Editor

ಅ.7 ರಿಂದ 17 ರವರೆಗೆ ಕೊಡಗು ಪ್ರವಾಸೋದ್ಯಮ ಬಂದ್| ಪ್ರವಾಸಿಗರಿಗೆ ನಿಷೇಧ ಹೇರಿ ಡಿಸಿ ಚಾರುಲತಾ ಆದೇಶ

ಮಡಿಕೇರಿ; ದಸರಾ ಮತ್ತು ಕರಗೋತ್ಸವದ ಪ್ರಯುಕ್ತ ಕೊಡಗು ಜಿಲ್ಲಾಡಳಿತ ಪ್ರವಾಸಿಗರ ಭೇಟಿಗೆ ನಿರ್ಬಂಧ ಹೇರಿದೆ. ಅಕ್ಟೋಬರ್ 7 ರಿಂದ 17ರ ತನಕ ಕೊಡಗು ಜಿಲ್ಲೆಯ ಪ್ರವಾಸಿ ತಾಣಗಳನ್ನು ಬಂದ್ ಮಾಡುವಂತೆ ಜಿಲ್ಲಾಡಳಿತ ಸೂಚನೆ ನೀಡಿದೆ. ಈ ಕುರಿತು ಕೊಡಗು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಆದೇಶ ಹೊರಡಿಸಿದ್ದಾರೆ. ಮಡಿಕೇರಿ ದಸರಾ ಮತ್ತು ಕಾವೇರಿ ತೀರ್ಥೋದ್ಭವ ಕುರಿತು ಜಿಲ್ಲಾಡಳಿತದ ಜೊತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಸಭೆ ನಡೆಸಿದರು. ನಾಡಿನ ಜೀವನದಿ ಕಾವೇರಿ ಉಗಮ ಸ್ಥಾನ ತಲಕಾವೇರಿಯಲ್ಲಿ

ಅ.7 ರಿಂದ 17 ರವರೆಗೆ ಕೊಡಗು ಪ್ರವಾಸೋದ್ಯಮ ಬಂದ್| ಪ್ರವಾಸಿಗರಿಗೆ ನಿಷೇಧ ಹೇರಿ ಡಿಸಿ ಚಾರುಲತಾ ಆದೇಶ Read More »

ದೇವಾಲಯಗಳಲ್ಲಿ ವಸ್ತ್ರಸಂಹಿತೆ ಜಾರಿಗೆ ತೀರ್ಮಾನ| ಇನ್ಮುಂದೆ ಬೇಕಾಬಿಟ್ಟಿ ದೇಗುಲ ಪ್ರವೇಶಿಸುವಂತಿಲ್ಲ|

ಬೆಂಗಳೂರು: ರಾಜ್ಯದ ದೇವಾಲಯಗಳಲ್ಲಿ ವಸ್ತ್ರಸಂಹಿತೆ ಜಾರಿ ಮಾಡಲು ಧಾರ್ಮಿಕ ಪರಿಷತ್ ತೀರ್ಮಾನಿಸಿದೆ. ಧಾರ್ಮಿಕ ಕೇಂದ್ರಗಳಲ್ಲಿ ಬರ್ಮುಡಾ, ತುಂಡುಡುಗೆಗಳನ್ನು ನಿಷೇಧಿಸಲಾಗಿದ್ದು, ಭಕ್ತರು ತಮಗೆ ಬೇಕಾದಂತೆ ದೇವಾಲಯ ಪ್ರವೇಶಿಸುವಂತಿಲ್ಲ. ಮೊದಲ ಹಂತದಲ್ಲಿ 216 ದೇವಾಲಯಗಳಲ್ಲಿ ನಿಯಮ ಜಾರಿಗೆ ಬರಲಿದೆ. ಎ ಗ್ರೇಡ್ ದೇವಾಲಯಗಳಲ್ಲಿ ಹಂತಹಂತವಾಗಿ ವಸ್ತ್ರಸಂಹಿತೆ ಜಾರಿ ಮಾಡಲಾಗುವುದು. ನಂತರ ಉಳಿದ ದೇವಾಲಯಗಳಿಗೂ ವಿಸ್ತರಣೆ ಮಾಡಲು ಪರಿಷತ್ ನಿರ್ಧರಿಸಲಾಗಿದೆ. ದ.ಕ ಜಿಲ್ಲೆಯ ಕಟೀಲು ದುರ್ಗಾಪರಮೇಶ್ವರಿ, ಪೊಳಲಿ ರಾಜರಾಜೇಶ್ವರಿ ದೇವಾಲಯದಲ್ಲಿ ಅಕ್ಟೋಬರ್ 3 ರಿಂದ ವಸ್ತ್ರ ಸಂಹಿತೆ ಜಾರಿಗೆ ಬಂದಿದೆ. ಮುಂದಿನ

ದೇವಾಲಯಗಳಲ್ಲಿ ವಸ್ತ್ರಸಂಹಿತೆ ಜಾರಿಗೆ ತೀರ್ಮಾನ| ಇನ್ಮುಂದೆ ಬೇಕಾಬಿಟ್ಟಿ ದೇಗುಲ ಪ್ರವೇಶಿಸುವಂತಿಲ್ಲ| Read More »

ಸಾರ್ವಕಾಲಿಕ ದಾಖಲೆಯ ಏರಿಕೆ ಕಂಡ ತೈಲೋತ್ಪನ್ನ ದರ| ಈ ಹಗಲು ದರೋಡೆಗೆ ಕೊನೆ ಎಂದು…?

ನವದೆಹಲಿ: ದೇಶದಾದ್ಯಂತ ಇಂಧನ ದರ ಭಾನುವಾರವೂ ಹೆಚ್ಚಳವಾಗಿದ್ದು, ಸರ್ಕಾರಿ ಸ್ವಾಮ್ಯದ ತೈಲ ಮಾರಾಟ ಕಂಪನಿಗಳು ಭಾನುವಾರ ಪೆಟ್ರೋಲ್‌ ದರವನ್ನು ಲೀಟರಿಗೆ 25 ಪೈಸೆ ಮತ್ತು ಡೀಸೆಲ್‌ ದರವನ್ನು ಲೀಟರಿಗೆ 30 ಪೈಸೆ ಹೆಚ್ಚಿಸಿವೆ. ಸತತ ನಾಲ್ಕನೇ ದಿನವೂ ದೇಶಾದ್ಯಂತ ಮತ್ತೆ ತೈಲೋತ್ಪನ್ನಗಳ ದರ ಏರಿಕೆಯಾಗಿದ್ದು, ಭಾನುವಾರ ಪೆಟ್ರೋಲಿಯಂ ಉತ್ಪನ್ನಗಳು ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ತಲುಪಿವೆ. ಸರ್ಕಾರಿ ತೈಲ ಕಂಪನಿಗಳ ಅಕ್ಟೋಬರ್ 3 ರಂದು ಪೆಟ್ರೋಲ್, ಡೀಸೆಲ್ ಬೆಲೆಯನ್ನು ಏರಿಕೆ ಮಾಡಿದ್ದು, ಇಂದು ಲೀಟರ್ ಪೆಟ್ರೋಲ್ ದರ 25

ಸಾರ್ವಕಾಲಿಕ ದಾಖಲೆಯ ಏರಿಕೆ ಕಂಡ ತೈಲೋತ್ಪನ್ನ ದರ| ಈ ಹಗಲು ದರೋಡೆಗೆ ಕೊನೆ ಎಂದು…? Read More »

ಸುಳ್ಯ: ಗೆಲ್ಲು ಕಡಿಯುತ್ತಿದ್ದ ವೇಳೆ ಬಳ್ಳಿ ಸಿಲುಕಿ ಮೃತ್ಯು

ಸುಳ್ಯ: ಮರದ ಗೆಲ್ಲು ಕಡಿಯುತ್ತಿದ್ದ ವೇಳೆ ಮರದಲ್ಲಿ ಇದ್ದ ಬಳ್ಳಿಯೊಂದು ಸಿಲುಕಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಮಡಪ್ಪಾಡಿ ಗ್ರಾಮದ ಕೇವಳದಲ್ಲಿ ನಡೆದಿದೆ. ಮೃತಪಟ್ಟವರನ್ನು ಕೇವಳದ ಹೂವಪ್ಪ ಗೌಡ ಎಂದು ಗುರುತಿಸಲಾಗಿದೆ. ಹೂವಪ್ಪ ಗೌಡರವರು ಮಧ್ಯಾಹ್ನ ಒಂದೂವರೆ ಗಂಟೆಯ ಸಮಯದಲ್ಲಿ ತನ್ನ ಮನೆಯ ಎದುರಿನ ಸಣ್ಣ ಗಾತ್ರದ ಮರದ ಗೆಲ್ಲು ಕಡಿಯಲು ಹತ್ತಿದ್ದರು. ಗೆಲ್ಲು ಬೀಳುವ ಸಂದರ್ಭದಲ್ಲಿ ಮರದಲ್ಲಿದ್ದ ಬಿಳಲು ಬಳ್ಳಿಗೆ ಅವರು ಸಿಲುಕಿದರೆನ್ನಲಾಗಿದೆ. ಬಳ್ಳಿ ಅವರ ದೇಹಕ್ಕೆ ಸಿಲುಕಿ ಬಿಗಿದಿದ್ದು ಇದನ್ನು ಕಂಡ ಮನೆಯವರು

ಸುಳ್ಯ: ಗೆಲ್ಲು ಕಡಿಯುತ್ತಿದ್ದ ವೇಳೆ ಬಳ್ಳಿ ಸಿಲುಕಿ ಮೃತ್ಯು Read More »

ಕಾಂಗ್ರೇಸ್ ವಕ್ತಾರೆ ಲಾವಣ್ಯ ಬಲ್ಲಾಳ್ ಗೆ ಜೀವ ಬೆದರಿಕೆ – ಆರೋಪಿ ಬಂಧನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು: ಮಂಗಳೂರಿನ ಸ್ಥಳೀಯ ನ್ಯೂಸ್ ಚಾನೆಲ್ ಒಂದರಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದ ಚರ್ಚಾ ಕಾರ್ಯಾಕ್ರಮದಲ್ಲಿ ಪೋನ್ ಮೂಲಕ ಕಾಂಗ್ರೇಸ್ ವಕ್ತಾರೆ ಲಾವಣ್ಯ ಬಲ್ಲಾಳ್ ಅವರಿಗೆ ಬೆದರಿಕೆ ಒಡ್ಡಿದ ಆರೋಪಿಯನ್ನು ಕೂಡಲೇ ಬಂಧಿಸುವಂತೆ ಮಾಜಿ ಸಿಎಂ ಸಿದ್ದರಾಮಯ್ಯ ಮಂಗಳೂರು ಪೊಲೀಸ್ ಆಯುಕ್ತರಿಗೆ ಆಗ್ರಹಿಸಿದ್ದಾರೆ. ಈ ಕುರಿತಂತೆ ಟ್ವಿಟ್ ಮಾಡಿರುವ ಅವರು ಮಂಗಳೂರಿನ ಸುದ್ದಿವಾಹಿನಿಯಲ್ಲಿ ನಡೆದ ಚರ್ಚೆಯಲ್ಲಿ ಕಾಂಗ್ರೇಸ್ ಪಕ್ಷದ ವಕ್ತಾರೆ ಲಾವಣ್ಯ ಬಲ್ಲಾಳ್ ಮತ್ತು ಅವರ ಕುಟುಂಬದವರಿಗೆ ಹಲ್ಲೆಯ ಬೆದರಿಕೆಯೊಡ್ಡಿರುವುದು ಖಂಡನೀಯ, ಮಂಗಳೂರು ಪೊಲೀಸ್

ಕಾಂಗ್ರೇಸ್ ವಕ್ತಾರೆ ಲಾವಣ್ಯ ಬಲ್ಲಾಳ್ ಗೆ ಜೀವ ಬೆದರಿಕೆ – ಆರೋಪಿ ಬಂಧನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಒತ್ತಾಯ Read More »

ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ : ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇಂದು ನಡೆದ ಭಾಬಾನಿಪುರ ಉಪ ಚುನಾವಣೆಯಲ್ಲಿ ಬಿಜೆಪಿಯ ಪ್ರಿಯಾಂಕಾ ಟಿಬ್ರೂವಾಲ್ ಹಿಂದೆ ಹಾಕುವ ಮೂಲಕ ತಮ್ಮ ಮುಖ್ಯಮಂತ್ರಿ ಕುರ್ಚಿಯನ್ನು ಉಳಿಸಿಕೊಳ್ಳಲು ಅದ್ಭುತ ಗೆಲುವು ದಾಖಲಿಸಿದ್ದಾರೆ. ಡಿಲಿಮಿಟೇಶನ್ ನಂತರ 2011ರಲ್ಲಿ ರೂಪುಗೊಂಡ ಭಬಾನಿಪುರ ಕ್ಷೇತ್ರವು ಪ್ರಾರಂಭದಿಂದಲೂ ತೃಣಮೂಲ ಕಾಂಗ್ರೆಸ್ (ಟಿ.ಎಂ.ಸಿ.) ಭದ್ರಕೋಟೆಯಾಗಿದೆ. ಮಮತಾ ಬ್ಯಾನರ್ಜಿ ಅವರ ಕಾಳಿಘಾಟ್ ನಿವಾಸವು ಈ ಕ್ಷೇತ್ರದ ಅಡಿಯಲ್ಲಿ ಬರುತ್ತದೆ. ಫಲಿತಾಂಶಗಳು ಪ್ರಕಟವಾದ ನಂತರ ಸಂಭವನೀಯ ಚುನಾವಣೋತ್ತರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮುಂಜಾಗ್ರತಾ

ಉಪಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಮಮತಾ ಬ್ಯಾನರ್ಜಿ Read More »

ಮಂಗಳೂರು: ಪಿಲಿಕುಳದ ಗೂಡಿನಿಂದ ಹೊರಬಂದಿದ್ದ ಸಿಂಹ..!, ಆತಂಕ ಸೃಷ್ಟಿಸಿದ ಮೃಗರಾಜ

ಮಂಗಳೂರು: ವಾಮಂಜೂರಿನ ಪಿಲಿಕುಳ ಡಾ.ಶಿವರಾಮ ಕಾರಂತ ವನ್ಯಜೀವಿ ಧಾಮದ ಸಿಂಹವೊಂದು ತನ್ನ ಗೂಡಿನಿಂದ ಹೊರಗೆ ಬಂದು ಕೆಲ ಸಮಯ ಪ್ರವಾಸಿಗರು ಸೇರಿದಂತೆ ಅಲ್ಲಿಯ ಸಿಬ್ಬಂದಿಗಳಲ್ಲಿ ಆತಂಕ ಉಂಟುಮಾಡಿದ ಘಟನೆ ಜುಲೈ ತಿಂಗಳಲ್ಲಿ ನಡೆದಿದ್ದು, ತಡವಾಗಿ ಬಹಿರಂಗಗೊಂಡಿದೆ.ಇನ್ನು ಈ ಘಟನೆ ಮೃಗಾಲಯದ ಸಿಬ್ಬಂದಿಯ ನಿರ್ಲಕ್ಷ್ಯದಿಂದಾಗಿ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದು, ಆದರೆ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ. ಪಿಲಿಕುಳದಲ್ಲಿ ಕಾಡು ಪ್ರಾಣಿಗಳಾದ ಚಿರತೆ, ಹುಲಿ, ನಂತರದಲ್ಲಿ ಸಿಂಹದ ಎನ್‌ಕ್ಲೋಶರ್ ಇದೆ. ಎನ್‌ಕ್ಲೋಶರ್ ಎಂದರೆ ಮೃಗಾಲಯದ ಪ್ರಾಣಿಗಳಿಗೆ ವಿಹರಿಸುವುದಕ್ಕೆ ಬೇಕಾದ ವಿಶಾಲವಾದ ಆವರಣವಾಗಿದೆ.

ಮಂಗಳೂರು: ಪಿಲಿಕುಳದ ಗೂಡಿನಿಂದ ಹೊರಬಂದಿದ್ದ ಸಿಂಹ..!, ಆತಂಕ ಸೃಷ್ಟಿಸಿದ ಮೃಗರಾಜ Read More »

ಶಾಸಕ ಎಂ.ಪಿ ಕುಮಾರಸ್ವಾಮಿ ಕಾರು ಅಪಘಾತ, ಮಹಿಳೆ ಸಾವು

ಹಾಸನ: ಬಿಜೆಪಿ ಶಾಸಕ ಎಂ.ಪಿ. ಕುಮಾರಸ್ವಾಮಿ ಅವರಿಗೆ ಸೇರಿದ ಕಾರು ಡಿಕ್ಕಿಯಾಗಿ ಮಹಿಳೆ ಸಾವನ್ನಪ್ಪಿದ ಘಟನೆ ಜಿಲ್ಲೆಯ ಬೇಲೂರು ತಾಲ್ಲೂಕಿನ ಹನುಮಂತ ನಗರದಲ್ಲಿ ನಡೆದಿದೆ. ಬೇಲೂರಿನತ್ತ ಬರುತ್ತಿದ್ದ ಶಾಸಕರ ಕಾರು ಚಾಲಕ ಅಪಘಾತವೆಸಗಿದ್ದು, 55 ವರ್ಷದ ಮಹಿಳೆ ಮೃತಪಟ್ಟಿದ್ದಾರೆ. ಚಾಲಕನ ಪಾನಮತ್ತನಾಗಿ ಕಾರು ಚಾಲನೆ ಮಾಡುತ್ತಿದ್ದ ಆರೋಪ ಕೇಳಿಬಂದಿದೆ. ಕಾರು ರಿಪೇರಿಗೆಂದು ಬೆಂಗಳೂರಿಗೆ ಹೊರಟಿದ್ದ ಎನ್ನಲಾಗಿದ್ದು, ಬೇಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಶಾಸಕ ಎಂ.ಪಿ ಕುಮಾರಸ್ವಾಮಿ ಕಾರು ಅಪಘಾತ, ಮಹಿಳೆ ಸಾವು Read More »

ಹಣಕ್ಕಾಗಿ ಸ್ವಂತ ಪತ್ನಿಯನ್ನೇ ಮಾರಿದ ಭೂಪ| 500 ರೂ ಕೊಟ್ಟು ಖರೀದಿಸಿದಾತನಿಂದ ನಡೆಯಿತು ಹೀನ ಕೃತ್ಯ|

ಅಹಮದಾಬಾದ್: ತನ್ನ ಸ್ವಂತ ಪತ್ನಿಯನ್ನು 500 ರೂ.ಗೆ ಮಾರಿದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಹಿಳೆ ಖರೀದಿಗೆ ಹಣ ನೀಡಿದ ಪುರುಷ ಏಕಾಂತ ಸ್ಥಳದಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾಗಿ ಮಹಿಳೆ ಪೊಲೀಸರಿಗೆ ದೂರು ನೀಡಿದ ವೇಳೆ ಈ ಘಟನೆ ತಿಳಿದುಬಂದಿದೆ. ಶುಕ್ರವಾರ ಪ್ರಕರಣದ ಬಗ್ಗೆ ಮಾಹಿತಿ ಪಡೆದ ಪೊಲೀಸರು, ದೂರಿನ ಮೇಲೆ ತಕ್ಷಣ ಕ್ರಮ ಕೈಗೊಂಡು 24 ಗಂಟೆಗಳಲ್ಲಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಲ್ಲಿ ಒಬ್ಬನನ್ನು ಸೋನು ಶರ್ಮಾ ಎಂದು ಗುರುತಿಸಲಾಗಿದೆ ಎಂದು ಪೊಲೀಸ್ ಠಾಣೆಯ ಪ್ರಭಾರಿ ಮದನಲಾಲ್

ಹಣಕ್ಕಾಗಿ ಸ್ವಂತ ಪತ್ನಿಯನ್ನೇ ಮಾರಿದ ಭೂಪ| 500 ರೂ ಕೊಟ್ಟು ಖರೀದಿಸಿದಾತನಿಂದ ನಡೆಯಿತು ಹೀನ ಕೃತ್ಯ| Read More »

ಹಿಂದೂ ಯುವತಿಯರ ಜೊತೆ ಮುಸ್ಲಿಂ ಯುವಕ ಹಾಗೂ ಮತ್ತೊಬ್ಬ| ಜೋಡಿಗಳು ಪೊಲೀಸ್ ವಶಕ್ಕೆ|

ಮಂಗಳೂರು: ನಗರದ ಹೊರವಲಯದ ಗುರುಪುರ ಬಳಿಯ ಚಿಲಿಂಬಿ ಗುಡ್ಡೆ ಎಂಬಲ್ಲಿ ಮುಸ್ಲಿಂ ಯುವಕನೊಂದಿಗೆ ಹಿಂದೂ ಯುವತಿಯರು ಪತ್ತೆಯಾಗಿದ್ದು, ಹಿಂದೂ ಸಂಘಟನೆಗಳ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆ ವೇಳೆ ಕೃತ್ಯ ಬೆಳಕಿಗೆ ಬಂದಿದ್ದು, ಗಾಂಜಾ ಮಾಫಿಯಾ ಶಂಕೆ ವ್ಯಕ್ತವಾಗಿದೆ. ಗುರುಪುರದ ಚಿಲಿಂಬಿ ಗುಡ್ಡೆ ಎಂಬಲ್ಲಿ ಒಬ್ಬ ಹಿಂದೂ ಯುವಕ ಹಾಗೂ ಮುಸ್ಲಿಂ ಯುವಕನೊಂದಿಗೆ ಇಬ್ಬರು ಹಿಂದೂ ಯುವತಿಯರು ಪತ್ತೆಯಾಗಿದ್ದು, ಇವರು ಬಳಸಿದ್ದ ಕಾರ್ ಗೆ ನಂಬರ್ ಪ್ಲೇಟ್ ಇಲ್ಲದಿರುವುದು ಅನುಮಾನ ಮೂಡಿಸಿದೆ. ಪತ್ತೆಯಾದ ನಾಲ್ವರನ್ನೂ ಬಜ್ಪೆ ಪೋಲಿಸ್

ಹಿಂದೂ ಯುವತಿಯರ ಜೊತೆ ಮುಸ್ಲಿಂ ಯುವಕ ಹಾಗೂ ಮತ್ತೊಬ್ಬ| ಜೋಡಿಗಳು ಪೊಲೀಸ್ ವಶಕ್ಕೆ| Read More »