Editor

ಮುಸ್ಲಿಂ ವ್ಯಕ್ತಿಗೆ ಥಳಿಸಿದ ವಿಡಿಯೋ ಹಂಚಿಕೊಂಡ ಆರೋಪ | ಪತ್ರಕರ್ತೆ ರಾಣಾ ಅಯ್ಯೂಬ್ ಬಂಧನಕ್ಕೆ ಒಂದು ತಿಂಗಳ ತಡೆ ನೀಡಿದ ಬಾಂಬೆ ಹೈಕೋರ್ಟ್‌

ಮುಂಬೈ: ಗಾಜಿಯಾಬಾದ್ ಲೋನಿಯಲ್ಲಿ ಮುಸ್ಲಿಂ ವ್ಯಕ್ತಿಯೊಬ್ಬರನ್ನು ಥಳಿಸಿದ ವಿಡಿಯೋವನ್ನು ಸಾಮಾಜಿಕ ಜಾಲತಾಣಕ್ಕೆ ಹಂಚಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ರಕರ್ತೆ ರಾಣಾ ಅಯ್ಯೂಬ್ ಅವರನ್ನು 4 ವಾರಗಳ ಕಾಲ ಬಂಧಿಸದಂತೆ ಬಾಂಬೆ ಹೈಕೋರ್ಟ್ ಆದೇಶ ನೀಡಿದೆ. ಜೂನ್ ಮೊದಲ ವಾರದಲ್ಲಿ ಗಾಝಿಯಾಬಾದ್ ಲೋನಿಯಲ್ಲಿ ಮುಸ್ಲಿಂ ವೃದ್ಧರೊಬ್ಬರನ್ನು ಯುವಕರು ಥಳಿಸಿದ ವಿಡಿಯೋವನ್ನು ಸಾಮಾಜಿಕ ಜಾಲಾತಾಣದಲ್ಲಿ ಹಂಚಿಕೊಂಡ ಕಾರಣಕ್ಕೆ ಉತ್ತರ ಪ್ರದೇಶದಲ್ಲಿ ರಾಣಾ ಅಯ್ಯೂಬ್ ಅವರ ವಿರುದ್ಧ FIR ದಾಖಲಾಗಿತ್ತು. FIR ದಾಖಲಾದ ಬೆನ್ನಲ್ಲೇ ರಾಣಾ ಅಯ್ಯೂಬ್ ತಮ್ಮ ಬಂಧನಕ್ಕೆ ತಡೆಕೋರಿ ಬಾಂಬೆ […]

ಮುಸ್ಲಿಂ ವ್ಯಕ್ತಿಗೆ ಥಳಿಸಿದ ವಿಡಿಯೋ ಹಂಚಿಕೊಂಡ ಆರೋಪ | ಪತ್ರಕರ್ತೆ ರಾಣಾ ಅಯ್ಯೂಬ್ ಬಂಧನಕ್ಕೆ ಒಂದು ತಿಂಗಳ ತಡೆ ನೀಡಿದ ಬಾಂಬೆ ಹೈಕೋರ್ಟ್‌ Read More »

ರಾಜ್ಯದಲ್ಲಿ ಕಾಣಿಸಿಕೊಂಡ‌ ಕೊರೊನ ‘ಡೆಲ್ಟಾ ಪ್ಲಸ್’, ಇಬ್ಬರಿಗೆ ತಗುಲಿದ‌ ಸೋಂಕು

ಬೆಂಗಳೂರು : ಕೊರೋನಾ ಸೋಂಕಿನ 2ನೇ ಅಲೆಯಿಂದ ನಲುಗಿರುವಂತ ಜನರಿಗೆ, ಬ್ಲ್ಯಾಕ್ ಫೆಂಗಸ್ ಕಾಟ ಹೆಚ್ಚಾಗಿತ್ತು. ಕೊರೋನಾ, ಬ್ಲ್ಯಾಕ್ ಫಂಗಸ್ ರೋಗದ ನಡುವೆಯೂ ಈಗ ಅನೇಕ ದೇಶ, ರಾಜ್ಯಗಳಲ್ಲಿ ಕಾರಣಿಸಿಕೊಂಡಿದ್ದಂತ ಡೆಲ್ಟಾ ಪ್ಲಸ್ ರೋಗವು, ರಾಜ್ಯಕ್ಕೂ ಕಾಲಿಟ್ಟಿದೆ. ಈ ಮೂಲಕ ಜನರಲ್ಲಿ ಮತ್ತಷ್ಟು ಆತಂಕವನ್ನು ಉಂಟು ಮಾಡಿದೆ.ಕೊರೋನಾ 2ನೇ ಅಲೆಯ ತೀವ್ರತೆ ಕಡಿಮೆಯಾಗುತ್ತಿರುವ ಹೊತ್ತಿನಲ್ಲಿಯೇ, ಕೊರೋನಾ 3ನೇ ಅಲೆಯ ಭೀತಿ ರಾಜ್ಯದಲ್ಲಿ ಆರಂಭಗೊಂಡಿದೆ. ಕೊರೋನಾ 3ನೇ ಅಲೆಯು ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀರಲಿದೆ ಎನ್ನುವ ಕಾರಣಕ್ಕಾಗಿ,

ರಾಜ್ಯದಲ್ಲಿ ಕಾಣಿಸಿಕೊಂಡ‌ ಕೊರೊನ ‘ಡೆಲ್ಟಾ ಪ್ಲಸ್’, ಇಬ್ಬರಿಗೆ ತಗುಲಿದ‌ ಸೋಂಕು Read More »

ಮಂಗಳೂರು: ಮಗನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ತಂದೆ

ಮಂಗಳೂರು: ಹಸು ಕಟ್ಟುವ ವಿಚಾರದಲ್ಲಿ ತಂದೆ ಮಗನ ನಡುವೆ ಜಗಳ ನಡೆದು ತಂದೆಯೇ ಮಗನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ನಗರದ ಜಪ್ಪಿನಮೊಗರು ಎಂಬಲ್ಲಿ ನಡೆದಿದೆ. ಬೆಂಕಿ ಹಚ್ಚಿದ ಆರೋಪಿಯನ್ನು ಜಪ್ಪಿನಮೊಗರು ಗ್ರಾಮದ ಕೊಪ್ಪರಿಗೆ ಗುತ್ತು ವಿಶ್ವನಾಥ ಶೆಟ್ಟಿ ಎಂದು ಗುರುತಿಸಲಾಗಿದೆ.ಹಸು ಕಟ್ಟುವ ವಿಚಾರದಲ್ಲಿ ತಂದೆ ಹಾಗು ಮಗ ಸ್ವಾಮೀತ್ ಶೆಟ್ಟಿ (೨೫) ನಡುವೆ ಜಗಳ ನಡೆದಿದೆ. ಬಳಿಕ ಅವಾಚ್ಯ ಶಬ್ದಗಳಿಂದ ಬೈದಿರುವ ವಿಶ್ವನಾಥ ಶೆಟ್ಟಿ ಮಗನನ್ನು ಮನೆಯ ಒಳಗೆ ಹಾಕಿ ಪೆಟೋಲ್ ಸುರಿದು

ಮಂಗಳೂರು: ಮಗನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ತಂದೆ Read More »

ಹೆಚ್ಚು ಮಕ್ಕಳ ಹೆತ್ತವರಿಗೆ ಟ್ರೋಫಿ ಸಹಿತ ಒಂದು ಲಕ್ಷ ಬಹುಮಾನ…!

ಮಿಜೋರಾಂ: ಕೇಂದ್ರ ಸರ್ಕಾರ ಸಹಿತ ಭಾರತದ ಎಲ್ಲ ರಾಜ್ಯ ಸರ್ಕಾರಗಳು ಜನಸಂಖ್ಯಾ ನಿಯಂತ್ರಣಕ್ಕೆ ಪ್ರೋತ್ಸಾಹ ನೀಡುತ್ತಿರುವುದರ ನಡುವೆ ಮಿಜೋರಾಂನ ಕ್ರೀಡಾ ಸಚಿವರು ಅಚ್ಚರಿಯ ಘೋಷಣೆ ಒಂದನ್ನು ಮಾಡಿದ್ದಾರೆ. ತಮ್ಮ ಕ್ಷೇತ್ರದಲ್ಲಿ ಹೆಚ್ಚು ಮಕ್ಕಳನ್ನು ಹೆತ್ತ ಪೋಷಕರಿಗೆ ಪ್ರಮಾಣಪತ್ರ, ಟ್ರೋಫಿ ಜೊತೆಗೆ ಒಂದು ಲಕ್ಷ ರೂ. ನಗದು ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ. ಮಿಜೋರಾಮ್ ನ ಕ್ರೀಡಾ ಸಚಿವ ರಾಬರ್ಟ್ ರೊಮಾವಿಯಾ ರಾಯ್ಟೆ ಈ ಹೇಳಿಕೆ ನೀಡಿದವರು. ಈ ಹೇಳಿಕೆಯ ಉದ್ದೇಶ ಕಡಿಮೆ ಜನಸಂಖ್ಯೆ ಹೊಂದಿರುವ ಮಿಜೊ ಸಮುದಾಯಗಳನ್ನು ಪ್ರೋತ್ಸಾಹಿಸುವುದಾಗಿದೆ.

ಹೆಚ್ಚು ಮಕ್ಕಳ ಹೆತ್ತವರಿಗೆ ಟ್ರೋಫಿ ಸಹಿತ ಒಂದು ಲಕ್ಷ ಬಹುಮಾನ…! Read More »

ಕಾರ್ಕಳ ಎಪಿಎಂಸಿ ಅಧ್ಯಕ್ಷ ಕೊರೊನಾಗೆ ಬಲಿ

ಕಾರ್ಕಳ: ಕಾರ್ಕಳದ ಎಪಿಎಂಸಿ ಅಧ್ಯಕ್ಷ ಮೋಹನ್ ದಾಸ್ ಶೆಟ್ಟಿ (65) ಅವರು ಕೋವಿಡ್ ಗೆ ಬಲಿಯಾಗಿದ್ದಾರೆ. ಬೆಳ್ಮಣ್ಣ್ ಶಾಲೆ ಬಳಿಯ ನಿವಾಸಿ ಯಾಗಿದ್ದ ಇವರಿಗೆ ಕೆಲ ದಿನಗಳ ಹಿಂದೆ ಕೋವಿಡ್ ಪಾಸಿಟಿವ್ ಬಂದಿತ್ತು. ಆ ಬಳಿಕ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಇ ವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಬೆಳ್ಮಣ್ ರೋಟರಿ ಕ್ಲಬ್ ನ ಕ್ರಿಯಾಶೀಲ ಸದಸ್ಯರಾಗಿದ್ದ ಇವರು, ನಂದಳಿಕೆ ಬೋರ್ಡ್ ಶಾಲೆ, ಬೆಳ್ಮಣ್ ಸರಕಾರಿ ಪ್ರೌಢಶಾಲೆಯ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರು. ಪ್ರಸ್ತುತ

ಕಾರ್ಕಳ ಎಪಿಎಂಸಿ ಅಧ್ಯಕ್ಷ ಕೊರೊನಾಗೆ ಬಲಿ Read More »

ದಕ ಜಿಲ್ಲೆಯಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳು ಮದ್ಯಾಹ್ನ 2 ರವರೆಗೆ ಓಪನ್: ಕೋಟ ಶ್ರೀನಿವಾಸ ಪೂಜಾರಿ

ಮಂಗಳೂರು: ಜಿಲ್ಲೆಯಲ್ಲಿ ನಾಳೆಯಿಂದ ಎಲ್ಲಾ ಅಂಗಡಿ ಮುಂಗಟ್ಟುಗಳಿಗೆ ಮಧ್ಯಾಹ್ನ 2 ಗಂಟೆಯವರೆಗೆ ತೆರೆಯಲು ಅವಕಾಶ ಮಾಡಿಕೊಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಜಿಲ್ಲೆಯ ಅಂಗಡಿ ಮಾಲಕರು ವ್ಯವಹಾರ ಇಲ್ಲದೆ ಭಾರಿ ನಷ್ಟ ಅನುಭವಿಸುತ್ತಿದ್ದು, ಅಂಗಡಿ ತೆರೆಯಲು ಅನುಮತಿ ನೀಡುವಂತೆ ಮನವಿ ಮಾಡಿದ್ದರು. ಈ ಬಗ್ಗೆ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ನಾಳೆಯಿಂದ ಜಿಲ್ಲೆಯ ಎಲ್ಲ ಅಂಗಡಿಗಳು ಬೆಳಿಗ್ಗೆ ಆರರಿಂದ ಮಧ್ಯಾಹ್ನ ಎರಡು

ದಕ ಜಿಲ್ಲೆಯಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳು ಮದ್ಯಾಹ್ನ 2 ರವರೆಗೆ ಓಪನ್: ಕೋಟ ಶ್ರೀನಿವಾಸ ಪೂಜಾರಿ Read More »

ನಾನು ಹಿಂದುತ್ವಕ್ಕಾಗಿ ಹೋರಾಡಿದ್ರೂ ನನ್ನ ಬೆಂಬಲಕ್ಕೆ ಯಾರು ಇಲ್ಲ | ದಯಾಮರಣ ಕೋರಿ ರಾಜ್ಯಪಾಲರಿಗೆ ಪತ್ರ ಬರೆದ ಮಧುಗಿರಿ ಮೋದಿ

ಬೆಂಗಳೂರು: ಫೇಸ್ ಬುಕ್ ಲೈವ್ ನಲ್ಲಿ ಮೋದಿ ಪರ, ಬಲಪಂಥೀಯ ಪರ ಮಾತನಾಡುತ್ತಿದ್ದ , ಪ್ರವಾದಿ ವಿರುದ್ಧ ನಿಂದಿಸಿ ವಿವಿಧ ಠಾಣೆಗಳಲ್ಲಿ ಕೇಸ್ ಹಾಕಿಸಿಕೊಂಡಿದ್ದ ಮಧುಗಿರಿ ಮೋದಿ ದಯಾಮರಣವನ್ನು ಕೋರಿ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಲವ್ ಜಿಹಾದ್, ಗೋಹತ್ಯೆ,ಅತ್ಯಾಚಾರದ ವಿರುದ್ಧ ನಿರಂತರ ಹೋರಾಟ ನಡೆಸುತ್ತಿದ್ದೇನೆ. ಆದರೆ ಜಿಲ್ಲಾ ಪೊಲೀಸ್ ಇಲಾಖೆ ವಿಚಾರಣೆ ನೆಪದಲ್ಲಿ ದೌರ್ಜನ್ಯ ನಡೆಸುತ್ತಿದೆ. ಪೊಲೀಸರು ಸುಳ್ಳು ಕೇಸ್ ಹಾಕಿದ್ದಾರೆ. ನನಗೆ ಇದು ಸಹಿಸಲು ಅಸಾಧ್ಯ. ಅತ್ಯಾಚಾರಿಗಳು, ಭ್ರಷ್ಟರಿಗೆ ಇಲ್ಲದ ಕಿರುಕುಳ ನನಗೆ ಮಾತ್ರ ಯಾಕೆ

ನಾನು ಹಿಂದುತ್ವಕ್ಕಾಗಿ ಹೋರಾಡಿದ್ರೂ ನನ್ನ ಬೆಂಬಲಕ್ಕೆ ಯಾರು ಇಲ್ಲ | ದಯಾಮರಣ ಕೋರಿ ರಾಜ್ಯಪಾಲರಿಗೆ ಪತ್ರ ಬರೆದ ಮಧುಗಿರಿ ಮೋದಿ Read More »

ಮಾನನಷ್ಟ ಮೊಕದ್ದಮೆ: 2 ಕೋಟಿ ಪರಿಹಾರ ಕೊಡಲು ದೇವೇಗೌಡರಿಗೆ ಆದೇಶ

ಬೆಂಗಳೂರು: ಖಾಸಗಿ ಕಂಪನಿಯೊಂದಕ್ಕೆ 2 ಕೋಟಿ ರೂ. ಮನನಷ್ಟ ಪರಿಹಾರ ನೀಡಲು ಮಾಜಿ ಪ್ರಧಾನ ಮಂತ್ರಿ ದೇವೇಗೌಡರಿಗೆ ನ್ಯಾಯಾಲಯ ಆದೇಶ ನೀಡಿದೆ. ನಂದಿ ಇನ್​ಫ್ರಾ ಸ್ಟ್ರಕ್ಚರ್ ಕಾರಿಡಾರ್ (NICE) ಕಂಪನಿಯ ವಿರುದ್ಧ ಮಾಜಿ ಪ್ರಧಾನಿ ಎಚ್​.ಡಿ.ದೇವೇಗೌಡರು ಆರೋಪವೊಂದನ್ನು ಮಾಡಿದ್ದರು. ಇದೀಗ ಅದನ್ನು ಸಾಬೀತುಪಡಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ. ಹೀಗಾಗಿ ನೈಸ್ ಕಂಪನಿಗೆ ₹ 2 ಕೋಟಿ ಪರಿಹಾರ ಕೊಡಬೇಕು ಎಂದು ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ಆದೇಶ ಮಾಡಿದೆ. ದೇವೇಗೌಡರು ಕಂಪನಿಯ ವಿರುದ್ಧ ಮಾಡಿದ್ದ ಆರೋಪ ಸಾಬೀತುಪಡಿಸುವಲ್ಲಿ ವಿಫಲರಾದಾಗ

ಮಾನನಷ್ಟ ಮೊಕದ್ದಮೆ: 2 ಕೋಟಿ ಪರಿಹಾರ ಕೊಡಲು ದೇವೇಗೌಡರಿಗೆ ಆದೇಶ Read More »

ಇಹಲೋಕ‌ ತ್ಯಜಿಸಿದ ‘ಕಾರ್ಣಿಕ’ ಮೂರ್ತಿ ಗೊರವಯ್ಯ

ವಿಜಯನಗರ: ಹೂವಿನ ಹಡಗಲಿ ತಾಲೂಕಿನ ಸುಕ್ಷೇತ್ರ ಮೈಲಾರ ಲಿಂಗೇಶ್ವರ ಕಾರ್ಣಿಕದ ಗೊರವಯ್ಯ ಮಾಲತೇಶಪ್ಪ ಮಂಗಳವಾರ ಬೆಳಗಿನಜಾವ ನಿಧನರಾದರು. 31 ವರ್ಷ ಕಾಲ ಕಾರ್ಣಿಕ ನುಡಿದಿದ್ದ ಮಾಲತೇಶಪ್ಪ ಅವರು ಕೆಲ ವರ್ಷಗಳಿಂದ ಪಾರ್ಶ್ವವಾಯು ಕಾಯಿಲೆಯಿಂದ ಬಳಲುತ್ತಿದ್ದರು. ಸಂಕಷ್ಟದಲ್ಲಿದ್ದ ಗೊರವಯ್ಯ ಮಾಲತೇಶಪ್ಪ ಅವರಿಗೆ ಮನೆ ನಿರ್ಮಿಸಿಕೊಡಲು ನಾಡಿನ ಜನರು ಸಹಾಯಹಸ್ತ ಚಾಚಿದ್ದರು. ಆದರೆ ಮನೆ ನಿರ್ಮಾಣ ಆಗುವ ಮುನ್ನವೇ ಇಹಲೋಕ ತ್ಯಜಿಸಿದ್ದಾರೆ.

ಇಹಲೋಕ‌ ತ್ಯಜಿಸಿದ ‘ಕಾರ್ಣಿಕ’ ಮೂರ್ತಿ ಗೊರವಯ್ಯ Read More »

ಜನರು ಹೀಗೆ ವರ್ತಿಸಿದಲ್ಲಿ ಮತ್ತೆ ಲಾಕ್‌ಡೌನ್ ಮಾಡಲಾಗುವುದು

”ಜನರು ಹೀಗೆ ವರ್ತಿಸಿದಲ್ಲಿ ಮತ್ತೆ ಲಾಕ್‌ಡೌನ್ ಮಾಡಲಾಗುವುದು” ಮಂಡ್ಯ: ಸತತ ಲಾಕ್‌ಡೌನ್‌ನಿಂದ ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ಪಾಸಿಟಿವಿಟಿ ರೇಟ್ ಕಡಿಮೆಯಾಗಿರುವ ಕಾರಣ ಜಿಲ್ಲೆಯನ್ನು ಇಂದಿನಿಂದ ಅನ್‌ಲಾಕ್ ಮಾಡಲಾಗಿದೆ. ಜನರು ಮುಂದಿನ ದಿನಗಳಲ್ಲಿ ಕೊರೊನಾ ಮಾರ್ಗ ಸೂಚಿಗಳನ್ನು ಅನುಸರಿಸದೇ ಇದ್ದರೆ ಮತ್ತೆ ಲಾಕ್‌ಡೌನ್ ಮಾಡುವುದುದಾಗಿ ಜಿಲ್ಲಾಧಿಕಾರಿ ಅಶ್ವಥಿ ಅವರು ಎಚ್ಚರಿಕೆ ನೀಡಿದ್ದಾರೆ. ಇಂದು ಜಿಲ್ಲೆಯನ್ನು ಅನ್‌ಲಾಕ್ ಮಾಡಿರುವ ಕಾರಣ ಮಂಡ್ಯ ನಗರ ಸೇರಿದಂತೆ ತಾಲೂಕು ಕೇಂದ್ರಗಳಲ್ಲಿ ಜನಜಂಗುಳಿ ನಿರ್ಮಾಣವಾಗಿತ್ತು. ಬಟ್ಟೆ, ಚಿನ್ನ, ಮೊಬೈಲ್ ಅಂಗಡಿಗಳು ಸೇರಿದಂತೆ ಇತರೆ

ಜನರು ಹೀಗೆ ವರ್ತಿಸಿದಲ್ಲಿ ಮತ್ತೆ ಲಾಕ್‌ಡೌನ್ ಮಾಡಲಾಗುವುದು Read More »