Editor

ನಾಟಕ ಅಭ್ಯಾಸದ ವೇಳೆ ನೇಣು ಬಿಗಿದು ಬಾಲಕ ಸಾವು

ಉ.ಪ್ರದೇಶ: ಸ್ವಾತಂತ್ರ್ಯ ದಿನಾಚರಣೆಗಾಗಿ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ನಾಟಕ ಅಭ್ಯಾಸದ ವೇಳೆ ಬಾಲಕನೊಬ್ಬ ನೇಣಿನ ಕುಣಿಕೆ ಬಿದ್ದು ಮೃತಪಟ್ಟ ದಾರುಣ ಘಟನೆ ಉತ್ತರ ಪ್ರದೇಶದಲ್ಲಿ ಸಂಭವಿಸಿದೆ. ಬದೌನ್ ಜಿಲ್ಲೆಯ ಬಾಬತ್ ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ಭಗತ್ ಸಿಂಗ್ ಅವರನ್ನು ಗಲ್ಲಿಗೆ ಹಾಕುವ ದೃಶ್ಯದ ಅಭ್ಯಾಸದ ವೇಳೆ ನೇಣು ಕುಣಿಕೆ ಹಾಕಿದಾಗ ಆಕಸ್ಮಿಕವಾಗಿ ಸ್ಟೂಲ್ ನಿಂದ ಬಾಲಕ ಬಿದ್ದಿದ್ದಾನೆ. ಮೃತ ಬಾಲಕ ಶಿವಂ ಎಂದು ಗುರುತಿಸಲಾಗಿದೆ. ಸ್ವಾತಂತ್ರ್ಯ ದಿನಾಚರಣೆಯಂದು ಭಗತ್ ಸಿಂಗ್, ರಾಜ್ ಗುರು ಮತ್ತು […]

ನಾಟಕ ಅಭ್ಯಾಸದ ವೇಳೆ ನೇಣು ಬಿಗಿದು ಬಾಲಕ ಸಾವು Read More »

ಯುವತಿ ಕೈಗೆ ಮಗುನೀಡಿ‌ ಮೋಸ ಮಾಡಿದ ಕಿರುತೆರೆ ನಟ

ಬೆಂಗಳೂರು: ಕನ್ನಡದ ಕಿರುತೆರೆ ನಟ (ವಿಲನ್ ಪಾತ್ರಧಾರಿ) ಚಿಕ್ಕಮಗಳೂರು ಜಿಲ್ಲೆ ತಾಲೂಕಿನ ಕಳಸಾಪುರ ನಿವಾಸಿ ಉಮೇಶ್, ಯುವತಿಯೊಂದಿಗೆ ಪ್ರೀತಿಯ ನಾಟಕವಾಡಿ ಮೋಸ ಮಾಡಿದ್ದಾನೆ. ಉಮೇಶನ ಬಣ್ಣದ ಮಾತುಗಳಿಗೆ ಮರುಳಾದ ಯುವತಿ ಒಂದು ಮಗುವಿಗೆ ಜನ್ಮ ನೀಡಿದ್ದಾಳೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣ ಯುವತಿ ಉಮೇಶ್ ನಿಂದ ಮೋಸಕ್ಕೊಳಗಾಗಿದ್ದಾಳೆ. ಈಕೆಯನ್ನು ಮದುವೆಯಾಗುವುದಾಗಿ ನಂಬಿಸಿ ಒಂದು ಮಗುವಿಗೆ ಕಾರಣನಾಗಿದ್ದಾನೆ ವಂಚಕನಿಂದ ಮೋಸಹೋಗಿರುವ ಯುವತಿ ಆತನ ಮನೆ ಎದುರು ತನ್ನ 5 ತಿಂಗಳ ಮಗುವಿನ ಜೊತೆ ಧರಣಿ ಕುಳಿತಿದ್ದಾಳೆ. ಆತನೊಂದಿಗೆ ಮದುವೆ ಮಾಡಿಸಿ

ಯುವತಿ ಕೈಗೆ ಮಗುನೀಡಿ‌ ಮೋಸ ಮಾಡಿದ ಕಿರುತೆರೆ ನಟ Read More »

ಎನ್.ಮಹೇಶ್ ಬಿಜೆಪಿಗೆ ಸೇರ್ತಾರಂತೆ!

ಚಾಮರಾಜನಗರ: ಬಿಎಸ್​ಪಿ ಪಕ್ಷದಿಂದ ಅಮಾನತುಗೊಂಡಿರುವ ಕೊಳ್ಳೇಗಾಲ ಶಾಸಕ ಎನ್​.ಮಹೇಶ್ ಅವರು ಬಿಜೆಪಿ ಸೇರುವುದು ಖಚಿತವಾಗಿದೆ. ಕಳೆದ ಹಲವು ದಿನಗಳಿಂದ ಬಿಜೆಪಿ ಸೇರುವ ಬಗ್ಗೆ ಕೆಲ ದಿನಗಳ ಹಿಂದಷ್ಟೇ ಸೂಚನೆ ನೀಡಿದ್ದ ಎನ್​.ಮಹೇಶ್ ಇಂದು ಅಧಿಕೃತ ಹೇಳಿಕೆ ನೀಡಿದ್ದಾರೆ. ಗುಂಡ್ಲುಪೇಟೆಗೆ ಭೇಟಿ ನೀಡಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಬಿಜೆಪಿ ಸೇರುವ ಬಗ್ಗೆ ಬಹಿರಂಗವಾಗಿ ಹೇಳಿದರು. ಬಿಜೆಪಿಗೆ ಬರುವಂತೆ ಯಡಿಯೂರಪ್ಪ ಆಹ್ವಾನಿಸಿದ್ದಾರೆ. ಶೀಘ್ರದಲ್ಲೇ ಬಿಜೆಪಿ ಸೇರುವ ದಿನಾಂಕ ನಿಗದಿಯಾಗುತ್ತದೆ ಎಂದು ಸ್ಪಷ್ಟಪಡಿಸಿದರು.

ಎನ್.ಮಹೇಶ್ ಬಿಜೆಪಿಗೆ ಸೇರ್ತಾರಂತೆ! Read More »

ಗಂಡ ಹೆಂಡತಿ ಜಗಳ ಹೆಣ ಬೀಳುವ ತನಕ ಚಾರ್ಜರ್ ವಯರ್ ನಿಂದ ಕುತ್ತಿಗೆಗೆ ಬಿಗಿದು ಪತ್ನಿಯ ಕೊಲೆಗೈದ ಪಾಪಿ ಪತಿ

ಕುಷ್ಟಗಿ : ಪತ್ನಿಯನ್ನು ಪತಿ ಮೋಬೈಲ್ ಚಾರ್ಜರ್ ವೈಯರ್ ನಿಂದ ಕುತ್ತಿಗೆಗೆ ಬಿಗಿದು, ಕಲ್ಲು ಎತ್ತಿ ಹಾಕಿ ಬೀಭತ್ಸವಾಗಿ ಕೊಂದು ಹಾಕಿರುವ ಘಟನೆ ಕುಷ್ಟಗಿಯಲ್ಲಿ ನಡೆದಿದೆ. ಮಂಜುಳಾ ಮಂಜುನಾಥ ಕಟ್ಟಿಮನಿ(25) ಮೃತ ನತದೃಷ್ಟೆ. ಸ್ಥಳೀಯ ತಾಲೂಕಾ ಸರ್ಕಾರಿ ಆಸ್ಪತ್ರೆಯ ಕೋವಿಡ್ ವಿಭಾಗದಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಹೊರಗುತ್ತಿಗೆಯಲ್ಲಿ ಸೇವೆಯಲ್ಲಿದ್ದಳು. ಯಲಬುರ್ಗಾ ತಾಲೂಕಿನ ಯಡ್ಡೋಣಿ ಗ್ರಾಮದ ಮಂಜುಳಾ ಈಕೆಯನ್ನು ಕೊಪ್ಪಳ ತಾಲೂಕಾ ಮುದ್ದಾಬಳ್ಳಿಯ ಮಂಜುನಾಥ ಕಟ್ಟಿಮನಿಯೊಂದಿಗೆ ವಿವಾಹ ಮಾಡಿಕೊಡಲಾಗಿತ್ತು. ಪತಿ ಮಂಜುನಾಥ ಕಟ್ಟಿಮನಿ ಕುಷ್ಟಗಿಯ ಕೆನರಾ ಬ್ಯಾಂಕಿನಲ್ಲಿ ಅಟೆಂಡರ್

ಗಂಡ ಹೆಂಡತಿ ಜಗಳ ಹೆಣ ಬೀಳುವ ತನಕ ಚಾರ್ಜರ್ ವಯರ್ ನಿಂದ ಕುತ್ತಿಗೆಗೆ ಬಿಗಿದು ಪತ್ನಿಯ ಕೊಲೆಗೈದ ಪಾಪಿ ಪತಿ Read More »

ಭಾರತಕ್ಕೆ ಒಲಂಪಿಕ್ಸ್ ನಲ್ಲಿ ಮತ್ತೊಂದು ಪದಕ ಫಿಕ್ಸ್

ಟೋಕಿಯೋ: ಭಾರತದ ಪಾಲಿಗೆ ಇಂದು ಶುಭ ಶುಕ್ರವಾರ. ಮಹಿಳಾ ಬಾಕ್ಸಿಂಗ್ ಕ್ವಾರ್ಟರ್ ಫೈನಲ್‌ನಲ್ಲಿ ಲೊವ್ಲಿನಾ ಬೊರ್ಗೊಹೈನ್ ಚೈನೀಸ್‌ ತೈಪೆಯ ಚೆನ್‌ ನೀನ್‌-ಚಿನ್‌ ವಿರುದ್ದ 4-1 ಅಂತರದಲ್ಲಿ ಜಯಿಸುವ ಮೂಲಕ ಸೆಮಿಫೈನಲ್‌ಗೆ ಲಗ್ಗೆಯಿಟ್ಟಿದ್ದಾರೆ. ಈ ಹಿನ್ನಲೆ ಭಾರತಕ್ಕೆ ಮತ್ತೊಂದು ಪದಕ ಖಚಿತ ಪಡಿಸಿದ್ದಾರೆ. ಮಹಿಳಾ ವಾಲ್ಟರ್‌ವೇಟ್‌ ವಿಭಾಗದಲ್ಲಿ ಚೈನೀಸ್‌ ತೈಪೆಯ ಚೆನ್‌ ನೀನ್‌-ಚಿನ್‌ ಎದುರು ಪ್ರಾಬಲ್ಯ ಮೆರದ ಲೊವ್ಲಿನಾ ಬೊರ್ಗೊಹೈನ್ ಸೆಮಿಫೈನಲ್‌ ಪ್ರವೇಶಿಸುವ ಮೂಲಕ ಇಡೀ ದೇಶವೇ ಸಂಭ್ರಮಿಸುವಂತೆ ಮಾಡಿದ್ದಾರೆ. ಲೊವ್ಲಿನಾ ಬೊರ್ಗೊಹೈನ್ ಇದೀಗ ಕಂಚಿನ ಪದಕ ಖಚಿತ

ಭಾರತಕ್ಕೆ ಒಲಂಪಿಕ್ಸ್ ನಲ್ಲಿ ಮತ್ತೊಂದು ಪದಕ ಫಿಕ್ಸ್ Read More »

ಬಂಟ್ವಾಳ: ರೈಲ್ವೆ ಹಳಿ ಮೇಲೆ ನಿಗೂಢ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ

ಬಂಟ್ವಾಳ: ಇಲ್ಲಿನ ದೇವಂದಬೆಟ್ಟು ಎಂಬಲ್ಲಿ ರೈಲ್ವೆ ಹಳಿಯಲ್ಲಿ ಯುವಕನೊರ್ವನ ಮೃತದೇಹ ಪತ್ತೆಯಾಗಿದ್ದು, ಸಂಶಯಕ್ಕೆ ಕಾರಣವಾಗಿದೆ. ಕಳ್ಳಿಗೆ ಗ್ರಾಮದ ಲಕ್ಷಣ ಎಂಬವರ ಮಗ ಕಾರ್ತಿಕ್ (25) ಎಂಬವರ ಮೃತದೇಹ ಎಂದು ಗುರುತಿಸಲಾಗಿದೆ. ನಿನ್ನೆ ಸಂಜೆ ಮನೆಯಿಂದ ಹೋರಟ ಕಾರ್ತಿಕ್ ರಾತ್ರಿ 11 ಗಂಟೆಯಾದರು ಮನೆಗೆ ಬಂದಿರಲಿಲ್ಲ. ಈ ಹಿನ್ನೆಲೆಯಲ್ಲಿ ಮನೆಯವರು ಆತನ‌ ಹುಡುಕಾಟ ಆರಂಭಿಸಿದ್ದು, ಮುಂಜಾನೆ ಸುಮಾರು 3 ಗಂಟೆ ವೇಳೆಗೆ ಕಾರ್ತಿಕ್ ನ ಮೃತದೇಹ ರೈಲ್ವೆ ಹಳಿಯಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಬಂಟ್ವಾಳ ನಗರ ಠಾಣಾ ಪೋಲೀಸರಿಗೆ

ಬಂಟ್ವಾಳ: ರೈಲ್ವೆ ಹಳಿ ಮೇಲೆ ನಿಗೂಢ ರೀತಿಯಲ್ಲಿ ಯುವಕನ ಮೃತದೇಹ ಪತ್ತೆ Read More »

ಸಿಬಿಎಸ್ ಸಿ 12ನೇ ತರಗತಿ ಫಲಿತಾಂಶ ಇಂದು ಪ್ರಕಟ

ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಇ) ಇಂದು 12 ನೇ ತರಗತಿ ಫಲಿತಾಂಶವನ್ನು ಸಿಬಿಎಸ್ಸಿಯು 2 ಗಂಟೆಗೆ ಘೋಷಿಸಲಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ CBSE ಬೋರ್ಡ್ ಇಂದು ಮಧ್ಯಾಹ್ನ 2 ಗಂಟೆಗೆ ಸಿಬಿಎಸ್ಸಿ 12ನೇ ತರಗತಿಯ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂಬುದಾಗಿ ತಿಳಿಸಿದೆ. ಫಲಿತಾಂಶ ವೀಕ್ಷಣೆ ಹೇಗೆ.? ವಿದ್ಯಾರ್ಥಿಗಳು ಇಂದು ಮಧ್ಯಾಹ್ನ ಪ್ರಕಟಗೊಳ್ಳಲಿರುವಂತ ಸಿಬಿಎಸ್ಸಿ 12ನೇ ತರಗತಿಯ ಫಲಿತಾಂಶವನ್ನು ಬೋರ್ಡ್ ಅಧಿಕೃತ ಜಾಲತಾಣ cbse.nic.in ಇಲ್ಲವೇ cbseresults.nic.in ನೋಡಬಹುದಾಗಿದೆ. ಇದಲ್ಲದೇ ವಿದ್ಯಾರ್ಥಿಗಳು ಡಿಜಿಲಾಕರ್ ನಲ್ಲಿ

ಸಿಬಿಎಸ್ ಸಿ 12ನೇ ತರಗತಿ ಫಲಿತಾಂಶ ಇಂದು ಪ್ರಕಟ Read More »

ಟಿ-20 ಸರಣಿ‌ ಗೆದ್ದ ಶ್ರೀಲಂಕಾ

ಶ್ರೀಲಂಕಾ 3 ಪಂದ್ಯಗಳ ಟಿ 20 ಸರಣಿಯಲ್ಲಿ ಭಾರತವನ್ನು 2-1 ಅಂತರದಿಂದ ಸೋಲಿಸಿತು. ಕೊನೆಯ ಟಿ 20 ಪಂದ್ಯದಲ್ಲಿ ಭಾರತವನ್ನು ಏಳು ವಿಕೆಟ್‌ಗಳಿಂದ ಸೋಲಿಸಿ ಸರಣಿ ವಶಪಡಿಸಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾ ಬ್ಯಾಟ್ಸ್‌ಮನ್‌ಗಳ ಕಳಪೆ ಆಟದಿಂದಾಗಿ ಎಂಟು ವಿಕೆಟ್‌ಗೆ 81 ರನ್ ಗಳಿಸಿತು. 15 ನೇ ಓವರ್‌ನಲ್ಲಿಯೇ ಆತಿಥೇಯರು ಈ ಗುರಿಯನ್ನು ಸಾಧಿಸಿದ್ದಾರೆ. ಇದಕ್ಕೂ ಮುನ್ನ ಶ್ರೀಲಂಕಾದ ಲೆಗ್ ಸ್ಪಿನ್ನರ್ ವಹೀಂದು ಹಸರಂಗಾ ಅವರ ಜನ್ಮದಿನದಂದು ಭಾರತದ ಅನನುಭವಿ ಬ್ಯಾಟಿಂಗ್ ಪಕ್ಕೆಲುಬು ಮುರಿದು ಎಂಟು

ಟಿ-20 ಸರಣಿ‌ ಗೆದ್ದ ಶ್ರೀಲಂಕಾ Read More »

ಮಡಿಕೇರಿ: ತರಕಾರಿ‌ ಲಾರಿಯಲ್ಲಿ ಅಕ್ರಮ‌ ಮರ ಸಾಗಾಟ, ಆರೋಪಿಗಳನ್ನು ಬಂಧಿಸಿದ ಸಂಪಾಜೆ ಅರಣ್ಯ‌ಇಲಾಖೆ ಸಿಬ್ಬಂದಿ

ಹುಣಸೂರಿನಿಂದ ಕೇರಳದ ಕಾಂಞಗಾಡ್ ಕಡೆಗೆ ತರಕಾರಿ ಲಾರಿಯಲ್ಲಿ ಅಕ್ರಮವಾಗಿ ಬೀಟೆ ಮರದ ಧಿಮ್ಮಿಗಳನ್ನು ಸಾಗಿಸುತ್ತಿದ್ದ ಆರೋಪಿಗಳನ್ನು ಸಂಪಾಜೆ ತನಿಖಾ ಠಾಣಾ ಸಿಬ್ಬಂದಿಗಳು ಮಾಲುಸಹಿತ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಕೇರಳದ ತಲಚೇರಿ ಜಿಲ್ಲೆಯ ದನೇಶ್ (೨೮), ಕಣ್ಣೂರಿನ ರಾಹುಲ್ (೨೬) ಬಂಧಿತ ಆರೋಪಿಗಳು. ಇವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಮುಖ ಆರೋಪಿ ಅಚ್ಚು (ಅಶ್ರಫ್) ತಲೆಮರೆಸಿಕೊಂಡಿದ್ದು, ಈತನ ಬಂಧನಕ್ಕೆ ಅರಣ್ಯ ಇಲಾಖೆ ಬಲೆಬೀಸಿದೆ. ಒಟ್ಟು ೨೩ ದಿಮ್ಮಿಗಳನ್ನು ವಶಪಡಿಸಿಕೊಳ್ಳಲಾಗಿದೆ.ಮಡಿಕೇರಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಎ.ಟಿ. ಪೂವಯ್ಯ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ

ಮಡಿಕೇರಿ: ತರಕಾರಿ‌ ಲಾರಿಯಲ್ಲಿ ಅಕ್ರಮ‌ ಮರ ಸಾಗಾಟ, ಆರೋಪಿಗಳನ್ನು ಬಂಧಿಸಿದ ಸಂಪಾಜೆ ಅರಣ್ಯ‌ಇಲಾಖೆ ಸಿಬ್ಬಂದಿ Read More »

ಸೈನಿಕನ ಮೇಲೆ ಹಲ್ಲೆ ಖಂಡಿಸಿ ಇಂದು “ಮಡಿಕೇರಿ ಚಲೋ”

ಮಡಿಕೇರಿ : ಹಾಲಿ ಸೈನಿಕನ ಮತ್ತು ಅವರ ಕುಟುಂಬದವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ದುಷ್ಕರ್ಮಿಗಳ ಮೇಲೆ ಎಫ್ ಐ ಆರ್ ದಾಖಲಾಗಿದ್ದರೂ ಆರೋಪಿಗಳು ಅರೆಸ್ಟ್ ಮಾಡಿ ಒಂದೇ ದಿನದಲ್ಲಿ ಅವರಿಗೆ ಜಾಮೀನು ನೀಡಿದ ಹಿನ್ನಲೆ ಸಾರ್ವಜನಿಕರು ಇಂದು “ಮಡಿಕೇರಿ ಚಲೋ” ಎಂಬ ಪ್ರತಿಭಟನೆಗೆ ಸಿದ್ಧತೆ ನಡೆಸಿದ್ದಾರೆ. ಜು. 26 ರಂದು ಕುಟುಂಬ ಸಮೇತ ಹಾಲಿ ಸೈನಿಕರೋರ್ವರು ಕಾರಿನಲ್ಲಿ ಬರುತ್ತಿದ್ದಾಗ ದುಷ್ಕರ್ಮಿಗಳು ಹಲ್ಲೆ ನಡೆಸಿ ಪರಾರಿಯಾಗಿದ್ದರು. ಇದರಿಂದ ಯೋಧ ಮತ್ತು ಕುಟುಂಬದವರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದರು. ಈ

ಸೈನಿಕನ ಮೇಲೆ ಹಲ್ಲೆ ಖಂಡಿಸಿ ಇಂದು “ಮಡಿಕೇರಿ ಚಲೋ” Read More »