Editor

ಪುತ್ತೂರು|ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸ್ ದಾಳಿ| ಇಬ್ಬರ ಬಂಧನ

ಪುತ್ತೂರು: ಇಲ್ಲಿನ ಮನೆಯೊಂದರಲ್ಲಿ ಅಕ್ರಮವಾಗಿ ಕಸಾಯಿಖಾನೆ‌ ತೆರೆದಿದ್ದು, ಅದರಲ್ಲಿ ಗೋಮಾಂಸ ಶೇಖರಿಸಿಟ್ಟಿರುವ ಖಚಿತ ಮಾಹಿತಿ ಮೇರೆಗೆ ಪೋಲಿಸರು ದಾಳಿ ನಡೆಸಿ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ. ಆ.12ರಂದು ಪುತ್ತೂರು ನಗರದ ಸಾಲ್ಮರದ‌‌ ಸಮೀಪ ಈ ಘಟನೆ ‌ನಡೆದಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಸಾಲ್ಮರದಲ್ಲಿರುವ ಮೌಂಟೇನ್ ವ್ಯೂ ಶಾಲೆಗೆ ಸಮೀಪದಲ್ಲೇ ಇರುವ ಮನೆಯೊಂದರಲ್ಲಿ ಅಕ್ರಮವಾಗಿ ಕಸಾಯಿಖಾನೆ ನಡೆಸುತ್ತಿದ್ದು, ಅದರಲ್ಲಿ ಗೋಮಾಂಸವನ್ನು ಶೇಖರಿಸಿಡಲಾಗಿದೆ ಎಂದು ಹಿಂದೂ ಸಂಘಟನೆಗಳು ಪೊಲೀಸರಿಗೆ ಮಾಹಿತಿ ನೀಡಿದ್ದರು. ಈ ಮಾಹಿತಿ ಆಧರಿಸಿ ಪುತ್ತೂರಿನ ಪೋಲಿಸರು ದಾಳಿ […]

ಪುತ್ತೂರು|ಅಕ್ರಮ ಕಸಾಯಿಖಾನೆ ಮೇಲೆ ಪೊಲೀಸ್ ದಾಳಿ| ಇಬ್ಬರ ಬಂಧನ Read More »

ಈ ಕಾರ್ಯಕ್ಕೆ ಮೋದಿಯನ್ನು ಅಭಿನಂದಿಸಬೇಕು – ಪ್ರಧಾನಿಯನ್ನು ಹೊಗಳಿದ ಮಾಜಿ ಪ್ರಧಾನಿ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಒಬಿಸಿ ಮಸೂದೆ ಸ್ವಾಗತಾರ್ಹ, ಈ ಒಂದು ಕಾರಣಕ್ಕೆ ಪ್ರಧಾನಿ ಮೋದಿಯವರನ್ನು ಮೆಚ್ಚಬೇಕು ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದ್ದಾರೆ. ಪ್ರತ್ಯೇಕ ಹಿಂದುಳಿದ ವರ್ಗಗಳ ಪಟ್ಟಿಯನ್ನು ಮಾಡಿಕೊಳ್ಳಲು ರಾಜ್ಯಗಳಿಗೆ ಅಧಿಕಾರ ನೀಡುವ ಸಂವಿಧಾನ ತಿದ್ದುಪಡಿ ಮಸೂದೆ ಸಂಸತ್ ಉಭಯ ಸದನಗಳಲ್ಲಿ ನಿನ್ನೆ ಅಂಗೀಕಾರಗೊಂಡಿದೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಈ ಬಿಲ್ ಸ್ವಾಗತಾರ್ಹ ಎಂದರು. ಮೋದಿ ಅವರನ್ನು ಈ ವಿಚಾರದಲ್ಲಿ ಮೆಚ್ಚಬೇಕು. ಕೇಂದ್ರ ಸಂಪುಟದಲ್ಲಿ ಸಾಮಾಜಿಕ ನ್ಯಾಯದ ಮೇಲೆ ಈ ಅವಕಾಶ

ಈ ಕಾರ್ಯಕ್ಕೆ ಮೋದಿಯನ್ನು ಅಭಿನಂದಿಸಬೇಕು – ಪ್ರಧಾನಿಯನ್ನು ಹೊಗಳಿದ ಮಾಜಿ ಪ್ರಧಾನಿ Read More »

ಹಬ್ಬ ಹರಿದಿನಗಳ ಆಚರಣೆಗೆ ಹೊಸ ಗೈಡ್ಲೈನ್ಸ್ ಹೊರಡಿಸಿದ ರಾಜ್ಯ ಸರ್ಕಾರ

ಬೆಂಗಳೂರು : 2021ನೇ ಸಾಲಿನ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಿನಲ್ಲಿ ನಡೆಯಲಿರುವ ಗಣೇಶ ಚತುರ್ಥಿ, ಮೋಹರಂ ಮತ್ತು ಇತರೆ ಹಬ್ಬಗಳ ಆಚರಣೆ ಸಂದರ್ಭದಲ್ಲಿ ಕೋವಿಡ್-19 ಸೋಂಕು ನಿಯಂತ್ರಣ ತಡೆಗಟ್ಟಲು ಅನುಸರಿಸಬೇಕಾದಂತ ಮಾರ್ಗಸೂಚಿ ಕ್ರಮಗಳನ್ನು ಪ್ರಕಟಿಸಿದೆ. ಈ ಕುರಿತಂತೆ ಕಂದಾಯ ಇಲಾಖೆಯ ಸರ್ಕಾರದ ಪ್ರಧಾನ ಕಾರ್ಯದರ್ಶಿ ತುಷಾರ್ ಗಿರಿನಾಥ್ ಆದೇಶ ಹೊರಡಿಸಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಮಂತ್ರಾಲಯವು 2021ರ ಆಗಸ್ಟ್ ರಿಂದ ಅಕ್ಟೋಬರ್ ಮಾಹೆಯಲ್ಲಿ ಆಚರಿಸಲಾಗುವ ಹಬ್ಬಗಳಾದಂತ ಮೋಹರಂ, ಶ್ರೀಕೃಷ್ಣ ಜನ್ಮಾಷ್ಟಮಿ, ಗಣೇಶ ಚತುರ್ಥಿ, ದುರ್ಗಾ ಪೂಜೆ

ಹಬ್ಬ ಹರಿದಿನಗಳ ಆಚರಣೆಗೆ ಹೊಸ ಗೈಡ್ಲೈನ್ಸ್ ಹೊರಡಿಸಿದ ರಾಜ್ಯ ಸರ್ಕಾರ Read More »

ಸಿಎಂ ಬೊಮ್ಮಾಯಿ ಮತ್ತೊಂದು ಮಹತ್ವದ ಹೆಜ್ಜೆ ಶುಭಕೋರುವ ಬೋರ್ಡಿಂಗ್ಸ್ ಫ್ಲೆಕ್ಸ್ ಗೆ ಬ್ರೇಕ್

ಉಡುಪಿ: ಕೆಲವು ದಿನಗಳ ಹಿಂದೆ ಸರಕಾರಿ ಸಮಾರಂಭಗಳಲ್ಲಿ ಹೂ ಗುಚ್ಛ, ಹಾರ, ಇತರ ನೆನಪಿನ ಕಾಣಿಕೆ ನೀಡುವುದನ್ನು ನಿಷೇಧಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇದೀಗ ಮತ್ತೊಂದು ಮಹತ್ವದ ಘೋಷಣೆ ಮಾಡಿದ್ದಾರೆ. ಉಡುಪಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾವುದೇಶುಭಕೋರುವಂತಹ ವರ್ಡಿಂಗ್ಸ್ ಫ್ಲೆಕ್ಸ್ ಗಳನ್ನು ಹಾಕುವುದನ್ನು ನಿಲ್ಲಿಸಬೇಕು ಎಂದರು. ಜೊತೆಗೆ ಫ್ಲೆಕ್ಸ್ ಗಳನ್ನು ಹಾಕದಂತೆ ಪಕ್ಷ ಮತ್ತು ಅಭಿಮಾನಿಗಳ ಬಳಿ ಮನವಿ ಮಾಡಿಕೊಂಡರು.ಸರಕಾರಿ ಸಮಾರಂಭಗಳಲ್ಲಿ ಹೂವಿನ ಬಳಕೆ ನಿಷೇಧ ಮಾಡಿರುವುದನ್ನು ವಿರೋಧಿಸಿ ಹೂವಿನ ವ್ಯಾಪ್ಯಾರಿಗಳು ಕೈಗೊಂಡಿದ್ದ ಪ್ರತಿಭಟನೆ

ಸಿಎಂ ಬೊಮ್ಮಾಯಿ ಮತ್ತೊಂದು ಮಹತ್ವದ ಹೆಜ್ಜೆ ಶುಭಕೋರುವ ಬೋರ್ಡಿಂಗ್ಸ್ ಫ್ಲೆಕ್ಸ್ ಗೆ ಬ್ರೇಕ್ Read More »

‘ನಿಮಗೇನು ಕಾಮನ್ ಸೆನ್ಸ್ ಇಲ್ವಾ?’ ದ.ಕ ಡಿಸಿ ಗೆ ಸಿಎಂ ಹಿಗ್ಗಾಮುಗ್ಗಾ ತರಾಟೆ

ಮಂಗಳೂರು: ಮಾಸ್ಕ್, ಗ್ಲೌಸ್ ಇಲ್ಲದೇ ಏನ್ ಆಡಳಿತ ಮಾಡ್ತೀರಾ?ಆರೋಗ್ಯ ಸಿಬ್ಬಂದಿಗೆ ಬೇಕಾದ ಸವಲತ್ತು ಕೊಡೋಕೆ ನಿಮ್ಮಿಂದ ಆಗಲ್ವಾ? ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ.ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತರಾಟೆಗೆ ತೆಗೆದುಕೊಂಡ ಘಟನೆ ಗುರುವಾರ ನಡೆಯಿತು. ದ.ಕ. ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆಶಾ ಕಾರ್ಯಕರ್ತರು ಸೇರಿದಂತೆ ಅರೋಗ್ಯ ಕಾರ್ಯಕರ್ತರಿಗೆ ಪಿಪಿಇ ಕಿಟ್, ಮಾಸ್ಕ್ ಹಾಗೂ ಗ್ಲೌಸ್ ಕೊರತೆ ಇದೆ ಎಂದು ಶಾಸಕ ಯು.ಟಿ. ಖಾದರ್ ಆಕ್ಷೇಪಿಸಿದರು.ಇದಕ್ಕೆ ಪ್ರತಿಕ್ರಿಯೆ ನೀಡಿದ

‘ನಿಮಗೇನು ಕಾಮನ್ ಸೆನ್ಸ್ ಇಲ್ವಾ?’ ದ.ಕ ಡಿಸಿ ಗೆ ಸಿಎಂ ಹಿಗ್ಗಾಮುಗ್ಗಾ ತರಾಟೆ Read More »

ಬಂಟ್ವಾಳ : ಸ್ಕೂಟರ್ ಲಾರಿ ಅಪಘಾತ – ಸವಾರ ಸ್ಥಳದಲ್ಲೇ ಸಾವು

ಬಂಟ್ವಾಳ: ಸ್ಕೂಟರ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಬುಡೋಳಿ ಸಮೀಪದ ಬೊಳ್ಳುಕಲ್ಲು ಸಮೀಪ ಇಂದು ಸಂಭವಿಸಿದೆ. ಕನ್ಯಾನ ಪರಕಜೆ ನಿವಾಸಿ ಮಂಜು ಬೆಳ್ಚಡ ಎಂಬವರ ಪುತ್ರ ಗಣೇಶ್ ಬಂಗೇರ (54) ಮೃತ ಸ್ಕೂಟರ್ ಸವಾರ. ಈತ ತನ್ನ ದ್ವಿಚಕ್ರ ವಾಹನದಲ್ಲಿ ಉಪ್ಪಿನಂಗಡಿ ಕಡೆಗೆ ಸಂಚರಿಸುತ್ತಿದ್ದ ವೇಳೆ ಬುಡೋಳಿ ಸಮೀಪ ಮಂಗಳೂರು ಕಡೆಗೆ ತೆರಳುತ್ತಿದ್ದ ಲಾರಿ ಢಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ

ಬಂಟ್ವಾಳ : ಸ್ಕೂಟರ್ ಲಾರಿ ಅಪಘಾತ – ಸವಾರ ಸ್ಥಳದಲ್ಲೇ ಸಾವು Read More »

ಉಡುಪಿ : ಆನ್ ಲೈನ್ ನಲ್ಲಿ ಲೋನ್ ಪಡೆಯಲು ಹೋಗಿ ಲಕ್ಷಾಂತರ ರೂ. ಪಂಗನಾಮ

ನಿಮಗೂ ಬರಬಹುದು ಈ ಆಫರ್ ಉಡುಪಿ: ಯುವಕನೋರ್ವ ಆನ್ ಲೈನ್ ಮೂಲಕ ಲೋನ್ ಪಡೆಯಲು ಹೋಗಿ 2 ಲಕ್ಷಕ್ಕೂ ಅಧಿಕ ಹಣವನ್ನು ಕಳೆದುಕೊಂಡಿರುವ ಘಟನೆ ಕಾರ್ಕಳದಲ್ಲಿ ನಡೆದಿದೆ. ಕಾರ್ಕಳದ ಮುಂಡ್ಕೂರಿನ ಸಿರಾಜ್ (26) ವಂಚನೆಗೊಳಗಾದವರು. ಇವರು ಆನ್ ಲೈನ್ ನಲ್ಲಿ ಸಾಲ ಪಡೆಯುವ ಬಗ್ಗೆ ಆನ್ ಲೈನ್ ವೆಬ್ ಸೈಟ್ ಒಂದರಲ್ಲಿ ಅರ್ಜಿ ಸಲ್ಲಿಸಿದ್ದು, ಈ ಸಂದರ್ಭ ಹೆಸರು ಮೊಬೈಲ್ ಸಂಖ್ಯೆ ಗಳನ್ನು ಅಪ್ಲೋಡ್ ಮಾಡಿದ್ದರು. ಮೂರು ದಿನಗಳ ನಂತರ (+918343839550) ಅಪರಿಚಿತ ನಂಬರ್ ನಿಂದ ಯುವಕನಿಗೆ

ಉಡುಪಿ : ಆನ್ ಲೈನ್ ನಲ್ಲಿ ಲೋನ್ ಪಡೆಯಲು ಹೋಗಿ ಲಕ್ಷಾಂತರ ರೂ. ಪಂಗನಾಮ Read More »

ಗುರಿ ತಲುಪಲಿಲ್ಲ ಇಮೇಜಿಂಗ್: ಭಾರೀ ನಿರಾಸೆ

ಆಂಧ್ರಪ್ರದೇಶದ ಶ್ರೀಹರಿಕೋಟದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಇಂದು ಬೆಳಗ್ಗೆ ಉಡಾವಣೆ ಮಾಡಲಾಗಿದ್ದ ಅತ್ಯಾಧುನಿಕ ಜಿಯೋ – ಇಮೇಜಿಂಗ್ ಉಪಗ್ರಹ ಇಒಎಸ್ -03 ಉಪಗ್ರಹ ಗುರಿ ತಲುಪುವಲ್ಲಿ ವಿಫಲವಾಗಿದೆ. ಬೆಳಗ್ಗೆ 5.43 ಕ್ಕೆ ಉಪಗ್ರಹವನ್ನು ಹೊತ್ತ ಜಿಎಸ್‌ಎಲ್ವಿ -ಎಫ್ 10 ರಾಕೆಟ್ ನಭಕ್ಕೆ ಜಿಗಿದಿದ್ದು, ಮೊದಲ ಮತ್ತು ಎರಡನೇ ಹಂತಗಳ ಕಾರ್ಯಕ್ಷಮತೆ ಸಾಮಾನ್ಯವಾಗಿತ್ತು. ಆದರೆ, ನಂತರದಲ್ಲಿ ಗುರಿ ತಲುಪುವಲ್ಲಿ ಉಪಗ್ರಹ ವಿಫಲವಾಗಿದೆ. 2020 ರ ಮಾರ್ಚ್ ನಲ್ಲಿ ಈ ಉಪಗ್ರಹ ಉಡಾವಣೆ ಆಗಬೇಕಿತ್ತು. ತಾಂತ್ರಿಕ ದೋಷದ ಹಿನ್ನೆಲೆಯಲ್ಲಿ

ಗುರಿ ತಲುಪಲಿಲ್ಲ ಇಮೇಜಿಂಗ್: ಭಾರೀ ನಿರಾಸೆ Read More »

ಶಾಸಕ ಸತೀಶ ರೆಡ್ಡಿ‌ ಮನೆ ಮುಂದೆ ನಿಲ್ಲಿಸಿದ್ದ ಕಾರುಗಳಿಗೆ ಬೆಂಕಿ ಇಟ್ಟ ಕಿಡಿಗೇಡಿಗಳು

ಬೆಂಗಳೂರು : ಬೆಂಗಳೂರಿನ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ ಮನೆ ಮುಂದೆ ನಿಲ್ಲಿಸಿದ್ದ ಎರಡು ಕಾರುಗಳಿಗೆ ಬೆಂಕಿ ಹಚ್ಚಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಡೆದಿದೆ. ಬೆಂಗಳೂರಿನ ಬೊಮ್ಮನಹಳ್ಳಿಯ ಸತೀಶ್ ರೆಡ್ಡಿ ಅವರ ನಿವಾಸದ ಬಳಿ ನಿಲ್ಲಿಸಿದ್ದ ಎರಡು ಐಷಾರಾಮಿ ಕಾರಿಗೆ ತಡರಾತ್ರಿ 1.30ಕ್ಕೆ ನಾಲ್ವರು ದುಷ್ಕರ್ಮಿಗಳು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಘಟನೆ ಸಂಬಂಧ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದು, ಹೆಚ್ಚುವರಿ ಪೊಲೀಸ್ ಆಯುಕ್ತ ಮುರುಗನ್ ಅವರು ಭೇಟಿ ನೀಡಿದ್ದಾರೆ.

ಶಾಸಕ ಸತೀಶ ರೆಡ್ಡಿ‌ ಮನೆ ಮುಂದೆ ನಿಲ್ಲಿಸಿದ್ದ ಕಾರುಗಳಿಗೆ ಬೆಂಕಿ ಇಟ್ಟ ಕಿಡಿಗೇಡಿಗಳು Read More »

ಸೌದಿ ಅರೇಬಿಯಾದಿಂದ ಬಂದ ಯುವಕನಿಗೆ ಕ್ವಾರಂಟೈನ್ ನಲ್ಲಿ‌ ಅನ್ನ, ನೀರಿಲ್ಲ

ಮಂಗಳೂರು: ಸೌದಿ ಅರೇಬಿಯಾದಿಂದ ಮುಂಬೈಗೆ ಬಂದಿದ್ದ ಯುವಕನಿಗೆ ಕೋವಿಡ್ ನೆಗೆಟಿವ್ ರಿಪೋರ್ಟ್ ಇದ್ದರೂ ಅಲ್ಲಿನ ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ಸೇರಿ ಕ್ವಾರಂಟೈನ್ ಕೇಂದ್ರಕ್ಕೆ ತಳ್ಳಿದ್ದು, ಎರಡು ದಿನಗಳಿಂದ ಅನ್ನ ನೀರಿಲ್ಲದೆ ಪರದಾಡಿದ ಅಮಾನವೀಯ ಘಟನೆ ನಡೆದಿದೆ. ಎರಡು ಡೋಸೇಜ್ ಕೊರೊನಾ ಲಸಿಕೆ ನೀಡಿರುವ ಪ್ರಮಾಣಪತ್ರ, ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಇದ್ದರೂ, ಕ್ವಾರಂಟೈನ್ ಆಗಲೇಬೇಕೆಂದು ಹೊಟೇಲ್ ಕೊಠಡಿಯಲ್ಲಿ ಯುವಕನನ್ನು ಕೂಡಿಹಾಕಲಾಗಿತ್ತು. ಇದರಿಂದಾಗಿ ಎರಡು ದಿನಗಳಿಂದ ಅನ್ನ, ನೀರಿಲ್ಲದೆ ಬವಣೆ ಪಟ್ಟಿದ್ದ ಯುವಕ ಕೊನೆಗೂ ಅಲ್ಲಿಂದ ಮಂಗಳೂರು

ಸೌದಿ ಅರೇಬಿಯಾದಿಂದ ಬಂದ ಯುವಕನಿಗೆ ಕ್ವಾರಂಟೈನ್ ನಲ್ಲಿ‌ ಅನ್ನ, ನೀರಿಲ್ಲ Read More »