Editor

ಮಗುವಿನೊಂದಿಗೆ ಬಾವಿಗೆ ಜಿಗಿದು‌ ತಾಯಿ ಆತ್ಮಹತ್ಯೆ

ಬಾಗಲಕೋಟೆ: ತನ್ನ ಒಂದು ವರ್ಷದ ಮಗುವನ್ನು ಹಿಡಿದುಕೊಂಡು ತಾಯಿಯೋರ್ವಳು ಬಾವಿಗೆ ಹಾರಿದ ದುರ್ಘಟನೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ರಾಘಾಪುರದಲ್ಲಿ ನಡೆದಿದೆ. ಘಟನೆಯಲ್ಲಿ ಮಗು ಶಿವಾನಿ ಸಾವನ್ನಪ್ಪಿದ್ದು, ಮಗುವಿನ ಮೃತದೇಹವನ್ನು ಅಗ್ನಿಶಾಮಕ ಸಿಬ್ಬಂದಿ ಹೊರತೆಗೆದಿದ್ದು, ತಾಯಿಗಾಗಿ ಬಾವಿಯಲ್ಲಿ ಹುಡುಕಾಟ ಮುಂದುವರೆದಿದೆ. ಗುಳೇದಗುಡ್ಡ ತಾಲೂಕಿನ ಹಂಸನೂರ ಗ್ರಾಮದ ಫಕೀರವ್ವ(26) ಎಂಬ ತಾಯಿಯೇ ತನ್ನ ಮಗುವಿನೊಂದಿಗೆ ಬಾವಿಗೆ ಜಿಗಿದ ಮಹಿಳೆ. ಈಕೆ ಹೆರಿಗೆಗಾಗಿ ತನ್ನ ಅಜ್ಜಿಮನೆ ರಾಘಾಪುರಕ್ಕೆ ಬಂದಿದ್ದಳು. ಹೆರಿಗೆ ಬಳಿಕ ಇಂದು ಗಂಡನ ಮನೆಯವರು ಕರೆದುಕೊಂಡು ಈಕೆಯನ್ನು ಮರಳಿ ಕರೆದೊಯ್ಯಲು […]

ಮಗುವಿನೊಂದಿಗೆ ಬಾವಿಗೆ ಜಿಗಿದು‌ ತಾಯಿ ಆತ್ಮಹತ್ಯೆ Read More »

ವೇಣೂರು: ಬಿಜೆಪಿ ಮುಖಂಡ ರಾಮ್ ಪ್ರಸಾದ್ ಮರೋಡಿ ನಿಧನ

ಮೂಡುಬಿದಿರೆ: ವೇಣೂರು‌ ಸಮೀಪದ ಮರೋಡಿ ಗ್ರಾಮದ ಪಲಾರ ನಿವಾಸಿ, ಬಿಜೆಪಿ ಮುಖಂಡ ರಾಮ ಪ್ರಸಾದ್‌‌ ಮರೋಡಿ (37) ಅವರು ಅಲ್ಪ ಕಾಲದ ಅಸೌಖ್ಯದಿಂದ ಸೆ,13ರ ಸೋಮವಾರದಂದು ನಿಧನರಾಗಿದ್ದಾರೆ. ರಾಮ ಪ್ರಸಾದ್‌ ಅವರು ಕೆಲ ದಿನಗಳ ಹಿಂದೆ ಜಾಂಡಿಸ್‌ ಖಾಯಿಲೆಯಿಂದ ಬಳಲುತ್ತಿದ್ದು, ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ರಾಮ್‌ ಪ್ರಸಾದ್‌ ಅವರು ಬಜರಂಗದಳದ ಮೇಣೂರು ಪ್ರಖಂಡ ಸಂಚಾಲಕರಾಗಿದ್ದರು. ಇವರು ಪಲಾರಗೋಳಿ ಬ್ರಹ್ಮ ಬೈದರ್ಕಳ ಗರಡಿಯ ಜೀರ್ಣೋದ್ಧಾರ ಸಮಿತಿಯ

ವೇಣೂರು: ಬಿಜೆಪಿ ಮುಖಂಡ ರಾಮ್ ಪ್ರಸಾದ್ ಮರೋಡಿ ನಿಧನ Read More »

ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡೀಸ್ ಇನ್ನಿಲ್ಲ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ಕೇಂದ್ರದ ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್(80) ಅವರು ಇಹಲೋಕ ತ್ಯಜಿಸಿದ್ದಾರೆ. ಯೋಗ ಮಾಡುವ ವೇಳೆ ಆಯತಪ್ಪಿ ಬಿದ್ದು, ತಲೆಗೆ ಪೆಟ್ಟು ಮಾಡಿಕೊಂಡಿದ್ದ ಆಸ್ಕರ್ ಫರ್ನಾಂಡಿಸ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು. ಅವರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿ, ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದರು. ಬಳಿಕ ಮಂಗಳೂರಿನ ಯೆನಪೋಯ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾರೆ. ಕಾಂಗ್ರೆಸ್ ನಾಯಕರಾದ ಎಂ.ಬಿ.ಪಾಟೀಲ್, ಎಚ್.ಕೆ.ಪಾಟೀಲ್, ಮಾಜಿ ಸಚಿವ ಜನಾರ್ದನ ಪೂಜಾರಿ ಅವರು ಆಸ್ಪತ್ರೆಗೆ

ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡೀಸ್ ಇನ್ನಿಲ್ಲ Read More »

ನಮ್ಮಿಬ್ಬರದ್ದು ಲವ್ ಅ್ಯಂಡ್ ಹೇಟ್ ಸಂಬಂಧ- ವಿಧಾನಸಭೆಯಲ್ಲಿ ಈಶ್ವರಪ್ಪ ಕುರಿತು ಸಿದ್ದು‌ ಹಾಸ್ಯ

ಬೆಂಗಳೂರು : ವಿಧಾನಮಂಡಲ ಅಧಿವೇಶನ ಇಂದು ಆರಂಭವಾಗಿದ್ದು, ಕಲಾಪದಲ್ಲಿ ಇಂದು ಸ್ವಾರಸ್ಯಕರ ಘಟನೆ ನಡೆಯಿತು. ವಿಪಕ್ಷ ನಾಯಕ ಸಿದ್ದರಾಮಯ್ಯ, ಸಚಿವ ಈಶ್ವರಪ್ಪ ಅವರ ಕುರಿತು ಈಶ್ವರಪ್ಪ ಮತ್ತು ನಂದು ಲವ್ ಅಂಡ್ ಹೇಟ್ ಸಂಬಂಧ ಎಂದು ಹೇಳಿದ್ದು, ಕಲಾಪದಲ್ಲಿ ಸ್ವಾರಸ್ಯ ಸೃಷ್ಟಿಸಿತು. ವಿಧಾನಸಭೆ ಕಲಾಪದ ವೇಳೆ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸುವ ಸಂದರ್ಭದಲ್ಲಿ ಸಿದ್ದರಾಮಯ್ಯ ಮಾತನಾಡುತ್ತಿದ್ದರು, ಈ ವೇಳೆ ಅವರು ಮಾತನಾಡಿದ್ದು ಸರಿಯಾಗಿ ಕೇಳಿಸುತ್ತಿರಲಿಲ್ಲ. ಆಗ ಸ್ಪೀಕರ್ ಕಾಗೇರಿ ಮೈಕ್ ಸರಿ ಮಾಡಿಕೊಳ್ಳುವಂತೆ ಸೂಚಿಸಿದರಲ್ಲದೇ, ನೀವು ಮಾತನಾಡುತ್ತಿರುವುದು

ನಮ್ಮಿಬ್ಬರದ್ದು ಲವ್ ಅ್ಯಂಡ್ ಹೇಟ್ ಸಂಬಂಧ- ವಿಧಾನಸಭೆಯಲ್ಲಿ ಈಶ್ವರಪ್ಪ ಕುರಿತು ಸಿದ್ದು‌ ಹಾಸ್ಯ Read More »

ಇಂದಿನಿಂದ ರಾಜ್ಯ ವಿಧಾನಮಂಡಲ ಅಧಿವೇಶನ| ಸಿಎಂ ಗೆ ಬೆಲೆಏರಿಕೆ ಬಿಸಿ ಮುಟ್ಟಿಸಲು ಪ್ರತಿಪಕ್ಷಗಳು ಸಜ್ಜು

ಬೆಂಗಳೂರು: ಇಂದಿನಿಂದ 10 ದಿನಗಳ ಕಾಲ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗಲಿದೆ. ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಬಳಿಕ ಬೊಮ್ಮಾಯಿ ಅವರಿಗೆ ಇದು ಮೊದಲ ಅಧಿವೇಶನವಾಗಿದೆ. 6 ತಿಂಗಳ ಬಳಿಕ ಅಧಿವೇಶನ ನಡೆ ಯುತ್ತಿದ್ದು, ಕೊರೊನಾದಿಂದಾಗಿ ಸಾಕಷ್ಟು ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ.ಅಧಿವೇಶನದಲ್ಲಿ ಕೊಳಚೆ ಪ್ರದೇಶಗಳ ಭೂಕಬಳಿಕೆ ವಿರುದ್ಧ ಕ್ರಮಕ್ಕೆ ತಿದ್ದುಪಡಿ ಮಸೂದೆ, ಬಿಡಬ್ಲ್ಯುಎಸ್‌ಎಸ್‌ಬಿ ತಿದ್ದುಪಡಿ, ಪೌರಸಭೆ, ಶಿಕ್ಷಕರ ವರ್ಗಾವಣೆ ನಿಯಮ ಮಸೂದೆ ಮತ್ತು 4 ಅಧ್ಯಾದೇಶ ಸಹಿತ 18 ಮಸೂದೆಗಳ ಮಂಡನೆಗೆ ಸರಕಾರ ಸಿದ್ಧವಾಗಿದೆ. ಅಧಿವೇಶನದಲ್ಲಿ ಅಗತ್ಯ ವಸ್ತುಗಳ ಬೆಲೆ

ಇಂದಿನಿಂದ ರಾಜ್ಯ ವಿಧಾನಮಂಡಲ ಅಧಿವೇಶನ| ಸಿಎಂ ಗೆ ಬೆಲೆಏರಿಕೆ ಬಿಸಿ ಮುಟ್ಟಿಸಲು ಪ್ರತಿಪಕ್ಷಗಳು ಸಜ್ಜು Read More »

ಮಹಿಳೆಯ ವಿವಸ್ತ್ರಗೊಳಿಸಿ ಹಲ್ಲೆ, ಅಂಗಾಂಗ ಮುಟ್ಟಿ ಪೈಶಾಚಿಕ ಕೃತ್ಯ

ಯಾದಗಿರಿ: ಗುಂಪೊಂದು ಮಹಿಳೆಯನ್ನು ನಗ್ನಗೊಳಿಸಿ ಕಬ್ಬಿನ ಜಲ್ಲೆಯಿಂದ ಥಳಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ ಅಂಗಾಂಗ ಮುಟ್ಟಿ ಪೈಶಾಚಿಕ ಕೃತ್ಯ ಎಸಗಿರುವ ಅಮಾನವೀಯ ಘಟನೆಯೊಂದು ಜಿಲ್ಲೆಯಲ್ಲಿ ನಡೆದಿದೆ. ಪಾಪಿಗಳು ಮಹಿಳೆ ಜೊತೆ ವಿಕೃತ ವರ್ತನೆ ನಡೆಸಿದ್ದಾರೆ. ಈ ಘಟನೆ ಯಾದಗಿರಿ-ಶಹಾಪುರ ರಾಜ್ಯ ಹೆದ್ದಾರಿ ಮಧ್ಯೆ ನಡೆದಿದೆ ಎನ್ನಲಾಗುತ್ತಿದೆ. 5-6 ಜನರ ಗುಂಪಿನಿಂದ ಮಹಿಳೆಯ ಮೇಲೆ ದೌರ್ಜನ್ಯ ನಡೆದಿದ್ದು, ಮಹಿಳೆಗೆ ಕಿರುಕುಳ ನೀಡಿರುವ ವಿಡಿಯೋ ವೈರಲ್ ಆಗಿದೆ. ಹಲ್ಲೆಗೊಳಗಾದ ಮಹಿಳೆ ಹನಿಟ್ರ್ಯಾಪ್ ಪ್ರಕರಣದಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ವೈರಲ್ ಆದ

ಮಹಿಳೆಯ ವಿವಸ್ತ್ರಗೊಳಿಸಿ ಹಲ್ಲೆ, ಅಂಗಾಂಗ ಮುಟ್ಟಿ ಪೈಶಾಚಿಕ ಕೃತ್ಯ Read More »

ಬಟ್ಟೆ‌ತೊಳೆಯಲು ಹೊಳೆಗೆ ಹೋದ ಮಹಿಳೆ ನಾಪತ್ತೆ

ಸುಳ್ಯ: ಬಟ್ಟೆ ತೊಳೆಯಲೆಂದು ಹೊಳೆಗೆ ತೆರಳಿದ್ದ ಮಹಿಳೆ ನಾಪತ್ತೆಯಾದ ಘಟನೆ ತಾಲೂಕಿನ ಅರಂತೋಡು ಗ್ರಾಮದ ಸಣ್ಣಮನೆ ಎಂಬಲ್ಲಿ ನಡೆದಿದೆ. ಸಣ್ಣಮನೆಯ ಮಾಧವರವರ ಪತ್ನಿ ಮೀನಾಕ್ಷಿ ಯವರು ಸೆ.11 ರಂದು ಸಂಜೆ ಅರಂತೋಡಿನ ಮಾಡದಕಾನ ಎಂಬಲ್ಲಿ ಹೊಳೆಗೆ ಬಟ್ಟೆ ಒಗೆಯಲೆಂದು ಹೋದವರು ಮನೆಗೆ ಮರಳಿ ಬರಲಿಲ್ಲ. ಅನುಮಾನಗೊಂಡ ಮನೆಯವರು ರಾತ್ರಿಯಿಂದಲೇ ಗ್ರಾಮಸ್ಥರೊಂದಿಗೆ ಹುಡುಕಾಟ ನಡಸಿದರೂ ಪತ್ತೆಯಾಗಲಿಲ್ಲ. ಮರುದಿನ ಸುಳ್ಯ ಅಗ್ನಿಶಾಮಕದಳದವರು ಮತ್ತು ಊರವರು ಹುಡುಕಲು ಪ್ರಾರಂಭಿಸಿದರೂ ಸಂಜೆಯವರಗೆ ಮಹಿಳೆಯ ಶವ ಪತ್ತೆಯಾಗಲಿಲ್ಲ. ಭಾನುವಾರ ನಂತರ ಕಾರ್ಯಾಚರಣೆ ಮೊಟಕುಗೊಳಿಸಿ ಇಂದು

ಬಟ್ಟೆ‌ತೊಳೆಯಲು ಹೊಳೆಗೆ ಹೋದ ಮಹಿಳೆ ನಾಪತ್ತೆ Read More »

ಸುಳ್ಯ| ಹಿಂಸಾತ್ಮಕವಾಗಿ ಅಕ್ರಮ ಜಾನುವಾರು ಸಾಗಾಟ| ಆರೋಪಿ ಖಾಕಿ ಬಲೆಗೆ|

ಸುಳ್ಯ: ಓಮ್ನಿ ಕಾರೊಂದರಲ್ಲಿ ಅಕ್ರಮವಾಗಿ ಎರಡು ದನಗಳನ್ನು ಸಾಗಾಟ ಮಾಡುತ್ತಿದ್ದಾಗ ಕಾರನ್ನು ಪೊಲೀಸರು ಅಡ್ಡಗಟ್ಟಿದ್ದು, ಓರ್ವ ಆರೋಪಿ ಪೊಲೀಸ್ ಕೈಗೆ ಸಿಕ್ಕಿಹಾಕಿಕೊಂಡ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ಕಾರಿನಲ್ಲಿ ಜಾನುವಾರು ಸಾಗಾಟ ಮಾಡುತ್ತಿದ್ದ ಸಂದರ್ಭದಲ್ಲಿ ಸಾಗಾಟಗಾರರು ತಪ್ಪಿಸಿಕೊಳ್ಳಲೆತ್ನಿಸಿದ್ದು ಈ ವೇಳೆ ವಾಹನ ನಗರದ ಜಟ್ಟಿಪಳ್ಳ ಸಮೀಪ ಕಂಪೌಂಡಿಗೆ ಗುದ್ದಿತ್ತು. ಈ ಕುರಿತು ಖಚಿತ ಮಾಹಿತಿ ಮೇರೆಗೆ ಸುಳ್ಯ ಮತ್ತು ಎಸ್. ಐ.ಯವರು ಕಾರನ್ನು ತಡೆಗಟ್ಟಿ ಓರ್ವ ಆರೋಪಿಯನ್ನು ವಶಕೊಂಡಿದ್ದಾರೆ. ಮೂರು ಮಂದಿ ಕಾರಿನಲ್ಲಿ ದನಗಳನ್ನು ತುಂಬಿಸಿಕೊಂಡು ಹೋಗುತ್ತಿರುವ

ಸುಳ್ಯ| ಹಿಂಸಾತ್ಮಕವಾಗಿ ಅಕ್ರಮ ಜಾನುವಾರು ಸಾಗಾಟ| ಆರೋಪಿ ಖಾಕಿ ಬಲೆಗೆ| Read More »

ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ|ಪೋಕ್ಸೊ ಕಾಯಿದೆಯಡಿ ಆರೋಪಿ ಬಂಧನ

ಉಳ್ಳಾಲ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿಯನ್ನು ಸಾಮಾಜಿಕ ಕಾರ್ಯಕರ್ತ ಸೇರಿದಂತೆ ಸಾರ್ವಜನಿಕರು ಹಿಡಿದು ಉಳ್ಳಾಲ ಠಾಣಾ ಪೊಲೀಸರ ವಶಕ್ಕೆ ಒಪ್ಪಿಸಿದ್ದು, ಆರೋಪಿ ವಿರುದ್ಧ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗಿದೆ. ಮೂಲತ: ಬೆಂಗಳೂರು ಕಲಾಸಿಪಾಳ್ಯ ನಿವಾಸಿ ಸದ್ಯ ಕಲ್ಕಟ್ಟದಲ್ಲಿ ವಾಸಿಸುವ ಆರೀಫ್ ಪಾಷಾ(30) ಬಂಧಿತ. ಆರೋಪಿ ಕೂಲಿ ಕಾರ್ಮಿಕನಾಗಿದ್ದಾನೆ. ತಿನ್ನಲು ಮಾಂಸ ಕೊಡಿಸುವುದಾಗಿ ನಂಬಿಸಿ ಬಾಲಕಿ ತಂದೆಗೆ ಪರಿಚಿತನಾಗಿರುವ ಆರೋಪಿ, ಮನೆಯಿಂದಲೇ ಕರೆತಂದು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಈತನ ಕೃತ್ಯದಿಂದ ಗಾಬರಿಗೊಂಡ

ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ|ಪೋಕ್ಸೊ ಕಾಯಿದೆಯಡಿ ಆರೋಪಿ ಬಂಧನ Read More »

ಗುಜರಾತ್ ನೂತನ ಸಿಎಂ ಆಗಿ ಭೂಪೇಂದ್ರ ಪಟೇಲ್

ಗುಜರಾತ್ ನ ನೂತನ ಸಿಎಂ ಆಗಿ ಭೂಪೇಂದ್ರ ಪಟೇಲ್ ಅವರು ಆಯ್ಕೆಯಾಗಿದ್ದಾರೆ. ನೂತನ ಸಿಎಂ ಆಯ್ಕೆ ಸಂಬಂಧ ಇಂದು ನಡೆದ ಬಿಎಲ್ ಪಿ ಸಭೆಯಲ್ಲಿ ಭೂಪೇಂದ್ರ ಪಟೇಲ್ ಅವರನ್ನು ಸಿಎಂ ಆಗಿ ಆಯ್ಕೆ ಮಾಡಲಾಗಿದೆ. ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಬಿಜೆಪಿ ವೀಕ್ಷಕರು ಹಾಗೂ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಹಾಗೂ ನರೇಂದ್ರ ಸಿಂಗ್ ತೋಮರ್ ನೂತನ ಸಿಎಂ ಆಯ್ಕೆಯನ್ನು ಘೋಷಿಸಿದರು. ಬಿಎಲ್ ಪಿ ಸಭೆಯಲ್ಲಿ ವಿಜಯ್ ರೂಪಾನಿ ಅವರು ಸಿಎಂ ಆಗಿ ಯಾರನ್ನು ಆಯ್ಕೆ ಮಾಡಬೇಕೆಂಬ

ಗುಜರಾತ್ ನೂತನ ಸಿಎಂ ಆಗಿ ಭೂಪೇಂದ್ರ ಪಟೇಲ್ Read More »