ್ಮಹತ್ಯೆ| ಅನುಮಾನ ಹುಟ್ಟಿಸುತ್ತಿದೆ ದುರಂತ|

ಉಪ್ಪಿನಂಗಡಿ: ನವವಿವಾಹಿತ ವ್ಯಕ್ತಿಯೊಬ್ಬರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಉಪ್ಪಿನಂಗಡಿ ಸಮೀಪದ ಕುದ್ರಡ್ಕ ಎಂಬಲ್ಲಿ ನಡೆದಿದೆ. ಕುದ್ರಡ್ಕ ಕಲ್ಲಿನ ಕೋರೆ ಬಳಿ ಮೃತ ದೇಹ ಪತ್ತೆಯಾಗಿದ್ದು, ಮೃತ ವ್ಯಕ್ತಿಯನ್ನು ನಾಸಿರ್(27) ಎಂದು ಗುರುತಿಸಲಾಗಿದೆ. ಕಳೆದ ಆದಿತ್ಯವಾರವಷ್ಟೇ ಮೃತ ನಾಸಿರ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಆದರೆ ದಾಂಪತ್ಯ ಜೀವನಕ್ಕೆ ಕಾಲಿಟ್ಟು ಒಂದು ವಾರಗಳು ಆಗುವ ಮೊದಲೇ ಆತ್ಮಹತ್ಯೆಗೈದ ರೀತಿಯಲ್ಲಿ ಮೃತದೇಹ ಪತ್ತೆಯಾಗಿರುವುದು ಅನುಮಾನಕ್ಕೆ ಕಾರಣವಾಗಿದೆ. ಘಟನಾ ಸ್ಥಳಕ್ಕೆ ಪುಂಜಾಲಕಟ್ಟೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.ಒಂದು ಕಡೆ

ಉಪ್ಪಿನಂಗಡಿ: ನವವಿವಾಹಿತ ಆತ್ಮಹತ್ಯೆ| ಅನುಮಾನ ಹುಟ್ಟಿಸುತ್ತಿದೆ ದುರಂತ| Read More »