Editor

ಮುಖ್ಯಮಂತ್ರಿಗೆ ತವರು‌ ಜಿಲ್ಲೆಯಲ್ಲಿ ಮುಖಭಂಗ| ಹಾನಗಲ್ ಗೆದ್ದ ಕಾಂಗ್ರೆಸ್|

ಬೆಂಗಳೂರು: ಮುಖ್ಯಮಂತ್ರಿ ತವರು ಜಿಲ್ಲೆಯ ಹಾನಗಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ತೀವ್ರ ಮುಖಭಂಗವಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಅವರು 55665 ಹಾಗೂ ಬಿಜೆಪಿಯ ಶಿವರಾಜ ಸಜ್ಜನರ ಅವರು 48847 ಮತ್ತು ಜೆಡಿಎಸ್ ನ ನಿಯಾಜ್ ಶೇಖ್ ಕೇವಲ 570 ಮತಗಳನ್ನು ಪಡೆದಿದ್ದಾರೆ. ಇನ್ನು ಸಿಂದಗಿ ಹಾಗೂ ಹಾನಗಲ್​ ವಿಧಾನಸಭಾ ಕ್ಷೇತ್ರಗಳಿಗೆ ಅಕ್ಟೋಬರ್​ 29ರಂದು ಚುನಾವಣೆ ನಡೆದಿತ್ತು. ಮೂರು ಪಕ್ಷದ ಘಟಾನುಘಟಿ ನಾಯಕರು

ಮುಖ್ಯಮಂತ್ರಿಗೆ ತವರು‌ ಜಿಲ್ಲೆಯಲ್ಲಿ ಮುಖಭಂಗ| ಹಾನಗಲ್ ಗೆದ್ದ ಕಾಂಗ್ರೆಸ್| Read More »

ಕೆ.ಸೆಟ್ ಫಲಿತಾಂಶ ಪ್ರಕಟ| ಈ ಬಾರಿ ಮೇಲುಗೈ‌ ಸಾಧಿಸಿದ ಪುರುಷ ಅಭ್ಯರ್ಥಿಗಳು|

ಮೈಸೂರು: ಜುಲೈ 25, 2021ರಂದು ರಾಜ್ಯಾಧ್ಯಂತ ನಡೆಸಲಾಗಿದ್ದ ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ. ಈ ಬಾರಿಯ ಪರೀಕ್ಷೆಯಲ್ಲಿ ಪುರುಷ ಅಭ್ಯರ್ಥಿಗಳೇ ಮೇಲುಗೈ ಸಾಧಿಸಿರುವುದಾಗಿ ತಿಳಿದು ಬಂದಿದೆ. ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಕೆಸೆಟ್-2021ರ ಪರೀಕ್ಷೆಯ ಫಲಿತಾಂಶವನ್ನು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಬಿಡುಗಡೆ ಮಾಡಿದರು. ಈ ಬಾರಿ 83,907 ಅಭ್ಯರ್ಥಿಗಳು ಕೆಸೆಟ್ ಪರೀಕ್ಷೆಗಾಗಿ ಅರ್ಜಿಯನ್ನು ಸಲ್ಲಿಸಿದ್ದರು. ಇವರಲ್ಲಿ 69,857 ಅಭ್ಯರ್ಥಿಗಳು ಮಾತ್ರ ಪರೀಕ್ಷೆಗೆ ಹಾಜರಾಗಿದ್ದರು ಎಂದು ತಿಳಿಸಿದರು. ಇನ್ನೂ ಪರೀಕ್ಷೆಗೆ

ಕೆ.ಸೆಟ್ ಫಲಿತಾಂಶ ಪ್ರಕಟ| ಈ ಬಾರಿ ಮೇಲುಗೈ‌ ಸಾಧಿಸಿದ ಪುರುಷ ಅಭ್ಯರ್ಥಿಗಳು| Read More »

ಮಂಗಳೂರು- ಕುವೈಟ್ ವಿಮಾನಯಾನ| ಊಟಕ್ಕಿಲ್ಲದ ಉಪ್ಪಿನಕಾಯಿ

ಮಂಗಳೂರು: ಇಲ್ಲಿಂದ ಕುವೈತ್‌ಗೆ ತೆರಳುವ ಏರ್‌ ಇಂಡಿಯಾ ವಿಮಾನಗಳ ವೇಳಾಪಟ್ಟಿಯನ್ನು ನವೆಂಬರ್‌ನಿಂದ ಪರಿಷ್ಕರಿಸಲಾಗಿದ್ದು, ಈ ಬಾರಿಯೂ ಅನುಕೂಲ ಕಲ್ಪಿಸಿಲ್ಲ ಎನ್ನುವ ಆರೋಪ ಕುವೈತ್‌ನ ಅನಿವಾಸಿ ಕರಾವಳಿಗರಿಂದ ಕೇಳಿಬಂದಿದೆ. ಕೋವಿಡ್‌-19 ಮೊದಲ ಅಲೆಯವರೆಗೆ ಸಮರ್ಪಕವಾಗಿದ್ದ ಮಂಗಳೂರು-ಕುವೈತ್‌ ವಿಮಾನದ ವೇಳಾಪಟ್ಟಿ, ಬಳಿಕ ದಿಢೀರನೆ ಬದಲಾಗಿದೆ.ಗುರುವಾರ ಕುವೈತ್‌ನಿಂದ ಹೊರಟು ಮಂಗಳೂರಿಗೆ ಬರುವವರಿಗೆ ಮೊದಲಿನ ವೇಳಾಪಟ್ಟಿ ಅನುಕೂಲವಾಗಿತ್ತು. ಕುವೈತ್‌ನಲ್ಲಿ ಶುಕ್ರವಾರ ಮತ್ತು ಶನಿವಾರ ವಾರಾಂತ್ಯ ರಜೆ ಇರುವುದರಿಂದ, ಕರಾವಳಿ ಜನರು ಊರಿಗೆ ಬಂದು ಹೋಗಲು ಪ್ರಯೋಜನವಾಗುತ್ತಿತ್ತು. ರಜೆ ಇಲ್ಲದೆ ಭಾನುವಾರ ಮತ್ತೆ ಕೆಲಸಕ್ಕೆ

ಮಂಗಳೂರು- ಕುವೈಟ್ ವಿಮಾನಯಾನ| ಊಟಕ್ಕಿಲ್ಲದ ಉಪ್ಪಿನಕಾಯಿ Read More »

ಸಿಂದಗಿಯಲ್ಲಿ ಸಿಂಹಾಸನ ಏರಿದ ಭೂಸನೂರು| 25 ಸಾವಿರ ‌ಮತಗಳ ಬರ್ಜರಿ‌ ಗೆಲುವು

ವಿಜಯಪುರ: ಸಿಂದಗಿ ಉಪಚುನಾವಣೆಯಲ್ಲಿ ಸಿಂದಗಿ ಬಿಜೆಪಿ ಅಭ್ಯರ್ಥಿ ರಮೇಶ್​ ಭೂಸನೂರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಕಣದಲ್ಲಿ 6 ಅಭ್ಯರ್ಥಿಗಳಿದ್ದರೂ ಬಿಜೆಪಿಯ ರಮೇಶ ಭೂಸನೂರ ಹಾಗೂ ಕಾಂಗ್ರೆಸ್‌ನ ಅಶೋಕ ಮನಗೂಳಿ ನಡುವೆ ನೇರ ಹಣಾಹಣಿ ನಡೆದಿದ್ದು, 25,000ಕ್ಕೂ ಹೆಚ್ಚು ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ.

ಸಿಂದಗಿಯಲ್ಲಿ ಸಿಂಹಾಸನ ಏರಿದ ಭೂಸನೂರು| 25 ಸಾವಿರ ‌ಮತಗಳ ಬರ್ಜರಿ‌ ಗೆಲುವು Read More »

ಪತ್ನಿಯನ್ನು ಆಕೆಯ ಪ್ರೇಮಿಯೊಂದಿಗೆ ಮದುವೆ ಮಾಡಿಸಿದ ಪತಿರಾಯ

ಲಕ್ನೋ: ವ್ಯಕ್ತಿಯೊಬ್ಬ ತನ್ನ ಐದು ತಿಂಗಳ ದಾಂಪತ್ಯವನ್ನು ತ್ಯಾಗ ಮಾಡಿ, ಮತ್ತು ಹೆಂಡತಿಯನ್ನು ಆಕೆಯ ಗೆಳೆಯನೊಂದಿಗೆ ಮದುವೆ ಮಾಡಿಸಿದ ವಿಚಿತ್ರ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ. ಶುಕ್ರವಾರ ಗೋಲ್ ಚೌರಾದಲ್ಲಿರುವ ಆಶಾಜ್ಯೋತಿ ಕೇಂದ್ರದಲ್ಲಿ ನಡೆದ ಈ ಮದುವೆಗೆ ಜಿಲ್ಲಾ ಪರೀಕ್ಷಾಧಿಕಾರಿ, ಒನ್ ಸ್ಟಾಪ್ ಸೆಂಟರ್ ಮ್ಯಾನೇಜರ್, ಸ್ಥಳೀಯ ಪೊಲೀಸ್ ಠಾಣೆಯ ಪೊಲೀಸರು ಹಾಗೂ ಮೂವರ ಸಂಬಂಧಿಕರು ಸಾಕ್ಷಿಯಾಗಿದ್ದರು. ಗುರುಗ್ರಾಮ್‌ನ ಖಾಸಗಿ ಸಂಸ್ಥೆಯೊಂದರಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿರುವ ಬರ್ರಾ-8 ನಿವಾಸಿ ಪಂಕಜ್ ಶರ್ಮಾ ಅವರು ಮೇ

ಪತ್ನಿಯನ್ನು ಆಕೆಯ ಪ್ರೇಮಿಯೊಂದಿಗೆ ಮದುವೆ ಮಾಡಿಸಿದ ಪತಿರಾಯ Read More »

‘ವಾಯುಭಾರ ಕುಸಿತ’, ರಾಜ್ಯದಲ್ಲಿ ನಿಲ್ಲದ ಮಳೆ ಕಾಟ| ಇನ್ನೂ 3 ದಿನ‌ ಎಲ್ಲೋ ಅಲರ್ಟ್|

ಬೆಂಗಳೂರು: ಶ್ರೀಲಂಕಾ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣದಿಂದ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ನ.6ರವರೆಗೆ ಹೆಚ್ಚು ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ನ.2ರಂದ 6ರವರೆಗೆ ಗುಡುಗು, ಸಿಡಿಲು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ‘ಯೆಲ್ಲೊ ಅಲರ್ಟ್‌’ ಮುಂದುವರಿಸಲಾಗಿದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಇದೇ 3ರಿಂದ ಹಾಗೂ ಉತ್ತರ

‘ವಾಯುಭಾರ ಕುಸಿತ’, ರಾಜ್ಯದಲ್ಲಿ ನಿಲ್ಲದ ಮಳೆ ಕಾಟ| ಇನ್ನೂ 3 ದಿನ‌ ಎಲ್ಲೋ ಅಲರ್ಟ್| Read More »

ಪಟಾಕಿ ಸಂಪೂರ್ಣ ನಿಷೇಧ ಸಾಧ್ಯವಿಲ್ಲ ಎಂದ ಸುಪ್ರೀಂ

ನವದೆಹಲಿ: ಕೋವಿಡ್ ಸಾಂಕ್ರಾಮಿಕ ಹಾಗೂ ವಾಯುಮಾಲಿನ್ಯದ ನಡುವೆ ಪಟಾಕಿ ಸಂಪೂರ್ಣ ನಿಷೇಧಿಸುವಂತೆ ಕೋಲ್ಕತ್ತ ಹೈಕೋರ್ಟ್ ಹೇಳಿತ್ತು. ಆದರೆ, ಕೋಲ್ಕತ್ತಾ ಹೈಕೋರ್ಟ್ ತೀರ್ಪನ್ನು ಸುಪ್ರೀಂ ಕೋರ್ಟ್ ಬದಿಗೊತ್ತಿ, ಹೊಸ ತೀರ್ಪು ನೀಡಿದೆ. ಪಟಾಕಿ ಸಿಡಿಸುವುದಕ್ಕೆ ಸಂಬಂಧಿಸಿದಂತೆ ಮತ್ತೊಂದು ಪ್ರಕರಣದ ವಿಚಾರಣೆ ವೇಳೆ ಶುಕ್ರವಾರದ ಸುಪ್ರೀಂ ಕೋರ್ಟ್ನ ಆದೇಶದ ಮೇರೆಗೆ ಮಾತನಾಡಿದ ನ್ಯಾಯಮೂರ್ತಿಗಳು, ಪಟಾಕಿ ಸಿಡಿಸುವುದನ್ನು ಸಂಪೂರ್ಣ ನಿಷೇಧಿಸಲು ಆಗುವುದಿಲ್ಲ. ದುರುಪಯೋಗವನ್ನು ತಡೆಯಲು ಕಾರ್ಯವಿಧಾನವನ್ನು ಬಲಪಡಿಸಿ” ಎಂದು ಹೇಳಿದರು. ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿಗಳಾದ ಎಎಂ ಖಾನ್ವಿಲ್ಕರ್, ಅಜಯ್ ರಸ್ತೋಗಿ

ಪಟಾಕಿ ಸಂಪೂರ್ಣ ನಿಷೇಧ ಸಾಧ್ಯವಿಲ್ಲ ಎಂದ ಸುಪ್ರೀಂ Read More »

ಮೂಡುಬಿದ್ರೆ ಪೊಲೀಸರ ಬಲೆಗೆ ಬಿದ್ದ ಅಂಡರ್ ವರ್ಲ್ಡ್ ಡಾನ್ ಸುರೇಶ ಪುಜಾರಿಯ ಬಂಟ

ಮಂಗಳೂರು: ಕೆಲ ದಿನಗಳ ಹಿಂದೆಯಷ್ಟೇ ಬಂಧನಕ್ಕೀಡಾಗಿರುವ ಅಂಡರ್ ವರ್ಲ್ಡ್ ಡಾನ್ ಸುರೇಶ ಪುಜಾರಿಯ ಬಂಟ ಪ್ರವೀಣ್ ಕುಮಾರ್ ಎಂಬತಾನನ್ನು ಮೂಡುಬಿದ್ರೆ ಪೊಲೀಸರು ಬಂಧಿಸಿದ್ದಾರೆ. ಹತ್ತು ವರ್ಷಗಳ ಹಿಂದೆ ಮುಂಬೈನಲ್ಲಿ ಛೋಟಾ ರಾಜನ್, ಆಬಳಿಕ ರವಿ ಪೂಜಾರಿ ಜೊತೆಗೆ ಖಾಸಾ ಬಂಟನಾಗಿ ಗುರುತಿಸಲ್ಪಟ್ಟಿದ್ದ ಸುರೇಶ ಪೂಜಾರಿ ಆನಂತರ ತಾನೇ ಅಂಡರ್ ವರ್ಲ್ಡ್ ಡಾನ್ ಎಂದು ಹೇಳಿ ವಿದೇಶದಲ್ಲಿದ್ದುಕೊಂಡು ಮುಂಬೈನಲ್ಲಿ ಹಫ್ತಾ ವಸೂಲಿ ಮಾಡುತ್ತಿದ್ದ. ಈತನ ವಿರುದ್ಧ ಹಲವಾರು ಪ್ರಕರಣಗಳು ಮುಂಬೈ ಮತ್ತು ಥಾಣೆಯಲ್ಲಿ ದಾಖಲಾಗಿದ್ದವು. ಈತನ ಸಹಚರರ ಮೂಲಕ

ಮೂಡುಬಿದ್ರೆ ಪೊಲೀಸರ ಬಲೆಗೆ ಬಿದ್ದ ಅಂಡರ್ ವರ್ಲ್ಡ್ ಡಾನ್ ಸುರೇಶ ಪುಜಾರಿಯ ಬಂಟ Read More »

ಪುತ್ತೂರು: ಕಾರು‌ ಮತ್ತು ಆ್ಯಕ್ಟಿವಾ ನಡುವೆ ಅಪಘಾತ| ಸವಾರ ಸಾವು

ಪುತ್ತೂರು: ಇಲ್ಲಿನ ಪುತ್ತೂರು – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನರಿಮೊಗರು ಬಳಿಯ ಕೊಡನೀರು ಎಂಬಲ್ಲಿ ನಡೆದ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟ ಘಟನೆ ನ .1 ರಂದು ನಡೆದಿದೆ. ಪೆರಮೊಗರಿನ ಕೋಳಿ ಅಂಗಡಿಯ ಸೋಮಶೇಖರ್ ರೈ ಮೃತಪಟ್ಟವರು.ಮಾರುತಿ ಡಿಸೈರ್ ಕಾರು ಹಾಗೂ ಅಕ್ಟಿವಾ ವಾಹನಗಳ ನಡುವೆ ಅಪಘಾತ ಸಂಭವಿಸಿದೆ. ಈ ವೇಳೆ ಅಕ್ಟಿವಾ ಸವಾರ ಗಂಭೀರವಾಗಿ ಗಾಯಗೊಂಡಿದ್ದು ,ಕೂಡಲೇ ಸ್ಥಳೀಯರ ನೆರವಿನಿಂದ ಅರುಣ್ ಕುಮಾರ್ ಪುತ್ತಿಲರವರು ತಮ್ಮ ಕಾರಿನಲ್ಲಿ ಗಾಯಾಳುವನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ

ಪುತ್ತೂರು: ಕಾರು‌ ಮತ್ತು ಆ್ಯಕ್ಟಿವಾ ನಡುವೆ ಅಪಘಾತ| ಸವಾರ ಸಾವು Read More »

ಕೊಹ್ಲಿ ಮಗಳನ್ನು ರೇಪ್ ಮಾಡುವುದಾಗಿ ಬೆದರಿಕೆ ಒಡ್ಡಿದ ಧರ್ಮಾಂಧ|

ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಧರ್ಮಾಂಧರ ಕಣ್ಣು ಮುಹಮ್ಮದ್ ಶಮಿ ಬಳಿಕ ಇದೀಗ ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಮೇಲೆ ಬಿದ್ದಿದೆ. ಮುಹಮ್ಮದ್ ಶಮಿ ವಿರುದ್ಧದ ಟೀಕೆಗಳಿಗೆ ಕಠಿಣ ಶಬ್ಧಗಳಲ್ಲಿ ಪ್ರತಿಕ್ರಿಯೆ ಕೊಟ್ಟಿದ್ದ ಕ್ಯಾಪ್ಟನ್ ಇದೀಗ ಧರ್ಮಾಂಧರ ಟಾರ್ಗೆಟ್ ಆಗಿದ್ದಾರೆ. ಟ್ವಿಟರ್’ನಲ್ಲಿ ಪೋಸ್ಟ್ ಮಾಡಲಾದ ಕೊಹ್ಲಿ ಹೇಳಿಕೆಯ ಕೆಳಗಡೆ, ಅಮೆನಾ ಹೆಸರಿನ ಟ್ವಿಟರ್ ಖಾತೆಯಲ್ಲಿ’ ಅನುಷ್ಕಾ ಶರ್ಮಾಳಿಗೆ ನಾಚಿಕೆಯಾಗಬೇಕು. ವಮಿಕಾಳ ಫೋಟೋ ಬಿಡುಗಡೆಗೆ ಕಾಯುತ್ತಿದ್ದೇನೆ. ಆಕೆಯನ್ನು ಅತ್ಯಾಚಾರ ಮಾಡುತ್ತೇನೆ’ ಎಂದು ಬೆದರಿಕೆ ಹಾಕಲಾಗಿದೆ. ಪತ್ರಕರ್ತೆ ಸ್ವಾತಿ ಚತುರ್ವೇದಿ,

ಕೊಹ್ಲಿ ಮಗಳನ್ನು ರೇಪ್ ಮಾಡುವುದಾಗಿ ಬೆದರಿಕೆ ಒಡ್ಡಿದ ಧರ್ಮಾಂಧ| Read More »