Editor

ರಾಜ್ಯದ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ರಾಷ್ಟಪತಿ ಪದಕ| 19 ಪೊಲೀಸರಿಗೆ ಸೇವಾ ಪದಕ ಗೌರವ|

ನವದೆಹಲಿ : ಸ್ವಾತಂತ್ರ್ಯ ದಿನಾಚರಣೆಯಂದು ಉತ್ತಮ ಸೇವೆಗೈದ ಪೊಲೀಸ್ ಅಧಿಕಾರಿಗಳಿಗೆ ನೀಡಲಾಗುವಂತೆ ರಾಷ್ಟ್ರಪತಿ ಪದಕ ಹಾಗೂ ಪೊಲೀಸ್ ಪದಕದ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಈ ಬಾರಿ 1,380 ಪೊಲೀಸ್ ಅಧಿಕಾರಿಗಳಿಗೆ ಪ್ರಶಸ್ತಿ ನೀಡಲಾಗಿದೆ. ಇದರಲ್ಲಿ ಕರ್ನಾಟಕದ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ ಸಂದಿದ್ದರೆ, 19 ಪೊಲೀಸರಿಗೆ ಪೊಲೀಸ್ ಸೇವಾ ಪದಕ ಪ್ರಶಸ್ತಿ ಬಂದಿದೆ. ಈ ಕುರಿತಂತೆ ಕೇಂದ್ರ ಗೃಹ ಇಲಾಖೆಯಿಂದ ಪಟ್ಟಿಯನ್ನು ರಿಲೀಸ್ ಮಾಡಲಾಗಿದ್ದು, ಕರ್ನಾಟಕದ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ಈ ಬಾರಿಯ ರಾಷ್ಟ್ರಪತಿ ಪದಕ […]

ರಾಜ್ಯದ ಇಬ್ಬರು ಪೊಲೀಸ್ ಅಧಿಕಾರಿಗಳಿಗೆ ರಾಷ್ಟಪತಿ ಪದಕ| 19 ಪೊಲೀಸರಿಗೆ ಸೇವಾ ಪದಕ ಗೌರವ| Read More »

ದೇಶಾದ್ಯಂತ 75 ನೇ ಸ್ವಾತಂತ್ರ್ಯದಿನ ಸಂಭ್ರಮ| ಕೆಂಪುಕೋಟೆಯಲ್ಲಿ ಮೇಳೈಸಿದ ತ್ರಿವರ್ಣ ರಂಗು|

ನವದೆಹಲಿ : ದೇಶಾದ್ಯಂತ 75ನೇ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮ ಮನೆ ಮಾಡಿದೆ. ಎಲ್ಲೆಡೆ ತ್ರಿವರ್ಣ ರಂಗು ಕಂಗೊಳಿಸುತ್ತಿದೆ. ದೇಶದ ಶಕ್ತಿಕೇಂದ್ರ ಕೆಂಪುಕೋಟೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಬೆಳಗ್ಗೆ 7.30ಕ್ಕೆ ತ್ರಿವರ್ಣ ಧ್ವಜ ಹಾರಿಸುವ ಮೂಲಕ 75 ನೇ ಸ್ವಾತಂತ್ರ್ಯೋತ್ಸವ ಆಚರಿಸಿದ್ದಾರೆ. ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಸತತ 8ನೇ ಬಾರಿ ಕೆಂಪು ಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ. ಈ ಮೂಲಕ ಐತಿಹಾಸಿಕ ಸ್ಮಾರಕ ರೆಡ್ ಫೋರ್ಟ್ನಲ್ಲಿ 8 ಬಾರಿ ತ್ರಿವರ್ಣ ಧ್ವಜ ಹಾರಿಸಿದ ಮೊದಲ ಕಾಂಗ್ರೆಸ್ಸೇತರ

ದೇಶಾದ್ಯಂತ 75 ನೇ ಸ್ವಾತಂತ್ರ್ಯದಿನ ಸಂಭ್ರಮ| ಕೆಂಪುಕೋಟೆಯಲ್ಲಿ ಮೇಳೈಸಿದ ತ್ರಿವರ್ಣ ರಂಗು| Read More »

ಸುವರ್ಣ ಸ್ವಾತಂತ್ರ್ಯವಿದು, ನಾವು ನಿಜವಾಗಿಯೂ ಅನುಭವಿಸಿದ್ದೇವಾ? ಇದೇನಾ ಸ್ವಾತಂತ್ರ್ಯ?

ನಮ್ಮೆಲ್ಲಾ ಸಮಸ್ತ ಓದುಗರಿಗೆ ಸುವರ್ಣ ಸ್ವಾತಂತ್ರ್ಯ ದಿನದ ಶುಭಾಶಯಗಳು ಪ್ರೀತಿಯ ಭಾರತೀಯ ಬಂಧುಗಳೇ…. ಸ್ವಾತಂತ್ರ್ಯ ನಮಗೆಲ್ಲರಿಗೂ ಹೆಮ್ಮೆಯ ದಿನ. ಬ್ರಿಟೀಷರ ಸೊಕ್ಕನ್ನು ಮುರಿಯಲು ಮತ್ತು ನಮ್ಮ ದೇಶದ ಸಲುವಾಗಿ ಪ್ರಾಣ ತ್ಯಾಗ ಮಾಡಿದ ನಿಜವಾದ ಹೀರೋಗಳನ್ನು ನೆನೆದು ಭಾವುಕರಾಗುವ ಕ್ಷಣ ಈ ದಿನ. ಪ್ರತೀ ವರ್ಷ ನಾವು ಇದನ್ನೇ ಮಾಡುತ್ತಿದ್ದೇವೆಯೇ ಹೊರತು ಮುಂದಿನದ್ದನ್ನು ಯೋಚಿಸಲು ಹೋಗಲಾರೆವು. ಯಾಕೆಂದರೆ ನಮಗೆ ಗೊತ್ತಿರುವುದೇ ಇಷ್ಟು. ಅವರು ಅಷ್ಟೆಲ್ಲ ಕಷ್ಟಪಟ್ಟು ನಮಗೆ ಸ್ವಾತಂತ್ರ್ಯ ತಂದು ಕೊಟ್ಟರೆ ನಾವು, ನೀವು ಮಾಡುತ್ತಿರುವುದು ಏನು?

ಸುವರ್ಣ ಸ್ವಾತಂತ್ರ್ಯವಿದು, ನಾವು ನಿಜವಾಗಿಯೂ ಅನುಭವಿಸಿದ್ದೇವಾ? ಇದೇನಾ ಸ್ವಾತಂತ್ರ್ಯ? Read More »

ಕೆಂಪುಕೋಟೆ‌ ಧ್ವಜಾರೋಹಣಕ್ಕೆ ಈ ಬಾರಿ ಹೊಸ‌ ಮೆರುಗು| ಯಾರು ಗೊತ್ತಾ ಮುಖ್ಯ ಅತಿಥಿ?

ನವದೆಹಲಿ, ಆ. 14: ದೇಶಕ್ಕೆ ಸ್ವತಂತ್ರ ಬಂದು 75 ವರ್ಷಗಳಾದ ಹಿನ್ನಲೆಯಲ್ಲಿ ಈ ವರ್ಷ ‘ಆಜಾದಿ ಕಾ ಅಮೃತ್ ಮಹೋತ್ಸವ’ ಆಚರಿಸಲಾಗುತ್ತಿದೆ. ಸ್ವಾತಂತ್ರ್ಯೋತ್ಸವ ಎಂದಿನಂತೆ ದೇಶಾದ್ಯಂತ ಸಡಗರ ಸಂಭ್ರಮದಿಂದ ಜರುಗುತ್ತದೆಯಾದರೂ ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪು ಕೋಟೆಯಲ್ಲಿ ನಡೆಯುವ ಕಾರ್ಯಕ್ರಮ ಇನ್ನೊಂದು ಬಗೆಯ ಸಂಭ್ರಮದ್ದು. ಈ ಬಾರಿ ಕೆಂಪು ಕೋಟೆಯಲ್ಲಿ ನಡೆಯುವ ಸ್ವಾತಂತ್ರ್ಯ ದಿನಾಚರಣೆಯ ಮುಖ್ಯ ಅತಿಥಿ ಶತಮಾನದ ಬಳಿಕ ಒಲಂಪಿಕ್ಸ್ ಆಥ್ಲೆಟಿಕ್ ವಿಭಾಗದಲ್ಲಿ ಭಾರತಕ್ಕೆ ಚಿನ್ನದ ಪದಕ ಗೆದ್ದು ತಂದ ನೀರಜ್ ಚೋಪ್ರಾ. ಕೆಂಪು ಕೋಟೆಯಲ್ಲಿ

ಕೆಂಪುಕೋಟೆ‌ ಧ್ವಜಾರೋಹಣಕ್ಕೆ ಈ ಬಾರಿ ಹೊಸ‌ ಮೆರುಗು| ಯಾರು ಗೊತ್ತಾ ಮುಖ್ಯ ಅತಿಥಿ? Read More »

ಆ. 16 ರಿಂದ ಕಾರವಾರದವರೆಗೂ ವಿಸ್ಟಾಡೋಮ್ ರೈಲು ವಿಸ್ತರಣೆ

ಉಡುಪಿ: ಬೆಂಗಳೂರಿನಿAದ ಕಾರವಾರಕ್ಕೆ ಬೆಳಗಿನ ರೈಲು, ಆ. 16 ರಿಂದ ಹೊಸ ವಿಸ್ಟಾಡೋಮ್ ಕೋಚಿನೊಂದಿಗೆ ಪುನರಾರಂಭಗೊಳ್ಳಲಿದೆ ಎಂದು ನೈರುತ್ಯ ರೈಲ್ವೇ ತಿಳಿಸಿದೆ. ಇದಕ್ಕೆ ಕೊಂಕಣ್ ರೈಲ್ವೇ ಒಪ್ಪಿಗೆ ಸೂಚಿಸಿದ್ದು ರೈಲ್ವೇ ಹಿತರಕ್ಷಣಾ ಸಮಿತಿ ಪ್ರಯಾಣಿಕರ ಒತ್ತಾಯ ಹೋರಾಟ ಫಲಪ್ರದವಾಗಿದೆ. ಕೋವಿಡ್ ಕಾರಣದಿಂದ ಬೆಂಗಳೂರು-ಕಾರವಾರ ಬೆಳಗಿನ ರೈಲು ಸಂಚಾರವನ್ನು ಮಂಗಳೂರಿನಿಂದ ಕಾರವಾರದ ತನಕ ರೈಲ್ವೆ ಇಲಾಖೆ ಸ್ಥಗಿತಗೊಳಿಸಿತ್ತು. ಈ ಸಂಬಂಧ ಆಯಾ ಭಾಗದ ಪ್ರಯಾಣಿಕರು, ಸಾರ್ವಜನಿಕರು ಸದರಿ ರೈಲನ್ನು ಪುನರಾರಂಭಿಸುವಂತೆ ಒತ್ತಾಯಿಸಿದ್ದರು. ಅದೇ ಸಮಯದಲ್ಲಿ ವಿಸ್ಟಾಡೋಮ್ ಪ್ರವಾಸಿ ಬೋಗಿಯಿರುವ

ಆ. 16 ರಿಂದ ಕಾರವಾರದವರೆಗೂ ವಿಸ್ಟಾಡೋಮ್ ರೈಲು ವಿಸ್ತರಣೆ Read More »

ಶಾಲಾ- ಕಾಲೇಜು ಆರಂಭಕ್ಕೆ ಮುಹೂರ್ತ ಫಿಕ್ಸ್| ಆ 23ರಿಂದ ಮತ್ತೆ ತೆರೆಯಲಿದೆ ಶಾಲಾ ಬಾಗಿಲು|

ಬೆಂಗಳೂರು: ರಾಜ್ಯದಲ್ಲಿ ಶಾಲಾ-ಕಾಲೇಜು ಪ್ರಾರಂಭಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಆ.23ರಿಂದ 9ನೇ ತರಗತಿಯಿಂದ 12ರವರೆಗೆ ಪ್ರಾರಂಭವಾಗಲಿವೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಕೊರೋನಾ ನಿರ್ವಹಣಾ ಸಭೆಯಲ್ಲಿ ತಜ್ಞರ ಸಮಿತಿಯೊಂದಿಗೆ ಚರ್ಚಿಸಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕೊರೋನಾ ಪಾಸಿಟಿವಿಟಿ ದರ ಶೇ.2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಶಾಲೆ ಪ್ರಾರಂಭಿಸಲಾಗುವುದು. ಸೋಂಕು ಹೆಚ್ಚಿರುವ ಗಡಿ ಜಿಲ್ಲೆಗಳಲ್ಲಿ ಶಾಲೆಗಳ ಪ್ರಾರಂಭ ಇಲ್ಲ ಎಂದು ಸ್ಪಷ್ಟಪಡಿಸಿದರು. ಪಾಸಿಟಿವಿಟಿ ದರ ಶೇಕಡ 2 ಕ್ಕಿಂತ

ಶಾಲಾ- ಕಾಲೇಜು ಆರಂಭಕ್ಕೆ ಮುಹೂರ್ತ ಫಿಕ್ಸ್| ಆ 23ರಿಂದ ಮತ್ತೆ ತೆರೆಯಲಿದೆ ಶಾಲಾ ಬಾಗಿಲು| Read More »

ಸದ್ಯದ ನಿಯಮಗಳೇ ಬೆಸ್ಟ್| ಅಗತ್ಯ ಬಿದ್ರೆ ರೂಲ್ಸ್ ಸ್ಟ್ರಿಕ್ಟ್ ಮಾಡೋಣ| ಸಿಎಂ ಬೊಮ್ಮಾಯಿ ಹೇಳಿಕೆ

ಬೆಂಗಳೂರು:ಕರ್ನಾಟಕದಲ್ಲಿ ಕೊವಿಡ್ 3ನೇ ಅಲೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಮಹತ್ವದ ಸಭೆ ನಡೆಸಿದರು. ಶಾಲಾ-ಕಾಲೇಜುಗಳನ್ನು ಆರಂಭಿಸುವ ಬಗ್ಗೆ ಸಭೆಯಲ್ಲಿ ಗಂಭೀರ ಚರ್ಚೆ ನಡೆದಿದ್ದು, ಶಾಲಾ-ಕಾಲೇಜು ಆರಂಭಕ್ಕೆ ಸಭೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈಗಲೇ ಶಾಲಾ-ಕಾಲೇಜು ಓಪನ್‌ ಮಾಡಬೇಕೆಂದು ಕೆಲವರು ಅಭಿಪ್ರಾಯ ತಿಳಿಸಿದರೆ, ಸೆಪ್ಟೆಂಬರ್‌ವರೆಗೆ ಕಾದು ನೋಡುವಂತೆ ಇನ್ನು ಕೆಲವರು ಸಲಹೆ ನೀಡಿದ್ದಾರೆ. ಟ್ರೇಸ್ ಮತ್ತು ಟ್ರ್ಯಾಕ್ ಹಾಗೂ ಟ್ರೀಟ್ ಸೂತ್ರವನ್ನು ಹೆಚ್ಚಾಗಿ ಅನುಸರಿಸುವಂತೆ ಪರಿಣತರು ಮುಖ್ಯಮಂತ್ರಿಗೆ ಸಲಹೆ ನೀಡಿದ್ದಾರೆ. ಕೇರಳ ಮತ್ತು ಮಹಾರಾಷ್ಟ್ರಕ್ಕೆ

ಸದ್ಯದ ನಿಯಮಗಳೇ ಬೆಸ್ಟ್| ಅಗತ್ಯ ಬಿದ್ರೆ ರೂಲ್ಸ್ ಸ್ಟ್ರಿಕ್ಟ್ ಮಾಡೋಣ| ಸಿಎಂ ಬೊಮ್ಮಾಯಿ ಹೇಳಿಕೆ Read More »

ಸಾರಿಗೆ ಬಸ್ ಹರಿದು ಅಂಗನವಾಡಿ ಶಿಕ್ಷಕಿ ಸಾವು

ಹಾವೇರಿ : ಸಾರಿಗೆ ಬಸ್ ಹರಿದು ಅಂಗನವಾಡಿ ಶಿಕ್ಷಕಿ ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನ ನಿಟ್ಟೂರು ಗ್ರಾಮದಲ್ಲಿ ನಡೆದಿದೆ. 55 ವರ್ಷದ ಕಮಲಮ್ಮ ಕಾಸಂಬಿ ಮೃತರಾಗಿದ್ದಾರೆ. ಇವರು ಮಗನೊಂದಿಗೆ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಎದುರಿಗೆ ಸಾರಿಗೆ ಬಸ್ ಬಂದಿದೆ. ಆ ವೇಳೆ ನಿಯಂತ್ರಣ ತಪ್ಪಿ ಬೈಕ್ ನಿಂದ ಕೆಳಗೆ ಬಿದ್ದಿದ್ದಾರೆ. ಆಗ ಕಮಲಮ್ಮಳ ತಲೆಯ ಮೇಲೆ ಬಸ್ ಹರಿದು ಹೋಗಿದಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಅದೃಷ್ಟವಶಾತ್ ಕಮಲಮ್ಮಳ ಪುತ್ರ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಇನ್ನು ಈ ಸಂಬಂಧ

ಸಾರಿಗೆ ಬಸ್ ಹರಿದು ಅಂಗನವಾಡಿ ಶಿಕ್ಷಕಿ ಸಾವು Read More »

ದೇಶ ವಿಭಜನೆ ದುರಂತ ಮರೆಯಲು ಅಸಾಧ್ಯ- ಪ್ರಧಾನಿ ಮೋದಿ

ಹೊಸದಿಲ್ಲಿ: ಆಗಸ್ಟ್ 14ನ್ನು ‘ವಿಭಜನೆ ಭೀಕರ ನೆನಪಿನ ದಿನ’ವಾಗಿ ಆಚರಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಘೋಷಿಸಿದ್ದಾರೆ. ‘ವಿಭಜನೆಯ ನೋವುಗಳನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ’ ಎಂದು ಪ್ರಧಾನಿ ಮೋದಿ ಟ್ವಿಟರ್ ನಲ್ಲಿ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಈ ಕುರಿತು ಟ್ವೀಟ್ ಮಾಡಿದ್ದು,ನಮ್ಮ ಲಕ್ಷಾಂತರ ಸಹೋದರಿಯರು ಮತ್ತು ಸಹೋದರರು ಸ್ಥಳಾಂತರಗೊಂಡರು ಮತ್ತು ಅನೇಕರು ಬುದ್ಧಿಹೀನ ದ್ವೇಷ ಮತ್ತು ಹಿಂಸೆಯಿಂದ ಪ್ರಾಣ ಕಳೆದುಕೊಂಡರು. ನಮ್ಮ ಜನರ ಹೋರಾಟಗಳು ಮತ್ತು ತ್ಯಾಗಗಳ ನೆನಪಿಗಾಗಿ ಆಗಸ್ಟ್ 14 ನ್ನು ವಿಭಜನೆಯ

ದೇಶ ವಿಭಜನೆ ದುರಂತ ಮರೆಯಲು ಅಸಾಧ್ಯ- ಪ್ರಧಾನಿ ಮೋದಿ Read More »

ಭಾರತದಲ್ಲಿ ಇನ್ಮುಂದೆ ಹಳೆ ವಾಹನಗಳು ಗುಜರಿಗೆ…! ಏನಿದು ಈ ನೀತಿಯ ಉದ್ದೇಶ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್…

ಭಾರತದಲ್ಲಿ ಇನ್ಮುಂದೆ 15 ವರ್ಷಕ್ಕೂ ಹಳೆಯ ವಾಹನಗಳು ಓಡಾಡೋ ಹಾಗಿಲ್ಲ, ಎಲ್ಲವೂ ಗುಜರಿಗೆ ಎನ್ನುವ ವಿಚಾರ ತಿಳಿದಿರಬಹುದು. ಆದರೆ ಇದು ಯಾವ ರೀತಿ ನಡೆಯುತ್ತದೆ ನಿಮ್ಮ ವಾಹನಗಳನ್ನು ಯಾವಾಗ ಗುಜರಿಗೆ ಹಾಕಬೇಕು ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ. ಇದರ ಪ್ರಕಾರ 15 ವರ್ಷ ಹಳೆಯ ಕಮರ್ಷಿಯಲ್ ವಾಹನ ಹಾಗೂ 20 ವರ್ಷ ಹಳೆಯ ಖಾಸಗಿ ವಾಹನ ಈ ನೀತಿಯ ಒಳಗೆ ಬರಲಿದ್ದು. ಗಾಡಿಗಳನ್ನು ಕೇವಲ ವರ್ಷದ ಆಧಾರದಲ್ಲಿ ಗುಜರಿಗೆ ಹಾಕಲಾಗುವುದಿಲ್ಲ, ಇದನ್ನು ಅದರ ಫಿಟ್ನೆಸ್ ಆಧರಿಸಿ

ಭಾರತದಲ್ಲಿ ಇನ್ಮುಂದೆ ಹಳೆ ವಾಹನಗಳು ಗುಜರಿಗೆ…! ಏನಿದು ಈ ನೀತಿಯ ಉದ್ದೇಶ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್… Read More »