Editor

ಪಿಯುಸಿ ದಾಖಲಾತಿಗೆ ಗ್ರೀನ್ ಸಿಗ್ನಲ್ | ಸುತ್ತೋಲೆ ಹೊರಡಿಸಿದ ಪ.ಪೂ.ಶಿಕ್ಷಣ ಇಲಾಖೆ

ಬೆಂಗಳೂರು: ಎಸ್‌ಎಸ್‌ಎಲ್ಸಿ ಪರೀಕ್ಷೆ ಫಲಿತಾಂಶದ ಬೆನ್ನಲ್ಲೇ ಪ್ರವೇಶಕ್ಕೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ಆಗಸ್ಟ್ 30 ರ ವರೆಗೆ ದಂಡ ಶುಲ್ಕವಿಲ್ಲದೆ ದಾಖಲಾತಿಗೆ ಅವಕಾಶ ನೀಡಲಾಗಿದೆ. ಸೆಪ್ಟೆಂಬರ್ 1 ರಿಂದ 11 ರವರೆಗೆ ವಿಳಂಬ ಶುಲ್ಕ ನೀಡಿ ಪ್ರವೇಶ ಪಡೆಯಬಹುದು. 670 ರೂಪಾಯಿ ವಿಳಂಬ ಶುಲ್ಕ ಪಾವತಿಸಿ ದಾಖಲಾತಿ ಮಾಡಿಕೊಳ್ಳಬಹುದಾಗಿದೆ. ಸೆ. 11 ರವರೆಗೆ ಪ್ರವೇಶ ಪಡೆಯದವರಿಗೆ 2890 ರೂಪಾಯಿ ವಿಶೇಷ ದಂಡದೊಂದಿಗೆ ಪ್ರವೇಶ ನೀಡಲಾಗುವುದು. 2890 ರೂಪಾಯಿ ದಂಡ ಪಾವತಿಸಿ ಸೆಪ್ಟೆಂಬರ್ 13 ರಿಂದ 25ರವರೆಗೆ ದಾಖಲಾತಿ […]

ಪಿಯುಸಿ ದಾಖಲಾತಿಗೆ ಗ್ರೀನ್ ಸಿಗ್ನಲ್ | ಸುತ್ತೋಲೆ ಹೊರಡಿಸಿದ ಪ.ಪೂ.ಶಿಕ್ಷಣ ಇಲಾಖೆ Read More »

‘5ಡಿ’ ಶೂಟಿಂಗ್ ಮುಗಿಸಿದ ಚಿತ್ರತಂಡ

ಬೆಂಗಳೂರು : ಬಹುನಿರೀಕ್ಷಿತ ‘5ಡಿ’ ಚಿತ್ರದ ಚಿತ್ರೀಕರಣವು ಆಗಸ್ಟ್ 4ಕ್ಕೆ ಪೂರ್ಣಗೊಂಡಿದ್ದು , ಎಸ್ ನಾರಾಯಣ್ ಅವರ ನಿರ್ದೇಶನದಲ್ಲಿ ಮೂಡಿಬಂದಿದೆ. ಚಿತ್ರೀಕರಣ ಮುಗಿದ ಬಳಿಕ ಮಾಧ್ಯಮದ ಮುಂದೆ ಚಿತ್ರತಂಡವು ಮಾತನಾಡಿ ಆ ಚಿತ್ರದ ಅನುಭವವನ್ನು ಹಂಚಿಕೊಂಡಿದ್ದಾರೆ. ಹಾಗೇ ಈ ಚಿತ್ರದಲ್ಲಿ ನಾಯಕನಾಗಿ ಆದಿತ್ಯ, ನಾಯಕಿಯಾಗಿ ಆದಿತಿ ಅವರು ನಟಿಸಿದ್ದಾರೆ. ಈ ಚಿತ್ರದ ಬಗ್ಗೆ ಮಾತನಾಡಿದ ನಾಯಕ ನಟ ಆದಿತ್ಯ ಅವರು ‘ನಾನು ಎಸ್ ನಾರಾಯಣ್ ಅವರ ಜೊತೆ ಕೆಲಸ ಮಾಡಿದ್ದೆ, ಆದರೆ ಅವರ ಚಿತ್ರದಲ್ಲಿ ನಟಿಸುವ ಅವಕಾಶ

‘5ಡಿ’ ಶೂಟಿಂಗ್ ಮುಗಿಸಿದ ಚಿತ್ರತಂಡ Read More »

ಭುಗಿಲೇಳುತ್ತಿದೆ ಭಿನ್ನಮತ| ಬೊಮ್ಮಾಯಿ ‘ಆನಂದ’ ಕಸಿದ ಸಿಂಗ್| ಪ್ರಭಾವಿ ಖಾತೆಗಾಗಿ‌ ರಾಜೀನಾಮೆ ‌ನಾಟಕ.

ಬೆಂಗಳೂರು: ಬಿಜೆಪಿಯಲ್ಲಿ ಮತ್ತೆ ಅಸಮಾಧಾನ ಸ್ಪೋಟಗೊಳ್ಳುವ ಲಕ್ಷಣಗಳು ಕಂಡು ಬರುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಚಿವರಿಗೆ ಖಾತೆ ಹಂಚಿಕೆ ಮಾಡಿದ ನಂತರ ಅಸಮಾಧಾನ ವ್ಯಕ್ತಪಡಿಸಿದ್ದ ಸಚಿವ ಆನಂದ್ ಸಿಂಗ್ ಅವರು ತಮ್ಮ ಕ್ಷೇತ್ರದಲ್ಲಿದ್ದ ಶಾಸಕರ ಕಚೇರಿ ತೆರವುಗೊಳಿಸಿದ್ದಾರೆ. ಪ್ರಭಾವಿ ಖಾತೆ ಪಡೆಯಲು ಒತ್ತಡ ತಂತ್ರ ಅನುಸರಿಸಿದ್ದು, ರಾಜೀನಾಮೆ ಕೊಡುವುದಾಗಿ ಬೆದರಿಕೆ ಒಡ್ಡುತ್ತಿದ್ದಾರೆ. ಸಚಿವಗಿರಿ‌ ಮಾತ್ರವಲ್ಲದೆ ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುವುದಾಗಿ ಹೇಳಿಕೆ ನೀಡಿರುವ ಆನಂದ್ ಸಿಂಗ್ ಬಿಜೆಪಿ ಬಣಕ್ಕೆ ತಲೆನೋವಾಗಿ ಪರಿಣಮಿಸಿದೆ. ತಮಗೆ ಇಷ್ಟವಾದ ಖಾತೆ ಕೊಡದಿದ್ದರೆ

ಭುಗಿಲೇಳುತ್ತಿದೆ ಭಿನ್ನಮತ| ಬೊಮ್ಮಾಯಿ ‘ಆನಂದ’ ಕಸಿದ ಸಿಂಗ್| ಪ್ರಭಾವಿ ಖಾತೆಗಾಗಿ‌ ರಾಜೀನಾಮೆ ‌ನಾಟಕ. Read More »

ಚಿಕ್ಕಪ್ಪನಿಂದಲೇ ಅತ್ಯಾಚಾರ| ದೂರು‌ ದಾಖಲು

ಮೂಡುಬಿದಿರೆ, ಆ.10: ಬಾಲಕಿಯ ಅತ್ಯಾಚಾರವೆಸಗಿದ ಆರೋಪದಡಿ ಆಕೆಯ ಚಿಕ್ಕಪ್ಪನನ್ನು ಪೊಕ್ಸೊ ಕಾಯ್ದೆಯಡಿ ಮೂಡುಬಿದಿರೆ ಪೊಲೀಸರು ಬಂಧಿಸಿರುವುದಾಗಿ ವರದಿಯಾಗಿದೆ. ಬಂಧಿತ ಆರೋಪಿಯನ್ನು ಕುಮಾರ್ (30) ಎಂದು ಗುರುತಿಸಲಾಗಿದೆ. ಬಾಲಕಿ ಸೋಮವಾರ ಶಾಲೆಯಿಂದ ಸ್ನೇಹಿತೆಯೊಂದಿಗೆ ಮನೆಗೆ ತೆರಳುತ್ತಿದ್ದ ಸಂದರ್ಭ ಗುಡ್ಡ ಪ್ರದೇಶದಲ್ಲಿ ಆಕೆಯ ಚಿಕ್ಕಪ್ಪ ಅಡ್ಡಗಟ್ಟಿ ವಿದ್ಯಾರ್ಥಿನಿಯರನ್ನು ಹೆದರಿಸಿದ್ದು ಆಗ ಜೊತೆಗಿದ್ದ ವಿದ್ಯಾರ್ಥಿನಿ ಹೆದರಿ ಓಡಿದ್ದಾಳೆ. ಈ ವೇಳೆ ಆರೋಪಿ ತನ್ನ ಅಣ್ಣನ ಮಗಳನ್ನೆ ಅತ್ಯಾಚಾರ ನಡೆಸಿರುವುದಾಗಿ ಆರೋಪಿಸಲಾಗಿದೆ. ಈ ಬಗ್ಗೆ ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಸಲಾಗುತ್ತಿದೆ.

ಚಿಕ್ಕಪ್ಪನಿಂದಲೇ ಅತ್ಯಾಚಾರ| ದೂರು‌ ದಾಖಲು Read More »

ಭೀಕರ ರಸ್ತೆ ಅಪಘಾತ-ಸ್ಕೂಟರ್ ಸವಾರ ಸಾವು

ಮಂಗಳೂರು: ಭೀಕರ ರಸ್ತೆ ಅಪಘಾತವೊಂದರಲ್ಲಿ ಸ್ಕೂಟರ್ ಸವಾರ ದಾರುಣವಾಗಿ ಮೃತಪಟ್ಟ ಘಟನೆ ನಂತೂರು ಸಮೀಪದ ಬಿಕರ್ನಕಟ್ಟೆ ಸಮೀಪ ಇಂದು ರಾತ್ರಿ ಸಂಭವಿಸಿದೆ. ಉಳಾಯಿಬೆಟ್ಟು ನಿವಾಸಿ ದಯಾನಂದ ಮೃತ ದುರ್ದೈವಿಯಾಗಿದ್ದಾರೆ. ಬಿಕರ್ನಕಟ್ಟೆ ಸಮೀಪ ಲಾರಿ ಹಾಗೂ ಸ್ಕೂಟರ್ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಸ್ಕೂಟರ್ ಸವಾರ ಲಾರಿಯಡಿಗೆ ಬಿದ್ದಿದ್ದಾರೆ. ಇದರಿಂದಾಗಿ ಸ್ಕೂಟರ್ ಸವಾರನ ದೇಹ ಛಿದ್ರವಾಗಿದೆ. ಸ್ಥಳಕ್ಕೆ ಕದ್ರಿ ಠಾಣಾ ಪೊಲೀಸರು ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.

ಭೀಕರ ರಸ್ತೆ ಅಪಘಾತ-ಸ್ಕೂಟರ್ ಸವಾರ ಸಾವು Read More »

ಕ್ರೀಡಾ ಪ್ರೇಮಿಗಳಿಗೆ ಗುಡ್ ನ್ಯೂಸ್|ಒಲಿಂಪಿಕ್ ನಲ್ಲಿ ಇನ್ಮುಂದೆ ಕ್ರಿಕೆಟ್ ಕೂಡಾ‌ ಸೇರ್ಪಡೆ|

ಹಲವು ವರ್ಷಗಳಿಂದ ಕ್ರಿಕೆಟ್ ಅಭಿಮಾನಿಗಳು ಕಾಯುತ್ತಿರುವ ಘಳಿಗೆ 2028ರಲ್ಲಿ ಕೂಡಿಬರುತ್ತಿದ್ದು, 2028ರಲ್ಲಿ ಲಾಸ್​ ಎಂಜಲೀಸ್​ನಲ್ಲಿ ನಡೆಯಲಿರುವ ಒಲಿಂಪಿಕ್ಸ್​​ನಲ್ಲಿ ಕ್ರಿಕೆಟ್ ಸೇರ್ಪಡೆ ಮಾಡಲು ಬಿಡ್​ ಮಾಡಿರೋದಾಗಿ ಐಸಿಸಿ ಹೇಳಿದೆ. ಐಸಿಸಿ ಈಗಾಗಲೇ ವರ್ಕಿಂಗ್ ಗ್ರೂಪ್​ನ್ನು ರಚನೆ ಮಾಡಿದೆ. ಈ ಮೂಲಕ ಕ್ರಿಕೆಟ್ ಪ್ರಿಯರಿಗೆ ಭರ್ಜರಿಗೆ ಗುಡ್ ನ್ಯೂಸ್ ನೀಡಿದೆ.. ಇನ್ನೂ 2028ರ ಲಾಸ್ ​ಏಂಜಲೀಸ್​ ಒಲಂಪಿಕ್ ​ನಲ್ಲಿ ಕ್ರಿಕೆಟ್​ ಸೇರ್ಪಡೆ ಮಾಡಿದಲ್ಲಿ ಟೀಂ ಇಂಡಿಯಾ ಕೂಡ ಸ್ಪರ್ಧೆಗೆ ಇಳಿಯಲಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ, ಹೇಳಿದ್ರು. ಈ

ಕ್ರೀಡಾ ಪ್ರೇಮಿಗಳಿಗೆ ಗುಡ್ ನ್ಯೂಸ್|ಒಲಿಂಪಿಕ್ ನಲ್ಲಿ ಇನ್ಮುಂದೆ ಕ್ರಿಕೆಟ್ ಕೂಡಾ‌ ಸೇರ್ಪಡೆ| Read More »

ಹೆತ್ತಮ್ಮನನ್ನೇ ಉಸಿರುಗಟ್ಟಿಸಿ ಕೊಲೆಗೈದಳಾ ಬಾಲೆ 15ರ ಬಾಲಕಿ ಕೊಲೆಗಾತಿಯಾಗಿದ್ಯಾಕೆ ಗೊತ್ತಾ?

ಮುಂಬೈ: ಅಪ್ರಾಪ್ತೆ ಬಾಲಕಿಯೋರ್ವಳು ಕರಾಟೆ ಬೆಲ್ಟ್ ನಿಂದ ಹೆತ್ತ ತಾಯಿಯ ಕುತ್ತಿಗೆಯನ್ನು ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಬಂದಿದೆ.ಆ ತಾಯಿಗೆ ತನ್ನ ಮಗಳು ವೈದ್ಯಕೀಯ ಶಿಕ್ಷಣ ಅಭ್ಯಾಸ ಮಾಡ ಬೇಕು ಎಂದು ಆಸೆ ಹೊತ್ತಿದ್ದಳು. ಹಾಗಾಗಿ ಈ ವಿಚಾರವನ್ನು ಮಗಳ ಜೊತೆ ಚರ್ಚೆ ಮಾಡುತ್ತಿದ್ದಳು. ಆದರೆ ಮಗಳಿಗೆ ಇದು ಇಷ್ಟವಿರಲಿಲ್ಲ. ಇದೇ ವಿಚಾರಕ್ಕೆ ಅಮ್ಮ-ಮಗಳ ನಡುವೆ ಪದೇಪದೆ ಜಗಳ ಆಗುತ್ತಲೇ ಇತ್ತು. ಹಾಗಾಗಿ ಇದೇ ವಿಚಾರಕ್ಕೆ ಅಮ್ಮನ ವಿರುದ್ಧ ಕಳೆದ ತಿಂಗಳು ಈಕೆ ಪೊಲೀಸರಿಗೆ ದೂರನ್ನೂ

ಹೆತ್ತಮ್ಮನನ್ನೇ ಉಸಿರುಗಟ್ಟಿಸಿ ಕೊಲೆಗೈದಳಾ ಬಾಲೆ 15ರ ಬಾಲಕಿ ಕೊಲೆಗಾತಿಯಾಗಿದ್ಯಾಕೆ ಗೊತ್ತಾ? Read More »

ಕಾಸರಗೋಡು: ಕೊಲೆ ಕೃತ್ಯಕ್ಕೆ ಬಳಸಿದ್ದ ಬೈಕ್ ಠಾಣೆಯಿಂದ ನಾಪತ್ತೆ – ತನಿಖೆಯ ಹಾದಿ ತಪ್ಪಿಸಲು ಯತ್ನಿಸಿದರೇ ಖದೀಮರು?

ಕಾಸರಗೋಡು: ಯುವ ಕಾಂಗ್ರೆಸ್ ಕಾರ್ಯಕರ್ತರಾಗಿದ್ದ ಕೃಪೇಶ್ ಮತ್ತು ಶರತ್ ಲಾಲ್ ಕೊಲೆ ಪ್ರಕರಣದ ಎಂಟನೇ ಆರೋಪಿ ಜೊತೆ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದ ಬೈಕ್ ಪೊಲೀಸ್ ಠಾಣೆಯಿಂದ ನಾಪತ್ತೆಯಾಗಿದೆ. ಎಂಟನೇ ಆರೋಪಿ ಪನಯಾಲ್‌‌ನ ಸುಬೀಶ್ (29) ಕೃತ್ಯ ನಡಿಸಿದ ದಿನ ಸಂಚರಿಸಿದ್ದ ಬೈಕ್ ಬೇಕಲ ಪೊಲೀಸ್ ಠಾಣೆಯಿಂದ ಕಾಣೆಯಾಗಿರುವುದು ಬೆಳಕಿಗೆ ಬಂದಿದ್ದು ತನಿಖೆಯ ಹಾದಿ ತಪ್ಪಿಸಲು ಈ ಕೃತ್ಯ ನಡೆಸಿರುವುದಾಗಿ ಆರೋಪ ಕೇಳಿ ಬರುತ್ತಿದೆ. ಸಿಬಿಐ ಈಗ ತನಿಖೆ ನಡೆಸುತ್ತಿದ್ದು, ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾರಕಾಸ್ತ್ರ, ವಾಹನ ಮೊದಲಾದವುಗಳ

ಕಾಸರಗೋಡು: ಕೊಲೆ ಕೃತ್ಯಕ್ಕೆ ಬಳಸಿದ್ದ ಬೈಕ್ ಠಾಣೆಯಿಂದ ನಾಪತ್ತೆ – ತನಿಖೆಯ ಹಾದಿ ತಪ್ಪಿಸಲು ಯತ್ನಿಸಿದರೇ ಖದೀಮರು? Read More »

ಜಾರಕಿಹೊಳಿ ವಿರುದ್ಧ ವಜಾಗೊಂಡಿದ್ದ ಪ್ರಕರಣವೊಂದಕ್ಕೆ ಮರುಜೀವ

ಬೆಂಗಳೂರು: ಜಾರಕಿಹೊಳಿ ವಿರುದ್ಧ ವಜಾಗೊಂಡಿದ್ದ ಪ್ರಕರಣವೊಂದಕ್ಕೆ ಮರುಜೀವ ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ. ರಮೇಶ್ ಜಾರಕಿಹೊಳಿ ವಿರುದ್ಧ ಸಹಕಾರಿ ಬ್ಯಾಂಕ್ ಗೆ ನೀಡಿದ್ದ 5.2ಕೋಟಿ ಚೆಕ್ ಬೌನ್ಸ್ ಪ್ರಕರಣ ದಾಖಲಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ಚಿಕ್ಕೋಡಿ ನ್ಯಾಯಾಲಯ ನೀಡಿದ್ದ ಆದೇಶವನ್ನು ಹೈಕೋರ್ಟ್ ರದ್ದು ಮಾಡಿದೆ. ಚೆಕ್ ಬೌನ್ಸ್ ಪ್ರಕರಣದಲ್ಲಿ ಸಹಕಾರಿ ಬ್ಯಾಂಕ್ ಖಾಸಗಿ ದೂರು ದಾಖಲಿಸಿತ್ತು. ಆದರೆ ಬ್ಯಾಂಕ್ ಪರ ವಕೀಲರು ಕೋರ್ಟ್ ಗೆ ಹಾಜರಾಗದ ಹಿನ್ನೆಲೆಯಲ್ಲಿ ಚಿಕ್ಕೋಡಿ ನ್ಯಾಯಾಲಯ ಪ್ರಕರಣ ವಜಾಗೊಳಿಸಿ ಆದೇಶ ನೀಡಿತ್ತು. ಈ ಆದೇಶ

ಜಾರಕಿಹೊಳಿ ವಿರುದ್ಧ ವಜಾಗೊಂಡಿದ್ದ ಪ್ರಕರಣವೊಂದಕ್ಕೆ ಮರುಜೀವ Read More »

ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾರ ತುರಾಯಿ ನಿಷೇಧ – ಸಿ ಎಸ್ ರವಿ‌ ಆದೇಶ

ಬೆಂಗಳೂರು : ಸರ್ಕಾರದ ಸಭೆ -‌ ಸಮಾರಂಭಗಳಲ್ಲಿ ಹೂಗುಚ್ಚ, ಹಾರ-ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿ ಇತ್ಯಾದಿಗಳನ್ನು ನೀಡುವುದನ್ನು ನಿಷೇಧಿಸಿ‌ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿ ಕುಮಾರ್ ಸುತ್ತೋಲೆ ಹೊರಡಿಸಿದ್ದು, ರಾಜ್ಯ ಸರ್ಕಾರ ಮತ್ತು ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ ಮತ್ತು ಸಮಾರಂಭಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ಇತ್ಯಾದಿ ಯಾವುದೇ ರೀತಿಯ ಕಾಣಿಕೆಗಳನ್ನು ನೀಡಬಾರದೆಂದು, ಈ ಮೂಲಕ ನಿರ್ದೇಶಿಸಿದೆ. ಈ ನಿರ್ದೇಶನವನ್ನು

ಸರ್ಕಾರಿ ಕಾರ್ಯಕ್ರಮಗಳಲ್ಲಿ ಹಾರ ತುರಾಯಿ ನಿಷೇಧ – ಸಿ ಎಸ್ ರವಿ‌ ಆದೇಶ Read More »