Editor

ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ| ಹಲವು ಅಧಿಕಾರಿಗಳ ಮನೆ, ಕಚೇರಿ ಶೋಧ

ಸಮಗ್ರ ನ್ಯೂಸ್: ರಾಜ್ಯಾದಾದ್ಯಂತ ವಿವಿಧ ಜಿಲ್ಲೆಗಳ ಹಲವು ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ಗುರುವಾರ (ಮಾ.5) ಏಕಕಾಲಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಶೋಧ ಕಾರ್ಯ ಕೈಗೊಂಡಿದ್ದಾರೆ ಎಂದು ವರದಿಯಾಗಿದೆ. ಬೆಂಗಳೂರು, ಮೈಸೂರು, ಬಾಗಲಕೋಟೆ, ಮಂಡ್ಯ, ಧಾರವಾಡ, ಹಾಸನ, ವಿಜಯಪುರ ಮತ್ತು ಯಾದಗಿರಿ ಸೇರಿದಂತೆ ಒಟ್ಟು 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಏಕಕಾಲಕ್ಕೆ ಲೋಕಾಯುಕ್ತ ದಾಳಿ ನಡೆದಿದೆ. ಲೋಕೋಪಯೋಗಿ ಇಲಾಖೆ (ಪಿಡಬ್ಲ್ಯುಡಿ), ವಿದ್ಯುತ್ ಇಲಾಖೆ (ಕೆಪಿಟಿಸಿಎಲ್/ ಬೆಸ್ಕಾಂ), ಜಲಮಂಡಳಿ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಸೇರಿದಂತೆ ವಿವಿಧ ಉನ್ನತ […]

ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ| ಹಲವು ಅಧಿಕಾರಿಗಳ ಮನೆ, ಕಚೇರಿ ಶೋಧ Read More »

ಅತ್ಯದಿಕ ತೆರಿಗೆ ಸಂಗ್ರಹಣೆ| ಕಡಬ ತಾಲ್ಲೂಕು ರಾಜ್ಯಕ್ಕೆ ಪ್ರಥಮ

ಸಮಗ್ರ ನ್ಯೂಸ್: ದ.ಕ‌ ಜಿಲ್ಲೆಯಲ್ಲೇ ಕಡಬ ತಾಲೂಕಿನ ತೆರಿಗೆ ಸಂಗ್ರಹಣೆಯು ಜಿಲ್ಲೆಗೆ ಮಾತ್ರವಲ್ಲ ರಾಜ್ಯಕ್ಕೆ ಪ್ರಥಮವಾಗಿರುವುದಾಗಿ ಕಡಬ ತಾ ಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ತಿಳಿಸಿದ್ದಾರೆ. ಹೊಸ ತಾಲೂಕಾಗಿ ಘೋಷಣೆಯಾದಲ್ಲಿಂದ ಈವರೆಗೆ ಪ್ರತೀ ವರ್ಷ ತೆರಿಗೆ ಸಂಗ್ರಹಣೆಯಲ್ಲಿ ಅಗ್ರಸ್ಥಾನವನ್ನು ಪಡೆಯುತ್ತಿದೆ. ಅಂತೆಯೇ ಈ ಆರ್ಥಿಕ ವರ್ಷದಲ್ಲಿಯೂ ಕಡಬ ತಾಲೂಕು ತನ್ನ ಪ್ರಸಕ್ತ ಸಾಲಿನ ತೆರಿಗೆ ಗುರಿಯನ್ನು ಮೀರಿ ಸಾಧನೆ ಮಾಡುವ ಮೂಲಕ ಜಿಲ್ಲೆಯ ಅಭಿವೃದ್ಧಿಯ ಪಥದಲ್ಲಿ ಕಡಬದ ಈ ಸಾಧನೆಯು ಒಂದು ಮೈಲಿಗಲ್ಲಾಗಿದೆ. ಕಡಬ ತಾಲೂಕಿನ

ಅತ್ಯದಿಕ ತೆರಿಗೆ ಸಂಗ್ರಹಣೆ| ಕಡಬ ತಾಲ್ಲೂಕು ರಾಜ್ಯಕ್ಕೆ ಪ್ರಥಮ Read More »

ಇಸ್ರೇಲ್ ನಿಂದ ಟೆಹ್ರಾನ್ ಮೇಲೆ ಭಾರೀ ದಾಳಿ| ಐದನೇ ದಿನವೂ ಮುಂದುವರಿದ ಭೀಕರ ಯುದ್ಧ

ಸಮಗ್ರ ನ್ಯೂಸ್: ಇರಾನ್‌ನ ರಾಜಧಾನಿಯಲ್ಲಿ ಇಂದು ಬೆಳಿಗ್ಗೆ ಸ್ಫೋಟಗಳ ಸದ್ದು ಕೇಳಿಬಂದಿದ್ದು, ಇರಾನ್‌ ಪರಮಾಣು ತಾಣದ ಮೇಲೆ ದಾಳಿ ನಡೆಸಿ, ಗಲ್‌್ಫ ಪ್ರದೇಶದಾದ್ಯಂತ ಇಸ್ಲಾಮಿಕ್‌ ಗಣರಾಜ್ಯವು ಪ್ರತೀಕಾರದ ದಾಳಿ ನಡೆಸಿದ ನಂತರ ಅಮೆರಿಕ ಮತ್ತು ಇಸ್ರೇಲ್‌ ಜೊತೆಗಿನ ಯುದ್ಧ ಐದನೇ ದಿನಕ್ಕೆ ಕಾಲಿಟ್ಟಿದೆ. ಇರಾನ್‌ನ ದೂರದರ್ಶನವು ಬೆಳಗಿನ ಜಾವ ಟೆಹ್ರಾನ್‌ ಸುತ್ತಲೂ ಸ್ಫೋಟಗಳನ್ನು ವರದಿ ಮಾಡಿದೆ. ಏತನ್ಮಧ್ಯೆ, ಇರಾನ್‌ನಿಂದ ಬರುವ ಕ್ಷಿಪಣಿ ದಾಳಿಯಿಂದಾಗಿ ತನ್ನ ವಾಯು ರಕ್ಷಣಾ ವ್ಯವಸ್ಥೆ ಸಕ್ರಿಯಗೊಂಡಿದೆ ಎಂದು ಇಸ್ರೇಲ್‌ ಹೇಳಿದೆ. ಯುಎಸ್‌‍ ಅಧ್ಯಕ್ಷ

ಇಸ್ರೇಲ್ ನಿಂದ ಟೆಹ್ರಾನ್ ಮೇಲೆ ಭಾರೀ ದಾಳಿ| ಐದನೇ ದಿನವೂ ಮುಂದುವರಿದ ಭೀಕರ ಯುದ್ಧ Read More »

ಇಂದು ಬಣ್ಣಗಳ ಹಬ್ಬ ಹೋಳಿ| ಬದುಕನ್ನು ರಂಗಾಗಿಸುವ ಈ ಹಬ್ಬದ ಮಹತ್ವ ಗೊತ್ತಾ?

ಸಮಗ್ರ ನ್ಯೂಸ್: ವಿಶ್ವದಲ್ಲಿ ಯುದ್ಧದ ಕಾರ್ಮೋಡ ಇದ್ದರೆ ನಮ್ಮ ಭಾರತ ದೇಶದಾದ್ಯಂತ ಹೋಳಿ ಹಬ್ಬವನ್ನು ಇಂದು ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ. ಜಾತಿ-ಮತ ಭೇದವಿಲ್ಲದೆ ಜನರು ಒಂದಾಗಿ ಸೇರಿ ಬಣ್ಣಗಳ ಓಕುಳಿಯಾಟದಲ್ಲಿ ಮಿಂದೇಳುತ್ತಿದ್ದಾರೆ. ವಸಂತ ಋತುವಿನ ಆಗಮನವನ್ನು ಸೂಚಿಸುವ ಈ ಹಬ್ಬವು ಚಳಿಗಾಲದ ಅಂತ್ಯವನ್ನು ಸಾರುತ್ತದೆ. ಹೋಳಿ ಆಚರಣೆ ಸಾಮಾನ್ಯವಾಗಿ ಎರಡು ಹಂತಗಳಲ್ಲಿ ನಡೆಯುತ್ತದೆ. ಮೊದಲ ದಿನ “ಹೋಲಿಕಾ ದಹನ” ನಡೆಸಿ ಕೆಟ್ಟದನ್ನು ನಾಶ ಮಾಡುವುದನ್ನು ಸಂಕೇತಿಸಲಾಗುತ್ತದೆ. ಎರಡನೇ ದಿನ ಜನರು ಬಣ್ಣಗಳನ್ನು ಎರಚಿಕೊಂಡು, ಪರಸ್ಪರ ಶುಭಾಶಯ ವಿನಿಮಯ

ಇಂದು ಬಣ್ಣಗಳ ಹಬ್ಬ ಹೋಳಿ| ಬದುಕನ್ನು ರಂಗಾಗಿಸುವ ಈ ಹಬ್ಬದ ಮಹತ್ವ ಗೊತ್ತಾ? Read More »

ನೇಮಕಗೊಂಡ ಒಂದೇ ದಿನಕ್ಕೆ ಇರಾನ್ ನ ರಕ್ಷಣಾ ಸಚಿವನ ಹತ್ಯೆ

ಸಮಗ್ರ ನ್ಯೂಸ್: ಇರಾನ್ ಅಕ್ಷರಶಃ ತತ್ತರಿಸಿ ಹೋಗಿದೆ. ಇಸ್ರೇಲ್ ಹಾಗೂ ಅಮೆರಿಕ ನಡೆಸುತ್ತಿರುವ ದಾಳಿಯಲ್ಲಿ ಸಾವು ನೋವಿನ ಸಂಖ್ಯೆ ಹೆಚ್ಚಾಗುತ್ತಿದೆ. ಇಷ್ಟೇ ಅಲ್ಲ ಇರಾನ್ ಪ್ರಮುಖರೇ ಬಲಿಯಾಗುತ್ತಿದ್ದಾರೆ. ಇರಾನ್ ಸೇನಾ ಮುಖ್ಯಸ್ಥನ ಬೆನ್ನಲ್ಲೇ ಸರ್ವೋಚ್ಚ ನಾಯಕ ಅಯತೊಲ್ಲ ಖಮೇನಿಯನ್ನು ಹತ್ಯೆ ಮಾಡಲಾಗಿತ್ತು. ಇದೀಗ ಇರಾನ್ ನೂತನವಾಗಿ ನೇಮಕ ಮಾಡಿದ ರಕ್ಷಣಾ ಸಚಿವ ಸಯ್ಯದ್ ಮಜೀದ್ ಎಬಾ ಅಲ್ ರೆಜಾ ಹತ್ಯೆಯಾಗಿದ್ದಾರೆ. ಅಮೇರಿಕ ಹಾಗೂ ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ನೂತನ ಸಚಿವ ಹತ್ಯೆಯಾಗಿರುವುದಾಗಿ ಸ್ಪೆಕ್ಟೇಟರ್ ಇಂಡೆಕ್ಸ್ ವರದಿ

ನೇಮಕಗೊಂಡ ಒಂದೇ ದಿನಕ್ಕೆ ಇರಾನ್ ನ ರಕ್ಷಣಾ ಸಚಿವನ ಹತ್ಯೆ Read More »

ಕುಣಿತ ಭಜನೆ ವೇಳೆ ಕುಸಿದು ಬಿದ್ದು ಮಹಿಳೆ ಸಾವು

ಸಮಗ್ರ‌ನ್ಯೂಸ್: ದೇವಸ್ಥಾನದ ಜಾತ್ರೋತ್ಸವದ ಸಂದರ್ಭ ಕುಣಿತ ಭಜನೆ ಮಾಡುತ್ತಾ ಮಹಿಳೆಯೊಬ್ಬರು ಕುಸಿದು ಬಿದ್ದು ಸಾವನಪ್ಪಿದ ಘಟನೆ ಫೆಬ್ರವರಿ 28ರ ರಾತ್ರಿ ಪುತ್ತೂರು ತಾಲೂಕಿನ ಕಾವು ಎಂಬಲ್ಲಿ ಸಂಭವಿಸಿದೆ. ಸುಳ್ಯಪದವು ಮಹಾಲಕ್ಷ್ಮಿ ವನಿತಾ ಭಜನ ಮಂಡಳಿಯ ಸದಸ್ಯೆ ರತ್ನಾವತಿ ಬಾಳಪ್ಪ ಪೂಜಾರಿ ಕನ್ನಡ್ಕ (63) ಮೃತರು. ಕಾವು ಮುತ್ತು ಮಾರಿಯಮ್ಮ ದೇವಸ್ಥಾನದ ಜಾತ್ರೋತ್ಸವದಲ್ಲಿ ಸುಳ್ಯಪದವು ಮಹಾಲಕ್ಷ್ಮಿ ವನಿತಾ ಭಜನ ಮಂಡಳಿಯ ಕುಣಿತ ಭಜನೆ ಕಾರ್ಯಕ್ರಮದಲ್ಲಿ ರತ್ನಾವತಿ ಬಾಳಪ್ಪ ಪೂಜಾರಿ ಭಾಗವಹಿಸಿದ್ದರು. ಭಜನೆ ಕುಣಿತ ಮಾಡುತ್ತಿರುವ ವೇಳೆ ಅವರು ಕುಸಿದು

ಕುಣಿತ ಭಜನೆ ವೇಳೆ ಕುಸಿದು ಬಿದ್ದು ಮಹಿಳೆ ಸಾವು Read More »

ಇಸ್ರೇಲ್ ದಾಳಿಗೆ ಖಮೇನಿ ಕುಟುಂಬ ಸಹಿತ ಹಲವರು ಸಾವು

ಸಮಗ್ರ ನ್ಯೂಸ್: ಅಮೆರಿಕಾ ಮತ್ತು ಇಸ್ರೇಲ್ ಸಂಯುಕ್ತವಾಗಿ ಇರಾನ್ (Iran) ಮೇಲೆ ನಡೆಸಿದ ಭಾರಿ ಸೇನಾ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ (Khameni) ಮೃತಪಟ್ಟಿದ್ದಾರೆ ಎಂದು ಇರಾನ್ ರಾಜ್ಯ ಮಾಧ್ಯಮ ವರದಿ ಮಾಡಿದೆ. ಅಲ್ಲದೇ ಅವರ ಕುಟುಂಬದ ಹಲವು ಸದಸ್ಯರು ಸಾವನ್ನಪ್ಪಿದ್ದಾರೆ ಎಂದು ಇರಾನ್ ಸರ್ಕಾರಿ ಮಾಧ್ಯಮಗಳು ಭಾನುವಾರ ವರದಿ ಮಾಡಿವೆ. ಇರಾನ್​ ಸರ್ವೋಚ್ಚ ನಾಯಕನ ಹತ್ಯೆ ಸುದ್ದಿ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ ಉದ್ವಿಗ್ನತೆ ಉಂಟಾಗಿದ್ದು, ಯುದ್ಧದ ಭಯ ಎಲ್ಲೆಡೆ ಹರಡಿದೆ. ಈ

ಇಸ್ರೇಲ್ ದಾಳಿಗೆ ಖಮೇನಿ ಕುಟುಂಬ ಸಹಿತ ಹಲವರು ಸಾವು Read More »

ಚಂದ್ರಗ್ರಹಣ ಹಿನ್ನಲೆ| ಧರ್ಮಸ್ಥಳ ದೇವರ ದರ್ಶನದಲ್ಲಿ ಬದಲಾವಣೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ಪುಣ್ಯಕ್ಷೇತ್ರವಾದ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಾರ್ಚ್ 3ರಂದು ಸಂಭವಿಸಲಿರುವ ಚಂದ್ರಗ್ರಹಣದ ಹಿನ್ನೆಲೆಯಲ್ಲಿ ಅಂದು ದೇವರ ದರ್ಶನದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಈ ಕುರಿತು ಧರ್ಮಸ್ಥಳದ ಆಡಳಿತ ಮಂಡಳಿಯು ಪ್ರಕಟಣೆ ಹೊರಡಿಸಿದ್ದು, ಭಕ್ತಾದಿಗಳು ಸಹಕರಿಸುವಂತೆ ಕೋರಿದೆ. ದರ್ಶನದ ಸಮಯದ ವಿವರ: ದಿನಾಂಕ: 03-03-2026, ಮಂಗಳವಾರ. ಬೆಳಗಿನ ಅವಧಿ: ಅಂದು ಬೆಳಿಗ್ಗೆ 6.30 ರಿಂದ ಮಧ್ಯಾಹ್ನ 1.30 ರವರೆಗೆ ಮಾತ್ರ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶವಿರುತ್ತದೆ. ಮಧ್ಯಾಹ್ನದ ನಂತರ: ಗ್ರಹಣದ ಕಾರಣದಿಂದ

ಚಂದ್ರಗ್ರಹಣ ಹಿನ್ನಲೆ| ಧರ್ಮಸ್ಥಳ ದೇವರ ದರ್ಶನದಲ್ಲಿ ಬದಲಾವಣೆ Read More »

ಭಗವದ್ಗೀತೆ ಹಿಡಿದು ಪ್ರಮಾಣವಚನ ಸ್ವೀಕರಿಸಿದ ಕೀನ್ಯಾದ ಶಾಸಕ

ಸಮಗ್ರ ನ್ಯೂಸ್: ಕೀನ್ಯಾದ ಯುವ ನಾಯಕರೊಬ್ಬರು ಭಗವದ್ಗೀತೆ ಹಿಡಿದು ಪ್ರಮಾಣವಚನ ಸ್ವೀಕರಿಸಿರುವ ಫೋಟೊ ಎಲ್ಲೆಡೆ ವೈರಲ್ ಆಗಿದೆ. ಈ ಯುವ ನಾಯಕನ ಹೆಸರು ಕ್ಯಾಲೆಬ್. ಮೊಂಬಾಸಾದ ಕೌಂಟಿಯಲ್ಲಿರುವ ವಿಧಾನಸಭೆಯಲ್ಲಿ ಈ ಐತಿಹಾಸಿಕ ಘಟನೆ ನಡೆದಿದೆ. ಮೊಂಬಾಸಾ ಕೌಂಟಿಯ ಚಂಗಮ್ವೆ ಕ್ಷೇತ್ರವನ್ನು ಪ್ರತಿನಿಧಿಸುವ ಯುವ ಶಾಸಕ ಕ್ಯಾಲೆಬ್ ಪ್ರಮಾಣವಚನ ಸ್ವೀಕರಿಸಲು ಭಗವದ್ಗೀತೆಯೊಂದಿಗೆ ಬಂದಿದ್ದರು.ಈ ಕುರಿತು ಇಸ್ಕಾನ್​ನ ಓಂಕಾರ ಮುಕುಂದ ದಾಸ್ ಮಾತನಾಡಿ, ಈ ನಡೆ ನಾಟಕೀಯವಲ್ಲ, ಪ್ರಚಾರಕ್ಕೂ ಅಲ್ಲ ಆ ಭಾವ ಅವರ ಹೃದಯಲ್ಲಿ ಹುಟ್ಟಿಕೊಂಡಿರುವುದು, ಅದೇ ಸತ್ಯ,

ಭಗವದ್ಗೀತೆ ಹಿಡಿದು ಪ್ರಮಾಣವಚನ ಸ್ವೀಕರಿಸಿದ ಕೀನ್ಯಾದ ಶಾಸಕ Read More »

ಇಂದಿನಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ| ವಿದ್ಯಾರ್ಥಿಗಳಿಗೆ ನಿಯಮಗಳು ಹೀಗಿವೆ…

ಸಮಗ್ರ ನ್ಯೂಸ್: ರಾಜ್ಯಾದ್ಯಂತ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ವಾರ್ಷಿಕ ಪರೀಕ್ಷೆಯ ತಯಾರಿ ಅಂತಿಮ ಘಟ್ಟ ತಲುಪಿದೆ. ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ಪರೀಕ್ಷೆಗಳು ನಡೆಯಲಿದ್ದು, ಶಿಕ್ಷಣ ಇಲಾಖೆಯು ಪರೀಕ್ಷಾ ಅಕ್ರಮ ತಡೆಯಲು ಮತ್ತು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಂಡಿದೆ. ಪರೀಕ್ಷೆಗಾಗಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಈ ಬಾರಿ ಒಟ್ಟು 7,10,363 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಇದರಲ್ಲಿ 6,46,801 ಹೊಸಬರು, 50,540 ಪುನರಾವರ್ತಿತ ಮತ್ತು 13,022 ಖಾಸಗಿ ಅಭ್ಯರ್ಥಿಗಳಿದ್ದಾರೆ.ವಿಜ್ಞಾನ ವಿಭಾಗದಲ್ಲಿ

ಇಂದಿನಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ| ವಿದ್ಯಾರ್ಥಿಗಳಿಗೆ ನಿಯಮಗಳು ಹೀಗಿವೆ… Read More »