ಆಸಿಯಾ-ಇಬ್ರಾಹಿಂ ಖಲೀಲ್ ಸಂಸಾರ ಗಲಾಟೆಗೆ ಇತಿಶ್ರೀ ಸಮಯ| ಸುದ್ದಿಗೋಷ್ಟಿಯಲ್ಲಿ ಪತಿಯ ಕುರಿತು ಆಸಿಯಾ ಹೇಳಿದ್ದೇನು?
ಮಂಗಳೂರು: ಅ 22 : ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಸುಳ್ಯದ ಇಬ್ರಾಹಿಂ ಕಟ್ಟೆಕಾರ್ ಹಾಗೂ ಆಸಿಯಾ ಸಂಸಾರ ಗಲಾಟೆ ಕೊನೆಗೂ ಅಂತ್ಯ ಕಾಣುವತ್ತ ಹೊರಟಿದೆ. ಪತಿಯ ಜೊತೆ ಸಂಸಾರ ಮಾಡಲು ಕಳೆದ ಎರಡು ವರ್ಷಗಳಿಂದ ಹೋರಾಟ ನಡೆಸುತ್ತಿದ್ದ ಆಸಿಯಾ ಇದ್ದಕ್ಕಿದಂತೆ ತನ್ನ ಹೋರಾಟದಿಂದ ಹಿಂದೆ ಸರಿಯುವ ನಿರ್ಧಾರ ಮಾಡಿದ್ದಾರೆ. ಮಂಗಳೂರಿನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಸಿಯಾ, ತನ್ನನ್ನು ವಿವಾಹವಾಗಿದ್ದ ಸುಳ್ಯದ ಇಬ್ರಾಹಿಂ ಕಟ್ಟೆಕಾರ್ ಅವರ ಮನ ಒಲಿಸಲು ಸಾಕಷ್ಟು ಪ್ರಯತ್ನ ಪಟ್ಟೆ. ಎರಡು ವರ್ಷ ಇದಕ್ಕಾಗಿ










