Editor

ಮಂಗಳೂರು: ಕೋಟಿ ಕೋಟಿ ಮೌಲ್ಯದ ಅಡಿಕೆ, ಲಾರಿ ಸಹಿತ ನಾಲ್ವರು ಪರಾರಿ

ಮಂಗಳೂರು: ಮಂಗಳೂರಿನಿಂದ ಸಂಸ್ಥೆಯೊಂದು ಗುಜರಾತ್‌ನ ರಾಜ್‌ಕೋಟ್‌ಗೆ ಕಳುಹಿಸಿದ ಅಡಿಕೆಯನ್ನು ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ ಸುಮಾರು ಎರಡು ಕೋಟಿ ರೂ. ಮೌಲ್ಯದ ಅಡಿಕೆ ಸಹಿತ ನಾಲ್ವರು ಪರಾರಿಯಾಗಿದ್ದಾರೆ. ಮಹಾರಾಷ್ಟ್ರ ನಾಸಿಕ್ ಜೋಷಿ ಟ್ರಾನ್ಸ್‌ಪೊರ್ಟ್ ಮೂಲಕ ಇಷ್ಟು ಮೌಲ್ಯದ ಅಡಿಕೆಗಳನ್ನೂ ರಾಜ್‌ಕೋಟ್‌ ನ ಸೌತ್ ಇಂಡಿಯಾ ಟ್ರಾನ್ಸ್‌ಪೋರ್ಟ್ ಸಂಸ್ಥೆ ಗೆ ಕಳುಹಿಸಲಾಗಿತ್ತು. ಇದೀಗ ಮಹಾರಾಷ್ಟ್ರ ನಾಸಿಕ್ ಜೋಷಿ ಟ್ರಾನ್ಸ್‌ಪೊರ್ಟ್ ಮಾಲಕ ವಿಜಯ್ ಜೋಷಿ ಹಾಗೂ ಲಾರಿ ಚಾಲಕರಾದ ಬಾವೇಶ್ ಕೆ. ಷಾ, ಆಶೀಶ್ ಯಾದವ್ ವಿರುದ್ದ ನಗರದ ಬಂದರು ಪೊಲೀಸ್ […]

ಮಂಗಳೂರು: ಕೋಟಿ ಕೋಟಿ ಮೌಲ್ಯದ ಅಡಿಕೆ, ಲಾರಿ ಸಹಿತ ನಾಲ್ವರು ಪರಾರಿ Read More »

ಅಪಘಾತಕ್ಕೊಳಗಾದ ಕಾಮಿಡಿ ಕಿಲಾಡಿ ಖ್ಯಾತಿಯ ನಟ ಗೋವಿಂದೇ ಗೌಡ

ಬೆಂಗಳೂರು: ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋ ಖ್ಯಾತಿಯ ನಟ ಗೋವಿಂದೇಗೌಡ ನಿನ್ನೆ ಸಂಜೆ ಚಿತ್ರೀಕರಣದ ವೇಳೆ ಅಪಘಾತಕ್ಕೀಡಾಗಿದ್ದಾರೆ. ನಿನ್ನೆ ಕಾಮಿಡಿ ಕಿಲಾಡಿ ಖ್ಯಾತಿಯ ನಟ ಗೋವಿಂದೇಗೌಡ ಅವರು, ಯೋಗರಾಜ್ ಭಟ್ ಅವರ ಸಿನಿಮಾದ ಚಿತ್ರದ ಚಿತ್ರೀಕರಣದಲ್ಲಿ ಭಾಗವಹಿಸಿದ್ದು, ಈ ಸಂದರ್ಭದಲ್ಲಿ ನಟ ಗೋವಿಂದೇಗೌಡ ಅವರಿಗೆ ಅಪಘಾತ ಉಂಟಾಗಿತ್ತು. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಮೂಲಗಳ ಪ್ರಕಾರ ನಟ ಗೋವಿಂದೇಗೌಡ ಅವರಿಗೆ ಚಿತ್ರೀಕರಣದ ಸಂದರ್ಭದಲ್ಲಿ ಕಾರಿನ ಸಾಹಸ ದೃಶ್ಯದ ಶೂಟಿಂಗ್ ವೇಳೆಯಲ್ಲಿ ಹೊಟ್ಟೆಗೆ ಪೆಟ್ಟು

ಅಪಘಾತಕ್ಕೊಳಗಾದ ಕಾಮಿಡಿ ಕಿಲಾಡಿ ಖ್ಯಾತಿಯ ನಟ ಗೋವಿಂದೇ ಗೌಡ Read More »

ಸಂಪಾಜೆ ಚೆಕ್ ಪೋಸ್ಟ್ ಬಳಿ ಸಾಲುಗಟ್ಟಿ ನಿಂತ ಲಾರಿಗಳು ದ.ಕ ಜಿಲ್ಲಾಡಳಿತದಿಂದ ಚಾಲಕರಿಗೆ ಮಾಹಿತಿ ಇಲ್ಲವೆ?

ಸುಳ್ಯ : ಸಂಪಾಜೆ ಮಡಿಕೇರಿ ರಸ್ತೆ ಕುಸಿತಗೊಂಡಿದ್ದು ಈ ರಸ್ತೆಯಲ್ಲಿ ಘನ ವಾಹನ ಸಂಚಾರವನ್ನು ಕೊಡಗು ಜಿಲ್ಲಾಡಳಿತ ನಿಷೇಧಿಸಿದ ಹಿನ್ನಲೆಯಲ್ಲಿ ಸಂಪಾಜೆ ಚೆಕ್ ಪೋಸ್ಟ್ ಬಳಿ ಘನವಾಹನಗಳು ಕಿ.ಮೀ ದೂರ ಸಾಲುಗಟ್ಡಿ ನಿಂತಿವೆ.ಸಂಪಾಜೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಘನ ವಾಹನ ಸಂಚಾರಿಸದಂತೆ ಯಾವುದೇ ಮಾಹಿತಿ ನೀಡದಿರುವುದರಿಂದ ನಮಗೆ ಸಮಸ್ಯೆಯಾಗಿದೆ ಎಂದು ಘನ ವಾಹನ ಚಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಘನ ವಾಹನಗಳನ್ನು ತಡೆದಿರುವುದರಿಂದ ನಮಗೆ ಮೂಲಭೂತ ವ್ಯವಸ್ಥೆಗಳಿಲ್ಲದೆ ನಾವು ಸಮಸ್ಯೆಗೊಳಗಾಗಿದ್ದೇವೆ ಎಂದು ಚಾಲಕರು ತಮ್ಮ ಅಳಲನ್ನು ವ್ಯಕ್ತಪಡಿಸಿದ್ದಾರೆ. ಚೆಕ್ ಪೋಸ್ಟ್ ನಲ್ಲಿಎರಡು

ಸಂಪಾಜೆ ಚೆಕ್ ಪೋಸ್ಟ್ ಬಳಿ ಸಾಲುಗಟ್ಟಿ ನಿಂತ ಲಾರಿಗಳು ದ.ಕ ಜಿಲ್ಲಾಡಳಿತದಿಂದ ಚಾಲಕರಿಗೆ ಮಾಹಿತಿ ಇಲ್ಲವೆ? Read More »

ಪತ್ನಿ ಅಕ್ರಮ ಸಂಬಂಧಕ್ಕೆ ಬಲಿಯಾದ ಬಾಯ್‌ ಫ್ರೆಂಡ್ ಖಾಸಗಿ ಪಾರ್ಟ್| ಕೋಪೋದ್ರಿಕ್ತ ಪತಿಯಿಂದ ಗುಂಡು..!

ಪತ್ನಿಯ ಅಕ್ರಮ ಸಂಬಂಧದಿಂದ ಬೇಸತ್ತ ವ್ಯಕ್ತಿಯೊಬ್ಬ ತನ್ನ ಪತ್ನಿಯ ಪ್ರೇಮಿಯ ಮೇಲೆ ಗುಂಡು ಹಾರಿಸಿದ್ದಾನೆ. ಯುವಕನ ಖಾಸಗಿ ಭಾಗಕ್ಕೆ ಗುಂಡು ಹಾರಿಸಿದ್ದು, ಗಾಯಗೊಂಡ ವ್ಯಕ್ತಿಯನ್ನು ತಿರುವಲ್ಲಾದ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಪತ್ನಿ, ಬಾಯ್ ಫ್ರೆಂಡ್ ಮನೆಯಲ್ಲಿ ವಾಸಿಸುತ್ತಿದ್ದಳು. ಪತಿ – ಪತ್ನಿ ಸಂಬಂಧ ಕೋರ್ಟ್ ಮೆಟ್ಟಿಲೇರಿತ್ತು. ಕೋರ್ಟ್ ನಲ್ಲಿ ವಿಚ್ಛೇದನ ವಿಚಾರಣೆ ನಡೆಯುತ್ತಿದೆ. ಈ ಮಧ್ಯೆ ಪ್ರೇಮಿ ಮನೆಗೆ ಬಂದ ಪತಿ, ಆತನ ಖಾಸಗಿ ಅಂಗಕ್ಕೆ ಗುಂಡು ಹಾರಿಸಿದ್ದಾನೆ. ಏರ್ ಪಿಸ್ತೂಲ್ ನಲ್ಲಿ ಗುಂಡು ಹಾರಿಸಿದ್ದಾನೆ. ಗಾಯಗೊಂಡ

ಪತ್ನಿ ಅಕ್ರಮ ಸಂಬಂಧಕ್ಕೆ ಬಲಿಯಾದ ಬಾಯ್‌ ಫ್ರೆಂಡ್ ಖಾಸಗಿ ಪಾರ್ಟ್| ಕೋಪೋದ್ರಿಕ್ತ ಪತಿಯಿಂದ ಗುಂಡು..! Read More »

ಹಾವೂ ಸಾಯಲಿಲ್ಲ, ಕೋಲೂ ಮುರಿಯಲಿಲ್ಲ | ಒಂದೇ ಕಲ್ಲಿಗೆ ಮೂರು ಹಕ್ಕಿ ಹೊಡೆದ ಬಿಜೆಪಿ|

ಬೆಂಗಳೂರು: ಬಿ. ಎಸ್. ಯಡಿಯೂರಪ್ಪ ಉತ್ತರಾಧಿಕಾರಿ ಯಾರು ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ. ಬೊಮ್ಮಾಯಿ ಅವರನ್ನು ಸಿಎಂ ಸ್ಥಾನಕ್ಕೆ ಪರಿಗಣಿಸುವ ಮೂಲಕ ಬಿಜೆಪಿ ಹೈಕಮಾಂಡ್‌ ರಾಜಕೀಯವಾಗಿ ಭರ್ಜರಿ ಸಿಕ್ಸರ್ ಬಾರಿಸಿದೆ..! ಪಕ್ಷವನ್ನು ಬೇರು ಮಟ್ಟದಿಂದ ಬೆಳೆಸಿ ಅಧಿಕಾರಕ್ಕೆ ಬಂದಿದ್ದ ಯಡಿಯೂರಪ್ಪ ಅವರ ಅಧಿಕಾರಾವಧಿಯನ್ನು 2 ವರ್ಷಗಳಿಗೇ ಮೊಟಕುಗೊಳಿಸುವ ಮೂಲಕ ಬಿಜೆಪಿ ಹೈಕಮಾಂಡ್ ರಾಜ್ಯದ ಪ್ರಬಲ ವೀರಶೈವ ಲಿಂಗಾಯತ ಸಮುದಾಯದ ಕೆಂಗಣ್ಣಿಗೆ ಗುರಿಯಾಗಲಿದೆ ಎಂಬ ಕೂಗಿಗೆ ಬೊಮ್ಮಾಯಿ ಅಸ್ತ್ರ

ಹಾವೂ ಸಾಯಲಿಲ್ಲ, ಕೋಲೂ ಮುರಿಯಲಿಲ್ಲ | ಒಂದೇ ಕಲ್ಲಿಗೆ ಮೂರು ಹಕ್ಕಿ ಹೊಡೆದ ಬಿಜೆಪಿ| Read More »

ರಾಜ್ಯಕ್ಕೆ ‌ಮತ್ತೆ ಮೂವರು‌ ನೂತನ ಡಿಸಿಎಂಗಳ ನೇಮಕ

ಬೆಂಗಳೂರು : ಕರ್ನಾಟಕ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾದ ನಂತ್ರ, ನೂತನ ಉಪ ಮುಖ್ಯಮಂತ್ರಿಗಳಾಗಿಆರ್ ಅಶೋಕ್, ಬಿ.ಶ್ರೀರಾಮುಲು ಹಾಗೂ ಗೋವಿಂದ ಕಾರಜೋಳ ಅವರನ್ನು ಆಯ್ಕೆ ಮಾಡಲಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಬಿಎಸ್ ಯಡಿಯೂರಪ್ಪ ರಾಜೀನಾಮೆ ನೀಡಿದ ನಂತರ, ಈಗ ಕರ್ನಾಟಕ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿಯನ್ನು ಇಂದಿನ ಬಿಜೆಪಿ ಸಂಸದೀಯ ಮಂಡಳಿಯ ಸಭೆಯಲ್ಲಿ ಒಕ್ಕೊರಲಿನಿಂದ ಘೋಷಣೆ ಮಾಡಲಾಗಿದೆ. ಈ ಮೂಲಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿಯವರು ನೇಮಕಗೊಂಡಿದ್ದಾರೆ. ಆದರೆ ಈ ಕುರಿತಂತೆ ಸಂಸದೀಯ ಮಂಡಳಿಯ ಸಭೆಯಲ್ಲಿ

ರಾಜ್ಯಕ್ಕೆ ‌ಮತ್ತೆ ಮೂವರು‌ ನೂತನ ಡಿಸಿಎಂಗಳ ನೇಮಕ Read More »

ಹೆಚ್.ಡಿ.ಕೆ ಬಳಿಕ ಕರ್ನಾಟಕದ ಸಿಎಂ ಪಟ್ಟವೇರಿದ ಮತ್ತೋರ್ವ ಮಾಜಿ ಮುಖ್ಯಮಂತ್ರಿ ಪುತ್ರ| ಬಸವರಾಜ ಬೊಮ್ಮಾಯಿ ನಡೆದು ಬಂದ ದಾರಿ|

ಬೆಂಗಳೂರು: ತೀವ್ರ ಪೈಪೋಟಿ, ಕುತೂಹಲ, ಲಾಭಿ, ರಾಜಕೀಯ ಮೇಲಾಟಗಳ ನಡುವೆ ಕೊನೆಗೂ ಕರ್ನಾಟಕದಲ್ಲಿ ಬಿಜೆಪಿಯ ಹೊಸ ಅಲೆ ಮತ್ತೆ ಮೂಡಿದೆ. ಬಿಜೆಪಿ ಹೈಕಮಾಂಡ್ ಅಳೆದು, ತೂಗಿ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿಯವರನ್ನು ಆಯ್ಕೆ ಮಾಡಿದೆ. ಲಿಂಗಾಯತ ವರ್ಗದಿಂದ ಮುಖ್ಯಮಂತ್ರಿಯಾಗಿದ್ದ ಪ್ರಬಲ ಯಡಿಯೂರಪ್ಪರನ್ನು ರಾಜೀನಾಮೆ ಕೊಡಿಸಿ, ಅವರದ್ದೇ ಆಪ್ತ ಬಸವರಾಜ ಬೊಮ್ಮಾಯಿಯವರನ್ನು ಆಯ್ಕೆ ಮಾಡಿದ್ದು, ಮಾಜಿ ಸಿಎಂ ಗೂ ಖುಷಿ ತಂದಿದೆ. ಜೊತೆಗೆ ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಮತ್ತೋರ್ವ ಮಾಜಿ ಸಿಎಂ ಪುತ್ರ ರಾಜ್ಯದ‌ ಚುಕ್ಕಾಣಿ ಹಿಡಿದಿದ್ದಾರೆ. ಈ

ಹೆಚ್.ಡಿ.ಕೆ ಬಳಿಕ ಕರ್ನಾಟಕದ ಸಿಎಂ ಪಟ್ಟವೇರಿದ ಮತ್ತೋರ್ವ ಮಾಜಿ ಮುಖ್ಯಮಂತ್ರಿ ಪುತ್ರ| ಬಸವರಾಜ ಬೊಮ್ಮಾಯಿ ನಡೆದು ಬಂದ ದಾರಿ| Read More »

ಕರ್ನಾಟಕದ ನೂತನ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ, ನಾಳೆಯೇ ಪ್ರಮಾಣವಚನ

ಬೆಂಗಳೂರು : ಬಿ.ಎಸ್ ಯಡಿಯೂರಪ್ಪ ರಾಜೀನಾಮೆಯಿಂದ ತೆರವಾಗಿರುವಂತ ಮುಖ್ಯಮಂತ್ರಿ ಸ್ಥಾನಕ್ಕೆ, ನೂತನ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ ಆಯ್ಕೆಯಾಗಿದ್ದಾರೆ. ನೂತನ ಸಿಎಂ ಆಯ್ಕೆ ಕುರಿತಂತೆ ರಾಜ್ಯಕ್ಕೆ ಕೇಂದ್ರದಿಂದ ವೀಕ್ಷಕರಾಗಿ ಕೇಂದ್ರ ಸಚಿವರಾದಂತ ಧರ್ಮೇಂದ್ರ ಪ್ರಧಾನ್, ಕಿಶನ್ ರೆಡ್ಡಿ , , ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ನೇತ್ರತ್ವದಲ್ಲಿ ಹಂಗಾಮಿ ಸಿಎಂ ಯಡಿಯೂರಪ್ಪ ನೂತನ ಮುಖ್ಯಮಂತ್ರಿಗಳನ್ನು ಘೋಷಿಸಿದ್ದಾರೆ. ಬೆಂಗಳೂರಿನ ಕ್ಯಾಪಿಟಲ್ ಹೊಟೇಲ್ ನಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ನೂತನ ಸಿಎಂ ಆಯ್ಕೆಯ ಕುರಿತಂತೆ ಚರ್ಚೆ ನಡೆದಿದ್ದು, ಸಭೆಯ

ಕರ್ನಾಟಕದ ನೂತನ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ, ನಾಳೆಯೇ ಪ್ರಮಾಣವಚನ Read More »

ರಾಜಕೀಯ ಮೇಲಾಟದ ನಡುವೆ ರಾಜ್ಯಕ್ಕೆ ಪ್ರವಾಹ ಪರಿಹಾರ ಘೋಷಿಸಿದ ಕೇಂದ್ರ

ರಾಜಕೀಯ ಮೇಲಾಟದ ನಡುವೆ ರಾಜ್ಯಕ್ಕೆ ಪ್ರವಾಹ ಪರಿಹಾರ ಘೋಷಿಸಿದ ಕೇಂದ್ರ ನವದೆಹಲಿ: ಒಂದೆಡೆ ರಾಜ್ಯದಲ್ಲಿ ಹೊಸ ಮುಖ್ಯಮಂತ್ರಿ ಆಯ್ಕೆ ಸಂಬಂಧ ಕ್ಷೀಪ್ರ ಬೆಳವಣಿಗೆಗಳು ನಡೆಯುತ್ತಿದ್ದು, ಮತ್ತೊಂದೆಡೆ ರಾಜ್ಯದಲ್ಲಿ ಭಾರೀ ಮಳೆಯಿಂದ ಹಲವೆಡೆ ಪ್ರವಾಹ ಎದುರಾಗಿದೆ. ಇದರ ಮಧ್ಯೆ ಕರ್ನಾಟಕಕ್ಕೆ ಕೇಂದ್ರ ಸರ್ಕಾರ 629.03 ಕೋಟಿ ರೂ ಪರಿಹಾರ ಘೋಷಣೆ ಮಾಡಿದೆ. ಈ ಬಗ್ಗೆ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಮಾಹಿತಿ ನೀಡಿದ್ದಾರೆ. ಈ ಬಾರಿಯ ಮಳೆಗಾಲದಲ್ಲಿ ಈವರೆಗಿನ ಅತಿವೃಷ್ಟಿಯಿಂದ ಉಂಟಾದ ಬೆಳೆ ಹಾನಿಗೆ

ರಾಜಕೀಯ ಮೇಲಾಟದ ನಡುವೆ ರಾಜ್ಯಕ್ಕೆ ಪ್ರವಾಹ ಪರಿಹಾರ ಘೋಷಿಸಿದ ಕೇಂದ್ರ Read More »

ಸಚಿವ ಸ್ಥಾನಕ್ಕಾಗಿ ಬಿಎಸ್‍ವೈ ನಿವಾಸದಲ್ಲಿ ಶಾಸಕರು ಠಿಕಾಣಿ

ದಾವಣಗೆರೆ: ನೂತನ ಸಿಎಂ ಆಯ್ಕೆ ಪ್ರಕ್ರಿಯೆ ನಡೆಯುತ್ತಿರುವಾಗಲೇ ಕೆಲವು ಶಾಸಕರು ಸಚಿವ ಸ್ಥಾನಕ್ಕಾಗಿ ಕಳೆದ ಎರಡು ದಿನಗಳಿಂದ ಸಿಎಂ ಯಡಿಯೂರಪ್ಪನವರ ಮನೆಯಲ್ಲಿಯೇ ಠಿಕಾಣಿ ಹೂಡಿದ್ದಾರೆ. ಈ ಕುರಿತು ಮಾತನಾಡಿದ ಶಾಸಕ ಎಸ್.ವಿ.ರಾಮಚಂದ್ರಪ್ಪ, ನಾನು ಮೂರು ಬಾರಿ ಗೆಲುವು ಸಾಧಿಸಿದ್ದು, ಪಕ್ಷಕ್ಕೆ ನನ್ನದೇಯಾದ ಕೊಡುಗೆ ಇದೆ. ಅಲ್ಲದೆ ಸಿಎಂ ಯಡಿಯೂರಪ್ಪನವರಿಗೆ ನನ್ನ ಬಗ್ಗೆ ಒಲವು ಇದೆ. ಹೀಗಾಗಿ ಈ ಬಾರಿ ಸಚಿವ ಸ್ಥಾನ ಸಿಗುವ ಭರವಸೆ ಇದೆ ಎಂದರು. ಇನ್ನೂ ಜಿಲ್ಲೆಯ ಜಗಳೂರು ಶಾಸಕ ಎಸ್.ವಿ.ರಾಮಚಂದ್ರ ನಿನ್ನೆಯಿಂದ ಸಿಎಂ

ಸಚಿವ ಸ್ಥಾನಕ್ಕಾಗಿ ಬಿಎಸ್‍ವೈ ನಿವಾಸದಲ್ಲಿ ಶಾಸಕರು ಠಿಕಾಣಿ Read More »