Editor

ಬರ್ತಾ ಇದೆ ಮೂರನೇ ಅಲೆ, ದೇಶವಾಸಿಗಳೇ ಎಚ್ಚರದಿಂದಿರಿ- ಐಎಂಎ ಕಳವಳ

ನವದೆಹಲಿ: ಕೊರೋನಾ 2ನೇ ಅಲೆ ಇಳಿಕೆಯ ನಂತರ ಜನರು ಮಾರ್ಗಸೂಚಿಗಳನ್ನು ಎಗ್ಗಿಲ್ಲದೇ ಮುರಿಯುತ್ತಿದ್ದು, ಈ ಬಗ್ಗೆ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಆತಂಕ ವ್ಯಕ್ತಪಡಿಸಿದೆ. ಜನರ ವಿನಾಕಾರಣ ಓಡಾಟ ಹಾಗೂ‌ ಯಾತ್ರೆಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಇದಕ್ಕೆ ಕಡಿವಾಣ ಹಾಕಬೇಕು ಎಂದು ಮನವಿ ಮಾಡಿದೆ. ‘ ಜಗತ್ತಿನಲ್ಲಿ ಲಭ್ಯವಿರುವ ಸಾಕ್ಷ್ಯಗಳನ್ನು ನೋಡಿದರೆ ಹಾಗೂ ಯಾವುದೇ ಸಾಂಕ್ರಾಮಿಕ ರೋಗದ ಇತಿಹಾಸವನ್ನು ಗಮನಿಸಿದರೆ ಕೊರೋನಾದ 3ನೇ ಅಲೆ ಕೂಡ ಬಂದೇ ಬರುತ್ತದೆ ಎಂದು ಅನುಮಾನವಿಲ್ಲದೆ ಹೇಳಬಹುದು. ದೇಶದ ವೈದ್ಯಕೀಯ […]

ಬರ್ತಾ ಇದೆ ಮೂರನೇ ಅಲೆ, ದೇಶವಾಸಿಗಳೇ ಎಚ್ಚರದಿಂದಿರಿ- ಐಎಂಎ ಕಳವಳ Read More »

ಭೀಕರ ಅಗ್ನಿ ದುರಂತ, 39 ಕ್ಕೂ ಹೆಚ್ಚು ಮಂದಿ ಸಾವು

ಕೈರೋ: ದಕ್ಷಿಣ ಇರಾಕ್ ನ ನಾಸಿರಿಯಾದ ಕೊರೊನಾ ವೈರಸ್ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಕನಿಷ್ಠ 39 ಜನರು ಮೃತಪಟ್ಟಿದ್ದು, 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಆರೋಗ್ಯ ಅಧಿಕಾರಿಗಳು ಮತ್ತು ಪೊಲೀಸರು ತಿಳಿಸಿದ್ದಾರೆ ಬೆಂಕಿಯನ್ನು ನಿಯಂತ್ರಣಕ್ಕೆ ತಂದ ನಂತರ ಅಲ್-ಹುಸೇನ್ ಕೊರೊನಾವೈರಸ್ ಆಸ್ಪತ್ರೆಯಲ್ಲಿ ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದು ಆರೋಗ್ಯ ಸಚಿವಾಲಯದ ಅಧಿಕಾರಿಗಳನ್ನು ಉಲ್ಲೇಖಿಸಿ ಸರ್ಕಾರಿ ಇರಾಕ್ ಸುದ್ದಿ ಸಂಸ್ಥೆ ಹೇಳಿದೆ. ದಕ್ಷಿಣ ಇರಾಕಿನ ನಗರ ನಾಸಿರಿಯಾದ ಅಲ್ ಹುಸೇನ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ

ಭೀಕರ ಅಗ್ನಿ ದುರಂತ, 39 ಕ್ಕೂ ಹೆಚ್ಚು ಮಂದಿ ಸಾವು Read More »

ಪೆಟ್ರೋಲ್ ಸುರಿದು ಬಾಲಕಿಯ ಹತ್ಯೆ ಯತ್ನ, ಯೋಗಿ ರಾಜ್ಯದಲ್ಲಿ ಯಾಕಿಂಗೆ?

ಲಕ್ನೊ: ಉತ್ತರ ಪ್ರದೇಶದಲ್ಲಿ ದಿನೇದಿನೇ ಅಪರಾದ ಚಟುವಟಿಕೆಗಳು ಹೆಚ್ಚಾಗ್ತಿದೆ. ಕೆಲ ದಿನಗಳ ಹಿಂದಷ್ಟೇ ದಲಿತ ಯುವಕನ ಮೇಲೆ ಹಲ್ಲೆ ಸೇರಿದಂತೆ ಹಲವು ಪ್ರಕರಣಗಳ ಕುರಿತು ಆಡಳಿತಾರೂಢ ಬಿಜೆಪಿ ಸರ್ಕಾರದ ವಿರುದ್ದ ಪ್ರತಿಪಕ್ಷಗಳು ವಾಕ್ಸಮರ ನಡೆಸಿದ್ದವು. ಅದರ ಬೆನ್ನಲ್ಲೇ ಮತ್ತೊಂದು ಅಮಾನವೀಯ ಘಟನೆ ರಾಜ್ಯದ ಬುಲಂದ್ ಶಹರ್ ಜಿಲ್ಲೆಯ ಮುಂಡಖೇಡದಲ್ಲಿ ನಡೆದಿದೆ. ವ್ಯಕ್ಯಿಯೋರ್ವ ಮನೆ ಮುಂದೆ ಬಿದ್ದಿದ್ದ ಸೆಗಣಿಯನ್ನು ಬಾಲಕಿಯೋರ್ವಳ ಬಳಿ ಎತ್ತಾಕಲು ಹೇಳಿದ್ದು, ಆಕೆ ವಿರೋದಿಸಿದಾಗ ಅವಳ ಜೊತೆಗೆ ಜಗಳ ಕಾಯ್ದಿದ್ದಾನೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಆಕೆಯ

ಪೆಟ್ರೋಲ್ ಸುರಿದು ಬಾಲಕಿಯ ಹತ್ಯೆ ಯತ್ನ, ಯೋಗಿ ರಾಜ್ಯದಲ್ಲಿ ಯಾಕಿಂಗೆ? Read More »

ಬೆಳಗೆರೆ ಆಪ್ತ, ಹೆಸರಾಂತ ಕ್ರೈಂ ರಿಪೋರ್ಟರ್ ಸುನೀಲ್ ಹೆಗ್ಗರವಳ್ಳಿ ನಿಧನ

ಮೂಡಿಗೆರೆ: ರಾಜ್ಯದ ಹೆಸರಾಂತ ಕ್ರೈಂ ವರದಿಗಾರ ರವಿಬೆಳಗೆರೆ ಆಪ್ತ ಸುನಿಲ್ ಹೆಗ್ಗರವಳ್ಳಿ (43 ವ.) ಇಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ರವಿಬೆಳಗೆರೆಯವರ ಹಾಯ್ ಬೆಂಗಳೂರು ಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಆರಂಭಿಸಿದ ಸುನಿಲ್ ಹಲವಾರು ಕ್ರೈಮ್ ವರದಿಗಳ ಮೂಲಕ ರಾಜ್ಯಾದ್ಯಂತ ಹೆಸರುಗಳಿಸಿದ್ದರು. ರವಿ ಬೆಳಗೆರೆ ಅನಾರೋಗ್ಯದ ಸಮಯದಲ್ಲಿ ಅವರ ಅತ್ಯಾಪ್ತ ನಾಗಿ ಹಾಯ್ ಬೆಂಗಳೂರು ಪತ್ರಿಕೆ ಯನ್ನು ಯಶಸ್ವಿಯಾಗಿ ಮುನ್ನಡೆಸಿದ್ದರು. ಕ್ರೈಂ ವರದಿಗಾರಿಕೆಯಲ್ಲಿ ಚತುರ ನಾಗಿದ್ದ ಅವರು ಹಾಯ್ ಬೆಂಗಳೂರು ಪತ್ರಿಕೆ ಹಲವಾರು ಓದುಗರನ್ನು ಗಳಿಸಿಕೊಟ್ಟಿದ್ದರು. ನಂತರ ದಿನಗಳಲ್ಲಿ

ಬೆಳಗೆರೆ ಆಪ್ತ, ಹೆಸರಾಂತ ಕ್ರೈಂ ರಿಪೋರ್ಟರ್ ಸುನೀಲ್ ಹೆಗ್ಗರವಳ್ಳಿ ನಿಧನ Read More »

ಶೀಘ್ರದಲ್ಲೇ ಗ್ರಾ. ಪಂ. ಗ್ರಂಥಾಲಯದಲ್ಲಿ ಆನ್ಲೈನ್ ಶಿಕ್ಷಣಕ್ಕೆ ವ್ಯವಸ್ಥೆ | ಗ್ರಾಮೀಣ ಭಾಗದ ಮಕ್ಕಳನ್ನು ಶಿಕ್ಷಣ ವಂಚಿತರನ್ನಾಗಿ ಮಾಡುವುದಿಲ್ಲ : ಸುರೇಶ್ ಕುಮಾರ್

ಬೆಂಗಳೂರು: ಕಷ್ಟ ಅನುಭವಿಸುತ್ತಿರುವ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಆನ್ಲೈನ್ ಶಿಕ್ಷಣಕ್ಕಾಗಿ ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಸುಸಜ್ಜಿತ ವ್ಯವಸ್ಥೆ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಮೊಬೈಲ್, ವಿದ್ಯುತ್, ನೆಟ್ವರ್ಕ್ ಸಮಸ್ಯೆ ಹೀಗೆ ಹಲವಾರು ಕಾರಣಗಳಿಂದ ಗ್ರಾಮೀಣ ಪ್ರದೇಶದ ಮಕ್ಕಳು ಆನ್ಲೈನ್ ಶಿಕ್ಷಣ ವಂಚಿತರಾಗುತ್ತಿದ್ದಾರೆ. ಗ್ರಾಮೀಣ ಪ್ರದೇಶದ ಮಕ್ಕಳು ಶಿಕ್ಷಣಕ್ಕಾಗಿ ಭಾರೀ ಕಷ್ಟಪಡುವಂತಾಗಿದೆ. ಇದನ್ನು ಗಮನದಲ್ಲಿರಿಸಿಕೊಂಡು ಗ್ರಾಮ ಪಂಚಾಯತ್ ಗ್ರಂಥಾಲಯದಲ್ಲಿ ಆನ್ಲೈನ್ ಶಿಕ್ಷಣ ವ್ಯವಸ್ಥೆ ಜಾರಿಗೊಳಿಸಲು ಚಿಂತಿಸಲಾಗಿದೆ. ಈ ಬಗ್ಗೆ ರಾಜ್ಯ ಮುಖ್ಯ ಕಾರ್ಯದರ್ಶಿ ಯವರಲ್ಲಿ

ಶೀಘ್ರದಲ್ಲೇ ಗ್ರಾ. ಪಂ. ಗ್ರಂಥಾಲಯದಲ್ಲಿ ಆನ್ಲೈನ್ ಶಿಕ್ಷಣಕ್ಕೆ ವ್ಯವಸ್ಥೆ | ಗ್ರಾಮೀಣ ಭಾಗದ ಮಕ್ಕಳನ್ನು ಶಿಕ್ಷಣ ವಂಚಿತರನ್ನಾಗಿ ಮಾಡುವುದಿಲ್ಲ : ಸುರೇಶ್ ಕುಮಾರ್ Read More »

ಬೆಳ್ತಂಗಡಿ: ಮಗಳನ್ನು ಕೊಡಲೊಪ್ಪದ ತಂದೆ | ಕತ್ತಿಯಿಂದ ಕಡಿದ ಸುಬ್ರಮಣ್ಯದ ಯುವಕ

ಬೆಳ್ತಂಗಡಿ: ಮಗಳನ್ನು ವಿವಾಹ ಮಾಡಿ ಕೊಡಲು ಒಪ್ಪಲಿಲ್ಲ ಎಂಬ ಕಾರಣಕ್ಕೆ ಯುವತಿಯ ತಂದೆಗೆ ಯುವಕನೊಬ್ಬ ಕತ್ತಿಯಿಂದ ಕಡಿದ ಘಟನೆ ತಾಲೂಕಿನ ಲಾಯಿಲ ಗ್ರಾಮದಲ್ಲಿ ನಡೆದಿದೆ. ಲಾಯಿಲ ವಿವೇಕಾನಂದ ನಗರದ ಸೋಮನಾಥ ಕಲಾಲ್ ಗಾಯಗೊಂಡವರು. ಸುಬ್ರಹ್ಮಣ್ಯದ ಕೈಕಂಬ ನಿವಾಸಿ ದಿನೇಶ್ ಆರೋಪಿ. ದಿನೇಶ್ ಹಲವು ದಿನಗಳಿಂದ ಸೋಮನಾಥ ಅವರ ಮಗಳನ್ನು ಮದುವೆ ಮಾಡಿಕೊಡುವಂತೆ ಒತ್ತಾಯಿಸುತ್ತಿದ್ದ. ಇದಕ್ಕೆ ಅವರು ಒಪ್ಪದಿದ್ದಾಗ ಹಲವು ಬಾರಿ ಬೆದರಿಕೆಗಳನ್ನು ಒಡ್ಡಿದ್ದ. ಇದ್ಯಾವುದಕ್ಕೂ ಸೋಮನಾಥ ಅವರು ಬಗ್ಗಿರಲಿಲ್ಲ. ಇದರಿಂದ ಕುಪಿತಗೊಂಡ ದಿನೇಶ್ ಮನೆಗೆ ಬಂದು ಸೋಮನಾಥ್

ಬೆಳ್ತಂಗಡಿ: ಮಗಳನ್ನು ಕೊಡಲೊಪ್ಪದ ತಂದೆ | ಕತ್ತಿಯಿಂದ ಕಡಿದ ಸುಬ್ರಮಣ್ಯದ ಯುವಕ Read More »

ಮಂಗಳೂರು: ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳೆ ಸಾವು

ಮಂಗಳೂರು: ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆಯೋರ್ವರು ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು ವಾಮಂಜೂರು ನಿವಾಸಿ ವಿನೋದ್ ರಾಜ್ ಅಮೀನ್ ಎಂಬವರ ಪತ್ನಿ ಪ್ರಿಯಾಂಕ (31) ಎಂದು ಗುರುತಿಸಲಾಗಿದೆ. ಇವರು ದ್ವಿಚಕ್ರ ವಾಹನದಲ್ಲಿ ಜು.10ರ ಶನಿವಾರ ಯೆಯ್ಯಾಡಿ ಹರಿಪದವು ಎಂಬಲ್ಲಿ ತೆರಳುತ್ತಿದ್ದಾಗ ವಿರುದ್ಧ ದಿಕ್ಕಿನಲ್ಲಿ ಬಂದ ಆಲ್ಟೊ ಕಾರು ಢಿಕ್ಕಿಯಾಗಿತ್ತು. ಪರಿಣಾಮ ಪ್ರಿಯಾಂಕ ಅವರ ತಲೆಗೆ ಗಂಭೀರ ಗಾಯಗಳಾಗಿದ್ದು ತಕ್ಷಣ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಪಘಾತದ ಬಳಿಕ ಕೋಮಾದಲ್ಲಿದ್ದ ಪ್ರಿಯಾಂಕ ಚಿಕಿತ್ಸೆ ಫಲಕಾರಿಯಾಗದೇ

ಮಂಗಳೂರು: ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳೆ ಸಾವು Read More »

ತಮಿಳುನಾಡು ರಾಜಕಾರಣದಲ್ಲಿ ಭಾರೀ ಸಂಚಲನ, ರಾಜಕೀಯ ವಿದಾಯ ಘೋಷಿಸಿದ ರಜನಿಕಾಂತ್,

ಚೆನ್ನೈ : ಸೂಪರ್ ಸ್ಟಾರ್ ರಜನಿಕಾಂತ್ ಅವರು ರಾಜಕೀಯಕ್ಕೆ ಅಧಿಕೃತವಾಗಿ ಗುಡ್ ಬೈ ಹೇಳಿದ್ದು, ರಾಜಕೀಯ ಪಕ್ಷ ಬರ್ಕಾಸ್ತುಗೊಳಿಸುವುದಾಗಿ ಹೇಳಿದ್ದಾರೆ. ಕಳೆದ ವರ್ಷ ಆರೋಗ್ಯ ಸಮಸ್ಯೆಗಳನ್ನು ಉಲ್ಲೇಖಿಸಿ ರಾಜಕೀಯದಿಂದ ಹೊರಗುಳಿದಿದ್ದ ಸೂಪರ್ ಸ್ಟಾರ್ ರಜನೀಕಾಂತ್ ಅವರು, ಭವಿಷ್ಯದಲ್ಲಿ ರಾಜಕೀಯ ಪ್ರವೇಶ ಮಾಡಬೇಕೇ ಬೇಡವೇ ಎಂಬ ಬಗ್ಗೆ ರಜನಿ ಮಕ್ಕಳ್ ಮಂದ್ರಾಮ್ (ಆರ್ ಎಂಎಂ) ಪದಾಧಿಕಾರಿಗಳೊಂದಿಗೆ ಸಮಾಲೋಚಿಸಿದ ಬಳಿಕ ರಾಜಕೀಯಕ್ಕೆ ಗುಡ್ ಬೈ ಹೇಳಿದ್ದಾರೆ. ಅನಾರೋಗ್ಯದ ಕಾರಣಕ್ಕಾಗಿ ಸೂಪರ್ ಸ್ಟಾರ್ ರಜನಿಕಾಂತ್ ರಾಜಕೀಯಕ್ಕೆ ಸಂಪೂರ್ಣವಾಗಿ ವಿದಾಯ ಘೋಷಿಸಿದ್ದಾರೆ.ತಮ್ಮ ಪಕ್ಷ

ತಮಿಳುನಾಡು ರಾಜಕಾರಣದಲ್ಲಿ ಭಾರೀ ಸಂಚಲನ, ರಾಜಕೀಯ ವಿದಾಯ ಘೋಷಿಸಿದ ರಜನಿಕಾಂತ್, Read More »

ಮಂಗಳೂರು: ಮಹಿಳೆಗೆ ಹಲ್ಲೆ ನಡೆಸಿ ದರೋಡೆ – ಓರ್ವ ಬಂಧನ

ಮಂಗಳೂರು: ಯುನಿಸೆಕ್ಸ್ ಸಲೂನ್‌ನಲ್ಲಿ ಮಹಿಳೆಯೊಬ್ಬರಿಗೆ ಕಿರುಕುಳ, ಹಲ್ಲೆ ನಡೆಸಿ ದರೋಡೆ ಮಾಡಿದ ಆರೋಪದ ಮೇಲೆ ವ್ಯಕ್ತಿಯನ್ನು ಬಂಧಿಸಿ ಘಟನೆ ನಗರದಲ್ಲಿ ನಡೆದಿದೆ. ಆರೋಪಿಯನ್ನು ಅತ್ತಾವರದ ಅಬ್ದುಲ್ ದಾವೂದ್ ಎಂದು ಗುರುತಿಸಲಾಗಿದೆ. ಈತ ಜುಲೈ 1 ರಂದು ಕದ್ರಿಯ ಸಲೂನ್‌ನಲ್ಲಿ ಮಹಿಳೆಯೊಬ್ಬರಿಗೆ ಕಿರುಕುಳ ಮತ್ತು ಹಲ್ಲೆ ನಡೆಸಿ 14,000 ರೂ. ಪಡೆದುಕೊಂಡಿದ್ದಾನೆ ಎಂದು ಆರೋಪಿಸಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇನ್ನು ಆರೋಪಿಯನ್ನು ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಿ ನ್ಯಾಯಾಂಗ ಕಸ್ಟಡಿಗೆ ಕಳುಹಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮಂಗಳೂರು: ಮಹಿಳೆಗೆ ಹಲ್ಲೆ ನಡೆಸಿ ದರೋಡೆ – ಓರ್ವ ಬಂಧನ Read More »

ಉಡುಪಿ: ಅಪಹರಣಕ್ಕೊಳಗಾದ ಮಗು ರಕ್ಷಣೆ | ಆರೋಪಿ ಪೊಲೀಸ್ ವಶಕ್ಕೆ

ಉಡುಪಿ: ಕರಾವಳಿ ಬೈಪಾಸ್‌‌ ಬಳಿಯಿಂದ ಭಾನುವಾರ ಬೆಳಗ್ಗೆ ಅಪಹರಣಕ್ಕೊಳಗಾದ ಮಗುವನ್ನು ಉಡುಪಿ ಪೊಲೀಸರು ಕ್ಷಿಪ್ರ ಕಾರ್ಯಾಚರಣೆಯ ಮೂಲಕ ಆರೋಪಿ ಸಹಿತ ಕುಮುಟಾದಲ್ಲಿ ಪತ್ತೆ ಮಾಡಿದ್ದಾರೆ. ಆರೋಪಿಯನ್ನು ಬಾಗಲಕೋಟೆಯ ಪರಶು ಎಂದು ಗುರುತಿಸಲಾಗಿದೆ. ಕುಮುಟಾದಲ್ಲಿ ರೈಲ್ವೆ ಪೊಲೀಸರ ಸಹಕಾರದೊಂದಿಗೆ ಪತ್ತೆ ಹಚ್ಚಿ, ಮಗು ಶಿವರಾಜ್‌ (2.5 ವರ್ಷ) ಹಾಗೂ ಆರೋಪಿಯನ್ನು ಇಂದು ಬೆಳಗ್ಗೆ ಪೊಲೀಸರು ಉಡುಪಿಗೆ ಕರೆತಂದಿದ್ದಾರೆ ಎಂದು ತಿಳಿದುಬಂದಿದೆ. ಭಾನುವಾರ ಬೆಳಗ್ಗೆ ಪರಶು ಮಗುವನ್ನು ಅಪಹರಿಸಿ ಕರಾವಳಿ ಬೈಪಾಸ್‌ನಿಂದ ಸಿಟಿಬಸ್‌‌ನಲ್ಲಿ ಪ್ರಯಾಣಿಸಿ ಸಂತೆಕಟ್ಟೆಯಲ್ಲಿ ಇಳಿದಿದ್ದನು. ಸಂತೆಕಟ್ಟೆಯಲ್ಲಿ ಆತ

ಉಡುಪಿ: ಅಪಹರಣಕ್ಕೊಳಗಾದ ಮಗು ರಕ್ಷಣೆ | ಆರೋಪಿ ಪೊಲೀಸ್ ವಶಕ್ಕೆ Read More »