Editor

ಬಿಗಿಯಾದ ಜಿನ್ಸ್ ಧರಿಸ್ತಿರಾ? ಹಾಗಿದ್ರೆ ಈ ಕಥೆ ಓದ್ಲೇ ಬೇಕು. ಟೈಟ್ ಫಿಟ್ ಹಾಕಿದ ಆಕೆಗೆ ಏನಾಯ್ತು‌ ಗೊತ್ತಾ?

ನ್ಯೂಸ್ ಡೆಸ್ಕ್: ಇಂದಿನ ದಿನಗಳಲ್ಲಿ ಜೀನ್ಸ್ ಧರಿಸುವುದು ಈಗ ಸಾಮಾನ್ಯ ಸಂಗತಿ. ಪುರುಷರಿಂದ ಹಿಡಿದು ಹುಡುಗಿಯರು, ಮಹಿಳೆಯರು ಎಲ್ಲರೂ ಜೀನ್ಸ್ ಧರಿಸುತ್ತಾರೆ. ಆದ್ರೆ ಬಿಗಿಯಾದ ಜೀನ್ಸ್, ಹುಡುಗಿಯೊಬ್ಬಳು ಆಸ್ಪತ್ರೆ ಸೇರುವಂತೆ ಮಾಡಿದೆ. ಬಿಗಿಯಾದ ಹಾಫ್ ಜೀನ್ಸ್ ಧರಿಸಿದ್ದ ಹುಡುಗಿ ತನ್ನ ಸಮಸ್ಯೆಯನ್ನು ಹಂಚಿಕೊಂಡಿದ್ದಾಳೆ. ಅಂದ ಹಾಗೆ ಘಟನೆ ನಡೆದಿರುವುದು ಉತ್ತರ ಕೆರೊಲಿನಾದಲ್ಲಿ. ಹುಡುಗಿ ಸ್ಯಾಮ್, ಸಾಮಾಜಿಕ ಜಾಲತಾಣದಲ್ಲಿ ತಾನು ಎದುರಿಸಿದ ಸಮಸ್ಯೆಯನ್ನು ಹಂಚಿಕೊಂಡಿದ್ದಾಳೆ. ಟಿಕ್ ಟಾಕ್ ನಲ್ಲಿ ಒಂದು ವಿಡಿಯೋ ಹಂಚಿಕೊಂಡಿದ್ದಾಳೆ. ಇದನ್ನು 80 ಲಕ್ಷಕ್ಕೂ ಹೆಚ್ಚು

ಬಿಗಿಯಾದ ಜಿನ್ಸ್ ಧರಿಸ್ತಿರಾ? ಹಾಗಿದ್ರೆ ಈ ಕಥೆ ಓದ್ಲೇ ಬೇಕು. ಟೈಟ್ ಫಿಟ್ ಹಾಕಿದ ಆಕೆಗೆ ಏನಾಯ್ತು‌ ಗೊತ್ತಾ? Read More »

ಕರಾವಳಿಯ ದೇಗುಲಗಳಲ್ಲಿ ವಸ್ತ್ರಸಂಹಿತೆ ಜಾರಿ| ಕುಕ್ಕೆ, ಕದ್ರಿ, ಕಟೀಲು ಸಹಿತ ಹಲವು ಪುಣ್ಯಕ್ಷೇತ್ರಗಳಲ್ಲಿ ಸೂಚನಾ ಬ್ಯಾನರ್ ಅಳವಡಿಕೆ

ಮಂಗಳೂರು: ಕರಾವಳಿಯ ದೇವಸ್ಥಾನಗಳಲ್ಲಿ ವಸ್ತ್ರ ಸಂಹಿತೆ ಜಾರಿಗೆ ತರಬೇಕು ಎಂದು ಹಿಂದು ಸಂಘಟನೆಗಳ ಒತ್ತಾಯದ ಬೆನ್ನಲ್ಲೇ ಕದ್ರಿ ಮಂಜುನಾಥ ದೇವಸ್ಥಾನ, ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಹಿಂದು ಸಂಪ್ರದಾಯದಂತೆ ವಸ್ತ್ರ ಸಂಹಿತೆ ಪಾಲಿಸಬೇಕೆಂದು ಬೋರ್ಡ್ ಹಾಕಲಾಗಿತ್ತು. ಇದೀಗ ಪೊಳಲಿ ರಾಜರಾಜೇಶ್ವರಿ ದೇವಸ್ಥಾನದಲ್ಲಿಯೂ ವಸ್ತ್ರ ಸಂಹಿತೆ ಕಡ್ಡಾಯ ಎಂದು ಬ್ಯಾನರ್ ಹಾಕಲಾಗಿದೆ. ದೇವಸ್ಥಾನಗಳಲ್ಲಿ ಹಿಂದು ಸಂಪ್ರದಾಯದಂತೆ ವಸ್ತ್ರ ಸಂಹಿತೆ ಪಾಲನೆ ಮಾಡುವಂತಾಗಬೇಕು. ದೇವಸ್ಥಾನದ ಪಾವಿತ್ರ್ಯ ಉಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಡ್ಡಾಯವಾಗಿ ವಸ್ತ್ರ ಸಂಹಿತೆ ಜಾರಿ ಮಾಡಬೇಕು ಎಂದು ಹಿಂದೂ

ಕರಾವಳಿಯ ದೇಗುಲಗಳಲ್ಲಿ ವಸ್ತ್ರಸಂಹಿತೆ ಜಾರಿ| ಕುಕ್ಕೆ, ಕದ್ರಿ, ಕಟೀಲು ಸಹಿತ ಹಲವು ಪುಣ್ಯಕ್ಷೇತ್ರಗಳಲ್ಲಿ ಸೂಚನಾ ಬ್ಯಾನರ್ ಅಳವಡಿಕೆ Read More »

ದಸರಾ ನಾಡಹಬ್ಬಕ್ಕೆ ಸಾಂಸ್ಕೃತಿಕ ನಗರಿ ಸಜ್ಜು| ಕೊರೊನಾ ನಡುವೆ ಸರಳ‌ ಆಚರಣೆಗೆ ಸಿದ್ದತೆ ಪೂರ್ಣ|

ಮೈಸೂರು: ಐತಿಹಾಸಿಕ ಮೈಸೂರು ದಸರಾ ಆರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಅ.7ರಂದು ಗುರುವಾರ ಚಾಮುಂಡಿಬೆಟ್ಟದ ತಾಯಿ ಚಾಮುಂಡೇಶ್ವರಿಯ ಸನ್ನಿಧಿಯಲ್ಲಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ವಿಧ್ಯುಕ್ತ ಚಾಲನೆ ನೀಡಲಿದ್ದಾರೆ. ಆ ನಂತರ ಅರಮನೆಯಲ್ಲಿ ಖಾಸಗಿ ದರ್ಬಾರ್ ಸೇರಿದಂತೆ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ನಡುವೆ ನಾಡಹಬ್ಬ ದಸರಾ ಮಹೋತ್ಸವಕ್ಕೆ ರಾಜಮಾತೆ ಪ್ರಮೋದಾದೇವಿ ಅವರನ್ನು ಸಹಕಾರ ಹಾಗೂ ಮೈಸೂರು, ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಮಂಗಳವಾರ ಅಧಿಕೃತವಾಗಿ ಆಹ್ವಾನಿಸಿದ್ದಾರೆ. ಅರಮನೆಗೆ ತೆರಳಿದ ಅವರು,

ದಸರಾ ನಾಡಹಬ್ಬಕ್ಕೆ ಸಾಂಸ್ಕೃತಿಕ ನಗರಿ ಸಜ್ಜು| ಕೊರೊನಾ ನಡುವೆ ಸರಳ‌ ಆಚರಣೆಗೆ ಸಿದ್ದತೆ ಪೂರ್ಣ| Read More »

ಇಂದಿನಿಂದ ರಾಷ್ಟ್ರಪತಿ ರಾಜ್ಯ ಪ್ರವಾಸ|

ಬೆಂಗಳೂರು : ಇಂದಿನಿಂದ ಮೂರು ದಿನಗಳ ಕಾಲ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕರ್ನಾಟಕ ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ನಾಳೆ ಬಿಳಿಗಿರಿ ರಂಗನ ಬೆಟ್ಟಕ್ಕೆ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆ ಭಾರತೀಯ ವಾಯುಸೇನೆಯ ಅಧಿಕಾರಿಗಳು ಹಾಗೂ ಭದ್ರತಾ ಸಿಬ್ಬಂದಿ ಯಳಂದೂರು ತಾಲ್ಲೂಕಿನ ವಡಗೆರೆ ಹಾಗೂ ಯಡಬೆಟ್ಟದಲ್ಲಿ ನಿರ್ಮಿಸಲಾಗಿರುವ ಹೆಲಿಪ್ಯಾಡ್‌ಗಳನ್ನು ಪರಿಶೀಲಿಸಲಾಯಿತು. ರಾಷ್ಟ್ರಪತಿ ಕೋವಿಂದ್ ಚಾಮರಾಜನಗರ, ಮಂಗಳೂರು, ಚಿಕ್ಕಮಗಳೂರು ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ. ಚಾಮರಾಜನಗರದಲ್ಲಿ ಅಕ್ಟೋಬರ್ 7ರಂದು ವಡ್ಡಗೆರೆ ಹೆಲಿಪ್ಯಾಡ್, ಬಿಳಿಗಿರಿ ರಂಗನ ಬೆಟ್ಟ, ಚಾಮರಾಜನಗರ ವೈದ್ಯಕೀಯ ಕಾಲೇಜು ವ್ಯಾಪ್ತಿಯಲ್ಲಿ

ಇಂದಿನಿಂದ ರಾಷ್ಟ್ರಪತಿ ರಾಜ್ಯ ಪ್ರವಾಸ| Read More »

ರಾಜ್ಯದಲ್ಲಿ ಇಂದೂ ಮುಂದುವರಿಯಲಿದೆ ಮಳೆ| ಹಲವು ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ|

ಬೆಂಗಳೂರು: ಕಳೆದ ಎರಡು ದಿನಗಳಿಂದ ರಾಜ್ಯದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ. ಕರಾವಳಿ ಮತ್ತು ಮಲೆನಾಡು ಸೇರಿದಂತೆ ವಿವಿಧೆಡೆ ಭಾರೀ ಮಳೆಯಾಗುತ್ತಿದೆ. ರಾಜ್ಯದಲ್ಲಿ ನೈರುತ್ಯ ಮುಂಗಾರು ಅಂತ್ಯವಾಗಿದ್ದರೂ ಚಂಡಮಾರುತದ ಪ್ರಭಾವದಿಂದಾಗಿ ಹಲವಡೆ ನಿರಂತರವಾಗಿ ಮಳೆ ಸುರಿಯುತ್ತಿದೆ. ಇಂದಿನಿಂದ ಮುಂಗಾರು ಮಳೆಯ ಪ್ರಭಾವ ಕ್ಷೀಣಿಸಲು ಪ್ರಾರಂಭವಾಗುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಇಂದು ಕರ್ನಾಟಕದ ಕರಾವಳಿ ಭಾಗ ಹಾಗೂ ದಕ್ಷಿಣ ಒಳನಾಡಿನಲ್ಲಿ ಅಧಿಕ ಮಳೆಯಾಗುವ ಸಾಧ್ಯತೆ ಇದೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಪ್ರಭಾವ ಹೆಚ್ಚಾಗಿದ್ದು, ತಮಿಳುನಾಡಿನ ಕರಾವಳಿ ಭಾಗದಲ್ಲಿಯೂ ಇಂದು

ರಾಜ್ಯದಲ್ಲಿ ಇಂದೂ ಮುಂದುವರಿಯಲಿದೆ ಮಳೆ| ಹಲವು ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ| Read More »

ವಿದ್ಯಾರ್ಥಿನಿಯನ್ನು ಐ ಲವ್ ಯೂ ಎಂದು ಅಪ್ಪಿಕೊಳ್ಳಲು ಬಂದ ಕಾಮುಕ| ಕೈಹಿಡಿದೆಳೆದವನ ಖಾಕಿ ಕೈಗಿತ್ತ ಗ್ರಾಮಸ್ಥರು|

ಮಂಗಳೂರು: ವಿದ್ಯಾರ್ಥಿನಿಯೋರ್ವಳು‌ ಕಾಲೇಜು ಮುಗಿಸಿ ಬಸ್ಸಿನಿಂದಿಳಿದು‌ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಆಕೆಯ ಮಾನಭಂಗಕ್ಕೆ ಯತ್ನಿಸಿದ ಆರೋಪದಲ್ಲಿ ವ್ಯಕ್ತಿಯೋರ್ವನನ್ನು ಗ್ರಾಮಸ್ಥರು ಪೊಲೀಸರಿಗೆ ಹಿಡಿದೊಪ್ಪಿಸಿದ ಘಟನೆ ಮಂಗಳೂರಿ‌ನ ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಂದಿತ ಆರೋಪಿಯನ್ನು ಅಡ್ಯಾರ್ ಕಣ್ಣೂರು‌ ನಿವಾಸಿ ಯಾಕೂಬ್ ಎಂದು ಗುರುತಿಸಲಾಗಿದೆ. ಮಂಗಳೂರಿನ ಕಾಲೇಜೊಂದರಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿನಿಯೋರ್ವಳು ಹರೇಕಳ ಎಂಬಲ್ಲಿ ಬಸ್ಸಿನಿಂದ ಇಳಿದು ಮನೆಗೆ ತೆರಳುತ್ತಿದ್ದಳು. ಈ ವೇಳೆ ಆಕೆಗೆ ಎದುರಾದ ಯಾಕೂಬ್ ‘ಐ ಲವ್ ಯೂ’ ಎಂದು ಆಕೆಯ ಮೇಲೆ ಮುಗಿ ಬಿದ್ದಿದ್ದಾನೆ. ಆಕೆಯನ್ನು

ವಿದ್ಯಾರ್ಥಿನಿಯನ್ನು ಐ ಲವ್ ಯೂ ಎಂದು ಅಪ್ಪಿಕೊಳ್ಳಲು ಬಂದ ಕಾಮುಕ| ಕೈಹಿಡಿದೆಳೆದವನ ಖಾಕಿ ಕೈಗಿತ್ತ ಗ್ರಾಮಸ್ಥರು| Read More »

ಕೆಲಸದಾಳಿಗೆ ಹಾರಿಸಿದ‌ ಗುಂಡು‌ ಮಗನಿಗೆ ತಾಗಿ‌ ಅವಾಂತರ| ಆಕಸ್ಮಿಕ ಅವಘಡಕ್ಕೆ ಕಾರಣವೇನು?

ಮಂಗಳೂರು: ಉದ್ಯಮಿಯೊಬ್ಬರು ಹಾರಿಸಿದ ಗುಂಡು ತನ್ನ ಮಗನಿಗೇ ಆಕಸ್ಮಿಕವಾಗಿ ಬಿದ್ದು ಅವಾಂತರಕ್ಕೆ ಕಾರಣವಾದ ಘಟನೆ ನಗರದ ವೈಷ್ಣವಿ ಎಕ್ಸ್ ಪ್ರೆಸ್ ಕಾರ್ಗೋ ಪ್ರೈ. ಲಿ. ಇದರ ಮೋರ್ಗನ್ ಗೇಟ್ ಕಚೇರಿಯಲ್ಲಿ ಘಟನೆ ನಡೆದಿದೆ. ಈ ಸಂಸ್ಥೆಯ ಮಾಲಕ ರಾಜೇಶ್ ಪ್ರಭು ಬಳಿ ಕೆಲಸದವರೊಬ್ಬರ ಜಟಾಪಟಿ ನಡೆದಿದೆ ಎನ್ನಲಾಗಿದೆ. ರಾಜೇಶ್ ಪ್ರಭು ಸಿಟ್ಟಿನಿಂದ ತನ್ನ ಪಿಸ್ತೂಲ್ ತೆಗೆದು ಗುಂಡು ಹಾರಿಸಿದ್ದು ಅದು ತಪ್ಪಿ ತನ್ನ ಮಗನ ಮೇಲೆ ಬಿದ್ದಿದೆ. ಕಚೇರಿ ಹೊರ ಭಾಗದಲ್ಲಿ ಘಟನೆ ನಡೆದಿದ್ದು ಮಗ ಎಸ್ಸೆಸ್ಸೆಲ್ಸಿ

ಕೆಲಸದಾಳಿಗೆ ಹಾರಿಸಿದ‌ ಗುಂಡು‌ ಮಗನಿಗೆ ತಾಗಿ‌ ಅವಾಂತರ| ಆಕಸ್ಮಿಕ ಅವಘಡಕ್ಕೆ ಕಾರಣವೇನು? Read More »

ಕೋರ್ಟ್ ನಲ್ಲಿ ಸಾಕ್ಷ್ಯ ‌ನುಡಿದ ಡಿಕೆಶಿ| ಸುಳ್ಯದ ಸಮಸ್ಯೆಗೆ ಈಗಿನ ಸಚಿವರು ಪರಿಹಾರ ನೀಡಬೇಕು ಎಂದ ಮಾಜಿ ಪವರ್ ಮಿನಿಸ್ಟರ್

ಸುಳ್ಯ : ಸುಳ್ಯ ಕೋರ್ಟ್ ವಾರೆಂಟ್ ಜಾರಿ ಮಾಡಿದ ಹಿನ್ನಲೆ ಇಂದು ಸುಳ್ಯ ನ್ಯಾಯಾಲಯದ ಪ್ರಥಮ ದರ್ಜೆ ನ್ಯಾಯಾಧೀಶರ ಎದುರು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಜರಾಗಿದ್ದಾರೆ. ಹಳೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆಶಿ ಸುಳ್ಯಕ್ಕೆ ಆಗಮಿಸಿ ಸಾಕ್ಷಿ ನುಡಿದಿದ್ದಾರೆ. ನ್ಯಾಯಾಧೀಶರ ಎದುರು ಹಾಜರಾದ ಡಿಕೆಶಿ 2016ರ ಫೆಬ್ರವರಿ 27, 28ರಂದು ಐದಾರು ಬಾರಿ ಆರೋಪಿ ಗಿರಿಧರ್ ರೈ ನನಗೆ ಕರೆ ಮಾಡಿದ್ದಾನೆ. ತನ್ನ ಊರಿನಲ್ಲಿ ವಿದ್ಯುತ್ ಸಮಸ್ಯೆ ಇದೆ, ಪರಿಹರಿಸಿ ಅಂತ ಕೆಟ್ಟದಾಗಿ ಮಾತನಾಡಿದ್ದಾನೆ. ಕರೆ ಮಾಡಿದ ಎರಡೂ

ಕೋರ್ಟ್ ನಲ್ಲಿ ಸಾಕ್ಷ್ಯ ‌ನುಡಿದ ಡಿಕೆಶಿ| ಸುಳ್ಯದ ಸಮಸ್ಯೆಗೆ ಈಗಿನ ಸಚಿವರು ಪರಿಹಾರ ನೀಡಬೇಕು ಎಂದ ಮಾಜಿ ಪವರ್ ಮಿನಿಸ್ಟರ್ Read More »

ಪತ್ನಿಗೆ ವಂಚಿಸಿ ಮತ್ತೊಂದು ಮದುವೆಯಾದ ಭೂಪ ಮೊದಲ ಮದುವೆಯನ್ನು ಮುಚ್ಚಿಟ್ಟದ ರಾಘವೇಂದ್ರನಿಗೆ ಈಗ ಮೂರನೇ ಮದುವೆ

ಮೂಡಬಿದ್ರೆ ಬೆಳುವಾಯಿ ಗ್ರಾಮದ ತರುಣಿಯೊಬ್ಬರನ್ನು ಮದುವೆಯಾಗಿದ್ದ ಬೆಂಗಳೂರಿನ ರಾಘವೇಂದ್ರ ಕುಲಕರ್ಣಿ ಎಂಬಾಂತ ಇದೀಗ ತನ್ನ ಪತ್ನಿಗೆ ವಂಚಿಸಿ ಮತ್ತೊಂದು ಮದುವೆಯಾಗಿದ್ದು, ಈ ಬಗ್ಗೆ ಮಂಗಳೂರಿನ ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಬೆಂಗಳೂರಿನ ಬಸವೇಶ್ವರ ಬಡವಾಣೆಯ ಅಂದ್ರಳ್ಳಿ ನಿವಾಸಿ ರಾಘವೇಂದ್ರ ಕುಲಕರ್ಣಿ ಎಂಬಾತ ೨೦೧೭ರ ಜೂನ್ ೧೮ ರಂದು ಮೂಡಬಿದ್ರೆಯ ತರುಣಿಯನ್ನು ಬೆಂಗಳೂರಿ ಲಗ್ಗೇರಿಯಲ್ಲಿರುವ ರಾಘವೇಂದ್ರ ಮಠದಲ್ಲಿ ಹಿಂದೂ ಸಂಪ್ರದಾಯದಂತೆ ಮದುವೆಯಾಗಿದ್ದ. ಮದುವೆ ಸಂದರ್ಭದಲ್ಲಿ ಒಂದು ಲಕ್ಷ ರೂಪಾಯಿ ವರದಕ್ಷಿಣೆ ಕೂಡ ಪಡೆದಿದ್ದ.ಮದುವೆಯಾದ ಬಳಿಕ ರಾಘವೇಂದ್ರ ಕುಲಕರ್ಣಿ

ಪತ್ನಿಗೆ ವಂಚಿಸಿ ಮತ್ತೊಂದು ಮದುವೆಯಾದ ಭೂಪ ಮೊದಲ ಮದುವೆಯನ್ನು ಮುಚ್ಚಿಟ್ಟದ ರಾಘವೇಂದ್ರನಿಗೆ ಈಗ ಮೂರನೇ ಮದುವೆ Read More »

ಬೆಂಗಳೂರಿನ ಜನತೆಗೆ ಶಾಕ್ ನೀಡಲಿದ್ದಾರೆ ಆಟೋ ಚಾಲಕರು| ಮೀಟರ್ ದರ ಹೆಚ್ಚಿಸಲು ನಿರ್ಧಾರ|

ಬೆಂಗಳೂರು: ಇನ್ನು ಮುಂದಿನ ದಿನಗಳಲ್ಲಿ ಆಟೋ ರಿಕ್ಷಾ ಪ್ರಯಾಣ ದರ ಪ್ರತೀ ಕೀಲೋಮೀಟರಿಗೆ 30 ರೂ. ಹೆಚ್ಚಿಸಲು ನಿರ್ಧರಿಸಿದೆ ಎಂದು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಹೆಚ್ಚುವರಿ ಸಾರಿಗೆ ಆಯುಕ್ತರಾಗಿರುವ ಎಂ. ಎಲ್. ನರೇಂದ್ರ ಹೋಲ್ಕರ್ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.ಈ ಬಗ್ಗೆ ಮಾತನಾಡಿದ ಅವರು ಮೊದಲ 1.8 ಕಿಲೋಮೀಟರ್ ನಂತರದ ಪ್ರತಿ ಕಿಲೋಮೀಟರ್‌ಗೆ, 15 ರೂಪಾಯಿ ಆಗಿರುತ್ತದೆ ಎಂದು ಹೇಳಿದ್ದಾರೆ. ಸರ್ಕಾರದಿಂದ ಅಧಿಕೃತ ಅಧಿಸೂಚನೆ ಬರುವುದು ಬಾಕಿ ಇದೆ ಎಂದು ನರೇಂದ್ರ ಹೋಲ್ಕರ್ ಹೇಳಿದ್ದು, ಮತ್ತು ಹೆಚ್ಚಿಸಲಾದ ಶುಲ್ಕವನ್ನು

ಬೆಂಗಳೂರಿನ ಜನತೆಗೆ ಶಾಕ್ ನೀಡಲಿದ್ದಾರೆ ಆಟೋ ಚಾಲಕರು| ಮೀಟರ್ ದರ ಹೆಚ್ಚಿಸಲು ನಿರ್ಧಾರ| Read More »