Editor

ದೇಶದಲ್ಲಿ ಮತ್ತೆ ಏರಿಕೆಯತ್ತ ಕೊರೊನಾ| ಇದು ಮೂರನೇ ಅಲೆ ಸೂಚನೆಯೇ?

ನವದೆಹಲಿ: ದೇಶದಲ್ಲಿ ಕೊರೊನಾ ಮೂರನೇ ಅಲೆ ಆತಂಕ ಎದುರಾಗಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರುತ್ತಿದೆ. ಕಳೆದ 24 ಗಂಟೆಯಲ್ಲಿ 47,092 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 3,28,57,937ಕ್ಕೆ ಏರಿಕೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆ ಕೊಂಚ ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 509 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 439529 ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿ 389583 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 […]

ದೇಶದಲ್ಲಿ ಮತ್ತೆ ಏರಿಕೆಯತ್ತ ಕೊರೊನಾ| ಇದು ಮೂರನೇ ಅಲೆ ಸೂಚನೆಯೇ? Read More »

ಹಿರಿಯ ಪತ್ರಕರ್ತ ಚಂದನ್ ಮಿತ್ರಾ‌ ವಿಧಿವಶ

ನವದೆಹಲಿ: ಮಾಜಿ ರಾಜ್ಯಸಭಾ ಸದಸ್ಯ ಹಾಗೂ ಖ್ಯಾತ ಹಿರಿಯ ಪತ್ರಕರ್ತ ಚಂದನ್ ಮಿತ್ರಾ ಅವರು ಗುರುವಾರ ನಿಧನರಾಗಿದ್ದಾರೆ. ಅವರಿಗೆ 65 ವರ್ಷ ವಯಸ್ಸಾಗಿತ್ತು. ಈ ಕುರಿತಂತೆ ಚಂದನ್ ಮಿತ್ರಾ ಅವರ ಪುತ್ರ ಕುಶನ್ ಮಿತ್ರಾ ಅವರು ಮಾಹಿತಿ ನೀಡಿದ್ದು, ಟ್ವೀಟ್ ಮಾಡಿ ತಮ್ಮ ನೋವು ಹಂಚಿಕೊಂಡಿದ್ದಾರೆ. ಚಂದನ್ ಮಿತ್ರಾ ದೆಹಲಿಯ ದಿ ಪಯೋನಿಯರ್ ಪತ್ರಿಕೆಯ ಸಂಪಾದಕ ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿದ್ದರು. ಅಲ್ಲದೆ ಅವರು ಎರಡು ಬಾರಿ ರಾಜ್ಯಸಭೆಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು – ಮೊದಲಿಗೆ 2003 ರಿಂದ

ಹಿರಿಯ ಪತ್ರಕರ್ತ ಚಂದನ್ ಮಿತ್ರಾ‌ ವಿಧಿವಶ Read More »

ಅಪ್ಘಾನ್ ನಲ್ಲಿ ಸಕ್ರಿಯರಾಗಿದ್ದಾರೆ ಭಾರತದ ಮೋಸ್ಟ್ ವಾಂಟೆಂಡ್ ಟೆರರಿಸ್ಟ್| 25 ಮಂದಿಯಲ್ಲಿ ಕೇರಳದವರೇ ಹೆಚ್ಚು…!

ಕಾಬೂಲ್, ಸೆ.1: ಭಾರತದಲ್ಲಿ ಮೋಸ್ಟ್ ವಾಂಟೆಡ್ ಲಿಸ್ಟ್ ನಲ್ಲಿರುವ 25ಕ್ಕೂ ಹೆಚ್ಚು ಮಂದಿ ಉಗ್ರರು ಅಪ್ಘಾನಿಸ್ತಾನದಲ್ಲಿ ಸಕ್ರಿಯರಾಗಿದ್ದಾರೆ ಎಂಬ ಮಾಹಿತಿಯನ್ನು ಗುಪ್ತಚರ ಮೂಲಗಳು ತಿಳಿಸಿವೆ. ಇತ್ತೀಚೆಗೆ ಕಾಬೂಲನ್ನು ತಾಲಿಬಾನಿಗಳು ವಶಕ್ಕೆ ಪಡೆಯುತ್ತಿದ್ದಂತೆ, ಅಲ್ಲಿನ ಜೈಲಿನಲ್ಲಿದ್ದ ಸಾವಿರಾರು ಕೈದಿಗಳನ್ನು ಹೊರಕ್ಕೆ ಬಿಡಲಾಗಿತ್ತು. ಅದರಲ್ಲಿ ಹಲವು ಭಾರತ ಮೂಲದವರೂ ಇದ್ದರು ಎನ್ನಲಾಗಿದ್ದು, ಇದೀಗ ಅಫ್ಘಾನಿಸ್ತಾನದ ನಂಗರ್ಹರ್ ಪ್ರಾಂತ್ಯದಲ್ಲಿ ಬೀಡುಬಿಟ್ಟಿದ್ದಾರೆ ಎನ್ನಲಾಗುತ್ತಿದೆ. 25 ಮಂದಿಯ ಪೈಕಿ ಹೆಚ್ಚಿನವರು ಭಾರತದ ಕೇರಳದವರು ಎನ್ನುವ ಮಾಹಿತಿಯನ್ನು ಗುಪ್ತಚರ ಪಡೆಗಳು ಹೇಳುತ್ತಿವೆ. ಕಳೆದ ವಾರ ಕಾಬೂಲ್

ಅಪ್ಘಾನ್ ನಲ್ಲಿ ಸಕ್ರಿಯರಾಗಿದ್ದಾರೆ ಭಾರತದ ಮೋಸ್ಟ್ ವಾಂಟೆಂಡ್ ಟೆರರಿಸ್ಟ್| 25 ಮಂದಿಯಲ್ಲಿ ಕೇರಳದವರೇ ಹೆಚ್ಚು…! Read More »

GDP ಏರಿಕೆ ಎಂದರೆ ಗ್ಯಾಸ್, ಡೀಸೆಲ್‌, ಪೆಟ್ರೋಲ್ ಬೆಲೆಯೇರಿಕೆ – ಕೇಂದ್ರದ ವಿರುದ್ದ ರಾಗಾ ವಾಗ್ದಾಳಿ

ನವದೆಹಲಿ: ಅಡುಗೆ ಅನಿಲ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಜಿಡಿಪಿಯ ಹೊಸ ಪರಿಕಲ್ಪನೆ ಇದೆ. ಅಲ್ಲಿ ಜಿಡಿಪಿ ಏರಿಕೆ ಎಂದರೆ ಗ್ಯಾಸ್, ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಏರಿಕೆ. ‘ಜಿಡಿಪಿ ಏರುತ್ತಿದೆ ಎಂದು ಮೋದಿ ಜೀ ಹೇಳುತ್ತಲೇ ಇದ್ದಾರೆ, ಜಿಡಿಪಿ ಮೇಲ್ಮುಖವಾಗಿದೆ ಎಂದು ಹಣಕಾಸು ಸಚಿವರು ಹೇಳುತ್ತಾರೆ. ಜಿಡಿಪಿ- ಇದರ ಅರ್ಥವೇನೆಂದು ನನಗೆ ಈಗ ಅರ್ಥವಾಯಿತು.

GDP ಏರಿಕೆ ಎಂದರೆ ಗ್ಯಾಸ್, ಡೀಸೆಲ್‌, ಪೆಟ್ರೋಲ್ ಬೆಲೆಯೇರಿಕೆ – ಕೇಂದ್ರದ ವಿರುದ್ದ ರಾಗಾ ವಾಗ್ದಾಳಿ Read More »

ರಾಜ್ಯ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ ಸಬ್‌ ಇನ್ಸ್​ಪೆಕ್ಟರ್​ ಹುದ್ದೆಗಳ ನೇಮಕಾತಿಗೆ ನಿಗದಿಯಾಗಿದ್ದ ಲಿಖಿತ ಪರೀಕ್ಷೆ ದಿನಾಂಕವನ್ನು ತಾಂತ್ರಿಕ ಸಮಸ್ಯೆಯಿಂದ ಇಲಾಖೆ ಮುಂದೂಡಿದೆ. 545 ಸಬ್​ ಇನ್ಸ್​ಪೆಕ್ಟರ್ ಹುದ್ದೆಗಳ ನೇಮಕಾತಿಗೆ ಸೆಪ್ಟೆಂಬರ್ 26ಕ್ಕೆ ಲಿಖಿತ ಪರೀಕ್ಷೆ ನಡೆಸಲು ನಿರ್ಧರಿಸಲಾಗಿತ್ತು. ಆದರೆ, ತಾಂತ್ರಿಕ ಸಮಸ್ಯೆಯಿಂದ ಅಂದು ಪರೀಕ್ಷೆ ನಡೆಸಲು ಸಾಧ್ಯವಾಗುತ್ತಿಲ್ಲ. ಬದಲಿಗೆ ಅಕ್ಟೋಬರ್ 3ರ ಬೆಳಗ್ಗೆ 10.30 ರಿಂದ 12 ಗಂಟೆ ವರೆಗೆ ಪತ್ರಿಕೆ-1 ಮತ್ತು ಮಧ್ಯಾಹ್ನ 1.30ರಿಂದ 3 ಗಂಟೆ ವರೆಗೆ ಪತ್ರಿಕೆ-2 ನಡೆಸಲು ನಿರ್ಧರಿಸಲಾಗಿದೆ ಎಂದು ಪೊಲೀಸ್

ರಾಜ್ಯ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಪರೀಕ್ಷೆ ಮುಂದೂಡಿಕೆ Read More »

ಗಣೇಶ ಹಬ್ಬಕ್ಕೆ ಇನ್ನೆಲ್ಲೂ ಸಿಗದ ಆಫರ್ ನೀಡಿದ ವೆಂಕಟರಮಣ ಸೊಸೈಟಿ| ಕೇವಲ 10% ಬಡ್ಡಿಗೆ ಹೊಸ ವಾಹನ ಸಾಲ

ಸುಳ್ಯ: ಸುಳ್ಯದ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ವತಿಯಿಂದ ಗಣೇಶ ಹಬ್ಬದ ಪ್ರಯುಕ್ತ ಸೆ.1ರಿಂದ 30ರವರೆಗೆ ಖರೀದಿಸುವ ಹೊಸ ವಾಹನಕ್ಕೆ ಶೆ.10ರ ಬಡ್ಡಿ ದರದಲ್ಲಿ ಶೀಘ್ರ ವಾಹನ ಸಾಲ ವಿತರಣೆ ಮಾಡುವ ಯೋಜನೆ ಹಮ್ಮಿಕೊಂಡಿದೆ. ಈ ಆಫರ್ ಕೇವಲ ಒಂದು ತಿಂಗಳ ಅವಧಿಯದ್ದಾಗಿದ್ದು, ಸೂಕ್ತ ದಾಖಲೆ‌ ಒದಗಿಸಿದಲ್ಲಿ ತಕ್ಷಣ ಸಾಲ ವಿತರಿಸುವ ಭರವಸೆಯನ್ನು ಸಂಸ್ಥೆಯ ಪ್ರಕಟಣೆ ತಿಳಿಸಿದೆ. ಹೊಸ ವಾಹನ ಖರೀದಿಸುವ ಗ್ರಾಹಕರಿಗೆ ಇದೊಂದು ಉತ್ತಮ ಆಫರ್ ಆಗಿದ್ದು, ಸಂಘವು ಸುಳ್ಯ, ಪುತ್ತೂರು, ಬಿ.ಸಿ

ಗಣೇಶ ಹಬ್ಬಕ್ಕೆ ಇನ್ನೆಲ್ಲೂ ಸಿಗದ ಆಫರ್ ನೀಡಿದ ವೆಂಕಟರಮಣ ಸೊಸೈಟಿ| ಕೇವಲ 10% ಬಡ್ಡಿಗೆ ಹೊಸ ವಾಹನ ಸಾಲ Read More »

ಗಣೇಶ ಹಬ್ಬಕ್ಕೆ ‘ಲಂಕೆ’ ಬಿಡುಗಡೆ| ಬ್ರೇಕ್ ನ ನಿರೀಕ್ಷೆಯಲ್ಲಿ ಲೂಸ್ ಮಾದ ಯೋಗಿ

ಲೂಸ್ ಮಾದ ಯೋಗಿ ಅಭಿನಯದ ಲಂಕೆ ಚಿತ್ರ ಗಣೇಶ ಹಬ್ಬದ ಹಬ್ಬದ ಸಮಯದಲ್ಲಿ ತೆರೆಗೆ ಬರಲು ಸಿದ್ಧವಾಗಿದ್ದು ಸೆಪ್ಟೆಂಬರ್ 10ಕ್ಕೆ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಅಂತಿಮಗೊಳಿಸಿದೆ. ರಾಮ್ ಪ್ರಸಾದ್ ನಿರ್ದೇಶನದ ಲಂಕೆ ಚಿತ್ರವನ್ನು ಆರಂಭದಲ್ಲಿ ಜುಲೈ 19ರಂದು ಬಿಡುಗಡೆ ಮಾಡಲು ಯೋಜಿಸಲಾಗಿತ್ತು. ಕೊರೋನಾ ಅಬ್ಬರ ಹಿನ್ನಲೆಯಲ್ಲಿ ಸರ್ಕಾರ ಚಿತ್ರಮಂದಿರಗಳಲ್ಲಿ ಶೇಕಡ 50ರಷ್ಟು ಮಾತ್ರ ಆಸನಗಳ ಭರ್ತಿಗೆ ಅವಕಾಶ ನೀಡಿದ್ದರಿಂದ ಚಿತ್ರದ ಬಿಡುಗಡೆಯನ್ನು ಮುಂದೂಡಲಾಗಿತ್ತು. ನಂತರ ಬಿಡುಗಡೆ ದಿನಾಂಕವನ್ನು ಆಗಸ್ಟ್ 20ಕ್ಕೆ ಮುಂದೂಡಲಾಯಿತು. ಅಂದ ಸಹ ಚಿತ್ರ ಬಿಡುಗಡೆಯಾಗಲಿಲ್ಲ.

ಗಣೇಶ ಹಬ್ಬಕ್ಕೆ ‘ಲಂಕೆ’ ಬಿಡುಗಡೆ| ಬ್ರೇಕ್ ನ ನಿರೀಕ್ಷೆಯಲ್ಲಿ ಲೂಸ್ ಮಾದ ಯೋಗಿ Read More »

ಪುತ್ತೂರು: ಠಾಣೆ ಮೆಟ್ಟಿಲೇರಿಸಿದ ಯುವಕ- ಯುವತಿಯ ಲವ್| ಪ್ರೀತಿ ಅರಸಿ ಬಂದಾತನಿಗೆ ಪೊಲೀಸ್ ಡ್ರಿಲ್|

ಪುತ್ತೂರು: ಇನ್ಸ್ಟ್ರಾಗ್ರಾಂ ಮೂಲಕ ಪರಿಚಯವಾದ ಯುವತಿಯೋರ್ವಳನ್ನು ಭೇಟಿಯಾಗಲು ಬಂದಾತ ಆಕೆಯ ಜೊತೆಗೆ ಠಾಣೆ ಮೆಟ್ಟಿಲೇರಿದ ಘಟನೆ ಪುತ್ತೂರಲ್ಲಿ ನಡೆದಿದೆ.ರಾಯಚೂರು ಮೂಲದ ಯುವಕನೋರ್ವ ಪುತ್ತೂರಿನ ಯುವತಿಯೋರ್ವಳನ್ನು ಇನ್ಸ್ಟಾಗ್ರಾಂನಲ್ಲಿ ಪರಿಚಯ ಮಾಡಿಕೊಂಡು ಸಂಪರ್ಕ ಮಾಡಲು ತನ್ನ ಸ್ನೇಹಿತನ ಜೊತೆ ಪುತ್ತೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಕ್ಕೆ ಬಂದಿದ್ದ. ಇದನ್ನು ಗಮನಿಸಿದ ತಂಡವೊಂದು ಅವರನ್ನು ಪ್ರಶ್ನಿಸಿದಾಗ ಮಾತಿನ ಚಕಮಕಿ ನಡೆದು ತುಸು ಗೊಂದಲ ಉಂಟಾಯಿತು. ಅನುಮಾನಗೊಂಡ ಆ ತಂಡದ ಕೆಲವರು ಯುವಕ ಮತ್ತು ಯುವತಿಯರನ್ನು ಪೊಲೀಸ್ ಠಾಣೆಗೆ ಕರೆದೊಯ್ದಿದ್ದಾರೆ. ಇನ್ಟ್ರಾಗ್ರಾಂ ಮೂಲಕ ಯುವಕ

ಪುತ್ತೂರು: ಠಾಣೆ ಮೆಟ್ಟಿಲೇರಿಸಿದ ಯುವಕ- ಯುವತಿಯ ಲವ್| ಪ್ರೀತಿ ಅರಸಿ ಬಂದಾತನಿಗೆ ಪೊಲೀಸ್ ಡ್ರಿಲ್| Read More »

ಬದುಕನ್ನು ಬರ್ಬಾದ್ ಆಗಿಸಿದ ಕೌನ್ ಬನೇಗಾ ಕರೋಡ್ ಪತಿ| ಐದು ಕೋಟಿ ಗೆದ್ದಾತ ದಿವಾಳಿ

KBC ಸೀಸನ್ 5ರಲ್ಲಿ ಭಾಗವಹಿಸಿ ಬರೋಬ್ಬರಿ 5 ಕೋಟಿ ರೂಪಾಯಿ ಗೆದ್ದ ಸುಶೀಲ್ ಕುಮಾರ್ ಭಾರೀ ಸುದ್ದಿಯಾಗಿದ್ದರು. 2011ರಲ್ಲಿ ಅಮಿತಾಭ್ ಬಚ್ಚನ್ ಬಿಹಾರದ ಸುಶೀಲ್ ಕುಮಾರ್ ಅವರಿಗೆ 5 ಕೋಟಿಯ ಚೆಕ್ ನೀಡಿದ್ದರು. ಎಲ್ಲರಿಗೂ ಕೆಬಿಸಿ ನಂತರ ಅದೃಷ್ಟ ಖುಲಾಯಿಸುತ್ತಾದರೂ ಸುಶೀಲ್ ಕುಮಾರ್ ದುರಾದೃಷ್ಟ ಶುರುವಾಗಿದ್ದೇ ಕೆಬಿಸಿ ಗೆದ್ದ ಮೇಲೆ. ನನ್ನ ಜೀವನದ ಅತ್ಯಂತ ಕೆಟ್ಟ ಭಾಗ ಕೆಬಿಸಿ ಗೆದ್ದ ಮೇಲೆ ಪ್ರಾರಂಭವಾಯ್ತು ಎಂದಿದ್ದಾರೆ ಸುಶೀಲ್.2015-2016 ನನ್ನ ಜೀವನದ ಅತ್ಯಂತ ಸವಾಲಿನ ಸಮಯ. ನನಗೆ ಏನು ಮಾಡಬೇಕೆಂದು

ಬದುಕನ್ನು ಬರ್ಬಾದ್ ಆಗಿಸಿದ ಕೌನ್ ಬನೇಗಾ ಕರೋಡ್ ಪತಿ| ಐದು ಕೋಟಿ ಗೆದ್ದಾತ ದಿವಾಳಿ Read More »

ಲಸಿಕೆ ಹಾಕಿಸಿಕೊಳ್ಳದವರಿಗೆ ಸರ್ಕಾರಿ ಸೌಲಭ್ಯ ಕಡಿತ| ವೈರಲ್ ಆದ ಸುದ್ದಿಯ ಅಸಲಿಯತ್ತೇನು?

ಚಾಮರಾಜನಗರ : ಇಂದು ರಾಜ್ಯಾದ್ಯಂತ ವಿಶೇಷ ಕೊರೋನಾ ಲಸಿಕಾ ಉತ್ಸವ ನಡೆಸಲಾಗುತ್ತಿದೆ. ಈ ಸಂದರ್ಭದಲ್ಲಿ ಅನೇಕ ಆಸ್ಪತ್ರೆಗಳ ಮುಂದೆ ಲಸಿಕೆ ಪಡೆಯಲು ಜನರು ಮುಗಿಬಿದ್ದಿದ್ದಾರೆ. ಮತ್ತೊಂದೆಡೆ ಕೊರೋನಾ ಲಸಿಕೆ ಪಡೆಯದಿದ್ದರೇ, ನೋ ರೇಷನ್, ನೋ ಪೆನ್ಷನ್ ಎಂಬುದಾಗಿ ಆದೇಶಿಸಲಾಗಿದೆ ಎಂದು ಸುದ್ದಿಯೊಂದು ಹರಿದಾಡುತ್ತಿದೆ. ಆದರೆ ಅಸಲಿಗೆ ಈ ಸುದ್ದಿಯ ನಿಖರತೆ ಏನು ಎಂದು ಸ್ವತಃ ಡಿಸಿ ಎಂ.ಆರ್ ರವಿ ಸ್ಪಷ್ಟಪಡಿಸಿದ್ದಾರೆ. ಹಾಗಾದರೆ ಈ ಬಗ್ಗೆ ಚಾಮರಾಜನಗರ ಜಿಲ್ಲಾಧಿಕಾರಿಗಳು ಹೇಳಿದ್ದೇನು?… ಇಲ್ಲಿದೆ ಮಾಹಿತಿ. ಚಾಮರಾಜನಗರ ಜಿಲ್ಲಾಧಿಕಾರಿಗಳು ಈ ಕುರಿತು

ಲಸಿಕೆ ಹಾಕಿಸಿಕೊಳ್ಳದವರಿಗೆ ಸರ್ಕಾರಿ ಸೌಲಭ್ಯ ಕಡಿತ| ವೈರಲ್ ಆದ ಸುದ್ದಿಯ ಅಸಲಿಯತ್ತೇನು? Read More »