Editor

ತಂದೆಯ ಮರಣದ‌ ನಡುವೆಯೂ ಪ್ರಮಾಣವಚನ ಸ್ವೀಕರಿಸಿದವರಿಗೆ ಕಣ್ಣೀರಿನ‌ ಅರ್ಥ‌ ತಿಳಿವುದೇ? – ಡಿಕೆಶಿಗೆ ಬಿಜೆಪಿ ತಿರುಗೇಟು

ಬೆಂಗಳೂರು: ‘ತಂದೆ ಮರಣಹೊಂದಿದ ದಿನವೇ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಇತಿಹಾಸ ನಿಮ್ಮದು’ ಎಂದು ಟ್ವೀಟ್‌ ಮಾಡುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ಗೆ ಬಿಜೆಪಿ ತಿರುಗೇಟು ನೀಡಿದೆ. ‘ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ರಾಜೀನಾಮೆ ನೀಡುವ ವಿಷಯ ಪ್ರಸ್ತಾಪಿಸುವಾಗ ಕಣ್ಣೀರು ಹಾಕಿದ್ದಾರೆ. ಇದು ಕೇವಲ ಒಬ್ಬ ವ್ಯಕ್ತಿಯ ಕಣ್ಣೀರಲ್ಲ. ರಾಜ್ಯವನ್ನು ಪ್ರತಿನಿಧಿಸುವ ಮುಖ್ಯಮಂತ್ರಿಯ ಕಣ್ಣೀರು. ಇದರ ಹಿಂದಿನ ನೋವೇನು? ಆ ನೋವು ಕೊಟ್ಟವರು ಯಾರು? ಎಂಬುದನ್ನು ರಾಜ್ಯದ ಜನರಿಗೆ ತಿಳಿಸಬೇಕು’ ಎಂದು ಡಿಕೆಶಿ ಹೇಳಿಕೆ ನೀಡಿದ್ದರು. ಡಿಕೆಶಿ ಹೇಳಿಕೆಗೆ […]

ತಂದೆಯ ಮರಣದ‌ ನಡುವೆಯೂ ಪ್ರಮಾಣವಚನ ಸ್ವೀಕರಿಸಿದವರಿಗೆ ಕಣ್ಣೀರಿನ‌ ಅರ್ಥ‌ ತಿಳಿವುದೇ? – ಡಿಕೆಶಿಗೆ ಬಿಜೆಪಿ ತಿರುಗೇಟು Read More »

ನಳಿನ್ ಮನಸ್ಸು ಮಾಡಿದ್ದಲ್ಲಿ ಅಂಗಾರ ಸಿಎಂ ಆಗ್ಬಹುದು- ರಮಾನಾಥ ರೈ

ಮಂಗಳೂರು: ಬಿಜೆಪಿಯವರ ಒಳ ಜಗಳದಿಂದಾಗಿ ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇದೀಗ ನಳಿನ್ ಕುಮಾರ್ ಕಟೀಲ್ ಮನಸ್ಸು ಮಾಡಿದ್ದಲ್ಲಿ ಸಚಿವ ಎಸ್. ಅಂಗಾರ ಅವರನ್ನು ಸಿಎಂ ಮಾಡಬಹುದು ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ಬಿಜೆಪಿಯವರು ನುಡಿದಂತೆ ನಡೆಯುವುದಿಲ್ಲ. ಬಿಜೆಪಿಯ ಸಂಪೂರ್ಣ ಮಂತ್ರಿ ಮಂಡಲ ಭ್ರಷ್ಟಾಚಾರದಲ್ಲಿ ಮುಳುಗಿದೆ. ಮುಂದೆ ಯಾರೇ ಬಂದ್ರೂ ಸರಿಯಾಗದ ಸ್ಥಿತಿಯಲ್ಲಿದೆ. ಜನತಾ ಪರಿವಾರದಲ್ಲಿ ಇಲ್ಲಿಯ ತನಕ ದುರ್ಬಲ ವರ್ಗದವರನ್ನು ಸಿಎಂ ಮಾಡಿಲ್ಲ. ಆದರೆ,

ನಳಿನ್ ಮನಸ್ಸು ಮಾಡಿದ್ದಲ್ಲಿ ಅಂಗಾರ ಸಿಎಂ ಆಗ್ಬಹುದು- ರಮಾನಾಥ ರೈ Read More »

ಕುಕ್ಕೆ: ಇಂದಿನಿಂದ ಪೂಜಾ ಕೈಂಕರ್ಯಗಳಿಗೆ ಅವಕಾಶ- ಜು.29ರಿಂದ ಸರ್ಪಸಂಸ್ಕಾರ, ಆಶ್ಲೇಷ ಬಲಿ ಸೇವೆ ಆರಂಭ

ಪ್ರಸಿದ್ದ ಯಾತ್ರಾಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇಂದಿನಿಂದ(ಜು.27) ಕೆಲವೊಂದು ಸೇವೆಗಳು ಆರಂಭಗೊಳ್ಳಲಿದ್ದು, ಪ್ರಧಾನ ಸೇವೆಗಳಾದ ಸರ್ಪಸಂಸ್ಕಾರ, ಆಶ್ಲೇಷ ಬಲಿ, ನಾಗಪ್ರತಿಷ್ಠೆ ಮತ್ತು ಮಹಾಭಿಷೇಕವು ಜು.29 ರಿಂದ ಪ್ರಾರಂಭಗೊಳ್ಳಲಿದೆ. ಸರಕಾರದ ಕೋವಿಡ್ ಮಾರ್ಗಸೂಚಿಗೆ ಅನುಗುಣವಾಗಿ ಶ್ರೀ ದೇವಳದಲ್ಲಿ ಸೇವೆಗಳನ್ನು ನೆರವೇರಿಸಲು ಭಕ್ತರಿಗೆ ಅವಕಾಶ ಕಲ್ಪಿಸಲಾಗಿದೆ. ಬೆಳಗ್ಗೆ 6.30ರಿಂದ ಮಧ್ಯಾಹ್ನ 1.30ರ ತನಕ ಬಳಿಕ ಮಧ್ಯಾಹ್ನ 3.30ರಿಂದ ರಾತ್ರಿ 8.30 ಗಂಟೆ ತನಕ ಭಕ್ತರಿಗೆ ಶ್ರೀ ದೇವರ ದರುಶನಕ್ಕೆ ಅವಕಾಶಕಲ್ಪಿಸಲಾಗಿದೆ ಎಂದು ದೇವಳದ ಪ್ರಕಟಣೆ ತಿಳಿಸಿದೆ. ಸರ್ಪಸಂಸ್ಕಾರ, ಆಶ್ಲೇಷ

ಕುಕ್ಕೆ: ಇಂದಿನಿಂದ ಪೂಜಾ ಕೈಂಕರ್ಯಗಳಿಗೆ ಅವಕಾಶ- ಜು.29ರಿಂದ ಸರ್ಪಸಂಸ್ಕಾರ, ಆಶ್ಲೇಷ ಬಲಿ ಸೇವೆ ಆರಂಭ Read More »

ಹೆದ್ದಾರಿ‌ ಬದಿಗಳಲ್ಲಿ ಮದ್ಯಮಾರಾಟ – ಸುಪ್ರೀಂನಿಂದ ಮಹತ್ವದ ಆದೇಶ

ನವದೆಹಲಿ: ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಮತ್ತು ರಾಷ್ಟ್ರೀಯ ಅಥವಾ ರಾಜ್ಯ ಹೆದ್ದಾರಿಗಳ ಹೊರ ಅಂಚಿನಿಂದ 500 ಮೀಟರ್ ದೂರದಲ್ಲಿ ಅಥವಾ ಹೆದ್ದಾರಿಯ ಉದ್ದಕ್ಕೂ ಒಂದು ಸೇವಾ ಲೇನ್‌ಗೆ ಮದ್ಯ ಮಾರಾಟಕ್ಕೆ ಪರವಾನಗಿ ನೀಡುವುದನ್ನು ನಿಲ್ಲಿಸುವ ಬಗ್ಗೆ ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ನೀಡಿದೆ. 20,000 ಜನರು ಅಥವಾ ಅದಕ್ಕಿಂತ ಕಡಿಮೆ ಜನಸಂಖ್ಯೆ ಹೊಂದಿರುವ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿರುವ ಪ್ರದೇಶಗಳ ಸಂದರ್ಭದಲ್ಲಿ, 500 ಮೀಟರ್‌ಗಳ ಅಂತರವನ್ನು 220 ಮೀಟರ್‌ಗೆ ಇಳಿಸಿ ಆದೇಶ ಹೊರಡಿಸಿದೆ. ಈ ಮೂಲಕ 220 ಮೀಟರ್

ಹೆದ್ದಾರಿ‌ ಬದಿಗಳಲ್ಲಿ ಮದ್ಯಮಾರಾಟ – ಸುಪ್ರೀಂನಿಂದ ಮಹತ್ವದ ಆದೇಶ Read More »

ವೀರ್ಯಾಣು ಪರೀಕ್ಷೆ ಬಳಿಕ ನಿರಪರಾಧಿ ಎಂದು ಸಾಬೀತು- ಅತ್ಯಾಚಾರ ಆರೋಪಿ ಬಿಡುಗಡೆ

ಭಟ್ಕಳ: ಸುಮಾರು ಹತ್ತು ವರ್ಷಗಳ ಹಿಂದೆ ನಡೆದ ಅತ್ಯಾಚಾರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯ ಬಂಧನವಾಗಿದ್ದರೂ, ಕೋರ್ಟ್ ಆತನನ್ನು ನಿರಪರಾಧಿ ಎಂದು ಬಿಡುಗಡೆಗೊಳಿಸಿದ್ದು, ಸದ್ಯ ನೈಜ ಆರೋಪಿಗಳ ಪತ್ತೆಗಾಗಿ ಪೊಲೀಸ್ ಇಲಾಖೆಗೆ ಸೂಚಿಸಿದೆ. ಇತ್ತ ಯಾವ ತಪ್ಪು ಮಾಡದೆಯೂ ಸುಮಾರು ಆರು ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ ವ್ಯಕ್ತಿ, ತನ್ನ ಮೇಲೆ ಆರೋಪ ಹೊರಿಸಿ, ಜೈಲಿಗಟ್ಟಿದ ಪೊಲೀಸ್ ಅಧಿಕಾರಿಯೊಬ್ಬರಿಗೆ ಹಿಡಿಶಾಪಮಾತ್ರ ವಿಪರ್ಯಾಸ. ಘಟನೆ ವಿವರ: ಸುಮಾರು ಹತ್ತು ವರ್ಷಗಳ ಹಿಂದೆ, ಅಂದರೆ 2010 ರ ಅಕ್ಟೋಬರ್

ವೀರ್ಯಾಣು ಪರೀಕ್ಷೆ ಬಳಿಕ ನಿರಪರಾಧಿ ಎಂದು ಸಾಬೀತು- ಅತ್ಯಾಚಾರ ಆರೋಪಿ ಬಿಡುಗಡೆ Read More »

4 ಬಾರಿ ಅಧಿಕಾರದ ಹಿಡಿದರೂ ಪೂರ್ಣಾವಧಿ ಸಿಎಂ ಆಗಲೇ ಇಲ್ಲ ಯಡ್ಡಿ – ರಾಜೀನಾಮೆ ಹಿನ್ನೆಲೆ ಶಿಕಾರಿಪುರ ಬಂದ್

ಶಿವಮೊಗ್ಗ: ನಾಲ್ಕು ಬಾರಿ‌ ಯಡಿಯೂರಪ್ಪ ರಾಜ್ಯದ ಮುಖ್ಯಮಂತ್ರಿ ಸ್ಥಾನ ಏರಿದರೂ ಪೂರ್ಣಾವಧಿ ಅಧಿಕಾರ ಅನುಭವಿಸದೇ ಅರ್ಧದಲ್ಲೇ ರಾಜೀನಾಮೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ತವರು ಕ್ಷೇತ್ರ ಶಿಕಾರಿಪುರದಲ್ಲಿ ಸ್ವಯಂ ಪ್ರೇರಿತವಾಗಿ ಬಂದ್ ಮಾಡಲಾಗಿದೆ. ರಾಜೀನಾಮೆ ನಿರ್ಧಾರವನ್ನು ಬಿಎಸ್ ವೈ ಪ್ರಕಟಿಸಿರುವ ಬೆನ್ನಲ್ಲೇ ಅಂಗಡಿಗಳನ್ನು ವ್ಯಾಪಾರಿಗಳು ಮುಚ್ಚಿದ್ದು, ಶಿಕಾರಿಪುರ ಬಿಜೆಪಿ ಪಾಳಯದಲ್ಲಿ ಮೌನ ಆವರಿಸಿದೆ. ಯಡಿಯೂರಪ್ಪ ಹುಟ್ಟಿದ್ದು ಮಂಡ್ಯ ಜಿಲ್ಲೆಯ ಬೂಕನಕೆರೆಯಲ್ಲಿ. ಆದರೆ ಅವರು ರಾಜಕೀಯವಾಗಿ ಬೆಳೆದಿದ್ದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ. ಶಿಕಾರಿಪುರ ಪುರಸಭೆ ಅಧ್ಯಕ್ಷರಾಗಿ ಆಯ್ಕೆಯಾಗುವ ಮೂಲಕ ರಾಜಕೀಯ

4 ಬಾರಿ ಅಧಿಕಾರದ ಹಿಡಿದರೂ ಪೂರ್ಣಾವಧಿ ಸಿಎಂ ಆಗಲೇ ಇಲ್ಲ ಯಡ್ಡಿ – ರಾಜೀನಾಮೆ ಹಿನ್ನೆಲೆ ಶಿಕಾರಿಪುರ ಬಂದ್ Read More »

ಭ್ರಷ್ಟನ ಬದಲು ಮತ್ತೊಬ್ಬ ಭ್ರಷ್ಟ ಬಂದರೆ ಏನು ಪ್ರಯೋಜನ? ಸರ್ಕಾರ ‌ಬದಲಾಗಲಿ,‌ ನಾಯಕನಲ್ಲ- ಸಿದ್ದರಾಮಯ್ಯ ಪ್ರತಿಕ್ರಿಯೆ

ಬೆಂಗಳೂರು. ಒಬ್ಬ ಭ್ರಷ್ಟ ಮುಖ್ಯಮಂತ್ರಿಯನ್ನು ತೆಗೆದು ಇನ್ನೊಬ್ಬ ಭ್ರಷ್ಟನನ್ನು ಮುಖ್ಯಮಂತ್ರಿ ಮಾಡಿದರೆ ಸಾಮಾನ್ಯ ಜನರಿಗೇನು ಲಾಭ? ಅದರ ಬದಲು ಅಧಿಕಾರ ನಡೆಸುವಲ್ಲಿ ಸಂಪೂರ್ಣ ವಿಫಲವಾಗಿರುವ ಬಿಜೆಪಿ ಪಕ್ಷವೇ ಅಧಿಕಾರ ಬಿಟ್ಟು ತೊಲಗಿದರೆ ಜನ ನೆಮ್ಮದಿಯ ಬದುಕು ನಡೆಸುವಂತಾಗುತ್ತದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ. ಇಂದು ಸಿಎಂ ಸ್ಥಾನಕ್ಕೆ ಬಿ.ಎಸ್ ಯಡಿಯೂರಪ್ಪನವರು ರಾಜೀನಾಮೆ ನೀಡಿದ್ದರ ಕುರಿತು ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, “ಪ್ರವಾಹದಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬೆಳೆ ನಾಶವಾಗಿದೆ, ಈ ವರೆಗೆ 9 ಮಂದಿ ಪ್ರಾಣ

ಭ್ರಷ್ಟನ ಬದಲು ಮತ್ತೊಬ್ಬ ಭ್ರಷ್ಟ ಬಂದರೆ ಏನು ಪ್ರಯೋಜನ? ಸರ್ಕಾರ ‌ಬದಲಾಗಲಿ,‌ ನಾಯಕನಲ್ಲ- ಸಿದ್ದರಾಮಯ್ಯ ಪ್ರತಿಕ್ರಿಯೆ Read More »

ವಾಜಪೇಯಿ ಮಾತುಗಳನ್ನು ನೆನೆದು ಕಣ್ಣೀರಿಟ್ಟ ಸಿಎಂ ಯಡಿಯೂರಪ್ಪ

ಬೆಂಗಳೂರು: ಕೇಂದ್ರ ಸಚಿವರಾಗುವಂತೆ ಅಟಲ್ ಬಿಹಾರಿ ವಾಜಪೇಯಿ ಹೇಳಿದ ಕೆಳವು ಮಾತಗನ್ನು ನೆಪಪಿಸಿಕೊಳ್ಳುತ್ತ ಸಿಎಂ ಬಿ.ಎಸ್.ಯಡಿಯೂರಪ್ಪ ಭಾವುಕರಾಗಿ ಕಣ್ಣೀರು ಹಾಕಿದರು. ವಿಧಾನಸೌಧದಲ್ಲಿ ಆಯೋಜಿಸಲಾಗಿದ್ದ ಸಾಧನ ಸಮಾವೇಶದಲ್ಲಿ ಬಿ.ಎಸ್.ಯಡಿಯೂರಪ್ಪ ಮಾತನಾಡಿ ಎಲ್ಲೋ ಮಂಡ್ಯದ ಬೂಕನಕೆರೆಯಲ್ಲಿ ಹುಟ್ಟಿ, ಶಿವಮೊಗ್ಗಕ್ಕೆ ಬಂದು ಶಿಕಾರಿಪುರದಲ್ಲಿ ಜೀವನ ಆರಂಭ ಮಾಡಿದೆ. ಆರ್‌ಎಸ್ ಪ್ರಚಾರಕನಾಗಿ ಕೆಲಸ ಮಾಡಿದ್ದೆ. ಶಿಕಾರಿಪುರ ಪುರಸಭೆ ಚುನಾವಣೆಯಲ್ಲಿ ಗೆದ್ದು ಅಧ್ಯಕ್ಷನಾದೆ. ಅಧ್ಯಕ್ಷನಾಗಿದ್ದ ಸಂದರ್ಭದಲ್ಲಿ ಮಾರಣಾಂತಿಕ ಹಲ್ಲೆಯಾಗಿತ್ತು. ಕಚೇರಿಗೆ ಹೋಗುವ ಸಂದರ್ಭದಲ್ಲಿ ನನ್ನ ಮೇಲೆ ಹಲ್ಲೆ ಮಾಡಿದಾಗ ನನ್ನ ಜೀವನ ಮುಗಿದೇ ಹೋಯಿತು

ವಾಜಪೇಯಿ ಮಾತುಗಳನ್ನು ನೆನೆದು ಕಣ್ಣೀರಿಟ್ಟ ಸಿಎಂ ಯಡಿಯೂರಪ್ಪ Read More »

ಸುಳ್ಯ: ಕೊಲ್ಲಮೊಗ್ರು ಆರೋಗ್ಯ ಸಿಬ್ಬಂದಿಗೆ ರಾಜ್ಯ ಮಟ್ಟದಿಂದ ಮೆಚ್ಚುಗೆ

ಸುಳ್ಯ: ತಾಲೂಕಿನ ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿಯ ಕರ್ತವ್ಯವನ್ನು ಗುರುತಿಸಿ ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ಮತ್ತು ಆರೋಗ್ಯ ಸಚಿವ ಡಾ.ಸುಧಾಕರ್ ಟ್ವೀಟ್ ಮೂಲಕ ಮೆಚ್ಚುಗೆ ಸಲ್ಲಿಸಿದ್ದಾರೆ. ಕೋವಿಡ್ ಪರೀಕ್ಷೆಗೆ ಗಂಟಲ ದ್ರವ ಸಂಗ್ರಹಿಸಲು ಕೊಲ್ಲಮೊಗ್ರು ಆರೋಗ್ಯ ಕೇಂದ್ರದ ಲ್ಯಾಬ್ ಸಿಬ್ಬಂದಿ ನವ್ಯಾ, ಎಎನ್‌ಎಂ ಚಂದ್ರಾವತಿ, ಆಶಾ ಕಾರ್ಯಕರ್ತೆ ಯಶೋದಾ, ಹೇಮಾವತಿಯಾವರು ಪಿಪಿಇ ಕಿಟ್ ಧರಿಸಿ ಪಾಲ ದಾಟುತ್ತಿರುವ ಚಿತ್ರವೊಂದ ಜಾಲತಾಣದಲ್ಲಿ ಹರಿದಾಡಿತ್ತು. ಇದಕ್ಕೆ ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ “ದಕ್ಷಿಣ ಕನ್ನಡದ ಸುಳ್ಯ ತಾಲೂಕಿನಲ್ಲಿ

ಸುಳ್ಯ: ಕೊಲ್ಲಮೊಗ್ರು ಆರೋಗ್ಯ ಸಿಬ್ಬಂದಿಗೆ ರಾಜ್ಯ ಮಟ್ಟದಿಂದ ಮೆಚ್ಚುಗೆ Read More »

ಅಂತಾರಾಜ್ಯ ದ್ವಿಚಕ್ರ ವಾಹನ ಕಳ್ಳ ಅಂದರ್

ಬೆಂಗಳೂರು: ದ್ವಿಚಕ್ರ ವಾಹನ ಕದಿಯುತ್ತಿದ್ದ ಅಂತರರಾಜ್ಯ ಕಳ್ಳನನ್ನು ಪೊಲೀಸರು ಬಂಧಿಸಿ ಐದು ಲಕ್ಷಕ್ಕೂ ಹೆಚ್ಚು ಬೆಲೆ ಬಾಳುವ ಬೈಕ್ ಗಳನ್ನು ವಶಕ್ಕೆ ಪಡೆದುಕೊಂಡ ಘಟನೆ ಬೆಂಗಳೂರು ಹೊರವಲಯದ ಆನೇಕಲ್‌ನಿಂದ ವರದಿಯಾಗಿದೆ. ತಮಿಳುನಾಡಿನ ಪೆನ್ನಪಲ್ಲಿ ಮೂಲದ ಕಿರಣ್ ಬಂಧಿತ ಆರೋಪಿ. ಈತನ ಗ್ಯಾಂಗ್‌ನ ಉಳಿದ ಇಬ್ಬರು ಆರೋಪಿಗಳಾದ ಸಂದೀಪ್ ಹಾಗೂ ರಾಜೇಶ್ ಪಾರಾರಿಯಾಗಿದ್ದು, ಆರೋಪಿಗಳಿಗಾಗಿ ಆನೇಕಲ್ ಪೋಲೀಸರು ಬಲೆ ಬೀಸಿದ್ದಾರೆ. ಇವರು ಕಳ್ಳತನ ಮಾಡುತ್ತಿದ್ದ ಬೈಕ್ ಗಳನ್ನು ತಮಿಳುನಾಡಿಗೆ ತೆಗೆದುಕೊಂಡು ಹೋಗಿ ಮಾರಾಟ ಮಾಡಲಾಗಿದೆ ಎಂದು ತನಿಖೆ ವೇಳೆ

ಅಂತಾರಾಜ್ಯ ದ್ವಿಚಕ್ರ ವಾಹನ ಕಳ್ಳ ಅಂದರ್ Read More »