Editor

ಅ.21ರಿಂದ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿ ಊಟ

ಬೆಂಗಳೂರು: ರಾಜ್ಯದಲ್ಲಿ 6 ರಿಂದ 12ನೇ ತರಗತಿಗಳನ್ನು ಆರಂಭಿಸಲಾಗಿದ್ದು, ಇದೀಗ ಸ್ಥಗಿತಗೊಂಡಿದ್ದ ಬಿಸಿಯೂಟ ಕಾರ್ಯಕ್ರಮವನ್ನು ಅ. 21ರಿಂದ ಪುನರಾರಂಭಿಸಲಾಗುತ್ತದೆ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತಂತೆ ಮೈಸೂರಿನ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಅಧಿಕೃತ ಜ್ಞಾಪನೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, 2021ರ ಅಕ್ಟೋಬರ್ 21ರಿಂದ ಮಧ್ಯಾಹ್ನ ಉಪಹಾರ ಯೋಜನೆಯನ್ನು ಪುನರಾರಂಭಿಸಲು ರಾಜ್ಯ ಕಚೇರಿಯಿಂದ ಸೂಚನೆ ನೀಡಿರುತ್ತಾರೆ. ಈ ಸಂಬಂಧ ಶಾಲೆಗಳಲ್ಲಿ ಮಧ್ಯಾಹ್ನ ಬಿಸಿಯೂಟ ಕಾರ್ಯಕ್ರಮವನ್ನು ಆರಂಭಿಸಲು ಮುಂಜಾಗ್ರತಾ ಕ್ರಮಗಳನ್ನು ತುರ್ತಾಗಿ ಕೈಗೊಳ್ಳುವಂತೆ ಸರ್ಕಾರಿ, ಅನುದಾನಿತ

ಅ.21ರಿಂದ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿ ಊಟ Read More »

ಮಂಗಳೂರು: ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಆಮ್ಲಜನಕ ಮಟ್ಟ ತಪಾಸಣೆ ಸ್ಥಗಿತ

ಮಂಗಳೂರು: ಅಂತರಾಷ್ಟ್ರೀಯ ಆಗಮನಕ್ಕಾಗಿ ರಾಜ್ಯದ ವಿಮಾನ ನಿಲ್ದಾಣಗಳಲ್ಲಿ ಕೆಮ್ಮು ಜ್ವರ ಶೀತ ಉಸಿರಾಟ ತೊಂದರೆ ಹೊರತುಪಡಿಸಿ ಆಮ್ಲಜನಕದ ಮಟ್ಟ ತಪಾಸಣೆಯನ್ನು ಸ್ಥಗಿತಗೊಳಿಸಲಾಗಿದೆ. ಕೇಂದ್ರ ಸರ್ಕಾರದ ಸೂಚಿಸಿರುವ ಆಯ್ದು ದೇಶಗಳಿಂದ ವಿಮಾನ ನಿಲ್ದಾಣಕ್ಕೆ ಬರುವ ಪ್ರಯಾಣಿಕರನ್ನು ಹೊರತುಪಡಿಸಿ ಉಳಿದ ಪ್ರಯಾಣಿಕರ ಸಿಪಿಸಿಆರ್ ಪರೀಕ್ಷಾ ವರದಿ ಪರಿಸಿ ಪರಿಶೀಲನೆ ಸ್ಥಗಿತಗೊಳಿಸಲಾಗಿದೆ. ಇದರ ಬದಲಾಗಿ ಪ್ರಯಾಣಿಕರು ಏರ್ ಸುವಿಧ ಪೋರ್ಟಲ್ ನಲ್ಲಿ ಆರ್ ಟಿಸಿಪಿಸಿಆರ್ ಪರೀಕ್ಷಾ ವರದಿಯನ್ನು ಕಡ್ಡಾಯವಾಗಿ ಅಪ್ಲೋಡ್ ಮಾಡಬೇಕಾಗಿದೆ. ಈ ಪರೀಕ್ಷಾ ವರದಿಯನ್ನು ಸಂಬಂಧಿತ ಏರ್ ಲೈನ್’ನ ಪ್ರಯಾಣಿಕರು

ಮಂಗಳೂರು: ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಆಮ್ಲಜನಕ ಮಟ್ಟ ತಪಾಸಣೆ ಸ್ಥಗಿತ Read More »

ಹಸುಗೂಸು ಅದಲು ಬದಲು ಪ್ರಕರಣ|ಡಿಎನ್ಎ ಪರೀಕ್ಷೆಗೆ ನ್ಯಾಯಾಲಯ ಅನುಮತಿ

ಮಂಗಳೂರು: ಮಂಗಳೂರಿನ ಲೇಡಿಗೋಶನ್ ಆಸ್ಪತ್ರೆಯಲ್ಲಿ ಹಸುಗೂಸನ್ನು ಅದಲು ಬದಲಾಗಿರುವ ಆರೋಪಕ್ಕೆ ಸಂಬಂಧಿಸಿದಂತೆ ಇದೀಗ ನ್ಯಾಯಾಲಯ ಮಗು, ತಂದೆ ಹಾಗೂ ತಾಯಿಯ ಡಿಎನ್‌ಎ ಪರೀಕ್ಷೆಗೆ ಅನುಮತಿ ನೀಡಿದೆ. ತಮ್ಮ ಮಗು ಲೇಡಿಗೋಷನ್ ಆಸ್ಪತ್ರೆಯಲ್ಲಿ ಅದಲು ಬದಲಾಗಿದೆ ಎಂದು ಆರೋಪಿಸಿ ಕುಂದಾಪುರ ನಿವಾಸಿ ಮುಸ್ತಫಾ ಎಂಬುವರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದೀಗ ನ್ಯಾಯಾಲಯ ನೀಡಿರುವ ಆದೇಶದನ್ವಯ ಅ.19ರಂದು ಮಗು ಹಾಗೂ ಪೋಷಕರ ಡಿಎಎನ್ ಪರೀಕ್ಷೆ ನಡೆಯಲಿದೆ. ಬಳಿಕ ಇದರ ಸ್ಯಾಂಪಲ್‌ ಅನ್ನು ಹೈದರಾಬಾದ್ ಅಥವಾ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಿ

ಹಸುಗೂಸು ಅದಲು ಬದಲು ಪ್ರಕರಣ|ಡಿಎನ್ಎ ಪರೀಕ್ಷೆಗೆ ನ್ಯಾಯಾಲಯ ಅನುಮತಿ Read More »

ಇಂಟರ್ನ್ ಷಿಪ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ| ಖ್ಯಾತ ವಕೀಲರ ವಿರುದ್ದ ಎಫ್ ಐ ಆರ್

ಮಂಗಳೂರು: ಇಂಟರ್ನ್‌ಶಿಪ್‌ ವಿದ್ಯಾರ್ಥಿನಿ ಮೇಲೆ ದೌರ್ಜನ್ಯ ಎಸಗಿದ ಆರೋಪದಲ್ಲಿ ಮಂಗಳೂರಿನ ಖ್ಯಾತ ವಕೀಲ ಕೆ .ಎಸ್.ಎನ್.ರಾಜೇಶ್ ಭಟ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸಂತ್ರಸ್ತ ವಿದ್ಯಾರ್ಥಿನಿಯು ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂದು ಆರೋಪಿಸಿ ವಕೀಲರ ವಿರುದ್ಧ ನಿನ್ನೆ ರಾತ್ರಿ ನೀಡಿದ ದೂರಿನ ಮೇರೆಗೆ ಮಂಗಳೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.ಪ್ರಕರಣ ಬಯಲಾಗುತ್ತಿದ್ದಂತೆ ವಕೀಲ ರಾಜೇಶ್ ಭಟ್ ನಾಪತ್ತೆಯಾಗಿದ್ದಾರೆ. ಮಂಗಳೂರು ಎಸಿಬಿ, ಲೋಕಾಯುಕ್ತಕ್ಕೆ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿರುವ ರಾಜೇಶ್ ಭಟ್, ನಗರದ ಪ್ರಸಿದ್ಧ ಬ್ಯಾಂಕ್‌ಗಳು ಸೇರಿ ಹಲವು ಕಂಪನಿಗಳಿಗೆ ಲೀಗಲ್ ಅಡ್ವೈಸರ್

ಇಂಟರ್ನ್ ಷಿಪ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ| ಖ್ಯಾತ ವಕೀಲರ ವಿರುದ್ದ ಎಫ್ ಐ ಆರ್ Read More »

ಮಾಜಿ ಸಿಎಂ ಸಿದ್ದರಾಮಯ್ಯಗೆ ಕೊಲೆ ಬೆದರಿಕೆ| ತ್ರಿಶೂಲದಲ್ಲಿ ಮೊದಲ ಬೇಟೆ ನೀನೆ ಎಂದವನಾರು?

ಬೆಂಗಳೂರು: ಮಾಜಿ ಸಿಎಂ ಹಾಗೂ ವಿಪಕ್ಷನಾಯಕ ಸಿದ್ದರಾಮಯ್ಯ ಅವರಿಗೆ ಟ್ವಿಟರ್‌ನಲ್ಲಿ ಕೊಲೆ ಬೆದರಿಕೆ ಹಾಕಲಾಗಿದೆ. ಟ್ವಿಟರ್‌ನಲ್ಲಿ #prakash ಎನ್ನುವ ಹೆಸರಿನಲ್ಲಿರುವ ಟ್ವಿಟ್‌ ಬಳಕೆ ದಾರ ಸಿದ್ದರಾಮಯ್ಯ ಅವರ ಟ್ವಿಟ್‌ ಅನ್ನು ರೀಟ್ವಿಟ್‌ ಮಾಡಿ ನಮ್ಮ ಸಿಎಂ ಅವರಿಗೆ ಯಾರ ಕೈಗೆ ಏನು ಕೊಡಬೇಕೆಂದು ಚೆನ್ನಾಗಿ ಗೊತ್ತು! ತ್ರಿಶೂಲ ಕೊಟ್ಟರೆ ಮೊದಲ ಬೇಟೆ ನೀನೇ ಅಂತ ಕೊಲೆ ಬೆದರಿಕೆ ಹಾಕಿದ್ದಾನೆ. ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ವೈರಲ್ ಆಗಿದೆ.ಖುದ್ದು ಸಾರ್ವಜನಿಕವಾಗಿ ಆವಾಜ್ ಹಾಕಿದವನ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ.

ಮಾಜಿ ಸಿಎಂ ಸಿದ್ದರಾಮಯ್ಯಗೆ ಕೊಲೆ ಬೆದರಿಕೆ| ತ್ರಿಶೂಲದಲ್ಲಿ ಮೊದಲ ಬೇಟೆ ನೀನೆ ಎಂದವನಾರು? Read More »

ಕಾಸರಗೋಡು: ನಾಪತ್ತೆಯಾಗಿದ್ದ ತಾಯಿ – ಮಗುವಿನ ಮೃತದೇಹ ಬಾವಿಯಲ್ಲಿ ಪತ್ತೆ

ಕಾಸರಗೋಡು: ನಾಪತ್ತೆಯಾಗಿದ್ದ ಮಗು ಮತ್ತು ತಾಯಿಯ ಮೃತದೇಹ ಬಾವಿಯಲ್ಲಿ ಪತ್ತೆಯಾದ ಘಟನೆ ನೀಲೇಶ್ವರ ದಲ್ಲಿ ನಡೆದಿದೆ. ನೀಲೇಶ್ವರ ಕಡಿಂಙಮೂಲೆಯ ರಮ್ಯಾ (34) ಹಾಗೂ ಎರಡೂವರೆ ವರ್ಷದ ಹೆಣ್ಣು ಮಗು ಮೃತಪಟ್ಟವರು. ಇಬ್ಬರೂ ಭಾನುವಾರ ರಾತ್ರಿಯಿಂದ ನಾಪತ್ತೆಯಾಗಿದ್ದರು. ಇದರಿಂದ ಮನೆಯವರು ಹಾಗೂ ಸ್ಥಳೀಯರು ಶೋಧ ಕಾರ್ಯ ನಡೆಸಿದ್ದರು. ಈ ನಡುವೆ ಮನೆ ಸಮೀಪದ ಬಾವಿಯಲ್ಲಿ ಇಂದು ಬೆಳಿಗ್ಗೆ ಇಬ್ಬರ ಮೃತ ದೇಹ ಪತ್ತೆಯಾಗಿದೆ. ಕಾಙಂಗಾಡ್ ನಿಂದ ಆಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿ ಇಬ್ಬರ ಮೃತ ದೇಹವನ್ನು ಮೇಲಕ್ಕೆತ್ತಿದ್ದಾರೆ

ಕಾಸರಗೋಡು: ನಾಪತ್ತೆಯಾಗಿದ್ದ ತಾಯಿ – ಮಗುವಿನ ಮೃತದೇಹ ಬಾವಿಯಲ್ಲಿ ಪತ್ತೆ Read More »

‘ಪಾಪಪಾಂಡು’ ಖ್ಯಾತಿಯ ಹಿರಿಯ ನಟ ಶಂಕರ್ ರಾವ್ ಇನ್ನಿಲ್ಲ

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ‘ಪಾಪ ಪಾಂಡು’ ಧಾರಾವಾಹಿಯ ಕಲಾವಿದ ಶಂಕರ್​ ರಾವ್​ ನಿಧನರಾಗಿದ್ದಾರೆ. ಸೋಮವಾರ ಬೆಳಗಿನ ಜಾವ 6.30ರ ಸುಮಾರಿಗೆ ಅವರು ಕೊನೆಯುಸಿರು ಎಳೆದರು ಎಂದು ತಿಳಿದುಬಂದಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರಿಗೆ 84 ವರ್ಷ ವಯಸ್ಸಾಗಿತ್ತು. ಶಂಕರ್​ ರಾವ್​ ನಿಧನಕ್ಕೆ ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಮತ್ತು ಅಭಿಮಾನಿಗಳು ಕಂಬನಿ ಮಿಡಿಯುತ್ತಿದ್ದಾರೆ. ತುಮಕೂರು ಮೂಲದ ಶಂಕರ್ ರಾವ್ ಅವರು ವೈವಿದ್ಯಮಯ ಪಾತ್ರಗಳನ್ನು ನಿರ್ವಹಿಸಿದ ಅಪಾರ ಅನುಭವ ಇದ್ದ ಇವರು ಹಾಸ್ಯ ಪಾತ್ರಗಳಲ್ಲಿ ಮಿಂಚಿ ಕನ್ನಡಿಗರನ್ನು

‘ಪಾಪಪಾಂಡು’ ಖ್ಯಾತಿಯ ಹಿರಿಯ ನಟ ಶಂಕರ್ ರಾವ್ ಇನ್ನಿಲ್ಲ Read More »

ಪುತ್ತೂರು: ಹೊಸಬಟ್ಟೆ ಧರಿಸಿಕೊಂಡು ಆತ್ಮಹತ್ಯೆಗೆ ಶರಣಾದ ವೃದ್ಧ ದಂಪತಿ| ಕಾರಣ ನಿಗೂಢ

ಮಂಗಳೂರು: ಕೃಷಿಕ ದಂಪತಿಗಳು ಹೊಸ ಬಟ್ಟೆ ಧರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದ ಪಾದೆಕರ್ಯದಲ್ಲಿ ಘಟನೆ ನಡೆದಿದೆ. ಪಾದೆಕರ್ಯದ ನಿವಾಸಿಗಳಾದ ಕೃಷಿಕ ಸುಬ್ರಹ್ಮಣ್ಯ ಭಟ್ (65) ಮತ್ತು ಶಾರಾದ (50) ಆತ್ಮಹತ್ಯೆ ಮಾಡಿಕೊಂಡ ದಂಪತಿಗಳು. ಇವರಿಬ್ಬರು ರಾತ್ರಿ ತಮ್ಮ ಮನೆಯ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬೆಳಿಗ್ಗೆ ಮಕ್ಕಳು ಬಾಗಿಲು ತೆಗೆದು ನೋಡಿದಾಗ ಇಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಇವರು ಹೊಸ ಬಟ್ಟೆ ಧರಿಸಿಕೊಂಡು ಆತ್ಮಹತ್ಯೆ

ಪುತ್ತೂರು: ಹೊಸಬಟ್ಟೆ ಧರಿಸಿಕೊಂಡು ಆತ್ಮಹತ್ಯೆಗೆ ಶರಣಾದ ವೃದ್ಧ ದಂಪತಿ| ಕಾರಣ ನಿಗೂಢ Read More »

ಸುಳ್ಯ : ಅಡ್ಕಾರ್ ನಲ್ಲಿ ಕಾರು ಅಪಘಾತ: ಮೂವರು ಗಂಭೀರ

ಸುಳ್ಯ : ಅಡ್ಕಾರ್ ಮಾವಿನ ಕಟ್ಟೆಯಲ್ಲಿ ಕಾರು ಅಪಘಾತದಲ್ಲಿ ಮೂವರು ಗಂಭೀರ ಗಾಯಗೊಂಡ ಘಟನೆ ಇಂದು ಸಂಭವಿಸಿದೆ. ಮುಂಜಾನೆಯಿಂದ ಸುರಿಯುತ್ತಿರುವ ಮಳೆಯಿಂದ ಹಾಗೂ ವೇಗವಾಗಿ ಬಂದ ಹಿನ್ನೆಲೆ ಚಾಲಕ ನಿಯಂತ್ರಣ ಕಳೆದು ಕೊಂಡಿದ್ದಾನೆ, ಬಳಿಕ ಕಾರು ಪಲ್ಟಿಯಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ.ಇದೇ ವೇಳೆ ಕಾರಿನಲ್ಲಿ ಇದ್ದ ಮೂವರು ಗಂಭೀರ ಗಾಯಗೊಂಡಿದ್ದು ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಗೊಂಡವರನ್ನು ಮೈಸೂರಿನ ಶ್ರೇಯಸ್ಸ್, ಭುವನ್ ಹಾಗೂ ಸರ್ವೇಶ್ ಎಂದು ಗುರುತಿಸಲಾಗಿದೆ, ಅವರು ಸುಳ್ಯದ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಸುಳ್ಯ : ಅಡ್ಕಾರ್ ನಲ್ಲಿ ಕಾರು ಅಪಘಾತ: ಮೂವರು ಗಂಭೀರ Read More »

ತೈಲಬೆಲೆ ಇಳಿಕೆಯ ಸೂಚನೆ ನೀಡಿದ ಸಿಎಂ|

ಹುಬ್ಬಳ್ಳಿ: ತೈಲ ಬೆಲೆ ಏರಿಕೆಯಿಂದ ಜನರು ತತ್ತರಿಸಿದ್ದಾರೆ. ಈ ನಡುವೆ ರಾಜ್ಯ ಸರ್ಕಾರ ಬೆಲೆ ಕಡಿಮೆ ಮಾಡುವ ಅವಕಾಶಗಳಿದ್ದರೂ, ಇನ್ನೂ ಬೆಲೆ ಇಳಿಕೆ ಮಾಡಿಲ್ಲ. ತಮಿಳುನಾಡಿನಲ್ಲಿ ಈಗಾಗಲೇ ರಾಜ್ಯ ಸರ್ಕಾರವೇ ಪೆಟ್ರೋಲ್ ಬೆಲೆ ಏರಿಕೆಯ ದರವನ್ನು ಇಳಿಸಿದೆ. ಈ ನಡುವೆ ಉಪ ಚುನಾವಣೆಯ ಬಳಿಕ ತೈಲ ಬೆಲೆ ಇಳಿಸುವ ಬಗ್ಗೆ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ತೈಲ ಬೆಲೆಯು ರಾಜ್ಯದ ಆರ್ಥಿಕತೆಯ ಮೇಲೆ ಅವಲಂಬಿತವಾಗಿದೆ. ದರ ಇಳಿಸುವ ಬಗ್ಗೆ ಉಪ ಚುನಾವಣೆಯ ಬಳಿಕ ಪುನರವಲೋಕನ ಮಾಡುತ್ತೇನೆ. ಆರ್ಥಿಕ

ತೈಲಬೆಲೆ ಇಳಿಕೆಯ ಸೂಚನೆ ನೀಡಿದ ಸಿಎಂ| Read More »