Editor

ಪುತ್ತೂರು: ಚಿನ್ನಾಭರಣ ಪಾಲಿಶ್ ಮಾಡುವ ನೆಪದಲ್ಲಿ ಬಂದ ವಂಚಕ -ಐದೂವರೆ ಪವನ್ ಚಿನ್ನ ಕಳೆದುಕೊಂಡ ಗ್ರಾಂ. ಪಂ. ಸದಸ್ಯೆ

ಪುತ್ತೂರು: ಚಿನ್ನಾಭರಣ ಪಾಲಿಶ್ ಮಾಡುವ ನೆಪದಲ್ಲಿ ಬಂದ ವಂಚಕನಿಗೆ ಕೊಟ್ಟು 5 ಪವನ್‍ನ ಚಿನ್ನಾಭರಣವನ್ನು ಕಳೆದುಕೊಂಡಿರುವ ಘಟನೆ ಪುತ್ತೂರಿನಲ್ಲಿ ನಡೆದಿದೆ. ನೆಟ್ಟಣಿಗೆ ಮುಡ್ನೂರು ಗ್ರಾ.ಪಂ. ಸದಸ್ಯೆಯಾಗಿರುವ ಪೆರ್ನಾಜೆ ನಿವಾಸಿ ಇಂದಿರಾ ವಂಚನೆ ಒಳಗಾದವರು. ಚಿನ್ನಾಭರಣವನ್ನು ಹೊಳೆಯುವಂತೆ ಪಾಲಿಶ್ ಮಾಡಿಕೊಡುವುದಾಗಿ ನಂಬಿಸಿ ಪಡೆದುಕೊಂಡ ಆರೋಪಿ ಮಾಂಗಲ್ಯ ಸರ ಸೇರಿದಂತೆ ಸುಮಾರು ಐದೂವರೆ ಪವನ್ ಚಿನ್ನಾಭರಣವನ್ನು ಅನುಮಾನ ಬಾರದಂತೆ ಆಕೆಯ ಕಣ್ಣೆದುರೇ ವಂಚಿಸಿ ಪರಾರಿಯಾಗಿದ್ದಾನೆ. ಬೆಳ್ಳಿ, ಬಂಗಾರದ ಆಭರಣಗಳು ಸೇರಿದಂತೆ ಮನೆಯ ಶೋಕೇಸ್, ಟಿವಿ ಹಾಗೂ ಹಲವು ವಸ್ತುಗಳನ್ನು ಸ್ವಚ್ಛಗೊಳಿಸಿ […]

ಪುತ್ತೂರು: ಚಿನ್ನಾಭರಣ ಪಾಲಿಶ್ ಮಾಡುವ ನೆಪದಲ್ಲಿ ಬಂದ ವಂಚಕ -ಐದೂವರೆ ಪವನ್ ಚಿನ್ನ ಕಳೆದುಕೊಂಡ ಗ್ರಾಂ. ಪಂ. ಸದಸ್ಯೆ Read More »

ಅತ್ಯಾಚಾರ ಪ್ರಕರಣ ವಿಷಯದಲ್ಲಿ ಎಚ್ಚರಿಕೆಯಿಂದ ಮಾತಾಡಿ: ಕಾಂಗ್ರೆಸ್ ನಾಯಕರ ಆರೋಪಕ್ಕೆ ಮಾತಾಡಿ ಗೊಂದಲ ಮಾಡ್ಕೊಬೇಡಿ : ಸಿಎಂ

ಬೆಂಗಳೂರು: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದಿರುವ ಅತ್ಯಾಚಾರ ಪ್ರಕರಣ ಅತ್ಯಂತ ಸೂಕ್ಷ್ಮ ವಿಚಾರ. ಹಾಗಾಘಿ ಈ ಪ್ರಕರಣದ ವಿಷಯದಲ್ಲಿ ಎಚ್ಚರಿಕೆಯಿಂದ ಮಾತನಾಡಿ ಎಂದು ಸಂಪುಟ ಸಚಿವರಿಗೆ ಸಿಎಂ ಬಸವರಾಜ ಬೊಮ್ಮಾಯಿ ಕಿವಿಮಾತು ಹೇಳಿದ್ದಾರೆ. ಕಾಂಗ್ರೆಸ್ ನಾಯಕರ ಆರೋಪಕ್ಕೆ ಮಾತಾಡಿ ಗೊಂದಲ ಮಾಡ್ಕೊಬೇಡಿ. ಈ ರೀತಿ ಘಟನೆ ಆದಾಗ ವಿಪಕ್ಷದವರು ಟೀಕೆ ಮಾಡೋದು ಸಹಜ. ಹಾಗಂತ ಏನೋ ಮಾತಾಡಿ, ಗೊಂದಲ ಮಾಡ್ಕೊಳ್ಳೋದು ಬೇಡ. ಅತ್ಯಾಚಾರ ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಿರಿ ಎಂದು ಹೇಳಿದ್ದಾರೆ. ಬಳಿಕ ಅವರು ನಿಮ್ಮ

ಅತ್ಯಾಚಾರ ಪ್ರಕರಣ ವಿಷಯದಲ್ಲಿ ಎಚ್ಚರಿಕೆಯಿಂದ ಮಾತಾಡಿ: ಕಾಂಗ್ರೆಸ್ ನಾಯಕರ ಆರೋಪಕ್ಕೆ ಮಾತಾಡಿ ಗೊಂದಲ ಮಾಡ್ಕೊಬೇಡಿ : ಸಿಎಂ Read More »

ಮೈಸೂರು ಅತ್ಯಾಚಾರ ಪ್ರಕರಣಕ್ಕೆ ‘ಮಾನಿನಿ‘ ಎಂದು ಹೆಸರಿಟ್ಟ ಇಂದ್ರಜಿತ್ ಲಂಕೇಶ್

ಮೈಸೂರು: ಮೈಸೂರಿನಲ್ಲಿ ಗ್ಯಾಂಗ್ ರೇಪ್ ಹಾಗೂ ದರೋಡೆ ಪ್ರಕರಣಗಳ ಬಗ್ಗೆ ನಿರ್ದೇಶಕ ಇಂದ್ರಜಿತ್ ಲಂಕೇಶ್ ಬಹಳ ಬೇಸರ ವ್ಯಕ್ತಪಡಿಸಿ, ಇಂದು ನಗರದ ಖಾಸಗಿ ಹೋಟೆಲ್‍ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ಅವರು, ಮೈಸೂರಿನಲ್ಲಾದ ಅತ್ಯಾಚಾರ ಪ್ರಕರಣಕ್ಕೆ ಹೊಸ ನಾಮಕರಣ ಮಾಡಿದ್ದಾರೆ. ನಿರ್ಭಯಾ ನಂತರದ ಮೈಸೂರಿನ ಈ ಪ್ರಕರಣಕ್ಕೆ ‘ಮಾನಿನಿ‘ ಎಂದು ಇಂದ್ರಜಿತ್ ಲಂಕೇಶ್ ಹೆಸರಿಟ್ಟಿದ್ದಾರೆ. ಮೈಸೂರು ನೆಚ್ಚಿನ ತಾಣವಾಗಿತ್ತು. ನನ್ನ ಕೊನೆಯ ಹುಟ್ಟುಹಬ್ಬ ಸಹ ಇಲ್ಲೇ ಆಚರಣೆ ಆಗಿದ್ದು. ಇಂತಹ ಸ್ಥಳ ಹೀಗಾಯ್ತಲ್ಲ ಅಂತಾ ಬೇಜಾರಾಗ್ತಿದೆ. ಘಟನೆ ಬಗ್ಗೆ

ಮೈಸೂರು ಅತ್ಯಾಚಾರ ಪ್ರಕರಣಕ್ಕೆ ‘ಮಾನಿನಿ‘ ಎಂದು ಹೆಸರಿಟ್ಟ ಇಂದ್ರಜಿತ್ ಲಂಕೇಶ್ Read More »

ಇವನೇ ನೋಡಿ ಕಾಬೂಲ್‍ನ ಆತ್ಮಾಹುತಿ ಬಾಂಬರ್ – ಆತನ ಫೋಟೋ ರಿಲೀಸ್

ಅಫ್ಘಾನಿಸ್ತಾನ: ಕಾಬೂಲ್‍ನಲ್ಲಿ ಸಂಭವಿಸಿದ ಸರಣಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಣೆ ಹೊತ್ತುಕೊಂಡಿರುವ ಐಸಿಸ್-ಕೆ ಸಂಘಟನೆ ಆತ್ಮಾಹುತಿ ಬಾಂಬರ್ ಫೋಟೋವನ್ನು ಪ್ರಕಟಿಸಿದೆ. ಆತನ ಹೆಸರು ಅಬ್ದುಲ್ ರೆಹಮಾನ್ ಅಲ್-ಲೊಘ್ರಿ. ಈತ ತನ್ನನ್ನೇ ತಾನು ಸ್ಫೋಟಿಸಿಕೊಂಡು ಬೇರೆಯವರ ಸಾವಿಗೂ ಕಾರಣವಾಗಿದ್ದು, ಆತನ ಚಿತ್ರವನ್ನು ಐಸಿಸ್ ಸಂಘಟನೆ ಪ್ರಕಟಿಸಿದೆ. ಅಫ್ಘಾನಿಸ್ತಾನದ ಕಾಬೂಲ್‍ನಲ್ಲಿ ನಿನ್ನೆ ಸಂಭವಿಸಿದ ಸರಣಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ದುಷ್ಕಂತ್ಯದ ಹೊಣೆಯನ್ನು ಹೊತ್ತುಕೊಂಡ ಐಸಿಸ್?-ಕೆ ಸಂಘಟನೆ ಟೆಲಿಗ್ರಾಂ ಖಾತೆಯಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿದೆ. ಕಾಬೂಲ್‍ನಲ್ಲಿ ನಡೆದ ಎರಡೂ ಸ್ಫೋಟಗಳ

ಇವನೇ ನೋಡಿ ಕಾಬೂಲ್‍ನ ಆತ್ಮಾಹುತಿ ಬಾಂಬರ್ – ಆತನ ಫೋಟೋ ರಿಲೀಸ್ Read More »

ಮೈಸೂರಿನ ಗ್ಯಾಂಗ್ ರೇಪ್ ಪ್ರಕರಣ: ಪ್ರಜ್ಞೆಬಂದಾಗ ಸ್ನೇಹಿತೆಯನ್ನು ಪಕ್ಕದ ಪೊದೆಯಿಂದ ಕರೆತಂದರು| ಭೀಕರ ದೃಶ್ಯದ ಬಗ್ಗೆ ಹೇಳಿದ ಸ್ನೇಹಿತ|

ಮೈಸೂರು: ಇಲ್ಲಿನ ನಡೆದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆಯ ಸೇಹಿತ ಆ ಭೀಕರ ದೃಶ್ಯದ ಬಗ್ಗೆ ಹೇಳಿಕೆ ನೀಡಿದ್ದಾನೆ. ಸ್ನೇಹಿತೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಬಳಿಕ ನನ್ನ ತಂದೆಗೆ ಕರೆ ಮಾಡಿ 3 ಲಕ್ಷ ರೂ. ಹಣ ತರಿಸುವಂತೆ ಒತ್ತಾಯಿಸಿದರು ಎಂದಿದ್ದಾನೆ. ಅದು ನಾನು ವಾಕಿಂಗ್ ಮಾಡುವ ಸ್ಥಳ. ಅಲ್ಲಿಗೆ ನನ್ನ ಸ್ನೇಹಿತೆ ಜೊತೆ ಹೋಗಿ ಕುಳಿತಿದ್ದೆ. ಈ ವೇಳೆ ನಾಲ್ವರು ಏಕಾಏಕಿ ಅಲ್ಲಿಗೆ ಬಂದು ಹಲ್ಲೆ ನಡೆಸಿದರು. ದೊಣ್ಣೆಗಳಿಂದ ಹಲ್ಲೆ ಮಾಡಿದರು. ನನ್ನ

ಮೈಸೂರಿನ ಗ್ಯಾಂಗ್ ರೇಪ್ ಪ್ರಕರಣ: ಪ್ರಜ್ಞೆಬಂದಾಗ ಸ್ನೇಹಿತೆಯನ್ನು ಪಕ್ಕದ ಪೊದೆಯಿಂದ ಕರೆತಂದರು| ಭೀಕರ ದೃಶ್ಯದ ಬಗ್ಗೆ ಹೇಳಿದ ಸ್ನೇಹಿತ| Read More »

ಕಾಸರಗೋಡು: ಆನ್‍ಲೈನ್ ತರಗತಿಗಾಗಿ ಮರವೇರಿದ ವಿದ್ಯಾರ್ಥಿ ಕೆಳಕ್ಕೆ ಬಿದ್ದು ಗಂಭೀರ| ಇದು ನೆಟ್‍ವರ್ಕ್ ಹುಡುಕಾಡುತ್ತಿರುವ ವಿದ್ಯಾರ್ಥಿಗಳ ಪಾಡು

ಕಾಸರಗೋಡು: ಆನ್‍ಲೈನ್ ತರಗತಿಗೆ ವೇಳೆ ಮೊಬೈಲ್ ನೆಟ್‍ವರ್ಕ್ ಸಿಗದಿರುವ ಹಿನ್ನಲೆಯಲ್ಲಿ ಮರ ಹತ್ತಿದ ವಿದ್ಯಾರ್ಥಿ ಕೆಳಬಿದ್ದು ಗಂಭೀರ ಗಾಯಗೊಂಡ ಘಟನೆ ಕಣ್ಣೂರು ಕಣ್ಣವ ಬಳಿ ನಿನ್ನೆ ಸಂಜೆ ನಡೆದಿದೆ. ಅನಂತು ಬಾಬು ಗಾಯಗೊಂಡ ವಿದ್ಯಾರ್ಥಿ. ಪ್ಲಸ್‍ವನ್ ಅಲೋಟ್ ಮೆಂಟ್ ವೀಕ್ಷಿಸಲು ಈತ ಮನೆ ಸಮೀಪದ ಮರ ಏರಿದ್ದ ಸಂದರ್ಭದಲ್ಲಿ ಘಟನೆ ನಡೆದಿದೆ. ಮೊಬೈಲ್ ರೇಂಜ್ ಲಭಿಸದಿರುವುದರಿಂದ ಮರವೇರಿ ರೆಂಬೆಯಲ್ಲಿ ಕುಳಿತು ವೀಕ್ಷಿಸುತ್ತಿದ್ದಾಗ ಆಕಸ್ಮಿಕವಾಗಿ ಕೆಳಬಿದ್ದು ಈ ಘಟನೆ ನಡೆದಿದೆ. ಸದ್ಯ ಕಣ್ಣೂರು ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ

ಕಾಸರಗೋಡು: ಆನ್‍ಲೈನ್ ತರಗತಿಗಾಗಿ ಮರವೇರಿದ ವಿದ್ಯಾರ್ಥಿ ಕೆಳಕ್ಕೆ ಬಿದ್ದು ಗಂಭೀರ| ಇದು ನೆಟ್‍ವರ್ಕ್ ಹುಡುಕಾಡುತ್ತಿರುವ ವಿದ್ಯಾರ್ಥಿಗಳ ಪಾಡು Read More »

ದ.ಕ.: ಇಂದು ರಾತ್ರಿ 9 ಗಂಟೆಯಿಂದ ಮತ್ತೆ ವೀಕೆಂಡ್ ಕರ್ಪ್ಯೂ ಜಾರಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್‍ಗೆ ಸಂಬಂಧಿತ ವಾರಾಂತ್ಯ ಕರ್ಪ್ಯೂ ಇಂದು ರಾತ್ರಿ 9 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ ಈ ಅವಧಿಯಲ್ಲಿ ಅಗತ್ಯ ವಸ್ತುಗಳ ಅಂಗಡಿಗಳು, ಹಣ್ಣು – ತರಕಾರಿಗಳು, ಮೀನು, ಮಾಂಸ ಮತ್ತು ಬೀದಿ ವ್ಯಾಪಾರಿಗಳ ಅಂಗಡಿಗಳು ಬೆಳಿಗ್ಗೆ 5 ರಿಂದ ಮಧ್ಯಾಹ್ನ 2 ರವರೆಗೆ ಕಾರ್ಯನಿರ್ವಹಿಸಲು ಅನುಮತಿಸಲಾಗಿದೆ. ಮದ್ಯದ ಅಂಗಡಿಗಳು ಬೆಳಿಗ್ಗೆ 5 ರಿಂದ ಮಧ್ಯಾಹ್ನ 2 ರವರೆಗೆ ಪಾರ್ಸೆಲ್‍ಗಳನ್ನು ನೀಡಬಹುದು. ಹೋಟೆಲ್‍ಗಳು ಪಾರ್ಸೆಲ್‍ಗಳನ್ನು ಮಾತ್ರ ನೀಡಬಹುದು. ದಿನದ 24

ದ.ಕ.: ಇಂದು ರಾತ್ರಿ 9 ಗಂಟೆಯಿಂದ ಮತ್ತೆ ವೀಕೆಂಡ್ ಕರ್ಪ್ಯೂ ಜಾರಿ Read More »

ಇದ್ದಕ್ಕಿದ್ದಂತೆ ಪ್ರತ್ಯಕ್ಷವಾಯ್ತು ವಿಚಿತ್ರ ಗೊಂಬೆ…! ಅಪರೂಪದ ಈ ಗೊಂಬೆ ಸೃಷ್ಟಿಸುತ್ತಿದೆ ಕೌತುಕ| ಈ ವಿಚಿತ್ರ ಗೊಂಬೆ ಬಂದಿದ್ದೇಕೆ?

ವಿಜಯನಗರ: ಇಲ್ಲಿನ ಕೂಡ್ಲಿಗಿ ತಾಲೂಕು ತುಪ್ಪಕನಹಳ್ಳಿ ಗ್ರಾಮದ, ಹೊರವಲಯ ಅರಣ್ಯ ಪ್ರದೇಶದ ಮಾಗಡಿಕಲ್ಲು ಕಟ್ಟೆ ಎಂಬಲ್ಲಿ ಅಪರೂಪದ ಗೊಂಬೆ ಕಂಡುಬಂದಿದ್ದು, ವಾಮಾಚಾರ ಪ್ರಯೋಗಕ್ಕಾಗಿ ಅದನ್ನು ವಿಧಿವತ್ತಾಗಿ ಪ್ರತಿಷ್ಠ‍ಾಪಿಸಲಾಗಿದೆ ಎಂದು ಗ್ರ‍ಾಮಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ. ಸಕಾಲಕ್ಕೆ ಮಳೆ ಬಾರದಿದ್ದಾಗ ಅಥವಾ ಗ್ರ‍ಾಮಕ್ಕೆ ಯಾವುದೋ ದುಷ್ಠ ಶಕ್ತಿಯ ಉಪಟಳ ಇದ್ದಾಗ, ಈ ರೀತಿಯಲ್ಲಿ ವಾಮಾಚಾರ ಪ್ರಯೋಗದ ಮೂಲಕ ಗ್ರಾಮದಿಂದ ಹೊರಹಾಕಿ ದಿಗ್ಭಂದನ ಹಾಕಲಾಗುತ್ತದೆ ಎಂದು ಕೆಲ ಹಿರಿಯ ಗ್ರ‍ಾಮಸ್ಥರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ ಈ ಗೊಂಬೆ ಪ್ರತಿಷ್ಠಾಪನೆಯನ್ನು ಯಾರು.!?ಯಾವ ಉದ್ದೇಶಕ್ಕಾಗಿ

ಇದ್ದಕ್ಕಿದ್ದಂತೆ ಪ್ರತ್ಯಕ್ಷವಾಯ್ತು ವಿಚಿತ್ರ ಗೊಂಬೆ…! ಅಪರೂಪದ ಈ ಗೊಂಬೆ ಸೃಷ್ಟಿಸುತ್ತಿದೆ ಕೌತುಕ| ಈ ವಿಚಿತ್ರ ಗೊಂಬೆ ಬಂದಿದ್ದೇಕೆ? Read More »

ಪ್ರೀತಿ ನಿರಾಕರಿಸಿದ ಯುವತಿಯನ್ನು ಕಾಡಿಗೆ ಕರೆದೊಯ್ದ ಪಾಗಲ್ ಪ್ರೇಮಿ| ಮುಂದೆ ಅಲ್ಲಿ ನಡೆದಿದ್ದು ಏನು?

ಶಿವಮೊಗ್ಗ: ಪ್ರೀತಿಸಲು ನಿರಾಕರಿಸಿದ ವಿದ್ಯಾರ್ಥಿನಿಯನ್ನು ಕಾಡಿಗೆ ಕರೆದೊಯ್ದ ಯುವಕ ಕೊಲೆ ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಿವಮೊಗ್ಗದ ಖಾಸಗಿ ನರ್ಸಿಂಗ್ ಕಾಲೇಜಿನಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ನಾಪತ್ತೆಯಾಗಿದ್ದು, ತುಂಗಾಗರ ಠಾಣೆಗೆ ದೂರು ನೀಡಲಾಗಿತ್ತು. ಆಕೆಯನ್ನು ಹೊಸನಗರ ತಾಲೂಕು ತಳಲೆ ಗ್ರಾಮದ ಶಿವಮೂರ್ತಿ(22) ಎಂಬಾತ ಸಮೀಪದ ಕಾಡಿಗೆ ಕರೆದುಕೊಂಡು ಹೋಗಿ ಪ್ರೀತಿಸುವಂತೆ ಬಲವಂತ ಮಾಡಿದ್ದಾನೆ. ವಿದ್ಯಾರ್ಥಿನಿ ಪ್ರೀತಿಸಲು ನಿರಾಕರಿಸಿದಾಗ ಚೂಡಿದಾರ್ ವೇಲ್ ನಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿದ್ದಾನೆ.

ಪ್ರೀತಿ ನಿರಾಕರಿಸಿದ ಯುವತಿಯನ್ನು ಕಾಡಿಗೆ ಕರೆದೊಯ್ದ ಪಾಗಲ್ ಪ್ರೇಮಿ| ಮುಂದೆ ಅಲ್ಲಿ ನಡೆದಿದ್ದು ಏನು? Read More »

ಸೈನಿಕರನ್ನು ಕೊಂದವರನ್ನು ಸುಮ್ನೆ ಬಿಡಲ್ಲ| ಕಾಬೂಲ್ ಸ್ಪೋಟದಿಂದ ವ್ಯಗ್ರನಾದ ದೊಡ್ಡಣ್ಣ|

ವಾಷಿಂಗ್ಟನ್: ಅಫ್ಘಾನಿಸ್ತಾನದ ಕಾಬೂಲ್ ನಲ್ಲಿ ಸರಣಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರ್ನಿಂಗ್ ಮಾಡಿದ ಅಮೆರಿಕ ಅಧ್ಯಕ್ಷ ಜೋ ಬೈಡೆನ್, ನಾವು ಉಗ್ರರ ದಾಳಿಗಳಿಂದ ಕಂಗೆಡುವುವುದಿಲ್ಲ. ಜನರನ್ನು ಸುರಕ್ಷಿತವಾಗಿ ಸ್ಥಳಾಂತರ ಮಾಡುತ್ತೇವೆ. ಐಸಿಸ್ ವಿರುದ್ಧ ಕಾರ್ಯಾಚರಣೆಗೆ ಯೋಜನೆ ರೂಪಿಸಲಾಗಿದೆ. ಎಲ್ಲಿ? ಹೇಗೆ? ಎಷ್ಟು ಹೊತ್ತಿಗೆ ಹೊಡೆಯಬೇಕೋ ಅಷ್ಟುಹೊತ್ತಿಗೆ ಹೊಡೆಯುತ್ತೇವೆ. ಐಸಿಸ್ ಉಗ್ರರು ಯಾವತ್ತಿಗೂ ಗೆಲುವು ಸಾಧಿಸಲು ಸಾಧ್ಯವಿಲ್ಲ ಎಂದು ಗುಡುಗಿದ್ದಾರೆ. ಜಗತ್ತಿನ ಜನ ಸಂಕಷ್ಟದಲ್ಲಿದ್ದಾಗ ಅಂಥವರ ನೆರವಿಗೆ ನಿಲ್ಲುವುದು ಅಮೆರಿಕ. ದೇವರ ಪ್ರಶ್ನೆಗೆ ಮಾತ್ರ ಅಮೆರಿಕ ಸೇನೆ ಉತ್ತರ

ಸೈನಿಕರನ್ನು ಕೊಂದವರನ್ನು ಸುಮ್ನೆ ಬಿಡಲ್ಲ| ಕಾಬೂಲ್ ಸ್ಪೋಟದಿಂದ ವ್ಯಗ್ರನಾದ ದೊಡ್ಡಣ್ಣ| Read More »