Editor

ಎಂಡೋಪೀಡಿತ ಯುವಕನ ಮೇಲೆ ಅತ್ಯಾಚಾರ| ಆರೋಪಿ ಅಂದರ್

ಪುತ್ತೂರು: ಅನ್ಯಕೋಮಿನ ವ್ಯಕ್ತಿಯಿಂದ ಎಂಡೋಸಲ್ಪಾನ್ ಪೀಡಿತ 20 ವರ್ಷದ ಯುವಕನೊಬ್ಬನ ಮೇಲೆ ಅತ್ಯಾಚಾರ ನಡೆದ ಘಟನೆ ಪುತ್ತೂರಿನ ಮುರದಲ್ಲಿ ಬೆಳಕಿಗೆ ಬಂದಿದೆ. ಬಂಧಿತ ಆರೋಪಿ ಮುರ ನಿವಾಸಿ ಮಹಮ್ಮದ್ ಹನೀಫ್ (50) ಎನ್ನಲಾಗಿದೆ. ಈ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಯುವಕನ ತಂದೆ ನೀಡಿದ ದೂರಿನ ಆಧಾರದ ಮೇಲೆ ಆರೋಪಿಯನ್ನು ಪುತ್ತೂರು ನಗರ ಠಾಣೆಯಲ್ಲಿ ಬಂಧಿಸಿ, ತನಿಖೆ ನಡೆಸಲಾಗುತ್ತಿದೆ. ಶುಕ್ರವಾರ ಸಂಜೆ ಯುವಕ ಸಂಜೆ 6.00 ಗಂಟೆಗೆ ವಾಕಿಂಗ್ ಗೆಂದು ಮನೆಯಿಂದ ಹೋಗಿದ್ದು ಮನೆಗೆ ಮರಳಿದ ಸಂದರ್ಭದಲ್ಲಿ ಆತನ

ಎಂಡೋಪೀಡಿತ ಯುವಕನ ಮೇಲೆ ಅತ್ಯಾಚಾರ| ಆರೋಪಿ ಅಂದರ್ Read More »

ಸುಬ್ರಹ್ಮಣ್ಯ: ಬೈಕಿನ ಮೇಲೆ ಕಡವೆ ಹಾರಿ ಸವಾರ ಸಾವು

ಸುಬ್ರಹ್ಮಣ್ಯ: ಚಲಿಸುತ್ತಿದ್ದ ಬೈಕಿನ ಮೇಲೆ ಕಡವೆ ಹಾರಿದ ಪರಿಣಾಮವಾಗಿ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ ಕಛೇರಿ ಸಿಬ್ಬಂದಿ ರಾಮಚಂದ್ರ ಅರ್ಬಿತ್ತಾಯ ಎಂಬವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಂದು ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ಇಂದು ಮುಂಜಾನೆ ಸುಮಾರು 5.45ರ ಹೊತ್ತಿಗೆ ರಾಮಚಂದ್ರ ಅರ್ಬಿತ್ತಾಯರು ತಮ್ಮ ಸಹೋದರ ರವಿ ಅರ್ಬಿತ್ತಾಯರೊಂದಿಗೆ ಕುಲ್ಕುಂದಕ್ಕೆ ಶಟಲ್ ಬ್ಯಾಡ್ಮಿಂಟನ್ ಆಟ ಆಡಲು ತೆರಳುತ್ತಿರುವ ಸಂದರ್ಭ ಕುಲ್ಕುಂದದ ಬ್ರಾಮರಿ‌ ನೆಸ್ಟ್ ವಸತಿಗೃಹದ ಬಳಿ ಅವರು ಚಲಿಸುತ್ತಿದ್ದ ದ್ವಿಚಕ್ರ ವಾಹನದ ಮೇಲೆ ಪಕ್ಕದ ಗುಡ್ಡದಿಂದ ಕಡವೆ

ಸುಬ್ರಹ್ಮಣ್ಯ: ಬೈಕಿನ ಮೇಲೆ ಕಡವೆ ಹಾರಿ ಸವಾರ ಸಾವು Read More »

ದಸರಾ ಪಾರ್ಟಿಯಲ್ಲಿ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯ

ಮಂಗಳೂರು: ಇಲ್ಲಿನ ಲಾಡ್ಜ್ ಒಂದರಲ್ಲಿ ಯುವಕನ ಕೊಲೆಯಾಗಿರುವ ಘಟನೆ ತಡರಾತ್ರಿ ನಡೆದಿದೆ. ಮೃತ ಯುವಕನನ್ನು ಧನುಷ್ (20 ವರ್ಷ) ಎಂದು ಗುರುತಿಸಲಾಗಿದ್ದು, ಗೆಳೆಯರೊಂದಿಗೆ ದಸರಾ ಹಬ್ಬದ ಪ್ರಯುಕ್ತ ಪಾರ್ಟಿ ಮಾಡುವ ಉದ್ದೇಶದಿಂದ ತೆರಳಿದಾಗ ಘಟನೆ ನಡೆದಿದೆ. ಘಟನೆಯ ವಿವರ: ಅ.15ರಂದು ದಸರಾ ಹಬ್ಬದ ಪ್ರಯುಕ್ತ ಪಾರ್ಟಿ ಮಾಡುವ ಉದ್ದೇಶದಿಂದ ಪಂಪವೆಲ್ ಬಳಿಯ ಲಾಡ್ಜ್ ಒಂದಕ್ಕೆ ಪ್ರಮೀತ್, ಜೇಸನ್, ಕಾರ್ತೀಕ್, ಧನುಷ್, ದುರ್ಗೇಶ್ & ಪ್ರಜ್ವಲ್ ಎಂಬವರು ತೆರಳಿದ್ದಾರೆ. ಸಮಯ ಸುಮಾರು ರಾತ್ರಿ 2 ಗಂಟೆಗೆ ಜೇಸನ್ ಸುರತ್ಕಲ್

ದಸರಾ ಪಾರ್ಟಿಯಲ್ಲಿ ಉಂಟಾದ ಜಗಳ ಕೊಲೆಯಲ್ಲಿ ಅಂತ್ಯ Read More »

ದಸರಾ ಮೆರವಣಿಗೆಯ ಮೇಲೆ ಹರಿದ ಕಾರು| ನಾಲ್ವರ ಸಾವು, ಹಲವರು ಗಂಭೀರ

ಹೊಸದಿಲ್ಲಿ: ಛತ್ತೀಸ್‌ಗಡದ ಜಶ್‌ಪುರ ಜಿಲ್ಲೆಯಲ್ಲಿ ದುರ್ಗಾದೇವಿಯ ವಿಗ್ರಹವನ್ನು ವಿಸರ್ಜಿಸಲು ಭಕ್ತರು ತೆರಳುತ್ತಿದ್ದಾಗ ಕಾರೊಂದು ಜನರ ಮೇಲೆ ಹರಿದ ಪರಿಣಾಮವಾಗಿ ನಾಲ್ಕು ಮಂದಿ‌ ಸಾವನ್ನಪ್ಪಿದ್ದು, ಸುಮಾರು 20 ಮಂದಿ ಗಾಯಗೊಂಡಿದ್ದಾರೆ ಎಂದು NDTV ವರದಿ ಮಾಡಿದೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಪಾಥಲ್ ಗಾಂವ್ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಮರೂನ್ ಮಹೀಂದ್ರ ಕ್ಸೈಲೊ ಕಾರು ಮಧ್ಯಪ್ರದೇಶದ ನಂಬರ್ ಪ್ಲೇಟ್ ಹೊಂದಿದ್ದು, ಭೀಕರ ಅಪಘಾತದ ನಂತರ ವೇಗವಾಗಿ ಸುಖ್ರಪಾರ ಕಡೆಗೆ ಚಲಿಸಿದೆ ಎಂದು ತಿಳಿದುಬಂದಿದೆ. ಕೋಪಗೊಂಡ ಸ್ಥಳೀಯರು ವಾಹನವನ್ನು ಹಿಂಬಾಲಿಸಿದರು ಹಾಗೂ ವಾಹನವು

ದಸರಾ ಮೆರವಣಿಗೆಯ ಮೇಲೆ ಹರಿದ ಕಾರು| ನಾಲ್ವರ ಸಾವು, ಹಲವರು ಗಂಭೀರ Read More »

‘ಆಲಯಕ್ಕೆ ಹೋಗ್ಬೇಡಿ, ದೇವರಿಗೆ ಹೂ ಸಮರ್ಪಿಸಬೇಡಿ’ – ವಿವಾದಕ್ಕೆ ಕಾರಣವಾದ ಎರಡನೇ ತರಗತಿ ಪಠ್ಯ ಪುಸ್ತಕ| ಆಕ್ರೋಶ ವ್ಯಕ್ತಪಡಿಸಿದ ಹಿಂದೂ ಪರ ಸಂಘಟನೆಗಳು

ಪುತ್ತೂರು: ರಾಜ್ಯ ಶಿಕ್ಷಣ ಇಲಾಖೆ ಹೊರತಂದಿರುವ ಎರಡನೇ ತರಗತಿಯ ಇಂಗ್ಲಿಷ್ ಪಠ್ಯ ಪುಸ್ತಕ ಇದೀಗ ವಿವಾದಕ್ಕೆ ಕಾರಣವಾಗಿದ್ದು, ಪುಸ್ತಕದಲ್ಲಿರುವ ರವೀಂದ್ರನಾಥ ಟಾಗೋರ್ ಬರೆದಿರುವ ಕವಿತೆಯಲ್ಲಿನ ಅಂಶಗಳು ಹಿಂದೂ ಪರ ಸಂಘಟನೆಗಳ ಆಕ್ರೋಶಕ್ಕೆ ಕಾರಣವಾಗಿದೆ. “ಗೋ ನಾಟ್ ಟು ಟೆಂಪಲ್” ಎನ್ನುವ ಶೀರ್ಷಿಕೆಯಡಿ ಇರುವ ಈ ಕವಿತೆಯಲ್ಲಿ ಎಳೆಯ ಮನಸ್ಸುಗಳಲ್ಲಿ ಹಿಂದೂ ಧರ್ಮ ಹಾಗೂ ಅದರ ಆಚರಣೆಗಳ ಬಗ್ಗೆ ಅವಹೇಳನಕಾರಿಯಾಗಿ ಬಿಂಬಿಸಲಾಗಿದೆ ಎಂದು ಸಂಘಟನೆಗಳು ಆರೋಪಿಸಿವೆ. ಈ ಕವಿತೆಯಲ್ಲಿ ದೇವಸ್ಥಾನಕ್ಕೆ ಹೋಗೋದು ಬೇಡ, ದೇವರಿಗೆ ಹೂವು ಅರ್ಪಿಸೋದು ಬೇಡ,

‘ಆಲಯಕ್ಕೆ ಹೋಗ್ಬೇಡಿ, ದೇವರಿಗೆ ಹೂ ಸಮರ್ಪಿಸಬೇಡಿ’ – ವಿವಾದಕ್ಕೆ ಕಾರಣವಾದ ಎರಡನೇ ತರಗತಿ ಪಠ್ಯ ಪುಸ್ತಕ| ಆಕ್ರೋಶ ವ್ಯಕ್ತಪಡಿಸಿದ ಹಿಂದೂ ಪರ ಸಂಘಟನೆಗಳು Read More »

ಆಯುಧ ಪೂಜೆ ದಿನ ವಿಎಚ್ ಪಿ ಯಿಂದ ತ್ರಿಶೂಲ ದೀಕ್ಷೆ| ಚರ್ಚೆಗೆ ಗ್ರಾಸವಾದ ಪರಿವಾರದ ನಡೆ| ಸ್ಪಷ್ಟನೆ ನೀಡಿದ ಶರಣ್

ಮಂಗಳೂರು: ಆಯುಧ ಪೂಜೆ ದಿನವಾದ ನಿನ್ನೆ ತ್ರಿಶೂಲ ದೀಕ್ಷೆ ಹೆಸರಲ್ಲಿ ಹಿಂದೂ ಕಾರ್ಯಕರ್ತರಿಗೆ ಬಜರಂಗದಳದವರು ಶಸ್ತ್ರ ಹಂಚಿದ ಘಟನೆ ನಡೆದಿದ್ದು, ಕಾರ್ಯಕ್ರಮದ ಪೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪರಸ್ಪರ ಆರೋಪ ಪ್ರತ್ಯಾರೋಪಗಳು ನಡೆದಿದೆ. ಮಂಗಳೂರು ನಗರದ ಕದ್ರಿ ವಿಶ್ವ ಹಿಂದೂ ಪರಿಷತ್ ಕಚೇರಿಯಲ್ಲಿ ನಡೆದ ತ್ರಿಶೂಲ ದೀಕ್ಷೆ ಕಾರ್ಯಕ್ರಮದಲ್ಲಿ ಹಿಂದೂ ಕಾರ್ಯಕರ್ತರಿಗೆ ಚೂರಿ ಮಾದರಿಯ ತ್ರಿಶೂಲದಂಥ ಶಸ್ತ್ರವನ್ನು ಹಂಚಿಕೆ ಮಾಡಲಾಗಿದೆ. ಮಂಗಳೂರಿನ ಕದ್ರಿಯ ವಿಶ್ವ ಹಿಂದೂ ಪರಿಷತ್ ಕಚೇರಿಯಲ್ಲಿ ವಿಎಚ್‌ಪಿ ವಿಭಾಗದ ಕಾರ್ಯದರ್ಶಿ ಶರಣ್ ಪಂಪ್

ಆಯುಧ ಪೂಜೆ ದಿನ ವಿಎಚ್ ಪಿ ಯಿಂದ ತ್ರಿಶೂಲ ದೀಕ್ಷೆ| ಚರ್ಚೆಗೆ ಗ್ರಾಸವಾದ ಪರಿವಾರದ ನಡೆ| ಸ್ಪಷ್ಟನೆ ನೀಡಿದ ಶರಣ್ Read More »

ಭೀಕರ ಅಪಘಾತ| ಪುಂಜಾಲಕಟ್ಟೆ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಸಾವು|

ಬೆಳ್ತಂಗಡಿ: ಬೈಕ್ ಮತ್ತು ಆಕ್ಟಿವ್ ನಡುವೆ ಭೀಕರ ಅಪಘಾತ ಸಂಭವಿಸಿ ಪುಂಜಾಲಕಟ್ಟೆಯ ಕರ್ತವ್ಯನಿರತ ಪೊಲೀಸ್ ಸಿಬ್ಬಂದಿ ಮೃತಪಟ್ಟ ಘಟನೆ ಪುಂಜಾಲಕಟ್ಟೆ ಸಮೀಪದ ನೇರಳಕಟ್ಟೆ ಎಂಬಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಪುಂಜಾಲಕಟ್ಟೆಯ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಅಬೂಬಕ್ಕರ್(48) ಎಂದು ಗುರುತಿಸಲಾಗಿದೆ. ಅಬೂಬಕ್ಕರ್ ಅವರು ಕರ್ತವ್ಯ ಮುಗಿಸಿ ತನ್ನ ಬೈಕಿನಲ್ಲಿ ಮನೆಗೆ ತಡರಳುತ್ತಿದ್ದಾಗ ಎದುರಿನಿಂದ ಬಂದ ಜುಪಿಟರ್ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕೊಂಡೊಯ್ಯುತ್ತಿದ್ದಾಗ ದಾರಿ ಮಧ್ಯೆ ಮೃತಪಟ್ಟಿದ್ದಾರೆ.

ಭೀಕರ ಅಪಘಾತ| ಪುಂಜಾಲಕಟ್ಟೆ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಸಾವು| Read More »

ತಾಯಿ-ಮಗನಿಗೆ ಗುಂಡಿಕ್ಕಿ ‌ವ್ಯಕ್ತಿ ಆತ್ಮಹತ್ಯೆ

ಕೊಡಗು: ತಾಯಿ, ಮಗನಿಗೆ ಗುಂಡಿಕ್ಕಿ ವ್ಯಕ್ತಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕಿರಗೂರು ಗ್ರಾಮದಲ್ಲಿ ನಡೆದಿದೆ. ಮಗ ಮಧು(42) ಸಾವು, ತಾಯಿ ಯಶೋದಾ ಸ್ಥಿತಿ ಗಂಭೀರವಾಗಿದ್ದು ಗುಂಡಿಕ್ಕಿ ಹತ್ಯೆ ಮಾಡಿದ ಆರೋಪಿ ಆಲೆಮಾಡ ಸಾಗರ್(52) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ಆರೋಪಿ ಆಲೆಮಾಡ ಸಾಗರ್ ತಾಯಿ, ಮಗನಿಗೆ ಶೋಟ್ ಮಾಡಿದ್ದಾನೆ. ಈ ಪೈಕಿ ಮಗ ಮಧು ಸ್ಥಳದಲ್ಲೇ ಮೃತಪಟ್ಟಿದ್ದು ತಾಯಿ ಯಶೋದಾ ಸ್ಥಿತಿ ಗಂಭೀರವಾಗಿದೆ. ಇನ್ನು ಶೋಟ್ ಮಾಡಿದ ಬಳಿಕ ಆರೋಪಿ

ತಾಯಿ-ಮಗನಿಗೆ ಗುಂಡಿಕ್ಕಿ ‌ವ್ಯಕ್ತಿ ಆತ್ಮಹತ್ಯೆ Read More »

ಆಸ್ಪತ್ರೆಯಲ್ಲಿ ‌ಮಗುವನ್ನು ಬದಲಾಯಿಸಿದರಾ ನರ್ಸ್ ಗಳು| ಲೇಡಿಗೋಷನ್ ಆಸ್ಪತ್ರೆ ಸಿಬ್ಬಂದಿ ಮೇಲೆ ಪೋಷಕರ ಆರೋಪ

ಮಂಗಳೂರು : ನಗರದ ಸರಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಸಿಬ್ಬಂದಿಗಳು ಮಗುವನ್ನು ಅದಲು ಬದಲು ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಮಹಿಳೆಯೊಬ್ಬರು ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು ಡಿಸ್ಚಾರ್ಜ್ ವೇಳೆ ಆಸ್ಪತ್ರೆ ಸಿಬ್ಬಂದಿ ಗಂಡು ಮಗು ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಸೆಪ್ಟಂಬರ್ 28 ರಂದು ಉಡುಪಿ ಜಿಲ್ಲೆಯ ಕುಂದಾಪುರ ನಿವಾಸಿ ಅಂಬ್ರೀನ್ ಅವರಿಗೆ ಮಂಗಳೂರಿನ ಲೇಡಿಗೋಶನ್ ಸರಕಾರಿ ಹೆರಿಗೆ ಆಸ್ಪತ್ರೆಯಲ್ಲಿ ಹೆರಿಗೆ ಆಗಿತ್ತು. ಆಸ್ಪತ್ರೆಯಲ್ಲಿ ಇದ್ದಷ್ಟು ದಿನ ಮಗುವನ್ನು ತೋರಿಸಲು ಸಿಬ್ಬಂದಿಗಳು ನಿರಾಕರಿಸಿದ್ದರು ಹಾಗೂ 18 ದಿನಗಳ ಕಾಲ

ಆಸ್ಪತ್ರೆಯಲ್ಲಿ ‌ಮಗುವನ್ನು ಬದಲಾಯಿಸಿದರಾ ನರ್ಸ್ ಗಳು| ಲೇಡಿಗೋಷನ್ ಆಸ್ಪತ್ರೆ ಸಿಬ್ಬಂದಿ ಮೇಲೆ ಪೋಷಕರ ಆರೋಪ Read More »

ಅಂತರಾಷ್ಟ್ರೀಯ ಏರ್ ಪೋರ್ಟ್ ನಲ್ಲಿ ಬೆತ್ತಲಾಗಿ ಓಡಾಡಿದ ಮಹಿಳೆ| ಕ್ಯಾಮೆರಾ ‌ಕಣ್ಣಿಗೆ ನಗ್ನ ಸೌಂದರ್ಯ ಪ್ರದರ್ಶಿಸಿದ್ದು ಯಾಕೆ?

ಡಿಜಿಟಲ್ ಡೆಸ್ಕ್ : ಸಾರ್ವಜನಿಕವಾಗಿ ಯಾರೂ ಕೂಡಾ ಅಸಭ್ಯವಾಗಿ ವರ್ತಿಸುವ ಹಾಗಿಲ್ಲ. ಒಂದು ವೇಳೆ ಕಾನೂನಿಗೆ ವಿರುದ್ಧವಾಗಿ ಅಸಭ್ಯವಾಗಿ ವರ್ತಿಸಿದರೆ ಶಿಕ್ಷೆ ಆಗೋದು ಮಾತ್ರ ಗ್ಯಾರಂಟಿ. ಆದರೆ ಇಲ್ಲೊಬ್ಬಳು ಮಹಿಳೆ ಅಂತರಾಷ್ಟ್ರೀಯ ವಿಮಾನ ನಿಲ್ದಾನದಲ್ಲಿ ಏನು ಮಾಡಿದ್ದಾಳೆ ಗೊತ್ತಾ? ಸಾರ್ವಜನಿಕ ಸ್ಥಳದಲ್ಲಿ ಮಹಿಳೆಯೊಬ್ಬಳು ಮೈ ಮೇಲೆ ಬಟ್ಟೆ ಇಲ್ಲದೆ ರಾಜರೋಷವಾಗಿ ತಿರುಗಾಡಿದ್ದಾಳೆ. ಮಾತ್ರವಲ್ಲದೆ ಎಲ್ಲರೊಂದಿಗೆ ಮಾತನಾಡುತ್ತಾ ಅತ್ತಿಂದಿತ್ತ ಇತ್ತಿಂದಿತ್ತ ಓಡಾಡಿದ್ದಾಳೆ. ಅಮೆರಿಕದ ಡೆನ್ವರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಹಿಳೆಯೊಬ್ಬಳು ಬೆತ್ತಲಾಗಿ ಓಡಾಡಿರುವುದು ಕಂಡು ಬಂದಿದೆ. ಪೊಲೀಸರು ಕಣ್ಣು

ಅಂತರಾಷ್ಟ್ರೀಯ ಏರ್ ಪೋರ್ಟ್ ನಲ್ಲಿ ಬೆತ್ತಲಾಗಿ ಓಡಾಡಿದ ಮಹಿಳೆ| ಕ್ಯಾಮೆರಾ ‌ಕಣ್ಣಿಗೆ ನಗ್ನ ಸೌಂದರ್ಯ ಪ್ರದರ್ಶಿಸಿದ್ದು ಯಾಕೆ? Read More »