Editor

ಮಂಗಳೂರು: ಪ್ರಜ್ಞೆ ತಪ್ಪಿಸಿ ನಗ-ನಗದು ದೋಚುತಿದ್ದ ಯುವಕ ಯುವತಿಯ ಬಂಧನ

ಮಂಗಳೂರು: ಪಾರ್ಟಿ ಮಾಡುವ ನೆಪದಲ್ಲಿ ವ್ಯಕ್ತಿಯೋರ್ವರ ಪ್ರಜ್ಞೆ ತಪ್ಪಿಸಿ, ನಗ-ನಗದು ದೋಚಿ ಬಳಿಕ ಬ್ಲ್ಯಾಕ್ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ನಗರದ ಇನ್ ಲ್ಯಾಂಡ್ ಇಂಪಾಲ ಆಪಾರ್ಟ್‌ಮೆಂಟ್ ನ ಅಝ್ವೀನ್ ಸಿ.ಎಂ (೨೪) ಹಾಗೂ ಬೈಕಂಪಾಡಿ, ಕೆಬಿಎಸ್ ಬೊಟ್ಟು ಹೌಸ್ ಹತೀಜಮ್ಮಯಾನೆ ಸಫ್ನಾ(೨೩) ಬಂಧಿತ ಆರೋಪಿಗಳು ಘಟನೆಯ ವಿವರ: ದೂರುದಾರರ ಪರಿಚಯಸ್ಥರಾದ ಅಝ್ವೀನ್, ಹಾಗೂ ಹತೀಜಮ್ಮ ಇಬ್ಬರು ಜು.೧೯ ರ ರಾತ್ರಿ ಮನೆಗೆ ಬಂದು ಪಾರ್ಟಿ ಮಾಡುವ ಆಹ್ವಾನ […]

ಮಂಗಳೂರು: ಪ್ರಜ್ಞೆ ತಪ್ಪಿಸಿ ನಗ-ನಗದು ದೋಚುತಿದ್ದ ಯುವಕ ಯುವತಿಯ ಬಂಧನ Read More »

ರಾಜ್ಯದ ಜನತೆಗೆ ಬೊಮ್ಮಾಯಿ ಗಿಪ್ಟ್| ರೈತರ ಮಕ್ಕಳಿಗೆ ವಿಶೇಷ ಶಿಷ್ಯವೇತನ|ಅಶಕ್ತರ ಮಾಸಾಶನದಲ್ಲಿ ಏರಿಕೆ

ಬೆಂಗಳೂರು: ರಾಜ್ಯದ 30 ನೇ ಮುಖ್ಯ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಕೆಳವು ಯೋಜನೆಗಳನ್ನು ಘೋಷನೆ ಮಾಡಿದ್ದಾರೆ. ಇದು ಮುಖ್ಯ ಮಂತ್ರಿಯಾದ ನಂತರದ ಮೊದಲ ಯೋಜನೆಯಾಗಿದೆ.ಎಲ್ಲಾ ರೈತರ ಮಕ್ಕಳಿಗೆ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಲು ಒಂದು ಸಾವಿರ ಕೋಟಿ ವೆಚ್ಚದಲ್ಲಿ ಹೊಸ ಶಿಷ್ಯ ವೇತನ ಯೋಜನೆಯನ್ನು ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.ಮುಖ್ಯ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ನಂತರ ನೇರವಾಗಿ ವಿಧಾನಸೌಧಕ್ಕೆ ಆಗಮಿಸಿದ ಬಸವರಾಜ ಬೊಮ್ಮಾಯಿ ಅವರು ನೂತನ ಕೊಠಡಿಯಲ್ಲಿ ಸರಳವಾಗಿ ಪೂಜೆ ಸಲ್ಲಿಸಿದರು. ನಂತರ ಅಧಿಕಾರಿಗಳ

ರಾಜ್ಯದ ಜನತೆಗೆ ಬೊಮ್ಮಾಯಿ ಗಿಪ್ಟ್| ರೈತರ ಮಕ್ಕಳಿಗೆ ವಿಶೇಷ ಶಿಷ್ಯವೇತನ|ಅಶಕ್ತರ ಮಾಸಾಶನದಲ್ಲಿ ಏರಿಕೆ Read More »

ಬಂಟ್ವಾಳ: ಆಟೋ ರಿಕ್ಷಾ ಪಲ್ಟಿ ಓರ್ವ ಸಾವು, 7 ಮಂದಿಗೆ ಗಾಯ

ಬಂಟ್ವಾಳ: ಮಣಿಹಳ್ಳ ಸರಪಾಡಿ ರಸ್ತೆಯ ಪೆರಿಯಪಾದೆ ಎಂಬಲ್ಲಿ ಆಟೋರಿಕ್ಷಾವೊಂದು ಪಲ್ಟಿಯಾಗಿ ಓರ್ವ ಮೃತಪಟ್ಟು 7 ಮಂದಿ ಗಾಯಗೊಂಡ ಘಟನೆ ಇಂದು ನಡೆದಿದೆ. ವಲೆಂಗೂರು ನಿವಾಸಿ ಫ್ರಾನ್ಸಿಸ್ ಸುವಾರಿಸ್ (85)ಮೃತಪಟ್ಟವರು. ಆಟೋರಿಕ್ಷಾ ಸರಪಾಡಿಯಿಂದ ಬಂಟ್ವಾಳ ಕಡೆಗೆ ಹಲವು ಮಂದಿ ಪ್ರಯಾಣಿಕರನ್ನು ಕೂರಿಸಿಕೊಂಡು ಬಂಟ್ವಾಳ ಕಡೆಗೆ ಆಗಮಿಸುವ ವೇಳೆ ಪರಿಯಪಾದೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆಯಲ್ಲಿ ಇಬ್ಬರು ಗಂಭೀರ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆ ಗೆ ದಾಖಲಾಗಿದ್ದಾರೆ. ಇನ್ನೂ ಅಲ್ಪಸ್ವಲ್ಪ ಗಾಯಗೊಂಡವರು ಬಂಟ್ವಾಳ ಖಾಸಗಿ ಆಸ್ಪತ್ರೆಗೆ ದಾಖಲಾಗಿ

ಬಂಟ್ವಾಳ: ಆಟೋ ರಿಕ್ಷಾ ಪಲ್ಟಿ ಓರ್ವ ಸಾವು, 7 ಮಂದಿಗೆ ಗಾಯ Read More »

ಮಂಗಳೂರು: ಕೋಟಿ ಕೋಟಿ ಮೌಲ್ಯದ ಅಡಿಕೆ, ಲಾರಿ ಸಹಿತ ನಾಲ್ವರು ಪರಾರಿ

ಮಂಗಳೂರು: ಮಂಗಳೂರಿನಿಂದ ಸಂಸ್ಥೆಯೊಂದು ಗುಜರಾತ್‌ನ ರಾಜ್‌ಕೋಟ್‌ಗೆ ಕಳುಹಿಸಿದ ಅಡಿಕೆಯನ್ನು ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ ಸುಮಾರು ಎರಡು ಕೋಟಿ ರೂ. ಮೌಲ್ಯದ ಅಡಿಕೆ ಸಹಿತ ನಾಲ್ವರು ಪರಾರಿಯಾಗಿದ್ದಾರೆ. ಮಹಾರಾಷ್ಟ್ರ ನಾಸಿಕ್ ಜೋಷಿ ಟ್ರಾನ್ಸ್‌ಪೊರ್ಟ್ ಮೂಲಕ ಇಷ್ಟು ಮೌಲ್ಯದ ಅಡಿಕೆಗಳನ್ನೂ ರಾಜ್‌ಕೋಟ್‌ ನ ಸೌತ್ ಇಂಡಿಯಾ ಟ್ರಾನ್ಸ್‌ಪೋರ್ಟ್ ಸಂಸ್ಥೆ ಗೆ ಕಳುಹಿಸಲಾಗಿತ್ತು. ಇದೀಗ ಮಹಾರಾಷ್ಟ್ರ ನಾಸಿಕ್ ಜೋಷಿ ಟ್ರಾನ್ಸ್‌ಪೊರ್ಟ್ ಮಾಲಕ ವಿಜಯ್ ಜೋಷಿ ಹಾಗೂ ಲಾರಿ ಚಾಲಕರಾದ ಬಾವೇಶ್ ಕೆ. ಷಾ, ಆಶೀಶ್ ಯಾದವ್ ವಿರುದ್ದ ನಗರದ ಬಂದರು ಪೊಲೀಸ್

ಮಂಗಳೂರು: ಕೋಟಿ ಕೋಟಿ ಮೌಲ್ಯದ ಅಡಿಕೆ, ಲಾರಿ ಸಹಿತ ನಾಲ್ವರು ಪರಾರಿ Read More »

ಅಪಘಾತಕ್ಕೊಳಗಾದ ಕಾಮಿಡಿ ಕಿಲಾಡಿ ಖ್ಯಾತಿಯ ನಟ ಗೋವಿಂದೇ ಗೌಡ

ಬೆಂಗಳೂರು: ಕಾಮಿಡಿ ಕಿಲಾಡಿಗಳು ರಿಯಾಲಿಟಿ ಶೋ ಖ್ಯಾತಿಯ ನಟ ಗೋವಿಂದೇಗೌಡ ನಿನ್ನೆ ಸಂಜೆ ಚಿತ್ರೀಕರಣದ ವೇಳೆ ಅಪಘಾತಕ್ಕೀಡಾಗಿದ್ದಾರೆ. ನಿನ್ನೆ ಕಾಮಿಡಿ ಕಿಲಾಡಿ ಖ್ಯಾತಿಯ ನಟ ಗೋವಿಂದೇಗೌಡ ಅವರು, ಯೋಗರಾಜ್ ಭಟ್ ಅವರ ಸಿನಿಮಾದ ಚಿತ್ರದ ಚಿತ್ರೀಕರಣದಲ್ಲಿ ಭಾಗವಹಿಸಿದ್ದು, ಈ ಸಂದರ್ಭದಲ್ಲಿ ನಟ ಗೋವಿಂದೇಗೌಡ ಅವರಿಗೆ ಅಪಘಾತ ಉಂಟಾಗಿತ್ತು. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ಮೂಲಗಳ ಪ್ರಕಾರ ನಟ ಗೋವಿಂದೇಗೌಡ ಅವರಿಗೆ ಚಿತ್ರೀಕರಣದ ಸಂದರ್ಭದಲ್ಲಿ ಕಾರಿನ ಸಾಹಸ ದೃಶ್ಯದ ಶೂಟಿಂಗ್ ವೇಳೆಯಲ್ಲಿ ಹೊಟ್ಟೆಗೆ ಪೆಟ್ಟು

ಅಪಘಾತಕ್ಕೊಳಗಾದ ಕಾಮಿಡಿ ಕಿಲಾಡಿ ಖ್ಯಾತಿಯ ನಟ ಗೋವಿಂದೇ ಗೌಡ Read More »

ಸಂಪಾಜೆ ಚೆಕ್ ಪೋಸ್ಟ್ ಬಳಿ ಸಾಲುಗಟ್ಟಿ ನಿಂತ ಲಾರಿಗಳು ದ.ಕ ಜಿಲ್ಲಾಡಳಿತದಿಂದ ಚಾಲಕರಿಗೆ ಮಾಹಿತಿ ಇಲ್ಲವೆ?

ಸುಳ್ಯ : ಸಂಪಾಜೆ ಮಡಿಕೇರಿ ರಸ್ತೆ ಕುಸಿತಗೊಂಡಿದ್ದು ಈ ರಸ್ತೆಯಲ್ಲಿ ಘನ ವಾಹನ ಸಂಚಾರವನ್ನು ಕೊಡಗು ಜಿಲ್ಲಾಡಳಿತ ನಿಷೇಧಿಸಿದ ಹಿನ್ನಲೆಯಲ್ಲಿ ಸಂಪಾಜೆ ಚೆಕ್ ಪೋಸ್ಟ್ ಬಳಿ ಘನವಾಹನಗಳು ಕಿ.ಮೀ ದೂರ ಸಾಲುಗಟ್ಡಿ ನಿಂತಿವೆ.ಸಂಪಾಜೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಘನ ವಾಹನ ಸಂಚಾರಿಸದಂತೆ ಯಾವುದೇ ಮಾಹಿತಿ ನೀಡದಿರುವುದರಿಂದ ನಮಗೆ ಸಮಸ್ಯೆಯಾಗಿದೆ ಎಂದು ಘನ ವಾಹನ ಚಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.ಘನ ವಾಹನಗಳನ್ನು ತಡೆದಿರುವುದರಿಂದ ನಮಗೆ ಮೂಲಭೂತ ವ್ಯವಸ್ಥೆಗಳಿಲ್ಲದೆ ನಾವು ಸಮಸ್ಯೆಗೊಳಗಾಗಿದ್ದೇವೆ ಎಂದು ಚಾಲಕರು ತಮ್ಮ ಅಳಲನ್ನು ವ್ಯಕ್ತಪಡಿಸಿದ್ದಾರೆ. ಚೆಕ್ ಪೋಸ್ಟ್ ನಲ್ಲಿಎರಡು

ಸಂಪಾಜೆ ಚೆಕ್ ಪೋಸ್ಟ್ ಬಳಿ ಸಾಲುಗಟ್ಟಿ ನಿಂತ ಲಾರಿಗಳು ದ.ಕ ಜಿಲ್ಲಾಡಳಿತದಿಂದ ಚಾಲಕರಿಗೆ ಮಾಹಿತಿ ಇಲ್ಲವೆ? Read More »

ಪತ್ನಿ ಅಕ್ರಮ ಸಂಬಂಧಕ್ಕೆ ಬಲಿಯಾದ ಬಾಯ್‌ ಫ್ರೆಂಡ್ ಖಾಸಗಿ ಪಾರ್ಟ್| ಕೋಪೋದ್ರಿಕ್ತ ಪತಿಯಿಂದ ಗುಂಡು..!

ಪತ್ನಿಯ ಅಕ್ರಮ ಸಂಬಂಧದಿಂದ ಬೇಸತ್ತ ವ್ಯಕ್ತಿಯೊಬ್ಬ ತನ್ನ ಪತ್ನಿಯ ಪ್ರೇಮಿಯ ಮೇಲೆ ಗುಂಡು ಹಾರಿಸಿದ್ದಾನೆ. ಯುವಕನ ಖಾಸಗಿ ಭಾಗಕ್ಕೆ ಗುಂಡು ಹಾರಿಸಿದ್ದು, ಗಾಯಗೊಂಡ ವ್ಯಕ್ತಿಯನ್ನು ತಿರುವಲ್ಲಾದ ಆಸ್ಪತ್ರೆಗೆ ದಾಖಲಿಸಲಾಗಿದೆ. ಆರೋಪಿ ಪತ್ನಿ, ಬಾಯ್ ಫ್ರೆಂಡ್ ಮನೆಯಲ್ಲಿ ವಾಸಿಸುತ್ತಿದ್ದಳು. ಪತಿ – ಪತ್ನಿ ಸಂಬಂಧ ಕೋರ್ಟ್ ಮೆಟ್ಟಿಲೇರಿತ್ತು. ಕೋರ್ಟ್ ನಲ್ಲಿ ವಿಚ್ಛೇದನ ವಿಚಾರಣೆ ನಡೆಯುತ್ತಿದೆ. ಈ ಮಧ್ಯೆ ಪ್ರೇಮಿ ಮನೆಗೆ ಬಂದ ಪತಿ, ಆತನ ಖಾಸಗಿ ಅಂಗಕ್ಕೆ ಗುಂಡು ಹಾರಿಸಿದ್ದಾನೆ. ಏರ್ ಪಿಸ್ತೂಲ್ ನಲ್ಲಿ ಗುಂಡು ಹಾರಿಸಿದ್ದಾನೆ. ಗಾಯಗೊಂಡ

ಪತ್ನಿ ಅಕ್ರಮ ಸಂಬಂಧಕ್ಕೆ ಬಲಿಯಾದ ಬಾಯ್‌ ಫ್ರೆಂಡ್ ಖಾಸಗಿ ಪಾರ್ಟ್| ಕೋಪೋದ್ರಿಕ್ತ ಪತಿಯಿಂದ ಗುಂಡು..! Read More »

ಹಾವೂ ಸಾಯಲಿಲ್ಲ, ಕೋಲೂ ಮುರಿಯಲಿಲ್ಲ | ಒಂದೇ ಕಲ್ಲಿಗೆ ಮೂರು ಹಕ್ಕಿ ಹೊಡೆದ ಬಿಜೆಪಿ|

ಬೆಂಗಳೂರು: ಬಿ. ಎಸ್. ಯಡಿಯೂರಪ್ಪ ಉತ್ತರಾಧಿಕಾರಿ ಯಾರು ಎಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದೆ. ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾಗಿದ್ದಾರೆ. ಬೊಮ್ಮಾಯಿ ಅವರನ್ನು ಸಿಎಂ ಸ್ಥಾನಕ್ಕೆ ಪರಿಗಣಿಸುವ ಮೂಲಕ ಬಿಜೆಪಿ ಹೈಕಮಾಂಡ್‌ ರಾಜಕೀಯವಾಗಿ ಭರ್ಜರಿ ಸಿಕ್ಸರ್ ಬಾರಿಸಿದೆ..! ಪಕ್ಷವನ್ನು ಬೇರು ಮಟ್ಟದಿಂದ ಬೆಳೆಸಿ ಅಧಿಕಾರಕ್ಕೆ ಬಂದಿದ್ದ ಯಡಿಯೂರಪ್ಪ ಅವರ ಅಧಿಕಾರಾವಧಿಯನ್ನು 2 ವರ್ಷಗಳಿಗೇ ಮೊಟಕುಗೊಳಿಸುವ ಮೂಲಕ ಬಿಜೆಪಿ ಹೈಕಮಾಂಡ್ ರಾಜ್ಯದ ಪ್ರಬಲ ವೀರಶೈವ ಲಿಂಗಾಯತ ಸಮುದಾಯದ ಕೆಂಗಣ್ಣಿಗೆ ಗುರಿಯಾಗಲಿದೆ ಎಂಬ ಕೂಗಿಗೆ ಬೊಮ್ಮಾಯಿ ಅಸ್ತ್ರ

ಹಾವೂ ಸಾಯಲಿಲ್ಲ, ಕೋಲೂ ಮುರಿಯಲಿಲ್ಲ | ಒಂದೇ ಕಲ್ಲಿಗೆ ಮೂರು ಹಕ್ಕಿ ಹೊಡೆದ ಬಿಜೆಪಿ| Read More »

ರಾಜ್ಯಕ್ಕೆ ‌ಮತ್ತೆ ಮೂವರು‌ ನೂತನ ಡಿಸಿಎಂಗಳ ನೇಮಕ

ಬೆಂಗಳೂರು : ಕರ್ನಾಟಕ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆಯಾದ ನಂತ್ರ, ನೂತನ ಉಪ ಮುಖ್ಯಮಂತ್ರಿಗಳಾಗಿಆರ್ ಅಶೋಕ್, ಬಿ.ಶ್ರೀರಾಮುಲು ಹಾಗೂ ಗೋವಿಂದ ಕಾರಜೋಳ ಅವರನ್ನು ಆಯ್ಕೆ ಮಾಡಲಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಬಿಎಸ್ ಯಡಿಯೂರಪ್ಪ ರಾಜೀನಾಮೆ ನೀಡಿದ ನಂತರ, ಈಗ ಕರ್ನಾಟಕ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿಯನ್ನು ಇಂದಿನ ಬಿಜೆಪಿ ಸಂಸದೀಯ ಮಂಡಳಿಯ ಸಭೆಯಲ್ಲಿ ಒಕ್ಕೊರಲಿನಿಂದ ಘೋಷಣೆ ಮಾಡಲಾಗಿದೆ. ಈ ಮೂಲಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿಯವರು ನೇಮಕಗೊಂಡಿದ್ದಾರೆ. ಆದರೆ ಈ ಕುರಿತಂತೆ ಸಂಸದೀಯ ಮಂಡಳಿಯ ಸಭೆಯಲ್ಲಿ

ರಾಜ್ಯಕ್ಕೆ ‌ಮತ್ತೆ ಮೂವರು‌ ನೂತನ ಡಿಸಿಎಂಗಳ ನೇಮಕ Read More »

ಹೆಚ್.ಡಿ.ಕೆ ಬಳಿಕ ಕರ್ನಾಟಕದ ಸಿಎಂ ಪಟ್ಟವೇರಿದ ಮತ್ತೋರ್ವ ಮಾಜಿ ಮುಖ್ಯಮಂತ್ರಿ ಪುತ್ರ| ಬಸವರಾಜ ಬೊಮ್ಮಾಯಿ ನಡೆದು ಬಂದ ದಾರಿ|

ಬೆಂಗಳೂರು: ತೀವ್ರ ಪೈಪೋಟಿ, ಕುತೂಹಲ, ಲಾಭಿ, ರಾಜಕೀಯ ಮೇಲಾಟಗಳ ನಡುವೆ ಕೊನೆಗೂ ಕರ್ನಾಟಕದಲ್ಲಿ ಬಿಜೆಪಿಯ ಹೊಸ ಅಲೆ ಮತ್ತೆ ಮೂಡಿದೆ. ಬಿಜೆಪಿ ಹೈಕಮಾಂಡ್ ಅಳೆದು, ತೂಗಿ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿಯವರನ್ನು ಆಯ್ಕೆ ಮಾಡಿದೆ. ಲಿಂಗಾಯತ ವರ್ಗದಿಂದ ಮುಖ್ಯಮಂತ್ರಿಯಾಗಿದ್ದ ಪ್ರಬಲ ಯಡಿಯೂರಪ್ಪರನ್ನು ರಾಜೀನಾಮೆ ಕೊಡಿಸಿ, ಅವರದ್ದೇ ಆಪ್ತ ಬಸವರಾಜ ಬೊಮ್ಮಾಯಿಯವರನ್ನು ಆಯ್ಕೆ ಮಾಡಿದ್ದು, ಮಾಜಿ ಸಿಎಂ ಗೂ ಖುಷಿ ತಂದಿದೆ. ಜೊತೆಗೆ ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಮತ್ತೋರ್ವ ಮಾಜಿ ಸಿಎಂ ಪುತ್ರ ರಾಜ್ಯದ‌ ಚುಕ್ಕಾಣಿ ಹಿಡಿದಿದ್ದಾರೆ. ಈ

ಹೆಚ್.ಡಿ.ಕೆ ಬಳಿಕ ಕರ್ನಾಟಕದ ಸಿಎಂ ಪಟ್ಟವೇರಿದ ಮತ್ತೋರ್ವ ಮಾಜಿ ಮುಖ್ಯಮಂತ್ರಿ ಪುತ್ರ| ಬಸವರಾಜ ಬೊಮ್ಮಾಯಿ ನಡೆದು ಬಂದ ದಾರಿ| Read More »