Editor

ಆ. 16 ರಿಂದ ಕಾರವಾರದವರೆಗೂ ವಿಸ್ಟಾಡೋಮ್ ರೈಲು ವಿಸ್ತರಣೆ

ಉಡುಪಿ: ಬೆಂಗಳೂರಿನಿAದ ಕಾರವಾರಕ್ಕೆ ಬೆಳಗಿನ ರೈಲು, ಆ. 16 ರಿಂದ ಹೊಸ ವಿಸ್ಟಾಡೋಮ್ ಕೋಚಿನೊಂದಿಗೆ ಪುನರಾರಂಭಗೊಳ್ಳಲಿದೆ ಎಂದು ನೈರುತ್ಯ ರೈಲ್ವೇ ತಿಳಿಸಿದೆ. ಇದಕ್ಕೆ ಕೊಂಕಣ್ ರೈಲ್ವೇ ಒಪ್ಪಿಗೆ ಸೂಚಿಸಿದ್ದು ರೈಲ್ವೇ ಹಿತರಕ್ಷಣಾ ಸಮಿತಿ ಪ್ರಯಾಣಿಕರ ಒತ್ತಾಯ ಹೋರಾಟ ಫಲಪ್ರದವಾಗಿದೆ. ಕೋವಿಡ್ ಕಾರಣದಿಂದ ಬೆಂಗಳೂರು-ಕಾರವಾರ ಬೆಳಗಿನ ರೈಲು ಸಂಚಾರವನ್ನು ಮಂಗಳೂರಿನಿಂದ ಕಾರವಾರದ ತನಕ ರೈಲ್ವೆ ಇಲಾಖೆ ಸ್ಥಗಿತಗೊಳಿಸಿತ್ತು. ಈ ಸಂಬಂಧ ಆಯಾ ಭಾಗದ ಪ್ರಯಾಣಿಕರು, ಸಾರ್ವಜನಿಕರು ಸದರಿ ರೈಲನ್ನು ಪುನರಾರಂಭಿಸುವಂತೆ ಒತ್ತಾಯಿಸಿದ್ದರು. ಅದೇ ಸಮಯದಲ್ಲಿ ವಿಸ್ಟಾಡೋಮ್ ಪ್ರವಾಸಿ ಬೋಗಿಯಿರುವ […]

ಆ. 16 ರಿಂದ ಕಾರವಾರದವರೆಗೂ ವಿಸ್ಟಾಡೋಮ್ ರೈಲು ವಿಸ್ತರಣೆ Read More »

ಶಾಲಾ- ಕಾಲೇಜು ಆರಂಭಕ್ಕೆ ಮುಹೂರ್ತ ಫಿಕ್ಸ್| ಆ 23ರಿಂದ ಮತ್ತೆ ತೆರೆಯಲಿದೆ ಶಾಲಾ ಬಾಗಿಲು|

ಬೆಂಗಳೂರು: ರಾಜ್ಯದಲ್ಲಿ ಶಾಲಾ-ಕಾಲೇಜು ಪ್ರಾರಂಭಕ್ಕೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಆ.23ರಿಂದ 9ನೇ ತರಗತಿಯಿಂದ 12ರವರೆಗೆ ಪ್ರಾರಂಭವಾಗಲಿವೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಕೊರೋನಾ ನಿರ್ವಹಣಾ ಸಭೆಯಲ್ಲಿ ತಜ್ಞರ ಸಮಿತಿಯೊಂದಿಗೆ ಚರ್ಚಿಸಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಕೊರೋನಾ ಪಾಸಿಟಿವಿಟಿ ದರ ಶೇ.2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಶಾಲೆ ಪ್ರಾರಂಭಿಸಲಾಗುವುದು. ಸೋಂಕು ಹೆಚ್ಚಿರುವ ಗಡಿ ಜಿಲ್ಲೆಗಳಲ್ಲಿ ಶಾಲೆಗಳ ಪ್ರಾರಂಭ ಇಲ್ಲ ಎಂದು ಸ್ಪಷ್ಟಪಡಿಸಿದರು. ಪಾಸಿಟಿವಿಟಿ ದರ ಶೇಕಡ 2 ಕ್ಕಿಂತ

ಶಾಲಾ- ಕಾಲೇಜು ಆರಂಭಕ್ಕೆ ಮುಹೂರ್ತ ಫಿಕ್ಸ್| ಆ 23ರಿಂದ ಮತ್ತೆ ತೆರೆಯಲಿದೆ ಶಾಲಾ ಬಾಗಿಲು| Read More »

ಸದ್ಯದ ನಿಯಮಗಳೇ ಬೆಸ್ಟ್| ಅಗತ್ಯ ಬಿದ್ರೆ ರೂಲ್ಸ್ ಸ್ಟ್ರಿಕ್ಟ್ ಮಾಡೋಣ| ಸಿಎಂ ಬೊಮ್ಮಾಯಿ ಹೇಳಿಕೆ

ಬೆಂಗಳೂರು:ಕರ್ನಾಟಕದಲ್ಲಿ ಕೊವಿಡ್ 3ನೇ ಅಲೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಮಹತ್ವದ ಸಭೆ ನಡೆಸಿದರು. ಶಾಲಾ-ಕಾಲೇಜುಗಳನ್ನು ಆರಂಭಿಸುವ ಬಗ್ಗೆ ಸಭೆಯಲ್ಲಿ ಗಂಭೀರ ಚರ್ಚೆ ನಡೆದಿದ್ದು, ಶಾಲಾ-ಕಾಲೇಜು ಆರಂಭಕ್ಕೆ ಸಭೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈಗಲೇ ಶಾಲಾ-ಕಾಲೇಜು ಓಪನ್‌ ಮಾಡಬೇಕೆಂದು ಕೆಲವರು ಅಭಿಪ್ರಾಯ ತಿಳಿಸಿದರೆ, ಸೆಪ್ಟೆಂಬರ್‌ವರೆಗೆ ಕಾದು ನೋಡುವಂತೆ ಇನ್ನು ಕೆಲವರು ಸಲಹೆ ನೀಡಿದ್ದಾರೆ. ಟ್ರೇಸ್ ಮತ್ತು ಟ್ರ್ಯಾಕ್ ಹಾಗೂ ಟ್ರೀಟ್ ಸೂತ್ರವನ್ನು ಹೆಚ್ಚಾಗಿ ಅನುಸರಿಸುವಂತೆ ಪರಿಣತರು ಮುಖ್ಯಮಂತ್ರಿಗೆ ಸಲಹೆ ನೀಡಿದ್ದಾರೆ. ಕೇರಳ ಮತ್ತು ಮಹಾರಾಷ್ಟ್ರಕ್ಕೆ

ಸದ್ಯದ ನಿಯಮಗಳೇ ಬೆಸ್ಟ್| ಅಗತ್ಯ ಬಿದ್ರೆ ರೂಲ್ಸ್ ಸ್ಟ್ರಿಕ್ಟ್ ಮಾಡೋಣ| ಸಿಎಂ ಬೊಮ್ಮಾಯಿ ಹೇಳಿಕೆ Read More »

ಸಾರಿಗೆ ಬಸ್ ಹರಿದು ಅಂಗನವಾಡಿ ಶಿಕ್ಷಕಿ ಸಾವು

ಹಾವೇರಿ : ಸಾರಿಗೆ ಬಸ್ ಹರಿದು ಅಂಗನವಾಡಿ ಶಿಕ್ಷಕಿ ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನ ನಿಟ್ಟೂರು ಗ್ರಾಮದಲ್ಲಿ ನಡೆದಿದೆ. 55 ವರ್ಷದ ಕಮಲಮ್ಮ ಕಾಸಂಬಿ ಮೃತರಾಗಿದ್ದಾರೆ. ಇವರು ಮಗನೊಂದಿಗೆ ಬೈಕ್ ನಲ್ಲಿ ಬರುತ್ತಿದ್ದ ವೇಳೆ ಎದುರಿಗೆ ಸಾರಿಗೆ ಬಸ್ ಬಂದಿದೆ. ಆ ವೇಳೆ ನಿಯಂತ್ರಣ ತಪ್ಪಿ ಬೈಕ್ ನಿಂದ ಕೆಳಗೆ ಬಿದ್ದಿದ್ದಾರೆ. ಆಗ ಕಮಲಮ್ಮಳ ತಲೆಯ ಮೇಲೆ ಬಸ್ ಹರಿದು ಹೋಗಿದಿದ್ದು, ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಅದೃಷ್ಟವಶಾತ್ ಕಮಲಮ್ಮಳ ಪುತ್ರ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಇನ್ನು ಈ ಸಂಬಂಧ

ಸಾರಿಗೆ ಬಸ್ ಹರಿದು ಅಂಗನವಾಡಿ ಶಿಕ್ಷಕಿ ಸಾವು Read More »

ದೇಶ ವಿಭಜನೆ ದುರಂತ ಮರೆಯಲು ಅಸಾಧ್ಯ- ಪ್ರಧಾನಿ ಮೋದಿ

ಹೊಸದಿಲ್ಲಿ: ಆಗಸ್ಟ್ 14ನ್ನು ‘ವಿಭಜನೆ ಭೀಕರ ನೆನಪಿನ ದಿನ’ವಾಗಿ ಆಚರಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಘೋಷಿಸಿದ್ದಾರೆ. ‘ವಿಭಜನೆಯ ನೋವುಗಳನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ’ ಎಂದು ಪ್ರಧಾನಿ ಮೋದಿ ಟ್ವಿಟರ್ ನಲ್ಲಿ ವ್ಯಕ್ತಪಡಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಈ ಕುರಿತು ಟ್ವೀಟ್ ಮಾಡಿದ್ದು,ನಮ್ಮ ಲಕ್ಷಾಂತರ ಸಹೋದರಿಯರು ಮತ್ತು ಸಹೋದರರು ಸ್ಥಳಾಂತರಗೊಂಡರು ಮತ್ತು ಅನೇಕರು ಬುದ್ಧಿಹೀನ ದ್ವೇಷ ಮತ್ತು ಹಿಂಸೆಯಿಂದ ಪ್ರಾಣ ಕಳೆದುಕೊಂಡರು. ನಮ್ಮ ಜನರ ಹೋರಾಟಗಳು ಮತ್ತು ತ್ಯಾಗಗಳ ನೆನಪಿಗಾಗಿ ಆಗಸ್ಟ್ 14 ನ್ನು ವಿಭಜನೆಯ

ದೇಶ ವಿಭಜನೆ ದುರಂತ ಮರೆಯಲು ಅಸಾಧ್ಯ- ಪ್ರಧಾನಿ ಮೋದಿ Read More »

ಭಾರತದಲ್ಲಿ ಇನ್ಮುಂದೆ ಹಳೆ ವಾಹನಗಳು ಗುಜರಿಗೆ…! ಏನಿದು ಈ ನೀತಿಯ ಉದ್ದೇಶ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್…

ಭಾರತದಲ್ಲಿ ಇನ್ಮುಂದೆ 15 ವರ್ಷಕ್ಕೂ ಹಳೆಯ ವಾಹನಗಳು ಓಡಾಡೋ ಹಾಗಿಲ್ಲ, ಎಲ್ಲವೂ ಗುಜರಿಗೆ ಎನ್ನುವ ವಿಚಾರ ತಿಳಿದಿರಬಹುದು. ಆದರೆ ಇದು ಯಾವ ರೀತಿ ನಡೆಯುತ್ತದೆ ನಿಮ್ಮ ವಾಹನಗಳನ್ನು ಯಾವಾಗ ಗುಜರಿಗೆ ಹಾಕಬೇಕು ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ. ಇದರ ಪ್ರಕಾರ 15 ವರ್ಷ ಹಳೆಯ ಕಮರ್ಷಿಯಲ್ ವಾಹನ ಹಾಗೂ 20 ವರ್ಷ ಹಳೆಯ ಖಾಸಗಿ ವಾಹನ ಈ ನೀತಿಯ ಒಳಗೆ ಬರಲಿದ್ದು. ಗಾಡಿಗಳನ್ನು ಕೇವಲ ವರ್ಷದ ಆಧಾರದಲ್ಲಿ ಗುಜರಿಗೆ ಹಾಕಲಾಗುವುದಿಲ್ಲ, ಇದನ್ನು ಅದರ ಫಿಟ್ನೆಸ್ ಆಧರಿಸಿ

ಭಾರತದಲ್ಲಿ ಇನ್ಮುಂದೆ ಹಳೆ ವಾಹನಗಳು ಗುಜರಿಗೆ…! ಏನಿದು ಈ ನೀತಿಯ ಉದ್ದೇಶ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್… Read More »

ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಮಾರ್ಗಸೂಚಿ ತಿಂಗಳಾಂತ್ಯದವರೆಗೂ ಮುಂದುವರಿಕೆ

ಬೆಂಗಳೂರು : ಕೋವಿಡ್ 19 ಕಣ್ಗಾವಲು ನಿಯಂತ್ರಣ ಮತ್ತು ಜಾಗ್ರತೆ ಮಾರ್ಗಸೂಚಿಗಳನ್ನು ಆಗಸ್ಟ್ 30 ರವರೆಗೆ ವಿಸ್ತರಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಬಗ್ಗೆ ರಾಜ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್ ಆದೇಶ ಹೊರಡಿಸಿದ್ದು, ರಾಜ್ಯದಲ್ಲಿ ಕೋವಿಡ್ 19 ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಕೊರೊನಾ ಸೋಂಕು ವ್ಯಾಪಕವಾಗಿ ಹರಡುವದನ್ನು ತಡೆಯಲು ಕೇಂದ್ರೀಕೃತ ಕಣ್ಗಾವಲು ಕೋವಿಡ್ 19 ಸಮುಚಿತ ವರ್ತನೆಗಳನ್ನು ಕಟ್ಟು ನಿಟ್ಟಾಗಿ ಅನುರಿಸುವುದು ಹಾಗೂ ಸ್ಥಳೀಯವಾಗಿ ನಿಯಂತ್ರಿಸಲು ಆರೋಗ್ಯ ತಜ್ಞರು ಸೂಚಿಸಿದ್ದು, ಈ

ರಾಜ್ಯದಲ್ಲಿ ಕೋವಿಡ್ ನಿಯಂತ್ರಣ ಮಾರ್ಗಸೂಚಿ ತಿಂಗಳಾಂತ್ಯದವರೆಗೂ ಮುಂದುವರಿಕೆ Read More »

ದ.ಕ ದಲ್ಲಿ ಈ ಬಾರಿ ಸ್ವಾತಂತ್ರ್ಯ ಆಚರಣೆಗಿಲ್ಲ ಸ್ವಾತಂತ್ರ್ಯ| ವೀಕೆಂಡ್ ಕರ್ಪ್ಯೂ ‌ನಡುವೆ ಸರಳ ಆಚರಣೆಗೆ ಸೂಚನೆ

ಮಂಗಳೂರು: ದ.ಕ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳಿಂದಾಗಿ ಆತಂಕ ಮನೆ ಮಾಡಿದ್ದು, 75 ನೇ ಸ್ವಾತಂತ್ರ್ಯೋತ್ಸವ ಆಚರಣೆಗೆ ಕತ್ತರಿ ಬಿದ್ದಿದೆ. ಜಿಲ್ಲಾದ್ಯಂತ ಆ.14 ಮತ್ತು 15 ರಂದು ವೀಕೆಂಡ್ ಕರ್ಪ್ಯೂ ಹೇರಿರುವ ಕಾರಣ ಸಾರ್ವಜನಿಕ ಸಮಾರಂಭಗಳಿಗೆ ಬ್ರೇಕ್ ಬಿದ್ದಿದೆ. ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯನ್ನು ಸರಳ ರೀತಿಯಲ್ಲಿ ಆಚರಿಸಲು ಜಿಲ್ಲಾಡಳಿತ ಸೂಚಿಸಿದೆ. ಸರ್ಕಾರಿ ಕಚೇರಿಗಳಲ್ಲಿ ಕೇವಲ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಧ್ವಜಾರೋಹಣ ನೆರವೇರಿಸಲು ಸೂಚಿಸಿದ್ದು, ಸಾರ್ವಜನಿಕರ ಭಾಗವಹಿಸುವಿಕೆ ನಿಷೇಧಿಸಲಾಗಿದೆ. ಶನಿವಾರ ನಡೆಯಲಿದ್ದ ಮಂಗಳೂರು ವಿ.ವಿ ಪರೀಕ್ಷೆಗಳನ್ನೂ ಮುಂದೂಡಲಾಗಿದ್ದು,

ದ.ಕ ದಲ್ಲಿ ಈ ಬಾರಿ ಸ್ವಾತಂತ್ರ್ಯ ಆಚರಣೆಗಿಲ್ಲ ಸ್ವಾತಂತ್ರ್ಯ| ವೀಕೆಂಡ್ ಕರ್ಪ್ಯೂ ‌ನಡುವೆ ಸರಳ ಆಚರಣೆಗೆ ಸೂಚನೆ Read More »

ಅಲ್ಲಿ‌ ಕಾಮನ್ ಸೆನ್ಸ್ ತಪ್ಪಿದ್ದು ಯಾರು? ಡಿಸಿ, ಡಿಎಚ್ಒ ರನ್ನು ತರಾಟೆಗೆ ತೆಗೆದುಕೊಂಡ ಸಿಎಂ ಗೆ ಉಸ್ತುವಾರಿ ಸಚಿವರು ಕಂಡಿಲ್ಲವೇ?

ಮಂಗಳೂರು: ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಬಸವರಾಜ ಬೊಮ್ಮಾಯಿಯವರು ಪ್ರಥಮ ‌ಬಾರಿಗೆ ಕರಾವಳಿ ಪ್ರವಾಸವನ್ನು ಗುರುವಾರ ಮಾಡಿದ್ದರು. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಮತ್ತು ಉಡುಪಿಯಲ್ಲಿ ದಿನೇದಿನೇ ಕೊರೊನಾ ಪ್ರಕರಣಗಳು ಜಾಸ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಭೇಟಿ ತುಂಬಾ ಪ್ರಾಮುಖ್ಯತೆ ಪಡೆದಿತ್ತು. ಅದರಂತೆ ಮುಖ್ಯಮಂತ್ರಿಗಳು ಕೂಡಾ ಕಾಲಿಗೆ ಚಕ್ರಕಟ್ಟಿಕೊಂಡವರಂತೆ ಜಿಲ್ಲೆಯಲ್ಲಿ ಪ್ರಗತಿ ಪರಿಶೀಲನೆ ನಡೆಸಿದ್ದು ನಿಜಕ್ಕೂ ಸಾರ್ವಜನಿಕರಲ್ಲಿ ಒಂದು ರೀತಿಯ ಆಶಾಭಾವ ಮೂಡಿಸಿತ್ತು. ಆದರೆ ಸಿಎಂ ರ ಸಭೆಯಲ್ಲಿ ‌ನಡೆಸಿಕೊಟ್ಟ ಜಿಲ್ಲಾಡಳಿತದ ಅಧಿಕಾರಿಗಳಿಗೆ ‌ಮಾತ್ರ ‘ಕೋಲು ಕೊಟ್ಟು

ಅಲ್ಲಿ‌ ಕಾಮನ್ ಸೆನ್ಸ್ ತಪ್ಪಿದ್ದು ಯಾರು? ಡಿಸಿ, ಡಿಎಚ್ಒ ರನ್ನು ತರಾಟೆಗೆ ತೆಗೆದುಕೊಂಡ ಸಿಎಂ ಗೆ ಉಸ್ತುವಾರಿ ಸಚಿವರು ಕಂಡಿಲ್ಲವೇ? Read More »

ಅಂಜುದೀವ್ ದ್ವೀಪದಲ್ಲಿ ಹಾರಿದ ತ್ರಿವರ್ಣ ಧ್ವಜ

ಅಂಜುದೀವ್ ದ್ವೀಪದಲ್ಲಿ ಹಾರಿದ ತ್ರಿವರ್ಣ ಧ್ವಜ ಕಾರವಾರ: 75ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಆಜಾದಿ ಕಾ ಅಮೃತ್ ಮಹೋತ್ಸವ’ದಲ್ಲಿ ದೇಶದಾದ್ಯಂತ ಭಾರತೀಯ ನೌಕಾಪಡೆಯಿಂದ 75 ದ್ವೀಪಗಳಲ್ಲಿ ಧ್ವಜಾರೋಹಣ ನಡೆಸಲಾಗಿದೆ. ಇದರಂತೆ ಕಾರವಾರದ ನೌಕಾನೆಲೆ ನಿರ್ಬಂಧಿತ ಅಂಜುದೀವ್ ದ್ವೀಪದಲ್ಲಿಯೂ ಕೂಡ ತ್ರಿವರ್ಣ ಧ್ವಜವನ್ನು ಹಾರಿಸಿ ಗೌರವ ಸಲ್ಲಿಸಲಾಯಿತು. ಕಾರವಾರದ ಕದಂಬ ನೌಕಾನೆಲೆ ವ್ಯಾಪ್ತಿಯ ಕರ್ನಾಟಕ ನೌಕಾ ವಲಯದ ಫ್ಲ್ಯಾಗ್ ಆಫೀಸರ್ ಮಹೇಶ್ ಸಿಂಗ್ ಅಂಜುದೀವ್ ದ್ವೀಪದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಅಂಜುದೀವ್ ದ್ವೀಪವು ಭಾರತೀಯ ನೌಕಾಪಡೆಗೆ ರಕ್ಷಣೆಯ ದೃಷ್ಟಿಯಲ್ಲಿ ಪ್ರಮುಖವಾಗಿದೆ

ಅಂಜುದೀವ್ ದ್ವೀಪದಲ್ಲಿ ಹಾರಿದ ತ್ರಿವರ್ಣ ಧ್ವಜ Read More »