ಮಂಗಳೂರು: ಕಾಡುಪ್ರಾಣಿ ಬೇಟೆ – 12 ಮಂದಿ ಅರೆಸ್ಟ್, ಆಯುಧಗಳ ವಶ
ಮಂಗಳೂರು: ಮೂಡುಬಿದಿರೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡ್ಯಡ್ಕ ಗುಡ್ಡೆಯಂಗಡಿಯಲ್ಲಿ ಕಾಡು ಪ್ರಾಣಿ ಬೇಟೆಯಾಡುತ್ತಿದ್ದ12 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಜಾನ್ ಮನೆಜಸ್, ಶ್ರೀನಿವಾಸ್, ಗುರುಪ್ರಸಾದ್, ಜೋಯಲ್ ಅನಿಲ್ ಡಿಸೋಜಾ, ಅನಜಯ್, ಸನತ್, ಹರೀಶ್ ಪೂಜಾರಿ, ಮೋಹನ್ ಗೌಡ, ನೋಣಯ್ಯ, ವಿನಯ್ ಪೂಜಾರಿ, ರಮೇಶ್ ಹಾಗೂ ಗಣೇಶ್ ಎಂದು ಗುರುತಿಸಲಾಗಿದೆ. ಆರೋಪಿಗಳಿಂದ 4 ಗನ್, 1 ಗ್ಯಾಸ್ ಸಿಲಿಂಡರ್, 12 ಮೊಬೈಲ್ ಫೋನ್, 2ಮರದ ತುಂಡು, ಗ್ಯಾಸ್ ಬರ್ನರ್, ನೆಟ್, ಮತ್ತಿತ್ತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮಂಗಳೂರು: ಕಾಡುಪ್ರಾಣಿ ಬೇಟೆ – 12 ಮಂದಿ ಅರೆಸ್ಟ್, ಆಯುಧಗಳ ವಶ Read More »








