Editor

ಗದ್ದೆಗಿಳಿದು ನಾಟಿ ಮಾಡಿದ ಶೋಭಾ ಕರಂದ್ಲಾಜೆ

ಮಂಡ್ಯ ತಾಲೂಕಿನ ಸಾತನೂರು ಬಳಿ ಕೇಂದ್ರ ಕೃಷಿ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಅವರು ಗದ್ದೆಯಲ್ಲಿ ನಾಟಿ ಮಾಡಿ ಗಮನ ಸೆಳೆದಿದ್ದಾರೆ. ಕೃಷಿ ಸಚಿವರಾಗಿ ಮೊದಲ ಬಾರಿಗೆ ಮಂಡ್ಯಕ್ಕೆ ಆಗಮಿಸಿದ ಅವರು ಜನಾಶೀರ್ವಾದಕ್ಕೆ ಚಾಲನೆ ನೀಡಿ ನಂತರ ಸಾತನೂರಿನ ಕೃಷಿ ಜಮೀನೊಂದರಲ್ಲಿ ರೈತ ಮಹಿಳೆಯರೊಂದಿಗೆ ಗದ್ದೆಗಿಳಿದ ಸಚಿವೆ ಭತ್ತದ ಪೈರು ಹಿಡಿದು ನಾಟಿ ಮಾಡಿದರು. ಕೃಷಿಕ ಮಹಿಳೆಯರಂತೆ ನಾಟಿ ಮಾಡಿದ್ದು ವಿಶೇಷವಾಗಿತ್ತು. ನಂತರ ಆಲೆಮನೆಗೆ ಭೇಟಿ ನೀಡಿ ಬೆಲ್ಲ ತಯಾರಿಕೆಯ ಬಗ್ಗೆ ಮಾಹಿತಿ ಪಡೆದರು. ಜನರನ್ನು […]

ಗದ್ದೆಗಿಳಿದು ನಾಟಿ ಮಾಡಿದ ಶೋಭಾ ಕರಂದ್ಲಾಜೆ Read More »

ಸಿಲಿಂಡರ್ ಸ್ಫೋಟ: ಓರ್ವ ಸಾವು, ಚಿಂತಾಜನಕ ಸ್ಥಿಯಲ್ಲಿ ಒಂದು ವರ್ಷದ ಮಗು

ಹುಬ್ಬಳ್ಳಿ: ಇಲ್ಲಿನ ಕಲಘಟಗಿ ಎಂಬಲ್ಲಿ ಮನೆಯೊಂದರಲ್ಲಿ ಸಿಲಿಂಡರ್ ಸ್ಫೋಟಗೊಂಡು ವ್ಯಕ್ತಿಯೊರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಕಲಘಟಗಿ ತಾಲೂಕಿನ ತಬಕದ ಹೊನ್ನಳ್ಳಿ ಗ್ರಾಮದ ತಮ್ಮಣ್ಣವರ ಮನೆಯಲ್ಲಿ ಘಟನೆ ನಡೆದಿದೆ. ಸ್ಫೋಟದ ತೀವ್ರತೆಯಿಂದ ಯಲ್ಲಪ್ಪ(35) ಎಂಬ ಸ್ಥಳದಲ್ಲೇ ಸಾವನ್ನಪ್ಪಿದ್ದು, ಒಂದು ವರ್ಷದ ಮಗು ಸಾವು ಬದುಕಿನ ಮಧ್ಯೆ ಹೋರಾಟ ನಡೆಸುವಂತಾಗಿದೆ. ಇದೀಗ ಗಾಯಾಳು ಮಗುವನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಸಿಲಿಂಡರ್ ಸ್ಫೋಟದ ತ್ರೀವತ್ರೆಗೆ ಮನೆಯ ಮೇಲ್ಛಾವಣಿ ಸಹ ಕುಸಿದಿದ್ದು, ಅದೃಷ್ಟವಶಾತ್ ಮನೆಯಲ್ಲಿದ್ದ ಉಳಿದವರು ಬಚಾವ್ ಆಗಿದ್ದಾರೆ. ಘಟನೆಯ ಕುರಿತು

ಸಿಲಿಂಡರ್ ಸ್ಫೋಟ: ಓರ್ವ ಸಾವು, ಚಿಂತಾಜನಕ ಸ್ಥಿಯಲ್ಲಿ ಒಂದು ವರ್ಷದ ಮಗು Read More »

ಅಕ್ಕನ ಜೊತೆ ಜಗಳವಾಡಿದ ಬಾವನ ಕೈ ಕತ್ತರಿಸಿದ ಬಾಮೈದ

ಮೈಸೂರು: ಗಂಡ ಹೆಂಡತಿ ನಡುವೆ ಗಲಾಟೆಯಾಗಿದ್ದ ಬಾಮೈದ ಬಾವನನ್ನೇ ಕೊಂದು ಹಾಕಿದ ಘಟನೆ ಮೈಸೂರಿನ ಗೌಸಿಯಾನಗರದಲ್ಲಿ ನಡೆದಿದೆ. ಮಹಮದ್ ಸರಾನ್ (27) ಕೊಲೆಯಾದವನು. ಕಳೆದ ಐದು ತಿಂಗಳ ಹಿಂದಷ್ಟೇ ಮಹಮ್ಮದ್ ಸರಾನ್ ಮತ್ತು ರೂಬೀನಾ ಎಂಬುವರನ್ನ ಮದುವೆಯಾಗಿದ್ದರು. ಇಬ್ಬರ ನಡುವೆ ಜಗಳ ಶುರುವಾಗಿತ್ತು. ಈ ಜಗಳದಲ್ಲಿ ಪತ್ನಿ ಕಡೆಯ ಸಂಬಂಧಿಕರು ಮಧ್ಯೆ ಪ್ರವೇಶಿಸಿದ್ದಾರೆ. ಜಗಳ ಅತಿರೇಕಕ್ಕೆ ಹೋಗಿದ್ದು ಪತ್ನಿಯ ಸಂಬಂಧಿಕರು ಪತಿ ಮಹಮದ್ ಸರಾನ್​ನ್ನು ಹತ್ಯೆಗೈದಿದ್ದಾರೆ. ಅಲ್ಲದೇ ಮಹಮದ್ ಸರಾನ್​ನ ಬಾಮೈದ ಕದೀರ್ ತನ್ನ ಬಾವನ ಕೈ

ಅಕ್ಕನ ಜೊತೆ ಜಗಳವಾಡಿದ ಬಾವನ ಕೈ ಕತ್ತರಿಸಿದ ಬಾಮೈದ Read More »

ಕುವೈಟ್ : ಬಹುಪತ್ನಿ ವಲ್ಲಭನ ಮದುವೆಯಾಗಿ ಮೋಸ ಹೋದ ಮಂಗಳೂರಿನ ಮಹಿಳೆ| ನ್ಯಾಯಕ್ಕಾಗಿ ತಾಯ್ನಾಡಿಗೆ ಮೊರೆ|

ಕುವೈಟ್: ಮಂಗಳೂರು ಮೂಲದ ಮಹಿಳೆಯೊಬ್ಬಳನ್ನು ಬಹುಪತ್ನಿ ವಲ್ಲಭನೋರ್ವ ಮೋಸದಿಂದ ಮದುವೆಯಾಗಿ ಕುವೈಟ್‌ನಲ್ಲಿ 6 ವರ್ಷಗಳಿಂದ ಗೃಹಬಂಧನದಲ್ಲಿ ಇರಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಸಂತ್ರಸ್ತ ಮಹಿಳೆ ಈಗ ನ್ಯಾಯಕ್ಕಾಗಿ ತಾಯ್ನಾಡಿನ ಪೊಲೀಸರ ಮೊರೆ ಹೋಗಲು ನಿರ್ಧರಿಸಿದ್ದಾರೆ. ಎರಡು ವಿವಾಹವಾಗಿ ವಿಚ್ಛೇದನ ಪಡೆದಿದ್ದೇನೆ ಎಂದು ಹೇಳಿ ಮೂರನೇ ವಿವಾಹವಾಗಿ, ಇಬ್ಬರು ಪತ್ನಿಯರ ಜತೆ ಕುವೈಟ್‌ನಲ್ಲಿ ಕದ್ದುಮುಚ್ಚಿ ಜೀವನ ನಡೆಸುತ್ತಿದ್ದ ಎಂದು ತಿಳಿದುಬಂದಿದೆ. ಆತ ಮೊದಲ ಪತ್ನಿ ಮತ್ತು ಪುತ್ರನ ಜತೆ ಕುವೈಟ್‌ಗೆ ಮತ್ತೆ ತೆರಳಲು ಸಿದ್ಧತೆ ನಡೆಸಿರುವಂತೆಯೇ ಮಂಗಳೂರು ಮೂಲದ

ಕುವೈಟ್ : ಬಹುಪತ್ನಿ ವಲ್ಲಭನ ಮದುವೆಯಾಗಿ ಮೋಸ ಹೋದ ಮಂಗಳೂರಿನ ಮಹಿಳೆ| ನ್ಯಾಯಕ್ಕಾಗಿ ತಾಯ್ನಾಡಿಗೆ ಮೊರೆ| Read More »

ಮೂರು ತಿಂಗಳ ಹಸುಳೆ ಮೇಲೆ ಎರಗಿದ ಅಪ್ರಾಪ್ತ ವಿಕೃತಕಾಮಿ

ಮೂರು ತಿಂಗಳ ಹಸುಳೆ ಮೇಲೆ 17 ವರ್ಷದ ಅಪ್ರಾಪ್ತನೊಬ್ಬ ಅತ್ಯಾಚಾರವೆಸಗಿದ ಅಮಾನವೀಯ ಘಟನೆ ಉತ್ತರ ಪ್ರದೇಶದ ಎಟಾ ಜಿಲ್ಲೆಯ ಬಗ್ವಾಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹಸುಳೆಯ ತಾಯಿ ಎಮ್ಮೆಗಳನ್ನು ಕಟ್ಟಲು ಹೋಗಿದ್ದ ವೇಳೆ ಈತ ಹೀಗೆ ಮಾಡಿದ್ದಾನೆ. ಎಮ್ಮೆಗಳನ್ನು ಕಟ್ಟಿ ಮರಳಿದ ತಾಯಿ ಅಳುತ್ತಿದ್ದ ತನ್ನ ಮಗುವನ್ನು ಅಪ್ರಾಪ್ತ ಸಮಾಧಾನ ಮಾಡುತ್ತಿರುವುದನ್ನು ಕಂಡಿದ್ದಾರೆ. ಈ ವೇಳೆ ಮಗುವಿನ ಖಾಸಗಿ ಅಂಗದಲ್ಲಿ ಗಾಯವಾಗಿ ತೀವ್ರ ರಕ್ತಸ್ರಾವವಾಗುತ್ತಿರುವುದನ್ನು ಕಂಡ ಮಗುವಿನ ತಾಯಿಗೆ ಅಲ್ಲಿ ಏನಾಗಿದೆ ಎಂಬುದು ಅರಿವಿಗೆ ಬಂದಿದೆ.

ಮೂರು ತಿಂಗಳ ಹಸುಳೆ ಮೇಲೆ ಎರಗಿದ ಅಪ್ರಾಪ್ತ ವಿಕೃತಕಾಮಿ Read More »

ಸ್ಯಾಂಡಲ್ ವುಡ್ ಹಿರಿಯ ನಿರ್ಮಾಪಕ ಬಿ. ವಿಜಯ್ ಕುಮಾರ್ ವಿಧಿವಶ

ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಿರ್ಮಾಪಕ ಬಿ. ವಿಜಯ್ ಕುಮಾರ್ (63) ಹೃದಯಘಾತದಿಂದಾಗಿ ನಿಧನರಾಗಿದ್ದಾರೆ. ವಿಜಯ್ ಕುಮಾರ್ ಅವರು ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ನಿನ್ನೆ ರಾತ್ರಿ 9: 30 ರ ಸುಮಾರಿಗೆ ಹೃದಯಘಾತದಿಂದ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ವಿಜಯ್​​ಕುಮಾರ್ ಅವರು ಸಿಂಹಾದ್ರಿಯ ಸಿಂಹ, ಲಯನ್ ಜಗಪತಿ ರಾವ್, ಮೌನಗೀತೆ, ಜಗದೇಕ ವೀರ, ಸ್ವಚ್ಛ ಭಾರತ ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ಮಿಸಿದ್ದಾರೆ. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾಗಿ,

ಸ್ಯಾಂಡಲ್ ವುಡ್ ಹಿರಿಯ ನಿರ್ಮಾಪಕ ಬಿ. ವಿಜಯ್ ಕುಮಾರ್ ವಿಧಿವಶ Read More »

ಸುಳ್ಯ: ವೈರಲ್ ಆಯ್ತು ಮಹಿಳೆಯ ಧ್ವಜವಂದನೆ| ಇದು ನಿಜವಾದ ದೇಶಭಕ್ತಿ

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ-ಏರಣಗುಡ್ಡೆಯಲ್ಲಿ ಗಾಂಧಿ ವಿಚಾರ ವೇದಿಕೆ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ನಡೆದಿತ್ತು. ಈ ಕಾರ್ಯಕ್ರಮದ ಬಳಿಕ ಕೆಲಸಕ್ಕೆ ತೆರಳುತ್ತಿದ್ದ ಮಹಿಳೆಯೊಬ್ಬರು ಧ್ವಜವಂದನೆ ಮಾಡಿದ್ದು , ಈ ಫೋಟೋ ವೈರಲ್‌ ಆಗಿದೆ. ಗಾಂಧಿ ವಿಚಾರ ವೇದಿಕೆ ವತಿಯಿಂದ ನಡೆದ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ಪ್ರಮುಖರು ಸೇರಿದಂತೆ ಸ್ಥಳೀಯರು ಭಾಗವಹಿಸಿದ್ದರು. ಬೆಳಗ್ಗೆ 9 ಗಂಟೆಗೆ ಈ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಮುಗಿದ ಬಳಿಕ ಅತಿಥಿಗಳು ತೆರಳಿದ್ದರು. ಕಾರ್ಯಕ್ರಮ ಸಂಘಟಿಸಿದ ಕೆಲ ಮಂದಿ ಸ್ಥಳದಲ್ಲಿ ಮಾತುಕತೆ ನಡೆಸುತ್ತಿದ್ದರು.

ಸುಳ್ಯ: ವೈರಲ್ ಆಯ್ತು ಮಹಿಳೆಯ ಧ್ವಜವಂದನೆ| ಇದು ನಿಜವಾದ ದೇಶಭಕ್ತಿ Read More »

ಪ್ರಬಲ ಭೂಕಂಪಕ್ಕೆ ಹೈಟಿ ತತ್ತರ| ತುರ್ತು ಪರಿಸ್ಥಿತಿ ಘೋಷಿಸಿದ ಸರ್ಕಾರ|

ಹೈಟಿ : ದ್ವೀಪ ರಾಷ್ಟ್ರ ಹೈಟಿಯ ಕರಾವಳಿ ಪ್ರದೇಶದಲ್ಲಿ ಶನಿವಾರ ಸುನಾಮಿ ಭೀತಿಯ ನಡುವೆಯೇ 7.2 ರಷ್ಟು ತೀವ್ರತೆಯಷ್ಟು ಭೂಕಂಪ ಸಂಭವಿಸಿದ್ದು, ಮೃತಪಟ್ಟವರ ಸಂಖ್ಯೆ 724 ಕ್ಕೇರಿದೆ ಎಂಬ ಆತಂಕಕಾರಿ ಮಾಹಿತಿ ಹೊರಬಿದ್ದಿದೆ. ಕೆರಿಬಿಯನ್ ರಾಷ್ಟ್ರ ಹೈಟಿಯಲ್ಲಿ ಪ್ರಬಲ ಭೂಕಂಪ ಸಂಭವಿಸಿದ್ದು, ಸುಮಾರು 724 ಜನರು ಮೃತಪಟ್ಟಿದ್ದು, ಸಾವಿರಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸಾವಿನ ಸಂಖ್ಯೆ 724 ಕ್ಕೇರಿದ್ದು, ಅವಶೇಷಗಳಡಿ ಸಿಲುಕಿರುವರಿಗಾಗಿ ಕಾರ್ಯಾಚರಣೆ ಮುಂದುವರೆದಿದೆ. ಹೈಟಿಯಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ. ಅಲ್ಲಿನ ಪ್ರಧಾನಿ ಹೆನ್ರಿ ಹೈಟಿಯಲ್ಲಿ ಒಂದು

ಪ್ರಬಲ ಭೂಕಂಪಕ್ಕೆ ಹೈಟಿ ತತ್ತರ| ತುರ್ತು ಪರಿಸ್ಥಿತಿ ಘೋಷಿಸಿದ ಸರ್ಕಾರ| Read More »

ಮೂರು ವರ್ಷದಿಂದ ಒಂದೇ ಪ್ರಾಮಿಸ್| ಸಂಖ್ಯೆಯನ್ನಾದರೂ ಬದಲಿಸಿ ಪ್ರಧಾನಿಗಳೇ… ಮೋದಿ ಭಾಷಣಕ್ಕೆ ಕಾಂಗ್ರೆಸ್ ವ್ಯಂಗ್ಯ

ನವದೆಹಲಿ: 75ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು, ದೇಶವನ್ನುದ್ದೇಶಿಸಿ ಮಾತನಾಡಿದ್ದರು. ಪ್ರಧಾನಿಯವರ ಭಾಷಣ ಈಗ ಟ್ರೋಲ್‌ಗೆ ಒಳಗಾಗಿದ್ದು, ಮೂರು ವರ್ಷವೂ ಒಂದೇ ಪ್ರಾಮಿಸ್ ಮಾಡಿದ್ದಾರೆ ಎಂದು ನೆಟ್ಟಿಗರು ಮೋದಿಯವರ ಕಾಲೆಳೆಯುತ್ತಿದ್ದಾರೆ. ಆಗಸ್ಟ್ 15, 2019, 2020, 2021 ಈ ಮೂರು ವರ್ಷವೂ 100 ಲಕ್ಷ ಕೋಟಿ ರೂಪಾಯಿಗಳನ್ನು ಆಧುನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ವಿನಿಯೋಗಿಸಲಾಗುತ್ತದೆ ಎಂದು ಹೇಳಿದ್ದಾರೆ ಎಂಬ ಮೀಮ್‌ಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ರಾಷ್ಟ್ರದ ಜನರನ್ನು ಒಂದೇ ಭರವಸೆ, ಯೋಜನೆಯ

ಮೂರು ವರ್ಷದಿಂದ ಒಂದೇ ಪ್ರಾಮಿಸ್| ಸಂಖ್ಯೆಯನ್ನಾದರೂ ಬದಲಿಸಿ ಪ್ರಧಾನಿಗಳೇ… ಮೋದಿ ಭಾಷಣಕ್ಕೆ ಕಾಂಗ್ರೆಸ್ ವ್ಯಂಗ್ಯ Read More »

ತಾಲಿಬಾನ್‍ಗೆ ಸಂಪೂರ್ಣ ಶರಣಾದ ಅಫ್ಘನ್ ಸರ್ಕಾರ| ಕಾಬೂಲ್ ವಶಗೈದ ತಾಲಿಬಾನಿಗಳು

ಕಾಬೂಲ್: ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಅಟ್ಟಹಾಸ ಮುಂದುವರೆದಿದ್ದು, ರಾಜಧಾನಿ ಕಾಬೂಲ್‍ಗೆ ತಾಲಿಬಾನಿಗಳು ಪ್ರವೇಶ ಪಡೆದು ಸಂಪೂರ್ಣ ನಗರವನ್ನು ಇಂದು ವಶಪಡಿಸಿಕೊಂಡಿದ್ದಾರೆ. ಈ ಮೂಲಕ ಅಫ್ಘನ್ ಸರ್ಕಾರ ತಾಲಿಬಾನ್ ಶರಣಾಗಿದೆ. ಹಲವು ದಿನಗಳಿಂದ ತಾಲಿಬಾನ್ ಹಾಗೂ ಅಫ್ಘನ್ ಸರ್ಕಾರಗಳ ನಡುವೆ ಕಾದಾಟ ನಡೆಯುತ್ತಿತ್ತು. ಇದಲ್ಲದೆ ಅಘ್ಫಾನಿಸ್ತಾನದ ಎರಡನೇ ಅತ್ಯಂತ ದೊಡ್ಡ ನಗರ ಕಂದಹಾರ್ ಹಾಗೂ ಲಷ್ಕರ್ ಗಹ್‍ನ್ನು ತಾಲಿಬಾನಿಗಳು ವಶಪಡಿಸಿಕೊಂಡಿದ್ದರು. ಇದೀಗ ತಾಲಿಬಾನಿಗಳು ರಾಜಧಾನಿ ಕಾಬೂಲ್‍ಗೆ ಪ್ರವೇಶಪಡೆದು ಆಫ್ಘನ್ ಸರ್ಕಾರದಿಂದ ಅಧಿಕಾರ ಹಸ್ತಾಂತರ ಮಾಡಿಕೊಂಡಿದೆ. ಶಾಂತಿಯುತವಾಗಿ ಅಫ್ಘಾನಿಸ್ತಾನದ ಅಧ್ಯಕ್ಷ ಅಶ್ರಫ್

ತಾಲಿಬಾನ್‍ಗೆ ಸಂಪೂರ್ಣ ಶರಣಾದ ಅಫ್ಘನ್ ಸರ್ಕಾರ| ಕಾಬೂಲ್ ವಶಗೈದ ತಾಲಿಬಾನಿಗಳು Read More »