Editor

ಟೋಕಿಯೋ ಪ್ಯಾರಾಲಂಪಿಕ್| ಶೂಟಿಂಗ್ ನಲ್ಲಿ ಚಿನ್ನ ಗೆದ್ದ ಅವನಿ ಲೆಕೇರಾ|

ಟೋಕಿಯೊ ಪ್ಯಾರಾಲಿಂಪಿಕ್​ನಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ ದಕ್ಕಿದೆ. ಮಹಿಳೆಯರ ಶೂಟಿಂಗ್ ಸ್ಪರ್ಧೆಯಲ್ಲಿ ಗೆದ್ದು ಅವನಿ ಲೆಕೇರಾ ಚಿನ್ನದ ಪದಕಕ್ಕೆ ಕೊರಳೊಡ್ಡಿದ್ದಾರೆ. ಈ ಮೂಲಕ ಭಾರತದ ಪದಕಗಳ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಅವನಿ ಶೂಟಿಂಗ್​ ಫೈನಲ್​ ಪಂದ್ಯದಲ್ಲಿ 249.6 ಸ್ಕೋರ್ ಮಾಡಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ. 10 ಮೀಟರ್​ನ ಏರ್​ ರೈಫಲ್ ಶೂಟಿಂಗ್​ನಲ್ಲಿ ಚಿನ್ನ ಗೆದ್ದಿರುವ ಅವನಿ ಇಂದು ಬೆಳಗ್ಗೆ ರೌಂಡ್ 2 ನಲ್ಲಿ ಫೈನಲ್​ಗೆ ಆಯ್ಕೆಯಾಗಿದ್ದರು.

ಟೋಕಿಯೋ ಪ್ಯಾರಾಲಂಪಿಕ್| ಶೂಟಿಂಗ್ ನಲ್ಲಿ ಚಿನ್ನ ಗೆದ್ದ ಅವನಿ ಲೆಕೇರಾ| Read More »

ಕೃಷ್ಣಾ ಎಂದರೆ ಕಷ್ಟವೊಂದಿಷ್ಟಿಲ್ಲ|ಕೃಷ್ಣಂ ವಂದೇ ಜಗದ್ಗುರುಂ…|

ವೇದಾನುದ್ಧರತೇ ಜಗನ್ನಿವಪಹತೇ ಭೂಗೋಲಮದ್ಭಿಭ್ರತೇದೈತ್ಯ ದಾರಯತೇ ಬಲಿಂಧಲಯತೇ ಕ್ಷತ್ರಕ್ಷಯೇ ಕುರ್ವತೇಪೌಲಸ್ತಂ ಜಿಯತೇ ಹಲಂಕಲಯತೇ ಕಾರುಣ್ಯ ಮಾತನ್ವತೇಮ್ಲೇಚ್ಛಾನ್ ಮಾರ್ದಯತೇ ದಶಾಕೃತಿಕೃತೇ ಕೃಷ್ಣಾಯ ತುಭ್ಯಂ ನಮಃ || ವೇದಗಳನ್ನು ಉದ್ಧರಿಸಿದ (ಮತ್ಸ್ಯಾವತಾರಿ), ಜಗತ್ತನ್ನು ಹೊತ್ತ (ಕೂರ್ಮಾವತಾರಿ), ಭೂಮಿಯನ್ನು ರಕ್ಷಿಸಿದ (ವರಾಹಾವತಾರಿ), ಹಿರಣ್ಯಕಶಿಪುವೆಂಬ ದೈತ್ಯನನ್ನು ಸಿಗಿದ (ನರಸಿಂಹಾವತಾರಿ), ಬಲಿಯನ್ನು ಪಾತಾಳಕ್ಕೆ ತಳ್ಳಿದ (ವಾಮನಾವತಾರಿ), ಕ್ಷತ್ರಿಯರನ್ನು ಸಂಹರಿಸಿದ (ಪರಶುರಾಮಾವತಾರಿ), ರಾವಣನನ್ನು ಜಯಿಸಿದ (ರಾಮಾವತಾರಿ), ಹಲಧರ ಬಲರಾಮನ ಸಹೋದರ (ಕೃಷ್ಣಾವತಾರಿ), ಕಾರುಣ್ಯಮೂರ್ತಿ (ಬೌದ್ಧಾವತಾರಿ) ಮತ್ತು ಮ್ಲೇಚ್ಛರನ್ನು ಬಡಿದೋಡಿಸುವ (ಕಲ್ಕಿ ಅವತಾರಿ) ಕೃಷ್ಣಾ… ನಿನಗೆ ನಮಸ್ಕಾರಗಳು. ದಶಾವತಾರಗಳನ್ನು

ಕೃಷ್ಣಾ ಎಂದರೆ ಕಷ್ಟವೊಂದಿಷ್ಟಿಲ್ಲ|ಕೃಷ್ಣಂ ವಂದೇ ಜಗದ್ಗುರುಂ…| Read More »

ಪ್ಯಾರಾಲಂಪಿಕ್: ಭಾರತಕ್ಕೆ ಕಂಚು ತಂದು ಕೊಟ್ಟ‌ ವಿನೋದ್ ಕುಮಾರ್

ಟೋಕಿಯೊ: ಜಪಾನ್‌ನ ಟೋಕಿಯೊದಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್‌ನ ಡಿಸ್ಕಸ್‌ ಥ್ರೋ ಸ್ಪರ್ಧೆಯಲ್ಲಿ ಭಾರತದ ವಿನೋದ್‌ ಕುಮಾರ್ ಅವರು ಕಂಚಿನ ಪದಕ ಗೆದ್ದುಕೊಂಡಿದ್ದಾರೆ.‌ ಇದರೊಂದಿಗೆ ಭಾರತಕ್ಕೆ ಭಾನುವಾರ ಒಟ್ಟು ಮೂರು ಪದಕಗಳು ಬಂದಂತಾಗಿದೆ. 19.91 ಮೀಟರ್‌ ದೂರ ಎಸೆದು ಪದಕ್ಕೆ ಕೊರಳೊಡ್ಡಿದ್ದೂ ಮಾತ್ರವಲ್ಲದೆ ಏಷಿಯನ್‌ ದಾಖಲೆಯನ್ನೂ ನಿರ್ಮಿಸಿದರು. ಪೋಲೆಂಡ್‌ನ ಪಿಯೋಟರ್‌ ಕೊಸೆವಿಕ್ಜ್‌ (20.02ಮೀ), ಕ್ರೊವೇಷಿಯಾದ ವೆಲಿಮಿರ್‌ ಸ್ಯಾಂಡೊರ್‌ (19.98ಮೀ) ಕ್ರಮವಾಗಿ ಚಿನ್ನ ಮತ್ತು ಬೆಳ್ಳಿ ಪದಕ ಬಾಚಿಕೊಂಡರು.

ಪ್ಯಾರಾಲಂಪಿಕ್: ಭಾರತಕ್ಕೆ ಕಂಚು ತಂದು ಕೊಟ್ಟ‌ ವಿನೋದ್ ಕುಮಾರ್ Read More »

ಉಡುಪಿ ಡಿ ಸಿ ಜಗದೀಶ್ ವರ್ಗಾವಣೆ, ನೂತನ ಜಿಲ್ಲಾಧಿಕಾರಿಯಾಗಿ ಕೂರ್ಮರಾಜ್

ಉಡುಪಿ : ಉಡುಪಿ ಜಿಲ್ಲಾಧಿಕಾರಿಯಾಗಿದ್ದ ಜಿ.ಜಗದೀಶ್ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ರವಿವಾರ ಆದೇಶ ಹೊರಡಿಸಿದೆ. ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕಲಬುರ್ಗಿ ಇದರ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಕೂರ್ಮ ರಾವ್‌ ಅವರನ್ನು ನೇಮಕ ಮಾಡಲಾಗಿದೆ. ಜಿ ಜಗದೀಶ್‌ ಅವರನ್ನು ಮುಖ್ಯಮಂತ್ರಿಗಳ ಜಂಟಿ ಕಾರ್ಯದರ್ಶಿಯಾಗಿ ವರ್ಗಾವಣೆಗೊಳಿಸಲಾಗಿದೆ. 2019 ರಲ್ಲಿ ಉಡುಪಿ ಜಿಲ್ಲೆಯ ಜಿಲ್ಲಾಧಿಕಾರಿ ಅಧಿಕಾರ ವಹಿಸಿಕೊಂಡಿದ್ದ, ಜಿ ಜಗದೀಶ್ ಅವರು, ಕೋವಿಡ್ ಸಂಕಷ್ಟ ಹಾಗೂ ಮಳೆಯಿಂದಾದ ಪ್ರವಾಹ ಸಂದರ್ಭದಲ್ಲಿ ಯಶಸ್ವಿಯಾಗಿ ಆಡಳಿತವನ್ನು ನಿಭಾಯಿಸಿದ್ದರು. ಜಿ. ಜಗದೀಶ್

ಉಡುಪಿ ಡಿ ಸಿ ಜಗದೀಶ್ ವರ್ಗಾವಣೆ, ನೂತನ ಜಿಲ್ಲಾಧಿಕಾರಿಯಾಗಿ ಕೂರ್ಮರಾಜ್ Read More »

ಅಪ್ರಾಪ್ತೆಯ ಅತ್ಯಾಚಾರಗೈದ ಆರೋಪಿ ಠಾಣೆಯಲ್ಲಿ ನೇಣಿಗೆ ಶರಣು| ಲಾಕಪ್ ಡೆತ್ ಎಂದು ಆರೋಪಿಸಿದ ಕುಟುಂಬಿಕರು| ಪ್ರಕರಣ ಸಿಐಡಿ‌ ತನಿಖೆಗೆ ಆಗ್ರಹ|

ವಿಜಯಪುರ; ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಬಂಧಿಸಲಾಗಿದ್ದ ಆರೋಪಿ ಪೊಲೀಸ್ ಠಾಣೆಯಲ್ಲಿಯೇ ಸಾವನ್ನಪ್ಪಿದ್ದಾನೆ.ಈತನ ಸಾವನ್ನು‌ ಲಾಕ್‌ಅಪ್ ಡೆತ್ ಎಂದು ಪೋಷಕರು ಆರೋಪ ಮಾಡುತ್ತಿದ್ದು, ಪ್ರಕರಣದ ತನಿಖೆಯನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ. ವಿಜಯಪುರ ಜಿಲ್ಲೆಯ ಸಿಂದಗಿ ಪೊಲೀಸರು ಶನಿವಾರ ರಾತ್ರಿ ದೇವಿಂದ ಸಂಗೋಗಿ ಎಂಬ ಆರೋಪಿಯನ್ನು ಬಂಧಿಸಿದ್ದರು. ಭಾನುವಾರ ಬೆಳಗ್ಗೆ ಆರೋಪಿ ಠಾಣೆಯ ಶೌಚಾಲಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆರೋಪಿಯ ಪೋಷಕರು, ಸಂಬಂಧಿಕರು ಠಾಣೆಗೆ ಮುತ್ತಿಗೆ ಹಾಕಿ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಅಪ್ರಾಪ್ತೆಯ ಅತ್ಯಾಚಾರಗೈದ ಆರೋಪಿ ಠಾಣೆಯಲ್ಲಿ ನೇಣಿಗೆ ಶರಣು| ಲಾಕಪ್ ಡೆತ್ ಎಂದು ಆರೋಪಿಸಿದ ಕುಟುಂಬಿಕರು| ಪ್ರಕರಣ ಸಿಐಡಿ‌ ತನಿಖೆಗೆ ಆಗ್ರಹ| Read More »

ರಾಜ್ಯದಲ್ಲಿ ಮುಂದುವರಿಯಲಿದೆ ವರುಣಾರ್ಭಟ| ಹತ್ತು‌ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ ‌ನೀಡಿದ ಹವಾಮಾನ ಇಲಾಖೆ|

ಬೆಂಗಳೂರು: ರಾಜ್ಯದಲ್ಲಿ ಮತ್ತೆ 2 ದಿನಗಳ ಕಾಲ ಮಳೆ ಆರ್ಭಟ ಮುಂದುವರೆಯಲ್ಲಿದ್ದು, ರಾಜ್ಯದ 10 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ಒಟ್ಟು 10 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಕರಾವಳಿ ಹಾಗೂ ಮಲೆನಾಡಿನ ಭಾಗದಲ್ಲಿ ಜೋರಾಗಿ ಮಳೆ ಸುರಿಯುತ್ತಿದೆ. ಬೆಂಗಳೂರಿನಲ್ಲಿ ಕೂಡ ಸಂಜೆಯ ವೇಳೆಗೆ ಮಳೆಯಾಗುತ್ತಿದೆ. ಇನ್ನೆರಡು ದಿನ ಕರಾವಳಿಯ

ರಾಜ್ಯದಲ್ಲಿ ಮುಂದುವರಿಯಲಿದೆ ವರುಣಾರ್ಭಟ| ಹತ್ತು‌ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ ‌ನೀಡಿದ ಹವಾಮಾನ ಇಲಾಖೆ| Read More »

ಪುತ್ತೂರು| ದೇವಾಲಯದ ಗದ್ದೆಯಲ್ಲಿ ಅನ್ಯಮತೀಯರಿಗೆ ಪಾರ್ಕಿಂಗ್ ಅವಕಾಶವಿಲ್ಲ| ವಿವಾದದ ಕಿಡಿ ಹಬ್ಬಿಸಿದ ವ್ಯವಸ್ಥಾಪನಾ ಸಮಿತಿ ಆದೇಶ

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಹೊರಡಿಸಿರುವ ಆದೇಶ, ಇದೀಗ ವಿವಾದಕ್ಕೆ ಕಾರಣವಾಗಿದೆ. ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ಇನ್ನುಮುಂದೆ ಹಿಂದೂ ಭಕ್ತರಿಗೆ ಮಾತ್ರ ಪಾರ್ಕಿಂಗ್ ಮಾಡುವುದಕ್ಕೆ ಮಾತ್ರ ಅವಕಾಶ ಎಂದು ಆದೇಶದ ಫ್ಲೆಕ್ಸ್ ಹಾಕಲಾಗಿದ್ದು, ಈ ಆದೇಶ ವಿವಾದದ ಕಿಡಿ ಹಬ್ಬಿಸುವ ಲಕ್ಷಣಗಳು ಕಂಡುಬರುತ್ತಿದೆ. ಪಾರ್ಕಿಂಗ್ ವ್ಯವಸ್ಥೆ ಕುರಿತಂತೆ ಪುತ್ತೂರಿನ ಶ್ರೀಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಯು ಪ್ರಕಟಣೆ ಹೊರಡಿಸಿದ್ದು, ದೇವಾಲಯ ಮುಂಭಾಗದ ವಿಶಾಲವಾದ ದೇವರಮಾರು ಗದ್ದೆಯಲ್ಲಿ ಮುಂದಿನ ದಿನಗಳಲ್ಲಿ ಹಿಂಧೂ ಭಕ್ತರಿಗೆ ಮಾತ್ರ ವಾಹನ ನಿಲುಗಡೆಗೆ ಅವಕಾಶ

ಪುತ್ತೂರು| ದೇವಾಲಯದ ಗದ್ದೆಯಲ್ಲಿ ಅನ್ಯಮತೀಯರಿಗೆ ಪಾರ್ಕಿಂಗ್ ಅವಕಾಶವಿಲ್ಲ| ವಿವಾದದ ಕಿಡಿ ಹಬ್ಬಿಸಿದ ವ್ಯವಸ್ಥಾಪನಾ ಸಮಿತಿ ಆದೇಶ Read More »

ಪ್ಯಾರಾಲಂಪಿಕ್ ನಲ್ಲಿ ಮತ್ತೊಂದು ಪದಕ| ಎತ್ತರ ಜಿಗಿತದಲ್ಲಿ ನಿಶಾದ್‌ಗೆ ಬೆಳ್ಳಿ

ಟೋಕಿಯೋ:‌ ಇಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ ಕ್ರೀಡಾಕೂಟದಲ್ಲಿ ಭಾರತದ ನಿಶಾದ್ ಕುಮಾರ್ ಇತಿಹಾಸ ಸೃಷ್ಟಿಸಿದ್ದಾರೆ. ನಿಶಾದ್ ಕುಮಾರ್ 2020 ರ ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ದೇಶಕ್ಕೆ ಮತ್ತೊಂದು ಪದಕವನ್ನ ತಂದಿದ್ದಾರೆ. ಅವರು ಎತ್ತರ ಜಿಗಿತದಲ್ಲಿ ಬೆಳ್ಳಿ ಪದಕ ಗೆದ್ದಿದ್ದು, ನಿಶಾದ್ ಪ್ರತಿಭೆಯಿಂದ ಶ್ರೀಮಂತ, ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ಟಾಪ್ 3 ತಲುಪಿದ್ದರು. ಅವರು ಅಮೆರಿಕಾದ 2 ಕ್ರೀಡಾಪಟುಗಳೊಂದಿಗೆ ಸ್ಪರ್ಧಿಸಿದರು. ಟೋಕಿಯೊ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಬೆಳ್ಳಿ ಪದಕ ಗೆದ್ದ ನಿಶಾದ್ ಕುಮಾರ್ ಹಿಮಾಚಲ ಪ್ರದೇಶದ

ಪ್ಯಾರಾಲಂಪಿಕ್ ನಲ್ಲಿ ಮತ್ತೊಂದು ಪದಕ| ಎತ್ತರ ಜಿಗಿತದಲ್ಲಿ ನಿಶಾದ್‌ಗೆ ಬೆಳ್ಳಿ Read More »

ಅಂತರಾಷ್ಟ್ರೀಯ ವಿಮಾನ ಹಾರಾಟ ನಿರ್ಬಂಧ ಸೆ.30ರವರೆಗೂ ವಿಸ್ತರಣೆ| ಲೋಹದ ಹಕ್ಕಿಗಳ ಹಾರಾಟಕ್ಕೆ ತಡೆ ಮುಂದುವರಿಸಿದ ಕೇಂದ್ರ

ನವದೆಹಲಿ: ಕಳೆದ ವರ್ಷ ಮಾರ್ಚ್​ 23ರಿಂದಲೂ ಅಂತಾರಾಷ್ಟ್ರೀಯ ಪ್ರಯಾಣಿಕರ ವಿಮಾನಗಳ ಮೇಲೆ ವಿಧಿಸಲಾಗಿದ್ದ ನಿರ್ಬಂಧವನ್ನು ಸೆ.30ರ ವರೆಗೂ ಕೇಂದ್ರ ಸರ್ಕಾರ ಮುಂದುವರೆಸಿದೆ. ಇದೇ ಆಗಸ್ಟ್ 31ಕ್ಕೆ ಮುಗಿಯಬಹುದು ಎಂದು ಹೇಳಲಾಗಿತ್ತಾದರೂ, ಕೊರೊನಾ ಇಳಿಕೆ ಕಾಣದ ಪರಿಣಾಮಅಂತಾರಾಷ್ಟ್ರೀಯ ವಿಮಾನಗಳ ಹಾರಾಟದ ಮೇಲಿನ ನಿರ್ಬಂಧವನ್ನು ಸೆಪ್ಟೆಂಬರ್​ 30ರವರೆಗೆ ವಿಸ್ತರಿಸಿ ಕೇಂದ್ರ ಸರ್ಕಾರ ಇಂದು ಆದೇಶ ಹೊರಡಿಸಿದೆ. ಈ ಆದೇಶದಂತೆ, ಸೆಪ್ಟೆಂಬರ್​ 30ರವರೆಗೆ ಭಾರತದಿಂದ ಯಾವುದೇ ವಿಮಾನಗಳೂ ಬೇರೆ ರಾಷ್ಟ್ರಗಳಿಗೆ ಹಾರಾಟ ಮಾಡುವುದಿಲ್ಲ, ಹಾಗೇಯೆ ಬೇರೆ ದೇಶಗಳ ವಿಮಾನಕ್ಕೂ ಭಾರತಕ್ಕೆ ಪ್ರವೇಶ

ಅಂತರಾಷ್ಟ್ರೀಯ ವಿಮಾನ ಹಾರಾಟ ನಿರ್ಬಂಧ ಸೆ.30ರವರೆಗೂ ವಿಸ್ತರಣೆ| ಲೋಹದ ಹಕ್ಕಿಗಳ ಹಾರಾಟಕ್ಕೆ ತಡೆ ಮುಂದುವರಿಸಿದ ಕೇಂದ್ರ Read More »

ಧರ್ಮಸ್ಥಳ:ರಾತ್ರಿ ಜೊತೆಗಿದ್ದ ಪತ್ನಿ‌ ಮುಂಜಾನೆ ಪರಾರಿ| ಪತಿಯಿಂದ ನಾಪತ್ತೆ ದೂರು|

ಬೆಳ್ತಂಗಡಿ: ಎರಡು ಮಕ್ಕಳ ತಾಯಿಯೊಬ್ಬಳು ಗಂಡ, ಮಕ್ಕಳನ್ನು ಬಿಟ್ಟು ಹಣ, ಒಡವೆ ಜೊತೆ‌ ನಾಪತ್ತೆಯಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದಲ್ಲಿ ನಡೆದಿದೆ. ರಾಜಿ ರಾಘವನ್ ನಾಪತ್ತೆಯಾದ ಮಹಿಳೆಯಾಗಿದ್ದು, ಈ ಕುರಿತು ಅವರ ಪತಿ ಚಿದಾನಂದ ಅವರು ಧರ್ಮಸ್ಥಳ ಪೊಲೀಸ್ ಠಾಣೆಗೆ ನಾಪತ್ತೆ ದೂರು ನೀಡಿದ್ದಾರೆ. ವಿದೇಶದಲ್ಲಿ ಕೆಲಸ ಮಾಡುತ್ತಿದ್ದ ರಾಜಿ ಜುಲೈ 11 ರಂದು ನೆರಿಯದ ನಾಯಿಕಟ್ಟೆಯಲ್ಲಿರುವ ಪತಿಯ ಮನೆಗೆ ಮರಳಿದ್ದರು. ಆಗಸ್ಟ್ 27ರ ರಾತ್ರಿ ಪತಿಯ ಜೊತೆ ಮಲಗಿದ್ದ ಅವರು 11 ಗಂಟೆಯ ಸುಮಾರಿಗೆ

ಧರ್ಮಸ್ಥಳ:ರಾತ್ರಿ ಜೊತೆಗಿದ್ದ ಪತ್ನಿ‌ ಮುಂಜಾನೆ ಪರಾರಿ| ಪತಿಯಿಂದ ನಾಪತ್ತೆ ದೂರು| Read More »