Editor

ಮೈಸೂರು| ಚಾಮುಂಡಿ ಬೆಟ್ಟದ ತಪ್ಪಲಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್| ಬೆಚ್ಚಿಬಿದ್ದ ಸಾಂಸ್ಕೃತಿಕ ನಗರಿ|

ಮೈಸೂರು, ಆಗಸ್ಟ್ 25: ಶಾಂತಿ ಹಾಗೂ ಸೌಹಾರ್ದತೆಗೆ ಹೆಸರಾಗಿರುವ ಸಾಂಸ್ಕೃತಿಕ‌ ನಗರಿ ಮೈಸೂರು ಇದೀಗ ಕ್ರೈಂ ಸಿಟಿಯಾಗಿ ಬದಲಾಗುತ್ತಿದೆ. ಒಂದು ಕಾಲದಲ್ಲಿ ಪೆನ್ಷನರ್ಸ್ ಪ್ಯಾರಡೈಸ್ ಎನಿಸಿದ್ದ ಮೈಸೂರಿನಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳು ಮೈಸೂರಿಗರನ್ನು ಬೆಚ್ಚಿಬೀಳಿಸಿದೆ. ಹೊರ ರಾಜ್ಯಗಳಲ್ಲಿ ಹೆಚ್ಚಾಗಿ ನಡೆಯುತ್ತಿದ್ದ ಗ್ಯಾಂಗ್ ರೇಪ್ ಪ್ರಕರಣ ಇದೀಗ ಮೈಸೂರಿಗೂ ವಕ್ಕರಿಸಿದೆ. ಮೈಸೂರಿನ ಪ್ರತಿಷ್ಠಿತ ಖಾಸಗಿ ಕಾಲೇಜು ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ನಡೆದಿರುವ ಘೋರ ಘಟನೆ ಮೈಸೂರಿನಲ್ಲಿ ನಡೆದಿದೆ. ಹೊರ ರಾಜ್ಯದಿಂದ ವ್ಯಾಸಂಗಕ್ಕೆ ಬಂದು ಖಾಸಗಿ […]

ಮೈಸೂರು| ಚಾಮುಂಡಿ ಬೆಟ್ಟದ ತಪ್ಪಲಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್| ಬೆಚ್ಚಿಬಿದ್ದ ಸಾಂಸ್ಕೃತಿಕ ನಗರಿ| Read More »

ನಂದಿಬೆಟ್ಟದ ಬ್ರಹ್ಮಗಿರಿಯಲ್ಲಿ ಭೂ ಕುಸಿತ – ಮೇಲ್ಭಾಗದಲ್ಲಿಯೇ ಸಿಲುಕಿಕೊಂಡ ಪ್ರವಾಸಿಗರು

ಚಿಕ್ಕಬಳ್ಳಾಪುರ: ನಂದಿಬೆಟ್ಟದ ಬ್ರಹ್ಮಗಿರಿಯಲ್ಲಿ ಭೂ ಕುಸಿತವಾಗಿದ್ದು, ಮುಖ್ಯ ರಸ್ತೆ 10 ಅಡಿ ಆಳಕ್ಕೆ ಕುಸಿದಿದೆ. ನಂದಿಬೆಟ್ಟದ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದೆ. ಇದರಿಂದ ವಾಸ್ತವ್ಯ ಹೂಡಿದ್ದ ಪ್ರವಾಸಿಗರು ಮೇಲ್ಭಾಗದಲ್ಲಿಯೇ ಸಿಲುಕಿಕೊಂಡಿದ್ದಾರೆ. ಮಂಗಳವಾರ ರಾತ್ರಿ ನಂದಿಬೆಟ್ಟದ ಪರಿಸರದಲ್ಲಿ ಭಾರೀ ಮಳೆಯಾಗಿದ್ದು, ಮೇಲ್ಭಾಗದಿಂದ ಮಣ್ಣು ಕೊಚ್ಚಿಕೊಂಡು ಬಂದಿದೆ. ಮಳೆಯ ನೀರಿನ ಜೊತೆ ಮಣ್ಣು, ಬೃಹತ್ ಬಂಡೆ, ಮರ ಗಿಡಗಳು ರಸ್ತೆಗೆ ಅಡ್ಡಲಾಗಿ ಬಿದ್ದಿವೆ. ಇನ್ನೂ ವಿದ್ಯುತ್ ಕಂಬಗಳು ಧರೆಗೆ ಉಳಿದಿರುವ ಕಾರಣ ನಂದಿಗಿರಿಧಾಮದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ರಸ್ತೆ ಬಂದ್ ಆಗಿದ್ದರಿಂದ

ನಂದಿಬೆಟ್ಟದ ಬ್ರಹ್ಮಗಿರಿಯಲ್ಲಿ ಭೂ ಕುಸಿತ – ಮೇಲ್ಭಾಗದಲ್ಲಿಯೇ ಸಿಲುಕಿಕೊಂಡ ಪ್ರವಾಸಿಗರು Read More »

ಪುತ್ತೂರು: ಕಾರು ಚಾಲಕನ ಕೊಲೆ ಯತ್ನ |6 ಮಂದಿಯ ಬಂಧನ |ಇದು ಕಾರ್ತಿಕ್ ಮೇರ್ಲ ಕೊಲೆ ಕೇಸಿಗೆ ಸಂಬಂಧವೇ?

ಪುತ್ತೂರು: ದರ್ಬೆ ಪೆಟ್ರೋಲ್ ಪಂಪ್‌ನಲ್ಲಿ ಆ.24ರಂದು ರಾತ್ರಿ ಇನ್ನೋವಾ ಕಾರು ಚಾಲಕನಿಗೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಕೆಲವೇ ಗಂಟೆಗಳಲ್ಲಿ 6 ಮಂದಿ ಆರೋಪಿಗಳನ್ನು ಪುತ್ತೂರು ನಗರ ಪೊಲೀಸ್ ಠಾಣಾ ಇನ್‌ಸ್ಪೆಕ್ಟರ್ ಗೋಪಾಲ್ ನಾಯ್ಕ್ ನೇತೃತ್ವದಲ್ಲಿ ಬಂಧಿಸಿದ್ದಾರೆ. ಇದು ಹಿಂಜಾವೇ ಯ ಕಾರ್ತಿಕ್ ಮೇರ್ಲ ಕೊಲೆ ಕೇಸಿಗೆ ಸಂಬಂಧಿಸಿದ ಈ ಕೊಲೆ ಯತ್ನ ನಡೆದಿದೆ ಎಂದು ತನಿಖೆ ವೇಳೆ ತಿಳಿದು ಬಂಧಿದೆ. ಕಿಶೊರ್ ಮೇರ್ಲ, ರಾಕೇಶ್ ಪಂಚೋಡಿ, ರೆಹಮಂತ್, ಇಬ್ರಾಹಿಂ, ದೇವಿಪ್ರಸಾದ್ ಮತ್ತು ಅಶ್ರಫ್ ಬಂಧಿತ ಆರೋಪಿಗಳು.

ಪುತ್ತೂರು: ಕಾರು ಚಾಲಕನ ಕೊಲೆ ಯತ್ನ |6 ಮಂದಿಯ ಬಂಧನ |ಇದು ಕಾರ್ತಿಕ್ ಮೇರ್ಲ ಕೊಲೆ ಕೇಸಿಗೆ ಸಂಬಂಧವೇ? Read More »

ಉಡುಪಿ: ಬಿ.ಆರ್ ಶೆಟ್ಟಿ ಆಸ್ಪತ್ರೆಯಲ್ಲಿ ಮುಗಿಯದ ಕಥೆಯಾದ ಸಿಬ್ಬಂದಿ ಮುಷ್ಕರ

ಉಡುಪಿ: ಇಲ್ಲಿನ ಬಿ.ಆರ್ ಶೆಟ್ಟಿ ನಿರ್ವಹಣೆ ಮಾಡುತ್ತಿರುವ ಆಸ್ಪತ್ರೆಯ ಸಿಬ್ಬಂದಿಯ ಮುಷ್ಕರ ಮುಗಿಯದ ಕಥೆಯಾಗಿದ್ದು, ಸಾರ್ವಜನಿಕರು, ಆಸ್ಪತ್ರೆಗೆ ಆಗಮಿಸುತ್ತಿರು ರೋಗಿಗಳಿಗೆ ಸಂಕಷ್ಟ ಎದುರಾಗಿದೆ. ವೇತನ ನೀಡುವಂತೆ ಆಗ್ರಹಿಸಿ ಇತ್ತೀಚೆಗೆ ಪ್ರತಿಭಟನೆ ಮಾಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ನೇತೃತ್ವ ವಹಿಸಿದ್ದ 16 ಸಿಬ್ಬಂದಿಯನ್ನು ಬಿ.ಆರ್ ಶೆಟ್ಟಿ ಆಸ್ಪತ್ರೆಯ ಆಡಳಿತ ಮಂಡಳಿ ಕೆಲಸದಿಂದಲೇ ತೆಗೆದು ಹಾಕಿದೆ. ಹೀಗಾಗಿ ಕೆಲಸದಿಂದ ತೆಗೆದುಹಾಕಲು ಕಾರಣ ತಿಳಿಸಲು ಪಟ್ಟು ಹಿಡಿದು ಬಿ.ಆರ್.ಶೆಟ್ಟಿ ಆಸ್ಪತ್ರೆಯ ಮುಂದೆ ಸಿಬ್ಬಂದಿ ಮತ್ತೆ ಪ್ರತಿಭಟನೆ ನಡೆಸುತ್ತಿದ್ದಾರೆ. ಕೆಲಸ ಕಳೆದುಕೊಂಡವರ ಬೆಂಬಲಕ್ಕೆ ಇತರ

ಉಡುಪಿ: ಬಿ.ಆರ್ ಶೆಟ್ಟಿ ಆಸ್ಪತ್ರೆಯಲ್ಲಿ ಮುಗಿಯದ ಕಥೆಯಾದ ಸಿಬ್ಬಂದಿ ಮುಷ್ಕರ Read More »

ನಮಗೆ ಭಾರತವೇ ಸುರಕ್ಷಿತ ರಾಷ್ಟ್ರ| ಮಂಗಳೂರು ವಿವಿ ಪ್ರವೇಶಕ್ಕೆ ಅರ್ಜಿ ಸಲ್ಲಿಸಿದ ನೂರಾರು ಅಫ್ಘಾನ್ ವಿದ್ಯಾರ್ಥಿಗಳು|

ಮಂಗಳೂರು: ಅಫ್ಘಾನಿಸ್ತಾನ ತಾಲಿಬಾನ್‌ಗಳ ವಶವಾದ ಬೆನ್ನಲ್ಲೇ ಇಡೀ ಜಗತ್ತು ಅಫ್ಘಾನಿಸ್ತಾನದ ಕಡೆಗೆ ಕಿಸುಗಣ್ಣು ಇರಿಸಿದೆ, ಅದರೆ ಇತ್ತಾ ಅಫ್ಘಾನಿಸ್ತಾನದ ವಿದ್ಯಾರ್ಥಿಗಳು ಮಂಗಳೂರು ವಿಶ್ವ ವಿದ್ಯಾನಿಲಯದೆಡೆ ಹೆಜ್ಜೆ ಹಾಕಲು ಮುಂದಾಗಿದ್ದು, ಸಾವಿರಾರು ವಿದ್ಯಾರ್ಥಿಗಳು ವಿ.ವಿ ಪ್ರವೇಶಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅಪ್ಘಾನಿಸ್ತಾನದ ಬೆಳವಣಿಗೆಯ ಬಳಿಕ ನಮಗೆ ಭಾರತವು ಸುರಕ್ಷಿತ ರಾಷ್ಟ್ರವೆಂದು ಭಾರತದಲ್ಲಿ ವ್ಯಾಸಂಗ ಮಾಡುತ್ತಿದ್ದ ಅಪ್ಘಾನ್ ವಿದ್ಯಾರ್ಥಿಗಳ ಹೇಳಿಕೆಯನ್ನು ನಾವು ಮತ್ತೊಮ್ಮೆ ನೆನಪಿಸಿಕೊಳ್ಳ ಬಹುದು. ಅಪ್ಘಾನಿಸ್ತಾನದ ಸಾವಿರಾರು ವಿದ್ಯಾರ್ಥಿಗಳು ಮಂಗಳೂರು ವಿ.ವಿ.ಯಲ್ಲಿ ವ್ಯಾಸಂಗ ಮಾಡಲು ಅರ್ಜಿ ಸಲ್ಲಿಕೆ ಮಾಡಿದ್ದು, ಇಷ್ಟೊಂದು

ನಮಗೆ ಭಾರತವೇ ಸುರಕ್ಷಿತ ರಾಷ್ಟ್ರ| ಮಂಗಳೂರು ವಿವಿ ಪ್ರವೇಶಕ್ಕೆ ಅರ್ಜಿ ಸಲ್ಲಿಸಿದ ನೂರಾರು ಅಫ್ಘಾನ್ ವಿದ್ಯಾರ್ಥಿಗಳು| Read More »

ಸುಳ್ಯ| ದನಕ್ಕೆ ಗುದ್ದಿದ ಬೈಕ್, ದನ ಸ್ಥಳದಲ್ಲೇ ಸಾವು, ಸವಾರ ಗಂಭೀರ|

ಸುಳ್ಯ: ಮಾಣಿ‌- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಗೂನಡ್ಕ ಸಮೀಪ ಸುಳ್ಯದಿಂದ ಕೊಯನಾಡಿಗೆ ಹೋಗುತ್ತಿದ್ದ ಬೈಕ್ ದನಕ್ಕೆ ಢಿಕ್ಕಿ ಹೊಡೆದ ಪರಿಣಾಮ ದನ ಸ್ಥಳದಲ್ಲಿ ಸಾವಿಗೀಡಾಗಿ ಬೈಕ್ ಸವಾರರು ಗಂಭೀರ ಗಾಯಗೊಂಡಿರುವ ಘಟನೆ ಮಂಗಳವಾರ ತಡರಾತ್ರಿ‌ ಸಂಭವಿಸಿದೆ. ಗಾಯಗೊಂಡವರನ್ನು ಕೊಯಿನಾಡು ಪರಿಸರದ ಸವಾದ್ ಹಾಗೂ ಮಿರ್ಷದ್‌ ಎಂದು ಗುರುತಿಸಲಾಗಿದೆ.ಈ ಇಬ್ಬರು ಯುವಕರು ಮಂಗಳೂರಿಗೆ ಹೋಗಿದ್ದು ಸಂಜೆ ಮರಳಿ ಬರುವ ಸಂದರ್ಭದಲ್ಲಿ ಗೂನಡ್ಕ ಸಮೀಪ ಘಟನೆ ಸಂಭವಿಸಿದೆ. ಅಪಘಾತದಿಂದ ಸವಾದ್ ರವರಿಗೆ ತಲೆಗೆ ಗಂಭೀರ ಗಾಯವಾಗಿದ್ದು ಅವರನ್ನು ಮಂಗಳೂರು ಆಸ್ಪತ್ರೆಗೆ

ಸುಳ್ಯ| ದನಕ್ಕೆ ಗುದ್ದಿದ ಬೈಕ್, ದನ ಸ್ಥಳದಲ್ಲೇ ಸಾವು, ಸವಾರ ಗಂಭೀರ| Read More »

ಸುಳ್ಳು ವರದಕ್ಷಿಣೆ ಆರೋಪ| ಸೊಸೆಯ ಕಿರುಕುಳ ತಾಳಲಾರದೆ ಮಾವ ಆತ್ಮಹತ್ಯೆ

ಪಂಜಾಬ್: ವರದಕ್ಷಿಣೆ ಕಿರುಕುಳ ತಾಳಲಾರದೆ ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿದ, ಆತ್ಮಹತ್ಯೆ ಮಾಡಿಕೊಂಡ ಅದೆಷ್ಟೋ ಮಹಿಳೆಯರ ಕತೆಗಳನ್ನು ಕೇಳುತ್ತಲೇ ಇರುತ್ತೇವೆ. ಪಂಜಾಬ್​ನ ಲುಧಿಯಾನದ 60 ವರ್ಷದ ವ್ಯಕ್ತಿಯೊಬ್ಬರು ತಮ್ಮ ಸೊಸೆ ಮಾಡಿದ ಸುಳ್ಳು ವರದಕ್ಷಿಣೆ ಆರೋಪದಿಂದ ಅವಮಾನಗೊಂಡು, ತಮಗೆ ತಾವೇ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಗಳಂತೆ ನೋಡಿಕೊಳ್ಳುತ್ತಿದ್ದ ಸೊಸೆ ವರದಕ್ಷಿಣೆ ಆರೋಪ ಮಾಡಿ, ಪೊಲೀಸರಿಗೆ ದೂರು ನೀಡುತ್ತೇವೆಂದು ಹೇಳಿದ್ದನ್ನು ಸಹಿಸಲಾಗದೆ ಆ ವ್ಯಕ್ತಿ ಬೆಂಕಿ ಹಚ್ಚಿಕೊಂಡು ಸಾವನ್ನಪ್ಪಿದ್ದಾರೆ. 60 ವರ್ಷದ ಆ ವ್ಯಕ್ತಿಗೆ ಸೊಸೆ ಹಾಗೂ ಆಕೆಯ

ಸುಳ್ಳು ವರದಕ್ಷಿಣೆ ಆರೋಪ| ಸೊಸೆಯ ಕಿರುಕುಳ ತಾಳಲಾರದೆ ಮಾವ ಆತ್ಮಹತ್ಯೆ Read More »

ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕ ಕುಮಾರ್ ಕುಮಾರಮಂಗಲ ಇನ್ನಿಲ್ಲ

ಪುತ್ತೂರು: ಶಿಕ್ಷಣ ಕ್ಷೇತ್ರದಲ್ಲಿನ ಉತ್ತಮ ಸೇವೆಗಾಗಿ ಜಿಲ್ಲಾ, ರಾಜ್ಯ ಮತ್ತು ರಾಷ್ಟ್ರ ಮಟ್ಟದ ಪ್ರಶಸ್ತಿ ಪುರಸ್ಕೃತರಾಗಿದ್ದ ನಿವೃತ್ತ ಶಿಕ್ಷಕ ಕುಮಾರ್ ಮಾಸ್ಟರ್ ಕುಮಾರಮಂಗಲ(68) ಅಲ್ಪ ಕಾಲದ ಅಸೌಖ್ಯದಿಂದ ಮಂಗಳವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಪುತ್ತೂರು ತಾಲೂಕಿನ ಕಬಕ ಗ್ರಾಮದ ವಿದ್ಯಾಪುರ ಎಂಬಲ್ಲಿನ ನಿವಾಸಿಯಾಗಿರುವ ಕುಮಾರ್ ಮಾಸ್ಟರ್ ಅವರು 36 ವರ್ಷಗಳ ಕಾಲ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಇವರ ಸೇವೆಯನ್ನು ಗುರುತಿಸಿ 1994ರಲ್ಲಿ ಜಿಲ್ಲಾ ಪ್ರಶಸ್ತಿ, 2009ರಲ್ಲಿ ರಾಜ್ಯ ಪ್ರಶಸ್ತಿ ಹಾಗೂ 2011ರಲ್ಲಿ

ರಾಷ್ಟ್ರ ಪ್ರಶಸ್ತಿ ವಿಜೇತ ಶಿಕ್ಷಕ ಕುಮಾರ್ ಕುಮಾರಮಂಗಲ ಇನ್ನಿಲ್ಲ Read More »

ಬಿಕ್ಷುಕರನ್ನು ಪಾಕಿಸ್ತಾನಕ್ಕೆ ತೆರಳುವಂತೆ ತಾಕೀತು ಮಾಡಿ ಥಳಿತ

ರಾಜಸ್ಥಾನ: ಭಿಕ್ಷುಕರನ್ನು ಪಾಕಿಸ್ತಾನಕ್ಕೆ ಹೋಗುವಂತೆ ಆಗ್ರಹಿಸಿ ದುಷ್ಕರ್ಮಿಗಳು ಥಳಿಸಿರುವ ಅಮಾನವೀಯ ಘಟನೆ ರಾಜಸ್ಥಾನದ ಅಜ್ಮೀರ್ ನಲ್ಲಿ ನಡೆದಿದೆ. ದುಷ್ಕರ್ಮಿಗಳ ತಂಡ ಇಬ್ಬರು ಪುರುಷ ಮತ್ತು ಓರ್ವ ಮಹಿಳಾ ಭಿಕ್ಷುಕಿ ಮೇಲೆ ಕಿರುಕುಳ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿನ ದೃಶ್ಯಗಳಲ್ಲಿ ವ್ಯಕ್ತಿ ಮೇಲೆ ಥಳಿಸುವುದು ಮತ್ತು ಆತನ ಕುಟುಂಬಸ್ಥರನ್ನು ನಿಂದಿಸಿರುವುದು ಸೆರೆಯಾಗಿದೆ. ಘಟನೆಗೆ ಸಂಬಂಧಿಸಿ ಲಲಿತ್ ಶರ್ಮಾ, ಸುರೇಂದ್ರ , ತೇಜಪಾಲ್, ರೋಹಿತ್ ಶರ್ಮಾ, ಶೈಲೇಂದ್ರ ಎಂಬ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳು ನೀವು ಉತ್ತರ

ಬಿಕ್ಷುಕರನ್ನು ಪಾಕಿಸ್ತಾನಕ್ಕೆ ತೆರಳುವಂತೆ ತಾಕೀತು ಮಾಡಿ ಥಳಿತ Read More »

ಕಾಬೂಲ್‍ನಿಂದ ಉಕ್ರೇನ್ ವಿಮಾನ ಹೈಜಾಕ್

ಕಾಬೂಲ್: ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಜನರ ರಕ್ಷಣೆಗೆ ತೆರಳಿದ್ದ ಉಕ್ರೇನ್ ವಿಮಾನ ಹೈಜಾಕ್ ಮಾಡಲಾಗಿದೆ. ತಮ್ಮ ವಿಮಾನವನ್ನು ಇರಾನ್ ಗೆ ತೆಗೆದುಕೊಂಡು ಹೋಗಲಾಗಿದೆ ಎಂದು ಉಕ್ರೇನ್ ಸರ್ಕಾರದ ಸಚಿವರು ಹೇಳಿದ್ದಾರೆ. ಭಾನುವಾರವೇ ವಿಮಾನವೇ ಹೈಜಾಕ್ ಆಗಿದ್ದು, ಕೆಲ ಅಪರಿಚಿತರು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ ಉಕ್ರೇನ್ ಸರ್ಕಾರ ಹೇಳಿದೆ. ಉಕ್ರೇನ್ ಡೆಪ್ಯುಟಿ ವಿದೇಶಾಂಗ ಮಂತ್ರಿ ಯೆವ್ಗೆನಿ ಯೆನಿನ್, ಭಾನುವಾರ ಕೆಲ ಅಪರಿಚಿತರು ವಿಮಾನ ಹೈಜಾಕ್ ಮಾಡಿದ್ದು, ಇರಾನ್ ನತ್ತ ತೆಗೆದುಕೊಂಡು ಹೋಗಿದ್ದಾರೆ. ನಮ್ಮ ಜನರು ಏರ್ ಪೋರ್ಟ್ ತಲುಪದ ಕಾರಣ

ಕಾಬೂಲ್‍ನಿಂದ ಉಕ್ರೇನ್ ವಿಮಾನ ಹೈಜಾಕ್ Read More »