Editor

ಪಾಣೆಮಂಗಳೂರು: ಸೇತುವೆ ಬಳಿ ಬೈಕ್ ಇಟ್ಟು ಸವಾರ ನಿಗೂಡ ನಾಪತ್ತೆ

ಬಂಟ್ವಾಳ: ಪಾಣೆಮಂಗಳೂರು ಹೊಸ ಸೇತುವೆ ಸಮೀಪ ಮಧ್ಯರಾತ್ರಿ ಬೈಕ್ ಚಾಲನೆಯಲ್ಲಿಟ್ಟು ಸವಾರ ನಾಪತ್ತೆಯಾಗಿರುವ ಘಟನೆ ನಡೆದಿದೆ. ನಾಪತ್ತೆಯಾಗಿರು ಬೈಕ್ ಸವಾರನಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ನಾಪತ್ತೆಯಾಗಿರುವ ಬೈಕ್ ಸವಾರನನ್ನು ಮೂಲತ ಬೆಂಗಳೂರು ದಾಸರಹಳ್ಳಿ ನಿವಾಸಿ ಸತ್ಯವೇಲು (29) ಎಂದು ಗುರುತಿಸಲಾಗಿದೆ. ಈತ ಬೆಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸದಲ್ಲಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈತ 15ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಳ್ಳಲು ಬೆಂಗಳೂರಿನಿಂದ ಪಾಣೆಮಂಗಳೂರಿಗೆ ಆಗಮಿಸಿದ್ದ. ಆದರೆ ಸ್ಥಳೀಯರು ಆತನನ್ನು ರಕ್ಷಿಸಿ ಬಳಿಕ ಬಂಟ್ವಾಳ ನಗರ ಪೊಲೀಸರಿಗೆ ಒಪ್ಪಿಸಿದ್ದರು. ಬಳಿಕ […]

ಪಾಣೆಮಂಗಳೂರು: ಸೇತುವೆ ಬಳಿ ಬೈಕ್ ಇಟ್ಟು ಸವಾರ ನಿಗೂಡ ನಾಪತ್ತೆ Read More »

ಒಲಿಂಪಿಕ್: ಕ್ವಾರ್ಟರ್ ಫೈನಲ್ ತಲುಪಿದ ಸಿಂಧು

ಟೋಕಿಯೊ: ಭಾರತೀಯ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಟೋಕಿಯೊ ಒಲಿಂಪಿಕ್ಸ್ ನ ಕ್ವಾರ್ಟರ್ ಫೈನಲ್ ತಲುಪಿದ್ದಾರೆ. ಪ್ರೀ ಕ್ವಾರ್ಟರ್ ಫೈನಲ್ ನಲ್ಲಿ ಡೆನ್ಮಾರ್ಕ್ ನ ಮಿಯಾ ಬ್ಲಿಕ್ ಫೆಲ್ಟ್ ಅವರನ್ನು ಮಣಿಸಿದರು. ‘ಐ’ ವಿಭಾಗದ ಅಗ್ರಸ್ಥಾನಿಯಾಗಿದ್ದ ಮಿಯಾ ಬ್ಲಿಕ್ ಫೆಲ್ಟ್ ಅವರನ್ನು 21-15, 21-13 ಸೆಟ್ ಗಳ ಅಂತರದಿಂದ ಸೋಲಿಸಿದರು. ಇದರೊಂದಿಗೆ ಥಾಯ್ಲೆಂಡ್ ಓಪನ್ ನಲ್ಲಿನ ಬ್ಲಿಕ್ ಫೆಲ್ಟ್ ವಿರುದ್ಧದ ಸೋಲಿಗೆ ಸಿಂಧು ಒಲಿಂಪಿಕ್ಸ್ ನಲ್ಲಿ ತಿರುಗೇಟು ನೀಡಿದರು. ಜಪಾನ್‌ನ ಅಕಾನೆ ಯಮಗುಚಿ ಮತ್ತು ಕೊರಿಯಾದ ಕಿಮ್ ಗೇನ್

ಒಲಿಂಪಿಕ್: ಕ್ವಾರ್ಟರ್ ಫೈನಲ್ ತಲುಪಿದ ಸಿಂಧು Read More »

ಕ್ರಿಕೆಟ್ :ದಾಖಲೆ ನಿರ್ಮಿಸಿದ ಪಡಿಕಲ್

ಕೊಲಂಬೋ: ಕರ್ನಾಟಕದ ಯುವ ಬ್ಯಾಟ್ಸ್ ಮನ್ ದೇವದತ್ ಪಡಿಕಲ್ ಶ್ರೀಲಂಕಾ ವಿರುದ್ಧದ ಎರಡನೇ ಟಿ-20 ಪಂದ್ಯದಲ್ಲಿ ಆಡುವ ಮೂಲಕ ವಿಶಿಷ್ಟ ದಾಖಲೆಯೊಂದನ್ನು ಬರೆದಿದ್ದಾರೆ. ಕರ್ನಾಟಕ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ಯಾಟ್ಸ್ ಮನ್ ಆಗಿರುವ ದೇವದತ್ ಪಡಿಕಲ್ ಭಾರತ ತಂಡ ಪ್ರತಿನಿಧಿಸಿದ ಈ ಶತಮಾನದಲ್ಲಿ ಜನಿಸಿದ ಆಟಗಾರ ಎನಿಸಿಕೊಂಡಿದ್ದಾರೆ. 21 ವರ್ಷದ ದೇವದತ್ ಪಡಿಕಲ್ ಭಾರತ ತಂಡವನ್ನು ಪ್ರತಿನಿಧಿಸಿದ ಈ ಶತಮಾನದಲ್ಲಿ ಜನಿಸಿದ ಆಟಗಾರ ಎಂ ದಾಖಲೆಗೆ ಪಾತ್ರರಾದರು. ಪಡಿಕಲ್ 23 ಎಸೆತಗಳಲ್ಲಿ 29 ರನ್

ಕ್ರಿಕೆಟ್ :ದಾಖಲೆ ನಿರ್ಮಿಸಿದ ಪಡಿಕಲ್ Read More »

ಮೂರು ವರ್ಷದ ಮಗುವನ್ನು ಅತ್ಯಾಚಾರವೆಸಗಿದ ಪಾಪಿ- ಆರೋಪಿ ಅಂದರ್

ಬೆಳಗಾವಿ: ಮೂರೂವರೆ ವರ್ಷದ ಮಗುವಿನ ಮೇಲೆ ಅತ್ಯಾಚಾರ ನಡೆದ ಪ್ರಕರಣ ಬೆಳಕಿಗೆ ಬಂದಿದ್ದು, ಆರೋಪಿಯನ್ನು ಬಂದಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿಯ ಕ್ಯಾಂಪ್ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಕೃತ್ಯ ನಡೆದಿದೆ. ಈ ದುಷ್ಕೃತ್ಯಕ್ಕೆ ಸಂಬಂಧಿಸಿ ಮುಂಬೈ ಮೂಲದ ಯುವಕ ಸೇರಿದಂತೆ ಇಬ್ಬರ ಬಂಧನವಾಗಿದೆ. ಒಂದು ವಾರದ ಹಿಂದೆ ಬೆಳಗಾವಿಯಲ್ಲಿ ದುಷ್ಕೃತ್ಯ ನಡೆದಿತ್ತು ಎಂದು ತಿಳಿದುಬಂದಿದೆ. ವಾರದ ಹಿಂದೆ ಸಂಬಂಧಿಕರ ಮನೆಗೆ ಬಂದಿದ್ದ ಯುವಕ, ನೆರೆಮನೆಯ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ಆರೋಪ ಕೇಳಿಬಂದಿದೆ. ಆದರೆ, ಮರ್ಯಾದೆಗೆ ಹೆದರಿ

ಮೂರು ವರ್ಷದ ಮಗುವನ್ನು ಅತ್ಯಾಚಾರವೆಸಗಿದ ಪಾಪಿ- ಆರೋಪಿ ಅಂದರ್ Read More »

ಸೌತಡ್ಕ‌ ಗಣಪನ ಸನ್ನಿದಿಯಿಂದ ಮಣ್ಣು ತೆಗೆದುಕೊಂಡು ಹೋದ ಮುಸ್ಲಿಂ ಯುವಕ – ಶಂಕಾಸ್ಪದ ಘಟನೆ ಸಿಸಿ ಟಿವಿಯಲ್ಲಿ ಸೆರೆ- ದೂರು ದಾಖಲು

ಧರ್ಮಸ್ಥಳ: ಹಿಂದೂಗಳ ಪ್ರಸಿದ್ಧ ಯಾತ್ರಾಸ್ಥಳ, ಬಯಲು ಆಲಯವೆಂದೇ ಪ್ರಸಿದ್ಧಿ ಪಡೆದ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ವಠಾರದಿಂದ ಮುಸ್ಲಿಂ ಯುವಕನೊಬ್ಬ ಮಣ್ಣು ಅಗೆದು ಪ್ಲಾಸ್ಟಿಕ್ ಚೀಲದಲ್ಲಿ ತುಂಬಿಸಿಕೊಂಡು ಹೋಗಿ ಸಂಶಯಾಸ್ಪದವಾಗಿ ವರ್ತಿಸಿದ ದೃಶ್ಯ ದೇವಸ್ಥಾನದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸಿಸಿ ಟಿವಿ ದೃಶ್ಯಾವಳಿಯಿಂದ ಯುವಕನ ಚಹರೆ ಪತ್ತೆಯಾಗಿದ್ದು, ಈತ ಕೊಕ್ಕಡ ಗ್ರಾಮದ ಹಳ್ಳಿಂಗೇರಿ ನಿವಾಸಿ ಕಲಂದರ್ ಎಂದು ಗುರುತಿಸಲಾಗಿದೆ. ಈತ ಸೌತಡ್ಕ ಕ್ಷೇತ್ರದ ಆವರಣದಿಂದ ಮಣ್ಣು ಅಗೆದು ಪ್ಲಾಸ್ಟಿಕ್ ಚೀಲವೊಂದರಲ್ಲಿ ತುಂಬಿಸಿಕೊಂಡು ಹೋಗುತ್ತಿರುವ ದೃಶ್ಯ ಕಂಡುಬಂದಿದ್ದು, ಜು.24

ಸೌತಡ್ಕ‌ ಗಣಪನ ಸನ್ನಿದಿಯಿಂದ ಮಣ್ಣು ತೆಗೆದುಕೊಂಡು ಹೋದ ಮುಸ್ಲಿಂ ಯುವಕ – ಶಂಕಾಸ್ಪದ ಘಟನೆ ಸಿಸಿ ಟಿವಿಯಲ್ಲಿ ಸೆರೆ- ದೂರು ದಾಖಲು Read More »

ದಲಿತ ಕುಟುಂಬದ ಮನೆ ನೆಲಸಮ| ನೊಂದ ಯಜಮಾನ ಆತ್ಮಹತ್ಯೆಗೆ ಯತ್ನ| ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ ಮಿನಿ ವಿಧಾನಸೌಧದೆದರು ಪ್ರತಿಭಟನೆ

ದಲಿತ ಕುಟುಂಬದ ಮನೆ ನೆಲಸಮ| ನೊಂದ ಯಜಮಾನ ಆತ್ಮಹತ್ಯೆಗೆ ಯತ್ನ| ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ ಮಿನಿ ವಿಧಾನಸೌಧದೆದರು ಪ್ರತಿಭಟನೆ ಪುತ್ತೂರು: ಇಲ್ಲಿನ ಒಳಗ್ರಾಮ ಗ್ರಾಮದ ದರ್ಭೆತ್ತಡ್ಕ ಶಾಲೆಯ ಸಮೀಪ 11 ವರ್ಷಗಳಿಂದ ವಾಸಿಸುತ್ತಿದ್ದ ದಲಿತ ಕುಟುಂಬದ ಮನೆಯನ್ನು ಅಕ್ರಮ ಕಟ್ಟಡ ನೆಪದಲ್ಲಿ ನೆಲ ಸಮ ಮಾಡಲಾಗಿದ್ದು, ಘಟನೆಯಿಂದ ಮನೆ ಮಾಲೀಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಘಟನೆ ಖಂಡಿಸಿ ಅಂಬೇಡ್ಕರ್ ರಕ್ಷಣಾ ವೇದಿಕೆ ಪದಾಧಿಕಾರಿಗಳು ಪುತ್ತೂರು ಮಿನಿವಿಧಾನ ಸೌಧದೆದರು ಪ್ರತಿಭಟನೆ ನಡೆಸಿದ್ದಾರೆ. ಮನೆಯವರು ಕೆಲಸಕ್ಕೆ ಹೋಸ ಸಂದರ್ಭದಲ್ಲಿ

ದಲಿತ ಕುಟುಂಬದ ಮನೆ ನೆಲಸಮ| ನೊಂದ ಯಜಮಾನ ಆತ್ಮಹತ್ಯೆಗೆ ಯತ್ನ| ಅಂಬೇಡ್ಕರ್ ರಕ್ಷಣಾ ವೇದಿಕೆಯಿಂದ ಮಿನಿ ವಿಧಾನಸೌಧದೆದರು ಪ್ರತಿಭಟನೆ Read More »

ಸಚಿವ ಸಂಪುಟದಲ್ಲಿ ನಾನಿಲ್ಲ – ಶೆಟ್ಟರ್ ಅಚ್ಚರಿಯ ಹೇಳಿಕೆ

ಬೆಂಗಳೂರು. ಬಸವರಾಜ ಬೊಮ್ಮಾಯಿ ನೇತೃತ್ವದ ಸಚಿವ ಸಂಪುಟದಲ್ಲಿ ನಾನು ಸೇರುವುದಿಲ್ಲ ಎಂದು ಬಿಜೆಪಿ ಹಿರಿಯ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ ಬೆಂಗಳೂರಿನಲ್ಲಿ ಬುಧವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಾನು ಪಕ್ಷದೊಳಗೆ ಕೆಲಸ ಮಾಡಲು ನಿರ್ಧರಿಸಿದ್ದು, ಯಾವುದೇ ಸಚಿವ ಸ್ಥಾನ ಆಕಾಂಕ್ಷಿಯಲ್ಲ.ಪಕ್ಷದಲ್ಲಿ ನಾನು ತಳಮಟ್ಟದಲ್ಲಿ ಮೇಲಿನ ಮಟ್ಟದವರೆಗೂ ಕೆಲಸ ಮಾಡಿದ್ದೇನೆ. ಹಾಗಾಗಿ ನಾನು ಯಾವುದೇ ಸ್ಥಾನಮಾನ ಅಪೇಕ್ಷಿಸುತ್ತಿಲ್ಲ. ನನ್ನ ಈ ನಿರ್ಧಾರ ವೈಯಕ್ತಿಕವಾಗಿದ್ದು, ಯಾರ ಒತ್ತಡವೂ ಇಲ್ಲ ಎಂದು ಅವರು ಹೇಳಿದರು. ಇತ್ತೀಚೆಗೆ

ಸಚಿವ ಸಂಪುಟದಲ್ಲಿ ನಾನಿಲ್ಲ – ಶೆಟ್ಟರ್ ಅಚ್ಚರಿಯ ಹೇಳಿಕೆ Read More »

ಭೀಕರ ರಸ್ತೆ ಅಪಘಾತ: 18 ಮಂದಿ ಸ್ಥಳದಲ್ಲೇ ಸಾವು

ಲಕ್ನೊ: ಟ್ರಕ್ ಒಂದು ನಿಂತಿದ್ದ ಬಸ್ ಗೆ ಢಿಕ್ಕಿ ಹೊಡೆದ ಪರಿಣಾಮ 18 ಮಂದಿ ಸ್ಥಳದಲ್ಲಿಯೇ ಮೃತಪಟ್ಟು ಹಲವರು ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಲಕ್ನೊ ವಲಯದ ಬಾರಾಬಂಕಿಯ ರಾಮ್ ಸನೆಹಿ ಘಾಟ್ ಬಳಿ ಕಳೆದ ತಡರಾತ್ರಿ ಸಂಭವಿಸಿದೆ. ಗಾಯಗೊಂಡಿರುವ 19 ಮಂದಿ ಪ್ರಯಾಣಿಕರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಸ್ಸಿನಡಿ ಸಿಲುಕಿಕೊಂಡಿರುವ ಶವಗಳನ್ನು ಹೊರತೆಗೆಯುವ ಕಾರ್ಯ ನಡೆಯುತ್ತಿದೆ ಎಂದು ಲಕ್ನೊ ವಲಯ ಎಡಿಜಿ ನಾರಾಯಣ್ ಸಬತ್ ತಿಳಿಸಿದ್ದಾರೆ. ಪ್ರಧಾನಿ ಸಂತಾಪ, ಪರಿಹಾರ ಘೋಷಣೆ: ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ

ಭೀಕರ ರಸ್ತೆ ಅಪಘಾತ: 18 ಮಂದಿ ಸ್ಥಳದಲ್ಲೇ ಸಾವು Read More »

ಕುಂದಾಪುರ: ಕಾರು ಢಿಕ್ಕಿ ಹೊಡೆದು ಸೈಕಲ್ ಸವಾರ ಮೃತ್ಯು

ಕುಂದಾಪುರ: ಕಾರು ಡಿಕ್ಕಿ ಹೊಡೆದು ಸೈಕಲ್ ಸವಾರರೊಬ್ಬರು ಮೃತಪಟ್ಟ ಘಟನೆ ಹೆಮ್ಮಾಡಿ ಹಾಗೂ ತಲ್ಲೂರು ನಡುವಿನ ಜಾಲಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಸ್ಥಳೀಯ ಸಂತೋಷ್ ನಗರದ ನಿವಾಸಿ ರಾಮ ಕುಲಾಲ್(೫೨) ಮೃತಪಟ್ಟವರು. ಅಪಘಾತದಲ್ಲಿ ಗಂಭೀರ ಗಾಯಗೊಂಡ ರಾಮ ಕುಲಾಲ್ ಅವರನ್ನು ಆಸ್ಪತ್ರೆಗೆ ಸಾಗಿಸುವ ದಾರಿಮಧ್ಯೆ ಅವರು ಮೃತಪಟ್ಟಿದ್ದಾರೆ. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಂದಾಪುರ: ಕಾರು ಢಿಕ್ಕಿ ಹೊಡೆದು ಸೈಕಲ್ ಸವಾರ ಮೃತ್ಯು Read More »

ಮಂಗಳೂರು: ಬಾಲಕಿಯೊಂದಿಗೆ ಅನುಚಿತ ವರ್ತಣೆ ಪೊಲೀಸ್ ಸಿಬ್ಬಂದಿ ಬಂಧನ

ಮಂಗಳೂರು: ಅಪ್ರಾಪ್ತ ವಯಸ್ಸಿನ ಬಾಲಕಿ ಜತೆ ಮೊಬೈಲ್ ಫೋನ್ ಮೂಲಕ ಅನುಚಿತವಾಗಿ ವರ್ತಿಸಿರುವ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ನಗರ ಪೊಲೀಸ್ ಠಾಣೆಯೊಂದರ ಸಿಬ್ಬಂದಿಯನ್ನು ಬಂಧಿಸಲಾಗಿದೆ. ಸುದ್ದಿಗೋಷ್ಠಿಯಲ್ಲಿಂದು ಈ ವಿಷಯ ತಿಳಿಸಿದ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಅಪ್ರಾಪ್ತ ಬಾಲಕಿಗೆ ಆಟೋ ರಿಕ್ಷಾ ಚಾಲಕ ಕಿರುಕುಳ ನೀಡಿದ ಬಗ್ಗೆ ಪೊಕ್ಸೊ ಪ್ರಕರಣವನ್ನು ಜನವರಿಯಲ್ಲಿ ದಾಖಲಿಸಲಾಗಿತ್ತು. ಆದರೆ ಈ ವೇಳೆ ಬಾಲಕಿಯ ಮೊಬೈಲ್ ಸಂಖ್ಯೆಯನ್ನು ಪಡೆದ ಠಾಣೆಯ ಹೆಡ್‌ಕಾನ್‌ಸ್ಟೇಬಲ್ ದರ್ಜೆಯ ಸಿಬ್ಬಂದಿ ಆಕೆಗೆ ಕರೆ ಮಾಡಿ, ಸಂದೇಶ ಕಳುಹಿಸಿ ಅನುಚಿತವಾಗಿ

ಮಂಗಳೂರು: ಬಾಲಕಿಯೊಂದಿಗೆ ಅನುಚಿತ ವರ್ತಣೆ ಪೊಲೀಸ್ ಸಿಬ್ಬಂದಿ ಬಂಧನ Read More »